ಮಡಿಕೇರಿ ಜ.24 NEWS DESK : ಪರಾಕ್ರಮ್ ದಿವಸ್ – ಪರೀಕ್ಷಾ ಪೇ ಚರ್ಚಾ 9ನೇ ಆವೃತ್ತಿಯನ್ನು ಕೊಡಗಿನ ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿ ಅರ್ಥಪೂರ್ಣವಾಗಿ ನಡೆಸಲಾಯಿತು. ಜವಾಹರ್ ನವೋದಯ ವಿದ್ಯಾಲಯ, ಸೇಂಟ್ ಜೋಸೆಫ್ಸ್ ಕಾಂಪೋಸಿಟ್ ಹೈಸ್ಕೂಲ್ ಮತ್ತು ಪಿಯು ಕಾಲೇಜು, ಕ್ರೆಸೆಂಟ್ ಸ್ಕೂಲ್ ಮತ್ತು ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯದಿಂದ ಕೊಡಗಿನ ಒಟ್ಟು 100 ವಿದ್ಯಾರ್ಥಿಗಳು ಈ ಚಟುವಟಿಕೆಯಲ್ಲಿ ಭಾಗವಹಿಸಿದ್ದರು. ಭಾರತ್ ಹೈ ಹಮ್ ಸರಣಿಯ ಐದು ಸಂಚಿಕೆಗಳನ್ನು ಪ್ರದರ್ಶಿಸಲಾಯಿತು. ನಂತರ ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿದರು. ವಿಜೇತರನ್ನು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಯಿತು. ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲ ಮಹೇಶ್ ಕುಮಾರ್ ವಿಜೇತರಿಗೆ ಪ್ರಮಾಣಪತ್ರಗಳನ್ನು ವಿತರಿಸಿದರು. ವಿದ್ಯಾರ್ಥಿಗಳು ಉತ್ಸಾಹದಿಂದ ಚಟುವಟಿಕೆಯಲ್ಲಿ ಭಾಗವಹಿಸಿದಲ್ಲದೆ, ಕಾರ್ಯಕ್ರಮದ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡರು.
ಲೇಖಕ: admin
ಮಡಿಕೇರಿ ಜ.24 NEWS DESK : ಅಮೂಲ್ಯವಾದ ದಾಖಲೆಗಳು ಇದ್ದ “file”(ಕೆಂಪುಪ್ಲಾಸ್ಟಿಕ್ ಹೊದಿಕೆಯ 300-350 ಹಾಳೆಗಳ ದಾಖಲಾತಿ) ಕಾಣೆಯಾಗಿದೆ. ಕಳೆದ ಇಪ್ಪತ್ತು, ಇಪ್ಪತೈದು ದಿನಗಳ ಹಿಂದೆ ಮಡಿಕೇರಿಯ ಸುತ್ತ ಮುತ್ತ ಕಾಣೆಯಾಗಿದ್ದು, ದಾಖಲೆಗಳು ಸಿಕ್ಕಿದವರು ಸೂದನ ಈರಪ್ಪ, ಅಧ್ಯಕ್ಷರು, ಕೊಡಗು ಏಲಕ್ಕಿ ಮಾರಾಟ ಸಹಕಾರ ಸಂಘ (ರಿ), ಮಡಿಕೇರಿ, ದೂರವಾಣಿ: 7022707398 ಈ ವಿಳಾಸ ಅಥವಾ ಮೊಬೈಲ್ ನಂಬರನ್ನು ಸಂಪರ್ಕಿಸಲು ಕೋರಿದೆ.
ಮಡಿಕೇರಿ ಜ.24 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ವತಿಯಿಂದ ಫೆ.27 ಹಾಗೂ 28 ರಂದು ಅಮ್ಮತ್ತಿ ಕೊಡವ ಸಮಾಜದಲ್ಲಿ ‘ಕೊಡವ ಬಲ್ಯನಮ್ಮೆ’ಯನ್ನು ಆಯೋಜಿಸಲು ಸರ್ವ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಮ್ಮತ್ತಿ ಕೊಡವ ಸಮಾಜದ ಸಹಭಾಗಿತ್ವದಲ್ಲಿ ಅದ್ಧೂರಿಯ ಕೊಡವ ಬಲ್ಯ ನಮ್ಮೆಯನ್ನು ನಡೆಸುವಂತೆ ಒಕ್ಕೊರಲಿನ ತೀರ್ಮಾನ ತೆಗೆದುಕೊಳ್ಳಲಾಯಿತು. ಕೊಡವ ಬಲ್ಯ ನಮ್ಮೆಯ ಮೊದಲ ದಿನ ಸಾರ್ವತ್ರಿಕವಾಗಿ ಕೊಡವ ಸಾಂಸ್ಕøತಿಕ ಸ್ಪರ್ಧೆಗಳು ನಡೆಯಲಿದ್ದು, ಈ ಪ್ರಯುಕ್ತ ಉಮ್ಮತಾಟ್, ಬೊಳಕಾಟ್, ಕೋಲಾಟ್, ಕತ್ತಿಯಾಟ್, ಕಪ್ಪೆಯಾಟ್, ದುಡಿಕೊಟ್ಟ್ ಪಾಟ್ (ದೇಶಕೆಟ್ಟ್ ಪಾಟ್ ಅಥವಾ ಕಾವೇರಿ ಪಾಟ್), ಪರೆಯಕಳಿ, ಸಮ್ಮಂಧ ಅಡ್ಕುವ, ವಾಲಗ ನುಡಿಸುವ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗುವುದು. ಅಂತೆಯೇ ಸಾಹಿತ್ಯ ಪರ ಸ್ಪರ್ಧೆಗಳಾದ ಕವನ ಸ್ಪರ್ಧೆ, ಕೊಡವ ಪಾಟ್ ಸ್ಪರ್ಧೆ, ಕೊಡವ ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು. ಕೊಡವ ವಸ್ತು ಪ್ರದರ್ಶನ ಹಾಗೂ ಪೈಪೋಟಿಗೆ ಅವಕಾಶವನ್ನು ಬಲ್ಯನಮ್ಮೆಯಲ್ಲಿ ಕಲ್ಪಿಸಲಾಗಿದೆ. ವಸ್ತು ಪ್ರದರ್ಶನ ನೀಡುವವರು ತಮ್ಮ…
ಮಡಿಕೇರಿ ಜ.23 NEWS DESK : 2023-24ನೇ ಸಾಲಿಗೆ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಆದರ್ಶವಾಗಿ ಸೇವೆ ಸಲ್ಲಿಸಿರುವ (ಕನಿಷ್ಠ 5 ವರ್ಷಗಳ ಸೇವೆ ಸಲ್ಲಿಸಿರಬೇಕು) ವ್ಯಕ್ತಿ ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಲಾಗುತ್ತಿದೆ. 2024-25 ನೇ ಸಾಲಿಗೆ ಮಹಿಳಾ ಅಭಿವೃದ್ಧಿ, ಕ್ರೀಡೆ, ಶಿಕ್ಷಣ, ಕಲೆ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿದ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಲಾಗುತ್ತಿದೆ. ಜನವರಿ 1, 2024 ರಿಂದ ಡಿಸೆಂಬರ್ 31, 2024ರ ಅವಧಿಯಲ್ಲಿ ಶೌರ್ಯ, ಸಾಹಸ ಪ್ರದರ್ಶಿಸಿ ಇತರರ ಪ್ರಾಣ ರಕ್ಷಣೆ ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಗಳನ್ನು ರಕ್ಷಿಸಲು ಸಹಕಾರಿಯಾಗಿರುವ ಪ್ರಕರಣಗಳಿದ್ದಲ್ಲಿ ಅಂತಹ ಮಹಿಳೆಯರು ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಸ್ವಯಂ ಸೇವಾ ಸಂಸ್ಥೆ ಹಾಗೂ ವ್ಯಕ್ತಿಗಳು ಮಹಿಳೆಯರ ಅಭಿವೃದ್ಧಿಗಾಗಿ ಕನಿಷ್ಠ 5 ವರ್ಷಗಳ ಸೇವೆ ಸಲ್ಲಿಸಿರಬೇಕು. ಪ್ರಶಸ್ತಿಗೆ ಆಯ್ಕೆ ಮಾಡುವಾಗ ಸಂಸ್ಥೆ ಹಾಗೂ ವ್ಯಕ್ತಿ…
ಮಡಿಕೇರಿ NEWS DESK ಜ.23 : ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಮತ್ತು ಎಸ್ಟಿ ಟ್ಯಾಗ್ ಕುರಿತು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಬೇಡಿಕೆಗೆ ಪೂರಕವಾಗಿ ಆಯೋಗವನ್ನು ರಚಿಸಬೇಕೆಂದು ಖ್ಯಾತ ಅರ್ಥಶಾಸ್ತ್ರಜ್ಞ ಹಾರ್ವರ್ಡ್ ವಿದ್ವಾಂಸ, ಕೇಂದ್ರದ ಮಾಜಿ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಶ್ರೇಷ್ಠ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರ ವಿಭಾಗೀಯ ಪೀಠ ರಿಟ್ ಅರ್ಜಿಯ ವಿಚಾರಣೆಯನ್ನು ನಡೆಸಿತು. ಡಾ.ಸುಬ್ರಮಣಿಯನ್ ಸ್ವಾಮಿ ಹಾಗೂ ಅವರ ಕಾನೂನು ಸಹಾಯಕರಾದ ಹೈಕೋರ್ಟ್ ವಕೀಲ ಕಿರಣ್ ನಾರಾಯಣ್ ವಿಚಾರಣೆ ಸಂದರ್ಭ ಭಾಗಿಯಾಗಿದ್ದರು. ಸಿಎನ್ಸಿ ಬೇಡಿಕೆಗೆ ಆಕ್ಷೇಪ ಸಲ್ಲಿಸಿದ ಪ್ರತಿವಾದಿಗಳ ಅಹವಾಲನ್ನು ಕೂಡ ಆಲಿಸಿದ ಮುಖ್ಯ ನ್ಯಾಯಾಧೀಶರು ಇತರ ಮಧ್ಯಸ್ಥಿಕೆ ಅರ್ಜಿಗಳನ್ನು ಅನುಮತಿಸಿದರು ಮತ್ತು ಇನ್ನು ಮುಂದೆ ಸೇರಿಸಲಾಗುವುದಿಲ್ಲ ಎಂದು ಹೇಳಿದರು. 3ನೇ ಮಾರ್ಚ್ 2025 ರೊಳಗೆ ತಮ್ಮ ಮನವಿಯನ್ನು ಪೂರ್ಣಗೊಳಿಸಲು ಕಕ್ಷಿದಾರರಿಗೆ…
ಮಡಿಕೇರಿ ಜ.23 NEWS DESK : ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ `ಜನತಾ ದರ್ಶನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಸಂಬಂಧ ಜ.25 ರಂದು ಬೆಳಗ್ಗೆ 11 ಗಂಟೆಗೆ ವಿರಾಜಪೇಟೆ ತಾಲ್ಲೂಕು ಅಮ್ಮತ್ತಿ ಹೋಬಳಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಸಭಾಂಗಣದಲ್ಲಿ `ಜಿಲ್ಲಾ ಮಟ್ಟದ ಜನಸ್ಪಂದನ’ ಕಾರ್ಯಕ್ರಮ ನಡೆಯಲಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ತಿಳಿಸಿದ್ದಾರೆ.
ಮಡಿಕೇರಿ ಜ.23 NEWS DESK : ಹುತಾತ್ಮರ ದಿನಾಚರಣೆಯನ್ನು ಜ.30 ರಂದು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕಳೆದ ಬಾರಿಯಂತೆ ಹುತಾತ್ಮರ ದಿನ ಪ್ರಯುಕ್ತ ಪೂಜ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮವನ್ನು ಜಿಲ್ಲಾ ಖಜಾನೆಯಿಂದ ತೆಗೆದುಕೊಂಡು ಹೋಗಿ ಮೆರವಣಿಗೆ ಮೂಲಕ ಗಾಂಧಿ ಮಂಟಪದಲ್ಲಿರಿಸಿ ಸರ್ವಧರ್ಮ ಪ್ರಾರ್ಥನೆ ಮೂಲಕ ಹುತಾತ್ಮರ ದಿನಾಚರಣೆ ಆಚರಿಸಬೇಕಿದೆ ಎಂದರು. ಜಿಲ್ಲಾ ಖಜಾನೆಯಿಂದ ಮಹಾತ್ಮ ಗಾಂಧೀಜಿಯವರ ಚಿತಾಭಸ್ಮವನ್ನು ಹೊರತೆಗೆದು ಪುಷ್ಪಾಲಂಕಾರ ಮೂಲಕ ವಿಶೇಷ ಗೌರವ ಸಲ್ಲಿಸಿ, ನಂತರ ಪೊಲೀಸ್ ಗೌರವದೊಂದಿಗೆ ಮೆರವಣಿಗೆ ಮೂಲಕ ಹೊರಟು ಮಂಗೇರಿರ ಮುತ್ತಣ್ಣ ವೃತ್ತ, ಜನರಲ್ ತಿಮ್ಮಯ್ಯ ವೃತ್ತ ಮೂಲಕ ಗಾಂಧಿ ಮಂಟಪಕ್ಕೆ ತೆರಳಿ ಅಲ್ಲಿ ಸರ್ವಧರ್ಮ ಪ್ರಾರ್ಥನೆ ನಡೆಯಲಿದೆ. ಬಳಿಕ ಪೊಲೀಸ್ ಗೌರವ ಸಲ್ಲಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದರು. ಸರ್ವೋದಯ ಸಮಿತಿ ನಿಕಟ ಪೂರ್ವ ಅಧ್ಯಕ್ಷರಾದ…
ಮಡಿಕೇರಿ ಜ.23 NEWS DESK : ಅಂತರಾಷ್ಟ್ರೀಯ “ವೃಕ್ಷ” ಸಂಸ್ಥೆ ಹೈದರಾಬಾದ್ನಲ್ಲಿ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಆಯೋಜಿಸಿದ್ದ FEET ON EARTH FESTIVAL ಎಂಬ ಕಾರ್ಯಕ್ರಮದಲ್ಲಿ ವಿರಾಜಪೇಟೆ ತಾಲ್ಲೂಕು ತೋರ ಗ್ರಾಮದ ಕಲಾವಿದರಾದ ಕಬ್ಬೆಮಲೆ ಶಾರದಾ ಸೋಮಯ್ಯ ಹಾಗೂ ತಂಡ “ಕಾಡಿನ ಹಾಡು” ಶೀರ್ಷಿಕೆಯಡಿಯಲ್ಲಿ ಪ್ರದರ್ಶಿಸಿದ ಹಾಡು ಹಾಗೂ ನೃತ್ಯ ಕಲಾವಿದರ ಮೆಚ್ಚುಗೆಗೆ ಪಾತ್ರವಾಗಿದೆ. ಕಬ್ಬೆಮಲೆ ಶಾರದಾ ಸೋಮಯ್ಯ ಅರಣ್ಯ, ಪ್ರಾಣಿ ಸಂಕುಲ, ನದಿ, ಬೆಟ್ಟ-ಗುಡ್ಡಗಳು ಮತ್ತು ಇವುಗಳ ನಡುವೆ ಕಾಡಿನ ಮಕ್ಕಳಾದ ಕುಡಿಯರ ಬದುಕು ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಸುದೀರ್ಘ 40 ನಿಮಿಷಗಳ ಉರ್ಟಿಕೊಟ್ಟ್ ಪಾಟ್ ನೃತ್ಯ ಪ್ರದರ್ಶನ ನೀಡಿದರು. ಕುಡಿಯರ ಯುವ ಕಲಾವಿದರಾದ ಕೆ.ಎಂ.ಜ್ಯೋತಿ, ಕೆ.ಆರ್.ಚಷ್ಮಿತಾ ಮತ್ತು ಕೆ.ಆರ್.ಸೌಮ್ಯ ತಮ್ಮಅದ್ಭುತವಾದ ನೃತ್ಯ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಕಾರ್ಯಕ್ರಮವನ್ನು ಕರ್ನಾಟಕದ ಜನಪದ ತಜ್ಞ ಡಾ. ಸಿರಿಗಂಧ ಶ್ರೀನಿವಾಸ್ಮೂರ್ತಿ ಉದ್ಘಾಟಿಸಿದರು. ವರದಿ : ಅಲ್ಲಾರಂಡ ವಿಠಲ ನಂಜಪ್ಪ
ಮಡಿಕೇರಿ ಜ.23 NEWS DESK : ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯ ದಸರಾ ಉತ್ಸವ ಸಮಿತಿ ವತಿಯಿಂದ ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ ದಶಮಿ ಬಿಡುಗಡೆ ಮತ್ತು ಸನ್ಮಾನ ಸಮಾರಂಭ ನಡೆಯಲಿದೆ. ಅಂದು ಸಂಜೆ 4 ಗಂಟೆಗೆ ರಾಜಾಸೀಟು ಸಮೀಪದ ರಾಜದರ್ಶನ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ ಉದ್ಘಾಟಿಸಲಿದ್ದು, ಅರಮೇರಿ ಕಳಂಚೇರಿ ಮಠಾಧೀಶರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಜಮಾಅತೆ ಇಸ್ಲಾಮೀ ಹಿಂದ್ ಮೈಸೂರು ವಲಯದ ಸಂಚಾಲಕ ಮೌಲಾನ ಯು.ಅಬ್ದುಸಲಾಮ್, ಮಡಿಕೇರಿ ಸಂತ ಮೈಕಲರ ದೇವಾಲಯದ ಧರ್ಮಾಧಿಕಾರಿ ರೆ.ಫಾ.ಜಾಜ್ ದೀಪಕ್ ಎ. ದಿವ್ಯ ಸಾನಿಧ್ಯ ಹಾಗೂ ಆಶೀರ್ವಚನ ನೀಡಲಿದ್ದಾರೆ. ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಹಿರಿಯ ಟ್ರಸ್ಟಿ ಹಾಗೂ ಮಾಜಿ ಸಚಿವ ಎಂ.ಸಿ.ನಾಣಯ್ಯ ಪುಸ್ತಕ ಬಿಡುಗಡೆ ಮಾಡಲಿದ್ದು, ಕುಂದುರುಮೊಟ್ಟೆ ಶ್ರೀ ಚೌಟಿ…
ಮಡಿಕೇರಿ ಜ.23 NEWS DESK : ಮಡಿಕೇರಿ ನಗರದಲ್ಲಿರುವ ಡಾ.ಅಂಬೇಡ್ಕರ್ ಭವನ ಸೀಮಿತ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಮತ್ತು ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಬೇಕೆಂದು ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮಡಿಕೇರಿ ಶಾಖೆಗೆ ಸುಮಾರು ಮೂರು ದಶಕಗಳ ಹಿಂದೆ ಮಂಜೂರಾಗಿದ್ದ ಜಾಗದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಗೊಂಡಿದೆ. 1985 ರಿಂದ ಜಿಲ್ಲಾ ಕೇಂದ್ರ್ರದಲ್ಲಿ ಅಂಬೇಡ್ಕರ್ ಭವನ ಮತ್ತು ಅಂಬೇಡ್ಕರ್ ಪತಿಮೆಗೆ ಆಗ್ರಹಿಸಿ ನಿರಂತರವಾದ ಹೋರಾಟಗಳನ್ನು ನಡೆಸಿಕೊಂಡು ಬಂದಿದೆ. ಈ ಹಿನ್ನೆಲೆ 1991 ರ ಸುಮಾರಿಗೆ ನಗರ ವ್ಯಾಪ್ತಿಯ 10 ಸೆಂಟ್ಸ್ ಜಾಗವನ್ನು ಜಿಲ್ಲಾಡಳಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮಡಿಕೇರಿ ಶಾಖೆಗೆ ಭವನ ನಿರ್ಮಾಣಕ್ಕೆಂದು ಮಂಜೂರು ಮಾಡಿತು ಎಂದರು. ಅಂದಿನ ದಿನಗಳಲ್ಲಿ ಡಾ.ನಾಗರಾಜ್ ಅವರ ಅಧ್ಯಕ್ಷತೆಯಲ್ಲಿ ಭವನ ನಿರ್ಮಾಣ ಸಮಿತಿಯನ್ನು ರಚಿಸಲಾಯಿತು. ನಂತರ ಸಮಿತಿ ಬದಲಾವಣೆಯಾಗಿದ್ದು, ಅದರಲ್ಲಿ ದಲಿತ ಸಂಘರ್ಷ ಸಮಿತಿಗೆ…






