ಮಡಿಕೇರಿ ಜ.23 NEWS DESK : ಸಂವಿಧಾನದ ರಕ್ಷಕರು ನಾವೇ ಎಂದು ಹೇಳಿಕೊಳ್ಳುವ ಪಕ್ಷವು ಸ್ವಾತಂತ್ರ್ಯ ಪರ್ವ ಮತ್ತು ನಂತರದ ಅವಧಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡಿದೆ ಎನ್ನುವ ವಿಚಾರಗಳನ್ನು ಜನತೆಯ ಮುಂದಿಡುವ ಉದ್ದೇಶದಿಂದ ಸಿಟಿಜನ್ಸ್ ಫಾರ್ ಸೋಶಿಯಲ್ ಜಸ್ಟೀಸ್ ಸಂಘಟನೆ ಜ.27ರಂದು ಮಡಿಕೇರಿಯಲ್ಲಿ ‘ಸಂವಿಧಾನ್ ಸಮ್ಮಾನ್ ಅಭಿಯಾನ್’ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಸಂಘಟನೆಯ ಜಿಲ್ಲಾ ಸಂಚಾಲಕ ವಿ.ಕೆ.ಲೋಕೇಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 2.30 ಗಂಟೆಗೆ ನಗರದ ಅಂಬೇಡ್ಕರ್ ಭವನದಲ್ಲಿ ದಲಿತ, ಹಿಂದುಳಿದ ವರ್ಗಗಳ ಸಂಘಟನೆಗಳ ಸಹಕಾರದೊಂದಿಗೆ ನಡೆಯುವ ಸಂವಿಧಾನ್ ಸಮ್ಮಾನ್ ಅಭಿಯಾನ್ ಕಾರ್ಯಕ್ರಮವನ್ನು ಮಾಜಿ ಶಿಕ್ಷಣ ಸಚಿವ ಎನ್.ಮಹೇಶ್ ಉದ್ಘಾಟಿಸಲಿದ್ದಾರೆ. ಮದೆ ಮಹದೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಿದ್ದರಾಜು ಬೆಳ್ಳಯ್ಯ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೈಸೂರಿನ ಸಾಮಾಜಿಕ ನ್ಯಾಯ ವೇದಿಕೆಯ ಕಾರ್ಯದರ್ಶಿ ಪರಮಾನಂದ ಎಂ.ಎಸ್.ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭ ವಿಕಾಸ್ ಪುತ್ತೂರು ಅವರು ರಚಿಸಿರುವ ‘ಸಂವಿಧಾನ ಬದಲಿಸಿದ್ದು ಯಾರು’ ಎನ್ನುವ…
ಲೇಖಕ: admin
ಬೆಂಗಳೂರು, ಜನವರಿ 23 NEWS DESK : ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ, ಮೈಸೂರು ಚಾಮರಾಜನಗರ ಭಾಗದ ರೈತರಿಗೆ ಸಾವಯವ ಹಾಗೂ ಸಿರಿಧಾನ್ಯ ಕೃಷಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ 2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರೈತರ ಹಲವು ದಿನಗಳ ಬೇಡಿಕೆಯಾದ ಎಂಎಸ್ ಪಿ (ಕನಿಷ್ಟ ಬೆಂಬಲ ಬೆಲೆ) ಯೋಜನೆಯನ್ನು ಜಾರಿಗೆ ತರಬೇಕೆಂದು ಕೇಂದ್ರಸರ್ಕಾರವನ್ನು ಒತ್ತಾಯಿಸಿದರು. ರಾಗಿ ತಿಂದವನು ನಿರೋಗಿ ಸಿರಿಧಾನ್ಯಗಳ ಸೇವೆನೆ ಆರೋಗ್ಯಕ್ಕೆ ಉತ್ತಮ :: ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗಿದ್ದೇವೆ. ದೇಶಕ್ಕೆ ಸ್ವಾತಂತ್ರ್ಯ ದೊರೆತ ಸಂದರ್ಭದಲ್ಲಿ ಆಹಾರದ ಕೊರತೆಯಿತ್ತು. ಆದರೆ ಈಗ ಹಲವಾರು ಆಹಾರಧಾನ್ಯಗಳನ್ನು ಭಾರತ ರಫ್ತು ಮಾಡುತ್ತಿರುವುದು ಹೆಮ್ಮೆಯ ವಿಷಯ. ವಿರಳ ಮಳೆಯಿರುವ…
ನಾಪೋಕ್ಲು ಜ.23 NEWS DESK : ದೇಶದಲ್ಲಿ ವಿಶೇಷ ಆಚಾರ, ವಿಚಾರ, ಪದ್ಧತಿ ಪರಂಪರೆಗಳನ್ನು ಹೊಂದಿರುವ ಹೆಮ್ಮೆಯ ಜಿಲ್ಲೆ ನಮ್ಮದು ಎಂದು ಭಾಗಮಂಡಲ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಜೆ.ದಿವಾಕರ ಹೇಳಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಭಾಗಮಂಡಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕೋರಂಗಾಲ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯ ಸಹಯೋಗದಲ್ಲಿ ದಿ. ಡಾ.ಇರುವೈಲು ರಘುರಾಮ ಅಸ್ರಣ್ಣ ಮತ್ತು ಶ್ರೀಮತಿ ಲೀಲಾ ಅಸ್ರಣ್ಣ ದತ್ತಿ ಉಪನ್ಯಾಸ ಮತ್ತು ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿ ಮಾತನಾದರು. ಎಲ್ಲರನ್ನೂ ಸರಿ ಸಮಾನರಾಗಿ ಕಾಣುವ ಸಮಾಜ ನಮ್ಮ ಜಿಲ್ಲೆಯಲ್ಲಿದೆ. ಕೊಡಗಿನ ನೆಲ ಜಲವನ್ನು ಕವಿ ಪಂಜೆ ಮಂಗೇಶರಾಯರು ದೇವ ಸನ್ನಿಧಿ ಎಂದು ಬಣ್ಣಿಸಿದ್ದಾರೆ. ಶುದ್ಧ ಗಾಳಿ, ಸ್ವಚ್ಛ ನೆಲ, ನಮ್ಮ ಜಿಲ್ಲೆಯಲ್ಲಿದೆ ಎಂದು ಸಮೀಕ್ಷೆ ಹೇಳಿದೆ. ಹುಟ್ಟಿನಿಂದ ಸಾವಿನವರೆಗೆ ನಮ್ಮಲ್ಲಿ ವಿಶಿಷ್ಟ ಪದ್ದತಿಗಳು ಇದ್ದರೂ ಸಾವು ನೋವಿನಲ್ಲೂ ಸಹಾಯದ ಪದ್ಧತಿ ಇಂದಿಗೂ ನಡೆದು…
ನಾಪೋಕ್ಲು ಜ.23 NEWS DESK : ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅತಿ ಮುಖ್ಯ ಎಂದು ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಡಾ.ಶೈಲಜಾ ರಾಜೇಂದ್ರ ಹೇಳಿದರು. ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ ಜಿಲ್ಲಾ ಮಹಿಳಾ ಘಟಕ, ಮಡಿಕೇರಿಯ ಇನ್ನರ್ ವೀಲ್ ಕ್ಲಬ್ ಮತ್ತು ಆಯುಷ್ ಇಲಾಖೆ ಸಹಯೋಗದಲ್ಲಿ ಸಮೀಪದ ಬಲ್ಲಮಾವಟಿ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮನುಷ್ಯನಿಗೆ ಆರೋಗ್ಯವೇ ಭಾಗ್ಯ. ಅದರಲ್ಲೂ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿಯನ್ನು ಹೊಂದಿರಬೇಕು. ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ ಮಹಿಳಾ ಘಟಕವು ಬೆಳ್ಳಿ ಹಬ್ಬದ ಸಂಭ್ರಮದಲ್ಲಿದ್ದು, ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಇದರ ಅಂಗವಾಗಿ ಗ್ರಾಮೀಣ ಮಹಿಳೆಯರ ಆರೋಗ್ಯ ತಪಾಸಣೆ ಹಾಗೂ ಕಣ್ಣಿನ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಿದೆ ಎಂದರು. ಬಲ್ಲಮಾವಟಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಚೋಕಿರ ಭಾಬಿ ಭೀಮಯ್ಯ, ಪಿಡಿಒ ಶರತ್ ಪೂಣಚ್ಚ,…
ಮಡಿಕೇರಿ ಜ.23 NEWS DESK : ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆಯಾದ ದಿನವೇ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ದೊರೆಯಿತು ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ನೀಡಿರುವ ಹೇಳಿಕೆಯನ್ನು ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿಸಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕ ತೀವ್ರವಾಗಿ ಖಂಡಿಸುತ್ತದೆ ಎಂದು ಸಮಿತಿಯ ಸಂಚಾಲಕಿ ಗಾಯತ್ರಿ ನರಸಿಂಹ ತಿಳಿಸಿದ್ದಾರೆ. ಮೋಹನ್ ಭಾಗವತ್ ಅವರ ಹೇಳಿಕೆಯನ್ನು ಕೇಂದ್ರ ಸರಕಾರ ದೇಶ ವಿರೋಧಿ ಎಂದು ಪರಿಗಣಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪತ್ರಿಕಾ ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ. ಭಾರತವು 1947ರ ಆಗಸ್ಟ್ 15 ರಂದು ಸ್ವಾತಂತ್ರ ಪಡೆದುದರ ಹಿಂದೆ ಬಹುದೊಡ್ಡ ಹೋರಾಟವೇ ಇತ್ತು, ದೇಶಾದ್ಯಂತ ಚಳುವಳಿ ನಡೆದಿದೆ. ಆದರೆ ಭಾಗವತ್ ಅವರು ತಮ್ಮ ಹೇಳಿಕೆಯ ಮೂಲಕ ಇದನ್ನು ನಿರಾಕರಿಸಿದಂತ್ತಾಗಿದೆ. ದೇಶವು ತನ್ನದೇ ಆದ ಸಂವಿಧಾನವನ್ನು ಹೊಂದಿದೆ. ಭಾರತದ ಗಣರಾಜ್ಯ ಈ ಸಂವಿಧಾನದ ಮೌಲ್ಯಗಳ ಮೇಲೆ ಸ್ಥಾಪಿತವಾಗಿದೆ. ಸ್ವಾತಂತ್ರ್ಯದ 75ನೇ ವರ್ಷಾಚರಣೆಯನ್ನು ಸರಕಾರ, ವಿರೋಧ ಪಕ್ಷಗಳು ಮತ್ತು ಇತರ…
ಸೋಮವಾರಪೇಟೆ ಜ.23 NEWS DESK : ಶಾಲೆಗೆ ಕಾಲ್ನಡಿಗೆಯಲ್ಲಿ ಬರಲು ಕಾಡಾನೆಗಳ ಭಯವಿದೆ ವಾಹನ ಸೌಲಭ್ಯ ಕೊಡಿ. ಡೆಸ್ಕ್ ಬೆಂಚು ಹಾಳಾಗಿವೆ ಕೊಡಿಸಿ, ಶಾಲಾ ಸಮಯಕ್ಕೆ ಸರ್ಕಾರಿ ಬಸ್ ಕಲ್ಪಿಸಿಕೊಡಿ ಎಂಬ ಹತ್ತಾರು ಸಮಸ್ಯೆಗಳನ್ನು ಮಕ್ಕಳ ಗ್ರಾಮಸಭೆಯಲ್ಲಿ ವಿದ್ಯಾರ್ಥಿಗಳು ಕೇಳಿದರು. ಐಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ವಿದ್ಯಾರ್ಥಿನಿ ಸಹನ ಅವರ ಅಧ್ಯಕ್ಷತೆಯಲ್ಲಿ ನಡೆದ ಐಗೂರು ಗ್ರಾಮ ಪಂಚಾಯಿತಿ ಮಕ್ಕಳ ಗ್ರಾಮಸಭೆಯಲ್ಲಿ ವಿದ್ಯಾರ್ಥಿಗಳು ತಮ್ಮ ಅಸಹಾಯಕತೆ ವ್ಯಕ್ತಪಡಿಸಿದರು. ಯುವಕನೋರ್ವ ಬೈಕ್ನಲ್ಲಿ ಬಂದು ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದಾನೆ ನನಗೆ ರಕ್ಷಣೆ ಬೇಕು ಎಂದು ಪಿಯುಸಿ ವಿದ್ಯಾರ್ಥಿನಿ ಸಭೆಯಲ್ಲಿ ಮನವಿ ಮಾಡಿದರು. ವಿದ್ಯಾರ್ಥಿನಿಗೆ ಧೈರ್ಯ ತುಂಬಿದ ಚಿಲ್ಡ್ರನ್ಸ್ ಮೂವ್ಮೆಂಟ್ ಫಾರ್ ಸಿವಿಕ್ ಅವೆರ್ನೆಸ್(ಸಿಎಂಸಿಎ) ಸಂಸ್ಥೆಯ ಅಸೋಸಿಯೇಟ್ ಡೈರೆಕ್ಟರ್ ಎಂ.ಪಿ. ಮರುಳಪ್ಪ, ನಿನಗೆ ಎಲ್ಲಾ ಭದ್ರತೆ ಒದಗಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು. ಪೊಲೀಸರಿಗೆ ಮಾಹಿತಿ ನೀಡುತ್ತೇನೆ. ಶಿಕ್ಷಕಿಯರು ವಿದ್ಯಾರ್ಥಿನಿಗೆ ಧೈರ್ಯ ಹೇಳಿ, ಪೂರ್ಣ ಮಾಹಿತಿ ಸಂಗ್ರಹಿಸಿ ಕೊಡಬೇಕು ಎಂದು ಪಿಡಿಒ ಪೂರ್ಣಕುಮಾರ್…
ಪುತ್ತೂರು ಜ.23 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿನಿ ಕೆ.ಎನ್.ಅನಘ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಹಿಳೆಯರ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾಳೆ. ಕಾಲೇಜಿನ ಪ್ರಥಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿಯಾಗಿರುವ ಅನಘ, ಎಸ್ಐಟಿ ತುಮಕೂರಿನಲ್ಲಿ ನಡೆದ ಆಯ್ಕೆ ಶಿಬಿರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ ವಿಶ್ವವಿದ್ಯಾನಿಲಯ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಜನವರಿ 24 ರಿಂದ 28ರ ವರೆಗೆ ಮೈಸೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ನಡೆಯುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇವರಿಗೆ ಸಂತ ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ತರಬೇತಿ ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ.ಕೆ ತಿಳಿಸಿದ್ದಾರೆ.
ಮಡಿಕೇರಿ ಜ.23 NEWS DESK : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಕೊಡಗು ಜಿಲ್ಲಾ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಸಂಘದ ಪ್ರಮುಖರು ಹಾಗೂ ಹೊರಗುತ್ತಿಗೆ ನೌಕರರು ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಹನುಮೇಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಪರಿಶಿಷ್ಟ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಕಳೆದ 15-20 ವಷಗಳಿಂದ ನೌಕರರು ಕಡಿಮೆ ಸಂಬಳಕ್ಕೆ ಯಾವುದೇ ಭದ್ರತೆ ಇಲ್ಲದೆ ದುಡಿಯುತ್ತಿದ್ದಾರೆ. ತಮ್ಮ ಕುಟುಂಬ, ಮಕ್ಕಳನ್ನು ಮರೆತು ಹಾಸ್ಟೆಲ್ ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ನೋಡಿಕೊಂಡು ನಿರಂತರವಾಗಿ ಕೆಲಸ ಮಾಡುತ್ತಾ ಬಂದಿದ್ದಾರೆ. ಆದರೆ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಮಸ್ಯೆಗಳಿಗೆ…
ಮಡಿಕೇರಿ ಜ.23 NEWS DESK : ಮಡಿಕೇರಿಯ ನಿಶ್ಟಿ ಪ್ರೊಡಕ್ಷನ್ ಬ್ಯಾನರ್ನಡಿಯಲ್ಲಿ ನಿರ್ಮಾಣಗೊಂಡಿರುವ ಬಿ.ಸಿ.ವಿನು ಮಹೇಶ್ ರೈ ನಿರ್ದೇಶನದ “ಮಾಸ್ಟರ್ ಮೈಂಡ್” ಕನ್ನಡ ಚಲನಚಿತ್ರ ಜ.24 ರಿಂದ ಏಳು ದಿನಗಳ ಕಾಲ ಸುಂಟಿಕೊಪ್ಪದ ಗಣೇಶ ಚಿತ್ರಮಂದಿರದಲ್ಲಿ ಪ್ರಾಯೋಗಿಕ ಪ್ರದರ್ಶನ ಕಾಣಲಿದೆ. ಈ ಕುರಿತು ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ನಿರ್ದೇಶಕ ಬಿ.ಸಿ.ವಿನು ಮಹೇಶ್ ರೈ ಚಿತ್ರದಲ್ಲಿ ಕೊಡಗಿನ ಅನೇಕ ಕಲಾವಿದರು ಅಭಿನಯಿಸಿದ್ದು, ಬಹುತೇಕ ಚಿತ್ರೀಕರಣ ಜಿಲ್ಲೆಯಲ್ಲೇ ನಡೆದಿದೆ ಎಂದರು. ಸಾಹಸ, ಸಾಂಸಾರಿಕ ಮತ್ತು ಹಾಸ್ಯಭರಿತವಾಗಿರುವ “ಮಾಸ್ಟರ್ ಮೈಂಡ್” ಚಿತ್ರವನ್ನು ಕುಟುಂಬ ಸಮೇತರಾಗಿ ವೀಕ್ಷಿಸಬಹುದಾಗಿದೆ. ಕೊಡಗಿನ ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಪತ್ರಕರ್ತರಿಗೆ ಉಚಿತ ಪ್ರವೇಶ ಕಲ್ಪಿಸಲಾಗುತ್ತಿದೆ. ಆಕಸ್ಮಿಕವಾಗಿ ಸಿಕ್ಕಿದ ಶ್ರೀಮಂತನ ಡೈರಿಯೊಂದನ್ನು ಓದಿದ ಮೂವರು ಕಳ್ಳರು ಆ ಶ್ರೀಮಂತನ ಮನೆ ಸೇರಿಕೊಳ್ಳುತ್ತಾರೆ. ಮೋಸ ಮಾಡಲೆಂದು ಬಂದ ಮೂವರು ಅಲ್ಲಿ ಸಿಕ್ಕ ತಾಯಿ ಪ್ರೀತಿಯಿಂದ ತಮ್ಮ ವಂಚನೆಯ ಗುಣವನ್ನು ಬಿಟ್ಟು ಪ್ರೀತಿಗಾಗಿ ಮನ ಮಿಡಿಯುತ್ತಾರೆ. ಅಲ್ಲದೆ ಅನಾರೋಗ್ಯ ಪೀಡಿತ ತಾಯಿಯ ಜೀವ ಉಳಿಸುವುದಕ್ಕಾಗಿ…
ನಾಪೋಕ್ಲು ಜ.23 NEWS DESK : ನಾಪೋಕ್ಲು ಶೌರ್ಯ ವಿಪತ್ತು ನಿರ್ವಹಣ ಘಟಕದ ವತಿಯಿಂದ ಶ್ರೀ ಮಕ್ಕಿ ಶಾಸ್ತಾವು ದೇವಾಲಯದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ದೇವಾಲಯಾದ ಆವರಣದಲ್ಲಿದ್ದ ಕಸ, ಕಡ್ಡಿ, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಶ್ರಮದಾನದ ಮೂಲಕ ಸ್ವಚ್ಛಗೊಳಿಸಲಾಯಿತು. ಸೇವಾ ಕಾರ್ಯದಲ್ಲಿ ಶೌರ್ಯ ವಿಪತ್ತು ನಿರ್ವಹಣ ಘಟಕದ ಮಾಸ್ಟರ್ ಬಾಳೆಯಡ ದಿವ್ಯ ಮಂದಪ್ಪ ಹಾಗೂ ಪ್ರಮುಖರಾದ ಶರವಣ, ರವಿ, ಚಂದ್ರಕಲಾ, ರಮ್ಯಾ, ಪೊನ್ನಮ್ಮ ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ.






