ಲೇಖಕ: admin

ಮಡಿಕೇರಿ ಜ.23 NEWS DESK : ಕೊಡಗು ಜಿಲ್ಲಾಡಳಿತ ವತಿಯಿಂದ ಜ.26 ರಂದು ಬೆಳಗ್ಗೆ 9 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಇತರರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ NEWS DESK ಜ.22 : ಯುವ ಸಮೂಹಕ್ಕೆ ಉದ್ಯೋಗ ಸೃಷ್ಟಿಸುವ ದೃಷ್ಟಿಯಿಂದ ದಕ್ಷಿಣ ಕೊಡಗಿನಲ್ಲಿ ಸಣ್ಣ ಕೈಗಾರಿಕಾ ಪ್ರದೇಶಾಭಿವೃದ್ಧಿಗೆ 50 ಏಕರೆ ಭೂಮಿ ಮಂಜೂರು ಮಾಡಬೇಕೆಂದು ಆಮ್ ಆದ್ಮಿ ಪಾರ್ಟಿ ಒತ್ತಾಯಿಸಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಅವರು ಸಣ್ಣ ಕೈಗಾರಿಕಾ ಪ್ರದೇಶಾಭಿವೃದ್ಧಿಯಿಂದ ಕೊಡಗು ಜಿಲ್ಲೆಗೆ ಆಗುವ ಅನುಕೂಲತೆಗಳ ಕುರಿತು ವಿವರಿಸಿದರು. ಕೊಡಗು ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶಗಳಿಲ್ಲದ ಕಾರಣ ಯುವ ಜನತೆಗೆ ಉದ್ಯೋಗ ಸೃಷ್ಟಿಯಾಗುತ್ತಿಲ್ಲ. ಉದ್ಯೋಗ ಹುಡುಕಿಕೊಂಡು ಅಕ್ಕ ಪಕ್ಕದ ಜಿಲ್ಲೆಗಳಿಗೆ, ರಾಜ್ಯಗಳಿಗೆ ಹೋಗುವ ಅನಿವಾರ್ಯತೆ ಎದುರಾಗಿದೆ. ಆದ್ದರಿಂದ ವಿರಾಜಪೇಟೆ ಅಥವಾ ಪೊನ್ನಂಪೇಟೆ ತಾಲ್ಲೂಕಿನಲ್ಲಿ ಕೈಗಾರಿಕಾ ಪ್ರದೇಶವನ್ನು ಸ್ಥಾಪಿಸಬೇಕು. ಸರಕಾರ ಸಣ್ಣ ಕೈಗಾರಿಕಾ ಪ್ರದೇಶಾಭಿವೃದ್ಧಿಗೆ 50 ಏಕರೆ ಭೂಮಿ ನೀಡಬೇಕು ಎಂದರು. ಜಿಲ್ಲೆಯಲ್ಲಿ KSSIDC ಗೋಡೌನ್, KSIIDC, KSFC ಸಾಲ ಅಥವಾ KIADB ಲ್ಯಾಂಡ್ ಸೌಲಭ್ಯಗಳನ್ನು…

Read More

ಮಡಿಕೇರಿ ಜ.22 NEWS DESK : ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು, ಡೆಹರಾಡೂನ್ ಇಲ್ಲಿಗೆ 8 ನೇ ತರಗತಿ ಪ್ರವೇಶ ಬಯಸುವ ಬಾಲಕ ಬಾಲಕಿಯರಿಗಾಗಿ 2025 ರ ಜೂ.1 ರಂದು ಬೆಂಗಳೂರಿನ ಕೇಂದ್ರದಲ್ಲಿ ಅರ್ಹತಾ ಪರೀಕ್ಷೆ ನಡೆಯಲಿದೆ. ಜನವರಿ 2026 ನೇ ಅಧಿವೇಶನಕ್ಕಾಗಿ ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಲಿಮಿಟರಿ ಕಾಲೇಜ್ ನಲ್ಲಿ 8 ನೇ ತರಗತಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ 2025 ರ ಜೂನ್, 01 ರಂದು ನಡೆಯಲಿದೆ. ಅಭ್ಯರ್ಥಿಗಳು ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದಿರುವ ಯಾವುದೇ ಶಾಲೆಯಲ್ಲಿ 7 ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಹಾಗೂ ದಿನಾಂಕ 01-01-2026 ರಂತೆ 11 1/2 ವರ್ಷದಿಂದ 13 ವರ್ಷದೊಳಗಿರುವ (ಅಂದರೆ ದಿನಾಂಕ 02-01-2013 ರಿಂದ 01-07-2014 ರೊಳಗೆ ಜನಿಸಿರುವ) ಬಾಲಕರು ಮತ್ತು ಬಾಲಕಿಯರು ಮಾತ್ರ ಸದರಿ ಪ್ರವೇಶ ಪರೀಕ್ಷೆಗೆ ಅರ್ಹರಿರುತ್ತಾರೆ. ಈ ಸಂಸ್ಥೆಯ ಮುಖ್ಯ…

Read More

ಮಡಿಕೇರಿ ಜ.22 NEWS DESK : ಜಾರ್ಕಂಡ್ ನಲ್ಲಿ ಜ.29 ರಿಂದ ಫೆ.2ರವರೆಗೆ ನಡೆಯಲಿರುವ 19 ವರ್ಷದೊಳಗಿನ ರಾಷ್ಟ್ರೀಯ ಬಾಲಕರ ಹಾಕಿ ತಂಡಕ್ಕೆ ಕೊಡಗಿನ ಕುಂಭಗೌಡನ ವಿ.ವಿಶ್ವಜಿತ್ ಹಾಗೂ ಪೂಜಿತ್ ರವಿ ಕುಂದಳ್ಳಿ ಆಯ್ಕೆಯಾಗಿದ್ದಾರೆ. ವಿಶ್ವಜಿತ್ ಕುಂಭಗೌಡನ ಮಕ್ಕಂದೂರು ಗ್ರಾಮದ ಕುಂಭಗೌಡನ ವಿನೋದ್ ಕುಮಾರ್ ಹಾಗೂ ಕುಂಭಗೌಡನ ಜಲಜಾಕ್ಷಿ ದಂಪತಿಯ ಪುತ್ರ. ಪೂಜಿತ್ ರವಿ ಕುಂದಳ್ಳಿ ಸೋಮವಾರಪೇಟೆಯ ಕುಂದಳ್ಳಿ ಗ್ರಾಮದ ರವಿ (ರುದ್ರಪ್ಪ, ಮಾಜಿ ಸೈನಿಕ) ಹಾಗೂ ಅಶ್ವಿನಿ ದಂಪತಿಯ ಪುತ್ರ.

Read More

ಮಡಿಕೇರಿ ಜ.22 NEWS DESK: ಜಾರ್ಕಂಡ್ ನಲ್ಲಿ ಜ.29 ರಿಂದ ಫೆ.2ರವರೆಗೆ ನಡೆಯಲಿರುವ 19 ವರ್ಷದೊಳಗಿನ ರಾಷ್ಟ್ರೀಯ ಬಾಲಕಿಯರ ಹಾಕಿ ತಂಡಕ್ಕೆ ಕೊಡಗಿನ ಚೋಳಂಡ ದೃಶ್ಯ ಅಚ್ಚಪ್ಪ ಆಯ್ಕೆಯಾಗಿದ್ದಾರೆ. ದೃಶ್ಯ ಚೊಳಂಡ ಧನು ಅಚ್ಚಪ್ಪ ಮತ್ತು ದಿವಿನ್ ದೇಚಮ್ಮ (ತಮನೆ ಚೇಂದಿರ) ದಂಪತಿಯ ಪುತ್ರಿ. 

Read More

ಮಡಿಕೇರಿ ಜ.22 NEWS DESK : ಕುಶಾಲನಗರ ಉಪವಿಭಾಗ, ಕೂಡಿಗೆ ಶಾಖಾ ವ್ಯಾಪ್ತಿಯ, ಎಫ್1 ಹೆಬ್ಬಾಲೆ ಫೀಡರ್ ಮಾರ್ಗದಲ್ಲಿ ನಿರ್ವಹಣಾ ಕಾರ್ಯ ಕೈಗೆತ್ತಿಕೊಳ್ಳುವುದರಿಂದ ಜನವರಿ, 23 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಎಫ್1 ಹೆಬ್ಬಾಲೆ ಫೀಡರ್‍ನ ಹೆಬ್ಬಾಲೆ, ಕಣಿವೆ, ಹುಲುಸೆ, ಮರೂರು, ಹಳೆಕೋಟೆ, ಹೊಸಕೋಟೆ, ಅಂದಾನಿಪುರ, ಎಫ್15 ಭುವನಗಿರಿ ಫೀಡರ್‍ನ ಮಲ್ಲೇನಹಳ್ಳಿ, ಮದಲಾಪುರ, ಹುದುಗೂರು, ಭುವನಗಿರಿ, ಸೀಗೆಹೊಸೂರು, ಯಲಕನೂರು ಎಫ್6 ಕೂಡಿಗೆ ಫೀಡರ್‍ನ ಕೂಡಿಗೆ, ಇಂಡಸ್ಟ್ರೀಯಲ್ ಏರಿಯಾ, ಹಳೆಕೂಡಿಗೆ, ಕೂಡ್ಲೂರು, ಕೂಡುಮಂಗಳೂರು ಹಾಗೂ ಸುತ್ತಮುತ್ತಲ ಗ್ರಾಮಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.

Read More

ಮಡಿಕೇರಿ ಜ.22 NEWS DESK :  ಕೋಟ್ಯಂತರ ಭಾರತೀಯರ ಹೃದಯದಲ್ಲಿ ಮರ್ಯಾದ ಪುರುಷೋತ್ತಮ ಶ್ರೀರಾಮ ಶಾಶ್ವತ ಸ್ಥಾನ ಪಡೆದಿದ್ದು, ಈತನ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ‘ಶ್ರೀ ಬಾಲರಾಮನ’ ಪ್ರಾಣ ಪ್ರತಿಷ್ಠೆ ನಡೆದು ವರ್ಷ ತುಂಬಿರುವ ಸಂಭ್ರಮದಲ್ಲಿ  ಶ್ರೀ ರಾಮ ಜನ್ಮಭೂಮಿ ಸೇವಾ ಸಮಿತಿಯಿಂದ ನಗರದಲ್ಲಿ ಅನ್ನಸಂತರ್ಪಣಾ ಕಾರ್ಯ ನಡೆಯಿತು. ಭಾರತೀಯರ ಶತ ಶತಮಾನಗಳ ಕನಸು ಕಳೆದ ಸಾಲಿನಲ್ಲಿ ಶ್ರೀ ಬಾಲ ರಾಮನ ಪ್ರತಿಷ್ಠಾಪನೆಯೊಂದಿಗೆ ಅಯೋಧ್ಯೆಯ ಭವ್ಯ ಸುಂದರ ಮಂದಿರ ಭಕ್ತರಿಗೆ ತೆರೆದುಕೊಂಡಿದೆ. ಈ ಸಂಭ್ರಮವನ್ನು ಕಳೆದ ಸಾಲಿನಲ್ಲಿಯೂ ಶ್ರೀರಾಮ ಜನ್ಮಭೂಮಿ ಸೇವಾ ಸಮಿತಿ ಅನ್ನಸಂತರ್ಪಣೆಯ ಮೂಲಕ ಜನ ಮಾನಸದೊಂದಿಗೆ ಹಂಚಿಕೊಂಡಿತ್ತು. ಶ್ರೀ ರಾಮ ಜನ್ಮಭೂಮಿ ಸೇವಾ ಸಮಿತಿಯಿಂದ ಬುಧವಾರ ಮಧ್ಯಾಹ್ನ 12 ಗಂಟೆಯಿಂದ ಸಂಜೆಯವರೆಗೆ ಇಲ್ಲಿನ ಖಾಸಗಿ ಬಸ್ ನಿಲ್ದಾಣದಲ್ಲಿ ಅನ್ನಸಂತರ್ಪಣೆ ನಡೆಯಿತು. ಸಮಿತಿಯ ಪದಾಧಿಕಾರಿಗಳು, ನೆರವು ನೀಡಿದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸದಸ್ಯರು ಶ್ರದ್ಧೆಯಿಂದ ಈ ಕಾರ್ಯ ನೆರವೇರಿಸಿದ್ದು ವಿಶೇಷ. ನಗರ ವ್ಯಾಪ್ತಿಯ ಹಾಗೂ ದೂರದೂರುಗಳಿಂದ ಆಗಮಿಸಿದ ನೂರಾರು…

Read More

ಮಡಿಕೇರಿ ಜ.22 NEWS DESK : ಉಪನ್ಯಾಸಕಿ ಮತ್ತು ಲೇಖಕಿ ಕೆ.ಜಯಲಕ್ಷ್ಮಿ ಅವರು ಬರೆದಿರುವ ಮತ್ತೆ ವಸಂತ ಹೆಸರಿನ ಕಥಾ ಸಂಕಲನ ಇದೇ ಜ.26 ರಂದು ಲೋಕಾರ್ಪಣೆಯಾಗಲಿದೆ. ನಗರದ ರೆಡ್ ಬ್ರಿಕ್ಸ್ ಇನ್ ಸಭಾಂಗಣದಲ್ಲಿ ಜ.26 ರಂದು ಬೆಳಗ್ಗೆ 10 ಗಂಟೆಗೆ ಮತ್ತೆ ವಸಂತ ಕಥಾ ಸಂಕಲನವನ್ನು ಆಕಾಶವಾಣಿಯ ಉದ್ಘೋಷಕ ಸುಬ್ರಾಯ ಸಂಪಾಜೆ ಲೋಕಾರ್ಪಣೆ ಮಾಡಲಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷ ಟಿ. ಪಿ ರಮೇಶ್ ಅಧ್ಯಕ್ಷತೆಯ ಕಾರ್ಯಕ್ರಮದಲ್ಲಿ ಶಕ್ತಿ ಪತ್ರಿಕೆಯ ಸಂಪಾದಕ ಜಿ .ಚಿದ್ವಿಲಾಸ್, ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಎಚ್ ಟಿ., ಬೆಳ್ತಂಗಡಿಯ ಎನ್. ಜಯಪ್ರಕಾಶ್ ಶರ್ಮ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಮತ್ತೆ ವಸಂತ ಕಥಾ ಸಂಕಲನದ ಕಥೆಗಾರ್ತಿ ಜಯಲಕ್ಷ್ಮಿ ತಿಳಿಸಿದ್ದಾರೆ.

Read More

ವಿರಾಜಪೇಟೆ ಜ.22 NEWS DESK : ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ದಾನಿಗಳಾದ ಕುಜ್ಞ0ಡ ಮಹೇಶ್ ಕಂಪ್ಯೂಟರ್ ನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭ ಮಾತನಾಡಿದ ಮಹೇಶ್, ಗ್ರಾಮೀಣ ಶಾಲೆಯ ಮಕ್ಕಳು ಕೂಡ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಅಧ್ಯಯನ ಮಾಡುವಂತಾಗಬೇಕು. ಕಂಪ್ಯೂಟರ್ ಕಲಿಕೆ ಅತೀ ಮುಖ್ಯವಾಗಿದ್ದು, ವಿದ್ಯಾರ್ಥಿಗಳಿಗೆ ಉಪಯುಕ್ತವಾಗಬೇಕೆಂದು ಹೇಳಿದರು. ವಿದ್ಯಾರ್ಥಿಗಳು ಪ್ರಾಥಮಿಕ ಶಿಕ್ಷಣದಿಂದಲೇ ಕಂಪ್ಯೂಟರ್ ಶಿಕ್ಷಣ ಪಡೆಯುವಂತಾಗಬೇಕೆಂದು ಅಭಿಪ್ರಾಯಪಟ್ಟರು. ವಿರಾಜಪೇಟೆ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥೆ ಹಾಗೂ ಸಮಾಜ ಸೇವಕರಾದ ಪೂಜಾ ಸಜೇಶ್ ಮಾತನಾಡಿ, ಮುಂದಿನ ದಿನಗಳಲ್ಲಿ ಶಾಲೆಗೆ ಹಾಗೂ ವಿದ್ಯಾರ್ಥಿಗಳ ಕಲಿಕೆಗೆ ಅನುಗುಣವಾಗಿ ಬೇಕಾದ ವ್ಯವಸ್ಥೆಯನ್ನು ಕಲ್ಪಿಸಲು ಸಹಕಾರವನ್ನು ನೀಡಲಾಗುವುದು ಎಂದರು. ನಮ್ಮ ಗ್ರಾಮದ ಶಾಲೆ ಹಾಗೂ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸದಾ ಪ್ರೋತ್ಸಾಹವನ್ನು ನೀಡಲಾಗುವುದು ಎಂದು ಹೇಳಿದರು. ಕಲ್ತೊಡು ಕ್ಲಸ್ಟರ್ ನ ಸಿ.ಆರ್.ಪಿ.ವೆಂಕಟೇಶ್, ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಶಿಲ್ಪಾ, ರಾಝಿಕ್, ಎಸ್.ಡಿ.ಎಂ.ಸಿ ಸದಸ್ಯರು, ಶಿಕ್ಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ…

Read More

ಮಡಿಕೇರಿ ಜ.22 NEWS DESK : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ವಿರುದ್ಧ ವಿನಾಕಾರಣ ಪ್ರಕರಣ ದಾಖಲಿಸಲಾಗಿದ್ದು, ಇದನ್ನು ಮಡಿಕೇರಿ ಕೊಡವ ಸಮಾಜ ತೀವ್ರವಾಗಿ ಖಂಡಿಸುತ್ತದೆ ಎಂದು ಕೊಡವ ಸಮಾಜದ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಎನ್.ಯು.ನಾಚಪ್ಪ ಅವರನ್ನು ಬಂಧಿಸಿದರೆ ಕೊಡವ ಸಮಾಜದ ಮೂಲಕ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಕಳೆದ ಅನೇಕ ವರ್ಷಗಳಿಂದ ಕೊಡಗಿನ ಮೂಲ ನಿವಾಸಿ ಕೊಡವ ಜನಾಂಗದ ಉಳಿವಿಗಾಗಿ ನಿರಂತರ ಪ್ರತಿಭಟನೆ ಮತ್ತು ಕಾನೂನು ಹೋರಾಟಗಳನ್ನು ನಡೆಸಿಕೊಂಡು ಬರುವ ಮೂಲಕ ಕೊಡವ ನಾಯಕರಾಗಿ ಗುರುತಿಸಿಕೊಂಡಿರುವ ಎನ್.ಯು.ನಾಚಪ್ಪ ಅವರ ವಿರುದ್ಧದ ಪ್ರಕರಣಗಳನ್ನು ತಕ್ಷಣ ರದ್ದುಗೊಳಿಸಬೇಕೆಂದು ಒತ್ತಾಯಿಸಿದೆ. ಕಟ್ಟೆಮಾಡು ಗ್ರಾಮದ ಶ್ರೀಮಹಾ ಮೃತ್ಯುಂಜಯ ದೇವಾಲಯದ ಉತ್ಸವದಲ್ಲಿ ಕೊಡವ ಜನಾಂಗಕ್ಕೆ ಆದ ಅವಮಾನವನ್ನು ಎನ್.ಯು.ನಾಚಪ್ಪ ಅವರು ಖಂಡಿಸಿದ್ದಾರೆ. ಕೊಡವರ ಪರ ಧ್ವನಿಯಾಗಿರುವ ನಾಚಪ್ಪ ಅವರ ವಿರುದ್ದ ಕಾನೂನು ಕ್ರಮ ಕೈಗೊಂಡು, ಬಂಧಿಸಿ ಹೋರಾಟವನ್ನು ನಿಗ್ರಹಿಸುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದೆ. ಎನ್.ಯು.ನಾಚಪ್ಪ ಅವರ ಬಂಧನವಾದರೆ ಮಡಿಕೇರಿ…

Read More