ಮಡಿಕೇರಿ ಫೆ.5 NEWS DESK : ಗಾಳಿಬೀಡು ಗ್ರಾ.ಪಂ ವ್ಯಾಪ್ತಿಯಲ್ಲಿ 65 ಲಕ್ಷ ವೆಚ್ಚದ ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆ ಹಾಗೂ ಆರಂಭಿಸುವ ಕಾಮಗಾರಿಗಳಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡಿದರು. ಚಪ್ಪಂಡಕೆರೆಯ ಅಡ್ಕದಬಾಣೆಯಲ್ಲಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು ಇನ್ನೂ ಹೆಚ್ಚಿನ ಅನುದಾನವನ್ನು ಗ್ರಾಮಕ್ಕೆ ನೀಡುವ ಭರವಸೆ ನೀಡಿದರು. ಪಂಚಾಯತ್ ವ್ಯಾಪ್ತಿಯ ಕಾಲೂರು ಗ್ರಾಮದಲ್ಲಿ ರಸ್ತೆ ಮತ್ತು ಮೂಲಭೂತ ಸೌಲಭ್ಯ ಸಮಸ್ಯೆ ಇರುವುದು ಗಮನಕ್ಕೆ ಬಂದಿದ್ದು, ತಾವೇ ಖುದ್ದಾಗಿ ಕಾಲೂರಿಗೆ ಲೋಕೋಪಯೋಗಿ, ಪಂಚಾಯತ್ ರಾಜ್ ಹಾಗೂ ಚೆಸ್ಕಾಂ ಅಧಿಕಾರಿಗಳೊಂದಿಗೆ ತೆರಳಿ ಪರಿಶೀಲಿಸಿ ಕ್ರಮ ಜರುಗಿಸುವುದಾಗಿ ಸ್ಪಷ್ಟ ಪಡಿಸಿದರು. ಪ್ರಮುಖರಾದ ಹೆಚ್.ಎ.ಹಂಸ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ವಿ.ಜಿ.ಮೋಹನ್, ಪುಷ್ಪ ಪೂಣಚ್ಚ, ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧೀಕಾರದ ಸದಸ್ಯರಾದ ಹರಿಪ್ರಸಾದ್ ಕೋಚನ, ಗ್ರಾ.ಪಂ ಪಿ.ಡಿ ಒ ಶಶಿಕಿರಣ್, ಸುಭಾಶ್ ಆಳ್ವ, ರೋಷನ್ ಕೊಂಬಾರನ, ಪೊನ್ನಪ್ಪ ಕಾಲೂರು, ಗಣಪತಿ ಕೊಂಬಾರನ, ಅನಂತಕುಮಾರ್ ಕೋಲುಮುಡಿಯನ ಹಾಗೂ ಗ್ರಾಮಸ್ಥರು…
ಲೇಖಕ: admin
ಮಡಿಕೇರಿ ಫೆ.5 NEWS DESK : ಕರ್ನಾಟಕ ಸರ್ಕಾರ ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೈಮಗ್ಗ ಮತ್ತು ಜವಳಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಕೊಡವ ಸಮಾಜದ ಪ್ರಾಂಗಣದಲ್ಲಿ ಫೆ.11 ರವರೆಗೆ ನಡೆಯಲಿರುವ ಕಾವೇರಿ ವಸ್ತ್ರಸಿರಿ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಕೊಡಗು ಜಿಲ್ಲಾ ಕೈಗಾರಿಕಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘದ ಅಧ್ಯಕ್ಷ ಸಿ.ವಿ.ನಾಗೇಶ್ ಚಾಲನೆ ನೀಡಿದರು. ಈ ಸಂದರ್ಭ ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಎಸ್.ಗುರುಸ್ವಾಮಿ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಲಿಂಗರಾಜ ದೊಡ್ಡಮನಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. ಸುಮಾರು 25 ಕ್ಕೂ ಹೆಚ್ಚು ಮಳಿಗೆ ಇದೆ.
ಮಡಿಕೇರಿ ಫೆ.5 NEWS DESK : ಮಡಿಕೇರಿಯಲ್ಲಿ ಫೆ.7 ರಂದು ನಡೆಯುವ ಕೊಡವರ ಒಮ್ಮತದ ಬೃಹತ್ ರ್ಯಾಲಿಗೆ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಬೆಂಬಲವನ್ನು ನೀಡಲಿದೆ ಮತ್ತು ಒಗ್ಗಟ್ಟು ವ್ಯಕ್ತಪಡಿಸಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಿಎನ್ಸಿ ಸಂಘಟನೆ ಕಳೆದ 35 ವರ್ಷಗಳಿಂದ ಆದಿಮಸಂಜಾತ ಕೊಡವ ಸಮುದಾಯದ ಸಂವಿಧಾನಿಕ ಹಕ್ಕುಗಳು ಮತ್ತು ಹಿತಾಸಕ್ತಿಗಳಿಗಾಗಿ ಪ್ರತಿಪಾದಿಸುತ್ತಾ ಬಂದಿದೆ. 1956 ರಲ್ಲಿ ಕೊಡವ ತಾಯ್ನಾಡಿನ ವಿಲೀನದ ನಂತರ ನಗಣ್ಯ ಸಂಖ್ಯೆಯಾಗಿ ಉಳಿದಿರುವ ಕೊಡವರು ಆಪತ್ತಿನ ಅಂಚಿನಲ್ಲಿದ್ದು, ತಾರತಮ್ಯವನ್ನು ಎದುರಿಸುತ್ತಿದ್ದಾರೆ. ರಾಜ್ಯದ ಪ್ರಬಲ ಸಮುದಾಯ ತಮ್ಮ ಜನಸಂಖ್ಯಾ ತೂಕದ ಮೂಲಕ ಕೊಡವರನ್ನು ಹತೋಟಿಯಲ್ಲಿಟ್ಟುಕೊಳ್ಳಲು, ಮೇಲುಗೈ ಸಾಧಿಸಲು, ನಮ್ಮ ಪೂರ್ವಜರ ತಾಯ್ನಾಡು ಕೊಡವಲ್ಯಾಂಡ್ನ ಮೇಲೆ ಪ್ರಾಬಲ್ಯ ಪ್ರತಿಪಾದಿಸಲು, ಜನಾಂಗೀಯ ಪ್ರಭಾವವನ್ನು ಆದಿಮಸಂಜಾತ ಕೊಡವ ಜನರ ಮೇಲೆ ಹೇರಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಅತಿಸೂಕ್ಷ್ಮ, ಆದಿಮಸಂಜಾತ ಮತ್ತು ಅಳಿವಿನಂಚಿನಲ್ಲಿರುವ ಕೊಡವರು ಸ್ವಂತ ತಾಯ್ನಾಡಿನಲ್ಲಿ ರಾಜ್ಯಾಂಗದತ್ತ ಹಕ್ಕನ್ನು ಮರು ಸ್ಥಿರೀಕರಿಸಲು ಸಿಎನ್ಸಿ ಸಂಘಟನೆಯು…
ಮಡಿಕೇರಿ ಫೆ.5 NEWS DESK : ಕರ್ನಾಟಕದ ಕೊಡಗು ಜಿಲ್ಲೆಯ ಕೆಲವು ಭಾಗಗಳಲ್ಲಿ ಶುಂಠಿ ಬೆಳೆಯನ್ನು ತೀವ್ರವಾಗಿ ಭಾದಿಸಿದ ಹೊಸ ಶಿಲೀಂಧ್ರ ರೋಗವನ್ನು ಐ.ಸಿ.ಎ.ಆರ್. ಭಾರತೀಯ ಸಂಬಾರ ಬೆಳೆಗಳ ಸಂಶೋಧನಾ ಸಂಸ್ಥೆ (ICAR-IISR), ಕೋಜಿಕೋಡ್ ನ ವಿಜ್ಞಾನಿಗಳು ಪತ್ತೆ ಹಚ್ಚಿದ್ದಾರೆ. ಶುಂಠಿಯಲ್ಲಿ ಕಂಡುಬಂದಿರುವ ಈ ರೋಗವು ಪೈರಿಕ್ಯುಲೇರಿಯಾsp.ಎಂಬ ಶಿಲೀಂಧ್ರದಿಂದ ಹರಡುತ್ತದೆ. ಪೈರಿಕ್ಯುಲೇರಿಯಾವು ಭತ್ತ, ಗೋಧಿ ಮತ್ತು ಬಾರ್ಲಿಯಂತಹ ಏಕದಳ ಸಸ್ಯಗಳಲ್ಲಿ ಬ್ಲಾಸ್ಟ್ ರೋಗವನ್ನು ಉಂಟುಮಾಡುತ್ತದೆ, ಶುಂಠಿಯಲ್ಲಿ ಇದು ಮೊದಲ ಬಾರಿಗೆ ವರದಿಯಾಗಿದೆ.ಈ ರೋಗಬಂದ ಶುಂಠಿ ಗಿಡದ ಎಲೆಗಳು ಹಳದಿಯಾಗಿ ಕಾಣಿಸಿಕೊಳ್ಳುತ್ತವೆಮತ್ತು ಆರಂಭಿಕ ಹಂತದಲ್ಲಿ ಕಪ್ಪುಅಥವಾ ಆಲಿವ್-ಹಸಿರು ಬಣ್ಣದ ಚುಕ್ಕೆಗಳು ಜೊತೆಗೂಡಿರುತ್ತದೆ ಒಮ್ಮೆ ಸೋಂಕು ತಗುಲಿದರೆ, ಅದು ವೇಗವಾಗಿ ಹರಡುತ್ತದೆ ಮತ್ತು ಕೆಲವೇ ಗಂಟೆಗಳಲ್ಲಿ ಇಡೀ ಹೊಲವನ್ನು ಆವರಿಸುತ್ತದೆ, ಇದು ತೀವ್ರವಾದ ಬೆಳೆ ನಷ್ಟ ಮತ್ತು ಶುಂಠಿಯಎಲೆ ಮತ್ತು ಕಾಂಡದ ಒಣಗುವಿಕೆಗೆ ಕಾರಣವಾಗುತ್ತದೆ. ರೋಗಪೀಡಿತ ಸಸ್ಯಗಳ ಗೆಡ್ಡೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಜ್ಞರು ಖಚಿತಪಡಿಸಿರುತ್ತಾರೆ. ಸಮಸ್ಯೆಯು ಎಲೆಗಳ ಅಕಾಲಿಕ ಹಳದಿ…
ಮಡಿಕೇರಿ ಫೆ.5 NEWS DESK : ಅಯ್ಯಂಗೇರಿ ಗ್ರಾಮದ ಸರಕಾರಿ ಶಾಲೆಯ ಮೈದಾನದ ಕಾಮಗಾರಿಯನ್ನು ತಕ್ಷಣ ಪೂರ್ಣಗೊಳಿಸದಿದ್ದಲ್ಲಿ ಭಾಗಮಂಡಲ-ಅಯ್ಯಂಗೇರಿ ರಸ್ತೆತಡೆ ಪ್ರತಿಭಟನೆ ನಡೆಸುವುದಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಯ್ಯಂಗೇರಿ ಶಾಖೆಯ ಅಧ್ಯಕ್ಷ ಉಸ್ಮಾನ್ ಎಚ್ಚರಿಕೆ ನೀಡಿದ್ದಾರೆ. ಶಾಲಾ ಮೈದಾನದ ಕಾಮಗಾರಿ ಸ್ಥಗಿತಗೊಂಡು ಎರಡು ತಿಂಗಳುಗಳೇ ಕಳೆದಿದೆ. ಮಸೀದಿಗೆ ತೆರಳುವ ಮಾರ್ಗವೂ ಇಲ್ಲೇ ಇದ್ದು, ಪಾದಾಚಾರಿಗಳ ಸಂಚಾರಕ್ಕೆ ಅಡಚಣೆಯಾಗಿದೆ. ಕಾಮಗಾರಿ ಪೂರ್ಣಗೊಳ್ಳದೆ ಇರುವುದರಿಂದ ಈ ಪ್ರದೇಶ ಸಂಪೂರ್ಣವಾಗಿ ದೂಳುಮಯವಾಗಿದೆ. ಶಾಲಾ ವಿದ್ಯಾರ್ಥಿಗಳು ದೂಳಿನ ವಾತಾವರಣ ಮತ್ತು ಮಣ್ಣಿನಿಂದಾಗಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಮುಂದಿನ ಏಳು ದಿನಗಳ ಒಳಗಾಗಿ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಗ್ರಾಮಸ್ಥರ ಸಹಕಾರದೊಂದಿಗೆ ರಸ್ತೆತಡೆ ಪ್ರತಿಭಟನೆ ನಡೆಸುವುದು ಖಚಿತವೆಂದು ಉಸ್ಮಾನ್ ತಿಳಿಸಿದ್ದಾರೆ.
ನವದೆಹಲಿ NEWS DESK ಫೆ.5 : ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಬಿರುಸಿನಿಂದ ಸಾಗಿದೆ. ರಾಷ್ಟ್ರದ ರಾಜಧಾನಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಚಳಿಯನ್ನೂ ಲೆಕ್ಕಿಸದೆ ಮತದಾರರು ಅತಿ ಉತ್ಸಾಹದಿಂದ ಮತ ಚಲಾವಣೆ ಮಾಡುತ್ತಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ದೆಹಲಿ ಮುಖ್ಯಮಂತ್ರಿ ಆತಿಶಿ ಅವರು ತಮ್ಮ ಹಕ್ಕು ಚಲಾಯಿಸಿದರು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಬಿಜೆಪಿ ರಾಷ್ಟಿçÃಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೇರಿದಂತೆ ಅನೇಕ ಮುಖಂಡರು ಮತ ಚಲಾಯಿಸಿದರು. ಸಂಜೆ 6:30 ಗಂಟೆಯವರೆಗೆ ಮತದಾನ ನಡೆಯಲಿದ್ದು, ಒಟ್ಟು 699 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಫೆ.8 ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.
ಪ್ರಯಾಗ್ ರಾಜ್ NEWS DESK ಫೆ.5 : ಉತ್ತರ ಪ್ರದೇಶದ ಪ್ರಯಾಗ್ ರಾಜ್ ದಲ್ಲಿ ನಡೆಯುತ್ತಿರುವ ಐತಿಹಾಸಿಕ ಮಹಾಕುಂಭಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಷ್ಟಮಿ ದಿನವಾದ ಇಂದು ಸಂಗಮ ಘಾಟ್ ನ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು. ಪವಿತ್ರ ಗಂಗಾ ಜಲಕ್ಕೆ ಅರ್ಘ್ಯ ಬಿಟ್ಟು ಸುತ್ತು ಬಂದರು. ನಂತರ ಕಣ್ಣುಮುಚ್ಚಿ ನೀರಿನ ಮಧ್ಯೆ ನಿಂತು ರುದ್ರಾಕ್ಷಿ ಮಾಲೆ ಹಿಡಿದುಕೊಂಡು ಧ್ಯಾನ ಮಾಡಿದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಜೊತೆಯಲ್ಲಿದ್ದರು.
ಸೋಮವಾರಪೇಟೆ ಫೆ.5 NEWS DESK : ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಫೆ.7 ಮತ್ತು 8 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಮಕ್ಕಳ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಸ್ಪರ್ಧೆಯ ಪ್ರೌಢಶಾಲಾ ವಿಭಾಗದ ಗಝಲ್ ಗಾಯನ ಸ್ಪರ್ಧೆಗೆ ಸೋಮವಾರಪೇಟೆ ಸಂತ ಜೋಸೆಫರ ಪ್ರೌಢಶಾಲೆಯ ವಿದ್ಯಾರ್ಥಿನಿ ಲಿಶ್ಮ ಡಯಾಸ್ ಆಯ್ಕೆಯಾಗಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಜಿಲ್ಲಾಮಟ್ಟದ ಗಝಲ್ ಗಾಯನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿರುವ ಲಿಶ್ಮ ಡಯಾಸ್, ಕುಶಾಲನಗರ ಪಟ್ಟಣದ ಶಿಕ್ಷಕ ದಂಪತಿ ಹ್ಯೂಬರ್ಟ್ ಡಯಾಸ್ ಮತ್ತು ಡಾ.ಸವರಿನ್ ಡಿ’ಸೋಜ ಅವರ ಪುತ್ರಿಯಾಗಿದ್ದಾಳೆ ಎಂದು ಶಾಲಾ ಮುಖ್ಯ ಶಿಕ್ಷಕ ಹ್ಯಾರಿ ಮೋರಸ್ ತಿಳಿಸಿದ್ದಾರೆ.
ಕುಶಾಲನಗರ ಫೆ.5 NEWS DESK : ಕುಶಾಲನಗರ ತಾಲ್ಲೂಕಿನ ಬಸವನಹಳ್ಳಿಯಲ್ಲಿ ಗಿರಿಜನರ ಶ್ರೇಯೋಭಿವೃದ್ಧಿಗಾಗಿ ಆರಂಭಗೊಂಡ ಗಿರಿಜನ ವಿವಿಧೋದ್ದೇಶ ಸಹಕಾರ ಸಂಘವು ಮೂರು ಸಾವಿರಕ್ಕೂ ಹೆಚ್ಚಿನ ಸದಸ್ಯರನ್ನು ಹೊಂದಿದ್ದು, ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ತಪ್ಪಿನಿಂದ ಬಹುತೇಕ ಸದಸ್ಯರು ಮತದಾನದಿಂದ ವಂಚಿತಗೊಂಡಿದ್ದಾರೆ ಎಂದು ಗಿರಿಜನ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲ್ಯಾಂಪ್ಸ್ ಸೊಸೈಟಿ ಮಾಜಿ ಅಧ್ಯಕ್ಷ ಆರ್.ಕೆ.ಚಂದ್ರು, ಲ್ಯಾಂಪ್ಸ್ ಸಂಘದಲ್ಲಿ ಕೇವಲ 177 ಮಂದಿ ಸದಸ್ಯರು ಮಾತ್ರ ಮತದಾರರ ಪಟ್ಟಿಯಲ್ಲಿ ಇದ್ದಾರೆ. ಇನ್ನೂ ಬಹುತೇಕ ಸದಸ್ಯರನ್ನು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕೈಬಿಡಲಾಗಿದೆ ಎಂದು ಆರೋಪಿಸಿದರು. ಸಂಘದ ಷೇರು ಹಣ ಭರ್ತಿ ಮಾಡುವ ಬಗ್ಗೆ ಸದಸ್ಯರಿಗೆ ಯಾವುದೇ ನೋಟಿಸ್ ನೀಡಿಲ್ಲ. ಕಾಲಾವಕಾಶ ಕೂಡ ನೀಡಿಲ್ಲ ಎಂದು ದೂರಿದ ಅವರು, ಇದರಿಂದ ಸದಸ್ಯರಿಗೆ ಮಾಹಿತಿ ಕೊರತೆಯಿಂದ ಸಂಘದ ಹಣ ರೂ.1000 ಪಾವತಿ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಸಾವಿರಾರು ಮಂದಿ ಸದಸ್ಯರು ಮತದಾನದಿಂದ ವಂಚಿತರಾಗಿದ್ದಾರೆ ಎಂದರು. ಸಂಬಂಧಿಸಿದ ಅಧಿಕಾರಿಗಳು ಸರ್ಕಾರದಿಂದ ಬರುವ ಅನುದಾನದಲ್ಲಿ ಸದಸ್ಯರ ಷೇರು ಹಣವನ್ನು…
ವಿರಾಜಪೇಟೆ ಫೆ.5 NEWS DESK : ಮಾನವ ತನ್ನ ಬದುಕಿನಲ್ಲಿ ಹಲವಾರು ಏಳು ಬೀಳುಗಳನ್ನು ಎದುರಿಸುತ್ತಾನೆ. ಕೊನೆಯಲ್ಲಿ ಜೀವನದಲ್ಲಿ ಪಡೆದ ಎಲ್ಲಾ ಲೌಕಿಕ ವಸ್ತುಗಳನ್ನು ತ್ಯಜಿಸಿ ಇಹಲೋಕಕ್ಕೆ ಸಾಗುತ್ತಾನೆ. ಈ ಸಂದರ್ಭ ಆತನ ಮಾನವೀಯ ಸೇವೆಗಳು ಮಾತ್ರ ಅಜರಾಮರವಾಗಿ ಉಳಿಯುತ್ತದೆ ಎಂದು ಸಂತ ಅನ್ನಮ್ಮ ದೇವಾಲಯದ ಪ್ರಧಾನ ಧರ್ಮ ಗುರುಗಳಾದ ರೆ.ಫಾ. ಜೇಮ್ಸ್ ಡೊಮಿನಿಕ್ ಅಭಿಮತ ವ್ಯಕ್ತಪಡಿಸಿದರು. ಸಂತ ಅನ್ನಮ್ಮ ಕ್ರೈಸ್ತ ಸ್ನೇಹಿತರ ಸಂಘದಿಂದ ವಿರಾಜಪೇಟೆ ಸಂತ ಅನ್ನಮ್ಮ ಚರ್ಚ್ನ ದ್ವಿ ಶತಮಾನೋತ್ಸವ ಸಭಾಂಗಣದಲ್ಲಿ ಫ್ರೀಜರ್ (ಮೃತದೇಹ ಸಂರಕ್ಷಿಸುವ ಶೀತಲೀಕರಣ ಪೆಟ್ಟಿಗೆ) ಮತ್ತು ಅಂತಿಮ ಕ್ರಿಯೆಗೆ ಬೇಕಾಗುವ ಪರಿಕರಗಳ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಮಾತನಾಡಿದ ಅವರು, ಮಾನವೀಯ ಗುಣಗಳನ್ನು ಹೊಂದಿರುವವನೆ ನಿಜವಾದ ಮನುಜನಾಗಿರುತ್ತಾನೆ. ದೇಹ ತ್ಯಜಿಸಿ ಇಹಲೋಕದ ಯಾತ್ರೆಗೆ ತೆರಳುವವನ ಕ್ರಿಯೆಗಳು ಮಾನವೀಯ ನೆಲೆಯಲ್ಲಿ ಗೌರವಪೂರ್ವಕವಾಗಿರಬೇಕು. ಈ ನಿಟ್ಟಿನಲ್ಲಿ ಸ್ನೇಹಿತರ ಸಂಘದ ಸದಸ್ಯರು ದಾನಿಗಳ ನೆರವಿನಿಂದ, ಮೃತ ದೇಹವನ್ನು ಸಂರಕ್ಷಿಸುವ ಫ್ರೀಜರ್ ಮತ್ತು ಅಂತಿಮ ಕ್ರಿಯೆಗೆ ಬೇಕಾಗುವ ಪರಿಕರಗಳನ್ನು…






