ನಾಪೋಕ್ಲು ಜ.22 NEWS DESK : ಚಿತ್ರಕಲೆ ಸ್ಪರ್ಧೆಯಲ್ಲಿ ಕೊಡಗಿನ ಎ.ಎಂ.ಡಿಯಾ ಪ್ರಥಮ ಸ್ಥಾನ ಪಡೆದಿದ್ದಾಳೆ. ಕರ್ನಾಟಕ ರಾಜ್ಯ ಮಕ್ಕಳ ಕಲ್ಯಾಣ ಸಮಿತಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಪ್ರಯುಕ್ತ ರಾಜ್ಯ ಮಟ್ಟದ ಚಿತ್ರಕಲೆ ಸ್ಪರ್ಧೆಯಲ್ಲಿ ಕೊಡಗಿನ ಜವಾಹರ್ ನವೋದಯ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಎ.ಎಂ.ಡಿಯಾ ಪ್ರಥಮ ಸ್ಥಾನ ಗೆದ್ದುಕೊಂಡಿದ್ದಾಳೆ. ಇವಳು ಬಲ್ಲಮಾವಟಿ ಗ್ರಾಮದ ಅಪ್ಪಚೆಟ್ಟೊಳಂಡ ಮಿಥುನ್ ಮಾಚಯ್ಯ ಮತ್ತು ನೀನಾ ಮಾಚಯ್ಯ ದಂಪತಿಗಳ ಪುತ್ರಿ. ವರದಿ : ದುಗ್ಗಳ ಸದಾನಂದ.
ಲೇಖಕ: admin
ಮಡಿಕೇರಿ ಜ.22 NEWS DESK : ಬೈಲುಕುಪ್ಪೆ ಟಿಬೆಟಿಯನ್ ಶಿಬಿರಕ್ಕೆ ಆಗಮಿಸಿರುವ ಟಿಬೆಟಿಯನ್ 14 ನೇ ಧರ್ಮಗುರು ದಲೈಲಾಮಾ ಅವರನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ತಮ್ಮ ಪತ್ನಿ ದಿವ್ಯಾ ಅವರೊಂದಿಗೆ ಭೇಟಿ ಮಾಡಿ ಆಶೀರ್ವಾದ ಪಡೆದರು. ನಂತರ ವಿಶೇಷವಾದ ಕಾಫಿ ಹಾರವನ್ನು ಹಾಕುವುದರ ಮೂಲಕ ದಲೈಲಾಮಾ ಅವರನ್ನು ಗೌರವಿಸಿದರು.
ಮಡಿಕೇರಿ ಜ.22 NEWS DESK : ದಕ್ಷಿಣ ಕೊಡಗು ವ್ಯಾಪ್ತಿಯಲ್ಲಿ ವನ್ಯಜೀವಿಗಳ ಉಪಟಳ ಮಿತಿ ಮೀರಿದೆ. ಪೊನ್ನಂಪೇಟೆ ಸಮೀಪ ಕೋಣನಕಟ್ಟೆ ಭಾಗದಲ್ಲಿ ಕಾಡಾನೆ ಕಾಣಿಸಿಕೊಂಡಿದ್ದು, ನಸುಕಿನ ವೇಳೆ ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಸ್.ಅರುಣ್ ಮಾಚಯ್ಯ ಅವರ ನಿವಾಸಕ್ಕೆ ಲಗ್ಗೆ ಇಟ್ಟಿದೆ. ಮನೆಯ ಸುತ್ತಲೂ ಓಡಾಡಿರುವ ಕಾಡಾನೆ ಹೂಕುಂಡಗಳನ್ನು ಹಾನಿಗೊಳಿಸಿದೆ. ಕಾಡಾನೆ ಬಂದು ಹೋಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗ್ರಾಮಸ್ಥರು ಕಾಡಾನೆ ಹಾವಳಿ ಕುರಿತು ಆತಂಕ ವ್ಯಕ್ತಪಡಿಸಿದ್ದು, ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಆಲೂರು ಜ.22 NEWS DESK : ಕಾಡಾನೆ ದಾಳಿ ಮಾಡಿದ ಪರಿಣಾಮ ಕೃಷಿಕರೊಬ್ಬರು ಸಾವನ್ನಪ್ಪಿರುವ ಘಟನೆ ಆಲೂರು ತಾಲೂಕಿನ ಕೆಂಚಮ್ಮನ ಹೊಸಕೋಟೆ ಹೋಬಳಿಯ ಅಡಿಬೈಲು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ಗ್ರಾಮದ ರೈತ ಪುಟ್ಟಯ್ಯ(75) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ದಿನಸಿ ಸಾಮಾಗ್ರಿಗಳನ್ನು ಖರೀದಿಸಿ ಮನೆಗೆ ಬರುತ್ತಿದ್ದಾಗ ಕಾಡಾನೆ ಎದುರಾಗಿದೆ. ಗಾಬರಿಗೊಂಡ ಪುಟ್ಟಯ್ಯ ಅವರು ಆನೆಯಿಂದ ತಪ್ಪಿಸಿಕೊಳ್ಳಲು ಕಾಫಿ ತೋಟದೊಳಗೆ ಓಡಿ ಹೋಗಿದ್ದಾರೆ. ಆದರೂ ಬಿಡದ ಆನೆ ದಾಳಿ ಮಾಡಿದ್ದು, ಪುಟ್ಟಯ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುತ್ತಮುತ್ತಲ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ ತಕ್ಷಣ ಕಾಡಾನೆಯನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿದರು.
ಸುಂಟಿಕೊಪ್ಪ ಜ.22 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ದೀಪ ಕಾರ್ಯಕ್ರಮದಡಿಯಲ್ಲಿ ಸುಂಟಿಕೊಪ್ಪ ವಲಯ ವ್ಯಾಪ್ತಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ 43 ಬೆಂಚ್, ಡೆಸ್ಕ್ಗಳನ್ನು ಕೊಡುಗೆಯಾಗಿ ನೀಡಲಾಯಿತು. ಸುಂಟಿಕೊಪ್ಪ ವಲಯದ ಸರಕಾರಿ ಪ್ರೌಢಶಾಲೆ, ಸಂತಮೇರಿ ಆಂಗ್ಲ ಸಮೂಹ ಮಾಧ್ಯಮ ಶಾಲೆ, ಕಾನ್ಬೈಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳಿಗೆ ಜ್ಞಾನ ದೀಪ ಕಾರ್ಯಕ್ರಮದಡಿಯಲ್ಲಿ ಶೇ.80ರ ಸಹಾಯಧನ ಹಾಗೂ ಶೇ.20 ಸಹಾಯಧನವನ್ನು ನಾಕೂರು ಶಿರಂಗಾಲ ಗ್ರಾಮದ ದಾನಿಗಳಾದ ಕಾಫಿಬೆಳೆಗಾರರಾದ ಚೆಪ್ಪುಡಿರ ಅಯ್ಯಣ್ಣ, ಅಯ್ಯಪ್ಪ, ಪ್ರಿನ್ಸ್ ಚಂಗಪ್ಪ, ಪೊನ್ನಣ್ಣ, ಕಾರ್ಯಪ್ಪ ಅವರ ಸಹಕಾರದಿಂದ ಶಾಲಾ ಮಕ್ಕಳಿಗೆ ಬೇಕಾದ ಡೆಸ್ಕ್ ಬೆಂಚ್ಗಳನ್ನು ವಿತರಿಸಿದರು. ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕಿ ಭವ್ಯ ಹಾಗೂ ಸೇವಾ ಪ್ರತಿನಿಧಿ ಯಶೋಧ ಬಸವರಾಜ್ ಇದ್ದರು.
ಸುಂಟಿಕೊಪ್ಪ ಜ.22 NEWS DESK : ಸಂತ ಸೆಬಾಸ್ಟಿನ್ ದೇವಾಲಯದ ವಾರ್ಷಿಕ ಮಹೋತ್ಸವವು ಜ.24 ರಿಂದ 26 ರವರೆಗೆ ನಡೆಯಲಿದೆ ಎಂದು ದೇವಾಲಯದ ಧರ್ಮಗುರುಗಳಾದ ರೆ.ಫಾದರ್ ಸೆಬಾಸ್ಟಿನ್ ಪೂವತ್ತಿಗಲ್ ತಿಳಿಸಿದ್ದಾರೆ. ಸಂತ ಸೆಬಾಸ್ಟಿನ್ ವಾರ್ಷಿಕೋತ್ಸವದ ಅಂಗವಾಗಿ ಜ.23 ರವರೆಗೆ ಸಂಜೆ 5 ಗಂಟೆಗೆ ದಿವ್ಯ ಬಲಿಪೂಜೆ, ನೊವೆನಾ ಪರಮಪ್ರಸಾದದ ಆರಾಧನೆ, ಅಂಬು ಕಾಣಿಕೆ, ಹರಕೆಯ ಮಧ್ಯಸ್ಥಿಕೆ, ಪ್ರಾರ್ಥನೆ ಹಾಗೂ ರೋಗಿಗಳಿಗಾಗಿ ವಿಶೇಷ ಪ್ರಾರ್ಥನೆ ನೆರವೇರಲಿದೆ. ಜ.24 ರಂದು ಸಂಜೆ 4.30 ಗಂಟೆಗೆ ದೇವಾಲಯದ ಧರ್ಮಗುರುಗಳಾದ ರೆ.ಫಾದರ್ ಸೆಬಾಸ್ಟಿನ್ ಪೂವತ್ತಿಗಲ್ ಧ್ವಜಾರೋಹಣ ನೇರವೇರಿಸಲಿದ್ದು, 4.45ಕ್ಕೆ ದಿವ್ಯ ಬಲಿಪೂಜೆ ಹಾಗೂ ಸಂಜೆ 6 ಗಂಟೆಗೆ ಸಮಾಧಿ ಸಂದರ್ಶನ, ಮೃತರಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವುದು. ಜ.25 ರಂದು ಸಂಜೆ 5 ಗಂಟೆಗೆ ಹಬ್ಬದ ಪೂರ್ವಕ ದಿವ್ಯ ಬಲಿಪೂಜೆ, ಪರಮಪ್ರಸಾದದ ಆರಾಧನೆ, ನೊವೇನಾ ಹಾಗೂ 6.15ಕ್ಕೆ ವಾಹನಗಳ ಪೂಜೆಯನ್ನು ಮೈಸೂರು ಕ್ರೈಸ್ಟ್ ಕಾಲೇಜಿನ ಪ್ರಾಂಶುಪಾಲರಾದ ವಂ.ಪಾ.ಜಿಂಟೋ ಇಂಜಿಕಾಲಾಯಿಲ್ ನೇರವೇರಿಸಲಿದ್ದಾರೆ. ಜ.26 ರಂದು ಸಂಜೆ 5 ಗಂಟೆಗೆ ದಿವ್ಯ…
ಸುಂಟಿಕೊಪ್ಪ ಜ.22 NEWS DESK : ಸುಂಟಿಕೊಪ್ಪ ಪೊಲೀಸ್ ಠಾಣೆಯ ನೂತನ ಠಾಣಾಧಿಕಾರಿಯಾಗಿ ಜಗದೀಶ್ ಅಧಿಕಾರ ಸ್ವೀಕರಿಸಿದ್ದಾರೆ. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಂದ್ರಶೇಖರ್ ಅವರು ಮುಂಬಡ್ತಿ ಹೊಂದಿದ ಹಿನ್ನಲೆ ತೆರವಾದ ಸ್ಥಾನಕ್ಕೆ ಜಗದೀಶ್ ನೇಮಕಗೊಂಡಿದ್ದಾರೆ.
ಮಡಿಕೇರಿ ಜ.22 NEWS DESK : ಕೊಡಗು ಜಿಲ್ಲೆಯ ಹಾಡಿ, ಆಶ್ರಮ ಶಾಲೆ, ಅಂಗನವಾಡಿ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಮತ್ತು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಡಾ.ಮಧುಸೂಧನ್ ಅವರ ನಿರ್ದೇಶನದ ಮೇರೆಗೆ ಕೊಡಗು ಜಿಲ್ಲೆಯ ಹಾಡಿ, ಆಶ್ರಮ ಶಾಲೆ, ಅಂಗನವಾಡಿ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿದ ಯುನಿಸೆಫ್ ನ ಮನೋಜ್ ಸೆಬಸ್ಟಿನ್ ಮತ್ತು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ, ಶಿಶು ಮರಣದ ಕಾರಣಗಳು, ಆರೋಗ್ಯ ಸಮಸ್ಯೆಗಳ ಬಗ್ಗೆ ಹಾಗೂ ಸಂವಹನ ಯೋಜನೆಗಾಗಿ ಕಾರ್ಯತಂತ್ರಗಳನ್ನು ರೂಪಿಸಿವ ಕುರಿತು ಸ್ಥಳೀಯ ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತರು ಮತ್ತು ಸಮುದಾಯದೊಂದಿಗೆ ಚರ್ಚಿಸಿದರು. ಈ ಸಂದರ್ಭ ಕ್ಷೇತ್ರ ಆರೋಗ್ಯ ಶಿಕ್ಷಣ ಅಧಿಕಾರಿ ಶಿವಯ್ಯ ಹಾಜರಿದ್ದರು.
ವಿರಾಜಪೇಟೆ ಜ.22 NEWS DESK : ಅಮ್ಮತ್ತಿ ಒಂಟಿಅಂಗಡಿ ಗ್ರಾಮದ ಶ್ರೀ ಕ್ಷೇತ್ರ ಎಡೂರು ನಲ್ಲಿ ಶ್ರೀ ಕಲ್ಲುರ್ಟಿ, ಕೊರಗಜ್ಜ ದೈವದ ವಾರ್ಷಿಕ ನೇಮೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಜ.17 ರಂದು ಗಣಹೋಮ, ಆಶ್ಲೇಷ ಬಲಿ, ನಾಗ ತಂಬಿಲ ಮತ್ತು ಸತ್ಯನಾರಾಯಣ ಪೂಜೆ ನೆರವೇರಿತು. ಸಂಜೆ ದೇವಿಯ ವಿಶೇಷ ಪೂಜೆಗಳು ನಡೆಯಿತು. ಜ.18 ರಂದು ಸಂಜೆ ದೈವಗಳ ಭಂಡಾರ ಇಳಿಸುವ ಮೂಲಕ ಆರಂಭಗೊಂಡ ವಾರ್ಷಿಕ ಪೂಜಾ ಮಹೋತ್ಸವ ಆರಂಭಗೊಂಡಿತು. ಶ್ರೀ ಜೋಡಿ ಕಲ್ಲುರ್ಟಿ, ಶ್ರೀ ಮಂತ್ರದೇವತೆ, ಶ್ರೀ ಮಂತ್ರ ಗುಳಿಗ ದೈವಗಳ ಪ್ರದರ್ಶನ ನಡೆಯಿತು. ಮರುದಿನ ಬೆಳಿಗ್ಗೆ ಶ್ರೀ ಕ್ಷೇತ್ರದಲ್ಲಿ ಶ್ರೀ ಧರ್ಮದೈವ ಅಣ್ಣಪ್ಪ, ಪಂಜೂರ್ಲಿ ದೈವ ಹಾಗೂ ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ ನಡೆಯಿತು. ಎರಡು ದಿನವು ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ಉತ್ಸವ ಸಂದರ್ಭದಲ್ಲಿ ದೇವಾಲಯ ಪ್ರಮುಖರಾದ ಲವನ್ ಪೂಜಾರಿ, ಐತ್ತಪ್ಪ ಪೂಜಾರಿ ಹಾಗೂ ದೇವಾಲಯದ ಆಡಳಿತ ಮಂಡಳಿಯ ಸದಸ್ಯರು, ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ನಗರದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ…
ಮಡಿಕೇರಿ NEWS DESK ಜ.21 : ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸುಪ್ರೀಮ್ ಸೋಲಾರ್ ಸಿಲಿಕಾನ್ ಟ್ರೇಡ್ ಅಂಗಡಿಯಲ್ಲಿ ನಗದು ಕಳ್ಳತನ ಮಾಡಿದ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇದೇ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಚಿಕ್ಕಅಳುವಾರ ಗ್ರಾಮದ ನಿವಾಸಿ ದಯಾನಂದ (27) ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಈತನ ಬಳಿಯಿಂದ ರೂ.2,16,500 ನಗದು ಮತ್ತು ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸ್ ಪ್ರಕಟಣೆ ತಿಳಿಸಿದೆ. ಅಂಗಡಿಯ ಹಿಂಬಾಗದ ರೋಲಿಂಗ್ ಸೆಟ್ರಸ್ ಅನ್ನು ಮುರಿದು ಸಿಸಿ ಕ್ಯಾಮೆರಾಗಳನ್ನು ನಾಶಗೊಳಿಸಿ ಟೇಬಲ್ ಡ್ರಾನಲ್ಲಿ ಇಟ್ಟಿದ್ದ ನಗದು ರೂ.2,16,500 ನಗದು ಕಳವಾಗಿರುವ ಕುರಿತು ಜ.20 ರಂದು ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸೋಮಾವಾರಪೇಟೆ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ, ಪಿಐ ಪ್ರಕಾಶ್.ಬಿ.ಜಿ, ಪಿಎಸ್ಐ ಗೀತಾ, ಕುಶಾಲನಗರ ಪೊಲೀಸ್ ಠಾಣೆ, ಅಪರಾಧ ಪತ್ತೆ ಸಿಬ್ಬಂದಿಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳ ವಿಶೇಷ ತಂಡ ತನಿಖೆ ಕೈಗೊಂಡು ಪ್ರಕರಣ ನಡೆದ 24 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣವನ್ನು ಬೇಧಿಸಿದ…






