ಮಡಿಕೇರಿ ಫೆ.4 NEWS DESK : ಸವಿತಾ ಸಮಾಜದವರು ಸಮಾಜದಲ್ಲಿ ಸಣ್ಣ ಪ್ರಮಾಣದ ಸಂಖ್ಯೆಯಲ್ಲಿದ್ದರೂ ಮುಖ್ಯ ಪಾತ್ರವನ್ನು ವಹಿಸುತ್ತಾರೆ ಎಂದು ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ನಗರಸಭಾ ಸದಸ್ಯ ಬಿ.ವೈ.ರಾಜೇಶ್ ಶ್ಲಾಷಿಸಿದ್ದಾರೆ. ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಸವಿತಾ ಮಹಷಿ೯ ಜಯಂತಿ ಹಿನ್ನಲೆಯಲ್ಲಿ ಮಡಿಕೇರಿ ತಾಲ್ಲೂಕು ಸವಿತಾ ಸಮಾಜದ ವತಿಯಿಂದ ಆಯೋಜಿತ ಕ್ರೀಡಾಕೂಟ ಮತ್ತು ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ರಾಜೇಶ್, ಸವಿತಾ ಸಮಾದವರು ಇತ್ತೀಚಿನ ವಷ೯ಗಳಲ್ಲಿ ಇತರ ಸಮಾಜಗಳಂತೆ ಸಂಘಟಿತರಾಗುವ ಮೂಲಕ ತಮ್ಮ ಸಮಾಜಕ್ಕೆ ಅಗತ್ಯತೆಗಳನ್ನು ಪಡೆಯುವ ನಿಟ್ಟಿನಲ್ಲಿ ಯಶಸ್ವಿಯಾಗುತ್ತಿದ್ದಾರೆ. ಸವಿತಾ ಸಮಾಜದ ಕೆಲವು ಬೇಡಿಕೆಗಳ ಬಗ್ಗೆ ಶಾಸಕರ ಗಮನ ಸೆಳೆದು ಅವುಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಪತ್ರಕತ೯ ಅನಿಲ್ ಹೆಚ್.ಟಿ. ಮಾತನಾಡಿ, ಸವಿತಾ ಮಹಷಿ೯ಗಳೇ ಮೂಲಪುರುಷರಾಗಿರುವ ಈ ಸಮಾಜದವರು ಬಹಳ ಪ್ರಮುಖ್ಯತೆಯನ್ನು ವಹಿಸುತ್ತಾರೆ. ಸವಿತಾ ಸಮಾಜದವರ ಅತ್ಯಗತ್ಯತೆ ಕೋವಿಡ್ ಲಾಕ್ ಡೌನ್ ಸಂದಭ೯ ಜನರಿಗೆ ಮತ್ತಷ್ಟು ಹೆಚ್ಚಾಗಿ ಮನವರಿಕೆಯಾಯಿತು ಎಂದರಲ್ಲದೇ, ಹಿಂದಿನ ಕಾಲದಲ್ಲಿ ದೇವರಿಗೆ…
ಲೇಖಕ: admin
ಮಡಿಕೇರಿ ಫೆ.4 NEWS DESK : ಕೊಡಗು ಜಿಲ್ಲೆಯಾದ್ಯಂತ ಚೆಸ್ಕಾಂನ ವಿದ್ಯುತ್ ವಿತರಣಾ ಮಾರ್ಗಗಳು ಬಹುತೇಕ ತೋಟಗಳು, ಅರಣ್ಯ ಪ್ರದೇಶಗಳ ಮಧ್ಯೆ ಹಾಗೂ ಕಡಿದಾದ ಬೆಟ್ಟಗುಡ್ಡಗಳ ಅಂಚಿನಲ್ಲಿ ಹಾದುಹೋಗುತ್ತಿದ್ದು, ಮಳೆಗಾಲದ ಹಾಗೂ ಪ್ರಕೃತಿ ವಿಕೋಪದಂತಹ ಸಂದರ್ಭಗಳಲ್ಲಿ ಮರದ ಕೊಂಬೆಗಳು ಬೀಳುವಂತದ್ದು, ಕಡಿದಾದ ಗುಡ್ಡಗಳ ಜರಿತದಿಂದ ಕಂಬಗಳು ಬಾಗಿ, ತಂತಿಗಳು ತೀರಾ ಅಪಾಯಮಟ್ಟದಲ್ಲಿ ಜಾರುವಂತಹ ಸನ್ನಿವೇಶಗಳು ಎದುರಾಗಬಹುದು. ಇದರಿಂದಾಗಿ ವಿದ್ಯುತ್ ಅಪಘಾತಗಳಾಗುವ ಸಂಭವವಿರುತ್ತದೆ. ಆದ್ದರಿಂದ, ಅಪಾಯ ಮಟ್ಟದಲ್ಲಿರುವ ವಿದ್ಯುತ್ ತಂತಿಗಳು, ಶಿಥಿಲಗೊಂಡಿರುವ ಕಂಬಗಳು ಕಂಡುಬಂದರೆ ಈ ವ್ಯಾಪ್ತಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅಥವಾ 24*7 ಸಹಾಯವಾಣಿ 1912 ಗೆ ಸಾರ್ವಜನಿಕರು ದೂರು ನೀಡಲು ಕೋರಿದೆ. ಕೊಡಗು ಜಿಲ್ಲೆಯಾದ್ಯಂತ ರೈತರು ತಮ್ಮ ತೋಟಗಳಲ್ಲಿ ಕಾಳುಮೆಣಸು ಕೀಳಲು ಮತ್ತು ಮರದ ಕೊಂಬೆಗಳನ್ನು ಕಡಿಯಲು ಅಲ್ಯೂಮಿನಿಯಂ ಏಣಿಗಳನ್ನು ಮತ್ತು ನೀರು ಹಾಯಿಸಲು ಅಲ್ಯೂಮಿನಿಯಂ ಸ್ಪ್ರಿಂಕ್ಲರ್ ಪೈಪ್ಗಳನ್ನು ಉಪಯೋಗಿಸುತ್ತಿದ್ದು, ಇವುಗಳು ವಿದ್ಯುತ್ ಮಾರ್ಗಕ್ಕೆ ತಾಗಿ ಆಗಿಂದಾಗ್ಗೆ ವಿದ್ಯುತ್ ಅಪಘಾತಗಳು ಸಂಭವಿಸುತ್ತಿದೆ. ಆದ್ದರಿಂದ, ಅಲ್ಯೂಮಿನಿಯಂ/ಕಬ್ಬಿಣದ ಏಣಿ ಬದಲು/ಪೈಬರ್ ಏಣಿಗಳನ್ನೇ ಕಡ್ಡಾಯವಾಗಿ ಉಪಯೋಗಿಸುವುದು.…
ಬೆಂಗಳೂರು ಫೆ.4 NEWS DESK : ಏರೋ ಇಂಡಿಯಾ-2025 ಆರಂಭಕ್ಕೆ ಯಲಹಂಕ ವಾಯುಪಡೆ ನಿಲ್ದಾಣದಲ್ಲಿ ಸಜ್ಜಾಗುತ್ತಿರುವಂತೆಯೇ, ಸಂದರ್ಶಕರು, ಪ್ರದರ್ಶಕರು ಮತ್ತು ಪ್ರತಿನಿಧಿಗಳು ಮರೆಯಲಾಗದ ಅತ್ಯುತ್ತಮ ಅನುಭವವನ್ನು ಎದುರು ನೋಡಬಹುದಾಗಿದೆ. ಪ್ರಮುಖ ಮೂಲಸೌಕರ್ಯ ನವೀಕರಣಗಳು ಮತ್ತು ಸುಧಾರಿತ ಸೌಕರ್ಯಗಳೊಂದಿಗೆ ಈ ಬಾರಿ ಆವೃತ್ತಿಯು ಹಿಂದೆಂದಿಗಿಂತಲೂ ದೊಡ್ಡದಾಗಿರಲಿದೆ, ಸುಗಮವಾಗಿ ಮತ್ತು ಸಂದರ್ಶಕ ಸ್ನೇಹಿಯಾಗಿರಲಿದೆ ಎಂಬ ಭರವಸೆಯನ್ನು ನೀಡುತ್ತದೆ. ಸುಧಾರಿತ ಮೂಲಸೌಕರ್ಯ ಮತ್ತು ಸಂಚಾರ ನಿರ್ವಹಣೆ :: ಹಿಂದಿನ ಸವಾಲುಗಳನ್ನು ಗುರುತಿಸಿ, ಸರಾಗ ಪ್ರವೇಶ, ಸಂಚಾರ ಮತ್ತು ಸಂಪರ್ಕವನ್ನು ಸುಗಮಗೊಳಿಸಲು ವ್ಯಾಪಕ ಸುಧಾರಣೆಗಳನ್ನು ಮಾಡಲಾಗಿದೆ ಮತ್ತು ರಕ್ಷಣಾ ಸಚಿವಾಲಯ, ಭಾರತೀಯ ವಾಯುಪಡೆ (ಐಎಎಫ್), ಬೆಂಗಳೂರು ಸಂಚಾರ ಪೊಲೀಸ್, ಬಿಬಿಎಂಪಿ, ಎನ್ ಎಚ್ ಎಐ ಮತ್ತು ನಮ್ಮ ಮೆಟ್ರೋದಂತಹ ಕರ್ನಾಟಕ ರಾಜ್ಯ ಸರ್ಕಾರದ ವಿವಿಧ ಅಂಗ ಸಂಸ್ಥೆಗಳ ನಡುವೆ ನಿಕಟ ಸಮನ್ವಯವಿದೆ. ವಾಹನ ದಟ್ಟಣೆಯನ್ನು ತಗ್ಗಿಸಲು ಮತ್ತು ಸ್ಥಳದ ಸುತ್ತಲಿನ ಸಂಚಾರವನ್ನು ಸುಧಾರಿಸಲು ವಾಯುಪಡೆ ನಿಲ್ದಾಣದ ಸುತ್ತಲೂ ಸಂಚಾರ ಹರಿವನ್ನು ಉತ್ತಮಗೊಳಿಸಲು ಸಂಪರ್ಕ ರಸ್ತೆಗಳನ್ನು ಅಗಲೀಕರಣಗೊಳಿಸಲಾಗಿದೆ. ಸಂಚಾರ…
ವಿರಾಜಪೇಟೆ ಫೆ.4 NEWS DESK : ಕ್ರೀಡಾ ಜಿಲ್ಲೆಯಾದ ಕೊಡಗಿನಲ್ಲಿ ಎಲ್ಲಾ ಕ್ರೀಡೆಗಳಿಗೆ ಸಹಕಾರ ನೀಡುವಂತೆ ಬ್ಯಾಡ್ಮಿಂಟನ್ ಕ್ರೀಡೆಗೂ ಹೆಚ್ಚಿನ ಅವಕಾಶ ಕಲ್ಪಿಸಬೇಕು ಎಂದು ಉದ್ಯಮಿ ಮತ್ತು ಕಾಂಗ್ರೆಸ್ ಪಕ್ಷದ ಪ್ರಮುಖ ಸಿ.ಎ. ನಾಸಿರ್ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಫ್ರೆಂಡ್ಸ್ ಯುವಕ ಸಂಘದ ವತಿಯಿಂದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಚಿಕ್ಕಪೇಟೆಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕೊಡಗು ಬ್ಯಾಡ್ಮಿಂಟನ್ ಲೀಗ್ 2ನೇ ಅವೃತ್ತಿಯ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಭಾರತ ದೇಶವು ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ತನ್ನದೇಯಾದ ಕೊಡುಗೆಗಳನ್ನು ನೀಡಿದೆ. ಅದರಂತೆ ಕೊಡಗಿನ ಬ್ಯಾಡ್ಮಿಂಟನ್ ಕಲಿಗಳು ರಾಜ್ಯ, ದೇಶವನ್ನು ಪ್ರತಿನಿಧಿಸಿ ಕ್ರೀಡಾ ಸಾಧನೆಯನ್ನು ತೋರಿದ್ದು, ಮುಂದಿನ ದಿನಗಳಲ್ಲಿ ಕೊಡಗಿನಿಂದ ಹೆಚ್ಚಿನ ಕ್ರೀಡಾಪಟುಗಳು ಪಾಲ್ಗೊಳ್ಳುವಂತಾಗಬೇಕು ಎಂದು ಕರೆ ನೀಡಿದರು. ಜೆ.ಡಿ.ಎಸ್ ಜಿಲ್ಲಾ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಜಾಸಿರ್ ಮಾತನಾಡಿದರು. ಮುಂಜಾನೆ ನಡೆದ ಲೀಗ್ ಪಂದ್ಯಾವಳಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ…
ವಿರಾಜಪೇಟೆ ಫೆ.4 NEWS DESK : ವಿರಾಜಪೇಟೆ ಪುರಸಭೆಯ ನೂತನ ಮುಖ್ಯ ಅಧಿಕಾರಿಯಾಗಿ ಪಿ.ಕೆ.ನಾಚಪ್ಪ ನೇಮಕಗೊಂಡಿದ್ದಾರೆ. ಈ ಹಿಂದೆ ವಿರಾಜಪೇಟೆ ಪುರಸಭೆಯ ಮುಖ್ಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಚಂದ್ರ ಕುಮಾರ್ ಅವರನ್ನು ತಕ್ಷಣದಿಂದಲೇ ವರ್ಗಾವಣೆಗೊಳಿಸಿ ಈ ಸ್ಥಾನಕ್ಕೆ ಪಿ.ಕೆ.ನಾಚಪ್ಪ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಮಡಿಕೇರಿ ಫೆ.4 NEWS DESK : ರಾಜ್ಯದ ಮುಖ್ಯಮಂತ್ರಿಗಳು ಕೇಂದ್ರ ಸರಕಾರದ ಬಜೆಟ್ ನ್ನು ಟೀಕಿಸುತ್ತಾ ರಾಜಕೀಯ ಭಾಷಣ ಮಾಡುವುದನ್ನು ಬಿಟ್ಟು ಅಭಿವೃದ್ಧಿ ಕಾರ್ಯಗಳ ಕಡೆ ಮನ ನೀಡಲಿ ಎಂದು ವಿರಾಜಪೇಟೆ ಕ್ಷೇತ್ರದ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರ ಸರಕಾರ ಮಂಡಿಸಿದ 50.65 ಲಕ್ಷ ಕೋಟಿ ಮೊತ್ತದ ಬಜೆಟ್ ನ್ನು ಇಡೀ ದೇಶವೇ ಒಪ್ಪಿಕೊಂಡಿದೆ. ವಿದೇಶಿಗರು ಕೂಡ ಬಜೆಟ್ ಕುರಿತು ಉತ್ತಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಆದರೆ ಕಾಂಗ್ರೆಸ್ ಮಾತ್ರ ರಾಜಕೀಯ ಕಾರಣಕ್ಕಾಗಿ ಟೀಕಿಸುತ್ತಿದೆ. ರಾಜ್ಯದ ಮುಖ್ಯಮಂತ್ರಿಗಳು ಕೇಂದ್ರದ ಬಜೆಟ್ ಮಂಡನೆಯಾಗುವ ಮೊದಲೇ ಬಜೆಟ್ ನಿಂದ ಏನನ್ನೂ ನಿರೀಕ್ಷೆ ಮಾಡಲ್ಲ ಎಂದು ಟೀಕಿಸಲು ಆರಂಭಿಸಿದ್ದರು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೇಂದ್ರ ಸರಕಾರ ತನ್ನ ಘೋಷಣೆಯಂತೆ “ಜನಪ್ರಿಯವಲ್ಲ, ಜನಪರ ಬಜೆಟ್” ನ್ನು ನೀಡಿದೆ. ‘ಸಬ್ ಕಾ ಸಾತ್, ಸಬ್ ಕಾ ವಿಕಾಸ್’ ಎಂಬಂತೆ ದೇಶದ ಎಲ್ಲಾ ವರ್ಗದ ಜನರಿಗೂ ಸಹಕಾರಿಯಾಗಬಲ್ಲ ಬಜೆಟ್ ಇದಾಗಿದೆ. ತೆರಿಗೆ ವಿನಾಯಿತಿ ಮೊತ್ತವನ್ನು…
ನಾಪೋಕ್ಲು ಫೆ.4 NEWS DESK : ಜಿಲ್ಲೆಯಲ್ಲಿ ಎರಡು ಪ್ರಬಲ ಜನಾಂಗಗಳ ನಡುವೆ ಶಕ್ತಿ ಪ್ರದರ್ಶನ ಹಾಗೂ ಬಲಾಬಲ ಕಾರ್ಯ ನಡೆಲಿದ್ದು, ಇದನ್ನು ತಡೆಗಟ್ಟುವ ಹಾಗೂ ಶಾಂತಿಯನ್ನು ಕಾಪಾಡುವ ನಿಟ್ಟಿನಲ್ಲಿ ನಾಪೋಕ್ಲುವಿನಲ್ಲಿ ಪಥ ಸಂಚಲನದ ಮೂಲಕ ಜಾಗೃತಿ ಮೂಡಿಸಲಾಯಿತು. ನಾಪೋಕ್ಲು ಪೊಲೀಸ್ ಮೈದಾನದಿಂದ ಪಟ್ಟಣದ ಮುಖ್ಯ ಬೀದಿಯ ಮೂಲಕ ಹಳೆತಾಲೂಕು ವರೆಗೆ ಸಿಆರ್ಪಿಎಫ್ ಕ್ಷಿಪ್ರ ಕಾರ್ಯಾಚರಣೆ ಪಡೆಯ ಕಮಾಂಡೊ ಯೋಧರು ಪಥ ಸಂಚಲನ ನಡೆಸಿ ಸಾರ್ವಜನಿಕರಲ್ಲಿ ಆತ್ಮಸ್ಥೈರ್ಯ ತುಂಬಿದರು. ಈ ಸಂದರ್ಭ ಪೊಲೀಸ್ ಠಾಣೆಯ ಠಾಣಾಧಿಕಾರಿ ಮಂಜುನಾಥ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ.
ಕುಶಾಲನಗರ ಫೆ.4 NEWS DESK : ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಕುಶಾಲನಗರ ಗ್ರಾ.ಪಂ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಕೂಡುಮಂಗಳೂರು ಗ್ರಾ.ಪಂ ವ್ಯಾಪ್ತಿಯ ದೊಡ್ಡತ್ತೂರು, ಚಿಕ್ಕತ್ತೂರು, ಸುಂದರನಗರ, ವಿನಾಯಕ ಬಡಾವಣೆ, ಬಸವೇಶ್ವರ ಬಡಾವಣೆ, ವಿಜಯನಗರ ಗ್ರಾಮದಲ್ಲಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ‘ಕೂಡಿಗೆ ಗ್ರಾ.ಪಂ, ಹೆಬ್ಬಾಲೆ, ತೊರೆನೂರು, ಶಿರಂಗಾಲ ಗ್ರಾ.ಪಂ ನ ಹಲವು ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡರವರು ಆಯಾ ವ್ಯಾಪ್ತಿಯ ಗ್ರಾ.ಪಂ ಸದಸ್ಯರು, ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಶಾಸಕರು, ಆಯ್ಕೆಯಾದ ದಿನದಿಂದ ಈವರೆಗೆ ಕ್ಷೇತ್ರಕ್ಕೆ ಸಾವಿರಾರು ಕೋಟಿ ಅನುದಾನಗಳನ್ನು ತರಲಾಗಿದೆ. ಕ್ಷೇತ್ರದ ಅಭಿವೃದ್ಧಿಯ ಧ್ಯೇಯದೊಂದಿಗೆ ಇನ್ನಷ್ಟು ಉತ್ಸಾಹ ಹಾಗೂ ಹುಮ್ಮಸ್ಸಿನಿಂದ ಕಾರ್ಯನಿರ್ವಹಿಸಲಾಗುವುದು ಎಂದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ವಿ.ಪಿ.ಶಶಿಧರ್, ಕೂಡುಮಂಗಳೂರು ಗ್ರಾ.ಪಂ ಅಧ್ಯಕ್ಷ ಬಾಸ್ಕರ ನಾಯಕ್, ಕೂಡುಮಂಗಳೂರು ಗ್ರಾ.ಪಂ ಸದಸ್ಯರಾದ ಫಿಲೋಮಿನಾ, ಕೆ.ಬಿ.ಶಂಶುದ್ಧೀನ್, ಕಾಂಗ್ರೆಸ್…
ಮಡಿಕೇರಿ ಫೆ.4 NEWS DESK : ಇಂಡಿಯಾ ಟುಡೇ ಪತ್ರಿಕೆ ಆಯೋಜಿಸಿದ ಪರಿಸರ ಸಮಾವೇಶ -2025ದಲ್ಲಿ ಕೊಡಗಿನ ಪೊನ್ನಂಪೇಟೆಯ ಹಾಡಿ ನಿವಾಸಿಗಳು ಪರಿಸರ ಸಂರಕ್ಷಣೆ ಕುರಿತು ನೃತ್ಯದ ಮೂಲಕ ಗಮನ ಸೆಳೆದರು. ಪರಿಸರ ಸಂರಕ್ಷಣೆ ಹಾಗೂ ಹವಮಾನ ಬದಲಾವಣೆ ಕುರಿತು ಸಂವಾದ ಮತ್ತು ಮಾಹಿತಿ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಅರಣ್ಯ ಸಚಿವ ಈಶ್ವರ ಕಂಡ್ರೆ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಮೆಹರೋಜ್ ಖಾನ್ ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು. ಹಾಡಿ ನಿವಾಸಿಗಳ ತಂಡವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಪೊನ್ನಣ್ಣ ಅವರ ವಿಶೇಷ ಕಾಳಜಿಯಿಂದ ಕರೆಸಿಕೊಂಡಿದ್ದರು.
ಕುಶಾಲನಗರ ಫೆ.4 NEWS DESK : ಹನ್ನೆರಡನೇ ಶತಮಾನದಲ್ಲಿ ಅಂದು ಸಮಾಜದಲ್ಲಿ ತಾಂಡವಿಸಿದ್ದ ಮೂಢನಂಬಿಕೆ, ಮೇಲು ಕೀಳು ಹಾಗೂ ವರ್ಣ ವ್ಯವಸ್ಥೆಯ ವಿರುದ್ಧ ವಚನಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದ ದಿಟ್ಟ ಹೋರಾಟಗಾರ ಮಡಿವಾಳ ಮಾಚಿದೇವರು ಎಂದು ಕೊಡಗು ಜಿಲ್ಲಾ ದಲಿತ ಸಂಘರ್ಷ ಸಮಿತಿಯ ಭೀಮವಾದದ ಅಧ್ಯಕ್ಷ ಕೆ.ಬಿ.ರಾಜು ಹೇಳಿದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಗುಂಡೂರಾವ್ ಬಡಾವಣೆಯಲ್ಲಿನ ದೇವರಾಜ ಅರಸು ಹಿಂದುಳಿದ ವರ್ಗಗಳ ಇಲಾಖೆಯ ವಿದ್ಯಾರ್ಥಿಗಳ ವಸತಿ ನಿಲಯದಲ್ಲಿ ಹಮ್ಮಿಕೊಂಡಿದ್ದ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾಲ್ಕು ಗೋಡೆಗಳ ನಡುವೆ ಬಂಧಿಯಾಗಿದ್ದ ಮಹಿಳೆಯರ ಸ್ವಾತಂತ್ರ್ಯಕ್ಕಾಗಿ 12ನೇ ಶತಮಾನದಲ್ಲಿ ಶರಣರು ಹೋರಾಟ ನಡೆಸಿದ್ದರು. ತರುವಾಯ 21 ನೇ ಶತಮಾನದಲ್ಲಿ ಶೋಷಿತರ, ದೀನ ದಲಿತರ ಆಶಾಕಿರಣವಾಗಿ ಉದ್ಭವಿಸಿದ ಡಾ.ಅಂಬೇಡ್ಕರ್ ಸಂವಿಧಾನ ಬಸವಾದಿ ಶರಣರ ಬರೆಯಲು ವಚನಗಳೂ ಕೂಡ ಪ್ರೇರಕವಾದವು ಎಂದು ಅವರು ಹೇಳಿದರು. ಮಡಿವಾಳ ಮಾಚಿದೇವರ ಕುರಿತು ಉಪನ್ಯಾಸ ನೀಡಿದ ಕುಶಾಲನಗರ ತಾಲ್ಲೂಕು ಕದಳಿ ವೇದಿಕೆ…






