ಮಡಿಕೇರಿ NEWS DESK ಜು.21 : ಸಂಪೂರ್ಣ ಹದಗೆಟ್ಟಿರುವ ಭಾಗಮಂಡಲ- ನಾಪೋಕ್ಲು ಮತ್ತು ಭಾಗಮಂಡಲ ಕರಿಕೆ ರಸ್ತೆಯ ಅವ್ಯವಸ್ಥೆಯನ್ನು ಖಂಡಿಸಿ ಬಿಜೆಪಿ ಶಕ್ತಿ ಕೇಂದ್ರ ಪ್ರತಿಭಟನೆ ನಡೆಸಿತು. ರಸ್ತೆಯಲ್ಲಿನ ಹೊಂಡ ಗುಂಡಿಗಳಲ್ಲಿ ಬಾಳೆಗಿಡ ನೆಡುವ ಮೂಲಕ ಪ್ರತಿಭಟನಾಕಾರರು ರಾಜ್ಯ ಸರಕಾರ ಹಾಗೂ ಶಾಸಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ರಸ್ತೆಯುದ್ದಕ್ಕೂ ಹೊಂಡ ಗುಂಡಿಗಳು ನಿರ್ಮಾಣವಾಗಿದ್ದು, ವಾಹನಗಳ ಸಂಚಾರ ದುಸ್ತರವಾಗಿದೆ. ಕೆಸರು ನೀರು ತುಂಬಿಕೊ0ಡು ವಾಹನಗಳ ಸಂಚಾರದೊ0ದಿಗೆ ಜನ ಸಂಚಾರಕ್ಕೂ ತೊಡಕುಂಟಾಗುತ್ತಿದೆ. ಹೀಗಿದ್ದೂ ಸಂಬ0ಧಪಟ್ಟವರು ರಸ್ತೆ ದುರಸ್ತಿಯತ್ತ ಗಮನ ಹರಿಸಿಲ್ಲವೆಂದು ಬಿಜೆಪಿ ಪ್ರಮುಖರು ಆರೋಪಿಸಿದರು.
ಲೇಖಕ: admin
ಮಡಿಕೇರಿ NEWS DESK ಜು.20 : ಕೊಡಗು ಕಲಾವಿದರ ಸಂಘದ ಸಾಮಾನ್ಯ ಸಭೆ ಮತ್ತು 2026-30ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ವಿರಾಜಪೇಟೆಯಲ್ಲಿ ನಡೆಯಿತು. ಅಧ್ಯಕ್ಷರಾಗಿ ಕಲಾವಿದ ವಾಂಚಿರ ವಿಠಲ್ ನಾಣಯ್ಯ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಈರಮಂಡ ಹರಿಣಿ ವಿಜಯ್, ಕಾರ್ಯದರ್ಶಿಯಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಖಜಾಂಚಿಯಾಗಿ ಕಾಡ್ಯಮಡ ಸುಮನ್, ಸಹ ಕಾರ್ಯದರ್ಶಿಯಾಗಿ ಮಲ್ಲಮಾಡ ಶ್ಯಾಮಲ ಸುನಿಲ್, ನಿರ್ದೇಶಕರುಗಳಾಗಿ ಸೋಮೆಯಂಡ ಎಸ್.ಬೆಳ್ಯಪ್ಪ, ಬಿದ್ದಂಡ ಉತ್ತಮ್ ಪೊನ್ನಪ್ಪ, ಕಾಳಮಂಡ ಜಗತ್, ಟಿ.ಡಿ.ಮೋಹನ್, ಚೇನಂಡ ಗಿರೀಶ್ ಪೂಣಚ್ಚ, ಪಟ್ಟಡ ಸಿ.ಧನು ರಂಜನ್ ಹಾಗೂ ಜಾದುಗಾರ್ ವಿಕ್ರಂ ಶೆಟ್ಟಿ ಆಯ್ಕೆಯಾದರು. ಸಂಚಾಲಕರಾಗಿ ನೆರವಂಡ ಉಮೇಶ್, ಸಲಹಾ ಸಮಿತಿಯ ನಿರ್ದೇಶಕರುಗಳಾಗಿ ಅನಂತಶಯನ ಬಿ.ಜಿ. ಹಾಗೂ ಅವರೆಮಾಡಂಡ ಶರಣ್ ನೇಮಕಗೊಂಡರು. ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಮಾತನಾಡಿದ ವಾಂಚಿರ ವಿಠ್ಠಲ್ ನಾಣಯ್ಯ ಅವರು, ಸರ್ವ ಸದಸ್ಯರು ಹಾಗೂ ಕಲಾವಿದರ ಸಹಕಾರದೊಂದಿಗೆ ಸಂಘವನ್ನು ಮತ್ತಷ್ಟು ಬಲಿಷ್ಠಗೊಳಿಸಿ, ಕಲಾವಿದರ ಹಿತಾಸಕ್ತಿಗೆ ಪೂರಕವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಂಕಲ್ಪ ವ್ಯಕ್ತಪಡಿಸಿದರು. ಉಪಾಧ್ಯಕ್ಷೆ ಹರಿಣಿ ವಿಜಯ್, ಕಾರ್ಯದರ್ಶಿ ರಶ್ಮಿ ಕಾರ್ಯಪ್ಪ, ನಿರ್ದೇಶಕರಾದ…
ಮಡಿಕೇರಿ NEWS DESK ಜು.20 : ಅನುದಾನದ ಕೊರತೆಯಿಂದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ನಿಭಾಯಿಸಲು ಸಾಧ್ಯವಾಗದ ಸರಕಾರ ಇದೀಗ ಪಡಿತರ ಚೀಟಿಗೂ ಜಾತಿ ಪ್ರಮಾಣ ಪತ್ರ ಕೇಳುವ ಮೂಲಕ ರಾಜ್ಯದ ಜನತೆಗೆ ವಿನಾಕಾರಣ ಕಿರುಕುಳ ನೀಡುತ್ತಿದೆ ಎಂದು ಸೋಮವಾರಪೇಟೆ ಬಿಜೆಪಿ ಮಂಡಲದ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಧಿಕಾರಕ್ಕೆ ಬರಬೇಕೆನ್ನುವ ಏಕೈಕ ಉದ್ದೇಶದಿಂದ ಆರ್ಥಿಕ ಹೊರೆಯ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದ ಕಾಂಗ್ರೆಸ್ ಇದೀಗ ಹಣ ಕ್ರೋಢೀಕರಣಕ್ಕಾಗಿ ಜನರಿಗೆ ತೊಂದರೆ ನೀಡುತ್ತಿದೆ. ಗ್ಯಾರಂಟಿ ಯೋಜನೆಯ ಸೌಲಭ್ಯಗಳನ್ನು ನೀಡಲಾಗದೆ ಪರದಾಡುತ್ತಿರುವ ರಾಜ್ಯ ಸರಕಾರ ಜನರನ್ನು ಇಕ್ಕಟ್ಟಿನಲ್ಲಿ ಸಿಲುಕಿಸಿ ಕಾಲಹರಣ ಮಾಡುತ್ತಿದೆ. ಪಡಿತರ ಚೀಟಿಗೂ ಜಾತಿ ಪ್ರಮಾಣ ಪತ್ರ ಕೇಳುತ್ತಿರುವುದು ಖಂಡನೀಯವೆoದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಡಿತರ ಚೀಟಿಗೆ ಜಾತಿ ಪ್ರಮಾಣ ಪತ್ರ ಒದಗಿಸಲು ಬಡವರು ಹಾಗೂ ಕಾರ್ಮಿಕರು ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ಅರ್ಜಿ ಹಿಡಿದು ಕಚೇರಿಯಿಂದ ಕಚೇರಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಾತ್ಯಾತೀತ ಸಿದ್ಧಾಂತದ ಆದರ್ಶಗಳ ಮುಖವಾಡ…
ಮಡಿಕೇರಿ NEWS DESK ಜು.20 : ದೇವಟ್ ಪರಂಬ್ ದುರಂತ ನರಮೇಧವನ್ನು ವಿಶ್ವಸಂಸ್ಥೆಯ ಹೊಲೊಕಾಸ್ಟ್ (ನರಮೇಧ) ಸ್ಮರಣಾರ್ಥ ಪಟ್ಟಿಗೆ ಸೇರಿಸಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಒತ್ತಾಯಿಸಿದ್ದಾರೆ. ದೇವಟ್ ಪರಂಬ್ ನಲ್ಲಿ ಸಿಎನ್ಸಿ ವತಿಯಿಂದ ಮಾಸಿಕ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಿದ ಅವರು ಪುಷ್ಪ ನಮನದ ಮೂಲಕ ಹಿರಿಯರಿಗೆ ಪ್ರಾರ್ಥನೆ ಸಲ್ಲಿಸಿದರು. ಕೊಡವಲ್ಯಾಂಡ್ ಮತ್ತು ಆದಿಮಸಂಜಾತ ಕೊಡವ ಬುಡಕಟ್ಟು ಸಮುದಾಯಕ್ಕಾಗಿ ತಮ್ಮ ಅಮೂಲ್ಯ ಪ್ರಾಣವನ್ನು ತ್ಯಾಗ ಮಾಡಿದ ನಮ್ಮ ಪೂರ್ವಜರು ಹಾಗೂ ಹಿರಿಯರಿಂದ ನಾವು ಆಶೀರ್ವಾದವನ್ನು ಬೇಡಿದೆವು. ಸಿಎನ್ಸಿ ತನ್ನ ಆಕಾಂಕ್ಷೆಗಳು ಮತ್ತು ಬೇಡಿಕೆಗಳನ್ನು ಪುನರುಚ್ಚರಿಸುತ್ತಿದ್ದು, ನಾಲ್ನಾಡ್ ಅರಮನೆ ಮತ್ತು ಮಡಿಕೇರಿ ಕೋಟೆಯಲ್ಲಿ ಅರಮನೆ ಪಿತೂರಿಯಿಂದ ನಡೆದ ಕೊಡವರ ರಾಜಕೀಯ ಹತ್ಯೆಗಳನ್ನು ಗುರುತಿಸಬೇಕು ಎಂದರು. ಭಾರತೀಯ ಸಂವಿಧಾನದ 49 ನೇ ವಿಧಿ ಮತ್ತು ಯುನೆಸ್ಕೋದ 1964 ರ ವೆನಿಸ್ ಚಾರ್ಟರ್ ಅಡಿಯಲ್ಲಿ ಈ ದುರಂತಗಳನ್ನು ಅಂತರರಾಷ್ಟ್ರೀಯ ಹೊಲೊಕಾಸ್ಟ್ ಸ್ಮಾರಕ, ವಿಶ್ವಸಂಸ್ಥೆಯ ಅಂತರಾಷ್ಟ್ರೀಯ ಹೊಲೊಕಾಸ್ಟ್ ಸ್ಮರಣಾರ್ಥ ಪಟ್ಟಿ ಮತ್ತು ಉಲುಗುಲಿ, ಮುಳ್ಳುಸೋಗೆ ಹಾಗೂ…
ಬೆಂಗಳೂರು NEWS DESK ಜು.20 : ರಾಜ್ಯದಲ್ಲಿ ಮನೆ ಮನೆಗೆ ತೆರಳಿ ಜಾತಿ ಪ್ರಮಾಣ ಪತ್ರಗಳನ್ನು ಉಚಿತವಾಗಿ ವಿತರಿಸುವ ಕಂದಾಯ ಇಲಾಖೆಯ ವಿಶೇಷ ಅಭಿಯಾನ ಹಾಗೂ ಶಾಶ್ವತ ನಿವಾಸ ಪ್ರಮಾಣಪತ್ರ ಸೇವೆಗೆ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು, ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ ಅವರ ಉಪಸ್ಥಿತಿಯಲ್ಲಿ ಚಾಲನೆ ನೀಡಿದರು. ರಾಜ್ಯಾದ್ಯಂತ ಒಟ್ಟು 4.85 ಕೋಟಿ ಡಿಜಿಟಲ್ ಜಾತಿ ಪ್ರಮಾಣ ಪತ್ರಗಳನ್ನು ಗ್ರಾಮವಾರು ವಿಂಗಡಿಸಿ ಪಿಡಿಎಫ್ ರೂಪದಲ್ಲಿ ಜಿಲ್ಲಾಧಿಕಾರಿಗಳಿಗೆ ಒದಗಿಸಲಾಗಿದ್ದು, ಇವುಗಳನ್ನು ಮುದ್ರಿಸಿ ಸಾರ್ವಜನಿಕರ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ. ಮನೆ ಮನೆಗೆ ತೆರಳಿ ಉಚಿತವಾಗಿ ನೀಡುವ ಈ ವಿಶೇಷ ಅಭಿಯಾನದ ಜೊತೆಗೆ, ಸಾರ್ವಜನಿಕರು ಉಚಿತವಾಗಿ ಡೌನ್ಲೋಡ್ ಮಾಡಿಕೊಳ್ಳಲು ವಿಶೇಷ ವೆಬ್ಸೈಟ್ (https://nadakacheri.karnataka.gov.in/AJSKCertificates) ಹಾಗೂ ಪ್ರತಿ ಹೋಬಳಿ ಮಟ್ಟದಲ್ಲಿ ಉಚಿತ ಮುದ್ರಣದ ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈಗಾಗಲೇ ಸುಮಾರು 85 ಲಕ್ಷ ಜಾತಿ ಪ್ರಮಾಣ ಪತ್ರಗಳನ್ನು ಮೊಬೈಲ್ ಸಂಖ್ಯೆಗಳೊಂದಿಗೆ ಲಿಂಕ್ ಮಾಡಲಾಗಿದ್ದು, ವಾಟ್ಸ್ಆಪ್ ಅಥವಾ ಎಸ್ಎಂಎಸ್ ಮೂಲಕ ನೇರ ಲಿಂಕ್…
ಸುಂಟಿಕೊಪ್ಪ NEWS DESK ಜು.20 : ಸುಂಟಿಕೊಪ್ಪದ ಜನತಾ ಕಾಲೋನಿಯಲ್ಲಿ ಗಾಳಿ ಮಳೆಯಿಂದ ಮನೆಗೆ ಹಾನಿ ಉಂಟಾಗಿ ನಷ್ಟ ಅನುಭವಿಸಿದ್ದ, ಸ್ಥಳೀಯ ನಿವಾಸಿ ಎಲಿಜಬೆತ್ (ಎಲ್ಸಿ) ಅವರಿಗೆ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ನೆರವಿನ ಹಸ್ತ ಚಾಚಿತು.ಅಸೋಸಿಯೇಷನ್ ಅಧ್ಯಕ್ಷ ಜಾನ್ಸನ್ ಪಿಂಟೋ ಅವರ ನೇತೃತ್ವದಲ್ಲಿ ಸಂತ್ರಸ್ತೆಯ ಮನೆಗೆ ಭೇಟಿ ನೀಡಿದ ಪದಾಧಿಕಾರಿಗಳು ಸಾಂತ್ವನ ಹೇಳಿ ರೂ.30 ಸಾವಿರ ಧನ ಸಹಾಯ ನೀಡಿದರು. ಮನೆಯ ಮೇಲ್ಚಾವಣಿ ಮತ್ತು ಗೋಡೆ ಕುಸಿದು ನಷ್ಟ ಉಂಟಾಗಿರುವ ಬಗ್ಗೆ ಎಲಿಜಬೆತ್ (ಎಲ್ಸಿ) ಅಸಹಾಯಕತೆ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಜಾನ್ಸನ್ ಪಿಂಟೋ ಮುಂದಿನ ದಿನಗಳಲ್ಲಿ ಮತ್ತಷ್ಟು ಸಹಾಯ ಮಾಡುವುದಾಗಿ ಭರವಸೆ ನೀಡಿದರು. ಅಸೋಸಿಯೇಷನ್ ನ ಗೌರವಾಧ್ಯಕ್ಷ ಜೋಕಿಂವಾಸ್, ಸ್ಥಾಪಕ ಅಧ್ಯಕ್ಷ ವಿ.ಎ.ಲಾರೆನ್ಸ್, ಜಿಲ್ಲಾ ಉಪಾಧ್ಯಕ್ಷ ಮೈಕಲ್, ಜಿಲ್ಲಾ ಖಜಾಂಚಿ ಜೇಮ್ಸ್ ಡಿಸೋಜ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಸಾಲಂ, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಡೆನ್ಜಿಲ್ ವರ್ಗೀಸ್ , ಸದಸ್ಯರುಗಳಾದ ಪಿ.ಎಫ್.ಸಬಾಸ್ಟೀನ್, ಪಿ.ಎಂ.ಬಿಜು, ಮಹಿಳಾ ವಿಭಾಗದ ಉಪಾಧ್ಯಕ್ಷೆ ರೋಸ್ ಮೇರಿ…
ಮೈಸೂರು NEWS DESK ಜು.20 : ಸಾಹಿತಿ ಹಾಗೂ ಹಿರಿಯ ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರಿಗೆ “ಯೋಗ ಕೌಸ್ತುಭ” ಪ್ರಶಸ್ತಿ ಲಭ್ಯವಾಗಿದೆ. ಸುಮಾರು 41 ಅಧ್ಯಯನ ಕೃತಿಗಳ ರಚಿಸಿರುವ ರಮೇಶ್ ಉತ್ತಪ್ಪ ಅವರು ಮೈಸೂರು ಯೋಗದ ಕುರಿತು “ಯೋಗ ಸಂಗೀತ-ಮೈಸೂರು ಪರಂಪರೆ” ಎಂಬ ಕೃತಿ ಬರೆದಿದ್ದಾರೆ. ಇದರಲ್ಲಿ ಯೋಗಕ್ಕೆ ಮೈಸೂರಿನ ಕೊಡುಗೆ, ಹಿನ್ನೆಲೆ, ಯೋಗಾಚಾರ್ಯರು, ಮೈಸೂರು ಸಂಗೀತ ಪರಂಪರೆಯ ಸಂಶೋಧನಾತ್ಮಕ ವಿವರಗಳಿವೆ. ಮೈಸೂರು ಯೋಗ ಸ್ಫೋರ್ಟ್ಸ್ ಫೌಂಡೇಶನ್ ಹಾಗೂ ಮೈಸೂರು ವಿವೇಕಾನಂದ ಯೋಗ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ಘಟಿಕೋತ್ಸವದಲ್ಲಿ ಶನಿವಾರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭ ಮಾತನಾಡಿದ ಶಾಸಕ ಶ್ರೀವತ್ಸ, “ರಮೇಶ್ ಉತ್ತಪ್ಪ ಅವರು ಮೈಸೂರಿನ ಗಲ್ಲಿ ಹಾಗೂ ವೃತ್ತಗಳ ಕುರಿತು ಬರೆದ ಅಧ್ಯಯನ ಕೃತಿ ಅತ್ಯಂತ ಮಹತ್ವದ್ದು. ಅದೇ ರೀತಿ ಯೋಗ ಪರಂಪರೆ ಹಾಗೂ ದಸರಾ ಆನೆಗಳ ಕೃತಿ ಕೂಡ ಜನರ ಮೆಚ್ಚುಗೆ ಪಾತ್ರವಾಗಿವೆ. ಈ ಕೃತಿಗಳನ್ನು ದಸರಾ ಉನ್ನತ ಸಮಿತಿ ಸಭೆಯಲ್ಲಿ ತಾವು ಮುಖ್ಯಮಂತ್ರಿಗಳಿಗೆ…
ಮೈಸೂರು NEWS DESK ಜು.19 : ಸಾಹಿತಿ ಹಾಗೂ ಹಿರಿಯ ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರಿಗೆ “ಯೋಗ ಕೌಸ್ತುಭ” ಪ್ರಶಸ್ತಿ ಲಭ್ಯವಾಗಿದೆ. ಸುಮಾರು 41 ಅಧ್ಯಯನ ಕೃತಿಗಳ ರಚಿಸಿರುವ ರಮೇಶ್ ಉತ್ತಪ್ಪ ಅವರು ಮೈಸೂರು ಯೋಗದ ಕುರಿತು “ಯೋಗ ಸಂಗೀತ-ಮೈಸೂರು ಪರಂಪರೆ” ಎಂಬ ಕೃತಿ ಬರೆದಿದ್ದಾರೆ. ಇದರಲ್ಲಿ ಯೋಗಕ್ಕೆ ಮೈಸೂರಿನ ಕೊಡುಗೆ, ಹಿನ್ನೆಲೆ, ಯೋಗಾಚಾರ್ಯರು, ಮೈಸೂರು ಸಂಗೀತ ಪರಂಪರೆಯ ಸಂಶೋಧನಾತ್ಮಕ ವಿವರಗಳಿವೆ. ಮೈಸೂರು ಯೋಗ ಸ್ಫೋರ್ಟ್ಸ್ ಫೌಂಡೇಶನ್ ಹಾಗೂ ಮೈಸೂರು ವಿವೇಕಾನಂದ ಯೋಗ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ಘಟಿಕೋತ್ಸವದಲ್ಲಿ ಶನಿವಾರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭ ಮಾತನಾಡಿದ ಶಾಸಕ ಶ್ರೀವತ್ಸ, “ರಮೇಶ್ ಉತ್ತಪ್ಪ ಅವರು ಮೈಸೂರಿನ ಗಲ್ಲಿ ಹಾಗೂ ವೃತ್ತಗಳ ಕುರಿತು ಬರೆದ ಅಧ್ಯಯನ ಕೃತಿ ಅತ್ಯಂತ ಮಹತ್ವದ್ದು. ಅದೇ ರೀತಿ ಯೋಗ ಪರಂಪರೆ ಹಾಗೂ ದಸರಾ ಆನೆಗಳ ಕೃತಿ ಕೂಡ ಜನರ ಮೆಚ್ಚುಗೆ ಪಾತ್ರವಾಗಿವೆ. ಈ ಕೃತಿಗಳನ್ನು ದಸರಾ ಉನ್ನತ ಸಮಿತಿ ಸಭೆಯಲ್ಲಿ ತಾವು ಮುಖ್ಯಮಂತ್ರಿಗಳಿಗೆ…
ಮಡಿಕೇರಿ NEWS DESK ಜು.19 : ಪಂದ್ಯಂಡ ಬೆಳ್ಯಪ್ಪನವರ ಬದುಕು ಇಂದಿನ ಪೀಳಿಗೆ ಆದರ್ಶಪ್ರಾಯ ವಾಗಲಿ ಎಂದು ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ ಕರೆ ನೀಡಿದ್ದಾರೆ. ಪಂದ್ಯಂಡ ಬೆಳ್ಯಪ್ಪನವರ ಬದುಕು ಇಂದಿನ ಪೀಳಿಗೆ ಆದರ್ಶಪ್ರಾಯ ವಾಗಲಿ ಎಂದು ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ ಕರೆ ನೀಡಿದ್ದಾರೆ. ಅವರು ಯುನೈಟೆಡ್ ಕೊಡವ ಆರ್ಗನೈಸೇಷನ್ – ಯುಕೊ ಸಂಸ್ಥೆ ಆಯೋಜಿಸಿದ್ದ, ಕೊಡಗಿನ ಗಾಂಧಿ ಎಂದೇ ಖ್ಯಾತರಾಗಿದ್ದ, ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಪಂದ್ಯಂಡ ಬೆಳ್ಯಪ್ಪನವರ 60ನೇ ಪುಣ್ಯ ತಿಥಿಯ ಅಂಗವಾಗಿ ಗೋಣಿಕೊಪ್ಪಲು ಕೊಳ್ಳಿಮಾಡ ಕರುಂಬಯ್ಯ ಬಸ್ ನಿಲ್ದಾಣದಲ್ಲಿರುವ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಪಂದ್ಯಂಡ ಬೆಳ್ಯಪ್ಪನವರು ಕೊಡಗಿನಾದ್ಯಂತ ಮಾತ್ರವಲ್ಲದೆ ರಾಜ್ಯ ಹಾಗು ರಾಷ್ಟ್ರಮಟ್ಟದಲ್ಲಿ ಸ್ವಾತಂತ್ರ್ಯ ಹೋರಾಟಗಾರರಾಗಿ ಗುರ್ತಿಸಿಕೊಂಡಿದ್ದ ಧೀಮಂತ ನಾಯಕರಾಗಿದ್ದರು. ಇವರ ತ್ಯಾಗ, ಆದರ್ಶಗಳು ಇಂದಿನ ಹಾಗು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸವಾಗ ಬೇಕು ಎಂದು ಹೇಳಿದರು. ಕೊಡಗಿನಿಂದ ಸುಮಾರು ಮುನ್ನೂರಕ್ಕೂ ಅಧಿಕ ಸ್ವಾತಂತ್ರ್ಯ ಹೋರಾಟಗಾರರು, ನೂರಕ್ಕೂ…
ಸೋಮವಾರಪೇಟೆ NEWS DESK ಜು.19 : ಅಂಬೇಡ್ಕರ್ ಸಮುದಾಯ ಭವನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಸಾಮಾನ್ಯ ಸಭೆಯು ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷರಾದ ಶ್ರೀ ಸಂತೋಷ್ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ಸಂಘಟನೆಯ ತತ್ವ–ಸಿದ್ಧಾಂತಗಳು, ಶಿಸ್ತು, ಸಮಯಪಾಲನೆ, ನಾಡು-ನುಡಿ, ನೆಲ-ಜಲ, ಗಡಿ ರಕ್ಷಣೆ, ಕನ್ನಡಿಗರ ಸ್ವಾಭಿಮಾನ ಹಾಗೂ ಕನ್ನಡ ಶಾಲೆಗಳ ಉಳಿವಿನ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು. ಜೊತೆಗೆ ಪಟ್ಟಣ ಪಂಚಾಯಿತಿಗೆ ಸಂಬಂಧಿಸಿದ ವಿಷಯವಾಗಿ ಮನವಿ ಸಲ್ಲಿಸಿ, ಶೀಘ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು. ಸಭೆಯಲ್ಲಿ ನೂತನವಾಗಿ ಆಯ್ಕೆಯಾದ ಜಿಲ್ಲಾ, ತಾಲ್ಲೂಕು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳಿಗೆ ಆದೇಶ ಪ್ರತಿಗಳನ್ನು ವಿತರಿಸಲಾಯಿತು. *ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳು* ರಾಜೇಶ್ – ಜಿಲ್ಲಾ ಉಪಾಧ್ಯಕ್ಷರು (ಕುಶಾಲನಗರ ವಿಭಾಗ), ಕೃಷ್ಣ – ಜಿಲ್ಲಾ ಟೈಲರ್ಸ್ ಘಟಕದ ಅಧ್ಯಕ್ಷರು, ಮಂಜಯ್ಯ – ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷರು, ಸುಪ್ರಿತಾ ಕರುಣಾಕರ – ಜಿಲ್ಲಾ ಉಪಾಧ್ಯಕ್ಷರು (ಸೋಮವಾರಪೇಟೆ ವಿಭಾಗ), ಪೂರ್ಣಿಮಾ – ಜಿಲ್ಲಾ ಕಾರ್ಯದರ್ಶಿ (ಸೋಮವಾರಪೇಟೆ ವಿಭಾಗ), ನಾಗರಾಜ್ – ಜಿಲ್ಲಾ ಕಾರ್ಯದರ್ಶಿ (ಸೋಮವಾರಪೇಟೆ ವಿಭಾಗ), ಜಮೀರ್…






