ಲೇಖಕ: admin

ಮಡಿಕೇರಿ ಮಾ.17 NEWS DESK : ಸೋಮವಾರಪೇಟೆ ತಾಲ್ಲೂಕು ತ್ರೈಮಾಸಿಕ ಕೆಡಿಪಿ ಸಭೆಯು ಶಾಸಕರಾದ ಡಾ.ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ಏಪ್ರಿಲ್, 02 ರಂದು ಬೆಳಗ್ಗೆ 10.30 ಗಂಟೆಗೆ ಸೋಮವಾರಪೇಟೆ ತಾ.ಪಂ. ಸಭಾಂಗಣದಲ್ಲಿ ನಡೆಯಲಿದೆ ಎಂದು ಸೋಮವಾರಪೇಟೆ ತಾ.ಪಂ.ಇಒ ಪರಮೇಶ್ ಅವರು ತಿಳಿಸಿದ್ದಾರೆ.

Read More

ವಿರಾಜಪೇಟೆ ಮಾ.17 NEWS DESK : ವಿರಾಜಪೇಟೆ ಸಮೀಪದ ಪ್ರಕೃತಿಯ ಸೊಬಗಿನ ನಡುವೆ ‘ಮಳೆ ದೇವರು’ಎಂದು ಹೆಸರುವಾಸಿಯಾಗಿರುವ ಮಲೆ ಮಹದೇಶ್ವರ (ಈಶ್ವರನ) ದೇವಾಲಯ ವಾರ್ಷಿಕ ಉತ್ಸವವು ಮಾ.20ರ ವರೆಗೆ ನಡೆಯಲಿದೆ. ಮಾ.18 ರಂದು ಬೆಳಿಗ್ಗೆ 5 ಗಂಟೆಗೆ ಇರುಬೆಳಕು, ಮಧ್ಯಾಹ್ನ 12 ಗಂಟೆಗೆ ದೊಡ್ಡ ಹಬ್ಬ, ಎತ್ತು ಪೋರಾಟ, ತೆಂಗಿನಕಾಯಿ ಗುಂಡು ಹೊಡೆಯುವುದು ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ಬಳಿಕ ಪ್ರಸಾದ ವಿನಿಯೋಗ, ಅನ್ನ ಸಂತರ್ಪಣೆ, 3 ಗಂಟೆಗೆ ದೇವರು ಹೊರಗೆ ಬರುವುದು, ಸಂಜೆ 6 ಗಂಟೆಗೆ ಪೇಟೆ ಮೆರವಣಿಗೆ ನಡೆಯಲಿದೆ. ಮಾ. 19 ರಂದು ಮಧ್ಯಾಹ್ನ 12 ಗಂಟೆಗೆ ಮಹಾಪೂಜೆಯ ಬಳಿಕ ಅನ್ನ ಸಂತರ್ಪಣೆ, ಬಸವನ ಕಟ್ಟೆಯಲ್ಲಿ ಪೂಜೆ, ಸಂಜೆ 6 ಗಂಟೆಗೆ ದೇವರ ಜಳಕ, ಅವಬೃತ ಸ್ನಾನ, ರಾತ್ರಿ 8 ಗಂಟೆಗೆ ದೇವರ ಪ್ರದಕ್ಷಿಣೆ ನೃತ್ಯ ನಡೆಯಲಿದೆ. ಮಾ. 20ರಂದು ಹಗಲು 11 ಗಂಟೆಗೆ ಕೊಡಿಮರ ಇಳಿಸುವುದು 12 ಗಂಟೆಗೆ ಮಹಾಪೂಜೆ ಬಳಿಕ ಪ್ರಸಾದ ವಿನಿಯೋಗ ಅನ್ನ…

Read More

ವಿರಾಜಪೇಟೆ ಮಾ.17 NEWS DESK : ಮೂರ್ನಾಡು ಗೌಡ ಮಹಿಳಾ ಒಕ್ಕೂಟ ವತಿಯಿಂದ ಮಾ.15 ರಂದು ಮಹಿಳಾ ದಿನಾಚರಣೆ ಹಾಗೂ ಒಕ್ಕೂಟದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ 9.30 ಗಂಟೆಗೆ ಮೂರ್ನಾಡಿನ ಪ್ರಕೃತಿ ಕಾಂಪ್ಲೆಕ್ಸ್‍ನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಭಾ ಕಾರ್ಯಕ್ರಮಕ್ಕೂ ಮುನ್ನ ಮನರಂಜನಾ ಆಟಗಳು ನಡೆಯಲಿದೆ. 10.30 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮವನ್ನು ಹಾಕತ್ತೂರು ಶಾಲೆಯ ಮುಖ್ಯ ಶಿಕ್ಷಕರಾದ ತೆಕ್ಕಡೆ ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಮೂರ್ನಾಡು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಕಲ್ಲುಮುಟ್ಲು ಜಶ್ಮಿ ಚಿಂತು ವಹಿಸಲಿದ್ದಾರೆ. ಜಂಬರ ಉದ್ಘಾಟನೆಯನ್ನು ಕವಿ ಹಾಗೂ ಸಾಹಿತಿ ಪೂಜಾರೀರ ಕೃಪಾ ದೇವರಾಜ್ ನೆರವೇರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಮಹಿಳೆಯರಿಗಾಗಿ ವಿಶೇಷ ಸೀರೆ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ರಾಜ್ಯ ಕೃಷಿ ಪ್ರಶಸ್ತಿ ಪುರಸ್ಕೃತ ಕಟ್ಟೆಮನೆ ಪ್ರೇಮ ಗಣೇಶ್ ಉದ್ಘಾಟಿಸಲಿದ್ದಾರೆ. ಮಹಿಳೆಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಗೌಡ ಮಹಿಳಾ ಒಕ್ಕೂಟದ ಆಡಳಿತ ಮಂಡಳಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿರಾಜಪೇಟೆ ಮಾ.17 NEWS DESK : ವಿರಾಜಪೇಟೆಯ ಮೀನುಪೇಟೆಯಲ್ಲಿರುವ ಚೈತನ್ಯ ಮಠಪುರ ಶ್ರೀ ಮುತ್ತಪ್ಪ ದೇವಾಲಯದ ವತಿಯಿಂದ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ 82ನೇ ವರ್ಷದ ಶ್ರೀ ಮುತ್ತಪ್ಪ ತೆರೆ ಮಹೋತ್ಸವಕ್ಕೆ ಚಾಲನೆ ದೊರೆಯಿತು. ಮಾ.19ರ ವರೆಗೆ ಮೂರು ದಿನಗಳ ಕಾಲ ಮಹೋತ್ಸವವು ನಡೆಯಲಿದೆ. ಗಣಪತಿ ಹೋಮದೊಂದಿಗೆ ತೆರೆ ಮಹೋತ್ಸವಕ್ಕೆ ಚಾಲನೆ ದೊರೆಯಿತು. ಬಳಿಕ ದೇವಾಲಯದ ಆವರಣದಲ್ಲಿರುವ ಧ್ವಜಸ್ಥಂಭದಲ್ಲಿ ಧ್ವಜಾರೋಹಣ ನೆರವೇರಿತು. ಸಂಜೆ ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ ನಡೆಯಿತು. ಈ ಸಂದರ್ಭ ಶ್ರೀ ಮುತ್ತಪ್ಪ ದೇವಾಲಯದ ಆಡಳಿತ ಮಂಡಳಿಯ ಸದಸ್ಯರು, ಶ್ರೀ ಮುತ್ತಪ್ಪ ಮಲಯಾಳಿ ಸಂಘದ ಸದಸ್ಯರು ಸೇರಿದಂತೆ ಭಕ್ತಾಧಿಗಳು ಇದ್ದರು. ಮಾ.18 ರಂದು ಮಧ್ಯಾಹ್ನ 2 ಗಂಟೆಗೆ ದೇವರ ಮಲೆ ಇಳಿಸುವುದು, ಸಂಜೆ 5 ಗಂಟೆಗೆ ಶ್ರೀ ಮುತ್ತಪ್ಪ ವೆಳ್ಳಾಟ ನಡೆಯಲಿದೆ. ಸಂಜೆ 5.30 ಗಂಟೆಗೆ ಮೊದಕಲಶದೊಂದಿಗೆ ತಾಲಪೋಲಿ ಮೆರವಣಿಗೆ, ಕಾಳಿಂಗ ಕಲಾ ಸಮಿತಿಯವರ ಸಿಂಗಾರಿ ಮೇಳ ಹಾಗೂ ತತ್ವಮಸಿ ಸಹಸ್ರ ವೆಳಕಾಟ್ಟಂ ಚಂಡೆಮೇಳದೊಂದಿಗೆ, ಮಹಿಳೆಯರ ತಾಲಪ್ಪೊಲಿ ಮೆರವಣಿಗೆಯು ತೆಲುಗರ…

Read More

ಮಡಿಕೇರಿ ಮಾ.17 NEWS DESK : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರಿಗೆ 12 ದಿನಗಳ ಅವಧಿಯ ಉಚಿತ ಫಾಸ್ಟ್ ಫುಡ್ (ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿ ಶಿಬಿರವನ್ನು ಏಪ್ರಿಲ್ 4 ರಿಂದ ಪ್ರಾರಂಭಿಸಲಾಗುತ್ತಿದೆ. ಈ ಶಿಬಿರದಲ್ಲಿ ಪಾನಿ ಪೂರಿ, ಬೇಲ್ ಪೂರಿ, ದಹಿ ಪೂರಿ, ಸೇವ್ ಪೂರಿ, ಚಾಟ್ ಮಸಾಲ, ಕಚೋರಿ, ಗೋಬಿ ಮಂಚೂರಿ, ಪ್ರೈಡ್ ರೈಸ್, ಸಮೋಸ ಇನ್ನಿತರೆ ಚಾಟ್ಸ್‍ಗಳ ತಯಾರಿಕೆಯ ಬಗ್ಗೆ ತರಬೇತಿ ನೀಡಲಾಗುವುದು. ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 49 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ…

Read More

ಮಡಿಕೇರಿ ಮಾ.17 NEWS DESK : ಬಿಳಿಗೇರಿ ಮತ್ತು ಕಗ್ಗೋಡ್ಲು ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಕೋಟ್ಪಾ ಕಾಯ್ದೆ ಉಲ್ಲಂಘನೆ ಅಡಿಯಲ್ಲಿ 10 ಪ್ರಕರಣಗಳಿಗೆ ರೂ.1800 ಗಳ ದಂಡವನ್ನು ವಿಧಿಸಿ ನಿಯಮಗಳ ಕುರಿತು ಆರೋಗ್ಯ ಶಿಕ್ಷಣ ನೀಡಲಾಯಿತು. ಸಂಗ್ರಹಣೆಯಾದ ದಂಡವನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಜಂಟಿ ಖಾತೆಗೆ ಜಮೆ ಮಾಡಲಾಯಿತು. ಅನಿರೀಕ್ಷಿತ ಭೇಟಿಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿಯ ಆರೋಗ್ಯ ಶಿಕ್ಷಣಾಧಿಕಾರಿ ಪಾಲಾಕ್ಷ ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ವಿ.ಶ್ರೀನಾಥ್ ಹಾಗೂ ಜಿಲ್ಲಾ ತಂಬಾಕು ಕೋಶದ ಮಂಜುನಾಥ್ ಹಾಗೂ ಪೊಲೀಸ್ ಇಲಾಖೆಯವರು ಭಾಗವಹಿಸಿದ್ದರು.

Read More

ಮಡಿಕೇರಿ ಮಾ.17 NEWS DESK : ಕೂಡಿಗೆ ಯೂನಿಯನ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವತಿಯರಿಗೆ ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿ ನೀಡಲಾಗುವ ಸ್ವ-ಉದ್ಯೋಗ ತರಬೇತಿಯನ್ನು ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು 18 ರಿಂದ 50 ವರ್ಷ ವಯೋಮಿತಿಯೊಳಗಿನ ಯುವತಿಯರಿಗೆ ಮಾತ್ರ ಅವಕಾಶ. ಆಸಕ್ತಿ ಉಳ್ಳವರು ಸಂಸ್ಥೆಯನ್ನು ನೇರವಾಗಿ ಅಥವಾ ಕರೆ ಮಾಡಿ ಮಾಹಿತಿ ಪಡೆಯಬಹುದು. ಬ್ಯೂಟಿ ಪಾರ್ಲರ್ ತರಬೇತಿ: 35 ದಿನಗಳು. ಪ್ರಾರಂಭ 01.04.2026 ರಿಂದ 05.05.2026 ರ ವರೆಗೆ., ಮಹಿಳೆಯರ ಹೊಲಿಗೆ ತರಬೇತಿ: 31 ದಿನಗಳು. ಪ್ರಾರಂಭ 06.05.2026 ರಿಂದ 05.06.2026 ರ ವರೆಗೆ., ಕಂಪ್ಯೂಟರ್ ಲೆಕ್ಕಪತ್ರ ನಿರ್ವಹಣೆ ತರಬೇತಿ 38 ದಿನಗಳು. ಪ್ರಾರಂಭ 13.05.2026 ರಿಂದ 19.06.2026ರ ವರೆಗೆ, ಅಣಬೆ ಬೇಸಾಯ ತರಬೇತಿ : 10 ದಿನಗಳು. ಪ್ರಾರಂಭ 27.05.2026 ರಿಂದ 05.06.2026 ರ ವರೆಗೆ ನಡೆಯಲಿದೆ. ಆಸಕ್ತರು ಹೆಚ್ಚಿನ ಮಾಹಿತಿಗೆ 9686406181, 9449402081, 8618471801, 9900142602 ನ್ನು ಸಂಪರ್ಕಿಸುವಂತೆ ಸಂಸ್ಥೆಯ ನಿರ್ದೇಶಕರಾದ ಪ್ರಕಾಶ್…

Read More

ಮಡಿಕೇರಿ ಮಾ.17 NEWS DESK : ವಾಣಿಜ್ಯ ಬಳಕೆಯ ಅಡುಗೆ ಅನಿಲದ ತೀವ್ರ ಕೊರತೆಯಿಂದ ರಾಷ್ಟ್ರದ ವಾಣಿಜ್ಯ ಚಟುವಟಿಕೆಗಳಿಗೆ ಹಿನ್ನಡೆ ತರುವ ಮೂಲಕ ರಾಷ್ಟ್ರದ ಪರಿಸ್ಥಿತಿಯನ್ನು ಅಯೋಮಯಗೊಳಿಸಿದ ಕೇಂದ್ರ ಸರ್ಕಾರದ ಅಸಮರ್ಥತೆ ಬಗ್ಗೆ ಆರೋಪಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಕುಶಾಲನಗರದಲ್ಲಿ ಪ್ರತಿಭಟನೆ ನಡೆಯಿತು. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಪಿ.ಶಶಿಧರ್ ನೇತೃತ್ವದಲ್ಲಿ ಪಕ್ಷದ ಕಚೇರಿಯಿಂದ ಮೆರವಣಿಗೆಯಲ್ಲಿ ಹೊರಟ ಕಾರ್ಯಕರ್ತರು ಕುಶಾಲನಗರ ಗಣಪತಿ ದೇವಾಲಯ ಮುಂಭಾಗ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನಾಕಾರರು ರಸ್ತೆ ಮಧ್ಯದಲ್ಲಿ ಸೌದೆ ಬಳಸಿ ಒಲೆ ಉರಿಸಿ ಚಹಾ ಮಾಡುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟಿಸಿದರು. ಈ ಸಂದರ್ಭ ಮಾತನಾಡಿದ ವಿ.ಪಿ.ಶಶಿಧರ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮೋದಿ ಭಾರತವನ್ನು ನಗೆಪಾಟಲಿಗೆ ಈಡು ಮಾಡುತ್ತಿದ್ದಾರೆ. ಭಾರತದ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ತಲುಪುತ್ತಿದ್ದು ಪ್ರಧಾನಿ ಮೋದಿ ಕೇವಲ ಪಂಚ ರಾಜ್ಯಗಳ ಚುನಾವಣೆಗೆ ಸಮಯ ಮೀಸಲಿರುವುದು ಖಂಡನೀಯ ಎಂದರು. ಅಡುಗೆ ಅನಿಲ ಬೆಲೆ ದಿಡೀರನೆ ಏರಿಕೆ ಮಾಡಿ…

Read More

ಮಡಿಕೇರಿ ಮಾ.17 NEWS DESK : ದತ್ತಿ ಉಪನ್ಯಾಸಗಳು ಕನ್ನಡ ಸಾಹಿತ್ಯದ ಶ್ರೀಮಂತಿಕೆಯನ್ನು ಪರಿಚಯಿಸುವುದರೊಂದಿಗೆ ಹೊಸ ವಿಚಾರಗಳನ್ನು ತಿಳಿಸಿ ಕನ್ನಡ ತನವನ್ನು ಬೆಳೆಸುವ ಕಾರ್ಯ ಮಾಡುತ್ತದೆ ಎಂದು ಸ.ಪ್ರ.ದ ಕಾಲೇಜಿನ ಪ್ರಾಂಶುಪಾಲೆ ಪ್ರೊ.ಡಿ.ಕೆ.ಸರಸ್ವತಿ ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು  ಸಂಯುಕ್ತ ಆಶ್ರಯದಲ್ಲಿ  ಕಾಲೇಜಿನಲ್ಲಿ ಆಯೋಜಿಸಲಾಗಿದ್ದ  ದಿ.ಸಾಹಿತಿ ಮುಲ್ಲೇಂಗಡ ಬೇಬಿ ಚೋಂದಮ್ಮ ಹಾಗೂ ಮಂಡೇಪಂಡ ಅಕ್ಕಮ್ಮ ಗಣಪತಿ ಸ್ಮರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡ ಭಾಷೆಯು ಇಂದು ಜಾತಿ, ಧರ್ಮ ಹಾಗೂ ಗಡಿಯನ್ನು ಮೀರಿ ಬೆಳೆದಿದೆ. ಇದಕ್ಕೆ ಒಂದು ಮುಖ್ಯ ಕಾರಣವೆಂದರೆ ಕನ್ನಡ ಸಾಹಿತ್ಯ ಪರಿಷತ್ತು. ತನ್ಮೂಲಕ ಕನ್ನಡ ನಾಡು, ನುಡಿ, ಸಂಸ್ಕೃತಿ, ಕಲೆ, ಸಾಹಿತ್ಯವನ್ನು ನಿರಂತರವಾಗಿ ಪೋಷಿಸುತ್ತ ವಿವಿಧ ಕಾರ್ಯಕ್ರಮ ಮೂಲಕ ಮುಂದಿನ ತಲೆಮಾರಿಗೆ ಕನ್ನಡದ ಶ್ರೇಷ್ಠತೆಯನ್ನು ಪರಿಚಿಸುವಂತಹ ಕೆಲಸವನ್ನು ಮಾಡುತ್ತಿದೆ . ಕನ್ನಡ ಭಾಷೆ ಮತ್ತು…

Read More

ಸೋಮವಾರಪೇಟೆ ಮಾ.17 NEWS DESK : ಅಡಿಗೆ ಅನಿಲ ವ್ಯತ್ಯಯದ ಹಿನ್ನಲೆಯಲ್ಲಿ ಪಟ್ಟಣದ ಹೋಟೆಲ್ ಹಾಗೂ ಬೇಕರಿಗಳ ಮೇಲೆ ಆಹಾರ ನಿರೀಕ್ಷಕರು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಆಹಾರ ನಿರೀಕ್ಷಕರಾದ ಯಶಸ್ವಿನಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಿವಿಧ ಹೋಟೆಲ್‌ಗಳು ಮತ್ತು ಬೇಕರಿಗಳಲ್ಲಿ ಬಳಸುತ್ತಿರುವ ಅನಿಲ ಸಿಲಿಂಡರ್ ಗಳನ್ನು ಪರಿಶೀಲಿಸಲಾಯಿತು. ಈ ವೇಳೆ ಮಾತನಾಡಿದ ಯಶಸ್ವಿನಿ ಅವರು, ವಾಣಿಜ್ಯ ಉದ್ದೇಶಗಳಿಗೆ ಕಾರ್ಯನಿರ್ವಹಿಸುವ ಹೋಟೆಲ್ ಹಾಗೂ ಬೇಕರಿಗಳು ಕಡ್ಡಾಯವಾಗಿ ವಾಣಿಜ್ಯ ಬಳಕೆಯ ಅಡಿಗೆ ಅನಿಲವನ್ನು ಮಾತ್ರ ಬಳಸಬೇಕು ಎಂದು ಸೂಚಿಸಿದರು. ಗೃಹ ಬಳಕೆಗೆ ಮೀಸಲಾದ ಅನಿಲವನ್ನು ವಾಣಿಜ್ಯ ಚಟುವಟಿಕೆಗಳಿಗೆ ಬಳಸುವುದು ಕಾನೂನುಬಾಹಿರವಾಗಿದ್ದು, ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಪರಿಶೀಲನೆಯ ಸಂದರ್ಭದಲ್ಲಿ ಕೆಲವು ಸ್ಥಳಗಳಲ್ಲಿ ಅಗತ್ಯ ಸೂಚನೆಗಳನ್ನು ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ನಿಯಮ ಪಾಲನೆಗೆ ವಿಶೇಷ ಗಮನ ಹರಿಸುವಂತೆ ತಿಳಿಸಲಾಯಿತು. ಕಾರ್ಯಾಚರಣೆಯಲ್ಲಿ ಇಲಾಖೆಯ ಸಿಬ್ಬಂದಿಗಳಾದ ವಿನೋದ್, ಮುರುಳಿ ಸೇರಿದಂತೆ ಇತರರು ಇದ್ದರು.  

Read More