ಲೇಖಕ: admin

ಮಡಿಕೇರಿ, ಜೂ.10 NEWS DESK : ಕೊಡಗು ಜಿಲ್ಲೆಯ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗೆ ಮಹತ್ವದ ಉತ್ತೇಜನ ನೀಡುವ ನಿಟ್ಟಿನಲ್ಲಿ, ಕೇಂದ್ರ ಸರ್ಕಾರವು ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ (CRF) ಅಡಿಯಲ್ಲಿ ಜಿಲ್ಲೆಯ ಮೂರು ಪ್ರಮುಖ ರಾಜ್ಯ ಹೆದ್ದಾರಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಒಟ್ಟು ₹22 ಕೋಟಿ ಮಂಜೂರು ಮಾಡಿದೆ. ಈ ಮಂಜೂರಾತಿಯನ್ನು ಸ್ವಾಗತಿಸಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಕೊಡಗಿನ ಬಹುಕಾಲದ ರಸ್ತೆ ಅಭಿವೃದ್ಧಿ ಅಗತ್ಯಗಳಿಗೆ ಸ್ಪಂದಿಸಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಹಾಗೂ ಭಾರತ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. :: ಮಂಜೂರಾಗಿರುವ ಕಾಮಗಾರಿಗಳು ::  ಕೊಡ್ಲಿಪೇಟೆ–ಹೆಬ್ಬಾಲೆ ರಸ್ತೆ (ಎಸ್‌ಎಚ್-244) ಕಿ.ಮೀ. 16.70 ರಿಂದ 30.00ರವರೆಗೆ, ಗೋಪಾಲಪುರ–ಬಾಣಾವರ ಹೆಬ್ಬಾಲೆ ಮಾರ್ಗವಾಗಿ ಮುಳ್ಳೂರು ಹಾಗೂ ಮಳಂಬಿ (ಆಯ್ದ ಭಾಗಗಳು) ಸಂಪರ್ಕಿಸುವ ಸೋಮವಾರಪೇಟೆ ತಾಲ್ಲೂಕಿನ ರಸ್ತೆ ಅಭಿವೃದ್ಧಿಗೆ ರೂ.6 ಕೋಟಿ, ಮಡಿಕೇರಿ–ಕುಟ್ಟ ರಸ್ತೆ (ಎಸ್‌ಎಚ್-89) ಚೈನೇಜ್ 4.00 ರಿಂದ…

Read More

ಮಡಿಕೇರಿ ಜೂ.9 NEWS DESK :  ಕೊಡಗು ಜಿಲ್ಲಾ ಮರಾಠ / ಮರಾಟಿ ಸಮಾಜ ಸೇವಾ ಸಂಘ ಹಾಗೂ ಅಂಭಾಭವಾನಿ ಯುವಕ-ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘದ ಸಂಯುಕ್ತಾಶ್ರಯದಲ್ಲಿ ಸಂಘದ 30ನೇ ವಾರ್ಷಿಕ ಮಹಾಸಭೆ ಜೂ.14 ರಂದು ತಾಳತ್ತಮನೆಯ ಸಂಘದ ಕಟ್ಟಡದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷರಾದ ಎಂ.ಎಂ.ಪರಮೇಶ್ವರ್ ಪ್ರಕಟಣೆಯಲ್ಲಿ ತಿಳಿಸಿದರು. ಅಂದು ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಕೊಡಗು ಜಿಲ್ಲಾ ಮರಾಠ / ಮರಾಟಿ ಸಮಾಜ ಸೇವಾ ಸಂಘದ ಎಂ.ಎಂ.ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯನ್ನು ಕರ್ನಾಟಕ ಮರಾಟಿ ಒಕ್ಕೂಟದ ಅಧ್ಯಕ್ಷರಾದ ಡಾ.ಕೆ.ಸುಂದರನಾಯ್ಕ್(ಐಎಫ್‍ಎಸ್) ಅವರು ಉದ್ಘಾಟಿಸಲಿದ್ದಾರೆ. ಬೆಂಗಳೂರಿನ ರಾಷ್ಟ್ರೀಯ ವೈಮಾಂತರಿಕ್ಷ ಪ್ರಯೋಗ ಶಾಲೆಯ ಮುಖ್ಯ ವಿಜ್ಞಾನಿ ಎಂ.ಟಿ.ಶೋಭಾವತಿ, ಉದ್ಯಮಿ ಉಮೇಶ್ ನಾಯ್ಕ್, ಸಂಘದ ಉಪಾಧ್ಯಕ್ಷೆ ದೇವಕಿ ಜಿ.ಆರ್.ನಾಯ್ಕ್, ಅಂಭಾಭವಾನಿ ಯುವಕ-ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘದ ಅಧ್ಯಕ್ಷ ಎಂ.ಆರ್.ಮೋಹನ್, ಮಹಿಳಾ ವೇದಿಕೆ ಅಧ್ಯಕ್ಷೆ ರತ್ನಮಂಜರಿ ನರಸಿಂಹ, ಕಟ್ಟದ ಸಮಿತಿ ಅಧ್ಯಕ್ಷ ಎಂ.ಟಿ.ಗುರುವಪ್ಪ, ಉಪಸಮಿತಿಗಳ ಅಧ್ಯಕ್ಷರಾದ ಕೆ.ಜಿ.ಹೊನ್ನಪ್ಪ, ಧನಂಜಯ್, ವೆಂಕಪ್ಪ, ನಿರಲ್…

Read More

ಮಡಿಕೇರಿ ಜೂ.9 NEWS DESK : ಭಾರತೀಯ ಕ್ರೀಡಾ ಪ್ರಾಧಿಕಾರ(ಸಾಯಿ) ಎಸ್‍ಟಿಸಿ ಮಡಿಕೇರಿ ಕ್ಯಾಂಪಸ್‍ನಲ್ಲಿ ವಿಶ್ವ ಸೈಕಲ್ ದಿನಾಚರಣೆಯ ಅಂಗವಾಗಿ ಫಿಟ್ ಇಂಡಿಯಾ ಸಂಡೇಸ್ ಆನ್ ಸೈಕಲ್ ವಿಶೇಷ ಕಾರ್ಯಕ್ರಮಕ್ಕೆ ಖ್ಯಾತ ವಕೀಲ ಗಿರಿ ಅವರು ಚಾಲನೆ ನೀಡಿದರು. ಫಿಟ್ ಇಂಡಿಯಾ ಚಳವಳಿಯನ್ನು 2019ರ ಆ.29 ರಂದು ಪ್ರಧಾನಿ ಮೋದಿಯವರು ಆರಂಭಿಸಿದರು. ಜನರಲ್ಲಿ ವರ್ಧನಾ ಬದಲಾವಣೆಯನ್ನು ತಂದು ದೈಹಿಕ ಚಟುವಟಿಕೆಗಳನ್ನೊಳಗೊಂಡ ಜೀವನಶೈಲಿಯನ್ನು ಉತ್ತೇಜಿಸುವುದು ಇದರ ಉದ್ದೇಶವಾಗಿತ್ತು. ಈ ಅಭಿಯಾನವು 30 ಲಕ್ಷಕ್ಕೂ ಹೆಚ್ಚು ಸೈಕ್ಲಿಂಗ್ ಆಸಕ್ತರನ್ನು ತೊಡಗಿಸಿಕೊಂಡಿದ್ದು, ಸಾಮಾಜಿಕ ಮಾಧ್ಯಮ ಪ್ರಚಾರದ ಮೂಲಕ 7 ಕೋಟಿಗೂ ಹೆಚ್ಚು ಜನರನ್ನು ತಲುಪಿದೆ. ಈ ಅಭಿಯಾನವು ಸೈಕ್ಲಿಂಗ್ ಮಾತ್ರವಲ್ಲದೆ ಯೋಗ, ಸಾಂಪ್ರದಾಯಿಕ ಕ್ರೀಡೆಗಳು ಮತ್ತು ಆರೋಗ್ಯವರ್ಧಕ ಚಟುವಟಿಕೆಗಳನ್ನು ಒಳಗೊಂಡಿದೆ ಎಂದು ಮಾಹಿತಿ ನೀಡಿದರು. ದೇಶಾದ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಈ ಕಾರ್ಯಕ್ರಮವು ಯುವಜನರಲ್ಲಿ ಚುರುಕು ಜೀವನಶೈಲಿಯನ್ನು ಉತ್ತೇಜಿಸುವ ಮೂಲಕ ಕ್ರೀಡಾ ಸಂಸ್ಕøತಿಯನ್ನು ಬೆಳೆಸುವ ಫಿಟ್ ಇಂಡಿಯಾ ಚಳವಳಿಯ ಉದ್ದೇಶವನ್ನು ಬಲಪಡಿಸಿದೆ ಎಂದು ಫಿಟ್ನೆಸ್, ಶಿಸ್ತು ಮತ್ತು…

Read More

ಚೆಟ್ಟಳ್ಳಿ ಜೂ.9 NEWS DESK : ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕ-ಶಿಕ್ಷಕರ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಂ.ಕೆ.ಪದ್ಮ ಅವರು, ವಿದ್ಯಾರ್ಥಿಗಳ ಶೈಕ್ಷಣಿಕ ವಿಕಸನದಲ್ಲಿ ಪೋಷಕರ ಪಾತ್ರ ಮಹತ್ತರ. ವಿದ್ಯಾರ್ಥಿಗಳಿಗೆ ಹೆಚ್ಚಿನ ಸಮಯವನ್ನು ಮೀಸಲಿಸಬೇಕು. ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಸಲಹೆ ನೀಡಿದರು. ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿ ಕೇವಲ ಶಿಕ್ಷಕರ ಪಾತ್ರವಲ್ಲದೆ ಪೋಷಕರ ಜವಾಬ್ದಾರಿ ಕೂಡ ಅತಿ ಹೆಚ್ಚಿನದಾಗಿರುತ್ತದೆ. ಕಾಲೇಜಿನ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕನ್ನಡ ಉಪನ್ಯಾಸಕರಾದ ಎಂ.ಪಿ.ದಮಯಂತಿ ಮಾತನಾಡಿ, ಕಾಲೇಜಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳು ಹಾಗೂ ಪರೀಕ್ಷೆಗೆ ಸಂಬಂಧಿಸಿದ ವಿಚಾರಗಳನ್ನು ಕೂಲಂಕುಶವಾಗಿ ತಿಳಿಸಿಕೊಟ್ಟರು. ಲೋಚನ ಆಪ್ತ ಸಮಾಲೋಚಕರಾದ ಕುಮಾರಿ ಮಾತನಾಡಿ, ಮಕ್ಕಳ ಮನಸ್ಸು ತುಂಬಾ ಸೂಕ್ಷ್ಮದಿಂದ ಕೂಡಿರುತ್ತದೆ ಅವರನ್ನು ಜಾಗ್ರತೆಯಿಂದ ಹಾಗೂ ಪ್ರೀತಿ ಯಿಂದ ನೋಡಿ ಕೊಳ್ಳುವುದು ನಮ್ಮ ಕರ್ತವ್ಯ. ವಿದ್ಯಾರ್ಥಿಗಳನ್ನು ಅತೀಯಾಗಿ ಬಯ್ಯುವ ಬದಲಿಗೆ ಪ್ರೀತಿಯಿಂದ ಮಾತನಾಡಿ ಅವರ ಮನಸ್ಸನ್ನು ಗೆದ್ದರೆ ಮಾತ್ರ ಸಮಾಜಕ್ಕೆ ಉತ್ತಮಪ್ರಜೆಗಳಾಗಲು ಸಾಧ್ಯ ಎಂದು ಹೇಳಿದರು. ಪೋಷಕರಾದ…

Read More

ಗೋಣಿಕೊಪ್ಪ ಜೂ.9 NEWS DESK : ಕೊಡಗು ಜಿಲ್ಲೆಯಲ್ಲಿ ಹಸಿರು ಹೊದಿಕೆ ಹೆಚ್ಚಿದ್ದರೂ ಸಹ ಪ್ರಾಕೃತಿಕ ವಿಕೋಪಗಳು ಸಂಭವಿಸಿದೆ ಹಾಗೂ ವನ್ಯಜೀವಿ ಮಾನವ ಸಂಘರ್ಷ ಹೆಚ್ಚಿದೆ. ಪ್ರಕೃತಿ, ವನ್ಯಜೀವಿಗಳ ಮೇಲೆ ಕಾಳಜಿಯೊಂದಿಗೆ ಜನರಿಗೆ ನೆಮ್ಮದಿಯಿಂದ ಬದುಕುವ ಅವಕಾಶ ಕೂಡ ಆಗಬೇಕು ಎಂದು ಮೈಸೂರು ಕೊಡಗು ಸಂಸದ ಯದುವೀರ್ ಒಡೆಯರ್ ಅಭಿಪ್ರಾಯಪಟ್ಟರು. ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಡೆದ ಒಂದು ಗಿಡ ತಾಯಿಯ ಹೆಸರಿನಲ್ಲಿ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ವನ್ಯಜೀವಿ ಮಾನವ ಸಂಘಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಿದೆ. ಎಲ್ಲಾ ಜಿಲ್ಲೆಗಳಲ್ಲಿ ಪ್ರಕೃತಿಗೆ ಸಂಬ0ಧಿಸಿದ ಸಮಸ್ಯೆಗಳು ಇದೆ. ಇದಕ್ಕೆ ಪೂರಕವಾಗಿ ಹಸಿರು ಹೊದಿಕೆ ಹೆಚ್ಚಿಸುವ ಕಾರ್ಯಕ್ರಮಗಳನ್ನು ಹೆಚ್ಚು ಮಾಡಬೇಕಿದೆ. ಪರಿಸರ ಕಾಳಜಿಯಿಂದ ಕೈಗೊಳ್ಳುವ ಕಾರ್ಯಕ್ರಮಗಳಿಗೆ ಸಮಾಜದಲ್ಲಿ ಸಕಾರಾತ್ಮಕವಾದ ಪ್ರತಿಕ್ರಿಯೆಗಳು ಸಿಗಲಿದೆ ಎಂದು ಹೇಳಿದರು. ಎಂಎಲ್ಸಿ ಮಂಡೇಪ0ಡ ಸುಜಾಕುಶಾಲಪ್ಪ ಮಾತನಾಡಿ, ಹಸಿರೆಲೆ ಗೊಬ್ಬರಗಳ ಬಳಕೆ ಕಡೆಗೆ ಹೆಚ್ಚು ಗಮನ ಹರಿಸಬೇಕು.…

Read More

ಗೋಣಿಕೊಪ್ಪ ಜೂ.9 NEWS DESK : ಗೋಣಿಕೊಪ್ಪ ಪಟ್ಟಣದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ರಸ್ತೆಯಲ್ಲಿರುವ ಟಾಸ್ ಕಟ್ಟಡದಲ್ಲಿ ಭಾರತೀಯ ಜನತಾ ಪಾರ್ಟಿ ವಿರಾಜಪೇಟೆ ಮಂಡಲ ಕಚೇರಿಯನ್ನು ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭ ಮಾತನಾಡಿದ ಸಂಸದರು ಪಕ್ಷದ ಕಚೇರಿ ಉದ್ಘಾಟನೆಯೊಂದಿಗೆ ಪಕ್ಷದ ಬೆಳವಣಿಗೆಯ ಭಾವನೆ ಹೆಚ್ಚಾಗಬೇಕು. ಕೊಡಗು ಜಿಲ್ಲೆಯಲ್ಲಿ ಪಕ್ಷ ಬಲವರ್ಧನೆ ದೃಷ್ಟಿಯಿಂದ ಹೆಚ್ಚು ಕಾರ್ಯಾಲಯಗಳ ಅವಶ್ಯಕತೆಯಿದೆ. ಮುಂಬರುವ ಚುನಾವಣೆಗಳನ್ನು ಎದುರಿಸಲು ಹಾಗೂ ಕಾರ್ಯತಂತ್ರಗಳನ್ನು ರೂಪಿಸಲು ಕಾರ್ಯಲಯಗಳು ಶಕ್ತಿ ತುಂಬಲಿದೆ ಎಂದು ಹೇಳಿದರು.  ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ವಿರಾಜಪೇಟೆ ಮಂಡಲ ಅಧ್ಯಕ್ಷ ಮಾಚಿಮಂಡ ಸುವಿನ್ ಗಣಪತಿ, ಎಂಎಲ್ಸಿ ಮಂಡೇಪಂಡ ಸುಜಾ ಕುಶಾಲಪ್ಪ, ಮಾಜಿ ಶಾಸಕ ಕೆ.ಜಿ ಬೋಪಯ್ಯ,ಮಂಡಲ ಕಾರ್ಯದರ್ಶಿ ಕುಟ್ಟಂಡ ಅಜಿತ್ ಕರುಂಬಯ್ಯ, ಜಿಲ್ಲಾ ಉಪಾಧ್ಯಕ್ಷರುಗಳಾದ ಅರುಣ್ ಭೀಮಯ್ಯ, ಗುಮ್ಮಟ್ಟೀರ ಕಿಲನ್,ಜಿಲ್ಲಾ ಪ್ರಧಾನ ಕಾರ್ಯದರ್ಶಿ ನೆಲ್ಲೀರ ಚಲನ್ ಕುಮಾರ್ ಇದ್ದರು.

Read More

ಮಡಿಕೇರಿ ಜೂ.9 NEWS DESK : ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ “ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದ  ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಎನ್.ಜೆ.ಲತಾ ಅವರು ವಿದ್ಯಾರ್ಥಿಗಳಿಗೆ ಮಾದಕ ವ್ಯಸನ ಮತ್ತು ಮಾದಕ ವಸ್ತುಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಮಾದಕ ವಸ್ತುಗಳ ಸೇವನೆಯು ಇಂದಿನ ಸಮಾಜದ ಒಂದು ಗಂಭೀರ ಸಮಸ್ಯೆಯಾಗಿದೆ. ಯುವಜನತೆ ಕುತೂಹಲ, ಸ್ನೇಹಿತರ ಒತ್ತಡ ಹಾಗೂ ತಪ್ಪು ಅಭ್ಯಾಸಗಳಿಂದ ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗುತ್ತಿದ್ದಾರೆ. ಆರಂಭದಲ್ಲಿ ಇದು ತಾತ್ಕಾಲಿಕ ಸಂತೋಷವನ್ನು ನೀಡಿದರೂ, ನಂತರ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಹಾಳುಮಾಡುತ್ತದೆ ಎಂದರು. ಮಾದಕ ವಸ್ತುಗಳ ವ್ಯಸನದಿಂದ ಶಿಕ್ಷಣ, ಉದ್ಯೋಗ, ಕುಟುಂಬ ಮತ್ತು ಸಾಮಾಜಿಕ ಜೀವನದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ವ್ಯಸನಿಗಳು ಅನೇಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಾರೆ ಮತ್ತು ಕೆಲವೊಮ್ಮೆ ಅಪರಾಧ ಚಟುವಟಿಕೆಗಳತ್ತವೂ ತಿರುಗುವ ಸಾಧ್ಯತೆ ಇರುತ್ತದೆ. ಈ ಸಮಸ್ಯೆಯನ್ನು ತಡೆಗಟ್ಟಲು ಪೋಷಕರು, ಶಿಕ್ಷಕರು, ಸರ್ಕಾರ ಮತ್ತು ಸಮಾಜ…

Read More

ಸೋಮವಾರಪೇಟೆ ಜೂ.9 NEWS DESK : ನಗರ ಕಾಂಗ್ರೆಸ್ ಸಮಿತಿ ವತಿಯಿಂದ ನಗರ ಕಾರ್ಯಕರ್ತರ ಕುಂದುಕೊರತೆ ಸಭೆ ನಗರ ಅಧ್ಯಕ್ಷ ಮಂಜುನಾಥ್ ಅವರ ನೇತೃತ್ವದಲ್ಲಿ ಪಟ್ಟಣದ ಮಹಿಳಾ ಸಮಾಜದಲ್ಲಿ ನಡೆಯಿತು. ಸಭೆಯಲ್ಲಿ ಶಾಸಕ ಡಾ. ಮಂತರ್ ಗೌಡ ಭಾಗವಹಿಸಿ, ಮೊದಲಿಗೆ ಕಾರ್ಯಕರ್ತರ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ಆಲಿಸಿದರು. ನಂತರ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಎದುರಾಗಲಿರುವುದರಿಂದ ಕಾರ್ಯಕರ್ತರು ಈಗಿನಿಂದಲೇ ಸನ್ನದ್ಧರಾಗಬೇಕು ಎಂದು ಕರೆ ನೀಡಿದರು. ಎಸ್‍ಐಆರ್ ಕುರಿತು ಹೆಚ್ಚು ಗಮನ ಹರಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದರು. ಇದಲ್ಲದೆ, ತಮ್ಮ ತಮ್ಮ ಪ್ರದೇಶಗಳಲ್ಲಿ ಸಮಸ್ಯೆಗೀಡಾದವರು ಹಾಗೂ ಅನಾರೋಗ್ಯಕ್ಕೆ ತುತ್ತಾದವರ ಬಗ್ಗೆ ಕಾಳಜಿ ವಹಿಸಿ ಸಾಧ್ಯವಾದಷ್ಟು ಸಹಾಯ ಮಾಡಬೇಕು. ಇಂತಹ ವಿಷಯಗಳನ್ನು ನನ್ನ ಗಮನಕ್ಕೂ ತರಬೇಕೆಂದು ತಿಳಿಸಿದರು. ಸ್ಥಳೀಯ ಬೂತ್ ಮಟ್ಟದಿಂದ ತಾಲೂಕು ಮಟ್ಟದವರೆಗೆ ಸಕ್ರಿಯ ಕಾರ್ಯಕರ್ತರನ್ನು ಗುರುತಿಸಿ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಬೇಕಾಗಿದೆ ಎಂದು ಹೇಳಿದರು. ನಗರದ ಸ್ವಚ್ಛತೆ ವಿಚಾರದಲ್ಲಿಯೂ ಎಲ್ಲರೂ ಹೆಚ್ಚಿನ…

Read More

ಸೋಮವಾರಪೇಟೆ ಜೂ.9 NEWS DESK : ಪಾಠದ ಜೊತೆಗೆ ಕೈತೋಟದಂತಹ ಕೃಷಿ ಚಟುವಟಿಕೆಯನ್ನು ಶಾಲೆಯಲ್ಲಿ ಕೈಗೊಂಡರೆ ರಸಾಯನಮುಕ್ತ ಆಹಾರ ಪದಾರ್ಥಗಳು ವಿದ್ಯಾರ್ಥಿಗಳಿಗೆ ದೊರಕುತ್ತದೆ ಎಂದು ಚೌಡ್ಲು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ, ಸಮಾಜ ಸೇವಕ ಸಿ.ಬಿ.ಸುರೇಶ್ ಶೆಟ್ಟಿ ಅಭಿಪ್ರಾಯಿಸಿದರು. ಐಗೂರು ಪ್ರೌಢಶಾಲೆಯ ಭುವನಕ್ಕೊಂದು ಸದನ ಇಕೋ ಕ್ಲಬ್ ವತಿಯಿಂದ ನೂತನವಾಗಿ ಶಾಲಾ ಆವರಣದಲ್ಲಿ ನಿರ್ಮಿಸಲಾದ ಕೈದೋಟಕ್ಕೆ ಉದಾರವಾಗಿ ಗೇಟ್ ಹಸ್ತಾಂತರಿಸಿ, ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ತಾಜಾ ತರಕಾರಿಗಳು, ಸೊಪ್ಪುಗಳ ಅಗತ್ಯತೆ ಇದೆ. ವಿದ್ಯಾರ್ಥಿಗಳು ಸ್ವತ: ಶಾಲಾ ಕೈತೋಟದಲ್ಲಿ ಇಂತಹುಗಳನ್ನು ಬೆಳೆಯುವ ಮೂಲಕ ತಮ್ಮ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬಹುದು. ವಿದ್ಯಾರ್ಥಿಗಳು ಆರ್ಥಿಕ ಸಮಸ್ಯೆಯಿಂದ ಎಂದಿಗೂ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಬಾರದು. ಪುಸ್ತಕಗಳು ಅಥವಾ ಶಾಲಾ ಶುಲ್ಕಗಳಿಗೆ ತಾನು ಸಹಾಯಹಸ್ತ ನೀಡುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕ ಎಂ.ಎಂ.ಯಶ್ವಂತ್ ಕುಮಾರ್, ಸಹ ಶಿಕ್ಷಕರು ಇದ್ದರು.

Read More

ಮಡಿಕೇರಿ ಜೂ.9 NEWS DESK : ನಗರದ ಜಿಲ್ಲಾ ಸಹಕಾರ ತರಬೇತಿ ಸಂಸ್ಥೆಯ ವಸತಿ ನಿಲಯದಲ್ಲಿ ವ್ಯಾಸ್ತವ್ಯ ಹೂಡಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ(ಎನ್‍ಡಿಆರ್‍ಎಫ್) ಅಧಿಕಾರಿಗಳು ಹಾಗೂ ಸಿಬ್ಬಂಧಿಯನ್ನು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಭೇಟಿ ಮಾಡಿ ಮಾಹಿತಿ ಪಡೆದರು. ಜಿಲ್ಲೆಯ ಸೂಕ್ಷ್ಮ ಹಾಗೂ ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಿಸಿ, ತುರ್ತು ಸಂದರ್ಭದಲ್ಲಿ ಜನ-ಜಾನುವಾರು ರಕ್ಷಣೆ ಮಾಡುವಲ್ಲಿ ಎನ್‍ಡಿಆರ್‍ಎಫ್ ತಂಡ ಕರ್ತವ್ಯ ನಿರ್ವಹಿಸಲಿದೆ. ಬೆಂಗಳೂರಿನ ರೀಜನಲ್ ರೆಸ್ಪಾನ್ಸ್ ಸೆಂಟರ್(ಆರ್‍ಆರ್‍ಸಿ) 10ನೇ ಬೆಟಾಲಿಯನ್‍ನ ಇನ್ಸ್‍ಪೆಕ್ಟರ್ ರಾಮ್ ಭಜ್ ಅವರ ನೇತೃತ್ವದಲ್ಲಿ ಎನ್‍ಡಿಆರ್‍ಎಫ್ ತಂಡ ಆಗಮಿಸಿದ್ದು, ಬೋಟ್‍ಗಳು, ಮರ ಕತ್ತರಿಸುವ ಯಂತ್ರ, ರ್ಯಾಪ್ಟ್, ಹಗ್ಗ, ಟೆಂಟ್, ಜೀವರಕ್ಷಕ ಜಾಕೆಟ್, ಸರ್ಚ್ ಲೈಟ್, ಆಕ್ಸಿಜನ್ ಜನರೇಟರ್, ಜೀವರಕ್ಷಕ ಔಷಧಗಳ ಸಿಗ್ನಲ್ ಯೂನಿಟ್‍ಗಳು ಹೀಗೆ ಪರಿಕರಗಳ ಜೊತೆ ಎನ್‍ಡಿಆರ್‍ಎಫ್ ತಂಡ ಒಳಗೊಂಡಿದೆ. ಈಗಾಗಲೇ ಜಿಲ್ಲೆಯಲ್ಲಿ ಮುಂಗಾರು ಆರಂಭವಾಗಿದ್ದು, ಸಾಧಾರಣ ಮಳೆಯಾಗುತ್ತಿದೆ. ಈ ಹಿನ್ನೆಲೆ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಪ್ರತೀ ವರ್ಷದಂತೆ ಈ ವರ್ಷವೂ ಎನ್‍ಡಿಆರ್‍ಎಫ್…

Read More