ಮಡಿಕೇರಿ NEWS DESK ಆ.16 : ಕಲೆ, ಸಾಹಿತ್ಯ ಮತ್ತು ಸಂಗೀತವು ಸಮಾಜವನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಭಾಷೆ ಮತ್ತು ಗಡಿಗಳನ್ನು ಮೀರಿ ಜನರನ್ನು ಭಾವನಾತ್ಮಕವಾಗಿ ಬೆಸೆಯುವ ಶಕ್ತಿ ಇವುಗಳಿಗೆ ಇದೆಯೆಂದು ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಟ್ರಸ್ಟಿ ಜಿ.ಚಿದ್ವಿಲಾಸ್ ದೃಢವಾಗಿ ನುಡಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲಾ ಲೇಖಕರ ಮತ್ತು ಕಲಾವಿದರ ಬಳಗ ಹಾಗೂ ಕೊಡಗು ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ವಿವಿಧ ಸಂಘ- ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಗರದ ಕೊಡಗು ಪತ್ರಿಕಾ ಭವನದಲ್ಲಿ ಆಯೋಜಿತ ದಿವಂಗತ ಎಸ್.ಜಾನಕಿಯವರಿಗೆ ಪುಷ್ಪ ನಮನ-ನುಡಿ ನಮನ- ಗಾನ ನಮನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂಗೀತ ಮತ್ತು ಕಲೆಗಳು ಜನರ ಮನಸ್ಸಿನಲ್ಲಿ ಏಕತೆಯ ಭಾವನೆಯನ್ನು ಮೂಡಿಸುತ್ತವೆ.ಜಾತಿ, ಧರ್ಮ ಹಾಗೂ ಪ್ರಾದೇಶಿಕ ಭೇದಗಳನ್ನು ಮರೆಸಿ ಜನರನ್ನು ಒಂದೇ ವೇದಿಕೆಗೆ ತರುತ್ತವೆ. ಸಂಗೀತ ಕ್ಷೇತ್ರಕ್ಕೆ ಹೆಚ್ಚಿನ ಪ್ರಾತಿನಿಧ್ಯ ಹಾಗೂ ಅಮೂಲ್ಯ ಕೊಡುಗೆ ನೀಡಿರುವ ಸಂಗೀತಗಾರರ ಸಾಧನೆಯ ಗುರುತಿಸುವಿಕೆ ಆಗದಿರುವುದು ಬೇಸರದ ಸಂಗತಿ ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ…
ಲೇಖಕ: admin
ಮಡಿಕೇರಿ NEWS DESK ಆ.16 : ವಿಶಿಷ್ಟ ಸಂಸ್ಕೃತಿಯ ಕೊಡಗು, ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ಮಂಡ್ಯ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳನ್ನು “ಲಾಯಲ್ ಪ್ರವಾಸೋದ್ಯಮ ಕೇಂದ್ರ”ವನ್ನಾಗಿ ಪರಿವರ್ತಿಸಿ, ಪ್ರವಾಸೋದ್ಯಮದ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಮಾಜಿ ಸಚಿವ ಅಡಗೂರು ಹೆಚ್.ವಿಶ್ವನಾಥ್ ಒತ್ತಾಯಿಸಿದ್ದಾರೆ. ಮಡಿಕೇರಿಯ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಸೋದ್ಯಮದ ಮೂಲಕ 6 ಜಿಲ್ಲೆಗಳಲ್ಲಿ ಆರ್ಥಿಕ ಚಟುವಟಿಕೆಗಳನ್ನು ಚುರುಕುಗೊಳಿಸಬೇಕು ಮತ್ತು ಉದ್ಯೋಗಾವಕಾಶವನ್ನು ಸೃಷ್ಟಿಸಬೇಕು ಎಂದರು. ಮೈಸೂರು ಅರಮನೆ ಮತ್ತು ಅಲ್ಲಿನ ಸಂಸ್ಕೃತಿ ಪರಂಪರೆಗಳು ವಿಶ್ವ ಪ್ರಸಿದ್ಧಿಯನ್ನು ಪಡೆದಿದೆ. ಅಂತಹ ಅರಮನೆ ಪ್ರಸ್ತುತ ಕೇವಲ ದಸರ ಉತ್ಸವಕ್ಕೆ ಮಾತ್ರ ಸೀಮಿತವಾಗಿರುವುದು ಬೇಸರದ ವಿಚಾರ. ಈ ಹಿನ್ನೆಲೆ ಸೂಚಿತ ಎಲ್ಲಾ ಜಿಲ್ಲೆಗಳನ್ನು ಒಳಗೊಂಡ ಲಾಯಲ್ ಪ್ರವಾಸೋದ್ಯಮ ಕೇಂದ್ರದ ಬಗ್ಗೆ 2013ರ ಆಯವ್ಯಯದಲ್ಲೆ ಪ್ರಸ್ತಾಪವಾಗಿತ್ತು. ಆದರೆ ಇದು ಇಲ್ಲಿಯವರೆಗೆ ಜಾರಿಗೆ ಬಂದಿಲ್ಲವೆAದು ಬೇಸರ ವ್ಯಕ್ತಪಡಿಸಿದರು. ಸುಂದರ ಪರಿಸರ, ಸಂಸ್ಕೃತಿಯನ್ನು ಹೊಂದಿರುವ ಕೊಡಗು ಜಿಲ್ಲೆಯನ್ನು ಒಳಗೊಂಡ 6 ಜಿಲ್ಲೆಗಳಲ್ಲಿನ ಪ್ರವಾಸೋದ್ಯಮದ ಬೆಳವಣಿಗೆಯನ್ನು ರಾಜ್ಯದ…
ಕುಶಾಲನಗರ, ಆ.15 NEWS DESK : ಸೈನಿಕ ಶಾಲೆ ಕೊಡಗಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸೇನಾ ವೈಭವ ಹಾಗೂ ದೇಶಭಕ್ತಿಯ ಸಂಭ್ರಮದೊಂದಿಗೆ ಆಚರಿಸಲಾಯಿತು. ಶಾಲೆಯ ಜನರಲ್ ತಿಮ್ಮಯ್ಯ ಪರೇಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿ, ನಿವೃತ್ತ ಯೋಧರು ಹಾಗೂ ಗಣ್ಯರು ಪಾಲ್ಗೊಂಡಿದ್ದರು. ಬೆಂಗಳೂರಿನ ಏರ್ ಫೋರ್ಸ್ ಕೊಡಗು ಅಸೋಸಿಯೇಷನ್ ಅಧ್ಯಕ್ಷ ಏರ್ ಮಾರ್ಷಲ್ ಬಾಲ್ತಿಕಲಾಂಡ ಯು. ಚೆಂಗಪ್ಪ (ನಿವೃತ್ತ), ಪಿವಿಎಸ್ಎಂ, ಎವಿಎಸ್ಎಂ, ವಿಎಸ್ಎಂ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಶಾಲೆಯ ಪ್ರಾಂಶುಪಾಲ ಕರ್ನಲ್ ಅಮರ್ ಜೀತ್ ಸಿಂಗ್ ಹಾಗೂ ಉಪ ಪ್ರಾಂಶುಪಾಲ ವಿಂಗ್ ಕಮಾಂಡರ್ ಮಹಮದ್ ಷಾಜಿ ಅವರು ಮುಖ್ಯ ಅತಿಥಿಗಳನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಿದರು. ಮುಖ್ಯ ಅತಿಥಿಗಳು ಶಾಲೆಯ ಯುದ್ಧ ಸ್ಮಾರಕಕ್ಕೆ ಪುಷ್ಪಗುಚ್ಛ ಸಮರ್ಪಿಸಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು. ಬಳಿಕ ಜನರಲ್ ತಿಮ್ಮಯ್ಯ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಮೆನನ್, ಕಾರ್ಯಪ್ಪ, ಕಟಾರಿ ಹಾಗೂ ಸುಬ್ರತೋ ಹೌಸ್ಗಳ ತುಕಡಿಗಳ ಪರಿವೀಕ್ಷಣೆ ನಡೆಸಿದರು. ಪರೇಡ್ ಕಮಾಂಡರ್ ಕೆಡೆಟ್ ಸಿದ್ದಾಂತ್…
ಮಡಿಕೇರಿ ಆ.15 NEWS DESK : ಮಡಿಕೇರಿ ಕೊಡವ ಸಮಾಜದ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಧ್ವಜವಂದನೆ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ಸಮಾಜದ ಉಪಾಧ್ಯಕ್ಷ ಕೇಕಡ ವಿಜುದೇವಯ್ಯ, ಕಾರ್ಯದರ್ಶಿ ಬೊಪ್ಪಂಡ ಸರಳಾ ಕರುಂಬಯ್ಯ, ನಿರ್ದೇಶಕರಾದ ನಂದಿನೆರವಂಡ ರವಿ ಬಸಪ್ಪ, ಕಾಳಚಂಡ ಅಪ್ಪಣ್ಣ, ಮಂಡಿರ ಸದಮುದ್ದಪ್ಪ, ಮೂವೆರ ಜಯರಾಂ, ಪೆಮ್ಮುಡಿಯಂಡ ಉತ್ತಪ್ಪ, ಪುಲ್ಲೆರ ವಸಂತ, ವ್ಯವಸ್ಥಾಪಕಿ ಮೈನಾ ಬೋಜಮ್ಮ, ಸೌಹಾರ್ದ ಸಹಕಾರ ಸಂಘದ ಉಪಾಧ್ಯಕ್ಷ ಕುಡುವಂಡ ಉತ್ತಪ್ಪ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿಮಾ, ಕೊಡವ ವಿದ್ಯಾನಿಧಿಯ ವ್ಯವಸ್ಥಾಪಕ ಮೇದುರ ಕಾವೇರಪ್ಪ, ನಾಟೋಳಂಡ ಪ್ರಕಾಶ್, ಕುಪಂಡ ವಸಂತ ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಮಡಿಕೇರಿ ಆ.15 NEWS DESK : ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಶಾಲಾ ವಿದ್ಯಾರ್ಥಿಗಳು ಧ್ವಜವಂದನೆ ಸಲ್ಲಿಸಿದರು. ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ಹಾಗೂ ಶಾಲೆಯ ಪ್ರಾಂಶುಪಾಲೆ ಬಾಳೆಯಡ ಸವಿತ ಪೂವಯ್ಯ ಅವರು ಸ್ವಾತಂತ್ರ್ಯ ದಿನದ ಮಹತ್ವದ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಕಾರ್ಯಾಧ್ಯಕ್ಷ ಕೇಕಡ ವಿಜುದೇವಯ್ಯ, ಕರೆಸ್ಪಾಂಡೆಂಟ್ ಕನ್ನಂಡ ಕವಿತಾ ಬೊಳ್ಳಪ್ಪ, ನಿರ್ದೇಶಕರಾದ ಬೊಪ್ಪಂಡ ಸರಳಾ ಕರುಂಬಯ್ಯ, ನಂದಿನೆರವಂಡ ರವಿ ಬಸಪ್ಪ, ಕಾಳಚಂಡ ಅಪ್ಪಣ್ಣ, ಮಂಡಿರ ಸದಮುದ್ದಪ್ಪ, ಮೂವೆರ ಜಯರಾಂ, ಪೆಮ್ಮುಡಿಯಂಡ ಉತ್ತಪ್ಪ ಹಾಗೂ ಪುಲ್ಲೆರ ವಸಂತ ಸೇರಿದಂತೆ ಶಾಲೆಯ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕ ವೃಂದ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಚೆಟ್ಟಳ್ಳಿ ಆ.15 NEWS DESK : ಚೆಟ್ಟಳ್ಳಿ ಪೊಲೀಸ್ ಉಪಠಾಣೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಅಂಗವಾಗಿ ಎಎಸ್ಐ ಪಟ್ರಪಂಡ ಮೊಣ್ಣಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳಾದ ವಿಠಲ್ ಒಡೆಯರ್ ಹಾಗೂ ಬಾಳುಗೋಡ ಪಾಟಿಲ್ ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದರು.
ಕುಶಾಲನಗರ ಆ.15 NEWS DESK : ಕುಶಾಲನಗರದ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಸ್ವಾತಂತ್ರೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ವಿಶೇಷ ಆಫರ್ಗಳು ಲಭ್ಯವಿದ್ದು ಆಗಸ್ಟ್ 15ರಿಂದ 23ರವರೆಗೆ ನಡೆಯುವ ಈ ವಿಶೇಷ ಮಾರಾಟ ಮೇಳದಲ್ಲಿ ಗ್ರಾಹಕರಿಗೆ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳ ಖರೀದಿಗೆ ಆಕರ್ಷಕ ರಿಯಾಯಿತಿಗಳನ್ನು ನೀಡಲಾಗುತ್ತಿದೆ. ಸಂಸ್ಥೆಯು 1957ರಿಂದ ಗುಣಮಟ್ಟ, ವಿಶ್ವಾಸ ಹಾಗೂ ವಿನೂತನ ವಿನ್ಯಾಸಗಳ ಮೂಲಕ ಗ್ರಾಹಕರ ಮೆಚ್ಚುಗೆಗಳಿಸಿಕೊಂಡಿದೆ. ಈ ಅವಧಿಯಲ್ಲಿ ಚಿನ್ನದ ಆಭರಣಗಳ VA ಮೇಲೆ ಪ್ರತೀ ಗ್ರಾಂಗೆ ರೂ.600 ವರೆಗೆ ರಿಯಾಯಿತಿ, ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್ಗೆ ಫ್ಲಾಟ್ ರೂ.7000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿಗೆ ಫ್ಲಾಟ್ ರೂ.8000 ರಿಯಾಯಿತಿ ನೀಡಲಾಗುತ್ತಿದೆ. ಜೊತೆಗೆ ಹಳೆಯ ಚಿನ್ನಾಭರಣಗಳ ಎಕ್ಸ್ಚೇಂಜ್ ದರದ ಮೇಲೆ 0% ಕಡಿತದ ಸೌಲಭ್ಯವೂ ಲಭ್ಯವಿದೆ. ಇದರೊಂದಿಗೆ ಆಕರ್ಷಕ ಹಳದಿ ಟ್ಯಾಗ್ ಸಂಗ್ರಹದಲ್ಲಿ 10%ರಿಂದ ಪ್ರಾರಂಭವಾಗುವ ವಿಶೇಷ ರಿಯಾಯಿತಿಯೊಂದಿಗೆ ಸುಂದರ ನೆಕ್ಸಸ್, ಹಾರ, ಚೈನ್, ಉಂಗುರ, ಬಳೆ ಸೇರಿದಂತೆ ವೈವಿಧ್ಯಮಯ…
ವಿರಾಜಪೇಟೆ ಆ.15 NEWS DESK : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ರಾಜಕೀಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಜಿಲ್ಲೆ ಹಾಗೂ ಕ್ಷೇತ್ರಕ್ಕೆ ಆಗಮಿಸಿದ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರನ್ನು ಕ್ಷೇತ್ರದ ಹೆಬ್ಬಾಗಿಲು ಆನೆಚೌಕೂರು ಗೇಟ್ ಬಳಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು. ಶಾಸಕರ ಆಗಮನದ ಹಿನ್ನೆಲೆಯಲ್ಲಿ ಆನೆಚೌಕೂರು ಗೇಟ್ ಬಳಿ ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಶಾಸಕರನ್ನು ಕಂಡೊಡನೆ ಆತ್ಮೀಯವಾಗಿ ಅಭಿನಂದಿಸಿ, ಜಯಘೋಷಗಳನ್ನು ಕೂಗಿ ಕ್ಷೇತ್ರಕ್ಕೆ ಬರಮಾಡಿಕೊಂಡರು. ಶಾಸಕರ ಸಹೋದರ ಅಜ್ಜಿಕುಟ್ಟಿರ ನರೇನ್ ಕಾರ್ಯಪ್ಪ ಹಾಗೂ ಅಭಿಮಾನಿಗಳಾದ ಮಿದೇರಿರ ನವೀನ್, ಪಟ್ಟಡ ರಂಜಿ ಪೂಣಚ್ಚ, ಟಾಟು ಮೊಣ್ಣಪ್ಪ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಪೊನ್ನಣ್ಣ ಅವರಿಗೆ ಶುಭ ಹಾರೈಸಿದರು. ಕಾರ್ಯಕರ್ತರು ಹಾಗೂ ಅಭಿಮಾನಿಗಳ ಉತ್ಸಾಹದ ನಡುವೆ ಶಾಸಕರಿಗೆ ಆತ್ಮೀಯ ಸ್ವಾಗತ ದೊರೆಯಿತು.
ಮಡಿಕೇರಿ ಆ.15 NEWS DESK : ರಾಜ್ಯ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ರಾಜ್ಯದ ಮತ್ತು ಜಿಲ್ಲೆಯ ಜನತೆಗೆ ಹೊಸ ಚೈತನ್ಯವನ್ನ ನೀಡಿವೆ. ಜನಪರ ಯೋಜನೆಗಳ ಯಶಸ್ಸಿನ ಪ್ರತಿಫಲವನ್ನು ಸಂತೃಪ್ತ ಜನೆತೆಯ ಮುಖದಲ್ಲಿ ಸ್ಪಷ್ಟವಾಗಿ ಕಾಣಬಹುದಾಗಿದೆ ಎಂದು ಕೃಷಿ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಅವರು ತಿಳಿಸಿದ್ದಾರೆ. ನಗರದ ಕೋಟೆ ಆವರಣದಲ್ಲಿ ಕೊಡಗು ಜಿಲ್ಲಾಡಳಿತದ ವತಿಯಿಂದ ನಡೆದ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಸಚಿವರು ಮಾತನಾಡಿದರು. ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆಗಳನ್ನು ರಾಜ್ಯದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು “ಬೆಂಗಳೂರು ನಮ್ಮ ಕಿರೀಟ, ಕರ್ನಾಟಕ ನಮ್ಮ ಹೃದಯ” ಎಂಬ ಮಾತನ್ನು ಹೇಳಿದ್ದಾರೆ. ಇದು ಮುಖ್ಯಮಂತ್ರಿಗಳ ದೂರದೃಷ್ಟಿಯ ಅಭಿವೃದ್ಧಿ ದೃಷ್ಟಿಕೋನ. ಕರ್ನಾಟಕದ ಅಭಿವೃದ್ಧಿಯನ್ನು ಬೆಂಗಳೂರು ಕೇಂದ್ರಿತವಾಗಿರಿಸದೆ, ರಾಜ್ಯದ ಪ್ರತಿಯೊಂದು ಪ್ರದೇಶಕ್ಕೂ ಅಭಿವೃದ್ಧಿಯ ಅವಕಾಶಗಳನ್ನು ವಿಸ್ತರಿಸಬೇಕು ಎಂದು ನಮ್ಮ ಸರ್ಕಾರ ನಾಡಿನ ಸಮಗ್ರ ಅಭಿವೃದ್ಧಿಗೆ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಈ…
ಸೋಮವಾರಪೇಟೆ ಆ.15 NEWS DESK : 2047ರ ವಿಕಸಿತ ಭಾರತ ನಿರ್ಮಾಣಕ್ಕೆ ಸರ್ವರು ಸಂಕಲ್ಪ ತೊಡಬೇಕೆಂದು ಪತ್ರಕರ್ತ ಎಸ್.ಮಹೇಶ್ ತಿಳಿಸಿದರು. ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ ಹಾಗೂ ಟ್ರೇಡ್ ಯೂನಿಯನ್ ವತಿಯಿಂದ ಪಟ್ಟಣದ ಜಿ.ಸಿ.ವೇದಿಕೆಯಲ್ಲಿ ಆಯೋಜಿಸಿದ್ದ 80ನೆ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಈ ರಾಷ್ಟ್ರದ ಮಹಾನ್ ನಾಯಕರು,ಸ್ವಾತಂತ್ರ್ಯಕ್ಕಾಗಿ, ಹೋರಾಡಿ ಪ್ರಾಣತೆತ್ತ ಫಲವಾಗಿ ಇಂದು ನಾವು ಈ ದೇಶದಲ್ಲಿ ನೆಮ್ಮದಿಯಿಂದ ಜೀವಿಸಲು ಸಾಧ್ಯವಾಗಿದೆ ಎಂದರು. ಅಂದು ಸ್ವಾತಂತ್ರಕ್ಕಾಗಿ ಪರಕೀಯರಾದ ಬ್ರಿಟೀಷರವಿರುದ್ದ ಹೋರಾಡಿದರೆ ಇಂದು ದೇಶದ ಆಂತರಿಕ ವಿಚಿದ್ರಕಾರಕ ಶಕ್ತಿಗಳವಿರುದ್ದ ಹೋರಾಟಮಾಡಬೇಕಾದ ಪರಿಸ್ಥಿತಿಬಂದಿರುವುದು ವಿಷಾದನೀಯವೆಂದರು. 2047ಕ್ಕೆ ಈ ದೇಶಕ್ಕೆ ಸ್ವಾತಂತ್ರ ಬಂದು ಶತಮಾನ ಪೂರೈಸುವ ಹಿನ್ನಲೆಯಲ್ಲಿ ಈ ದೇಶದ ಪಧಾನಿಗಳಾದ ನರೇಂದ್ರಮೋದಿಯವರು ಆರ್ಥಿಕಾಭಿವೃದ್ಧಿ,ಸ್ವಾವಂಬನೆ, ಅಂತರ್ಘತಾಭಿವೃದ್ದಿ , ಸುಸ್ಥಿರತೆ ಮುಂತಾದ ಅಧಿವೃದ್ಧಿಯ ವಿಕಸಿತ ಭಾರತ ನಿರ್ಮಾಣಕ್ಕೆ ಪಣತೊತ್ತಿದ್ದಾರೆ ಈ ದೇಶದ ಪ್ರಜೆಗಳಾದ ನಾವುಗಳು ಅವರೊಡನೆ ಕೈಜೋಡಿಸಬೇಕೆಂದರು. 1873 ರಲ್ಲಿ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆಬಳಿಯ ಹೆಮ್ಮನೆ ಗ್ರಾಮದ ಪುಟ್ಟಬಸಪ್ಪ ಅಲಿಯಾಸ್ ಕಲ್ಯಾಣ…






