ಲೇಖಕ: admin

ಕಲ್ಯಾಣಿ: ರಣಜಿ ಟ್ರೋಫಿ ಕ್ರಿಕೆಟ್ ಇತಿಹಾಸದಲ್ಲಿ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಮೊಹಮ್ಮದ್ ಶಮಿ ಅವರಂತಹ ಘಟಾನುಘಟಿ ಬೌಲರ್ ಮತ್ತು ಅಭಿಮನ್ಯು ಈಶ್ವರನ್ ಅವರಂತಹ ಬ್ಯಾಟರ್‌ಗಳಿದ್ದ ಬಲಿಷ್ಠ ಬಂಗಾಳ ತಂಡವನ್ನು 6 ವಿಕೆಟ್‌ಗಳಿಂದ ಪರಾಭವಗೊಳಿಸುವ ಮೂಲಕ ಜಮ್ಮು ಮತ್ತು ಕಾಶ್ಮೀರ ತಂಡ ಮೊದಲ ಬಾರಿಗೆ ರಣಜಿ ಫೈನಲ್ ತಲುಪಿ ಇತಿಹಾಸ ನಿರ್ಮಿಸಿದೆ. ಪಂದ್ಯದ ಗತಿಯನ್ನೇ ಬದಲಿಸಿದ ಅಖಿಬ್ ನಬಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಬಂಗಾಳ ತಂಡ, ಸುದೀಪ್ ಕುಮಾರ್ ಘರಮಿ (146) ಅವರ ಅಮೋಘ ಶತಕದ ನೆರವಿನಿಂದ 328 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಜಮ್ಮು ಕಾಶ್ಮೀರ ಮೊದಲ ಇನ್ನಿಂಗ್ಸ್‌ನಲ್ಲಿ 302 ರನ್ ಗಳಿಸಿ 26 ರನ್‌ಗಳ ಹಿನ್ನಡೆ ಅನುಭವಿಸಿತು. ಬಂಗಾಳದ ಪರ ವೇಗಿ ಮೊಹಮ್ಮದ್ ಶಮಿ ಭರ್ಜರಿ ಬೌಲಿಂಗ್ ಪ್ರದರ್ಶಿಸಿ 90 ರನ್ ನೀಡಿ 8 ವಿಕೆಟ್ ಕಬಳಿಸಿ ಸಂಚಲನ ಮೂಡಿಸಿದರು. ಆದರೆ, ಎರಡನೇ ಇನ್ನಿಂಗ್ಸ್‌ನಲ್ಲಿ ಕಣಿವೆ ರಾಜ್ಯದ ಬೌಲರ್‌ಗಳು ಕೆರಳಿದ…

Read More

ಬೆಂಗಳೂರು: ವೇತನ ಪರಿಷ್ಕರಣೆ ಹಾಗೂ ಬಾಕಿ ಹಣ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ನೌಕರರು ಗುರುವಾರ, ಫೆಬ್ರವರಿ 19 ರಂದು ‘ಬೆಂಗಳೂರು ಚಲೋ’ ಬೃಹತ್ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಇದರಿಂದಾಗಿ ರಾಜ್ಯಾದ್ಯಂತ ಸರ್ಕಾರಿ ಬಸ್‌ಗಳ ಸಂಚಾರದಲ್ಲಿ ದೊಡ್ಡ ಮಟ್ಟದ ವ್ಯತ್ಯಯ ಉಂಟಾಗುವ ಆತಂಕ ಎದುರಾಗಿದೆ. ಹೋರಾಟದ ಹಿನ್ನೆಲೆ ಜನವರಿ 29 ರಂದು ನಿಗದಿಯಾಗಿದ್ದ ಈ ಪ್ರತಿಭಟನೆಯನ್ನು ಮುಖಂಡ ಅನಂತ ಸುಬ್ಬರಾವ್‌ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ಅಧಿಕೃತವಾಗಿ ಹೋರಾಟಕ್ಕೆ ಇಳಿದಿದೆ. ಗುರುವಾರ ಬೆಳಗ್ಗೆ ಸಾವಿರಾರು ನೌಕರರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ (Freedom Park) ಜಮಾಯಿಸಿ ಬೃಹತ್ ಮೆರವಣಿಗೆ ನಡೆಸಲಿದ್ದಾರೆ. ನೌಕರರ ಪ್ರಮುಖ ಬೇಡಿಕೆಗಳು: ವೇತನ ಹಿಂಬಾಕಿ: 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು. ವೇತನ ಪರಿಷ್ಕರಣೆ: 2024ರ ಜನವರಿ 1ರಿಂದ…

Read More

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ತೀವ್ರವಾಗಿರುವ ಬಿಸಿಲಿನ ತಾಪದಿಂದ ಕಂಗಾಲಾಗಿರುವ ಜನರಿಗೆ ಹವಾಮಾನ ಇಲಾಖೆಯು ಸಿಹಿಸುದ್ದಿ ನೀಡಿದೆ. ಶ್ರೀಲಂಕಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ, ಮುಂದಿನ 2-3 ದಿನಗಳಲ್ಲಿ ದಕ್ಷಿಣ ಕನ್ನಡ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಲಭ್ಯವಾಗಿದೆ. ವಾಯುಭಾರ ಕುಸಿತದ ಪ್ರಭಾವ ಫೆಬ್ರವರಿ 18, 2026 ರ ಹವಾಮಾನ ವರದಿಯಂತೆ, ಸಮಭಾಜಕ ಹಿಂದೂ ಮಹಾಸಾಗರ ಮತ್ತು ನೈಋತ್ಯ ಬಂಗಾಳ ಕೊಲ್ಲಿಯ ಮೇಲೆ ವಾಯುಭಾರ ಕುಸಿತದ ಪ್ರದೇಶವು ಮುಂದುವರಿದಿದೆ. ಈ ವ್ಯವಸ್ಥೆಯು ಮುಂದಿನ 24 ಗಂಟೆಗಳಲ್ಲಿ ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಶ್ರೀಲಂಕಾದತ್ತ ಚಲಿಸುವ ಸಾಧ್ಯತೆಯಿದೆ. ಇದರ ನೇರ ಪರಿಣಾಮವಾಗಿ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಮೋಡಗಳು ಆವರಿಸಲಿವೆ. ಪ್ರಾದೇಶಿಕ ಹವಾಮಾನ ಮುನ್ಸೂಚನೆ ದಕ್ಷಿಣ ಕನ್ನಡ: ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಆದರೆ ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಒಣ ಹವೆ ಮುಂದುವರಿಯಲಿದೆ. ಮಲೆನಾಡು: ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ…

Read More

ಮಡಿಕೇರಿ NEWS DESK ಫೆ.18 : ಭಾಷೆ ಯಾವುದೇ ಇರಲಿ, ಕೃತಿ ರಚನೆಕಾರರು ತಪ್ಪುಗಳು ನುಸುಳದಂತೆ ಎಚ್ಚರ ವಹಿಸಬೇಕು ಮತ್ತು ಭಾಷಾ ಪರಿಣಿತರಿಂದ ಪುಸ್ತಕದ ಕುರಿತು ಮೊದಲು ಅಭಿಪ್ರಾಯ ಸಂಗ್ರಹಿಸಬೇಕು ಎಂದು ಹಿರಿಯ ಸಾಹಿತಿ ಹಾಗೂ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಬಾಚರಣಿಯಂಡ ಅಪ್ಪಣ್ಣ ಅವರು ಕಿವಿಮಾತು ಹೇಳಿದ್ದಾರೆ. ಕೊಡವ ಮಕ್ಕಡ ಕೂಟದ 13ನೇ ವಾರ್ಷಿಕೋತ್ಸವದ ಪ್ರಯುಕ್ತ ನಗರದ ಪತ್ರಿಕಾ ಭವನದಲ್ಲಿ 124 ಮತ್ತು 125ನೇ ಪುಸ್ತಕದ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮೂಕೋಂಡ ಪುಷ್ಪ ದಮಯಂತಿ ಪೂಣಚ್ಚ ಅವರು ರಚಿಸಿರುವ 4ನೇ ಪುಸ್ತಕ ‘ನೆನಪಿನ ಅಲೆ’ ಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಬಾಚರಣಿಯಂಡ ಅಪ್ಪಣ್ಣ ಅವರು ಇತ್ತೀಚಿನ ದಿನಗಳಲ್ಲಿ ಪತ್ರಿಕೆ ಹಾಗೂ ಪುಸ್ತಕಗಳಲ್ಲಿ ಹೆಚ್ಚು ತಪ್ಪುಗಳು ನುಸುಳುತ್ತಿರುವ ಕುರಿತು ಬೇಸರ ವ್ಯಕ್ತಪಡಿಸಿದರು. ಬರಹಗಾರರು ತಾವು ಬರೆದ ಪುಸ್ತಕದಲ್ಲಿನ ತಪ್ಪುಗಳನ್ನು ಪರಿಶೀಲಿಸಲು ತಮಗೆ ವಿಶ್ವಾಸ ಇರುವವರಿಗೆ ಮೊದಲು ಓದಲು ನೀಡಬೇಕು. ತಪ್ಪುಗಳನ್ನು ಸರಿಪಡಿಸಿದ ನಂತರವೇ ಪುಸ್ತಕಗಳನ್ನು ಬಿಡುಗಡೆಗೊಳಿಸಿ ಓದುಗರಿಗೆ…

Read More

ನಾಪೋಕ್ಲು NEWS DESK ಫೆ.18 : :  ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ  ಕಾಫಿ ಬೆಳೆಯ ಬಗ್ಗೆ ಬೆಳೆಗಾರರಿಗೆ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.  ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಆಯೋಜಿಸಲಾದ  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ ಆವರು ವಹಿಸಿ ಕಾರ್ಯಗಾರದ ದ್ಯೆಯೋದ್ದೇಶ  ಬಗ್ಗೆ ಮಾತನಾಡಿದರು.     ಸಂಪನ್ಮೂಲ ವ್ಯಕ್ತಿಗಳಾದ ಗಿ  ಕಾಫಿ ಸಂಶೋಧನಾ ಸಂಸ್ಥೆ ಚಟ್ಟಳ್ಳಿಯ ವಿಜ್ಞಾನಿಗಳಾದ  ಡಾ| ಎಸ್ ಎ ನಾಡಫ್, ಡಾ| ಶಿವಲಿಂಗು ಬಿ ಆರ್  , ಪವನ್ ರವರು ರೈತ ಸದಸ್ಯರಿಗೆ ಕಾಫಿ ಬೆಳೆಯ ಬಗ್ಗೆ  ಸ್ಲೈಡ್ (ಕಿರು ಚಿತ್ರ ಪರದೆ) ಮೂಲಕ  ವಿಸ್ತೃತವಾದ ಮಾಹಿತಿಯನ್ನು ನೀಡಿದರು. ವೇದಿಕೆಯಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಅಶೋಕ ಪಿ ಎಂ , ಸಕ್ಡೆನ್ ಕಾಫಿ ಇಂಡಿಯಾ ಲಿಮಿಟೆಡ್ ಕುಶಾಲನಗರದ ಸಂಯೋಜಕರಾದ ಪ್ರಕೃತಿ ಪೊನ್ನಮ್ಮ ಹಾಗೂ ಉದಯ್ ಕುಮಾರ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಗಾರದಲ್ಲಿ ಸಂಘದ ನಿರ್ದೇಶಕರುಗಳು ಹಾಗೂ ಆಸಕ್ತ ರೈತ ಸದಸ್ಯರು ಭಾಗವಹಿಸಿದ್ದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ…

Read More

ವಿರಾಜಪೇಟೆ ಫೆ.17 NEWS DESK : ಕೊಟ್ಟೋಳಿಯ ಶ್ರೀ ಧಾರಾ ಮಹೇಶ್ವರ ದೇವಾಲಯದಲ್ಲಿ ಶಿವರಾತ್ರಿ ಉತ್ಸವು ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯದಲ್ಲಿ ಧಾರಾ ಮಹೇಶ್ವರನಿಗೆ ರುದ್ರಾಭಿóಶೇಕ, ಮಹಾ ಮಂಗಳಾರತಿ, ದೇವರ ಜಳಕ, ನೃತ್ಯಬಲಿ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿತು. ಇದೇ ಸಂದರ್ಭ ಎತ್ತ್ ಪೋರಾಟ್ ನಡೆಯಿತು. ದೇವತಕ್ಕರಾಗಿ ಕೋದಂಡ ಕುಟುಂಬ ಹಾಗೂ ¨ಂಢಾರ ತಕ್ಕರಾಗಿ ಚಂಗಚಂಡ ಕುಟುಂಬ ಕಾರ್ಯನಿರ್ವಹಿಸಿದರು. ಶಿವರಾತ್ರಿ ಉತ್ಸವದ ಸಲುವಾಗಿ ಕದನೂರು ಕೊಟ್ಟೋಳಿ ಕೊಡವ ಸಂಘ ಹಾಗೂ ಇತರ ಸಂಘ ಸಂಸ್ಥೆಗಳ ವತಿಯಿಂದ ಅನ್ನ ಸಂತರ್ಪಣೆ ನಡೆಯಿತು. ಜೈ ಭಾರತ್ ಆಟೋ ಚಾಲಕರ ಸಂಘದ ವತಿಯಿಂದ ನೆರೆದ ಭಕ್ತಾಧಿಗಳಿಗಳಿಗೆ ಮಜ್ಜಿಗೆ ವಿತರಣೆ ಮಾಡಲಾಯಿತು. ಜೈ ಭಾರತ್ ಆಟೋ ಚಾಲಕರ ಸಂಘದ ಅಧ್ಯಕ್ಷ ಶಿವು, ಗೌರವಾಧ್ಯಕ್ಷರಾದ ಪ್ರವೀಣ್ ಶೇಟ್ ಮಜ್ಜಿಗೆ ವಿತರಣೆ ಕಾರ್ಯ ನಿರ್ವಹಿಸಿದರು. ವಿವಿಧೆಡೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಂಡಿದ್ದರು. ಈ ಸಂದರ್ಭದ ದೇವಾಲಯದ ಆಡಳಿತ ಮಂಡಳಿಯ ಕಾರ್ಯದರ್ಶಿ ಚಂಗಚಂಡ ಚೇತನ್ ಬೆಳ್ಯಪ್ಪ, ಸಹ ಕಾರ್ಯದರ್ಶೀ ವಿಶ್ವನಾಥ್ ಬಬ್ಬಿ,…

Read More

ಮಡಿಕೇರಿ ಫೆ.17 NEWS DESK : ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ದುಬಾರೆ ಪ್ರಕೃತಿದತ್ತ ಸೌಂದರ್ಯದೊಂದಿಗೆ ಎಲ್ಲರನ್ನು ತನ್ನತ್ತ ಸೆಳೆಯುತ್ತದೆ. ಸಾಕಾನೆ ಶಿಬಿರವನ್ನು ಕಂಡು ಜನ ಬೆರಗಾಗುತ್ತಾರೆ. ಕಾವೇರಿ ನೀರಿಗೆ ಮನಸೋಲುತ್ತಾರೆ. ರ‍್ಯಾಫ್ಟಿಂಗ್‌ನೊಂದಿಗೆ ಜಲಕ್ರೀಡೆಯ ಅನುಭವವು ಹಿತ ನೀಡುತ್ತದೆ. ಆದರೆ, ನದಿ ದಾಟಿ, ಸಾಕಾನೆ ಶಿಬಿರ ಕಳೆದ ನಂತರದ ಅಲ್ಲಿಯೇ ತಲತಲಾಂತರಗಳಿಂದ ಬದುಕು ಕಟ್ಟಿಕೊಂಡಿರುವ ಬುಡಕಟ್ಟು ಜನರ ದಯನೀಯ ಸ್ಥಿತಿ ಯಾರಿಗೂ ಬೇಡವಾಗಿದೆ. ಸರಕಾರ, ಅಧಿಕಾರಿಗಳು ಹಾಗೂ ಆಡಳಿತದ ದಿವ್ಯನಿರ್ಲಕ್ಷ್ಯಕ್ಕೆ ಒಳಗಾಗಿರುವ ದುಬಾರೆ ಹಾಡಿಯ ನಿವಾಸಿಗಳ ಸಮಸ್ಯೆಯನ್ನು ಸಂಬಂಧಪಟ್ಟವರ ಗಮನ ಸೆಳೆಯುವ ನಿಟ್ಟಿನಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕೊಡಗು ಪ್ರೆಸ್‍ಕ್ಲಬ್ ಹಾಗೂ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ದುಬಾರೆ ಹಾಡಿಯಲ್ಲಿ ಪತ್ರಕರ್ತರ ನಡೆ ಹಾಡಿ ಕಡೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಅಂಗನವಾಡಿಯಿದ್ದರು ಶಿಕ್ಷಕರಿಲ್ಲ, ದಾರಿಯಿದ್ದರೂ ಗುಣಮಟ್ಟದ ರಸ್ತೆಯಿಲ್ಲ, ಜಾಗವಿದ್ದರೂ ವಾಸಿಸಲು ಯೋಗ್ಯವಿಲ್ಲದ ಮನೆ ಇಲ್ಲದ ಜನರ ಗೋಳನ್ನು ಪತ್ರಕರ್ತರು ತಿಳಿದುಕೊಂಡರು. ಈ ನಿಟ್ಟಿನಲ್ಲಿ ಐಟಿಡಿಪಿ ಅಧಿಕಾರಿ ಹೊನ್ನೇಗೌಡ,…

Read More

ಕುಶಾಲನಗರ ಫೆ.17 NEWS DESK : ಕೊಡಗು ವಿಶ್ವವಿದ್ಯಾಲಯದ ದ್ವಿತೀಯ ಮತ್ತು ಚತುರ್ಥ ಸೆಮಿಸ್ಟರ್ ಬಿ.ಎಡ್ ಪದವಿ ಮತ್ತು ಸ್ನಾತಕ ಪದವಿ ಪರೀಕ್ಷಾ ಫಲಿತಾಂಶವನ್ನು ಪರೀಕ್ಷಾ ಫಲಿತಾಂಶವನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಅಶೋಕ ಸಂಗಪ್ಪ ಆಲೂರ ಅವರು ಆನ್ಲೈನ್ ತಂತ್ರಾಂಶದಲ್ಲಿ ವಿಶ್ವವಿದ್ಯಾಲಯದ ವೆಬ್‌ಸೈಟ್‌ನಲ್ಲಿ ಅಧಿಕೃತವಾಗಿ ಪ್ರಕಟಿಸಿದರು. ಕೊಡಗು ವಿಶ್ವವಿದ್ಯಾಲಯದ ಘಟಕ ಮತ್ತು ಸಂಯೋಜಿತ ಮಹಾವಿದ್ಯಾಲಯಗಳ 2025-26ನೇ ಶೈಕ್ಷಣಿಕ ಸಾಲಿನ ಬಿಕಾಂ, ಬಿಬಿಎ ಮತ್ತು ಬಿಎಸ್ಸಿ ಪದವಿಗಳ ಪ್ರಥಮ/ತೃತೀಯ/ ಪಂಚಮ ಸೆಮಿಸ್ಟರ್‌ನ (ಆವರ್ತನ ಮತ್ತು ಪುನರಾವರ್ತನ) ಪರೀಕ್ಷೆಗಳು ಮುಗಿದ ನಾಲ್ಕು ದಿನಗಳಲ್ಲಿ ಫಲಿತಾಂಶವನ್ನು ಪ್ರಕಟಿಸುವ ಮೂಲಕ ಅತೀ ಕಡಿಮೆ ಅವಧಿಯಲ್ಲಿ ಪರೀಕ್ಷೆಗಳನ್ನು ನಡೆಸಿ ಫಲಿತಾಂಶವನ್ನು ಪ್ರಕಟಿಸಿದ ಕೀರ್ತಿಗೆ ಕೊಡಗು ವಿಶ್ವವಿದ್ಯಾಲಯ ಭಾಜನವಾಗಿದೆ. ರಾಜ್ಯ ಶಿಕ್ಷಣ ನೀತಿ -2024/ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಅಡಿಯಲ್ಲಿ ನಡೆದ ಪ್ರಥಮ/ ತೃತೀಯ/ಪಂಚಮ ವರ್ಷದ ಸ್ನಾತಕ ಪದವಿ ಪರೀಕ್ಷಾ ಫಲಿತಾಂಶವನ್ನು ಅತೀ ಶೀಘ್ರವಾಗಿ ಪ್ರಕಟಿಸಿದೆ. ವಿಶ್ವವಿದ್ಯಾಲಯವು ಸ್ನಾತಕ ಪದವಿ ಪರೀಕ್ಷೆಗಳು ಮುಗಿದ 20 ದಿನಗಳೊಳಗೆ ಫಲಿತಾಂಶವನ್ನು…

Read More

ಮಡಿಕೇರಿ NEWS DESK ಫೆ.17 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ದಿವ್ಯಾ ದಂಪತಿಯ ವಿವಾಹ ವಾರ್ಷಿಕೋತ್ಸವದ ಸಂಭ್ರಮವನ್ನು ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಸಮಿತಿ ನಗರದ ವಿಕಾಸ್ ಜನ ಸೇವಾ ಟ್ರಸ್ಟ್ ನ ಆಶ್ರಮದಲ್ಲಿ ಹಂಚಿಕೊಂಡಿತು. ಆಶ್ರಮದಲ್ಲಿ ನೆಲೆಸಿರುವ ಹಿರಿಯರಿಂದ ಕೇಕ್ ಕತ್ತರಿಸಿ ಸಿಹಿಹಂಚಿ ಸಂಭ್ರಮಿಸಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಮಧ್ಯಾಹ್ನದ ಭೋಜನದ ವ್ಯವಸ್ಥೆಯನ್ನು ಕಲ್ಪಿಸಿದರು. ಆಶ್ರಮವಾಸಿಗಳು ಶಾಸಕ ಡಾ.ಮಂತರ್ ಗೌಡ ಅವರ ಕುಟುಂಬದ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿ ಶುಭ ಹಾರೈಸಿದರು. ನಗರ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಶಶಿಕಲಾ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದಯಚಂದ್ರಿಕ, ಪ್ರೇಮ, ಮುಮ್ತಾಜ್ ಬೇಗಂ, ಪವಿತ್ರ ನಗರಸಭೆಯ ನಾಮನಿರ್ದೇಶಿತ ಸದಸ್ಯೆ ಜುಲೇಕಾಬಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಚಂದ್ರಶೇಖರ್ ಆರ್.ಪಿ, ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ದಿನೇಶ್ ಕೆ.ಆರ್, ಯುವ ಕಾಂಗ್ರೆಸ್ ಅಧ್ಯಕ್ಷ ಕವನ್ ಕೊತ್ತೋಳಿ, ಎನ್‌ಎಸ್‌ಯು ಮುಖಂಡ ಅರ್ಜುನ್, ಪ್ರಮುಖರಾದ ಕೋಚನ ಚೇತನ್, ವಿಕಾಸ್ ಜನ ಸೇವಾ…

Read More

ಮಡಿಕೇರಿ NEWS DESK ಫೆ.17 : ಕಾರ್ಮಿಕರ ಹಕ್ಕುಗಳನ್ನು ಕಡಿತಗೊಳಿಸಿ ಕಂಪೆನಿಗಳಿಗೆ ಹೆಚ್ಚಿನ ಸ್ವಾತಂತ್ರ‍್ಯ ನೀಡುವ ಸರಕಾರದ ಕ್ರಮ ಅಸಂವಿಧಾನಿಕವಾಗಿದ್ದು, ಇದರ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಕರ್ನಾಟಕ ರಾಜ್ಯ ಕಾರ್ಯಕಾರಿಣಿ ಸಮಿತಿ ಸಭೆ ಹಲವು ನಿರ್ಣಯಗಳನ್ನು ತೆಗೆದುಕೊಂಡಿದೆ ಎಂದು ಎಸ್‌ಡಿಟಿಯು ಸಂಘಟನೆಯ ಕೊಡಗು ಜಿಲ್ಲಾಧ್ಯಕ್ಷ ಕೆ.ಹೆಚ್.ಅಣ್ಣ ಷರೀಫ್ ಹಾಗೂ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಜಾಕ್ ಎಂ.ಎ ತಿಳಿಸಿದ್ದಾರೆ. ಭಾರತದಲ್ಲಿ ಹಿಂದಿನ ವ್ಯವಸ್ಥೆಯಲ್ಲಿ ಹಲವು ಕೇಂದ್ರ ಕಾರ್ಮಿಕ ಕಾಯ್ದೆಗಳು ಜಾರಿಯಲ್ಲಿದ್ದವು. ಅವುಗಳನ್ನು ಕೇಂದ್ರ ಸರಕಾರ ನಾಲ್ಕು ಕಾಯ್ದೆಗಳಾಗಿ ಮಾರ್ಪಡುಗೊಳಿಸಿದೆ. ಈ ಕಾನೂನುಗಳಿಂದ ಕಾರ್ಮಿಕರ ಹಕ್ಕುಗಳು ಕಡಿತಗೊಳ್ಳುವ ಸಾಧ್ಯತೆಗಳಿದೆ, ಕಂಪೆನಿಗಳಿಗೆ ಹೆಚ್ಚಿನ ಸ್ವಾತಂತ್ರ್ಯ ನೀಡಲಾಗಿದೆ. ಅನುಷ್ಠಾನದಲ್ಲಿಯೂ ಅಸ್ಪಷ್ಟತೆ ಕಂಡು ಬರುತ್ತಿದೆ. ಆದ್ದರಿಂದ ಈ ಹೊಸ ಕಾನೂನನ್ನು ರದ್ದುಗೊಳಿಸಿ ಹಿಂದಿನ ಕಾನೂನುಗಳನ್ನೇ ಸಮರ್ಪಕವಾಗಿ ಜಾರಿಗೊಳಿಸಬೇಕು. ಕರ್ನಾಟಕ ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಅನೇಕ ಪದವೀಧರರು ಉತ್ತಮ ಶಿಕ್ಷಣ ಪಡೆದಿದ್ದರೂ, ತಮ್ಮ ಅರ್ಹತೆಗೆ ತಕ್ಕ ಉದ್ಯೋಗಾವಕಾಶಗಳ ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ನಗರ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳು ಹೆಚ್ಚು…

Read More