ಲೇಖಕ: admin

ಕುಶಾಲನಗರ NEWS DESK ಜ.19 : ಇತ್ತೀಚಿನ ದಿನಗಳಲ್ಲಿ  ಯುವ ಸಮೂಹ  ಹೆಚ್ಚಾಗಿ ದುಶ್ಚಟಗಳಿಗೆ  ಬಲಿಯಾಗುತ್ತಿದ್ದು, ಮಕ್ಕಳ ಉತ್ತಮ ಭವಿಷ್ಯ ರೂಪಿಸಲು ಪೋಷಕರು ನಿಗಾ ವಹಿಸುವುದರೊಂದಿಗೆ  ಸಂಘ ಸಂಸ್ಥೆಗಳು ಜಾಗೃತಿ ಅಭಿಯಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಯುವಕರನ್ನು ಕೆಡುಕಿನಿಂದ ದೂರ ಮಾಡಿ ಆರೋಗ್ಯವಂತ ಸಮಾಜ ನಿರ್ಮಿಸಲು ಸಹಕರಿಸಬೇಕು ಎಂದು ಕುಶಾಲನಗರ ಡಿ ವೈ ಎಸ್ ಪಿ ಗಂಗಾಧರಪ್ಪ  ಸಲಹೆ ನೀಡಿದರು. ಜಿಲ್ಲಾ ವಿಸ್ಡಮ್ ಸ್ಟೂಡೆಂಟ್ ಸಂಸ್ಥೆ ಹಾಗೂ ಅಲ್ ಫುರ್ಕಾನ್ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ “ಟೀನ್‌ಸ್ಪೇಸ್” ಪ್ರೀತಿಯ ಪೋಷಕರ ವಾತ್ಸಲ್ಯದ ಮಕ್ಕಳಾಗೋಣ, ಮಾದಕ ವ್ಯಸನದಿಂದ ದೂರವಾಗೋಣ ಎಂಬ ಸಂದೇಶ ವಾಕ್ಯದೊಂದಿಗೆ ಮಾದಕ ಮುಕ್ತ ಅಭಿಯಾನ ಜಾಗೃತಿ ಸಮಾವೇಶವು ಕುಶಾಲನಗರ ಕನ್ನಿಕಾ ಇಂಟರ್ನ್ಯಾಷನಲ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಡ್ರಗ್ಸ್  ವಿರುದ್ಧ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವುದರ ಮೂಲಕ ದಾರಿ ತಪ್ಪುತ್ತಿರುವ ಯುವ ಸಮೂಹಕ್ಕೆ ಉತ್ತಮ ಮಾರ್ಗದರ್ಶನ ನೀಡಿ ಕೆಡುಕುಗಳಿಂದ ದೂರ ಮಾಡಿ  ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು  ಕಾರ್ಯಕ್ರಮ ಆಯೋಜನೆ ಮಾಡಿರುವ…

Read More

ಮಡಿಕೇರಿ NEWS DESK ಜ.19 : ಹುಲಿ ದಾಳಿಯಿಂದ ಎರಡು ಗಬ್ಬದ ಹಸುಗಳು ಬಲಿಯಾಗಿರುವ ಘಟನೆ ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ದೇವನೂರು- ಸುಳುಗೋಡು ಗ್ರಾಮದಲ್ಲಿ ನಡೆದಿದೆ. ಸುಳುಗೋಡು ಗ್ರಾಮದ ಕೃಷಿಕ ಮುದ್ದಿಯಡ ದಿನು ಎಂಬುವವರಿಗೆ ಸೇರಿದ ಎರಡು ಹಸುಗಳನ್ನು ಹುಲಿ ಕೊಂದು ಭಾಗಶ: ತಿಂದಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮಸ್ಥರಲ್ಲಿ ಆತಂಕ ಮೂಡಿದ್ದು, ತಕ್ಷಣ ಹುಲಿ ಸೆರೆಗೆ ಅರಣ್ಯ ಇಲಾಖೆ ಮುಂದಾಗಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ::: ಕಾರ್ಯಾಚರಣೆ ಮತ್ತು ಪರಿಹಾರ ::: ವನ್ಯಜೀವಿ ಸಂರಕ್ಷಣಾ ಮಂಡಳಿಯ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿದರು. ಹುಲಿಯನ್ನು ಸೆರೆ ಹಿಡಿಯಲು ಅಥವಾ ಅರಣ್ಯಕ್ಕೆ ಓಡಿಸಲು ಕ್ರಮ ಕೈಗೊಳ್ಳಲಾಗುವುದು. ಎರಡು ಗಬ್ಬದ ಹಸುಗಳು ಸಾವನ್ನಪ್ಪಿರುವುದರಿಂದ ಮಾಲೀಕರಿಗೆ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರೊಂದಿಗೆ ಚರ್ಚಿಸಿರುವುದಾಗಿ ತಿಳಿಸಿದರು.

Read More

ಮಡಿಕೇರಿ NEWS DESK ಜ.19 : ಮದಲಾಪುರ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್.ಆರ್.ಸುನಿಲ್ ರಾವ್ ಹಾಗೂ ಉಪಾಧ್ಯಕ್ಷರಾಗಿ ತಮ್ಮಯ್ಯ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾ ಅಧಿಕಾರಿಯಾಗಿ ಪಿ.ಬಿ.ಮೋಹನ್ ಕಾರ್ಯನಿರ್ವಹಿಸಿದರು. ಎಸ್. ಆರ್.ಸುನಿಲ್ ರಾವ್ ಮಾತನಾಡಿ ಮುಂಬರುವ ದಿನಗಳಲ್ಲಿ ಮದಲಾಪುರ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಉತ್ತಮ ರೀತಿಯಲ್ಲಿ ಬೆಳೆಸಿ ಗ್ರಾಮೀಣ ಜನತೆಗೆ ಅನುಕೂಲ ಒದಗಿಸುವುದರೊಂದಿಗೆ ಸಹಕಾರ ಸಂಘದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ ಎಂದರು. ನಿರ್ದೇಶಕರಾದ ವೆಂಕಟಯ್ಯ ನಾಯಕ, ಎಚ್ ಆರ್ ಕೃಷ್ಣ, ಸುರೇಶ್, ವಿ ಪಿ, ವಸಂತ, ಬಿ.ಎ. ಮಂಜುಳಾ, ಗಾಯತ್ರಿ, ಕೆ.ಕೆ. ಚಂದ್ರಿಕಾ, ದೇವಿರಮ್ಮ, ಗಿರಿಜಾ ವೈ.ಆರ್, ಮದಲಾಪುರ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಯೋಗೇಶ್, ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಎಸ್.ಶಿವಕುಮಾರ್, ಅರುಣ್ ರಾವ್, ಮಾದಪ್ಪ, ಬಾಪು ಹಾಗೂ ಸಂಘದ ಸದಸ್ಯರು ಹಾಜರಿದ್ದರು.

Read More

ಮೈಸೂರು NEWS DESK ಜ.19 : ಮೈಸೂರು ಕುವೆಂಪುನಗರದ ಬಿ.ಜಿ.ಎಸ್. ವಿದ್ಯಾಪೀಠದಲ್ಲಿ ಶ್ರೀ ಮಹಾಗಣಪತಿ ಪ್ರತಿಷ್ಠಾಪನೆ ಮತ್ತು ಶ್ರೀ ಯುಗಯೋಗಿ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ ಶ್ರೀ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮಿಜಿಯವರ 80ನೇ ವರ್ಷದ ಜಯಂತ್ಯುತ್ಸವ* ಸಮಾರಂಭ ನಡೆಯಿತು. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ  ಶಾಖಾ ಮಠಗಳ ಪೂಜ್ಯ ಸ್ವಾಮೀಜಿಗಳು, ಗಣ್ಯರು ಹಾಗೂ ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದರು.

Read More

ವಿರಾಜಪೇಟೆ NEWS DESK ಜ.19 : ಕೇರಳ ರಾಜ್ಯದ ಒಂದಂಕಿ ಲಾಟರಿ ಫಲಿತಾಂಶವನ್ನು ಆಧಾರವಾಗಿಸಿಕೊಂಡು ಆನ್ ಲೈನ್ ಮೂಲಕ ಜೂಜಾಟ ನಡೆಸುತ್ತಿದ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ವಿರಾಜಪೇಟೆ ಪೊಲೀಸರು ಬಂಧಿಸಿದ್ದಾರೆ. ವಿರಾಜಪೇಟೆ ಪಟ್ಟಣದ ಗಾಂಧಿನಗರದ ನಿವಾಸಿ ಕೆ.ಎಂ.ರಶೀದ್ (47) ಬಂಧಿತ ಆರೋಪಿ. ರಾಜ್ಯದಲ್ಲಿ ಲಾಟರಿ ಮಾರಾಟ ನಿಷೇಧವಿದ್ದರೂ ಕೇರಳ ರಾಜ್ಯದ ಲಾಟರಿ ಟಿಕೆಟ್ ನ ಫಲಿತಾಂಶವನ್ನು ಬಳಸಿಕೊಂಡು ಆನ್ ಲೈನ್ ನಲ್ಲಿ ದಂಧೆ ನಡೆಸುತ್ತಿರುವ ಆರೋಪ ಕೇಳಿ ಬಂದ ಹಿನ್ನೆಲೆ ಪೊಲೀಸರು ದಾಳಿ ನಡೆಸಿದರು. ಆರೋಪಿ ಬಳಿಯಿಂದ 6,150 ರೂ. ನಗದು ಮತ್ತು ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ. ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ವಿರಾಜಪೇಟೆ ಉಪ ವಿಭಾಗದ ಡಿವೈಎಸ್ಪಿ ಅವರ ಅದೇಶದ ಮೇರೆಗೆ ವಿರಾಜಪೇಟೆ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಅವರ ಮಾರ್ಗದರ್ಶನದಲ್ಲಿ ವಿರಾಜಪೇಟೆ ನಗರ ಠಾಣೆಯ ಪಿ.ಎಸ್.ಐ ಪ್ರಮೋದ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು. (ವರದಿ : ಕಿಶೋರ್ ಕುಮಾರ್ ಶೆಟ್ಟಿ)

Read More

ಸೋಮವಾರಪೇಟೆ NEWS DESK ಜ.19 : ಇತ್ತೀಚೆಗೆ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದ ಯಡವನಾಡು ಮೀಸಲು ಅರಣ್ಯದ ಕೂಪಾಡಿ ಗಿರಿಜನರ ಹಾಡಿಯ ತಮ್ಮಣ್ಣ(67) ಅವರ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 15ಲಕ್ಷ ರೂ.ಗಳ ಪರಿಹಾರದ ಚೆಕ್ ಅನ್ನು  ವಿತರಿಸಲಾಯಿತು. ಮೃತರ ತಾಯಿ ಬೋಜಿ ಅವರಿಗೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ಎ.ಗೋಪಾಲ್ ಚೆಕ್ ವಿತರಿಸಿದರು. ಶಾಸಕ ಡಾ.ಮಂತರ್‌ಗೌಡ ಅವರ ಸೂಚನೆಯಂತೆ ಚೆಕ್ ವಿತರಿಸಲಾಗಿದೆ. ಪರಿಹಾರ ಹಣವನ್ನು ಉತ್ತಮ ಕಾರ್ಯಕ್ಕೆ ಉಪಯೋಗಿಸಿಕೊಳ್ಳಬೇಕು ಎಂದು ಹೇಳಿದರು. ಹಾಡಿ ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವುದರಿಂದ ಕಾಡಾನೆಗಳ ಬಗ್ಗೆ ಎಚ್ಚರ ವಹಿಸಬೇಕು. ಮೀಸಲು ಅರಣ್ಯದೊಳಗೆ ತಿರುಗಾಡಬಾರದು. ಕಾಡಾನೆ ಕಂಡಾಗ ಕೂಡಲೆ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು. ಮಾನವರ ಮೇಲೆ ದಾಳಿ ಮಾಡುವ ಕಾಡಾನೆಗಳನ್ನು ಹಿಡಿದು ಪಳಗಿಸಲಾಗುವುದು. ಅಂತಹ ಆನೆಗಳನ್ನು ಕಂಡು ಹಿಡಿದು ಸೆರೆಹಿಡಿಯಲಾಗುವುದು ಎಂದು ಹೇಳಿದರು. ಚೆಕ್ ವಿತರಣೆ ಸಂದರ್ಭ ಸೋಮವಾರಪೇಟೆ ವಲಯ ಅರಣ್ಯಾಧಿಕಾರಿ ಶೈಲೇಂದ್ರ ಕುಮಾರ್, ಮೃತರ ಸಹೋದರ ಅಣ್ಣಯ್ಯ ಮತ್ತು ಹಾಡಿಯ ನಿವಾಸಿಗಳು ಇದ್ದರು.

Read More

ಮಡಿಕೇರಿ NEWS DESK ಜ.19 : ಪುಣ್ಯ ಭೂಮಿ ಅಯೋಧ್ಯೆಯ ಶ್ರೀರಾಮನ ಜನ್ಮ ಭೂಮಿಯಲ್ಲಿ  ಶ್ರೀ ರಾಮನ ಭವ್ಯ ಮಂದಿರ ನಿರ್ಮಾಣಗೊಂಡು 1 ವರ್ಷ ತುಂಬಿದ ಹಿನ್ನೆಲೆಯಲ್ಲಿ ಮಡಿಕೇರಿಯ ಶ್ರೀ ರಾಮ ಜನ್ಮ ಭೂಮಿ ಸೇವಾ ಸಮಿತಿ ವತಿಯಿಂದ ಜ.22 ರಂದು ಮಧ್ಯಾಹ್ನ ಮಡಿಕೇರಿಯ ಹಳೇ ಖಾಸಗಿ ಬಸ್ ನಿಲ್ದಾಣದ ಬಳಿ ಸಾರ್ವಜನಿಕರಿಗೆ ಅನ್ನ ಪ್ರಸಾದ ವಿತರಣೆ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರು ಅತ್ಯಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಮಿತಿಯ ಪದಾಧಿಕಾರಿಗಳು ಮನವಿ ಮಾಡಿದ್ದಾರೆ. ಅನ್ನದಾನಕ್ಕೆ ಸಹಾಯ ನೀಡ ಬಯಸುವ ದಾನಿಗಳು ಈ ಮೊ.ಸಂಖ್ಯೆ ಗಳನ್ನು ಸಂಪರ್ಕಿಸಲು ಕೋರಿದೆ. ನವೀನ್ : 9964791158, ಶೇಖರ್ 9945717019, ರಘು 9844438313, ಸದಾಶಿವ ರೈ: 9483233664, ಪ್ರಸಾದ್ ಸಂಪಿಗೆಕಟ್ಟೆ:9731469871.

Read More

ಹುದಿಕೇರಿ NEWS DESK ಜ.19 : ದಕ್ಷಿಣ ಕೊಡಗಿನ ಹುದಿಕೇರಿಯಲ್ಲಿ ಇದೇ ಏಪ್ರಿಲ್ -ಮೇ ತಿಂಗಳಿನಲ್ಲಿ ನಡೆಯುವ 23ನೇ ವರ್ಷದ ಕೊಡವ ಕ್ರಿಕೆಟ್ ಪಂದ್ಯಾವಳಿ ಚೆಕ್ಕೇರ ಕಪ್ ಕ್ರಿಕೆಟ್ ಪಂದ್ಯಾವಳಿಯ ಲಾಂಛನವನ್ನು ಹುದಿಕೇರಿ ಕೊಡವ ಸಮಾಜದಲ್ಲಿ ಅನಾವರಣಗೊಳಿಸಲಾಯಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಲಾಂಛನ ಬಿಡುಗಡೆಗೊಳಿಸಿದರು. ರಾಜ್ಯ ವಿದ್ಯುತ್ ಇಲಾಖೆಯ ಮುಖ್ಯ ಅಧಿಕಾರಿ ತೀತಿರ ರೋಷನ್ ಅಪ್ಪಚ್ಚು, ಕೊಡವ ಕ್ರಿಕೆಟ್ ಅಕಾಡೆಮಿ ಅಧ್ಯಕ್ಷ ಕೀತಿಯಂಡ ಕಾರ್ಸನ್ ಕಾರ್ಯಪ್ಪ, ಚೆಕ್ಕೇರ ಕ್ರಿಕೆಟ್ ಕಪ್ ಉತ್ಸವದ ಅಧ್ಯಕ್ಷ ಚೆಕ್ಕೇರ ಚಂದ್ರಪ್ರಕಾಶ್, ತಕ್ಕ ಮುಖ್ಯಸ್ಥರಾದ ಚೆಕ್ಕೇರ ರಾಜೇಶ್, ಚೆಕ್ಕೇರ ಪಟ್ಟೆದಾರ ಕಟ್ಟಿ ಕುಟ್ಟಣಿ, ಕುಟುಂಬದ ಅಧ್ಯಕ್ಷ ಚೆಕ್ಕೇರ ಕಾಶಿ ಕಾಳಯ್ಯ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Read More

ಸೋಮವಾರಪೇಟೆ ಜ.19 NEWS DESK : ಅರಣ್ಯ ಇಲಾಖೆ, ಸಾಲುಮರದ ತಿಮ್ಮಕ್ಕ ಇಕೋ ಕ್ಲಬ್ ಹಾಗು ಕುಶಾಲನಗರ ಅಗ್ನಿ ಶಾಮಕ ಠಾಣೆ ವತಿಯಿಂದ ಸಾರ್ವಜನಿಕರಿಗೆ ಕಾಡ್ಗಿಚ್ಚು ಹಾಗು ಬೆಂಕಿಯಿಂದಾಗುವ ಅವಘಡಗಳನ್ನು ಪರಿಣಾಮಕಾರಿಯಾಗಿ ನಂದಿಸುವ ಪ್ರಾತ್ಯಕ್ಷಿಕೆ ಯಡವನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಸ್ಥಳದಲ್ಲಿ ಮುಂಜಾಗ್ರತೆ ಹಾಗು ಬೆಂಕಿ ಅವಘಡ ಸಂಭವಿಸಿದಾಗ ತೆಗೆದುಕೊಳ್ಳಬಹುದಾದ ಮುನ್ನೆಚ್ಚರಿಕೆಯ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಸೋಮವಾರಪೇಟೆ ವಲಯ ಅರಣ್ಯಾಧಿಕಾರಿ ಶೈಲೇಂದ್ರಕುಮಾರ್, ಡಿಆರ್‌ಎಫ್‌ಒ ಚಂದ್ರೇಶ್, ಕುಶಾಲನಗರ ಅಗ್ನಿಶಾಮಕ ಠಾಣೆಯ ಶೋಬಿತ್, ಲತೇಶ್ ಕುಮಾರ್, ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಬಸವರಾಜು, ಆಶ್ರಮ ಶಾಲಾ ಮುಖ್ಯ ಶಿಕ್ಷಕ ರಜನೀಕಾಂತ್ ಇದ್ದರು. ಯಡವನಾಡು ಹಿರಿಯ ಪ್ರಾಥಮಿಕ ಶಾಲೆ ಹಾಗು ಆಶ್ರಮ ವಸತಿ ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

Read More

ಸೋಮವಾರಪೇಟೆ NEWS DESK ಜ.19 : ಚಲಿಸುತಿದ್ದ ಬೈಕ್ ಮೇಲೆ ಒಣಗಿದ ಚಿಕ್ಕ ಮರ ಬಿದ್ದು ಸವಾರ ಗಾಯಗೊಂಡಿರುವ ಘಟನೆ ತೋಳುರುಶೆಟ್ಟಳ್ಳಿಯಲ್ಲಿ ನಡೆದಿದೆ. ಸಮೀಪದ ಹರಪಳ್ಳಿ ಗ್ರಾಮದ ಎಚ್.ಜೆ. ಸಂಕೀತ್ ಎಂದಿನಂತೆ ಸೋಮವಾರಪೇಟೆಯ ತಾಲೂಕು ಕಚೇರಿಯಲ್ಲಿ ಕೆಲಸಕ್ಕೆಂದು ತೆರಳುವ ಸಂದರ್ಭ ರಸ್ತೆಯ ಪಕ್ಕದ ಒಣಗಿದ ಮರ ಅವರ ಮೇಲೆ ಬಿದ್ದಿದೆ. ತಲೆ ಭಾಗಕ್ಕೆ ಗಾಯವಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Read More