ಲೇಖಕ: admin

ಸೋಮವಾರಪೇಟೆ NEWS DESK ಜ.19 : ಇತ್ತೀಚೆಗೆ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದ ಯಡವನಾಡು ಮೀಸಲು ಅರಣ್ಯದ ಕೂಪಾಡಿ ಗಿರಿಜನರ ಹಾಡಿಯ ತಮ್ಮಣ್ಣ(67) ಅವರ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 15ಲಕ್ಷ ರೂ.ಗಳ ಪರಿಹಾರದ ಚೆಕ್ ಅನ್ನು  ವಿತರಿಸಲಾಯಿತು. ಮೃತರ ತಾಯಿ ಬೋಜಿ ಅವರಿಗೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ಎ.ಗೋಪಾಲ್ ಚೆಕ್ ವಿತರಿಸಿದರು. ಶಾಸಕ ಡಾ.ಮಂತರ್‌ಗೌಡ ಅವರ ಸೂಚನೆಯಂತೆ ಚೆಕ್ ವಿತರಿಸಲಾಗಿದೆ. ಪರಿಹಾರ ಹಣವನ್ನು ಉತ್ತಮ ಕಾರ್ಯಕ್ಕೆ ಉಪಯೋಗಿಸಿಕೊಳ್ಳಬೇಕು ಎಂದು ಹೇಳಿದರು. ಹಾಡಿ ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವುದರಿಂದ ಕಾಡಾನೆಗಳ ಬಗ್ಗೆ ಎಚ್ಚರ ವಹಿಸಬೇಕು. ಮೀಸಲು ಅರಣ್ಯದೊಳಗೆ ತಿರುಗಾಡಬಾರದು. ಕಾಡಾನೆ ಕಂಡಾಗ ಕೂಡಲೆ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು. ಮಾನವರ ಮೇಲೆ ದಾಳಿ ಮಾಡುವ ಕಾಡಾನೆಗಳನ್ನು ಹಿಡಿದು ಪಳಗಿಸಲಾಗುವುದು. ಅಂತಹ ಆನೆಗಳನ್ನು ಕಂಡು ಹಿಡಿದು ಸೆರೆಹಿಡಿಯಲಾಗುವುದು ಎಂದು ಹೇಳಿದರು. ಚೆಕ್ ವಿತರಣೆ ಸಂದರ್ಭ ಸೋಮವಾರಪೇಟೆ ವಲಯ ಅರಣ್ಯಾಧಿಕಾರಿ ಶೈಲೇಂದ್ರ ಕುಮಾರ್, ಮೃತರ ಸಹೋದರ ಅಣ್ಣಯ್ಯ ಮತ್ತು ಹಾಡಿಯ ನಿವಾಸಿಗಳು ಇದ್ದರು.

Read More

ಮಡಿಕೇರಿ NEWS DESK ಜ.19 : ಸಂಪಾಜೆ ಸ್ಥಳೀಯ ಸಂಸ್ಥೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೇಳ ಮೂರು ದಿನಗಳ ಕಾಲ ಸಂಭ್ರಮದಿಂದ ನಡೆಯಿತು. ಚೆಂಬುವಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮದ ಹಿರಿಯರು ಹಾಗೂ ನಿವೃತ್ತ ಪ್ರಾಂಶುಪಾಲ ದಾಮೋದರ ಕೆ. ಅವರು ಮೇಳವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಹೊರಸಂಚಾರ ಕಾರ್ಯಕ್ರಮಕ್ಕೆ ಗ್ರಾ.ಪಂ ಸದಸ್ಯೆ ಹಂಸಲೇಖ ಚಾಲನೆ ನೀಡಿದರು. ಹೊರ ಸಂಚಾರದಲ್ಲಿ ಕಿಂಡಿ ಅಣೆಕಟ್ಟು, ಕೃಷಿ ಪದ್ಧತಿ ಮತ್ತು ಪರಿಸರದ ಕುರಿತು ವಿದ್ಯಾರ್ಥಿಗಳು ಮಾಹಿತಿ ಪಡೆದರು. ಎರಡನೇ ದಿನದ ಮೇಳದಲ್ಲಿ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಅರ್ಪಿಸಲಾಯಿತು. ವಿವೇಕ ಜಾಗೃತ ಬಳಗದ ಮೂಲಕ ಸಂಪನ್ಮೂಲ ವ್ಯಕ್ತಿಗಳಾದ ಚಂದ್ರಶೇಖರ್ ಹೊಸೂರು ಅವರು ಸ್ವಾಮಿ ವಿವೇಕಾನಂದರ ಕುರಿತು ಮಾತನಾಡಿದರು. ನಂತರ ಇದೇ ವೇದಿಕೆಯಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ರಕ್ತನಿಧಿ ಕೇಂದ್ರದ ವತಿಯಿಂದ ರಕ್ತದಾನ ಶಿಬಿರ ಮತ್ತು ಮಕ್ಕಳ ದಂತ ತಪಾಸಣಾ ಶಿಬಿರ ನಡೆಯಿತು.…

Read More

ಮಡಿಕೇರಿ NEWS DESK ಜ.18 : ಕಟ್ಟೆಮಾಡು ದೇವಾಲಯದಲ್ಲಿ ನಡೆದ ಭಿನ್ನಾಭಿಪ್ರಾಯಕ್ಕೆ ಸಂಬಂಧಿಸಿದಂತೆ ಸೌಹಾರ್ದತೆ ಕಾಪಾಡುವ ಪ್ರಕ್ರಿಯೆಗಳಿಗೆ ನಮ್ಮ ಸಹಮತವಿದೆ, ಆದರೆ ಕೊಡವರ ಮೇಲೆ ನಡೆದ ದೌರ್ಜನ್ಯ ಮರೆಮಾಚಿದರೆ ನಮ್ಮ ವಿರೋಧವಿದೆ ಎಂದು ಯುನೈಟೆಡ್ ಕೊಡವ ಆರ್ಗನೈಜೇಷನ್ ಸಂಘಟನೆಯ ಅಧ್ಯಕ್ಷ  ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ಸ್ಪಷ್ಟಪಡಿಸಿದ್ದಾರೆ. ಇಂದು ಅಖಿಲ ಕೊಡವ ಸಮಾಜದ ಹೇಳಿಕೆ ಅವರ ವೈಯಕ್ತಿಕ, ಇದಕ್ಕೆ ನಮ್ಮ ಸಂಘಟನೆಯ ಸಹಮತವಿಲ್ಲ. ಕೊಡವರು ಯಾವುದೇ ಜಾತಿ ಅಥವಾ ಜನಾಂಗವನ್ನು ಅವಮಾನಿಸಿ, ಈ ಪ್ರಕರಣವನ್ನು ಹುಟ್ಟು ಹಾಕಲಿಲ್ಲ, ಪ್ರಕರಣದ ನಂತರದ ಬೆಳವಣಿಗೆಗಳನ್ನೇ ದೊಡ್ಡದು ಮಾಡಿ, ಪ್ರಕರಣಕ್ಕೆ ಕಾರಣರಾದವರನ್ನು ರಕ್ಷಿಸಿ, ಕೊಡವರನ್ನೇ ತಪ್ಪಿತಸ್ಥರ ಸ್ಥಾನದಲ್ಲಿ ನಿಲ್ಲಿಸಲು ತೆರೆಮರೆಯಲ್ಲಿ ಹುನ್ನಾರ ನಡೆದಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ. ಎರಡು ಜನಾಂಗದವರ ನಡುವೆ ಸೌಹಾರ್ದತೆ ಕಾಪಾಡಲು ನಡೆಸುವ ಪ್ರಕ್ರಿಯೆಗಳಿಗೆ ನಮ್ಮ ಸಹಮತವಿದೆ, ಆದರೆ ಅದು ಕೊಡವರ ಮೇಲೆ ನಡೆದ ದೌರ್ಜನ್ಯ ಮತ್ತು ಅವಮಾನಗಳನ್ನು ಮರೆಮಾಚಿ ನಡೆಸುವುದಾದರೆ ಅದಕ್ಕೆ ನಮ್ಮ ವಿರೋಧವಿದೆ, ಕಟ್ಟೆಮಾಡುವಿನಲ್ಲಿ ಹಲ್ಲೆಗೊಳಗಾದ ವ್ಯಕ್ತಿ ಆಸ್ಪತ್ರೆಯಲ್ಲಿ ದಾಖಲಾಗಿ…

Read More

ಮಡಿಕೇರಿ NEWS DESK ಜ.18 : ಅಖಿಲ ಕೊಡವ ಸಮಾಜದ ಅಧ್ಯಕ್ಷರಾದ ಪರದಂಡ ಸುಬ್ರಮಣಿ ಹಾಗೂ ಕಾರ್ಯದರ್ಶಿ ಕೀತಿಯಂಡ ವಿಜಯಕುಮಾರ್ ಅವರು ಶನಿವಾರ ಮಡಿಕೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ನೀಡಿದ ಹೇಳಿಕೆ ವೈಯುಕ್ತಿಕವಾಗಿದ್ದು, ಅದಕ್ಕೆ ನಮ್ಮ ಸಹಮತ ಇಲ್ಲ. ನಾವು ಹೋರಾಟಕ್ಕೆ ಬದ್ಧರಾಗಿದ್ದು, ಇವರಿಬ್ಬರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಲಿ ಎಂದು ಕನೆಕ್ಟಿಂಗ್ ಕೊಡವಾಸ್ ಸಂಘಟನೆಯ ಸಂಚಾಲಕ ಶಾಂತೆಯಂಡ ನಿರನ್ ನಾಚಪ್ಪ ಒತ್ತಾಯಿಸಿದ್ದಾರೆ. ಸೋಮವಾರ ಬೃಹತ್ ಜಾಥಾ ನಡೆಸಲು ವಿವಿಧ ಸಂಘಟನೆ, ಸಮಾಜ ಮತ್ತು ಜನಾಂಗ ಮುಖಂಡರೊಂದಿಗೆ ಮಾತುಕತೆ ನಡೆಯುತ್ತಿದ್ದು, ನಮ್ಮ ನಿಲುವಿಗೆ ಬದ್ಧರಾಗಿದ್ದೇವೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಮಡಿಕೇರಿಯಲ್ಲಿ ನಡೆಸಿರುವ ಪತ್ರಿಕಾಗೋಷ್ಠಿಗೆ ನಮ್ಮನ್ನು ಕರೆದ ವಿಚಾರವೇ ಬೇರೆ, ಅಲ್ಲಿ ಅಖಿಲ ಕೊಡವ ಸಮಾಜ ನಡೆದುಕೊಂಡದ್ದೇ ಬೇರೆಯಾಗಿದೆ. ಕಟ್ಟೆಮಾಡು ಪ್ರಕರಣದ ಹಲ್ಲೆ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳದೆ ಇರುವುದನ್ನು ವಿರೋಧಿಸಿ ಪ್ರತಿಭಟನೆ ಆಯೋಜಿಸುತ್ತಿರುವ ಕುರಿತು ಪತ್ರಿಕಾಗೋಷ್ಠಿ ನಡೆಸುತ್ತಿರುವುದಾಗಿ ಹೇಳಿದ್ದ ಅಖಿಲ ಕೊಡವ ಸಮಾಜದ ಪ್ರಮುಖರು ಸಂಬಂಧವೇ ಇಲ್ಲದ ವಿಚಾರವನ್ನು ಮಾತನಾಡಿದ್ದಾರೆ ಎಂದು…

Read More

ಮಡಿಕೇರಿ ಜ.18 NEWS DESK : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿರುವ ಕೊಡವ ವಿದ್ಯಾರ್ಥಿಗಳ ಕೊಡವ ಸ್ಟೂಡೆಂಟ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ ಚಂಗುಲಂಡ ರಕ್ಷಿತ್ ಪೂವಯ್ಯ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಸೋಮೆಯಂಡ ತನಿಷ್ ತಮ್ಮಯ್ಯ, ಉಪಾಧ್ಯಕ್ಷರಾಗಿ ನಾಳಿಯಂಡ ಜಶಿಕ, ಸಹ ಕಾರ್ಯದರ್ಶಿಯಾಗಿ ಚೆಯ್ಯಂಡ ಭಕ್ತಿ ಬೋಜಮ್ಮ, ಖಜಾಂಚಿ ಬೇಪಡಿಯಂಡ ರೋಹನ್ ನಾಣಯ್ಯ, ಸಹ ಖಜಾಂಚಿ ಸುಳ್ಳಿಮಾಡ ಎಸ್.ಗಾಯನ ಗಂಗಮ್ಮ, ಸಂಘಟನಾ ಕಾರ್ಯದರ್ಶಿಯಾಗಿ ಕುಟ್ಟಂಜೆಟ್ಟಿರ ಎಸ್.ಚಿನ್ನಪ್ಪ, ಕ್ರೀಡಾ ಕಾರ್ಯದರ್ಶಿಯಾಗಿ ಮಾರ್ಚಂಡ ನಿಹಾಲ್ ಸುಬ್ರಮಣಿ, ಸಹ ಕ್ರೀಡಾ ಕಾರ್ಯದರ್ಶಿಯಾಗಿ ಮುಕ್ಕಾಟೀರ ಟಿಂಚಲ್ ತಂಗಮ್ಮ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮುಕ್ಕಾಟಿರ ಎಂ.ಚಿನ್ಮಯಿ ಗಂಗಮ್ಮ ನೇಮಕಗೊಂಡಿದ್ದಾರೆ.

Read More

ಮಡಿಕೇರಿ ಜ.18 NEWS DESK : ಕವನ ವಾಚನ ಸ್ಪರ್ಧೆಯಲ್ಲಿ ಅಯ್ಯನೆರವಂಡ ಪ್ರಿತುನ್ ಪೂವಣ್ಣಗೆ ‘ಕರುನಾಡ ಕವಿರತ್ನ ‘ ಪ್ರಶಸ್ತಿ ಲಭಿಸಿದೆ.ಬೆಳಕು ಸಾಹಿತ್ಯ ಶೈಕ್ಷಣಿಕ ಸಾಂಸ್ಕೃತಿಕ ಟ್ರಸ್ಟ್(ರಿ) ಸಂಸ್ಥೆಯು ರಾಯಚೂರಿನಲ್ಲಿ ನಡೆಸಿದ ರಾಷ್ಟಮಟ್ಟದ ಕನ್ನಡ ಕಲರವ ಸಮ್ಮೇಳನದಲ್ಲಿ ರಾಜ್ಯಮಟ್ಟದ ಕವನ ವಾಚನ ಸ್ಪರ್ಧೆಗೆ ಕೊಡಗಿನಿಂದ ಕವಿಗೋಷ್ಠಿಯಲ್ಲಿ ಭಾಗವಹಿಸಿ ಕವನ ವಾಚಿಸಿದ ಪ್ರಿತುನ್ ಪೂವಣ್ಣಗೆ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು. ಪ್ರಿತುನ್ ಪೂವಣ್ಣ ಕಕ್ಕಬ್ಬೆ ನಾಲಡಿ ಗ್ರಾಮದ ಪೂವಯ್ಯ, ಪ್ರಭಾ ದಂಪತಿಯ ಪುತ್ರ.

Read More

ಮಡಿಕೇರಿ ಜ.18 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಫಲಪುಷ್ಪ ಪ್ರದರ್ಶನವು ಜ.24 ರಿಂದ 27 ರವರೆಗೆ ನಗರದ ರಾಜಾಸೀಟು ಉದ್ಯಾನವನ ಹಾಗೂ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಫಲಪುಷ್ಪ ಪ್ರದರ್ಶನದ ಉದ್ಘಾಟನಾ ಸಮಾರಂಭವು ಜ.24 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ತೋಟಗಾರಿಕೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಶಾಸಕರಾದ ಡಾ.ಮಂತರ್‍ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಕೊಡಗು ಜಿ.ಪಂ.ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ತೋಟಗಾರಿಕೆ ಇಲಾಖೆ ನಿರ್ದೇಶಕರಾದ ಡಿ.ಎಸ್.ರಮೇಶ್, ಕೊಡಗು…

Read More

ಮಡಿಕೇರಿ ಜ.18 NEWS DESK : ಯೂಕೋ ಬ್ಯಾಂಕ್‍ನಲ್ಲಿ ಖಾಲಿ ಇರುವ 250 ಕ್ಕೂ ಹೆಚ್ಚು ಲೋಕಲ್ ಬ್ಯಾಂಕ್  ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 20 ರಿಂದ 30 ವರ್ಷದೊಳಗಿನ ಪದವೀಧರ ಅಭ್ಯರ್ಥಿಗಳು ದಿನಾಂಕ 16.1.2025 ರಿಂದ 5.2.2025 ರೊಳಗೆ ವೆಬ್‍ಸೈಟ್ ವಿಳಾಸ https://www.ucobank.com/en/ ಕ್ಕೆ ಭೇಟಿ ನೀಡಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ಕೃಷಿಕ್ ಸರ್ವೋದಯ ಫೌಂಡೇಶನ್ (ರಿ) ನಲ್ಲಿ ಬ್ಯಾಂಕ್ ನೇಮಕಾತಿ ಪರೀಕ್ಷೆ ಮತ್ತು ಇನ್ಶುರೆನ್ಸ್ ಕಂಪನಿಗಳ ನೇಮಕಾತಿ ಪರೀಕ್ಷೆಗಳಿಗೆ ನುರಿತ ವಿಷಯ ತಜ್ಞರಿಂದ ರಿಯಾಯಿತಿ ದರದಲ್ಲಿ ತರಬೇತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ 8660217739 ಸಂಖ್ಯೆಗೆ ಕರೆ ಅಥವಾ ವಾಟ್ಸಾಪ್ ಮಾಡಬಹುದಾಗಿದೆ ಎಂದು ಶಾಖೆಯ ಗೌರವ ಕಾರ್ಯದರ್ಶಿ ಎಚ್.ಪಿ.ಮೋಹನ್ ತಿಳಿಸಿದ್ದಾರೆ.  

Read More

ಮಡಿಕೇರಿ ಜ.18 NEWS DESK : ಕಾರ್ಮಿಕ ಇಲಾಖೆ ವತಿಯಿಂದ ಅಸಂಘಟಿತ ಕಟ್ಟಡ ಕಾರ್ಮಿಕರಿಗೆ ಹಲವು ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಿದೆ. ಕೊಡಗು ಜಿಲ್ಲೆಯ ವ್ಯಾಪ್ತಿಯಲ್ಲಿ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾಯ್ದೆಯಡಿ ನೋಂದಣಿಯಾಗಿರುವ ಕಾರ್ಮಿಕರಿಗೆ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಜಿಲ್ಲೆಯಲ್ಲಿ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾಯ್ದೆಯಡಿ ಇದುವರೆಗೆ 12,367 ಮಂದಿ ಹೆಸರು ನೋಂದಾಯಿಸಿದ್ದಾರೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಕಾವೇರಿ ಅವರು ಮಾಹಿತಿ ನೀಡಿದ್ದಾರೆ. ಇವರಲ್ಲಿ 9,740 ಮಂದಿ ಪುರುಷರು ಹಾಗೂ 2,627 ಮಂದಿ ಮಹಿಳೆಯರು ಕಟ್ಟಡ ಹಾಗೂ ಇತರೆ ನಿರ್ಮಾಣ ಕಾಯ್ದೆಯಡಿ ನೋಂದಣಿಯಾಗಿದ್ದಾರೆ. ಮಡಿಕೇರಿ ತಾಲ್ಲೂಕಿನಲ್ಲಿ 3,035 ಮಂದಿ, ಸೋಮವಾರಪೇಟೆ ತಾಲ್ಲೂಕಿನಲ್ಲಿ 4,037 ಮಂದಿ, ವಿರಾಜಪೇಟೆ ತಾಲ್ಲೂಕಿನ 5295 ಮಂದಿ ಹೆಸರು ನೋಂದಾಯಿಸಿದ್ದಾರೆ. ಪ್ರಸಕ್ತ ವರ್ಷದಲ್ಲಿ ಡಿಸೆಂಬರ್ ಅಂತ್ಯದವರೆಗೆ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಧನಸಹಾಯ ವಿತರಿಸಲಾಗಿದೆ. ಹೆರಿಗೆ ಧನ ಭತ್ಯೆ, ವೈದ್ಯಕೀಯ ಸಹಾಯಧನ, ಮದುವೆಗೆ ಧನಸಹಾಯ, ಹೀಗೆ ವಿವಿಧ ಯೋಜನೆಗಳಡಿ ಸುಮಾರು…

Read More

ಮಡಿಕೇರಿ ಜ.18 NEWS DESK : ಭಾರತೀಯ ಕ್ರೀಡಾ ಪ್ರಾಧಿಕಾರದ(ಸಾಯಿ) ತರಬೇತಿ ಕೇಂದ್ರದ ವತಿಯಿಂದ ಮಡಿಕೇರಿಯ ಬಾಲಕಿಯರ ಕ್ರೀಡಾ ಹಾಸ್ಟೆಲ್‍ಗೆ ಪ್ರತಿಭಾವಂತ ಹಾಕಿ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯು ಫೆ.1 ರದು ಬೆಳಗ್ಗೆ 9 ಗಂಟೆಗೆ ನಗರದ ರೇಸ್ ಕೋರ್ಸ್ ರಸ್ತೆಯ ಸಾಯಿ ಹಾಕಿ ಟರ್ಫ್ ಮೈದಾನದಲ್ಲಿ ನಡೆಯಲಿದೆ. 12 ರಿಂದ 18 ವರ್ಷದ ಪ್ರಾಯದೊಳಗಿನ ಬಾಲಕಿಯರು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು. ಭಾಗವಹಿಸುವ ಕ್ರೀಡಾಪಟುಗಳು ತಮ್ಮ ವೈಯಕ್ತಿಕ ಕ್ರೀಡಾ ಸಾಮಾಗ್ರಿ ತರಬೇಕು. ವೈದ್ಯಕೀಯ ಅರ್ಹತಾ ಪತ್ರ ವೈದ್ಯಾಧಿಕಾರಿಯವರಿಂದ, ಕ್ರೀಡಾ ಸಾಧನೆಯ ಸರ್ಟಿಫಿಕೇಟ್. (ಜಿಲ್ಲಾ, ವಿಭಾಗ, ರಾಜ್ಯ, ಹಾಗೂ ಅದಕ್ಕಿಂತ ಮೇಲ್ಪಟ್ಟ 3 ವರ್ಷದ ಹಿಂದಿನ ಸ್ಫರ್ಧೆಯಲ್ಲಿ ಭಾಗವಹಿಸಿದ್ದು), ಜನ್ಮ ದಿನಾಂಕ ಪ್ರಮಾಣ ಪತ್ರ (ಜನನ ಮರಣ ನೋಂದಣಿ ಅಧಿಕಾರಿಗಳಿಂದ), ಇತ್ತೀಚಿನ 5 ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ. ವಿಳಾಸ ದೃಡೀಕರಣಗೊಳಿಸಲು ಆಧಾರ್ ಕಾರ್ಡ್. ಮೇಲಿನ ಆಯ್ಕೆ ಪ್ರಕ್ರಿಯೆಯನ್ನು ಹಿಂದಿನ 3 ವರ್ಷದ ಹಾಕಿ ಕ್ರೀಡಾ ಸಾಧನೆಯ ಪ್ರಮಾಣ ಪತ್ರ ಹಾಗೂ ಕೆಲವೊಂದು ಸಾಯಿ ನಿಗದಿತ…

Read More