ಲೇಖಕ: admin

ಮಡಿಕೇರಿ ಜ.18 NEWS DESK : ಕೊಡಗು ಜಿಲ್ಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಜನವರಿ, 19 ಮತ್ತು ಜನವರಿ, 25 ರಂದು ನಡೆಸಲಾಗುತ್ತಿರುವ ವಿವಿಧ ಇಲಾಖೆಗಳ ಗ್ರೂಪ್ “ಬಿ” ವೃಂದದ ಹುದ್ದೆಗಳ ನೇಮಕಾತಿಯ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರಡಿ ದತ್ತವಾದ ಅಧಿಕಾರದಂತೆ ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜು, ಮಡಿಕೇರಿ (ಪ್ರೌಢ ಶಾಲೆ ವಿಭಾಗ), ಸಂತ ಮೈಕಲರ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಸಂಯುಕ್ತ ಪ್ರೌಢಶಾಲೆ, ಸಂತ ಜೋಸೆಫರ ಕಾನ್ವೆಂಟ್ ಹಾಗೂ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್ ಈ ಪರೀಕ್ಷಾ ಕೇಂದ್ರ ಸೇರಿದಂತೆ ಈ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ. ಈ ಅವಧಿಯಲ್ಲಿ ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ…

Read More

ಮಡಿಕೇರಿ ಜ.18 NEWS DESK : ರಾಷ್ಟ್ರೀಯ ಆಯುಷ್ ಅಭಿಯಾನದ ಯೋಜನೆಯಡಿ ಕೊಡಗು ಜಿಲ್ಲಾ ಆಯುಷ್ ಇಲಾಖೆಯಲ್ಲಿ ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಕಮ್ಯುನಿಟಿ ಹೆಲ್ತ್ ಆಫೀಸರ್(ಸಿಎಚ್‍ಒ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ತಮ್ಮ ಸಂಪೂರ್ಣ ವಿವರವುಳ್ಳ ಅರ್ಜಿಯನ್ನು ನಿಗಧಿಪಡಿಸಿದ ಕನಿಷ್ಠ ವಿದ್ಯಾರ್ಹತೆ, ವಯೋಮಿತಿ ಹಾಗೂ ಇತರೆ ಎಲ್ಲಾ ದಾಖಲಾತಿಗಳೊಂದಿಗೆ ಸಲ್ಲಿಸಲು ಜನವರಿ, 31 ಕೊನೆ ದಿನವಾಗಿದೆ. ನೇರ ಸಂದರ್ಶನಕ್ಕೆ ದಿನಾಂಕವನ್ನು ನಂತರ ತಿಳಿಸಲಾಗುವುದು. ಕಮ್ಯುನಿಟಿ ಹೆಲ್ತ್ ಆಫೀಸರ್(ಸಿಎಚ್‍ಒ) ಸ.ಆ.ಚಿ ಶ್ರೀಮಂಗಲ-01 ಹುದ್ದೆ, ಸ.ಹೋ.ಚಿ ಪಾರಾಣೆ-01 ಹುದ್ದೆ, ಕನಿಷ್ಠ ವಿದ್ಯಾರ್ಹತೆ ಬಿಎಎಂಎಸ್ ಮಾಸಿಕ ವೇತನ ರೂ.40,000 (ರೂ.25,000 ಒಂದು ತಿಂಗಳಿಗೆ ಮತ್ತು ರೂ.15 ಸಾವಿರ ಒಂದು ತಿಂಗಳಿಗೆ ಪರ್ಮಾಪಾರ್ಮೆನ್ಸ್ ಪೇಮೆಂಟ್) ಸಾ.ಅಭ್ಯರ್ಥಿ 01. ಈ ಹುದ್ದೆಯು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ Community Health Officer (CHO) ಹುದ್ದೆಗಳನ್ನು ಒಂದು ವರ್ಷದವರಗೆ ಅಥವಾ ಸದರಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಖಾಯಂ ವೈದ್ಯಾಧಿಕಾರಿಗಳ ಹುದ್ದೆಗಳು ಭರ್ತಿಯಾಗುವವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ಚಾಲ್ತಿಯಲ್ಲಿರುತ್ತದೆ.…

Read More

ಸುಂಟಿಕೊಪ್ಪ ಜ.18 NEWS DESK : ಸರಕಾರಿ ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜು ಹಳೆಯ ವಿದ್ಯಾರ್ಥಿಗಳ ಸಂಘಟನೆ ವತಿಯಿಂದ ಜ.19 ರಂದು ಗುರು ಶಿಷ್ಯರ ಸಮ್ಮಿಲನ ಮತ್ತು ಸ್ನೇಹ ಸಂಗಮ ಕಾರ್ಯಕ್ರಮ ನಡೆಯಲಿದೆ. ಸ್ಥಳೀಯ ಜಿ.ಎಂ.ಪಿ ಶಾಲಾ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ವೈ.ಶಿವರಾಮಯ್ಯ ಧ್ವಜಾರೋಹಣ ಮಾಡುವುದರ ಮೂಲಕ ಚಾಲನೆ ನೀಡಲಿದ್ದಾರೆ. ನಂತರ ವಿದ್ಯ ಕಲಿಸಿದ ಹಿರಿಯ ಗುರುಗಳನ್ನು ವಿವಿಧ ಸಾಂಸ್ಕೃತಿಕ ಕಲಾ ತಂಡಗಳ ಮೂಲಕ ಮೆರವಣಿಗೆಯಲ್ಲಿ ಸಭಾ ಕಾರ್ಯಕ್ರಮಕ್ಕೆ ಕರೆತರಲಾಗುವುದು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಹಳೆ ವಿದ್ಯಾರ್ಥಿ, ಹಾಲಿ ಕರ್ನಾಟಕ ಉಚ್ಚನ್ಯಾಯಾಲಯದ ನ್ಯಾಯಮೂರ್ತಿ ಎಂ.ಜಿ.ಸುಕುರೆ ಕುಮಾರ್ ವಹಿಸಲಿದ್ದಾರೆ. ಸಂಜೆ ಸಮಾರೋಪ ಸಭೆ ನಡೆಯಲಿದ್ದು, ಶಾಲೆಯ ಹಳೆಯ ವಿದ್ಯಾರ್ಥಿ ಬೆಂಗಳೂರು ಬಿಬಿಎಂಪಿಯ ಸಹಾಯಕ ಆಯುಕ್ತ ಪಿ.ಎಸ್.ಮಹೇಶ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಶಾಲೆಗೆ ಸ್ಥಳದಾನ ಮಾಡಿದ ಶಾಲಾ ಕೊಠಡಿಗಳನ್ನು ಕಟ್ಟಿಸಿಕೊಟ್ಟ ದಾನಿಗಳಾದ ಮಾಜಿ ಶಾಸಕರು ಕೆ.ಎಂ.ಇಬ್ರಾಹಿಂ, ಬೆಟ್ಟಗೇರಿ ಸಮೂಹ ತೋಟಗಳ ಮಾಲೀಕ…

Read More

ಮಡಿಕೇರಿ ಜ.18 NEWS DESK : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರಿಗೆ ನಗರದ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ದಂಡ ಸಹಿತ 20 ವರ್ಷಗಳ ಕಠಿಣ ಸಜೆ ವಿಧಿಸಿ ತೀರ್ಪು ನೀಡಿದೆ. ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಹರದೂರು ಗ್ರಾಮದ ಎಸ್ಟೇಟ್‍ವೊಂದರ ಲೈನ್ ಮನೆಯಲ್ಲಿ ವಾಸವಿದ್ದ ರಮೇಶ ಎಂ.ಬಿ ಎಂಬಾತನೆ ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿ. ಲೈನ್ ಮನೆಯಲ್ಲಿ ವಾಸವಿದ್ದ ರಮೇಶ ಎಂ.ವಿ., 2021ರ ಆ.5 ರಂದು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಎನ್ನುವ ಆರೋಪದಡಿ ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆ, ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ನಂತರ ತನಿಖೆ ಕೈಗೊಂಡು 2021ರ ಆ.7ರಂದು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಪ್ರಕರಣದ ತನಿಖಾಧಿಕಾರಿ ಕುಶಾಲನಗರ ವೃತ್ತದ ಸಿಪಿಐ ಮಹೇಶ್ ಎಂ. ಹಾಗೂ ತನಿಖಾ ಸಹಾಯಕ ಲೋಕೇಶ್ ಹೆಚ್.ಎಸ್ ಅವರು ಪ್ರಕರಣದ ಬಗ್ಗೆ ಸಮಗ್ರ ತನಿಖೆ…

Read More

ನಾಪೋಕ್ಲು ಜ.18 NEWS DESK : ಈ ದೇಶಕ್ಕೆ ಉತ್ತಮ ಪ್ರಜೆಗಳನ್ನು ರೂಪಿಸುವ ಶಿಕ್ಷಕರ ಪಾತ್ರ ಮಹತ್ತರವಾದದ್ದು, ಗುರುಗಳಿಗೆ ನಾವುಗಳು ಸದಾ ಚಿರಋಣಿ ಆಗಿರಬೇಕು ಎಂದು ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳು ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಶಿಕ್ಷಕರು ಇಡುವ ಪ್ರತಿಯೊಂದು ಹೆಜ್ಜೆಯನ್ನು ವಿದ್ಯಾರ್ಥಿಗಳು ಗಮನಿಸಿ ಪಾಲಿಸುತ್ತಾರೆ. ಹಾಗಾಗಿ ದೇಶದ ಉತ್ತಮ ಭವಿಷ್ಯ ರೂಪಿಸುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು. ಕಾಲೇಜಿನ ಅಧ್ಯಕ್ಷರಾದ ಪೊಡನೊಳಂಡ.ಎಸ್.ಸುಬ್ಬಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚೇರಂಬಾಣೆ ಗ್ರಾ.ಪಂ ಅಧ್ಯಕ್ಷ ಪಟ್ಟಮಾಡ ಮಿಲನ್, ಕಾಲೇಜು ಪ್ರಾಂಶುಪಾಲ ದಾಯನ ಎಸ್.ರಾಮಕೃಷ್ಣ, ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಬಾಚರಣಿಯಂಡ ದಿನೇಶ್, ಚೇರಂಬಾಣೆ ಗೌಡ ಸಮಾಜದ ಅಧ್ಯಕ್ಷ ಕೊಡಪಾಲ್ ಗಪ್ಪು ಗಣಪತಿ, ಕಾಲೇಜಿನ ಮುಖ್ಯ ಶಿಕ್ಷಕ ಸಿ.ಆರ್.ಲೋಕೇಶ್, ಕಾಲೇಜಿನ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕ ವೃಂದ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ…

Read More

ಮೂರ್ನಾಡು ಜ.18 NEWS DESK : ಮನೆಯಲ್ಲಿ ಅವರವರ ಮಾತೃಭಾಷೆಯಲ್ಲಿಯೆ ಮಾತನಾಡುವ ಮೂಲಕ ಪ್ರತಿಯೊಬ್ಬರು ಮಾತೃಭಾಷೆಗೆ ಪ್ರಾಮುಖ್ಯತೆ ನೀಡಬೇಕು. ಆಗಮಾತ್ರ ಆ ಮಣ್ಣಿನ ಸಂಸ್ಕಾರ-ಸಂಸ್ಕೃತಿ ಪರಂಪರೆಗಳು ಮಕ್ಕಳಿಗೆ ತಿಳಿಯುತ್ತದೆ ಎಂದು ಮಾಜಿ ಸಚಿವ ಎಂ.ಸಿ.ನಾಣಯ್ಯ ಹೇಳಿದರು. ಮೂರ್ನಾಡು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆದ ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ “ಬೆಳ್ಳಿಹಬ್ಬ” ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆಂಗ್ಲಭಾಷೆ ಕಲಿಯಬೇಕು. ಅದನ್ನು ಶಾಲೆಗಳಲ್ಲಿ ಕಲಿಯಲು ಅವಕಾಶವಿದೆ. ಮನೆಯಲ್ಲಿ ಮಾತೃಭಾಷೆಗೆ ಪ್ರಾಧಾನ್ಯತೆ ನೀಡಬೇಕು. ಅಂದು ಇಲ್ಲಿ ಆಂಗ್ಲಮಾಧ್ಯಮ ಶಾಲೆ ಪ್ರಾರಂಭವಾಗಲು ಹಲವಾರು ಒತ್ತಡ, ಹೋರಾಟಗಳ ನಡವೆ ಪ್ರಾರಂಭ ಗೊಂಡಿರುವುದನ್ನು ನೆನಪಿಸಿಕೊಂಡ ಅವರು ಈಗ ಈ ವಿದ್ಯಾಸಂಸ್ಥೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾ 25ವರ್ಷಗಳನ್ನು ಪೂರೈಸಿದೆ ಎಂದು ಹರ್ಷವ್ಯಕ್ತಪಡಿಸಿದರು. ಮುಂದೆ ಇಲ್ಲಿ ಪದವಿಪೂರ್ವ ಶಿಕ್ಷಣವನ್ನು ಪ್ರಾರಂಭಿಸುವ ಆಲೋಚನೆ ಇದ್ದಲ್ಲಿ, ಅದಕ್ಕೆ ಬೇಕಾದ ಆಡಳಿತಾತ್ಮಕ ಸಹಕಾರ ಮಾಡುವುದಾಗಿ ಹೇಳಿದರು. ವಿವೇಕನಂದರ ಸಮಾರಂಭಗಳನ್ನು ಶಾಲೆಗಳಲ್ಲಿಯೆ ಆಚರಿಸುವಂತಾಗಬೇಕು. ಆಗಮಾತ್ರ ವಿವೇಕನಂದರ ಆದರ್ಶ, ಧೃಡ ನಿಲುವುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರ್ಥವಾಗುತ್ತದೆ. ಯಾವುದೆ ಶಾಲೆಯು ಕೇವಲ ಪಾಠಕ್ಕೆ…

Read More

ಮಡಿಕೇರಿ  NEWS DESK ಜ.18 : ಕಟ್ಟೆಮಾಡು ಶ್ರೀ ಮಹಾ ಮೃತ್ಯುಂಜಯ ದೇವಾಲಯದಲ್ಲಿ ಉಂಟಾಗಿರುವ ಭಿನ್ನಾಭಿಪ್ರಾಯಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತ ನಡೆಸುವ ಶಾಂತಿ ಸಂಧಾನ ಪ್ರಕ್ರಿಯೆಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಘೋಷಿಸಿರುವ ಅಖಿಲ ಕೊಡವ ಸಮಾಜ, ಎರಡೂ ಜನಾಂಗದವರು ಪರಸ್ಪರ ಪ್ರತಿಭಟನೆ ನಡೆಸದಂತೆ ಮನವಿ ಮಾಡಿದೆ. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಅವರು ಕಹಿ ಘಟನೆಯನ್ನು ಮರೆತು ಶಾಂತಿಯನ್ನು ಕಾಪಾಡಬೇಕಾಗಿದೆ, ದೇವಾಲಯದಲ್ಲಿ ನಡೆದ ಘಟನೆಯ ಬಗ್ಗೆ ಎರಡೂ ಕಡೆಯವರಲ್ಲಿ “ಹೀಗಾಗಬಾರದಾಗಿತ್ತು” ಎನ್ನುವ ಬೇಸರವಿದೆ. ಒಬ್ಬರು ಪ್ರತಿಭಟನೆ ನಡೆಸಿದರೆ, ಮತ್ತೊಬ್ಬರು ಪ್ರತಿಭಟನೆಗೆ ಮುಂದಾಗುತ್ತಾರೆ, ಇದರಿಂದ ಯಾರಿಗೂ ಲಾಭವಿಲ್ಲ. ಆದ್ದರಿಂದ ಆದಷ್ಟು ಬೇಗ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಸಂಧಾನಕ್ಕೆ ವೇದಿಕೆ ಸಿದ್ಧಗೊಳಿಸಬೇಕು ಎಂದು ಒತ್ತಾಯಿಸಿದರು. ಕೊಡವರಿಗೆ ಎಲ್ಲಾ ಜನಾಂಗದವರ ಮೇಲೆ ಗೌರವವಿದೆ, ಹಲವು ದೇವಸ್ಥಾನಗಳಲ್ಲಿ ಭಂಡಾರ ತಕ್ಕರಾಗಿ ಅರೆಭಾಷಿಕ ಜನಾಂಗ ಬಾಂಧವರು ಕೊಡವ ಜನಾಂಗದವರೊAದಿಗೆ ಸೇರಿ ಶಾಂತಿಯುತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೊಡಗಿನ ಜನಜೀವನದಲ್ಲಿ ಅವರು…

Read More

ಸೋಮವಾರಪೇಟೆ  ಜ.18 NEWS DESK : ಗ್ಯಾರೆಂಟಿ ಯೋಜನೆಗಳಿಂದ ಮಹಿಳೆಯರು ಸಬಲರಾಗುತ್ತಿದ್ದು, ರಾಜ್ಯ ಸರ್ಕಾರ ಮಹಿಳೆಯರ ಪರವಾಗಿದೆ ಎಂದು ರಾಜ್ಯ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಮೈಸೂರು ವಿಭಾಗದ ಉಪಾಧ್ಯಕ್ಷರಾದ ಡಾ.ಪುಷ್ಪ ಅಮರನಾಥ್ ತಿಳಿಸಿದರು. ಪಟ್ಟಣದ ಕೆ.ಎಸ್.ಆರ್.ಟಿ.ಸಿ. ಬಸ್ಸ್ ನಿಲ್ದಾಣದಲ್ಲಿ ಮಹಿಳೆಯರೊಂದಿಗೆ ಸಂವಾದನಡೆಸಿ ಮಾತನಾಡಿದರು. ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ರಾಷ್ಟ್ರದಲ್ಲಿ ಹೆಸರುವಾಸಿಯಾಗಿದೆ ಎಂದರು. ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವ ನಿಧಿ ಯೋಜನೆಗಳ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯಪಡೆದರು. ಈ ಸಂದರ್ಭ ಮಹಿಳೆಯೊಬ್ಬರು ಗೃಹಲಕ್ಷ್ಮಿ ಹಣದಿಂದ ಚಿನ್ನ ಖರೀದಿಸಲು ಮತ್ತೊಬ್ಬರು ವೈದ್ಯಕೀಯ ವೆಚ್ಚಕ್ಕಾಗಿ ಬಳಸುತ್ತಿರುವುದಾಗಿ ತಿಳಿಸಿದರು. ಈ ಸಂದರ್ಭ ಕೆಲವು ತಿಂಗಳ ಹಣ ಬರದೆ ಇರುವ ಬಗ್ಗೆ ಗಮನ ಸೆಳೆದಾಗ ಸದ್ಯದಲ್ಲೇ ಒಟ್ಟಿಗೆ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದರು. ಕೆಲವರಿಗೆ ಅನ್ನಭಾಗ್ಯ ಯೋಜನೆಗೆ ಪಡಿತರ ಚೀಟಿ ಸಮಸ್ಯೆಯಾಗಿರುವ ಬಗ್ಗೆ ಕೆಲವರು ಅಧ್ಯಕ್ಷರನ್ನು ಪ್ರಶ್ನಿಸಿದಾಗ ಸ್ಥಳದಲ್ಲಿದ್ದ ಆಹಾರ ಇಲಾಖೆ ಅಧಿಕಾರಿಗಳು ಗಮನ ಹರಿಸಿ…

Read More

ವಿರಾಜಪೇಟೆ ಜ.18 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ವಿರಾಜಪೇಟೆ, ಸ್ವಸಹಾಯ ಸಂಘಗಳ ಒಕ್ಕೂಟಗಳ ಆಶ್ರಯದಲ್ಲಿ ಕೃಷಿ ಸ್ವ ಉದ್ಯೋಗ ತರಬೇತಿ ಕಾರ್ಯಕ್ರಮ ಮೂರ್ನಾಡು ವಲಯದ ಹೊದ್ದೂರು ವಾಟೆಕಾಡು ಕಾರ್ಯಕ್ಷೇತ್ರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ. ಲಕ್ಷ್ಮಿ ಬಳಗಾನೂರಮಠ ಮಾತನಾಡಿ, ಕೃಷಿ ಸ್ವ- ಉದ್ಯೋಗ ಮಾಡುವುದರಿಂದ ಆತ್ಮಸ್ಥೈರ್ಯ ಬರುತ್ತದೆ. ಹಾಗೂ ಸಿರಿ ಧಾನ್ಯಗಳ ಬಗ್ಗೆ ಕೈಗಾರಿಕೆ ಮತ್ತು ಮಾರುಕಟ್ಟೆಯ ಕುರಿತು ಮಾಹಿತಿ ನೀಡಿದರು. ಸ್ವ-ಉದ್ಯೋಗ ಮಾಡುವವರಿಗೆ ಸರಕಾರದಿಂದ ಸಬ್ಸಿಡಿ ಸಿಗುತ್ತದೆ. ಅಣಬೆ ಕೃಷಿ, ಜೇನುಕೃಷಿ, ಹೈನುಗಾರಿಕೆ ಈ ರೀತಿಯ ಅನೇಕ ಸ್ವ-ಉದ್ಯೋಗದ ಬಗ್ಗೆ ಮಾಹಿತಿ ನೀಡಿದರು. ಕೃಷಿ ಮೇಲ್ವಿಚಾರಕರಾದ ವಸಂತ್ ಮಾತನಾಡಿ, ಕೃಷಿ ಸ್ವ-ಉದ್ಯೋಗವು ಕೃಷಿಕರಿಗೆ ಆದಾಯದ ಹೆಚ್ಚುವರಿ ಮೂಲವನ್ನು ಒದಗಿಸುತ್ತದೆ. ಪಶು ಪಾಲನೆ, ಹಸುಗಳು, ಕುರಿಗಳು, ಮೇಕೆಗಳು ಮತ್ತು ಕೋಳಿಗಳ ಸಾಕಾಣಿಕೆ ನಮ್ಮ ಆದಾಯಕ್ಕೆ ಒಂದು ಬಲ ವರ್ಧನೆ ಆಗುತ್ತದೆ. ಈ ರೀತಿಯಲ್ಲಿ ಸ್ವಉದ್ಯೋಗವು ಕೇವಲ…

Read More

ಪೊನ್ನಂಪೇಟೆ ಜ.18 NEWS DESK : ಕ್ರೀಡೆಯ ತವರು ಎಂದು ಕರೆಸಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ವಿವಿಧ ಕ್ರೀಡಾಕೂಟಗಳು ನಿರಂತರವಾಗಿ ನಡೆಯುತ್ತಿದೆ. ಈ ರೀತಿಯ ಕ್ರೀಡಾಕೂಟಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕೊಡಗು ಕ್ರೀಡಾ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲು ಸರಕಾರ ಮುಂದಾಗಬೇಕು ಎಂದು ಆಗ್ರಹಿಸಿರುವ ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ಅಧ್ಯಕ್ಷರಾದ ವಿರಾಜಪೇಟೆಯ ದುದ್ದಿಯಂಡ ಹೆಚ್. ಸೂಫಿ ಹಾಜಿ, ಇದರಿಂದ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯುವುದಲ್ಲದೆ ಜಿಲ್ಲೆಯಿಂದ ಹೆಚ್ಚಿನ ಪ್ರತಿಭಾನ್ವಿತ ಕ್ರೀಡಾಪಟುಗಳನ್ನು ಉತ್ಪಾದಿಸಬಹುದಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ವಿರಾಜಪೇಟೆ ಸಮೀಪದ ಬೇಟೋಳಿ ಗ್ರಾಮದಲ್ಲಿರುವ ಚಿಟ್ಟಡೆಯ ಜುಮ್ಮಾ ಮಸೀದಿ ಮೈದಾನದಲ್ಲಿ ಚಿಟ್ಟಡೆಯ ಕೂವಲೆರ ಕುಟುಂಬಸ್ಥರ ಆತಿಥ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಕೊಡವ ಮುಸ್ಲಿಂ ಮನೆತನಗಳ ನಡುವಿನ ಪ್ರಥಮ ವರ್ಷದ ಹೊನಲು ಬೆಳಕಿನ ಕೌಟುಂಬಿಕ ವಾಲಿಬಾಲ್ ಪಂದ್ಯಾವಳಿ “ಕೂವಲೆರ ಚಿಟ್ಟಡೆ ಕಪ್ -2025″ಅನ್ನು ವಿದ್ಯುಕ್ತವಾಗಿ ಉದ್ಘಾಟಿಸಿ ಮಾತನಾಡಿದ ಅವರು, ಕೊಡಗಿನಲ್ಲಿ ಮಳೆಗಾಲದ ಮೂರು ತಿಂಗಳನ್ನು ಹೊರತುಪಡಿಸಿದರೆ ಉಳಿದ ಎಲ್ಲಾ ಅವಧಿಯಲ್ಲೂ ಬೇರೆ ಬೇರೆ ರೀತಿಯ ಕ್ರೀಡಾಕೂಟಗಳು ನಿರಂತರವಾಗಿ ಜರುಗುತ್ತಿರುತ್ತವೆ.…

Read More