ಲೇಖಕ: admin

ಮಡಿಕೇರಿ NEWS DESK ಜ.17 : ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಮತ್ತು ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ದಕ್ಷತೆಯನ್ನು ಮೆರೆಯುತ್ತಿರುವ ಕೊಡಗು ಜಿಲ್ಲಾ ಪೊಲೀಸ್ ಹೊಸ ಪ್ರಯತ್ನವೊಂದಕ್ಕೆ ಮುಂದಾಗಿದೆ. ನಿತ್ಯ ಕರ್ತವ್ಯದ ಒತ್ತಡದಲ್ಲೇ ಇರುವ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಕೊಂಚ ಮನೋರಂಜನೆಯೂ ಬೇಕು ಎನ್ನುವ ಉದ್ದೇಶದಿಂದ “ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ”ಯನ್ನು (ಕೊಡಗು ಪೊಲೀಸ್ ಕಲ್ಚರಲ್ ಕ್ಲಬ್) ರಚಿಸಲಾಗಿದೆ. ಈ ಸಾಂಸ್ಕೃತಿಕ ವೇದಿಕೆಯ ಉದ್ಘಾಟನಾ ಸಮಾರಂಭ ಜನವರಿ 26ರಂದು ಮಡಿಕೇರಿಯ ಪೊಲೀಸ್ ಕವಾಯತು ಮೈದಾನದಲ್ಲಿ ಅದ್ದೂರಿಯಾಗಿ ನಡೆಯಲಿದೆ. ಉದ್ಘಾಟನಾ ಸಮಾರಂಭದ ಪ್ರಯುಕ್ತ ಸಂಜೆ 5.30 ಗಂಟೆಗೆ ಮಂಗಳೂರಿನ ಖ್ಯಾತ ಕಲಾವಿದರು ಹಾಗೂ ಜೀ಼ ಕನ್ನಡ ಸರಿಗಮಪ ಖ್ಯಾತಿಯ ಕಲಾವಿದರಿಂದ ಸಂಗೀತ ರಸಸಂಜೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸರ್ವರೂ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕೊಡಗು ಪೊಲೀಸ್ ಮನವಿ ಮಾಡಿದೆ.

Read More

ಮಡಿಕೇರಿ ಜ.17 NEWS DESK  : ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲನ್ನು ಕತ್ತರಿಸಿ ಅಮಾನವೀಯ ಕೃತ್ಯವೆಸಗಿರುವುದನ್ನು ಖಂಡಿಸಿ, ದುಷ್ಕೃತ್ಯವೆಸಗಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಗೋ ಸಂರಕ್ಷಣಾ ಸಂವರ್ಧನಾ ಸಮಿತಿಯ ನೇತೃತ್ವದಲ್ಲಿ ವಿವಿಧ ಹಿಂದೂ ಪರ ಸಂಘಟನೆಗಳು ಮಡಿಕೇರಿಯಲ್ಲ್ಲಿ ಮಾನವ ಸರಪಳಿ ರಚಿಸಿ ಬೃಹತ್ ಪ್ರತಿಭಟನೆ ನಡೆಸಿದವು. ನಗರದ ಜನರಲ್ ಕೆ.ಎಸ್. ತಿಮ್ಮಯ್ಯ ವೃತ್ತದಲ್ಲಿ ಶುಕ್ರವಾರ ಬೆಳಗ್ಗೆ ಸಮಾವೇಶಗೊಂಡ ವಿವಿಧ ಹಿಂದೂ ಪರ ಸಂಘಟನೆಗಳ ಪ್ರಮುಖರು ಮತ್ತು ಕಾರ್ಯಕರ್ತರು, ಹಿಂದೂ ಸಮಾಜಕ್ಕೆ ಪೂಜನೀಯವಾಗಿರುವ ಹಸುಗಳ ಮೇಲೆ ಕುಕೃತ್ಯವೆಸಗಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲವೆಂದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಜ.ತಿಮ್ಮಯ್ಯ ವೃತ್ತದಲ್ಲಿ ಮಾನವ ಸರಪಳಿಯನ್ನು ರಚಿಸಿದ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು, ರಸ್ತೆ ತಡೆ ನಡೆಸಿ ಘಟನೆಯನ್ನು ತೀವ್ರವಾಗಿ ಖಂಡಿಸಿದರು. ಗೋವುಗಳ ಸಂರಕ್ಷಣೆಗೆ ಕಠಿಣ ಕಾನೂನು ಜಾರಿಗೊಳಿಸಬೇಕೆಂದು ಒತ್ತಾಯಿಸಿದರು. ಬಳಿಕ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಛೇರಿಗೆ ತೆರಳಿ ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದರು. ಹಿಂದು…

Read More

ಮಡಿಕೇರಿ ಜ.17 NEWS DESK : ಸರಕಾರಿ ಭೂಮಿಯನ್ನು ಅತಿಕ್ರಮಿಸಿಕೊಂಡವರಿಗೆ ಗುತ್ತಿಗೆ ಆಧಾರದಲ್ಲಿ ಭೂಮಿ ನೀಡುವ ‘ಭೂ ಗುತ್ತಿಗೆ ಕಾಯ್ದೆ’ಯನ್ನು ಹಿಂಪಡೆಯಬೇಕು ಮತ್ತು ಒತ್ತುವರಿ ತೆರವುಗೊಳಿಸಿ ನಿವೇಶನ ರಹಿತ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡಬೇಕೆಂದು ಆಗ್ರಹಿಸಿ ಭೂ ಗುತ್ತಿಗೆ ವಿರೋಧಿ ಹೋರಾಟ ಸಮಿತಿ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿತು. ವಿವಿಧ ಸಂಘಟನೆಗಳ ಪ್ರಮುಖರು, ನೂರಾರು ನಿವೇಶನ ರಹಿತರು ಶುಕ್ರವಾರ ನಗರದ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಸರಕಾರದ ನಡೆಯನ್ನು ಖಂಡಿಸಿದರು. ‘ನಮ್ಮ ಭೂಮಿ ನಮ್ಮ ಹಕ್ಕು’ ಘೋಷಣೆಯೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಪ್ರತಿಭಟನೆ ನಡೆಸಿದ ನಿವೇಶನ ರಹಿತರು ಮತ್ತು ವಿವಿಧ ಸಂಘಟನೆಗಳ ಪ್ರಮುಖರು ಸರ್ಕಾರ ಇನ್ನಾದರು ಎಚ್ಚೆತ್ತುಕೊಂಡು ಒತ್ತುವರಿಯಾಗಿರುವ ಸರಕಾರಿ ಭೂಮಿಯನ್ನು ನಿವೇಶನ ರಹಿತರಿಗೆ ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಭೂ ಗುತ್ತಿಗೆ ವಿರೋಧಿ ಹೋರಾಟ ಸಮಿತಿಯ ಅಧ್ಯಕ್ಷ ಡಿ.ಎಸ್.ನಿರ್ವಾಣಪ್ಪ ಮಾತನಾಡಿ, ಭೂಗುತ್ತಿಗೆ ಕಾಯ್ದೆಯನ್ನು ಈ ಹಿಂದಿನ ಬಿಜೆಪಿ ಸರಕಾರ ಜಾರಿಗೆ ತಂದಿತು. ಪ್ರಸ್ತುತ…

Read More

ಮಡಿಕೇರಿ ಜ.17 NEWS DESK : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯಲ್ಲಿ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ನ ಸಹಯೋಗದಲ್ಲಿ ನಡೆದ 20ನೇ ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಚಾಮೆರ ನಕ್ಷದೇಚಮ್ಮ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಿದ್ದಾಳೆ. ಭೈರವಕ್ಯ ಜಗದ್ಗುರು ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ 80ನೇ ಜನ್ಮೋತ್ಸವದ ನೆನಪಿನಲ್ಲಿ ಶ್ರೀಮಠದಲ್ಲಿ, ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ದಿವ್ಯ ಸಾನಿದ್ಯದಲ್ಲಿ, ಅಖಿಲ ಭಾರತೀಯ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ, ಗೋ.ಚನ್ನಬಸಪ್ಪ, ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು, ಮಕ್ಕಳ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಅಶೋಕ್, ಕನ್ನಡ ಸಾಹಿತ್ಯ ಪರಿಷತ್ ಶಿವಮೊಗ್ಗ ಜಿಲ್ಲಾಧ್ಯಕ್ಷ ಮಂಜುನಾಥ ಸೇರಿದಂತೆ ಗಣ್ಯರು ಉಪಸ್ಥಿತಿಯಲ್ಲಿ ನಡೆದ ಸಮ್ಮೇಳನದಲ್ಲಿ ಚಾಮೆರ ನಕ್ಷದೇಚಮ್ಮ ಕೊಡಗು ಜಿಲ್ಲೆಯ ಏಕೈಕ ಪ್ರತಿನಿಧಿಯಾಗಿ ಭಾಗವಹಿಸಿ ಕವನ ವಾಚಿಸಿದಳು. ಚಾಮೆರ ದಿನೇಶ್ ಬೆಳ್ಯಪ್ಪ, ಪ್ರಿಯಾದಿನೇಶ್ ದಂಪತಿಗಳ ಪುತ್ರಿಯಾದ ಚಾಮೆರ ನಕ್ಷದೇಚಮ್ಮ, ಅರಮೇರಿ ಕಳಂಚೇರಿಯ ಎಸ್.ಎಂ.ಎಸ್. ವಿದ್ಯಾಪೀಠದ ನಾಲ್ಕನೇ ತರಗತಿ ವಿದ್ಯಾರ್ಥಿನಿ.  

Read More

ಮಡಿಕೇರಿ ಜ.17 NEWS DESK : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಪ್ರಸಕ್ತ ವರ್ಷದಲ್ಲಿ ನಿಗಧಿ ಮಾಡಿರುವ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡ ಉಪಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಸಕ್ತ ಆರ್ಥಿಕ ವರ್ಷ ಕೊನೆಗೊಳ್ಳುವ ಹಂತದಲ್ಲಿದ್ದು, ಪ್ರಸಕ್ತ ವರ್ಷಕ್ಕೆ ನಿಗಧಿಮಾಡಿರುವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ, ವರದಿ ನೀಡುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದರು. ಕೃಷಿ ಇಲಾಖೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಜಂಟಿ ನಿರ್ದೇಶಕರಾದ ಚಂದ್ರಶೇಖರ ಅವರು ಪ್ರಸಕ್ತ ವರ್ಷದಲ್ಲಿ ಕೃಷಿ ಯಾಂತ್ರೀಕರಣ ಹಾಗೂ ಸೂಕ್ಷ್ಮ ನೀರಾವರಿ ಯೋಜನೆ ಸೇರಿದಂತೆ ವಿವಿಧ ಯೋಜನೆಯಡಿ ಶೇ.67ರಷ್ಟು ಪ್ರಗತಿ ಸಾಧಿಸಲಾಗಿದ್ದು, ಮಾರ್ಚ್ ಅಂತ್ಯದೊಳಗೆ ಶೇಕಡವಾರು ಪ್ರಗತಿ ಸಾಧಿಸಲಾಗುವುದು ಎಂದು ತಿಳಿಸಿದರು. ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ ರೈತ ಮಹಿಳೆಯರಿಗೆ ಹೈನುಗಾರಿಕೆ…

Read More

ಮಡಿಕೇರಿ ಜ.17 NEWS DESK : ಸುಂಟಿಕೊಪ್ಪದ ಗದ್ದೇಹಳ್ಳ ಆ್ಯಮಿಟಿ ಯುನೈಟೆಡ್ ಎಫ್.ಸಿ ವತಿಯಿಂದ ಗಣರಾಜ್ಯೋತ್ಸವದ ಪ್ರಯುಕ್ತ ಜ.23 ರಿಂದ 26ರ ವರೆಗೆ ಅಖಿಲ ಭಾರತ 5+2 ಹೊನಲು ಬೆಳಕಿನ ಕಾಲ್ಚೆಂಡು ಪಂದ್ಯಾವಳಿ ನಡೆಯಲಿದೆ ಎಂದು ಆ್ಯಮಿಟಿ ಯುನೈಟೆಡ್ ಎಫ್.ಸಿಯ ಸದಸ್ಯ ಎಸ್.ಎ.ಸತ್ತಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗದ್ದೇಹಳ್ಳದ ಸೈಟ್ ಗ್ರೌಂಡ್‍ನಲ್ಲಿ ನಾಲ್ಕು ದಿನಗಳ ಕಾಲ ನಡೆಯಲಿರುವ ಏಳನೇ ವರ್ಷದ ಪಂದ್ಯಾವಳಿಗೆ ಜ.23 ರಂದು ಸಂಜೆ 3 ಗಂಟೆಗೆ ಚಾಲನೆ ದೊರೆಯಲಿದೆ ಎಂದು ತಿಳಿಸಿದರು. ಪಂದ್ಯಾವಳಿಯ ಪ್ರಥಮ ವಿಜೇತರಿಗೆ ರೂ.1,00,001, ದ್ವಿತೀಯ ರೂ.50,005 ನಗದು ಮತ್ತು ಬೀಟೆ ಮರದ ಆಕರ್ಷಕ ಟ್ರೋಫಿ ನೀಡಲಾಗುವುದು. ಅಲ್ಲದೇ ಅತ್ಯುತ್ತಮ ಶಿಸ್ತುಬರಿತ ತಂಡ, ಅತ್ಯುತ್ತಮ ಆಟಗಾರ, ಅತೀ ಹೆಚ್ಚು ಗೋಲುಗಳಿಸಿದ ಆಟಗಾರ, ಉತ್ತಮ ರಕ್ಷಕ ಆಟಗಾರ, ಅತ್ಯುತ್ತಮ ಗೋಲಿ, ಪ್ರತೀ ಪಂದ್ಯದಲ್ಲಿ ಮ್ಯಾನ್ ಆಫ್ ದ ಮ್ಯಾಚ್ ಬಹುಮಾನವನ್ನು ನೀಡಲಾಗುವುದೆಂದರು. ಪಂದ್ಯಾವಳಿಯ ಮೈದಾನ ಶುಲ್ಕ ರೂ.3000 ನಿಗಧಿಪಡಿಸಿದ್ದು,  ಕನಿಷ್ಟ ರೂ.1,000 ನಗದು ಪಾವತಿಸಿ…

Read More

ಮಡಿಕೇರಿ ಜ.17 NEWS DESK : ಅಯ್ಯಂಗೇರಿ ಕಲಾಂ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಫೆ.25 ರಿಂದ 27ರ ವರೆಗೆ ಅಯ್ಯಂಗೇರಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ ಎಂದು ಕ್ಲಬ್‍ನ ಅಧ್ಯಕ್ಷ ಪಿ.ಎಂ.ಅಬ್ದುಲ್ ರಶೀದ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಯ್ಯಂಗೇರಿ ಕೊಲಂಬೋ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 9ನೇ ವರ್ಷದ ಪಂದ್ಯಾವಳಿಯು ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಮಾದರಿಯಲ್ಲಿ ನಡೆಯಲಿದೆ ಎಂದರು. ರಾಯಲ್ ಸ್ಟೈಕರ್ಸ್, ಯೂನೈಟೆಡ್ ಬಕ್ಕಾ, ಕ್ರೋಬ್ರಾ, ಬ್ಲಾಕ್ ಕ್ಯಾಪ್ಸ್, ಫೈಟಿಂಗ್ ಬ್ರದರ್ಸ್, ಸೂಪರ್ ಸಿಕ್ಸರ್ಸ್, ಎ.ಆರ್.ಎಂ.ಸ್ಟ್ರಾಂಗ್, ಟೆಂಡರ್ಸ್ ಸ್ಟೈಕರ್ಸ್, ಸೂಪರ್ ಸಿಕ್ಸ್ ತಂಡಗಳ ನಡುವೆ ಪಂದ್ಯಾವಳಿ ನಡೆಯಲಿದ್ದು, ಪ್ರಥಮ ವಿಜೇತರಿಗೆ 51,555 ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ವಿಜೇತರಿಗೆ 27,000 ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು. ಜ.19 ರಂದು ನಾಪೋಕ್ಲುವಿನ ಬೆಕಾಚಿ ಹೊಟೇಲ್‍ನಲ್ಲಿ ಆಟಗಾರರ ಬಿಡ್ಡಿಂಗ್ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದರು. ಸಣ್ಣಪುಲಿಕೋಟು, ಅಯ್ಯಂಗೇರಿ ಮತ್ತು ದೊಡ್ಡಪುಲಿಕೋಟು ಗ್ರಾಮಗಳ…

Read More

ಸೋಮವಾರಪೇಟೆ ಜ.17 NEWS DESK : ಪಟ್ಟಣದ ಶಾಲಾರಸ್ತೆ ನಿವಾಸಿ ಕಾಫಿ ಬೆಳೆಗಾರ, ಹಿರಿಯ ಸಹಕಾರಿ, ಸ್ವಯಂ ಸೇವಕ, ಭಾರತೀಯ ಜನತಾಪಕ್ಷದ ಹಿರಿಯ ಕಾರ್ಯಕರ್ತರಾದ ಡಿ.ವಿ.ಸದಾನಂದ್ (76)ಇಂದು (ಜ.17) ರಂದು  ನಿಧನರಾಗಿದ್ದಾರೆ. ಅನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜೆ.ಎಸ್.ಎಸ್.ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ, ಪುತ್ರಿ ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.  ಮೃತರ ಅಂತ್ಯ ಸಂಸ್ಕಾರ ಜ.18 ರಂದು ಮಧ್ಯಾಹ್ನ ಸೋಮವಾರಪೇಟೆಯಲ್ಲಿ ನಡೆಯಲಿದೆ. ಸರಳ, ಸಜ್ಜನಿಕೆಯ ಸದಾನಂದ್ ತಮ್ಮ ಸೌಮ್ಯತೆಯಿಂದಲೇ ಎಲ್ಲರನ್ನೂ ಆಕರ್ಷಿಸಿಸುತ್ತಿದ್ದವರು, 1973ರಿಂದ ಆರೆಸ್ಸೆಸ್ ನ ಸಕ್ರಿಯ ಕಾರ್ಯಕರ್ತರಾಗಿದ್ದ ಇವರು,1977 ರಲ್ಲಿ ಜನತಾ ಪಕ್ಷದ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಏ.ಕೆ.ಸುಬ್ಬಯ್ಯನವರ ಪರವಾಗಿ ಪ್ರಚಾರ ನಡೆಸಿದ್ದ ಇವರು ನಂತರ ಭಾರತೀಯ ಜನತಾ ಪಕ್ಷ ಸೇರಿ ಇಂದಿನವರೆಗೂ ನಿಷ್ಠಾವಂತ ಕಾರ್ಯಕರ್ತರಾಗಿ ದುಡಿದಿದ್ದಾರೆ. ಹಿರಿಯ ರಾಜಕಾರಣಿ ದಿವಂಗತ ಬಿ.ಬಿ.ಶಿವಪ್ಪನವರ ಒಡನಾಡಿಯಾಗಿದ್ದರು. ಹಿಂದೆ ಲಾಲ್ಕೃಷ್ಣ ಆಡ್ವಾಣಿ, ಸುಷ್ಮಾ ಸ್ವರಾಜ್ ಮುಂತಾದ…

Read More

ಮಡಿಕೇರಿ ಜ.17 NEWS DESK : ಆದಿವಾಸಿಗಳ ಹೆಸರಿನಲ್ಲಿ ಸರಕಾರಗಳು ಕೋಟಿ ಕೋಟಿ ಅನುದಾನ ಘೋಷಣೆ ಮಾಡುತ್ತಿವೆ, ಆದರೆ ಯಾವುದೇ ಸೌಲಭ್ಯಗಳು ನೈಜ ಆದಿವಾಸಿಗಳ ಪಾಲಾಗುತ್ತಿಲ್ಲ. ನಮ್ಮನ್ನು ಮೊದಲಿನಂತೆ ಗಾಳಿ ಬೆಳಕಿನೊಂದಿಗೆ ಸ್ವಚ್ಛಂದವಾಗಿ ಬದುಕಲು ಬಿಡಿ ಎಂದು ಅರಣ್ಯ ಹಕ್ಕು ಸಮಿತಿ ಹಾಗೂ ಕೊಡಗಿನ ಆದಿವಾಸಿ ಮುಖಂಡರು ಆಗ್ರಹಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೊಡಗು ಜಿಲ್ಲಾ ಆದಿವಾಸಿ ಮುಖಂಡ ಆರ್.ಕೆ.ಚಂದ್ರು ದೇಶಕ್ಕೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳೇ ಕಳೆದಿದ್ದರೂ ಆದಿವಾಸಿಗಳಿಗೆ ಇಂದಿಗೂ ಟಾರ್ಪಲ್ ಗಳನ್ನು ವಿತರಿಸಲಾಗುತ್ತಿದೆ. ನಮಗೆ ಟಾರ್ಪಲ್ ನ ಅವಶ್ಯಕತೆ ಇಲ್ಲ, ಈ ಸೌಲಭ್ಯವನ್ನು ರದ್ದುಗೊಳಿಸಿ ಎಂದು ಒತ್ತಾಯಿಸಿದರೂ ರದ್ದುಗೊಳಿಸುತ್ತಿಲ್ಲ. ಇರುವ ಗುಡಿಸಲುಗಳಿಗೆ ವಿದ್ಯುತ್ ಬೆಳಕಿನ ವ್ಯವಸ್ಥೆಯಿಲ್ಲ. ಪ್ರತಿವರ್ಷ ಸರಕಾರಗಳು ಆದಿವಾಸಿಗಳ ಹೆಸರಿನಲ್ಲಿ ಕೋಟಿ ಕೋಟಿ ಅನುದಾನದ ಮಾತನಾಡುತ್ತವೆ. ಆದರೆ ನಮಗೇನು ದೊರೆಯುತ್ತಿಲ್ಲ, ಸರಕಾರದ ಯಾವುದೇ ಅನುದಾನ ನಮಗೆ ಬೇಕಿಲ್ಲ. ನಾವಿರುವ ಅರಣ್ಯ ಮತ್ತು ಅರಣ್ಯದ ಅಂಚಿನಲ್ಲಿ ಪ್ರಕೃತಿಯ ಗಾಳಿ, ಬೆಳಕಿನೊಂದಿಗೆ ನೆಮ್ಮದಿಯಾಗಿ ಜೀವಿಸಲು ಅವಕಾಶ ನೀಡಲಿ.…

Read More

ಮಂಗಳೂರು ಜ.17 NEWS DESK : ಕೋಟೆಕರ್ ಉಲ್ಲಾಳದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ತುರ್ತು ಸಭೆ ನಡೆಸಿ ಶೀಘ್ರ ಆರೋಪಿಗಳ ಪತ್ತೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ದರೋಡೆ ಮಾಡಿ ಆರೋಪಿಗಳು ಇಷ್ಟು ಸಲೀಸಾಗಿ ತಪ್ಪಿಸಿಕೊಂಡು ಹೋಗಿದ್ದು ಹೇಗೆ..? ಎಷ್ಟೆಲ್ಲಾ ಟೋಲ್ ಗಳನ್ನು ದಾಟಿ ಹೋಗಿದ್ದಾರೆ, ತಕ್ಷಣ ಟೋಲ್ ಗಳನ್ನು‌ ಏಕೆ ಬಿಗಿ ಮಾಡಲಿಲ್ಲ..? ಎಲ್ಲಾ ಟೋಲ್ ಗಳಲ್ಲೂ ಬಿಗಿ ತಪಾಸಣೆ ನಡೆಸಬೇಕು. ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಕಾಬಂಧಿ ಹಾಕಿ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಪ್ಪಿಸಬೇಕು ಎಂದು ಸೂಚಿಸಿದರು.

Read More