ಮಡಿಕೇರಿ ಜ.17 NEWS DESK : ಭಾರತೀಯ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆಯ ನೇರ ಕಾರ್ಯಕರ್ತರಾಗಲು(ಡೈರೆಕ್ಟ್ ಏಜೆಂಟ್) ಜ.22 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಡೈರೆಕ್ಸ್ ಏಜೆಂಟ್ ಆಗಲು ನೇರ ಸಂದರ್ಶನ ನಡೆಯಲಿದೆ. ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ ವಯೋಮಿತಿ ಇರುವುದಿಲ್ಲ. ಹತ್ತನೇ ತರಗತಿ ಮತ್ತು ಮೇಲ್ಪಟ್ಟು, ನಿರುದ್ಯೋಗಿಗಳು, ಸ್ವಯಂ ಉದ್ಯೋಗ ಅಕ್ಷರಸ್ಥ ಯುವಕರು, ಯಾವುದೇ ಜೀವ ವಿಮಾ ಸಲಹೆಗಾರರಾಗಿದ್ದವರು, ಸೈನಿಕ ಸೇವೆಯಲ್ಲಿ ಇದ್ದವರು, ಅಂಗನವಾಡಿ ಕಾರ್ಯಕರ್ತರು, ಮಹಿಳಾ ಮಂಡಳಿ ಕಾರ್ಯಕರ್ತರು, ನಿವೃತ್ತ ಶಿಕ್ಷಕರು ಅಥವಾ ಈ ಯಾವುದೇ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಅರ್ಜಿ, ಹತ್ತನೇ ತರಗತಿ ಉತ್ತೀರ್ಣ ಪ್ರಮಾಣ ಪತ್ರ, ಐದು ಸಾವಿರ ರೂ.ಗಳ ಎನ್ಎಸ್ಸಿ/ಕೆವಿಪಿ(ಸಂದರ್ಶನದ ನಂತರ), ಆಧಾರ್, ವೋಟರ್ ಐಡಿ, ಯಾವುದೇ ಭಾವಚಿತ್ರವುಳ್ಳ ವಿಳಾಸ ದಾಖಲಾತಿ ಹಾಗೂ ಪಾನ್ ಕಾರ್ಡ್ ಪ್ರತಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕೊಡಗು ಅಂಚೆ ವಿಭಾಗೀಯ ಕಚೇರಿ, ಕೊಡಗು ಅಂಚೆ ವಿಭಾಗ, ಮಡಿಕೇರಿ-571201 ದೂ.ಸಂ.08272-295496…
ಲೇಖಕ: admin
ಮಡಿಕೇರಿ ಜ.17 NEWS DESK : ಸರಕಾರದ ಆದೇಶದಂತೆ ಕೊಡಗು ಜಿಲ್ಲೆಯಲ್ಲಿ ಆದಾಯ ತೆರಿಗೆ ಸಲ್ಲಿಸಲಾದ/ಪಾವತಿದಾರರ ಒಟ್ಟು 903 ಆದ್ಯತಾ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿಯನ್ನಾಗಿ ಪರಿವರ್ತನೆ ಮಾಡಲಾಗಿರುತ್ತದೆ. ಆದರೆ ಸರಕಾರ ಮರು ಪರಿಶೀಲಿಸುವವರೆಗೆ ಯಥವಾತ್ತಾಗಿ ಮುಂದುವರೆಸಲು ಸೂಚಿಸಿದಂತೆ ಈ ಎಲ್ಲಾ 903 ಪಡಿತರ ಚೀಟಿಗಳನ್ನು ಯಥಾವತ್ತಾಗಿ ಬಿಪಿಎಲ್ ಪಡಿತರ ಚೀಟಿಯನ್ನಾಗಿ ಮುಂದುವರೆಸಲಾಗಿದೆ. ಈ ಸಂಬಂಧ ಪಡಿತರ ಚೀಟಿದಾರರು ಸಂಬಂಧಿಸಿದ ತಾಲ್ಲೂಕು ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಜೆ.ಬಿ.ಶ್ರೀಧರಮೂರ್ತಿ ತಿಳಿಸಿದ್ದಾರೆ.
ಮಡಿಕೇರಿ ಜ.17 NEWS DESK : ಪ್ರಸಕ್ತ (2024-25) ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣಗಳು ಲಭ್ಯವಿದೆ. ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿಯೊಂದಿಗೆ ಪಹಣಿ(ಆರ್ಟಿಸಿ), ಆಧಾರ್ ಕಾರ್ಡ್ನ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಒಂದು ಭಾವಚಿತ್ರ ರೂ.100ರ ಛಾಫಾ ಕಾಗದ ದಾಖಲಾತಿಗಳನ್ನು ಸಲ್ಲಿಸಿ ಇಲಾಖೆಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ ಸದುಪಯೋಗ ಪಡೆದುಕೊಳ್ಳಲು ಕೋರಿದೆ. ಕೃಷಿ ಉಪ ಕರಣಗಳಾದ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ಕಲ್ಟಿವೇಟರ್, ರೋಟವೇಟರ್, ಎಂ.ಬಿ.ಪ್ಲೂ, ಡಿಸ್ಕ್ ಪ್ಲೋ, ಕಳೆಕೊಚ್ಚುವ ಯಂತ್ರ, ಕಳೆ ತೆಗೆಯುವ ಯಂತ್ರ, ಡಿಸೇಲ್ ಪಂಪ್ ಸೆಟ್, ಪವರ್ ಸ್ಪ್ರೇಯರ್, ಮೇವು ಕತ್ತರಿಸುವ ಯಂತ್ರ, ಭತ್ತದ ಒಕ್ಕಣೆ ಯಂತ್ರ, ಭತ್ತ ಕಟಾವು ಯಂತ್ರ, ಮುಸುಕಿನ ಜೋಳ ಒಕ್ಕಣೆ ಯಂತ್ರ, ಕೃಷಿ ಉತ್ಪನ್ನಗಳ ಸಂಸ್ಕರಣೆ ಯಂತ್ರಗಳಾದ, ರಾಗಿ ಕ್ಲೀನಿಂಗ್ ಯಂತ್ರ, ಹಿಟ್ಟು ಮಾಡುವ ಯಂತ್ರ,…
ಮಡಿಕೇರಿ ಜ.17 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಮಹಾಯೋಗಿ ಶ್ರೀ ವೇಮನ ಜಯಂತಿ ಕಾರ್ಯಕ್ರಮವು ಜ.19 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಮಾಜಿ ಅಧ್ಯಕ್ಷರಾದ ಬಿ.ಎಸ್.ಲೋಕೇಶ್ ಸಾಗರ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಇತರರು ಪಾಲ್ಗೊಳ್ಳಲಿದ್ದಾರೆ.
ಮಂಗಳೂರು ಜ.17 NEWS DESK : ಕಳೆದ ಬಜೆಟ್ ನಲ್ಲಿ ಘೋಷಿಸಿದ್ದಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿ.ವಿಯ ಪ್ರಾದೇಶಿಕ ಕಚೇರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಶಂಕುಸ್ಥಾಪನೆ ನೆರವೇರಿಸಿದರು. ನಂತರ ಮಾತನಾಡಿದ ಅವರು, ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಏಷ್ಯಾದ ಅತ್ಯಂತ ದೊಡ್ಡ ಆರೋಗ್ಯ ವಿಶ್ವ ವಿದ್ಯಾಲಯ ಆಗಿದೆ. 3.5 ಲಕ್ಷ ವೈದ್ಯ ವಿದ್ಯಾರ್ಥಿಗಳಿರುವ ಅತ್ಯಂತ ದೊಡ್ಡ ಆರೋಗ್ಯ ವಿ.ವಿ ಇದು. ಆದ್ದರಿಂದ ನಿಪುಣ ವೈದ್ಯರನ್ನು ರೂಪಿಸುವುದರ ಜೊತೆಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವಲ್ಲಿ ರಾಜೀವ್ ಗಾಂಧಿ ವಿ.ವಿಯ ಕೊಡುಗೆ ಅಪಾರವಾಗಿದೆ ಎಂದರು. ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಮಾದರಿಯಲ್ಲಿ ಶುಚಿತ್ವ ಮತ್ತು ನಿರ್ವಹಣೆ ಕಾಪಾಡುವ ಜೊತೆಗೆ ಗುಣಮಟ್ಟದ ಚಿಕಿತ್ಸಾ ಸೌಲಭ್ಯ ಸಿಗುವಂತಾಗಬೇಕು. ಶ್ರೀಮಂತರು ಮತ್ತು ನಮ್ಮಂಥ ರಾಜಕಾರಣಿಗಳೂ ಸರ್ಕಾರಿ ಆಸ್ಪತ್ರೆಗೆ ಬರುವಂಥಾಗಬೇಕು ಎನ್ನುವ ದಿಕ್ಕಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ. ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಇರಬೇಕು ಎನ್ನುವುದು ನನ್ನ ಗುರಿ. ಮಂಗಳೂರಿನಲ್ಲಿ ಉತ್ತಮ ಆರೋಗ್ಯ ಸೇವೆ ಇದ್ದರೂ ಈ ಜಿಲ್ಲೆಗೂ ಸರ್ಕಾರಿ ವೈದ್ಯಕೀಯ…
ಮಡಿಕೇರಿ ಜ.17 NEWS DESK : ಶತಮಾನದ ಹಿಂದೆ ಮಹಾತ್ಮಾ ಗಾಂಧಿ ಅವರು ಅಧ್ಯಕ್ಷತೆ ವಹಿಸಿದ್ದ ಏಕೈಕ ಕಾಂಗ್ರೆಸ್ ಅಧಿವೇಶನವನ್ನು ಸ್ಮರಣೀಯಗೊಳಿಸಲು ಕರ್ನಾಟಕದ ಗಡಿ ಜಿಲ್ಲೆ, ಬೆಳಗಾವಿಯಲ್ಲಿ ಜ.21 ರಂದು ಬೃಹತ್ ಸಮಾವೇಶ ನಡೆಯುತ್ತಿದ್ದು, ಈ ಸಮಾವೇಶದಲ್ಲಿ ಕೊಡಗು ಜಿಲ್ಲೆಯ ಕಾಂಗ್ರೆಸ್ ಪ್ರಮುಖರು ಕೂಡ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ 1924 ರಂದು ನಡೆದ ಕಾಂಗ್ರೆಸ್ ಅಧಿವೇಶನವು ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಒಂದು ಪ್ರಮುಖ ಘಟ್ಟವಾಗಿದೆ. ಈ ಅಧಿವೇಶನಕ್ಕೆ ನೂರು ವರ್ಷ ತುಂಬಿರುವ ಹಿನ್ನೆಲೆ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಅದ್ದೂರಿಯಾಗಿ ನಡೆಯಲಿದೆ ಎಂದರು. ಕೊಡಗು ಜಿಲ್ಲೆಯ ಎಲ್ಲಾ ಬ್ಲಾಕ್ ಕಾಂಗ್ರೆಸ್ ಘಟಕಗಳ ಪ್ರಮುಖರು ಮತ್ತು ಗ್ಯಾರಂಟಿ ಅನುಷ್ಠಾನ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ::: ದ್ವೇಷ ಹುಟ್ಟಿಸಬೇಡಿ :::…
ವಿರಾಜಪೇಟೆ ಜ.17 NEWS DESK : ನಗರದ ಪ್ರಮುಖ ರಸ್ತೆಗಳು ಹದಗೆಟ್ಟಿದೆಯಾದರು, ಪುರಸಭೆ ಈ ಬಗ್ಗೆ ಗಮನ ಹರಿಸಿ ಅಗತ್ಯ ದುರಸ್ತಿ ಕಾರ್ಯಗಳನ್ನು ನಡೆಸುವುದರ ಬದಲಾಗಿ ನಿರ್ಲಕ್ಷ್ಯ ಧೋರಣೆ ತಳೆದಿದೆಯೆಂದು ವಿರಾಜಪೇಟೆ ನಾಗರಿಕ ಸಮಿತಿ ಆರೋಪಿಸಿದೆ. ಸುದ್ದಿಗೋಷ್ಠಿಯಲ್ಲಿ ಸಮಿತಿಯ ಸದಸ್ಯರಾದ ಪಿ.ಕೆ.ಅಬ್ದುಲ್ ರೆಹಮಾನ್ ಮಾತನಾಡಿ, ನಗರದ ಪ್ರಮುಖ ರಸ್ತೆಗಳು ಮಳೆಯಿಂದಾಗಿ ಹದಗೆಟ್ಟು ಸಂಚಾರಕ್ಕೆ ಯೋಗ್ಯವಲ್ಲದ ಸ್ಥಿತಿ ನಿರ್ಮಾಣವಾಗಿದೆ. ಮಳೆಯ ಬಳಿಕ ರಸ್ತೆ ದುರಸ್ತಿ ಮಾಡಲಾಗುತ್ತದೆ ಎಂದು ಭರವಸೆ ನೀಡಿದ್ದರು. ಇಂದಿನವರೆಗೆ ಗುಂಡಿಮಯ ರಸ್ತೆಯಲ್ಲಿ ತೆರಳುವ ದುಸ್ಥಿತಿ ನಾಗರಿಕರಿಗೆ ಎದುರಾಗಿದೆಯೆಂದು ಟೀಕಿಸಿದರು. ನಗರದ ವ್ಯಾಪ್ತಿಯಲ್ಲಿ ಬೀದಿ ದೀಪಗಳು ಸಮರ್ಪಕವಾಗಿ ಇಲ್ಲದಿರುವುದರಿಂದ ರಾತ್ರಿಯ ಅವಧಿಯಲ್ಲಿ ಸಂಚಾರ ಕಷ್ಟಕರವಾಗಿದೆ. ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟಲು ಪುರಸಭೆ ಯಾವುದೇ ಕ್ರಮ ಜರುಗಿಸಿಲ್ಲವೆಂದು ಆರೋಪಿಸಿದ ರೆಹಮಾನ್, ಕುಡಿಯುವ ನೀರು ಯೋಜನೆಯ ಕಾಮಗಾರಿ ಆರಂಭಿಸಿ ತಿಂಗಳು ಕಳೆದಿದ್ದು, ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚದೆ ಹಾಗೆಯೇ ಬಿಟ್ಟಿದ್ದಾರೆಂದು ಟೀಕಿಸಿದರು. ಪುರಸಭೆ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು. ಇಲ್ಲವಾದಲ್ಲಿ ಸಮಿತಿ ಮತ್ತು ಸಂಘ ಸಂಸ್ಥೆಯ…
ವಿರಾಜಪೇಟೆ ಜ.17 NEWS DESK : ಎಲ್ಲಾ ರೀತಿಯ ಕ್ರೀಡಾಕೂಟಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಫೆಬ್ರವರಿ 2 ರಿಂದ ಲೀಗ್ ಮಾದರಿಯ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಕ್ರೀಡಾ ಆಯೋಜಕರು ತಿಳಿಸಿದರು. ವಿರಾಜಪೇಟೆ ಫ್ರೆಂಡ್ಸ್ ವತಿಯಿಂದ ನಗರದ ಚಿಕ್ಕಪೇಟೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ತಾಲ್ಲೂಕು ಒಳಾಂಗಣ ಶಟಲ್ ಬ್ಯಾಡ್ಮಿಂಟನ್ ಕ್ರೀಡಾಂಗಣದಲ್ಲಿ ಕೊಡಗು ಶಟಲ್ ಬ್ಯಾಡ್ಮಿಂಟನ್ ಲೀಗ್-2ನೇ ಅವೃತ್ತಿಯ ಕ್ರೀಡಾಪಟುಗಳ ಬಿಡ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಜನ ಸೇವಾ ಟ್ರಸ್ಟ್ ನ ಅಧ್ಯಕ್ಷ ಎಂ.ಇ.ಶರೀಫ್ ಮಾತನಾಡಿ, ಎಲ್ಲಾ ಕ್ರೀಡೆಗಳನ್ನು ಸಮಾನತೆಯಿಂದ ಕಾಣಬೇಕು ಮತ್ತು ಗೌರವಿಸುವಂತಾಗಬೇಕು. ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಲು ಪಂದ್ಯಾವಳಿಗಳ್ನು ಆಯೋಜಸಲಾಗುತ್ತಿದೆ, ಸೋಲು ಗೆಲುವನ್ನು ಪರಿಗಣಿಸದೆ ಕ್ರೀಡಾ ಸ್ಫೂರ್ತಿಯಿಂದ ಭಾಗವಹಿಸುವಂತಾಗಬೇಕು ಎಂದು ಹೇಳಿದರು. ವಿರಾಜಪೇಟೆ ಫ್ರೆಂಡ್ಸ್ ಆಯೋಜಕ ಪಿ.ವೈ.ಇರ್ಷಾದ್ ಮಾತನಾಡಿ, ಫೆ.2 ರಂದು ವಿರಾಜಪೇಟೆ ಒಳಾಂಗಣ ಕ್ರೀಡಾಂಗಣದಲ್ಲಿ ಲೀಗ್ ಮಾದರಿಯಲ್ಲಿ ಡಬಲ್ಸ್ ಪಂದ್ಯಾವಳಿ ನಡೆಯಲಿದೆ ಎಂದರು. ಜಿಲ್ಲೆಯ ಸಿ.ಡಿ…
ಸೋಮವಾರಪೇಟೆ NEWS DESK ಜ.17 : ಚಾಮರಾಜಪೇಟೆಯಲ್ಲಿ ಗೋವಿನ ಕೆಚ್ಚಲು ಕತ್ತರಿಸಿದ ಕಿಡಿಗೇಡಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈತನಿಗೆ ವಿಧಿಸುವ ಶಿಕ್ಷೆ ಕಟುಕರಿಗೆ ಪಾಠವಾಗಬೇಕೆಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹಸುವಿನ ಕೆಚ್ಚಲು ಕತ್ತರಿಸಿರುವುದು ಹೇಯ ಕೃತ್ಯವಾಗಿದೆ ಮತ್ತು ಆರೋಪಿಯ ಕ್ರೌರ್ಯ ಮನೋಭಾವಕ್ಕೆ ಸಾಕ್ಷಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾರತ ದೇಶದಲ್ಲಿ ಗೋವುಗಳಿಗೆ ವಿಶೇಷ ಸ್ಥಾನಮಾನವಿದೆ, ಹಸುಗಳನ್ನು ಪೂಜ್ಯ ಭಾವನೆಯಿಂದ ನೋಡುತ್ತೇವೆ ಮತ್ತು ಪೂಜಿಸುತ್ತೇವೆ. ಕೃಷಿ ಕ್ಷೇತ್ರದಲ್ಲಿ ಗೋವುಗಳು ರೈತರ ಬೆನ್ನೆಲುಬಾಗಿವೆ, ಸರ್ವೋಪಕಾರಿಯಾಗಿರುವ ಗೋವಿನ ಮೇಲೆ ಪೈಶಾಚಿಕ ಕೃತ್ಯ ನಡೆದಿರುವುದು ಖಂಡನೀಯ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾದಾಗ ಮಾತ್ರ ಈ ರೀತಿಯ ಕ್ರೂರತ್ವವನ್ನು ನಿಯಂತ್ರಿಸಲು ಸಾಧ್ಯ. ಹಸುಗಳ ಮಾಲೀಕರಿಗೆ ಹೊಸ ಹಸುಗಳನ್ನು ಕೊಡಿಸಿದಾಕ್ಷಣ ಕೆಚ್ಚಲು ಕಳೆದುಕೊಂಡ ಹಸುವಿನ ನೋವು ಶಮನವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸೋಮವಾರಪೇಟೆ NEWS DESK ಜ.17 : ಇಂದು ಬೆಳಿಗ್ಗೆ ರಾಘವೇಂದ್ರ ಬಸ್ಸಿನಲ್ಲಿ ಶನಿವಾರಸಂತೆಯಿಂದ ಆಗಮಿಸಿದ ಅಪರಿಚಿತ ವ್ಯಕ್ತಿಯೊಬ್ಬರು ಸೋಮವಾರಪೇಟೆ ಬಸ್ ನಿಲ್ದಾಣದಲ್ಲಿ ಕುಳಿತ ಸ್ಥಿತಿಯಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಮಧ್ಯಾಹ್ನ ವ್ಯಕ್ತಿಯನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ ಪೊಲೀಸರು ವ್ಯಕ್ತಿ ಮೃತಪಟ್ಟಿರುವುದನ್ನು ಖಾತ್ರಿ ಪಡಿಸಿಕೊಂಡರು. ಈ ಅಪರಿಚಿತ ವ್ಯಕ್ತಿಯ ಬಗ್ಗೆ ತಿಳಿದವರು ಸೋಮವಾರಪೇಟೆ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ವೃತ್ತನಿರೀಕ್ಷಕ ಮುದ್ದುಮಾದೇವ ಮನವಿ ಮಾಡಿದ್ದಾರೆ.






