ಮಡಿಕೇರಿ NEWS DESK ಜ.17 : ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದಲ್ಲಿ ಉಂಟಾಗಿರುವ ಗೊಂದಲ ನಿವಾರಣೆಗೆ ಅರೆಭಾಷೆ ಹಾಗೂ ಕೊಡವ ಸಮುದಾಯಗಳ ನಾಯಕರುಗಳು ಜೊತೆೆ ಸೇರಿ ಸಂಧಾನ ಮಾತುಕತೆಯ ಮೂಲಕ ಶಾಂತಿಯುತ ಪರಿಹಾರ ಕಂಡುಕೊಳ್ಳಲು ಮುಂದಾದರೆ ಆ ಸಭೆಯಲ್ಲಿ ನಾನು ಕೂಡ ಭಾಗಿಯಾಗುವೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಸ್ಪಷ್ಟಪಡಿಸಿದ್ದಾರೆ. ಕಳೆದ ಒಂದು ತಿಂಗಳ ಬೆಳವಣಿಗೆ ಮನಸ್ಸಿಗೆ ಅತೀವ ನೋವನ್ನುಂಟು ಮಾಡಿದೆ. ಎಲ್ಲರೂ ಶಾಂತಿಯನ್ನು ಕಾಪಾಡಬೇಕಾಗಿದೆ, ಸಂಧಾನ ಮಾತುಕತೆಯ ಮೂಲಕವೇ ಶಾಂತಿಯುತ ಪರಿಹಾರ ಕಂಡುಕೊಳ್ಳಬೇಕಾಗಿದೆ. ಎರಡೂ ಸಮುದಾಯದವರು ಜೊತೆ ಸೇರಿ ನಡೆಸುವ ಸಭೆಯಲ್ಲಿ ನಾನೂ ಪಾಲ್ಗೊಳ್ಳುತ್ತೇನೆ. ಎಲ್ಲರೂ ಒಗ್ಗಟ್ಟಾಗಿ ಶಾಂತಿಯುತ, ಶಾಶ್ವತ ಪರಿಹಾರ ಕಂಡುಕೊಳ್ಳೋಣ ಎಂದು ಶಾಸಕರು ಮನವಿ ಮಾಡಿದ್ದಾರೆ. ಸುಮಾರು 7ಲಕ್ಷ ಜನಸಂಖ್ಯೆ ಹೊಂದಿರುವ ಕೊಡಗು ಜಿಲ್ಲೆ ಕೇವಲ ಒಂದು ಎರಡು ಜನಾಂಗಕ್ಕೆ ಸೀಮಿತವಾಗಿಲ್ಲ, ವಿವಿಧ ಜಾತಿ, ಜನಾಂಗ, ಸಮುದಾಯದ ಮಂದಿ ಇಲ್ಲಿ ಜೀವನ ಸಾಗಿಸುತ್ತಿದ್ದಾರೆ. ಎಲ್ಲರನ್ನೂ ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ಪರಿಶಿಷ್ಟರು,…
ಲೇಖಕ: admin
ಮಡಿಕೇರಿ ಜ.17 NEWS DESK : ಸೌತ್ ಏಷ್ಯನ್ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಸುಳ್ಯ ಜಟ್ಟಿಪಳ್ಳದ ಬಿ.ಎ.ಪಾಲಾಕ್ಷ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಮಂಗಳೂರಿನ ಮಂಗಳ ಸ್ಟೇಡಿಯಂ ನಲ್ಲಿ ನಡೆದ ಸೌತ್ ಏಷ್ಯನ್ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಟ್ರಿಪಲ್ ಜಂಪ್ ನಲ್ಲಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರು. ಪಂದ್ಯಾವಳಿಯಲ್ಲಿ ಭಾರತ ಮಾತ್ರವಲ್ಲದೆ ಶ್ರೀಲಂಕ, ಭೂತನ್, ನೇಪಾಳ, ಬಾಂಗ್ಲಾದೇಶಗಳ ಸುಮಾರು 1700 ವಿವಿಧ ಕ್ರೀಡಾಪಟುಗಳು ಭಾಗವಹಿಸಿದ್ದರು. ಬಿ.ಎ.ಪಾಲಾಕ್ಷ ಮಡಿಕೇರಿಯ ಜಿಲ್ಲಾ ಪಾಲಿ ಕ್ಲಿನಿಕ್ ನಲ್ಲಿ ಸರ್ಕಾರಿ ಸೇವೆ ಸಲ್ಲಿಸುತ್ತಿದ್ದಾರೆ.
ವಿರಾಜಪೇಟೆ ಜ.17 NEWS DESK : ಅಮ್ಮತ್ತಿ ಒಂಟಿಅಂಗಡಿ ಗ್ರಾಮದ ಶ್ರೀ ಕ್ಷೇತ್ರ ಎಡೂರಿನಲ್ಲಿ ಜ.18 ಮತ್ತು 19 ರಂದು ಕಲ್ಲುರ್ಟಿ ಕೊರಗಜ್ಜ ದೈವಗಳ ವಾರ್ಷಿಕ ನೇಮೋತ್ಸವ ನಡೆಯಲಿದೆ. ಜ.17 ರಂದು ಸಂಜೆ 7 ಗಂಟೆಗೆ ದೇವಿಯ ವಿಶೇಷ ಪೂಜೆ ನಡೆಯಲಿದೆ. ಜ.18 ರಂದು ಸಂಜೆ 6.30ಕ್ಕೆ ದೈವಗಳ ಭಂಡಾರ ಇಳಿಯುವುದು. ರಾತ್ರಿ 10.30ಕ್ಕೆ ಪರಿವಾರ ದೈವಗಳಾದ ಶ್ರೀ ಜೋಡಿ ಕಲ್ಲುರ್ಟಿ, ಶ್ರೀ ಮಂತ್ರದೇವತೆ, ಶ್ರೀ ಮಂತ್ರ ಗುಳಿಗ ದೈವಗಳ ದರ್ಶನ ನಡೆಯಲಿದೆ. ಜ.19 ರಂದು ಬೆಳಿಗ್ಗೆ 7 ಗಂಟೆಯಿಂದ ಶ್ರೀ ಧರ್ಮದೈವ ಅಣ್ಣಪ್ಪ ಪಂಜೂರ್ಲಿ ಹಾಗೂ 10 ಗಂಟೆಗೆ ಸ್ವಾಮಿ ಕೊರಗಜ್ಜ ನೇಮೋತ್ಸವ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಮನವಿ ಮಾಡಿದೆ. ವರದಿ : ಕಿಶೋರ್ ಕುಮಾರ್ ಶೆಟ್ಟಿ
ಮಡಿಕೇರಿ NEWS DESK ಜ.17 : ಸ್ವಂತ ನೆಲೆ ಇಲ್ಲದೆ ಸಂಕಷ್ಟದ ಬದುಕು ನಡೆಸುತ್ತಿರುವ ಶೋಷಿತ ಸಮಾಜವನ್ನು ಕಡೆಗಣಿಸಿ, ಉಳ್ಳವರಿಗೆ ಅನುಕೂಲ ಕಲ್ಪಿಸಲು ಜಾರಿಗೆ ತಂದಿರುವ ‘ಭೂ ಗುತ್ತಿಗೆ ಆದೇಶ’ವನ್ನು ರಾಜ್ಯ ಸರಕಾರ ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ಭೂ ಗುತ್ತಿಗೆ ವಿರೋಧಿ ಹೋರಾಟ ಸಮಿತಿ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿತು.ಸರಕಾರದ ಆದೇಶವನ್ನು ವಿರೋಧಿಸಿ ನಗರದ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಸಮಿತಿಯ ಪ್ರಮುಖರು ಹಾಗೂ ನಿವೇಶನ ರಹಿತರು ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು. ಭೂ ಗುತ್ತಿಗೆ ಆದೇಶವನ್ನು ಸರಕಾರ ಹಿಂತೆಗೆದುಕೊಳ್ಳದಿದ್ದಲ್ಲಿ ಮುಖ್ಯಮಂತ್ರಿಗಳ ಮನೆಗೆ ಕಾಲ್ನಡಿಗೆ ಜಾಥಾ ನಡೆಸಲಾಗುವುದು. ನಿವೇಶನ ರಹಿತರಿಗೆ ನಿವೇಶನ ಒದಗಿಸಲು ಸರಕಾರ ಅಗತ್ಯ ಕ್ರಮ ಕೈಗೊಳ್ಳುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಕಳೆದ ಹಲವು ದಶಕಗಳಿಂದ ನಿವೇಶನ ರಹಿತರು ತಮಗೆ ಭೂಮಿ ನೀಡುವಂತೆ ನಡೆಸುತ್ತಿರುವ ಹೋರಾಟಕ್ಕೆ ಸ್ಪಂದಿಸದ ಸರಕಾರ, ಭೂ ಗುತ್ತಿಗೆ ಆದೇಶದಂತೆ ಉಳ್ಳವರಿಗೆ ಕೇವಲ 1 ಸಾವಿರ ರೂ.ಗಳಂತೆೆ…
ಮಡಿಕೇರಿ ಜ.17 NEWS DESK : ಸೋಮವಾರಪೇಟೆ ತಾಲ್ಲೂಕಿನ ಐಗೂರು ಗ್ರಾ.ಪಂ ವ್ಯಾಪ್ತಿಯ ಯಡವನಾಡು ಗ್ರಾಮದಲ್ಲಿ ರೂ.40 ಲಕ್ಷ ವೆಚ್ಚದ ನೂತನ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, 2021ರಲ್ಲಿ ಮುಂಗಾರು ಮಳೆಯ ಸಂದರ್ಭ ಕುಸಿದಿದ್ದ ಸೇತುವೆಯನ್ನು ಮರು ನಿರ್ಮಾಣ ಮಾಡುವ ಭರವಸೆಯನ್ನು ನಾನೇ ನೀಡಿದ್ದೆ,ಕೆಆರ್ಡಿಎಲ್ ಇಲಾಖೆ ಮುಖಾಂತರ ಅನುದಾನ ನೀಡಲಾಗಿದೆ. ಸೇತುವೆ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಂಡರೆ ಅನುದಾನ ತಂದಿದಕ್ಕೂ ಸಾರ್ಥಕತೆ ಇರುತ್ತದೆ. ಗುತ್ತಿಗೆದಾರರು ಈ ಬಗ್ಗೆ ಗಮನಹರಿಸಬೇಕು. ಕಳಪೆ ಕಾಮಗಾರಿಯ ಬಗ್ಗೆ ಗ್ರಾಮಸ್ಥರಿಗೆ ಅನುಮಾನ ಬಂದರೆ ದೂರು ನೀಡಬಹುದು ಎಂದು ಹೇಳಿದರು. ಸೇತುವೆಯ ಎರಡೂ ಬದಿಯಲ್ಲಿ ತಡೆಗೋಡೆ ನಿರ್ಮಿಸಲು ಅಕ್ಕಪಕ್ಕದ ಜಾಗದ ಮಾಲೀಕರು ಸಹಕರಿಸಬೇಕೆಂದರು. ಐಗೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಗೌರಮ್ಮ, ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಗಣೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್, ವಲಯಾಧ್ಯಕ್ಷ ಕೆ.ಎಲ್. ಹೊನ್ನಪ್ಪ, ಪ್ರಮುಖರಾದ ರಮೇಶ್, ಮಚ್ಚಂಡ ಅಶೋಕ್, ಕೆ.ಪಿ. ದಿನೇಶ್, ಎಸ್.ಎನ್.…
ಮಡಿಕೇರಿ ಜ.17 NEWS DESK : ಬಾಳೆಲೆ ಆರೋಗ್ಯ ಕೇಂದ್ರದ ವಿಷಯವಾಗಿ ಮಹತ್ವದ ಸಭೆಯು ಬಾಳೆಲೆ ಕೊಡವ ಸಮಾಜ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ವೈದ್ಯಾಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರೊಂದಿಗೆ ಚರ್ಚಿಸಿ, ದಾಖಲೆಗಳನ್ನು ಪರಿಶೀಲಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಆರೋಗ್ಯ ಕೇಂದ್ರದಲ್ಲಿನ ಹಲವು ನ್ಯೂನ್ಯತೆಗಳ ಬಗ್ಗೆ ಗಂಭೀರವಾಗಿ ಮಾತನಾಡಿದ ಶಾಸಕರು, ರೋಗಿಗಳಿಗೆ ಆಗುತ್ತಿರುವ ಅನಾನುಕೂಲಗಳ ಬಗ್ಗೆ ತಮಗೆ ಬಂದ ದೂರಿನ ವಿಷಯಗಳ ಕುರಿತು ಹೇಳಿದರು. ಇವುಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಶೀಘ್ರವಾಗಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಆರೋಗ್ಯ ಕೇಂದ್ರದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು. ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಸಾರ್ವಜನಿಕರ ಆರೋಗ್ಯ ಸಂಬಂಧಿತ ವಿಷಯದಲ್ಲಿ ಅತ್ಯಂತ ಗಂಭೀರವಾಗಿ ಕೆಲಸ ಮಾಡಬೇಕು. ರೋಗಿಗಳಿಗೆ ಸ್ಪಂದನೆ ನೀಡುವ ವಿಷಯದಲ್ಲಿ ಯಾವಾಗಲೂ ಮುಂಚೂಣಿಯಲ್ಲಿ ಇರಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ರಾಜ್ಯವನ್ಯ ಜೀವಿ ಮಂಡಳಿ…
ಮಡಿಕೇರಿ NEWS DESK ಜ.17 : ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ವಿಚಾರದಲ್ಲಿ ಉಂಟಾಗಿರುವ ಗೊಂದಲ ನಿವಾರಣೆಗೆ ಶಾಸಕರ ಮಧ್ಯಸ್ಥಿಕೆಯಲ್ಲಿ ಸಧ್ಯದಲ್ಲಿಯೇ ಸೌಹಾರ್ದಯುತ ಪರಿಹಾರ ದೊರೆಯಲಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ಜಿಲ್ಲಾಧಿಕಾರಿಗಳು ಫೆ.10 ರವರೆಗೆ ಗೊಂದಲ ನಿವಾರಣೆಗೆ ಕಾಲಾವಕಾಶ ನೀಡಿದ್ದಾರೆ. ಇದಕ್ಕೂ ಮೊದಲು ಅಥವಾ ನಂತರ ಎಲ್ಲಾ ಸಮುದಾಯಗಳ ನಾಯಕರುಗಳನ್ನು ಒಗ್ಗೂಡಿಸಿ ಶಾಂತಿಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಸಕರುಗಳು ಮುಂದಾಗಲಿದ್ದಾರೆ. ಈಗಾಗಲೇ ವಿವಿಧ ಸಂಘಟನೆಗಳು ಶಾಸಕರುಗಳನ್ನು ಭೇಟಿಯಾಗಿ ಭಿನ್ನಾಭಿಪ್ರಾಯ ಶಮನಕ್ಕೆ ಮನವಿ ಮಾಡಿಕೊಂಡಿದ್ದಾರೆ ಎಂದರು. ಇದೊಂದು ಸೂಕ್ಷ್ಮ ವಿಚಾರವಾಗಿರುವ ಕಾರಣ ಜಿಲ್ಲಾಡಳಿತದ ಮೂಲಕ ಕಾನೂನು ವ್ಯಾಪ್ತಿಯಲ್ಲಿ ಶಾಂತಿಯುತ ಪರಿಹಾರ ದೊರೆಯಬೇಕು ಎನ್ನುವ ನಿರೀಕ್ಷೆ ನಮ್ಮದಾಗಿತ್ತು. ಸಧ್ಯದಲ್ಲೇ ಶಾಸಕರುಗಳು ಈ ಕುರಿತು ಸೂಕ್ತ ನಿರ್ಧಾರ ಕೈಗೊಂಡು ಉತ್ತಮ ರೀತಿಯ ಪರಿಹಾರ ದೊರೆಯುವಂತೆ ನೋಡಿಕೊಳ್ಳಲಿದ್ದಾರೆ. ಜಿಲ್ಲೆಯಲ್ಲಿ ಎಲ್ಲಾ ಸಮುದಾಯದವರು ಶಾಂತಿ ಮತ್ತು ಒಗ್ಗಟ್ಟಿನಿಂದ ಜೀವನ…
ಮಡಿಕೇರಿ ಜ.17 NEWS DESK : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಉತ್ತಮ ಸಾಧನೆ ಮಾಡಿರುವ ರಾಜ್ಯಮಟ್ಟದ ತಾಲ್ಲೂಕು ಪ್ರಶಸ್ತಿಗೆ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಆಯ್ಕೆಯಾಗಿದೆ. ರಾಜ್ಯ ಸಂಘ ಮೂಲಕ ನೀಡಲಾಗುವ ಉತ್ತಮ ಸಾಧನೆ ಮಾಡಿರುವ ತಾಲ್ಲೂಕು ಹಾಗೂ ಜಿಲ್ಲಾ ಸಂಘಗಳಿಗೆ ವಾರ್ಷಿಕ ಪ್ರಶಸ್ತಿಗಳು ಘೋಷಣೆಯಾಗಿದ್ದು, ಈ ತಿಂಗಳ 18 ಮತ್ತು 19ರಂದು ತುಮಕೂರಿನಲ್ಲಿ ನಡೆಯಲಿರುವ 39ನೇ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಮತ್ತು ರಾಜ್ಯಉಪಾಧ್ಯಕ್ಷರು ಹಾಗೂ ಸಂಘದ ಜಿಲ್ಲಾ ಉಸ್ತುವಾರಿ ಅಜ್ಜಮಾಡ ರಮೇಶ್ ಕುಟ್ಟಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯದಲ್ಲಿ ಅತ್ಯುತ್ತಮ ಸಾಧನೆಗೈದ ಜಿಲ್ಲೆಗಳಾದ ಉಡುಪಿ, ತುಮಕೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳ ಸಂಘಗಳು ಪ್ರಶಸ್ತಿಗೆ ಭಾಜನವಾಗಿದೆ. ಉತ್ತಮ ಸಾಧನೆಗೈದ ತಾಲೂಕು ಸಂಘಗಳಾದ ಜಿಲ್ಲೆಯ ಕುಶಾಲನಗರ ಸೇರಿದಂತೆ ನಾಗಮಂಗಲ, ಸೇಡಂ ಮತ್ತು ಜಗಳೂರು ಪತ್ರಕರ್ತರ ಸಂಘಗಳಿಗೆ…
ಮಡಿಕೇರಿ NEWS DESK ಜ.17 : ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಗೋ ಸಂರಕ್ಷಣಾ ಸಂವರ್ಧನಾ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಸಮಿತಿಯ ಪ್ರಮುಖರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಘಟನೆಯನ್ನು ತೀವ್ರವಾಗಿ ಖಂಡಿಸಿದರು. ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಮೆರವಣಿಗೆ ಮೂಲಕ ತೆರಳಿ ಗೋವುಗಳ ಸಂರಕ್ಷಣೆಗೆ ಸರಕಾರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಮನವಿ ಪತ್ರ ಸಲ್ಲಿಸಿದರು.
ವಿರಾಜಪೇಟೆ ಜ.17 NEWS DESK : ಕೊಡಗಿನ ಏಕೈಕ ದಂತ ವೈದ್ಯ ಸಂಸ್ಥೆಯು ಈ ಭಾಗಕ್ಕೆ ಹೆಮ್ಮೆ ನೀಡಿರುವುದು ಮಾತ್ರವಲ್ಲದೆ ಅಸಂಖ್ಯಾತ ವಿದ್ಯಾರ್ಥಿಗಳಿಗೆ ತಮ್ಮ ಭವಿಷ್ಯವನ್ನು ರೂಪಿಸುವುದರಲ್ಲಿ ಉತ್ತಮ ಕೊಡುಗೆ ನೀಡಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಮೆಚ್ಚುಗೆ ವ್ಯಕ್ತಪಡಿಸಿದರು. ವಿರಾಜಪೇಟೆಯ ಮಗ್ಗುಲದ ಬಳಿಯಿರುವ ಕೊಡಗು ದಂತ ಮಹಾವಿದ್ಯಾಲಯದ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಬಳಿಕ ಮಾತನಾಡಿದ ಶಾಸಕ ಪೊನ್ನಣ್ಣ ಅವರು ಸಂಸ್ಥೆಯು ಉತ್ತಮ ರೀತಿಯಲ್ಲಿ ಮುಂದುವರೆದು ಸಮಾಜಕ್ಕೆ ಉತ್ತಮ ವೈದ್ಯರನ್ನು ನೀಡುವುದೊಂದಿಗೆ ತಮ್ಮ ಸಂಸ್ಥೆಯ ಕೀರ್ತಿಯನ್ನು ಮತ್ತಷ್ಟು ಉತ್ತುಂಗಕ್ಕೆ ಏರಿಸುವಂತಾಗಲಿ ಎಂದು ಶುಭ ಹಾರೈಸಿದರು. ದಂತ ವೈಧ್ಯಕೀಯ ಮಹಾವಿದ್ಯಾಲಯದಲ್ಲಿ ಪದವಿ ಪಡೆದ ವಿದ್ಯಾರ್ಥಿಗಳು ಮುಂದೆಯೂ ಸ್ವಯಂ ಕಲಿಕೆ ವೃತ್ತಿಯಲ್ಲಿ ನಿರಂತರವಾಗಿ ವೈದ್ಯಕೀಯ ಲೋಕದ ಕುರಿತು ಜ್ಞಾನವನ್ನು ಹೆಚ್ಚಿಸಿಕೊಳ್ಳುವಂತಾಗಲಿ. ಯುವ ಪದವಿಧರರು ವೈಧ್ಯಕೀಯ ವೃತ್ತಿಯಲ್ಲಿ ಹೊಸ ಆವಿಷ್ಕಾರ, ಆಧುನಿಕ ಚಿಕಿತ್ಸಾ ಪದ್ದತಿಯನ್ನು ಅಳವಡಿಸಿಕೊಂಡು ಉತ್ತಮ ವೈದ್ಯರಾಗಿ…






