ನವದೆಹಲಿ ಜ.17 NEWS DESK : ಮೈಸೂರಿನಲ್ಲಿ ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸಲು ವಿಮಾನ ನಿಲ್ದಾಣ ವಿಸ್ತರಣೆ ಅತಿ ಮುಖ್ಯ. ಈ ನಿಟ್ಟಿನಲ್ಲಿ ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಅವರಿಗೆ ಮೈಸೂರು-ಕೊಡುಗೆ ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಸಲ್ಲಿಸಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ಯದುವೀರ್, ವಿಮಾನ ನಿಲ್ದಾಣ ವಿಸ್ತರಣೆಗೆ ಇರುವ ಸಮಸ್ಯೆಗಳು ಹಾಗೂ ಮುಂದೆ ಆಗಬೇಕಾಗಿರುವ ಕೆಲಸಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು. ಕೇಂದ್ರ ಸಚಿವರ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಯದುವೀರ್, ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಸಂಬಂಧನಾಗರಿಕ ವಿಮಾನಯಾನ ಸಚಿವರಾದ ರಾಮ್ ಮೋಹನ್ ನಾಯ್ಡು ವಿಷಯವನ್ನು ಮನವರಿಕೆ ಮಾಡಿಕೊಟ್ಟಿದ್ದೇನೆ. ಭೂಮಿ ಹಸ್ತಾಂತರ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಒತ್ತಡ ಹೇರಿ, ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಭೂಮಿ ಹಸ್ತಾಂತರ ಮಾಡಿಸುವ ಸಂಬಂಧ ಕ್ರಮ ಕೈಗೊಳ್ಳಬೇಕು…
ಲೇಖಕ: admin
ಮಡಿಕೇರಿ NEWS DESK ಜ.16 : ಉತ್ತರ್ ಖಂಡ್ ನ ಹರಿದ್ವಾರದಲ್ಲಿ ನಾಲ್ಕು ವರ್ಷಗಳಿಗೊಮ್ಮೆ ನಡೆಯುವ ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಗೆ ಕೊಡಗು ಜಿಲ್ಲೆಯ ಕುಶಾಲನಗರದ ರಾಧಾಕೃಷ್ಣ ಬಡಾವಣೆಯ ಹೇಮಂತ್ ಪಿ.ಆಯ್ಕೆಯಾಗಿದ್ದಾರೆ ಎಂದು ಕೊಡಗು ಜಿಲ್ಲಾ ಕಬಡ್ಡಿ ಅಸೋಸಿಷನ್ ನ ಅಧ್ಯಕ್ಷ ಕಪಿಲ್ ಕುಮಾರ್ ತಿಳಿಸಿದ್ದಾರೆ. ಜ.29 ರಿಂದ ಫೆ.3 ರವರೆಗೆ ಪಂದ್ಯಾವಳಿ ನಡೆಯಲಿದ್ದು, ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಷನ್ ನ ಬೆಂಗಳೂರಿನ ತರಬೇತಿ ಶಿಬಿರದಲ್ಲಿ ಹೇಮಂತ್ ತರಬೇತಿ ಪಡೆಯುತ್ತಿದ್ದಾರೆ. ಪ್ರತಾಪ್ ಹಾಗೂ ಗೀತಾ ದಂಪತಿಯ ಪುತ್ರ ಹೇಮಂತ್ ಅವರು ವಿವಿಧ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡು ಗಮನಾರ್ಹ ಸಾಧನೆ ಮಾಡಿದ್ದಾರೆ.
ಮಡಿಕೇರಿ NEWS DESK ಜ.16 : ವಿರಾಜಪೇಟೆಯಿಂದ ಮೈಸೂರಿಗೆ ತೆರಳುತ್ತಿದ್ದ ಕಾರೊಂದರ ಮೇಲೆ ಕಾಡಾನೆ ದಾಳಿ ನಡೆಸಿ ಕಾರನ್ನು ಜಖಂ ಗೊಳಿಸಿರುವ ಘಟನೆ ತಿತಿಮತಿ ಸಮೀಪದ ಮಜ್ಜಿಗೆಹಳ್ಳ ಅರಣ್ಯ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ಕಾಡಾನೆ ದಾಳಿಯಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿ ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿರಾಜಪೇಟೆ ತಾಲೂಕಿನ ಬಿಳುಗುಂದ ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿ ನಡೆಸುತ್ತಿರುವ ಅಶ್ವಕ್ ಎಂಬವರು ಕುಟುಂಬ ಸಹಿತರಾಗಿ ರಾತ್ರಿ ವೇಳೆ ಕಾರಿನಲ್ಲಿ ತಿತಿಮತಿ ಮಾರ್ಗವಾಗಿ ಮೈಸೂರಿಗೆ ತೆರಳುತ್ತಿದ್ದರು. ತಿತಿಮತಿ ಮಜ್ಜಿಗೆ ಹಳ್ಳ ಅರಣ್ಯ ಪ್ರದೇಶದ ಸಮೀಪ ರಸ್ತೆ ಉಬ್ಬು ಇದ್ದ ಹಿನ್ನೆಲೆಯಲ್ಲಿ ಕಾರು ಚಾಲಕ ಅರ್ಫತ್ ವಾಹನದ ವೇಗವನ್ನು ಸಂಪೂರ್ಣವಾಗಿ ಕಡಿಮೆ ಮಾಡಿದ್ದಾರೆ. ಈ ವೇಳೆ ಕಾಡಾನೆ ಏಕಾಏಕಿ ಕಾರಿನ ಮೇಲೆ ದಾಳಿ ನಡೆಸಿ ಸಂಪೂರ್ಣ ಜಖಂಗೊಳಿಸಿ ಕಾಡಿನಲ್ಲಿ ಮರೆಯಾಗಿದೆ. ಈ ಘಟನೆಯಿಂದ ಅಶ್ವಕ್ ಕುಟುಂಬದ ಆರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ವಿರಾಜಪೇಟೆಯ ಖಾಸಗಿ ಆಸ್ಪತ್ರೆಯಲ್ಲಿ ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದು…
ಮಡಿಕೇರಿ ಜ.16 NEWS DESK : ಒಂಟಿ ನಳಿಕೆ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಸಿಡಿದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ. ಚೇರಂಬಾಣೆಯಲ್ಲಿರುವ ಮದ್ಯದ ಅಂಗಡಿ ಮಾಲೀಕ ಪೊನ್ನಚೆಟ್ಟಿರ ಕೆ.ಮಿತ್ರ ಚಂಗಪ್ಪ(49) ಎಂಬುವವರೇ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಪೊನ್ನಚೆಟ್ಟಿರ ಕೆ.ಮಿತ್ರ ಚಂಗಪ್ಪ ಅವರು ಎಂದಿನಂತೆ ಬುಧವಾರ ರಾತ್ರಿ ಮದ್ಯದ ಅಂಗಡಿ ಬಂದ್ ಮಾಡಿ 12.30 ಗಂಟೆ ಸುಮಾರಿಗೆ ಲೋಡ್ ಆಗಿದ್ದ ತಮ್ಮ ಬಂದೂಕಿನೊಂದಿಗೆ ಮನೆಗೆ ಹೊರಟಿದ್ದಾರೆ. ಈ ವೇಳೆ ಹಾಲಿನ ವಾಹನ ಅಲ್ಲಿಗೆ ಬಂದಿದ್ದು, ಮಿತ್ರ ಚಂಗಪ್ಪ ಅವರು ತಮ್ಮ ಬಂದೂಕನ್ನು ಸ್ಕೂಟಿಯಲ್ಲಿಟ್ಟು ಹಾಲಿನ ಪ್ಯಾಕೇಟ್ ಪಡೆದುಕೊಂಡಿದ್ದಾರೆ. ನಂತರ ದ್ವಿಚಕ್ರ ವಾಹನದ ಬಳಿ ಬಂದು ಸೀಟು ತೆಗೆದು ಹಾಲಿನ ಪ್ಯಾಕೇಟ್ಗಳನ್ನು ಡಿಕ್ಕಿಯಲ್ಲಿ ಇಡುವ ಸಂದರ್ಭ ಸ್ಕೂಟಿಯ ಮುಂಭಾಗದಲ್ಲಿ ನೇರವಾಗಿ ಇಟ್ಟಿದ್ದ ಒಂಟಿ ನಳಿಕೆ ಬಂದೂಕಿನಿಂದ ಏಕಾಏಕಿ ಗುಂಡು ಸಿಡಿದಿದೆ. ಈ ಸಂದರ್ಭ ಗಾಯಗೊಂಡ ಮಿತ್ರ ಚಂಗಪ್ಪ ಅವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಪೊಲೀಸರು ಘಟನಾ ಸ್ಥಳದ ದೃಶ್ಯಗಳನ್ನು ಸಿ.ಸಿ…
ವಿರಾಜಪೇಟೆ ಜ.16 NEWS DESK : ಇತ್ತೀಚಿನ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳಿಗೆ ಪೋಷಕರು ಹಾಗೂ ಶಿಕ್ಷಕರು ಶತ್ರುಗಳಾಗಿ ಪರಿಣಮಿಸುತ್ತಿದ್ದಾರೆ. ಏಕೆಂದರೆ ವಿದ್ಯಾರ್ಥಿಗಳಿಗೆ ಪದೇಪದೇ ಮಾರ್ಗದರ್ಶನ ಮಾಡುತ್ತಿರುವುದು ಅವರಿಗೆ ಸದಾ ಕಿರಿಕಿರಿಯಾಗಿರುತ್ತದೆ. ವಿದ್ಯುನ್ಮಾನ ಉಪಕರಣಗಳಿಂದ ಹಾಗೂ ದುಶ್ಚಟಗಳಿಂದ ಅವರನ್ನು ಬೇರ್ಪಡಿಸಲು ಪೋಷಕರು ಹಾಗೂ ಶಿಕ್ಷಕರು ಪ್ರಯತ್ನಿಸುತ್ತಿರುವುದು ಬಹಳ ಶೋಚನೀಯ ಎಂಬುದು ಕೆಲವರ ಮನೋಭಾವನೆ ಎಂದು ತಿತಿಮತಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ.ಚಾರ್ಲ್ಸ್ ಡಿಸೋಜಾ ಅಭಿಪ್ರಾಯಪಟ್ಟರು. ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಪೋಷಕರ ನಿರಂತರ ಮಾರ್ಗದರ್ಶನ ಪ್ರತೀ ವಿದ್ಯಾರ್ಥಿಗೂ ಅತ್ಯಗತ್ಯವಾಗಿದೆ ಎಂದು ಹೇಳಿದರು. ವಿರಾಜಪೇಟೆ ಸರ್ಕಾರಿ ಪಿ.ಯು. ಕಾಲೇಜಿನ ಪ್ರಾಂಶುಪಾಲೆ ಎನ್.ಕೆ.ಜ್ಯೋತಿ ಮಾತನಾಡಿ, ಮಕ್ಕಳು ಸದಾ ಆಶೋತ್ತರಗಳಿಂದ ಕೂಡಿದ್ದು, ಸಿಗುವಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಹಾಗೆಯೇ ಗುರುಗಳು ಅವರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುತ್ತಾರೆ.ಅವರಿಗೆ ಸದಾ ವಿನಯಶೀಲರಾಗಿ, ಕಾಲಹರಣ ಮಾಡದೆ ತಮ್ಮ ಕೆಲಸ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಕರೆ ನೀಡಿದರು. ಬಾಳೆಲೆಯ ವಿಜಯಲಕ್ಷ್ಮಿ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಕಾಯ೯ದಶಿ೯ ಕೃಷ್ಣ ಗಣಪತಿ ಮಾತನಾಡಿ,…
ಮಡಿಕೇರಿ ಜ.16 NEWS DESK : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೂಲಕ 48ಕ್ಕೂ ಹೆಚ್ಚು ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ನಡೆಯುತ್ತಿದ್ದು, ಇವುಗಳ ಬಗ್ಗೆ ಪ್ರತಿಯೊಬ್ಬರಲ್ಲಿಯೂ ಸಹ ಜಾಗೃತಿ ಅಗತ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ತಿಳಿಸಿದ್ದಾರೆ. ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರದ ಡಿಎಚ್ಒ ಅವರ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ ಹಾಗೂ ಯೋಜನೆಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಏರ್ಪಡಿಸಲಾಗಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಸಾರ್ವಜನಿಕರಿಗೆ ಪರಿಣಾಮಕಾರಿಯಾಗಿ ತಲುಪಿಸಲು ಪ್ರಯತ್ನಿಸಲಾಗಿದೆ ಎಂದು ಅವರು ಹೇಳಿದರು. ‘ಜಿಲ್ಲೆಯಲ್ಲಿ ಜನವರಿಯಿಂದ ನವೆಂಬರ್ ಅಂತ್ಯದವರೆಗೆ ನಾಯಿ ಕಡಿತ 4015 ಪ್ರಕರಣಗಳು, ಹಾವು ಕಡಿತ 307 ಪ್ರಕರಣಗಳು, ಭೇದಿ 2292 ಪ್ರಕರಣಗಳು, ಟೈಪಾಯಿಡ್ 846 ಪ್ರಕರಗಣಗಳು, ಡೆಂಗ್ಯೂ 274 ಪ್ರಕರಣಗಳು, ಕಾಲರಾ…
ಮಡಿಕೇರಿ ಜ.16 NEWS DESK : ಇತ್ತೀಚೆಗೆ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿ ಅಮಾನುಷವಾಗಿ ನಡೆದುಕೊಂಡ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಮಡಿಕೇರಿ ತಾಲೂಕು ಒಕ್ಕಲಿಗರ ಸಂಘದ ಉಪಾಧ್ಯಕ್ಷ ಉಮೇಶ್ ಕುಮಾರ್ ಪಿ. ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ತಪ್ಪು ಮಾಡಿದವರು ಯಾರೇ ಆಗಿರಲಿ, ಯಾವುದೇ ಪಕ್ಷ, ಜನಾಂಗಕ್ಕೆ ಸೇರಿದವರಾಗಿರಲಿ ಅವರಿಗೆ ತಕ್ಕ ಶಿಕ್ಷೆ ನೀಡುವ ಮೂಲಕ ಇನ್ನು ಮುಂದೆ ಈ ರೀತಿಯ ಪ್ರಕರಣಗಳು ನಡೆಯದಂತೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಹಸುಗಳು ರೈತಾಪಿ ವರ್ಗ ಹಾಗೂ ಗ್ರಾಮೀಣರ ಜೀವನಾಡಿಯಾಗಿವೆ. ಅಮಾನವೀಯವಾಗಿ ಕೆಚ್ಚಲುಗಳನ್ನು ಕತ್ತರಿಸಿರುವುದು ಕೃಷಿಕ ವರ್ಗಕ್ಕೆ ಅತೀವ ನೋವನ್ನುಂಟು ಮಾಡಿದೆ. ಒಕ್ಕಲಿಗರ ಮೂಲ ಕಸುಬೇ ಒಕ್ಕಲುತನ, ಒಕ್ಕಲುತನದ ಭಾಗವಾಗಿರುವ ಹಸುಗಳ ಮೇಲಿನ ದಾಳಿ ಖಂಡನೀಯ. ಇನ್ನಾದರೂ ಸರಕಾರ ಎಚ್ಚೆತ್ತುಕೊಂಡು ತಪ್ಪಿತಸ್ಥರನ್ನು ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕು ಮತ್ತು ಗೋವುಗಳ ಸಂರಕ್ಷಣೆಗೆ ಕಾನೂನಿನ ನಿಯಮಗಳನ್ನು ಬಿಗಿಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.
ಮಡಿಕೇರಿ ಜ.16 NEWS DESK : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತುಳು, ಬ್ಯಾರಿ, ಕೊಂಕಣಿ, ಕೊಡವ, ಅರೆಭಾಷೆ ಮತ್ತು ಯಕ್ಷಗಾನ ಅಕಾಡೆಮಿ, ಕೊಡಗು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತ ಇವರ ಸಂಯುಕ್ತಾಶ್ರಯದಲ್ಲಿ ಜ.17 ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ‘ಬಹು ಸಂಸ್ಕೃತಿ ಉತ್ಸವ’ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬಹುಸಂಸ್ಕೃತಿ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನಿಡಲಿದ್ದಾರೆ. ನಂತರ ಸಂಜೆ 4 ಗಂಟೆಗೆ ಮಂಗಳೂರು ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಆವರಣದಿಂದ ಭವ್ಯ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ. ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್.ಹೆಬ್ಬಾಳ್ಕರ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು,…
ಮಡಿಕೇರಿ ಜ.16 NEWS DESK : ಸಂತ್ರಸ್ಥ ಮಕ್ಕಳ ಸಹಾಯಕ್ಕಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಬೆಂಬಲಿಗರನ್ನು ನೇಮಕ ಮಾಡಿಕೊಳ್ಳಬೇಕಾಗಿದ್ದು. ಇದರಲ್ಲಿ ಸಂಜ್ಞಾ ತಜ್ಞರು, ಅನುವಾದಕರು/ ಭಾಷಾಂತರಕಾರರು ಹಾಗೂ ನಿಯಮ (3) ಮತ್ತು 2(ಡಿ) ಅಡಿಯಲ್ಲಿ ವಿಶೇಷ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಸಂಜ್ಞಾ ತಜ್ಞರು: ವಾಕ್ ಮತ್ತು ಶ್ರವಣ ವಿಷಯದಲ್ಲಿ ಸಂಕೇತ ಭಾಷೆಯಲ್ಲಿ ತರಬೇತಿ/ ತಜ್ಞರಾಗಿರಬೇಕು. ವಾಕ್ ಮತ್ತು ಶ್ರವಣ ದೋಷ ಹೊಂದಿರುವ ಮಕ್ಕಳೊಂದಿಗೆ ಸಂಭಾಷಣೆ ನಡೆಸಲು ಪರಿಣತಿಯನ್ನು ಹೊಂದಿರಬೇಕು. ಅನುವಾದಕರು/ಭಾಷಾಂತರಕಾರ: ಅಸ್ಸಾಂ, ಬಂಗಾಳಿ, ಹಿಂದಿ, ಇಂಗ್ಲೀಷ್, ತಮಿಳು, ಮಲೆಯಾಳಂ ಭಾಷೆಯ ಮಕ್ಕಳೊಂದಿಗೆ ಸಂವಹಿಸಿ ಅವರ ಮಾತುಗಳನ್ನು ಕನ್ನಡ ಭಾಷೆಗೆ ಅನುವಾದ ಮಾಡಬಲ್ಲವರಾಗಿರಬೇಕು. ವಿಶೇಷ ಶಿಕ್ಕಕರು: ವಿಶೆಷ ಅಗತ್ಯವಿರುವ ಮಕ್ಕಳೊಂದಿಗೆ ಸಂವಹನದಲ್ಲಿ ತರಬೇತಿಯನ್ನು ಹೊಂದಿದವರಾಗಿರಬೇಕು (ಅಂದರೆ ಕಲಿಕಾದೋಷ ಮತ್ತು ಭಾವನಾತ್ಮಕ, ದೈಹಿಕ, ಬೆಳೆವಣಿಗೆ ಹಾಗೂ ನಡವಳಿಕೆಯ ಅಸ್ವಸ್ಥತೆಯನ್ನು ಹೊಂದಿರುವ ಮಕ್ಕಳೊಂದಿಗೆ ಸಂವಹಿಸಬಲ್ಲವರಾಗಿರಬೇಕು). ಆಯ್ಕೆಯಾದ ಬೆಂಬಲಿಗರಿಗೆ ಪ್ರತೀ ಪ್ರಕರಣಕ್ಕೆ ರೂ.1000 ಗಳ ಗೌರವಧನ ನೀಡಲಾಗುವುದು. ಸೂಕ್ತ ವಿದ್ಯಾರ್ಹತೆ ಹಾಗೂ ಅನುಭವ ಹೊಂದಿರುವವರು…
ಮಡಿಕೇರಿ ಜ.16 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಭಾಗಮಂಡಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತ ಆಶ್ರಯದಲ್ಲಿ 2024- 25 ಸಾಲಿನ ದಿ.ಡಾ. ಇರುವೈಲು ರಘುರಾಮ ಅಸ್ರಣ್ಣ ಮತ್ತು ಶ್ರೀಮತಿ ಲೀಲಾ ಅಸ್ರಣ್ಣ ನೆನಪಿನ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮ ಮತ್ತು ಕೊಡಗು ಜಿಲ್ಲೆಯ 10ನೇ ತರಗತಿಯ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ ಸನ್ಮಾನ ಕಾರ್ಯಕ್ರಮವು ಜ.20 ರಂದು ನಡೆಯಲಿದೆ. ಭಾಗಮಂಡಲ ಹೋಬಳಿಯ ಕೋರಂಗಾಲದ ಜ್ಞಾನೋದಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕೊರಂಗಾಲದ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯ ವ್ಯವಸ್ಥಾಪಕ ಚೀಯಕ ಪೂವಂಡ ಚಂಗಪ್ಪ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಭಾಗಮಂಡಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುನಿಲ್ ಪತ್ರಾವೋ ವಹಿಸಲಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಪ್ರಾಸ್ತಾವಿಕ ಮಾತುಗಳ ನ್ನಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ…






