ಲೇಖಕ: admin

ಗೋಣಿಕೊಪ್ಪ NEWS DESK ಮೇ 13 : ಸಿಡಿಲಬ್ಬರಕ್ಕೆ ಲಾರಿ ಮೇಲೆ ಮರ ಬಿದ್ದ ಪರಿಣಾಮ ಓರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡು, 7 ಕಾರ್ಮಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿರುವ ಘಟನೆ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ನಾಲ್ಕೇರಿ ಗ್ರಾಮದಲ್ಲಿ ನಡೆದಿದೆ. ಕಾರ್ಮಿಕ ರಾಘವೇಂದ್ರ ಎಂಬುವವರಿಗೆ ಮರದ ಕೊಂಬೆ ಮತ್ತು ಲಾರಿಯ ಒಡೆದ ಗಾಜು ತಗುಲಿ ಗಾಯಗಳಾಗಿವೆ. ಉಳಿದಂತೆ ರಮೇಶ, ಮಹೇಶ, ವಿಜಿ, ಜಾಹಿರ್, ರಂಗ, ಕರಿಗೌಡ ಹಾಗೂ ಶಂಕರ ಇವರುಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಲಾರಿಯಲ್ಲಿದ್ದ ಗೊಬ್ಬರವನ್ನು ನಾಲ್ಕೇರಿ ಕೃಷಿ ಪತ್ತಿನ ಸಹಕಾರ ಸಂಘದ ಗೋದಾಮಿನಲ್ಲಿ ಸಂಗ್ರಹಿಸಿಟ್ಟು ಹಿಂದಿರುಗುತ್ತಿದ್ದಾಗ ನಾಲ್ಕೇರಿ- ಗೋಣಿಕೊಪ್ಪ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಗೋಣಿಕೊಪ್ಪ ಆರೋಗ್ಯ ಕೇಂದ್ರದಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದೆ. ಕುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಡಿಕೇರಿ ಮೇ 12 NEWS DESK : ಅಕ್ಕಪಡೆ ಸಿಬ್ಬಂದಿಗಳು 2ನೇ ಮೊಣ್ಣಂಗೇರಿಯ ವಿವಿಧ ರೆಸಾರ್ಟ್ ಗಳಿಗೆ ಭೇಟಿ ನೀಡಿ ಅಲ್ಲಿನ‌ ಸಿಬ್ಬಂದಿಗಳಿಗೆ ವಿವಿಧ ತುರ್ತು ಸಹಾಯವಾಣಿಗಳ, ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ, ಪೋಕ್ಸೋ ಕಾಯ್ದೆ, ಮಾದಕ ದ್ರವ್ಯಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿದರು.

Read More

ಪುತ್ತೂರು ಮೇ 12 NEWS DESK : ಹೈದರಾಬಾದ್‌ನಲ್ಲಿ ಮೇ 8, 9, 10ರಂದು ನಡೆದ ‘ಪವರ್ ಆಫ್ ಯಂಗ್’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುತ್ತೂರಿನ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ಲಕ್ಷ್ಮೀಕಾಂತ್ ಆಚಾರ್ಯ ಹಾಗೂ ಸುಧನ್ವ ಆಚಾರ್ಯ ಅವರಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಹೈದರಾಬಾದ್ ಹೈಟೆಕ್ ಸಿಟಿ ಜ್ಯುವೆಲ್ಲರಿ ಮ್ಯಾನುಫ್ಯಾಕ್ಟರರ್ಸ್ ಅಸೋಸಿಯೇಷನ್ (HJMA), ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜಿನ್ ಹಾಗೂ ಇನ್‌ಫಾರ್ಮಾ ಮಾರ್ಕೆಟ್ಸ್ ಸಹಯೋಗದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆಭರಣ ಕ್ಷೇತ್ರದಲ್ಲಿ ತೋರಿದ ಸಮರ್ಪಣೆ, ಆಭರಣ ವಿನ್ಯಾಸ, ತಯಾರಿಕೆ, ಮಾರುಕಟ್ಟೆ ಹಾಗೂ ನಾವೀನ್ಯತೆಯಲ್ಲಿ ಅಸಾಧಾರಣ ಸಾಧನೆ ಮಾಡಿರುವ ಯುವ ಉದ್ಯಮಿಗಳನ್ನು ಗುರುತಿಸಿ ಗೌರವಿಸುವ ಉದ್ದೇಶದ ಈ ಪ್ರಶಸ್ತಿಗೆ ದೇಶದ ವಿವಿಧ ಭಾಗಗಳಿಂದ 8 ಯುವ ಸಾಧಕರನ್ನು ಆಯ್ಕೆ ಮಾಡಲಾಗಿತ್ತು. ಆ ಎಂಟು ಸಾಧಕರಲ್ಲಿ ಜಿ.ಎಲ್‌. ಆಚಾರ್ಯ ಜ್ಯುವೆಲ್ಲರ್ಸ್‌ನ ಲಕ್ಷ್ಮೀಕಾಂತ್ ಆಚಾರ್ಯ ಹಾಗೂ ಸುಧನ್ವ ಆಚಾರ್ಯ ಕೂಡ ಸ್ಥಾನ ಪಡೆದಿದ್ದಾರೆ. “ತಲೆಮಾರಿನ ನಂಬಿಕೆ, ಯುವ ತಲೆಮಾರಿನ ಸಾಧನೆ” ನಾವೀನ್ಯತೆಯ ವಿನ್ಯಾಸ, ಶುದ್ಧತೆಯ…

Read More

ಕುಶಾಲನಗರ ಮೇ 12 NEWS DESK : ಬಸವನಹಳ್ಳಿ ಗ್ರಾಮದ ಚಾಮುಂಡೇಶ್ವರಿ ದೇವರ 53 ನೇ ವಾರ್ಷಿಕ ಪೂಜೋತ್ಸವ ಶ್ರದ್ದಾಭಕ್ತಿಯಿಂದ ನೆರವೇರಿತು. ಬೆಳಗ್ಗೆ ಶ್ರೀ ಗಣಪತಿ ಹಾಗೂ ಬಸವೇಶ್ವರ ದೇವರ ಕಳಸ ಪ್ರತಿಷ್ಠಾಪನೆ ಹಾಗೂ ಪೂಜೋತ್ಸವ ಜರುಗಿತು. ಮರುದಿನ ಮಂಗಳವಾರ ಗುಳಿಗಪ್ಪ ಮತ್ತು ಚಾಮುಂಡೇಶ್ವರಿ ದೇವರ ಪೂಜೆ ವಿಗ್ರಹ ಪ್ರತಿಷ್ಠಾಪನೆ ಬಳಿಕ ಬಗೆ ಬಗೆಯ ಪುಷ್ಪಗಳಿಂದ ಅಲಂಕರಿಸಿ ಮಹಾಮಂಗಳಾರತಿ ನೆರವೇರಿಸಲಾಯಿತು. ಪುರೋಹಿತ ಪ್ರಕಾಶ್ ಭಟ್ ನೇತೃತ್ವದಲ್ಲಿ ಪೂಜಾ ವಿಧಿ ನೆರವೇರಿತು. ದೇವಸ್ಥಾನದ ಸಮಿತಿ ಅಧ್ಯಕ್ಷರೂ ಆದ ಸ್ಣಳ ದಾನಿ ಬಿ.ಸಿ. ಕಾಳಯ್ಯ, ಉಪಾಧ್ಯಕ್ಷ ಪಟ್ಟು ಮಾದಪ್ಪ, ಕಾರ್ಯದರ್ಶಿ ಮಧು ಸೇರಿದಂತೆ ಗ್ರಾಮಸ್ಥರು, ದೇವಾಲಯ ಸಮಿತಿಯವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವಿಶೇಷವಾಗಿ ಪೂಜಾ ಮಹೋತ್ಸವದಲ್ಲಿ ಭಾಗಿಯಾದ ಆದಿವಾಸಿ ಸಮುದಾಯದ ಮಹಿಳೆಯರು ಹಾಗೂ ಮಕ್ಕಳು ಕುಣಿದು ಕುಪ್ಪಳಿಸಿ ರಂಜಿಸಿದರು. ದೇವತಾ ಮಹೋತ್ಸವದ ಅಂಗವಾಗಿ ದೇವಾಲಯದ ಆವರಣದಲ್ಲಿ ಜಾತ್ರೆ ಏರ್ಪಟ್ಟಿತ್ತು. ಗ್ರಾಮದ ಬೀದಿಗಳನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು.

Read More

ಮಡಿಕೇರಿ ಮೇ 12 NEWS DESK : ಕೊಡವ ಭಾಷಿಕ ಸಮುದಾಯಗಳ ಕೂಟದಿಂದ ಇದೇ ಪ್ರಥಮ ಬಾರಿಗೆ ಕೊಡವ ಭಾಷಿಕ 21 ಸಮುದಾಯಗಳನ್ನು ಒಳಗೊಂಡ ಕ್ರೀಡಾಕೂಟ ಮೇ15 ರಿಂದ 17ರವರೆಗೆ ಮೂರ್ನಾಡು ಪಿಯು ಕಾಲೇಜಿನ ಬಾಚೆಟ್ಟೀರ ದಿ.ಬಾಲು ಮುದ್ದಯ್ಯ ಆಟದ ಮೈದಾನದಲ್ಲಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಕ್ರೀಡಾಕೂಟದ ವಿವರಗಳನ್ನು ನೀಡಿದ ಕೊಡವ ಭಾಷಿಕ ಸಮುದಾಯಗಳ ಕೂಟದ ಅಧ್ಯಕ್ಷರಾದ ಡಾ.ಮೇಚೀರ ಸುಭಾಷ್ ನಾಣಯ್ಯ, ಮೇ15 ರಂದು ಬೆಳಿಗ್ಗೆ 10 ಗಂಟೆಗೆ ತನ್ನ ಅಧ್ಯಕ್ಷತೆಯಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಕ್ರೀಡಾಕೂಟವನ್ನು 21 ಕೊಡವ ಭಾಷಿಕ ಜನಾಂಗದ ಸಮಾಜಗಳ ಅಧ್ಯಕ್ಷರು ಉದ್ಘಾಟಿಸಲಿದ್ದಾರೆಂದು ತಿಳಿಸಿದರು. :: 21 ತಂಡಗಳ ನಡುವೆ ಕ್ರಿಕೆಟ್ :: ಕ್ರೀಡಾಕೂಟದಲ್ಲಿ ಪ್ರಮುಖವಾಗಿ ಕೊಡವ ಭಾಷಿಕ ಸಮುದಾಯಗಳ ತಲಾ ಒಂದು ತಂಡದಂತೆ ಒಟ್ಟು 21 ತಂಡಗಳ ನಡುವೆ 6 ಓವರ್‍ಗಳಿಗೆ ಸೀಮಿತವಾದ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ. ಆರಂಭಿಕ ದಿನದಂದು ಪ್ರದರ್ಶನ ಪಂದ್ಯದ ಬಳಿಕ ಪಂದ್ಯಾವಳಿ ಆರಂಭಗೊಳ್ಳಲಿದೆಯೆಂದು ಮಾಹಿತಿಯನ್ನಿತ್ತರು. ಮೇ 16 ರಂದು ಕ್ರಿಕೆಟ್‍ನೊಂದಿಗೆ ಹಗ್ಗಜಗ್ಗಾಟ…

Read More

ಮಡಿಕೇರಿ ಮೇ 12 NEWS DESK : ನಿರ್ಗತಿಕ ಬಡ ವಿದ್ಯಾರ್ಥಿಗಳಿಗೆ ಧಾರ್ಮಿಕ ಮತ್ತು ಭೌತಿಕ ಶಿಕ್ಷಣವನ್ನು ನೀಡುತ್ತಾ ಸಾರ್ಥಕ ಐವತ್ತು ವರ್ಷಗಳನ್ನು ಪೂರೈಸಿರುವ ಸಿದ್ದಾಪುರ ಮುಸ್ಲಿಂ ಆರ್ಫನೇಜ್(ಎಸ್‍ಎಂಓ) ಸಂಸ್ಥೆಯ ಸುವರ್ಣ ಮಹೋತ್ಸವದ ಮಹಾ ಸಮ್ಮೇಳನ ಮೇ 13 ಮತ್ತು 14ರಂದು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಸಿದ್ದಾಪುರದಲ್ಲಿ ನಡೆಯಲಿದೆ. ನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಎಸ್‍ಎಂಓ ಕಾರ್ಯಕ್ರಮ ಸಂಯೋಜಕರಾದ ವಿ.ಕೆ.ಬಷೀರ್ ಮಾತನಾಡಿ, ಬಡ ಅನಾಥ ಮಕ್ಕಳಿಗೆ ಶಿಕ್ಷಣವನ್ನು ಒದಗಿಸುವ ನಿಟ್ಟಿನಲ್ಲಿ ಎಸ್‍ಎಂಓ ಸಂಘಟನೆ 1975 ರಲ್ಲಿ 6 ಮಕ್ಕಳೊಂದಿಗೆ ಆರಂಭಗೊಂಡು, 1979ರಲ್ಲಿ ಅನಾಥಾಲಯಕ್ಕಾಗಿ ಕಟ್ಟಡವನ್ನು ನಿರ್ಮಿಸಲಾಯಿತು. ಈ ಅನಾಥಾಲಯದ ಪ್ರಯೋಜನವನ್ನು ಇಲ್ಲಿಯವರೆಗೆ 1800 ಕ್ಕೂ ಹೆಚ್ಚಿನ ಮಕ್ಕಳು ಪಡೆದುಕೊಂಡಿರುವುದಾಗಿ ತಿಳಿಸಿದರು. ಮೇ 13 ರಂದು ಮಧ್ಯಾಹ್ನ ಮಖಾಂ ಝಿಯಾರತ್ ನಡೆಯಲಿದ್ದು, ಸಂಜೆ 4 ಗಂಟೆಗೆ ಸಮಾರಂಭ ಮತ್ತು ಸಮ್ಮೇಳನವನ್ನು ಎಸ್‍ಕೆಜೆಎಂಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಂ.ಅಬ್ದುಲ್ ರಹಿಮಾನ್ ಮುಸ್ಲಿಯಾರ್ ಉದ್ಘಾಟಿಸಲಿದ್ದಾರೆ. ರಾತ್ರಿ 7 ಗಂಟೆಗೆ ಆಯೋಜಿತ ಸಾರ್ವಜನಿಕ ಸಮ್ಮೇಳನವನ್ನು ಸಿದ್ದಾಪುರ ಮಹಲ್ ಖತೀಬರಾದ ನೌಫಲ್ ಹುದವಿ…

Read More

ಮಡಿಕೇರಿ ಮೇ 12 NEWS DESK : ಜೀಪೊಂದು ಪ್ರಪಾತಕ್ಕೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಣ್ಣನೂರು ನಿವಾಸಿ ಬಾಲಕೃಷ್ಣನ್ (50) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಸೋಮವಾರ ರಾತ್ರಿ ವಿರಾಜಪೇಟೆಯಿಂದ ಕೇರಳ ರಾಜ್ಯದ ಕಣ್ಣನೂರಿಗೆ ತೆರಳುತ್ತಿದ್ದಾಗ ಜೀಪು ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಮಗುಚಿ ಬಿದ್ದಿದೆ. ತೀವ್ರವಾಗಿ ಗಾಯಗೊಂಡ ಬಾಲಕೃಷ್ಣನ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪೆರಂಬಾಡಿ ಚೆಕ್ ಪೋಸ್ಟ್‌ನಿಂದ ಸುಮಾರು 5 ಕಿ.ಮೀ ದೂರದಲ್ಲಿರುವ ಪ್ರಪಾತದಲ್ಲಿ ಜೀಪು ಸಹಿತ ಬಾಲಕೃಷ್ಣನ್ ಅವರ ಮೃತ ದೇಹ ಪತ್ತೆಯಾಗಿದೆ. ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

Read More

ಮಡಿಕೇರಿ ಮೇ 12 NEWS DESK : ಶ್ರೇಷ್ಠ ಅಂಕಗಳಿಂದ ಮಾತ್ರವೇ ಜೀವನವನ್ನು ನಿರ್ಧರಿಸಲು ಸಾಧ್ಯವಿಲ್ಲ, ಇದರ ಹೊರತಾಗಿಯೂ ಒಂದು ಬದುಕಿದೆ ಎಂಬುವುದನ್ನು ಪ್ರತಿಯೊಬ್ಬ ವಿದ್ಯಾರ್ಥಿ ಅರಿತುಕೊಳ್ಳಬೇಕು. ಜೀವನ ಕೇವಲ ಅಂಕಗಳಿಗೆ ಸೀಮಿತವಾಗಬಾರದು ಎಂದು ಲೇಖಕ ಹಾಗೂ ಪ್ರಾಧ್ಯಾಪಕ ಅರ್ಜುನ್ ಮೌರ್ಯ ಅವರು ಸಲಹೆ ನೀಡಿದ್ದಾರೆ. ಉಮ್ಮತ್‍ಒನ್ ಕೊಡಗು ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರದ ಮೈತ್ರಿ ಪೊಲೀಸ್ ಸಮುದಾಯ ಭವನದಲ್ಲಿ ನಡೆದ ಶಿಕ್ಷಣ ಮೇಳ, ಪ್ರತಿಭಾ ಪುರಸ್ಕಾರ, 10ನೇ ತರಗತಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಶೇ.100ರಷ್ಟು ಸಾಧನೆ ಮಾಡಿದ ಶಾಲಾ ಕಾಲೇಜುಗಳ ಪ್ರಾಂಶುಪಾಲರನ್ನು, ಸಾಧಕರನ್ನು ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಶಿಕ್ಷಣ ಕ್ಷೇತ್ರದಲ್ಲಿ ಅವಕಾಶಗಳ ಜೊತೆಯಲ್ಲಿಯೇ ಸವಾಲುಗಳಿವೆ. ಅವುಗಳ ಬಗ್ಗೆಯೂ ಜವಾಬ್ದಾರಿ ವಹಿಸಬೇಕು. ಶಿಕ್ಷಣ ಮಾತ್ರವೇ ವ್ಯಕ್ತಿಯ ಧರ್ಮವನ್ನು ನಿರ್ಧರಿಸುತ್ತದೆಯೇ ಹೊರತು, ಚೌಕಟ್ಟಿನ ಧರ್ಮ ಶಿಕ್ಷಣವನ್ನು ನಿರ್ಧರಿಸುವುದಿಲ್ಲ ಎಂದು ಅಭಿಪ್ರಾಯಪಟ್ಟರು. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಪೋಷಕರ ನಿರೀಕ್ಷೆಗಳ ಮೇಲೆ ಕಲ್ಲು ಎತ್ತಿ ಹಾಕುವ ಕೆಲಸ ಮಾಡಬಾರದು. ಇಂದು ಶಿಕ್ಷಣ…

Read More

ಮಡಿಕೇರಿ ಮೇ 12 NEWS DESK : ಶ್ರೇಷ್ಠ ಅಂಕಗಳಿಂದ ಮಾತ್ರವೇ ಜೀವನವನ್ನು ನಿರ್ಧರಿಸಲು ಸಾಧ್ಯವಿಲ್ಲ, ಇದರ ಹೊರತಾಗಿಯೂ ಒಂದು ಬದುಕಿದೆ ಎಂಬುವುದನ್ನು ಪ್ರತಿಯೊಬ್ಬ ವಿದ್ಯಾರ್ಥಿ ಅರಿತುಕೊಳ್ಳಬೇಕು. ಜೀವನ ಕೇವಲ ಅಂಕಗಳಿಗೆ ಸೀಮಿತವಾಗಬಾರದು ಎಂದು ಲೇಖಕ ಹಾಗೂ ಪ್ರಾಧ್ಯಾಪಕ ಅರ್ಜುನ್ ಮೌರ್ಯ ಅವರು ಸಲಹೆ ನೀಡಿದ್ದಾರೆ. ಉಮ್ಮತ್‍ಒನ್ ಕೊಡಗು ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರದ ಮೈತ್ರಿ ಪೊಲೀಸ್ ಸಮುದಾಯ ಭವನದಲ್ಲಿ ನಡೆದ ಶಿಕ್ಷಣ ಮೇಳ, ಪ್ರತಿಭಾ ಪುರಸ್ಕಾರ, 10ನೇ ತರಗತಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಶೇ.100ರಷ್ಟು ಸಾಧನೆ ಮಾಡಿದ ಶಾಲಾ ಕಾಲೇಜುಗಳ ಪ್ರಾಂಶುಪಾಲರನ್ನು, ಸಾಧಕರನ್ನು ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಶಿಕ್ಷಣ ಕ್ಷೇತ್ರದಲ್ಲಿ ಅವಕಾಶಗಳ ಜೊತೆಯಲ್ಲಿಯೇ ಸವಾಲುಗಳಿವೆ. ಅವುಗಳ ಬಗ್ಗೆಯೂ ಜವಾಬ್ದಾರಿ ವಹಿಸಬೇಕು. ಶಿಕ್ಷಣ ಮಾತ್ರವೇ ವ್ಯಕ್ತಿಯ ಧರ್ಮವನ್ನು ನಿರ್ಧರಿಸುತ್ತದೆಯೇ ಹೊರತು, ಚೌಕಟ್ಟಿನ ಧರ್ಮ ಶಿಕ್ಷಣವನ್ನು ನಿರ್ಧರಿಸುವುದಿಲ್ಲ ಎಂದು ಅಭಿಪ್ರಾಯಪಟ್ಟರು. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಪೋಷಕರ ನಿರೀಕ್ಷೆಗಳ ಮೇಲೆ ಕಲ್ಲು ಎತ್ತಿ ಹಾಕುವ ಕೆಲಸ ಮಾಡಬಾರದು. ಇಂದು ಶಿಕ್ಷಣ…

Read More

ಮಡಿಕೇರಿ NEWS DESK ಮೇ 12 : ಕ್ಷೇತ್ರ ಪುನರ್ ವಿಂಗಡಣೆಯ ಸಂದರ್ಭ ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರವನ್ನು ರಚಿಸಬೇಕೆಂದು ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ 48 ಗಂಟೆಗಳ ಅಹೋರಾತ್ರಿ ಸತ್ಯಾಗ್ರಹವನ್ನು ಇಂದು ಮಡಿಕೇರಿ ನಗರದ “ಕೊಡವ ಮಂದ್” ನಲ್ಲಿ ಆರಂಭಿಸಿತು. ಕೊಡವ ಮಂದ್ ನಲ್ಲಿ ಸಾಂಪ್ರದಾಯಿಕ ಪ್ರಾರ್ಥನೆಯನ್ನು ಸಲ್ಲಿಸಿ ಮೂರು ಬಾರಿ ಕುಶಲತೋಪು ಹಾರಿಸುವ ಮೂಲಕ ಶಾಂತಿಯುತ ಸತ್ಯಾಗ್ರಹ ಆರಂಭಿಸಲಾಯಿತು. ಸತ್ಯಾಗ್ರಹದಲ್ಲಿ ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸಿ, ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರ ನೀಡಬೇಕೆಂದು ಆಗ್ರಹಿಸಿರುವ ಮನವಿ ಪತ್ರವನ್ನು ಭಾರತದ ರಾಷ್ಟಪತಿಗಳು, ಪ್ರಧಾನಮಂತ್ರಿಗಳು ಹಾಗೂ ಮುಖ್ಯ ಚುನಾವಣಾ ಆಯುಕ್ತರಿಗೆ ಸಲ್ಲಿಸಲಾಗುವುದು. “ಕೊಡವ ಮಂದ್” ನಲ್ಲಿ ಮೇ 14 ರಂದು ಬೆಳಿಗ್ಗೆ 10.30 ರವರೆಗೆ ಸತ್ಯಾಗ್ರಹ ನಡೆಸಲಾಗುವುದು ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದರು. ಕೊಡವರ ಸಾಂಪ್ರದಾಯಿಕ ಆವಾಸಸ್ಥಾನದ ಗಡಿಗಳನ್ನು ಬದಲಾಯಿಸದೆ, ಸಂಸತ್ತು ಮತ್ತು ರಾಜ್ಯ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು. ಸಿಕ್ಕಿಂನ…

Read More