ಮಡಿಕೇರಿ ಜ.12 NEWS DESK : ಯುವಶಕ್ತಿ ರಾಷ್ಟ್ರ ಶಕ್ತಿ..ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂದು ಯುವಜನತೆಗೆ ಕರೆ ನೀಡಿದ ಹರಿಕಾರ, ಮಹಾಚೇತನ ಸ್ವಾಮಿ ವಿವೇಕಾನಂದರ ಹುಟ್ಟುಹಬ್ಬವನ್ನು ಜನವರಿ 12 ರಂದು ರಾಷ್ಟ್ರೀಯ ಯುವ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಯುವಕರ ಬಗ್ಗೆ ಅಪಾರ ನಂಬಿಕೆ ಹೊಂದಿದ್ದ ಅವರು ಯುವಶಕ್ತಿಕ್ಕಿಂತ ಮಿಗಿಲಾದದ್ದು ಯಾವುದು ಇಲ್ಲ. ನನಗೆ ಗಟ್ಟಿಮುಟ್ಟಾದ 100 ಜನ ಯುವಕರನ್ನು ಕೊಡಿ ನಾನು ನವ ಭಾರತವನ್ನು ನಿರ್ಮಾಣ ಮಾಡುತ್ತೀವಿ ಎಂದು ಕರೆ ನೀಡಿದ ಮಹಾನ್ ಚೇತನ. ಯುವಕರು ಹೇಡಿಗಳಲ್ಲ, ಪರಾವಲಂಬಿಗಳಲ್ಲ ಎಂದ ಅವರು ನಿಮ್ಮ ಬದುಕಿನ ಶಿಲ್ಪಿಗಳು ನೀವೇ ಎಂದು ಯುವಜನತೆಗೆ ಸಂದೇಶವನ್ನು ಸಾರಿದರು. ಅವರ ಹುಟ್ಟು ಹಬ್ಬವನ್ನು ಭಾರತ ಸರ್ಕಾರ 1985 ರಿಂದ ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸಿಕೊಂಡು ಬರುತ್ತಿದೆ. ಸ್ವಾಮಿ ವಿವೇಕಾನಂದರನ್ನು ವ್ಯಕ್ತಪಡಿಸಿದ ಕೆಲವು ಅಭಿಪ್ರಾಯಗಳು ಏನೆಂದರೆ, ಆಧುನಿಕ ಜಗತ್ತಿನ ನಿರ್ಮಾತ್ರರಲ್ಲಿ ವಿವೇಕಾನಂದರನ್ನು ಪ್ರಮುಖರೆಂದು ಗೌರವಿಸುತ್ತದೆ. ಭಾರತವನ್ನು ಅರಿಯಬೇಕೆಂದರೆ ಸ್ವಾಮಿ ವಿವೇಕಾನಂದರ ಕುರಿತು ಅಧ್ಯಯನ ಮಾಡಬೇಕು. ಅಮೆರಿಕನ್ನರಿಗೆ…
ಲೇಖಕ: admin
ಪಾಲಿಬೆಟ್ಟ ಜ.12 NEWS DESK : ಯಂಗ್ ಇಂಡಿಯಾ ಯೂಥ್ ಕ್ಲಬ್ ನ 55ನೇ ಸುವರ್ಣ ಮಹೋತ್ಸವದ ಸಂಭ್ರಮಕ್ಕಾಗಿ ರಾಷ್ಟ್ರೀಯ ಮಟ್ಟದ ಮುಕ್ತ 5s ಫುಟ್ಬಾಲ್ ಪಂದ್ಯಾವಳಿಗೆ ಪಾಲಿಬೆಟ್ಟ ಕ್ರೀಡಾ ಮೈದಾನದಲ್ಲಿ ಚಾಲನೆ ನೀಡಲಾಯಿತು. ಜಿಲ್ಲಾ ಪಂಚಾಯಿತಿ ಸಾಮಾಜಿಕ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮೂಕೂಂಡ ವಿಜು ಸುಬ್ರಮಣಿ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ. ಗ್ರಾಮೀಣ ಭಾಗದಲ್ಲಿ ರಾಷ್ಟ್ರೀಯ ಮಟ್ಟದ ಫುಟ್ಬಾಲ್ ಪಂದ್ಯಾವಳಿ ನಡೆಯುತ್ತಿರುವುದು ಜಿಲ್ಲೆಯ ಕ್ರೀಡಾಪಟುಗಳಿಗೆ ರಾಜ್ಯ ರಾಷ್ಟ್ರಮಟ್ಟದ ಆಟಗಾರನ್ನ ಪರಿಚಯಿಸುವ ಮೂಲಕ ಯಂಗ್ ಇಂಡಿಯಾ ಯೂತ್ ಕ್ಲಬ್ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕ್ರೀಡೆ ಜಿಲ್ಲೆ ಎಂದು ಹೆಸರುವಾಸಿಯಾಗಿದ್ದರು ಕ್ರೀಡಾಪಟುಗಳಿಗೆ ಸರ್ಕಾರದ ಪ್ರೋತ್ಸಾಹ ಕೊರತೆ ಇದೆ. ಗ್ರಾಮೀಣ ಭಾಗದಲ್ಲಿ ಸುಸಜ್ಜಿತ ಮೈದಾನದ ವ್ಯವಸ್ಥೆ ಇಲ್ಲದೆ ಕ್ರೀಡಾಪಟುಗಳು ಕ್ರೀಡೆಯಿಂದ ವಂಚಿತರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಮೈದಾನದ ವ್ಯವಸ್ಥೆ ಸೇರಿದಂತೆ ಸೌಲಭ್ಯಗಳನ್ನ ಕಲ್ಪಿಸಿ ಕೊಡಬೇಕೆಂದು ಕ್ರೀಡಾ ಜಿಲ್ಲಾಡಳಿತವನ್ನು ಒತ್ತಾಯಿಸಿದರು. 55 ವರ್ಷ ಪೂರೈಸಿರುವ ಯಂಗ್ ಇಂಡಿಯಾ ಯುವಕ ಸಂಘದ ಕಟ್ಟಡ ಶಿಥಿಲ ವ್ಯವಸ್ಥೆಯಲ್ಲಿದ್ದು…
ನಾಪೋಕ್ಲು ಜ.12 NEWS DESK : ಸ್ಥಳೀಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ವಾಹನವನ್ನು ಪೊಲೀಸರು ಮರಳು ಸಹಿತ ವಶಕ್ಕೆ ಪಡೆದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಿ ದಂಡ ವಿಧಿಸಿದ್ದಾರೆ. ಬೇತು ಗ್ರಾಮದ ಕಾರೆಕಾಡು ಬಳಿಯ ಕಾವೇರಿ ನದಿ ದಡದಿಂದ ಟಿಪ್ಪರ್ ವಾಹನದಲ್ಲಿ ಪರವಾನಗಿ ಇಲ್ಲದೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಎಸ್ಐ ರಾಘವೇಂದ್ರ ಹಾಗೂ ಸಿಬ್ಬಂದಿಗಳು ಮಾಲು ಸಹಿತ ಟಿಪ್ಪರ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಪ್ರಕರಣವನ್ನು ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಿ ವಾಹನದ ಮಾಲೀಕನಿಗೆ 32,320 ರೂಗಳ ದಂಡವನ್ನು ವಿಧಿಸಿ ಕಾನೂನಿನ ಕ್ರಮ ಕೈಗೊಂಡಿದ್ದಾರೆ. ಕಾವೇರಿ ನದಿ ದಡದಲ್ಲಿ ಮರಳು ಸಾಗಟಕ್ಕೆ ತೆರಳುವ ರಸ್ತೆಗೆ ಅಡ್ಡಲಾಗಿ ಜೆಸಿಬಿ ಯಂತ್ರವನ್ನು ಬಳಸಿ ಚರಂಡಿ ತೆಗೆಸಿದ ಪೊಲೀಸರು ಮರಳುಗಾರಿಕೆಗೆ ವಾಹನಗಳು ತೆರಳದಂತೆ ಕ್ರಮ ಕೈಗೊಂಡಿದ್ದಾರೆ. ಠಾಣಾ ವ್ಯಾಪ್ತಿಯ ಕೆಲವು…
ನಾಪೋಕ್ಲು ಜ.12 NEWS DESK : ನಾಪೋಕ್ಲು ಲಯನ್ಸ್ ಕ್ಲಬ್ ವತಿಯಿಂದ ಆಯೋಜಿಸಿದ ಲಯನ್ಸ್ ರೀಜನ್ ಮೀಟ್ ಸಮ್ಮೇಳನದಲ್ಲಿ ಕ್ಲಬ್ನ ಹಿರಿಯ ಸದಸ್ಯರನ್ನು ಸನ್ಮಾನಿಸಲಾಯಿತು. ನಾಪೋಕ್ಲು ಕೊಡವ ಸಮಾಜದ ಅಪ್ಪಚ್ಚ ಕವಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಲಯನ್ಸ್ ರೀಜನ್ ಮೀಟ್ “ಬೆಸುಗೆ” ಸಮ್ಮೇಳನದಲ್ಲಿ ಲಯನ್ಸ್ ಕ್ಲಬ್ನ ಹಿರಿಯ ಸದಸ್ಯರುಗಳಾದ ಬೊಪ್ಪೆರ ಕಾವೇರಪ್ಪ ಹಾಗೂ ಸರ್ವೆ ಆಫ್ ಇಂಡಿಯಾ ನಿವೃತ ಅಧಿಕಾರಿ, ಕೇಟೋಳಿರ ಎಸ್.ಕುಟ್ಟಪ್ಪ ಅವರ ಸುದೀರ್ಘ ಅವಧಿಯ ಸೇವೆಯನ್ನು ಪರಿಗಣಿಸಿ ಸನ್ಮಾನಿಸಿ ಗೌರವಿಸಲಾಯಿತು. ಲಯನ್ಸ್ ಕ್ಲಬ್ಗಳ ಪ್ರಾಂತೀಯ ಅಧ್ಯಕ್ಷ ಡಾ.ಕೋಟೆರ ಪಂಚಮ್ ತಿಮ್ಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರೊಟೇರಿಯನ್ ಜಿಲ್ಲಾ ಮಾಜಿ ರಾಜ್ಯಪಾಲ ಅಭಿನಂದನ್ ಬಿ.ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಲಯನ್ಸ್ ಪ್ರಾಂತಿಯ ರಾಯಬಾರಿ ಲಯನ್ ನವೀನ್ ಅಂಬೆಕಲ್, ವಲಯ ಅಧ್ಯಕ್ಷರುಗಳಾದ ಲಯನ್ ಬಿಂದ್ಯಾ ಗಣಪತಿ, ಲಯನ್ ಸಿ.ಟಿ.ಅಪ್ಪಣ್ಣ, ಲಯನ್ ನಟರಾಜ ಕೆಸ್ತೂರು, ಪ್ರಾಂತ್ಯ ಅಧ್ಯಕ್ಷರುಗಳು, ಸಮ್ಮೇಳನ ಅಧ್ಯಕ್ಷೆ ಲಯನ್ ಕೇಟೋಳಿರ ರತ್ನ ಚರ್ಮಣ್ಣ, ಕಾರ್ಯದರ್ಶಿ ಲಯನ್ ಮುಕ್ಕಾಟಿರ ವಿನಯ್, ಖಜಾಂಚಿ ಲಯನ್…
ಮಡಿಕೇರಿ ಜ.12 NEWS DESK : ಜಿಲ್ಲೆಯ ಕುಟ್ಟ, ಶ್ರೀಮಂಗಲ, ಭಾಗಮಂಡಲ ಮತ್ತು ತಲಕಾವೇರಿ ಉಪ ಠಾಣೆಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಠಾಣೆಗಳ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿ, ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರೊಂದಿಗೆ ಸಭೆ ನಡೆಸಿದರು. ನಂತರ ಠಾಣಾ ವ್ಯಾಪ್ತಿಯ ಕಾನೂನು ಸುವ್ಯವಸ್ಥೆ, ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ಇಡುವುದು ಮುಂತಾದ ವಿಷಯಗಳ ಬಗ್ಗೆ ಸೂಕ್ತ ನಿರ್ದೇಶನಗಳನ್ನು ನೀಡಿದರು.
ಮಡಿಕೇರಿ ಜ.12 NEWS DESK : ಭಾರತದ ಸ್ಕಾಟ್ಲೆಂಡ್’ ಎಂದೇ ಖ್ಯಾತಿಯಾದ ಮಡಿಕೇರಿಯ ಹಸಿರು ರಾಶಿಯ ನಡುವೆ ಇಂದು ಮದ್ಯದ ಬಾಟಲಿಗಳ ರಾಶಿ ಕಂಡುಬಂದಿದೆ. ನಗರದ ಸೌಂದರ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಕಲಾನಗರ ಸಾಂಸ್ಕೃತಿಕ ಕಲಾ ವೇದಿಕೆ ಹಮ್ಮಿಕೊಂಡಿದ್ದ ಶ್ರಮದಾನವು, ನಗರದ ನಾಗರಿಕ ಪ್ರಜ್ಞೆ ಎಷ್ಟು ಅಧೋಗತಿಗೆ ಇಳಿದಿದೆ ಎಂಬುದನ್ನು ಬೆತ್ತಲೆ ಮಾಡಿದೆ. : ಶ್ರಮದಾನ: ಸಮಾಜ ಸೇವೆಗೆ ಮಿಡಿದ ಮನಸ್ಸುಗಳು ಮಡಿಕೇರಿಯ ಗೌಡ ಸಮಾಜದ ಬಳಿಯಿರುವ ಕಲಾನಗರ ಸಾಂಸ್ಕೃತಿಕ ಕಲಾ ವೇದಿಕೆಯ ಸದಸ್ಯರು ರವಿವಾರ ಬೆಳಿಗ್ಗೆಯೇ ಸ್ವಚ್ಛತಾ ಕಾಯಕಕ್ಕೆ ಮುಂದಾದರು. ಗೌಡ ಸಮಾಜದಿಂದ ಆರಂಭಿಸಿ ರಾಘವೇಂದ್ರ ದೇವಾಲಯದ ಜಂಕ್ಷನ್ ವರೆಗಿನ ಮುಖ್ಯ ರಸ್ತೆಯ ಅಕ್ಕಪಕ್ಕದಲ್ಲಿ ಬೆಳೆದಿದ್ದ ಪೊದೆಗಳನ್ನು ತೆರವುಗೊಳಿಸುವುದು ಇವರ ಉದ್ದೇಶವಾಗಿತ್ತು. ಆದರೆ, ಕಸ ತೆಗೆಯಲು ಹೋದ ಇವರಿಗೆ ಎದುರಾಗಿದ್ದು ಮಾತ್ರ ಭೀಕರ ದೃಶ್ಯ. :: ‘ಬಾಟಲಿ’ಗಳ ಸಾಮ್ರಾಜ್ಯ: ಒಂದು ಯಕ್ಷಪ್ರಶ್ನೆ! :: ಕೇವಲ ಅರ್ಧ ಕಿಲೋಮೀಟರ್ ವ್ಯಾಪ್ತಿಯಲ್ಲಿ ಸ್ವಚ್ಛತೆ ನಡೆಸಿದಾಗ ಸಿಕ್ಕ ಕಸದ ಪ್ರಮಾಣ ಬೆಚ್ಚಿಬೀಳಿಸುವಂತಿದೆ : : ನೂರಾರು…
ಮಡಿಕೇರಿ NEWS DESK ಜ.11 : ಜಮ್ಮಾಬಾಣೆ ತಿದ್ದುಪಡಿ ವಿಧೇಯಕದ ಕುರಿತು ಜನರಿಗೆ ತಪ್ಪು ಮಾಹಿತಿ ನೀಡುವುದನ್ನು ನಿಲ್ಲಿಸಿ ಬಹಿರಂಗ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಮಾಜಿ ಶಾಸಕದ್ವಯರಿಗೆ ಸವಾಲು ಹಾಕಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ ಹಾಗೂ ಎಂ.ಪಿ.ಅಪ್ಪಚ್ಚುರಂಜನ್ ಅವರುಗಳು ರಾಜಕೀಯ ಕಾರಣಕ್ಕಾಗಿ ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಜಮ್ಮಾ ಹಿಡುವಳಿದಾರರು ಎದುರಿಸುತ್ತಿರುವ ಸಮಸ್ಯೆಯನ್ನು ಇತ್ಯರ್ಥಪಡಿಸಲು ನಾನು, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ತಿದ್ದುಪಡಿ ವಿಧೇಯಕದ ಮಂಡನೆಗೆ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಕಂದಾಯ ಸಚಿವರು ಹಾಗೂ ವಿರೋಧ ಪಕ್ಷದ ನಾಯಕರು ಸೇರಿದಂತೆ ಎಲ್ಲರ ನೆರವನ್ನು ಪಡೆದಿದ್ದೇವೆ ಎಂದರು. ಕೊಡಗಿನ ಜಮ್ಮಾಬಾಣೆ ಸಮಸ್ಯೆಯ ವಿವರಗಳನ್ನು ಕಲೆ ಹಾಕಿ ಚಕ್ಕೆರ ಪೂವಯ್ಯ ಹಾಗೂ ಕರ್ನಾಟಕ ಸರಕಾರದ ನಡುವಿನ ಕೇಸ್ ನಲ್ಲಿ ಎ.ಕೆ.ಸುಬ್ಬಯ್ಯ ಅವರು ವಾದ ಮಂಡನೆ ಮಾಡಿದ ಪರಿಣಾಮ 1993 ರಲ್ಲಿ…
ಮಡಿಕೇರಿ NEWS DESK ಜ.11 : ಕೊಡಗು ಜಿಲ್ಲಾ ಬಂಟರ ಸಂಘದ ಮುಂದಿನ ಸಾಲಿನ ಅಧ್ಯಕ್ಷರಾಗಿ ಬಿ.ಡಿ. ಜಗದೀಶ್ ರೈ ಅವಿರೋಧವಾಗಿ ಪುನಾರಾಯ್ಕೆಯಾಗಿದ್ದಾರೆ. ನಗರದ ಹೋಟೆಲ್ ಸಮುದ್ರ ಸಭಾಂಗಣದಲ್ಲಿ ಭಾನುವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ನಡೆಯಿತು. ಜಗದೀಶ್ ರೈ ಅವರನ್ನು ಸಭೆಯಲ್ಲಿದ್ದ ಸರ್ವ ಸದಸ್ಯರು ಅವಿರೋಧವಾಗಿ ಆಯ್ಕೆ ಮಾಡಿದರು. ಬಳಿಕ ಮಾತನಾಡಿದ ಅಧ್ಯಕ್ಷ ಜಗದೀಶ್ ರೈ, ಶೀಘ್ರದಲ್ಲಿ ನೂತನ ಕಾರ್ಯಕಾರಿ ಮಂಡಳಿಯನ್ನು ರಚಿಸುವುದಾಗಿ ತಿಳಿಸಿದರು. ಬಂಟರ ಭವನ ನಿರ್ಮಾಣಕ್ಕಾಗಿ ಬೇಕಾದ ಎಲ್ಲಾ ತೊಡಕುಗಳನ್ನು ನಿವಾರಿಸಿ, ಕಟ್ಟಡ ನಿರ್ಮಾಣಕ್ಕೆ ತಯಾರಿ ಮಾಡಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ಸಮುದಾಯ ಬಾಂಧವರು ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಸಂಘದ ಸದಸ್ಯತ್ವ ಹೆಚ್ಚಳಕ್ಕೆ ಸಹಕರಿಸುವಂತೆ ಕೋರಿದರು. ಅಂದಾಜು 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಭವನದ ನೀಲ ನಕ್ಷೆಯನ್ನು ಸಭೆಯಲ್ಲಿ ಅನಾವರಣ ಮಾಡಲಾಯಿತು. ಭವನದ ವಿನೂತನ ಶೈಲಿಯ ನಕ್ಷೆಗೆ ಸಭೆ ಅನುಮೋದನೆ ನೀಡಿತು. ಕಾರ್ಯದರ್ಶಿ ರವೀಂದ್ರ ವಿ. ರೈ ವಾರ್ಷಿಕ ವರದಿ, ಲೆಕ್ಕಪತ್ರ ವರದಿಯನ್ನು ಖಜಾಂಚಿ ರತ್ನಾಕರ…
ಮಡಿಕೇರಿ NEWS DESK ಜ.11 : ಕೊಡಗು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಬಜೆಟ್ ನಲ್ಲಿ ವಿಶೇಷ ಅನುದಾನ ಮೀಸಲಿಡಬೇಕೆಂದು ಆಮ್ ಆದ್ಮಿ ಪಾರ್ಟಿ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ಮೂಲಕ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿರುವ ಪಕ್ಷದ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಅವರು ಕಳೆದ ಬಜೆಟ್ ನಲ್ಲಿ ಜಿಲ್ಲೆಗೆ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತೆ ಅಲ್ಪ ಪ್ರಮಾಣದ ಅನುದಾನ ನೀಡಲಾಗಿದೆ. ಈ ಬಾರಿ ಹೆಚ್ಚಿನ ಅನುದಾನವನ್ನು ನೀಡುವ ಮೂಲಕ ಅಭಿವೃದ್ಧಿಗೆ ಸಹಕರಿಸಬೇಕೆಂದು ಕೋರಿದ್ದಾರೆ. ಕಳೆದ ವರ್ಷ ಕೊಡಗು ಜಿಲ್ಲೆಯಲ್ಲಿ ಸುರಿದ ಅತಿ ಮಳೆಯಿಂದ ಕೃಷಿ ಫಸಲು ನಾಶವಾಗಿ ರೈತರಿಗೆ ನಷ್ಟವಾಗಿದೆ. ಆದರೆ ಇಲ್ಲಿಯವರೆಗೆ ಬೆಳೆಹಾನಿ ಪರಿಹಾರ ಘೋಷಣೆಯಾಗಿಲ್ಲ. ಇದನ್ನು ಈ ಬಾರಿಯ ಬಜೆಟ್ ನಲ್ಲಿ ಬಿಡುಗಡೆ ಮಾಡಬೇಕು. ಅತಿವೃಷ್ಟಿಯಿಂದ ರಸ್ತೆಗಳು ಹದಗೆಟ್ಟಿದ್ದು, ಸರ್ವಋತು ರಸ್ತೆ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ನೀಡಬೇಕು. ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರು, ಲ್ಯಾಬ್ ಟೆಕ್ನಿಷಿಯನ್, ಶಾಲೆಯಲ್ಲಿ ಶಿಕ್ಷಕರು, ಪಶು ಚಿಕಿತ್ಸಾಲಯದಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ಈ ಇಲಾಖೆಗಳಿಗೆ…
ಮಡಿಕೇರಿ NEWS DESK ಜ.11 : ರೋಟರಿ ಸಂಸ್ಥೆಯ ಜಿಲ್ಲಾ ಗವರ್ನರ್ ಪಿ.ಕೆ.ರಾಮಕೃಷ್ಣ ಅವರು ರೋಟರಿ ಮಡಿಕೇರಿಗೆ ಅಧಿಕೃತ ಭೇಟಿ ನೀಡಿದರು. ರೋಟರಿಯ ಹಿರಿಯ ಪ್ರತಿನಿಧಿಗಳನ್ನು ಸನ್ಮಾನಿಸಿ ಗೌರವಿಸಿದ ಅವರು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಿ ಪ್ರೋತ್ಸಾಹಿಸಿದರು. ನಗರದ ರೋಟರಿ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ರೋಟರಿ ಮೂಲಕ ಸಮಾಜ ಸೇವೆಗಾಗಿ ನಮ್ಮನ್ನು ತೊಡಗಿಸಿಕೊಳ್ಳಬೇಕು. ಸೇವೆಯಲ್ಲಿ ಉತ್ಸಾಹ ತೋರಬೇಕು, ಸೇವೆಗಾಗಿ ಇತರರನ್ನೂ ಪ್ರೇರೇಪಿಸಬೇಕು ಎಂದು ಕರೆ ನೀಡಿದರು. ಅಪಾರ ಸಾಮಾಜಿಕ ಕಳಕಳಿಯನ್ನು ಹೊಂದಿರುವ ರೋಟರಿ ಸಂಸ್ಥೆ ರಕ್ತ ಸಂಗ್ರಹ ಘಟಕ ಮತ್ತು ಚರ್ಮಗಳ ಶಿಥಿಲೀಕರಣ ಘಟಕಗಳ ಸ್ಥಾಪನೆಗೆ ಯೋಜನೆ ರೂಪಿಸಿದೆ. ವಿಶ್ವದೆಲ್ಲಡೆ ಪೋಲಿಯೋ ಲಸಿಕೆ ಅಭಿಯಾನವನ್ನು ನಿಭಾಯಿಸುವ ಹೊಣೆಗಾರಿಕೆಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿದೆ. ತನ್ನ ನಿಸ್ವಾರ್ಥ ಸೇವೆಯ ಮೂಲಕವೇ ರೋಟರಿ ಸಂಸ್ಥೆ ಎಲ್ಲರ ಗಮನ ಸೆಳೆದಿದೆ ಎಂದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ರೋಟರಿಯ ಸಹಾಯಕ ಗವರ್ನರ್ ದಿಲನ್ ಚಂಗಪ್ಪ ಅವರು ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ಹೆಚ್ಚಿಸುವ ಕುರಿತು ಮಾಹಿತಿ ನೀಡಿದರು.…






