ಲೇಖಕ: admin

ಮಡಿಕೇರಿ ಫೆ.17 : ರಾಜ್ಯದ ಕಾಂಗ್ರೆಸ್ ನೇತೃತ್ವದ ಆಡಳಿತ ಕೇವಲ ಪ್ರಚಾರಕಷ್ಟೇ ಸೀಮಿತವಾಗಿದ್ದು, ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಕೊಡಗಿನಲ್ಲಿ ಭ್ರಷ್ಟಾಚಾರವನ್ನು ನಿಯಂತ್ರಿಸುವಲ್ಲಿ ಶಾಸಕರು ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಭಿವೃದ್ಧಿ ಕಾರ್ಯಗಳ ಕುರಿತು ಸರಕಾರ ಹಾಗೂ ಶಾಸಕರು ಸುಳ್ಳು ಹೇಳುತ್ತಾ ಕಾಲಹರಣ ಮಾಡುತ್ತಿದ್ದಾರೆ. ಹಗರಣಗಳಲ್ಲಿ ಮುಳುಗಿರುವ ಸರಕಾರದ ಬಣ್ಣವನ್ನು ಇತ್ತೀಚೆಗೆ ಗುತ್ತಿಗೆದಾರರ ಸಂಘ ಬಯಲು ಮಾಡಿದ್ದು, ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿರುವ ಕುರಿತು ಆರೋಪ ಮಾಡಿದೆ. ಪೂರ್ಣಗೊಂಡ ಕಾಮಗಾರಿಗಳ ಹಣವನ್ನು ಗುತ್ತಿಗೆದಾರರಿಗೆ ನೀಡಲಾಗದೆ ಪರದಾಡುತ್ತಿರುವ ಸರಕಾರ ಅಭಿವೃದ್ಧಿ ವಿಚಾರದಲ್ಲಿ ಸುಳ್ಳು ಪ್ರಚಾರ ಮಾಡಿ ಜನರ ಹಾದಿ ತಪ್ಪಿಸುತ್ತಿದೆ ಎಂದು ಟೀಕಿಸಿದ್ದಾರೆ. ಕೊಡಗು ಜಿಲ್ಲೆಯ ಜನ ಬದಲಾವಣೆ ಬಯಸಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರನ್ನು ಆಯ್ಕೆ ಮಾಡಿದ್ದಾರೆ. ಆದರೆ ಜನರ ನಿರೀಕ್ಷೆ ಹುಸಿಯಾಗಿದ್ದು, ಅಭಿವೃದ್ಧಿ ಕಾರ್ಯಗಳು ಶೂನ್ಯವಾಗಿದೆ. ವಿರಾಜಪೇಟೆ ಕ್ಷೇತ್ರದ ಶಾಸಕರು ಸಾವಿರಾರು ಕೋಟಿ ರೂ.ಗಳ ಅಭಿವೃದ್ಧಿ…

Read More

ಮಡಿಕೇರಿ NEWS DESK ಫೆ.17 : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ, ಕೆ.ಎಸ್.ಆರ್.ಟಿ.ಸಿ.ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್, ಕ.ರಾ.ರ.ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಫೆ.19 ರಂದು ಹಮ್ಮಿಕೊಂಡಿರುವ ‘ಸಾರಿಗೆ ನೌಕರರ ಬೆಂಗಳೂರು ಚಲೋ’ ಹೋರಾಟಕ್ಕೆ ಯುನೈಟೆಡ್ ಪ್ಲಾಂಟೇಷನ್ ವಕರ‍್ಸ್ ಯೂನಿಯನ್ (ಎಐಟಿಯುಸಿ) ಕೊಡಗು ಜಿಲ್ಲಾ ಘಟಕ ಬೆಂಬಲ ಸೂಚಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಎಐಟಿಯುಸಿ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ಅವರು ‘ಬೆಂಗಳೂರು ಚಲೋ’ ಹೋರಾಟದಲ್ಲಿ ಕೊಡಗು ಜಿಲ್ಲೆಯ ಸಾರಿಗೆ ನೌಕರರು ಕೂಡ ಪಾಲ್ಗೊಳ್ಳುತ್ತಿದ್ದು, ನೌಕರರ ಬೇಡಿಕೆಗಳಿಗೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ. ಜಂಟಿ ಕ್ರಿಯಾ ಸಮಿತಿ ವತಿಯಿಂದ ಜ.29ರಂದು ‘ಬೆಂಗಳೂರು ಚಲೋ’ ಹೋರಾಟಕ್ಕೆ ಕರೆ ನೀಡಲಾಗಿತ್ತು. ಆದರೆ ಹಿರಿಯ ಕಾರ್ಮಿಕ ಮುಖಂಡ ಹೆಚ್.ವಿ.ಅನಂತ ಸುಬ್ಬರಾವ್ ರವರ ಹಠಾತ್ ನಿಧನದಿಂದಾಗಿ ಹೋರಾಟವನ್ನು ಮುಂದೂಡಲಾಗಿತ್ತು. ಸರಕಾರ ಸಾರಿಗೆ ನೌಕರರ ಬೇಡಿಕೆಗಳಿಗೆ ಇಲ್ಲಿಯವರೆಗೆ ಸೂಕ್ತ ರೀತಿಯಲ್ಲಿ…

Read More

ಮಡಿಕೇರಿ, NEWS DESK ಫೆ.17:-ಮಹಾನ್ ಮಾನವತಾವಾದಿ ಸಂತ ಸೇವಾಲಾಲ್ ಅವರ ತತ್ವ ಮತ್ತು ಆದರ್ಶಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಲಾ ಶಿಕ್ಷಕರಾದ ಜಿ.ನಂದಿನಿ ಅವರು ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ಇತ್ತೀಚೆಗೆ ನಡೆದ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಅಲೆಮಾರಿ ಜನ ಸಮುದಾಯದ ಬಂಜಾರ, ಲಂಬಾಣಿ, ಲಮಾಣಿ, ಸುಗಾಲಿ, ಸುಕಾಲಿ ಗೋರ್, ಸೋನಾರ್, ಲೋಹಾರ್, ಬಾಜೀಗರ್ ಮತ್ತಿತರ ಅನೇಕ ಉಪನಾಮಗಳಿಂದ ಕರೆಯಲಾಗುತ್ತದೆ ಎಂದು ಅವರು ವಿವರಿಸಿದರು. ಲಂಬಾಣಿ, ಬಂಜಾರ ಸಮಾಜ ಬಗ್ಗೆ ಮಹಾಭಾರತದಲ್ಲಿಯೇ ಉಲ್ಲೇಖವಾಗಿರುವುದನ್ನು ಕಾಣಬಹುದಾಗಿದ್ದು, ಸುಮಾರು ಎರಡು ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸ ಇದೆ ಎಂದು ತಿಳಿಸಿದರು. ಸಂತ ಸೇವಾಲಾಲ್ ಅವರು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಇವರ ಅವಧಿಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿದ್ದರು. ತಾವು ಓದಬೇಕು, ಇತರರನ್ನು ಓದಿಸಬೇಕು ಎಂಬ ಆಶಯ…

Read More

ಕುಶಾಲನಗರ, NEWS DESK ಫೆ 17: ಮುಳ್ಳುಸೋಗೆ ಗ್ರಾಮದ ಶ್ರೀಮತ್ ಕನ್ನಂಬಾಡಿ ಅಮ್ಮನವರ ನೂತನ ದೇವಾಲಯ ಹಾಗೂ ದೇವಿಯ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ ಫೆಬ್ರವರಿ 18, 19, 20 ರಂದು ಮೂರು ದಿನಗಳ‌ ಕಾಲ ವಿಜೃಂಭಣೆಯಿಂದ ಜರುಗಲಿದೆ ಎಂದು ಶ್ರೀಮತ್ ಕನ್ನಂಬಾಡಿ ಅಮ್ಮನವರ ಮತ್ತು ಮಾರಮ್ಮ ದೇವಸ್ಥಾನ ಸೇವಾ ಸಮಿತಿ‌ ಉಪಾಧ್ಯಕ್ಷ ಎಂ.ಆರ್.ನಂಜುಂಡ ತಿಳಿಸಿದರು. ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುನರ್ ಪ್ರತಿಷ್ಠಾನ ಮಹೋತ್ಸವ ಅಂಗವಾಗಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ‌ ಪೂಜಾ ಕೈಂಕರ್ಯ, ಹೋಮ, ಹವನ ನಡೆಯಲಿದೆ. 18 ರಂದು ಮುಖ್ಯದ್ವಾರ ಪೂಜೆ, 19 ರಂದು ದಾನಿಗಳಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ, 19 ರಂದು ಕಾವೇರಿ ನದಿಯಲ್ಲಿ ಗಂಗಾಪೂಜೆ ನೆರವೇರಿಸಿ ಕಳಶ ಮೆರವಣಿಗೆ, ಬ್ರಹ್ಮ ಕಲಶಾಭಿಷೇಕ, ಮಹಾಪೂಜೆ, ಮಹಾಮಂಗಳಾರತಿ ನಡೆಯಲಿದೆ. ಪೂಜೋತ್ಸವದಲ್ಲಿ ಆದಿಚುಂಚನಗಿರಿ ಮಠದ ಹಾಸನ-ಕೊಡಗು ಶಾಖೆಯ ಶ್ರೀ ಶಂಭುನಾಥ ಸ್ವಾಮೀಜಿ, ವಿರಾಜಪೇಟೆಯ ಅರಮೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ…

Read More

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಎಸ್‌ಎಸ್‌ಎಲ್‌ಸಿ (SSLC) ಮತ್ತು ದ್ವಿತೀಯ ಪಿಯುಸಿ (2nd PUC) ಪರೀಕ್ಷೆಗಳ ಅಧಿಕೃತ ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಪರೀಕ್ಷಾ ದಿನಾಂಕ, ಸಮಯ ಮತ್ತು ವಿದ್ಯಾರ್ಥಿಗಳ ನೋಂದಣಿ ವಿವರಗಳನ್ನು ಹಂಚಿಕೊಂಡಿದ್ದಾರೆ. ಪರೀಕ್ಷಾ ದಿನಾಂಕ ಮತ್ತು ಸಮಯ ದ್ವಿತೀಯ ಪಿಯುಸಿ ಪರೀಕ್ಷೆ: ಫೆಬ್ರವರಿ 28 ರಿಂದ ಮಾರ್ಚ್ 17, 2026 ರವರೆಗೆ ನಡೆಯಲಿದೆ. (ಸಮಯ: ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 1:00 ಗಂಟೆ) ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮಾರ್ಚ್ 18 ರಿಂದ ಏಪ್ರಿಲ್ 2, 2026 ರವರೆಗೆ ನಡೆಯಲಿದೆ. (ಸಮಯ: ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 1:15 ಗಂಟೆ) ದ್ವಿತೀಯ ಪಿಯುಸಿ ಪರೀಕ್ಷೆ-1 ರ ವಿವರವಾದ ವೇಳಾಪಟ್ಟಿ ದಿನಾಂಕ ವಿಷಯಗಳು ಫೆಬ್ರವರಿ 28 ಕನ್ನಡ, ಅರೇಬಿಕ್ ಮಾರ್ಚ್ 2 ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ ಮಾರ್ಚ್ 3 ಇಂಗ್ಲಿಷ್ ಮಾರ್ಚ್ 4 ತಮಿಳು, ತೆಲುಗು, ಮಲಯಾಳಂ,…

Read More

ಮುಂಬಯಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿ ನಡೆದು ಹತ್ತು ತಿಂಗಳುಗಳು ಉರುಳಿವೆ. ಆದರೆ, ಈ ದುರಂತದಲ್ಲಿ ಮೃತಪಟ್ಟ ಮಹಾರಾಷ್ಟ್ರ ಮೂಲದ ಸಂತೋಷ್ ಜಗದಾಳೆ ಅವರ ಕುಟುಂಬಕ್ಕೆ ಸರ್ಕಾರ ನೀಡಿದ್ದ ಭರವಸೆಗಳು ಕೇವಲ ಕಾಗದದ ಮೇಲೆಯೇ ಉಳಿದಿವೆ. ಉನ್ನತ ಶಿಕ್ಷಣ ಪಡೆದಿದ್ದರೂ ಸಂತೋಷ್ ಅವರ ಪುತ್ರಿ ಅಸಾವರಿ ಇಂದಿಗೂ ಉದ್ಯೋಗಕ್ಕಾಗಿ ಸರ್ಕಾರದ ಕಚೇರಿಗಳಿಗೆ ಅಲೆಯುತ್ತಿದ್ದಾರೆ. ಘಟನೆಯ ಹಿನ್ನೆಲೆ: ಪಹಲ್ಗಾಮ್ ದಾಳಿಯಲ್ಲಿ ಸಂತೋಷ್ ಜಗದಾಳೆ ಸೇರಿದಂತೆ ಮಹಾರಾಷ್ಟ್ರದ ಆರು ಮಂದಿ ಪ್ರಾಣ ಕಳೆದುಕೊಂಡಿದ್ದರು. ಅಂದು ಮೃತರ ಮನೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಹಾಗೂ ಕೇಂದ್ರ ಸಚಿವ ಅಮಿತ್ ಶಾ ಅವರು ಕುಟುಂಬಕ್ಕೆ ಆರ್ಥಿಕ ನೆರವು, ಸರ್ಕಾರಿ ಉದ್ಯೋಗ ಮತ್ತು ಶೌರ್ಯ ಪ್ರಶಸ್ತಿ ನೀಡುವುದಾಗಿ ಭರವಸೆ ನೀಡಿದ್ದರು. ಕಡತ ವಿಲೇವಾರಿಯಲ್ಲಿ ವಿಳಂಬ: ಬಿ.ಎಸ್‌.ಸಿ ಕಂಪ್ಯೂಟರ್ ಸೈನ್ಸ್ ಮತ್ತು ಎಂಬಿಎ ಪದವೀಧರೆಯಾಗಿರುವ ಅಸಾವರಿ ಈ ಹಿಂದೆ ಖಾಸಗಿ ಸಂಸ್ಥೆಯೊಂದರಲ್ಲಿ ಎಚ್.ಆರ್ ಹೆಡ್ ಆಗಿ ಕೆಲಸ…

Read More

ಮಡಿಕೇರಿ, NEWS DESK ಫೆ.17: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್‌ ಟ್ರಸ್ಟ್‌ನ ಸಹಯೋಗದೊಂದಿಗೆ ಎಪ್ರಿಲ್‌ 28ರಂದು ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಮೊನ್ನೆ ಮಡಿಕೇರಿಯಲ್ಲಿ ನಡೆದ ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್‌ ಟ್ರಸ್ಟ್‌ನ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಸಮ್ಮೇಳನದ ಅಂಗವಾಗಿ ಮಹಿಳೆಯರು, ಪುರುಷರು ಮತ್ತು ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು. ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್‌ ಟ್ರಸ್ಟ್‌ನ ಉಪಾಧ್ಯಕ್ಷ ಎಂ.ಎ. ನಾಸಿರ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್‌ ಯು.ಹೆಚ್.‌ ಸಮ್ಮೇಳನದ ಸ್ವರೂಪ ಮತ್ತು ಹಮ್ಮಿಕೊಳ್ಳಬಹುದಾಗ ಕಾರ್ಯಕ್ರಮಗಳ ವಿವರ ನೀಡಿದರು. ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್‌ ಟ್ರಸ್ಟ್‌ನ ಮಾಜಿ ಅಧ್ಯಕ್ಷ ಬಿ.ಎ. ಶಂಷುದ್ದೀನ್‌ ಮಡಿಕೇರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಟ್ರಸ್ಟ್‌ನ ನಿಕಟಪೂರ್ವ ಅಧ್ಯಕ್ಷ ಎಸ್.ಪಿ. ಮುನೀರ್‌ ಅಹ್ಮದ್‌ ಸ್ವಾಗತಿಸಿದರು. ಅಬ್ದುಲ್ಲಾ ಧನ್ಯವಾದವಿತ್ತರು. ಎಂ.ಯು. ಖಾಲಿದ್‌, ಅಬ್ದುಲ್‌ ರಹಿಮಾನ್‌, ಅಹ್ಮದ್‌ ಕಬೀರ್‌, ಅಶ್ರಫ್‌, ತಾಜುದ್ದೀನ್‌,…

Read More

ಮಂಗಳೂರಿನಿಂದ ಪ್ರಕಟವಾಗುತ್ತಿರುವ ಮಾಸಿಕ ಬ್ಯಾರಿ ವಾರ್ತೆ ಪತ್ರಿಕೆಯ ದಶಮಾನೋತ್ಸವ ಸಂಭ್ರಮದ ಅಂಗವಾಗಿ ಬ್ಯಾರಿ ಭಾಷೆಯಲ್ಲಿ ಲೇಖನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು ಫೆಬ್ರವರಿ 16ರಂದು ಯೂಟ್ಯೂಬ್ ಚಾನಲ್ ಮೂಲಕ ಫಲಿತಾಂಶವನ್ನು ಪ್ರಕಟಿಸಲಾಯಿತು. ಈ ಸ್ಪರ್ಧೆಯಲ್ಲಿ ಒಟ್ಟು 149 ಮಂದಿ ಸ್ಪರ್ಧಿಗಳು ಭಾಗವಹಿಸಿದ್ದರು. ಅವರಲ್ಲಿ ಲೇಖಕ ಅಬ್ದುಲ್ಲಾ ಮಡಿಕೇರಿಯವರು ತೃತೀಯ ಸ್ಥಾನವನ್ನು ಪಡೆದು ಗೌರವಕ್ಕೆ ಪಾತ್ರರಾಗಿದ್ದಾರೆ.

Read More

ಕುಶಾಲನಗರ : ವಿದ್ಯಾರ್ಥಿಗಳು ವ್ಯಾಸಂಗದಲ್ಲಿ ಏಕಾಗ್ರತೆ, ಸಮಯ ಪಾಲನೆ ಹಾಗೂ ನಿರಂತರ ಅಧ್ಯಯನ ದಿಂದ ಮಾತ್ರ ಶೈಕ್ಷಣಿಕವಾಗಿ ಗುರಿ ಸಾಧಿಸಲು ಸಾಧ್ಯ ಎಂದು ಕೂಡಿಗೆಯ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ದೀಪಿಕಾ ಮೂರ್ತಿ ಹೇಳಿದರು. ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ದ್ವಿತೀಯ ಪಿಯು ಹಾಗೂ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ವಿಜ್ಞಾನ ಹಾಗೂ ತಂತ್ರಜ್ಞಾನದ ಯುಗದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಪೈಪೋಟಿ ಹೆಚ್ಚಿದೆ. ಆದರೆ, ಅಧ್ಯಯನದ ಮೂಲಕ ಜ್ಞಾನ ಸಂಪಾದಿಸಿದರೆ ನಮ್ಮ ಗುರಿ ಈಡೇರುತ್ತದೆ ಎಂದು ಹೇಳಿದ ಡಾ.ದೀಪಿಕಾ ಹದಿ ಹರೆಯದ ವಿದ್ಯಾರ್ಥಿನಿಯರು ವಯುಕ್ತಿಕ ಸ್ವಚ್ಛತೆಯತ್ತ ಹೆಚ್ಚು ಒತ್ತು ನೀಡಲು ಕರೆ ಕೊಟ್ಟರು. ಮತ್ತೋರ್ವ ಅತಿಥಿ ಸಂಪನ್ಮೂಲ ಶಿಕ್ಷಕ ಉ.ರಾ.ನಾಗೇಶ್ ಮಾತನಾಡಿ, ವಿದ್ಯಾರ್ಥಿಗಳು ನಕಾರಾತ್ಮಕ ವಿಚಾರಗಳನ್ನು ದೂರ ಮಾಡಿ ಸಕಾರಾತ್ಮಕ ಚಿಂತನೆಗಳತ್ತ ಗಮನಹರಿಸಬೇಕು. ವಾಲ್ಮೀಕಿ, ಕನಕದಾಸ, ಬುದ್ದ, ಬಸವೇಶ್ವರರ ಚಿಂತನೆಗಳನ್ನು ಅರಿಯಿರಿ. ಪೋಷಕರನ್ನು ಸಮಾಜ ನಿಮ್ಮ ಮೂಲಕ ಗುರುತಿಸುವ ಮಟ್ಟಕ್ಕೆ ಸಾಧನೆಯ ಶಿಖರ ಏರಬೇಕು.…

Read More

ನವದೆಹಲಿ: ಭಾರತದ ರಾಜಧಾನಿಯಲ್ಲಿ ನಡೆಯುತ್ತಿರುವ ‘ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026’ ಕೇವಲ ತಂತ್ರಜ್ಞಾನದ ಪ್ರದರ್ಶನವಲ್ಲ, ಬದಲಿಗೆ ಇದು ಆಲೋಚನೆ, ಆವಿಷ್ಕಾರ ಮತ್ತು ಉದ್ದೇಶಗಳ ಪ್ರಬಲ ಸಂಗಮವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ. ಮಂಗಳವಾರ ‘ಎಕ್ಸ್’ (X) ಜಾಲತಾಣದಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು, ಜಾಗತಿಕ ಒಳಿತಿಗಾಗಿ ಎಐ ಭವಿಷ್ಯವನ್ನು ರೂಪಿಸುವಲ್ಲಿ ಭಾರತೀಯ ಪ್ರತಿಭೆಗಳ ಸಾಮರ್ಥ್ಯವನ್ನು ಶ್ಲಾಘಿಸಿದ್ದಾರೆ. ಮಾನವ ಕೇಂದ್ರಿತ ಪ್ರಗತಿಗೆ ಒತ್ತು: ಸೋಮವಾರ ಎಕ್ಸ್‌ಪೋ ಉದ್ಘಾಟಿಸಿದ ನಂತರ ಪ್ರಧಾನಿಯವರು ವಿವಿಧ ಸ್ಟಾಲ್‌ಗಳಿಗೆ ಭೇಟಿ ನೀಡಿ, ಪ್ರದರ್ಶಕರೊಂದಿಗೆ ಸಂವಹನ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಸರ್ವಜನ ಹಿತಾಯ, ಸರ್ವಜನ ಸುಖಾಯ” ಎಂಬ ತತ್ವದಂತೆ ಎಲ್ಲರ ಕಲ್ಯಾಣಕ್ಕಾಗಿ ಕೃತಕ ಬುದ್ಧಿಮತ್ತೆಯನ್ನು ಜವಾಬ್ದಾರಿಯುತವಾಗಿ ಮತ್ತು ಸಮಗ್ರವಾಗಿ ಬಳಸಿಕೊಳ್ಳಲು ಭಾರತ ಬದ್ಧವಾಗಿದೆ ಎಂದು ಪುನರುಚ್ಚರಿಸಿದರು. ಎಕ್ಸ್‌ಪೋದ ಪ್ರಮುಖ ಮುಖ್ಯಾಂಶಗಳು: ಬೃಹತ್ ವೇದಿಕೆ: ನವದೆಹಲಿಯ ಭಾರತ್ ಮಂಟಪದ 10 ಕ್ರೀಡಾಂಗಣಗಳಲ್ಲಿ, ಸುಮಾರು 70,000 ಚದರ ಮೀಟರ್‌ಗಿಂತಲೂ ಹೆಚ್ಚು ವಿಸ್ತೀರ್ಣದಲ್ಲಿ ಈ ಬೃಹತ್…

Read More