ಲೇಖಕ: admin

ಮೈಸೂರು ಜೂ.4 NEWS DESK : ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 142ನೇ ಜಯಂತಿ ಅಂಗವಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಹಾಗೂ ರಾಜವಂಶಸ್ಥರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಮೈಸೂರು ನಗರದಲ್ಲಿ ಆಯೋಜಿಸಲಾದ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ರಾಜರ್ಷಿಗೆ ಗೌರವ ನಮನ ಸಲ್ಲಿಸಿದರು. ಬೆಳಿಗ್ಗೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಅವರು ನಾಡದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸಿ ರಾಜ್ಯದ ಸಮೃದ್ಧಿ, ಜನರ ಸುಖ-ಶಾಂತಿ ಹಾಗೂ ಅಭಿವೃದ್ಧಿಗಾಗಿ ಪ್ರಾರ್ಥಿಸಿದರು. ದೇವಾಲಯದ ವಿಶೇಷ ಅಧಿಕಾರಿ ಹಾಗೂ ಪ್ರಧಾನ ಅರ್ಚಕರ ಸಮ್ಮುಖದಲ್ಲಿ ನಡೆದ ಪೂಜಾ ಕಾರ್ಯಕ್ರಮದ ಬಳಿಕ, ದೇವಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ಅನ್ನಸಂತರ್ಪಣೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಯದುವೀರ್ ಒಡೆಯರ್ ಸ್ವತಃ ಭಕ್ತರಿಗೆ ಅನ್ನ ಬಡಿಸುವ ಮೂಲಕ ಸೇವಾ ಮನೋಭಾವವನ್ನು ವ್ಯಕ್ತಪಡಿಸಿದರು. ನಂತರ ನಗರದ ಹೃದಯಭಾಗದಲ್ಲಿರುವ ಕೆ.ಆರ್. ವೃತ್ತದಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಗೆ ಪುಷ್ಪಾರ್ಚನೆ…

Read More

ಮಡಿಕೇರಿ ಜೂ.4 NEWS DESK : ಜಿಲ್ಲಾ ಪೊಲೀಸ್ ಘಟಕದಲ್ಲಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಹೆಡ್ ಕಾನ್ಸ್‌ಟೇಬಲ್  ಜಿ.ಪಿ.ಪುಟ್ಟರಾಜು ಅವರನ್ನು ಜಿಲ್ಲಾ ಪೊಲೀಸ್ ಇಲಾಖೆಯ ಪರವಾಗಿ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.

Read More

ಮಡಿಕೇರಿ ಜೂ.4 NEWS DESK : ಗೋಣಿಕೊಪ್ಪದಲ್ಲಿ ನಿರ್ಮಾಣ ಆಗುತ್ತಿರುವ ನೂತನ ಬಸ್ ನಿಲ್ದಾಣದ ಪೂರ್ಣಗೊಂಡ ಕಾಮಗಾರಿಯನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಪರಿಶೀಲಿಸಿದರು.  ಸದ್ಯದಲ್ಲೇ ನೂತನ ಸುಸರ್ಜಿತ ಬಸ್ ನಿಲ್ದಾಣ ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ ಎಂದು ಶಾಸಕರು ತಿಳಿಸಿದರು. ಈ ಸಂದರ್ಭ ಬ್ಲಾಕ್ ಅಧ್ಯಕ್ಷರಾದ ಮಿದೇರಿರ ನವೀನ್, ಪ್ರಧಾನ ಕಾರ್ಯದರ್ಶಿ ಎ.ಜೆ.ಬಾಬು, ಗೋಣಿಕೊಪ್ಪ ಪಂಚಾಯಿತಿ ಅಧ್ಯಕ್ಷರಾದ ಪ್ರಮೋದ್ ಗಣಪತಿ, ಉಪಾಧ್ಯಕ್ಷರಾದ ಮಂಜುಳಾ, ಪಕ್ಷದ ಮುಖಂಡರು ಅಣ್ಣಳ್ಳಮಾಡ ಹರೀಶ್ ಪೂವಯ್ಯ, ಮುನ್ನ, ಪ್ರವೀಣ್, ಪೊನ್ನಂಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರು ಮಲ್ಲಂಡ ಧ್ಯಾನ್ ದೇವಯ್ಯ, ಕುಟ್ಟ ವಲಯ ಯುವ ಕಾಂಗ್ರೆಸ್ ಅಧ್ಯಕ್ಷರು ಫಾರ್ದಿನ್, ಸಾಜಿ, ಪಿ ಡಿ ಓ ತಿಮ್ಮಯ್ಯ, ವಿಜಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More

ಮಡಿಕೇರಿ ಜೂ.4 NEWS DESK : ಮಕ್ಕಳ ವಿಶೇಷ ಪೊಲೀಸ್ ಘಟಕ ಮತ್ತು ಅಕ್ಕ ಪಡೆ ಸಿಬ್ಬಂದಿಗಳು ಕುಶಾಲನಗರದ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜು ಮತ್ತು ವಿವೇಕಾನಂದ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ, ಮಾದಕ ವಸ್ತುಗಳ ಬಳಕೆ – ದುಷ್ಪರಿಣಾಮಗಳು, ಅಪ್ರಾಪ್ತರ ವಾಹನ ಚಾಲನೆ ಇತ್ಯಾದಿಗಳ ಬಗ್ಗೆ ಕಾನೂನು ಅರಿವು ಮೂಡಿಸಿದರು.

Read More

ಮಡಿಕೇರಿ ಜೂ.4 NEWS DESK : ಪೊನ್ನಂಪೇಟೆ 66/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಫೀಡರ್ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಫ್1-ನಲ್ಲೂರು, ಎಫ್2-ಬಾಳೆಲೆ, ಎಫ್16-ದೇವನೂರು, ಎಫ್14-ಕಿರಗೂರು ಫೀಡರ್‍ನಲ್ಲಿ ಜೂ.5 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಾಗುವ ಗ್ರಾಮಗಳಾದ ಪೊನ್ನಂಪೇಟೆ, ಕಿರಗೂರು, ನಲ್ಲೂರು, ಬೆಸಗೂರು, ಪೊನ್ನಪ್ಪಸಂತೆ, ಬೀಳೂರು, ಕೊಟ್ಟಗೇರಿ, ಸುಳುಗೋಡು, ಬಾಳೆಲೆ, ನಿಟ್ಟೂರು, ರಾಜಾಪುರ, ಕಿಸ್ತೂರು, ಮಳಲುಕೋಟೆ, ಕಾರ್ಮಾಡು, ಜಾಗಲೆ, ಮತ್ತೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ವಿರಾಜಪೇಟೆ ಜೂ.4 NEWS DESK :  ಸಮಾಜದಲ್ಲಿ ಸ್ವಯಂ ಸೇವೆ ಸಲ್ಲಿಸಲು ಎಲ್ಲಿಯೂ ಅಂತ್ಯವೆಂಬುದಿಲ್ಲ. ಅವಕಾಶ ಸಿಕ್ಕಾಗಲೆಲ್ಲ ತನ್ನಿಂದಾದ ಸೇವೆ ಸಲ್ಲಿಸುವುದು ಉತ್ತಮ ಸ್ವಯಂ ಸೇವಕನ ಲಕ್ಷಣ ಎಂದು ಲಾರ್ಡ್ಸ್ ಸಮೂಹ ಸಂಸ್ಥೆಗಳ ವ್ಯವಸ್ಥಾಪಕರಾದ ಬೆನೆಡಿಕ್ಟ್ ಆರ್ ಸಲ್ಡಾನ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಕಾವೇರಿ ಕಾಲೇಜಿನ ಕೌಸ್ತುಭ ಸಭಾ ಭವನದಲ್ಲಿ ನಡೆದ ಕಾಲೇಜಿನ ಎನ್ ಎಸ್ ಎಸ್ ಘಟಕದ ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ಎನ್ಎಸ್ಎಸ್ ಎಂಬುವುದು ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವ ವಿಕಸನಕ್ಕೆ ಹಾಗೂ ಉತ್ತಮ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಸಮರ್ಪಕವಾದ ವೇದಿಕೆಯಾಗಿದ್ದು ಇದರ ಮೂಲಕ ವಿದ್ಯಾರ್ಥಿಗಳು ಸಹಕಾರ, ಪ್ರಕೃತಿ ರಕ್ಷಣೆ, ಸ್ವಚ್ಚತೆ, ನೈರ್ಮಲ್ಯದಂತಹ ವಿಚಾರಗಳನ್ನು ಅರಿತು ತಮ್ಮ ಮೂಲಕ ಸಮಾಜದಲ್ಲಿ ಈ ಗುಣಗಳನ್ನು ಪ್ರಚಾರ ಮಾಡುದರೊಂದಿಗೆ ಸಮಾಜದಲ್ಲಿ ಯಾವುದೇ ಸಂದರ್ಭದಲ್ಲಿಯೂ ಪ್ರತಿಫಲದ ಅಪೇಕ್ಷೆ ಇಲ್ಲದೆ ಸೇವೆ ಸಲ್ಲಿಸಲು ಸಿದ್ದರಿರಬೇಕು. ಕೇವಲ ನಾನೊಬ್ಬನೆ ಬೆಳೆದರೆ ಸಾಲದು. ನನ್ನೊಂದಿಗೆ ಇರುವ ಇತರರನ್ನು ಬೆಳೆಸಬೇಕೆಂಬ ಸಹಕಾರದ ಭಾವನೆಯನ್ನು ತಮ್ಮ ಜೀವನದಲ್ಲಿ…

Read More

ಮಡಿಕೇರಿ ಜೂ.4 NEWS DESK : ಸಮಾಜ ಸೇವಕರಾದ ನಿವೃತ್ತ ಪೊಲೀಸ್ ಕಾವೇರಪ್ಪನವರು ಎಫ್‌.ಎಂ.ಕೆ.ಎಂ.ಸಿ. ಕಾಲೇಜಿನ ವಿದ್ಯಾರ್ಥಿನಿಯ ಪ್ರಥಮ ವರ್ಷದ ಪ್ರವೇಶ ಶುಲ್ಕವನ್ನು ಭರಿಸಿ ವಿದ್ಯಾರ್ಥಿನಿಯ ಉಜ್ವಲ ಭವಿಷ್ಯಕ್ಕಾಗಿ ಶುಭವನ್ನು ಹಾರೈಸಿದರು.

Read More

ಮಡಿಕೇರಿ ಜೂ.4 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಲ್ಲಿ ಒಬ್ಬರಾದ ಮೈಸೂರಿನ ಮಹಾರಾಜ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಮಡಿಕೇರಿಯ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಗೌರವ ಸಲ್ಲಿಸಲಾಯಿತು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರು ಮಾತನಾಡಿ, ಮರೆಯಲು ಅಸಾಧ್ಯವಾದಂತಹ ದಿವ್ಯ ಚೇತನ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕನ್ನಡ ನಾಡಿಗೆ ಮಾಡಿದ ಸೇವೆಯನ್ನು ಎಷ್ಟು ವರ್ಣಿಸಿದರೂ ಸಾಲದು. ಇಂದು ಶತಮಾನೋತ್ಸವ ಆಚರಿಸುತ್ತಿರುವ ಎಲ್ಲ ಸಂಘ-ಸಂಸ್ಥೆಗಳನ್ನು ಪ್ರಾರಂಭಿಸಿದ್ದು, ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು. ಮೊದಲ ಸಭೆಯಲ್ಲಿ ಅವರು ಮಾತನಾಡುತ್ತಾ, “ಮೈಸೂರು ರಾಜ್ಯದ ಆಡಳಿತದಲ್ಲಿ ನಾವು ಒಂದು ಹೊಸ ಪ್ರಯೋಗವನ್ನು ಆರಂಭಿಸಿದ್ದೇವೆ. ನಮ್ಮ ಪ್ರಜೆಗಳಿಗೆ ಅಖಂಡ ಸುಖ ಸಂಪತ್ತನ್ನು ಒದಗಿಸಿ ಕೊಡಬೇಕೆಂಬುದು ನನ್ನ ಜೀವನದ ಪರಮೊದ್ದೇಶ” ಎಂದರು. ಅದಕ್ಕಾಗಿ 1923ರಲ್ಲಿ ಹೊಸ,…

Read More

ಮಡಿಕೇರಿ ಜೂ.4 NEWS DESK : ಮರಗೋಡು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಮಡಿಕೇರಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು  ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭೌತಿಕ ಸೌಲಭ್ಯಗಳು ಉತ್ತಮವಾಗಿದ್ದರು ಸಹ ದಾಖಲಾತಿ ಕುಂಠಿತಗೊಂಡಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಕೂಡಲೇ ಎಸ್.ಡಿ ಎಂ.ಸಿ ಅಧ್ಯಕ್ಷರು, ಗ್ರಾಮಸ್ಥರು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು, ಪೋಷಕರುಗಳ ಸಭೆ ಕರೆದು ದಾಖಲಾತಿ ಹೆಚ್ಚಿಸುವುದರ ಬಗ್ಗೆ ಚರ್ಚಿಸಿದರು. ಶಾಲೆಯ ಸಭಾಂಗಣಕ್ಕೆ ಇಂಟರ್ ಲಾಕ್ ಅಳವಡಿಸಲು ಊರಿನ ದಾನಿಗಳ ಸಹಾಯವನ್ನು ಪಡೆದುಕೊಳ್ಳುವಂತೆಯು, ಶಾಲೆಯನ್ನು ಮಾದರಿ ಶಾಲೆಯನ್ನಾಗಿ ರೂಪಿಸುವ ಜವಾಬ್ದಾರಿ ಊರಿನ ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ತಿಳಿ ಹೇಳಿದರು.  ಪ್ರಭಾರ ಮುಖ್ಯಶಿಕ್ಷಕರಾದ .ಕೆ.ಎಂ.ಅಶ್ರಫ್, ಸಹಶಿಕ್ಷಕರುಗಳಾದ ಕೆ.ಆರ್.ದನಿತ, ಪಿ.ಎಲ್.ಗಾನವಿ ಹಾಜರಿದ್ದರು.

Read More

ಮಡಿಕೇರಿ ಜೂ.4 NEWS DESK : ವಿಶ್ವ ಪರಿಸರ ದಿನದ ಪ್ರಯುಕ್ತ ಬ್ರಹ್ಮಾಕುಮಾರೀಸ್  ಮಡಿಕೇರಿ ಶಾಖೆ ಸಭಾಂಗಣದಲ್ಲಿ ಜೂ.5 ರಂದು ಶ್ರೀ ಗಂಧದ ಸಸಿಗಳು ಹಾಗೂ ಮಾವಿನ ಸಸಿಗಳನ್ನು ಉಚಿತವಾಗಿ ವಿತರಿಸಲಾಗುವುದು. ಬೆಳಿಗ್ಗೆ 11 ಗಂಟೆಗೆ ಸಸಿಗಳನ್ನು ಪಡೆಯಬಹುದು, ಆಸಕ್ತರು ತಮ್ಮ ಹೆಸರು ವಿಳಾಸ ಹಾಗೂ ಮೊಬೈಲ್ ನಂಬರನ್ನು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಹಾಗೂ ನೋಂದಣಿಗಾಗಿ  6 3 6 2 3 4 01 4 8  ಸಂಪರ್ಕಿಸಬಹುದಾಗಿದೆ ಎಂದು ಶಾಖೆಯ ಪ್ರಮುಖರು ತಿಳಿಸಿದರು.

Read More