ಮಡಿಕೇರಿ ಏ.8 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.8ರಂದು ನಡೆದ ಪಂದ್ಯಾವಳಿಯಲ್ಲಿ ಮೈದಾನ 2 ಗೆಲುವು ಸಾಧಿಸಿದ ತಂಡಗಳು. *ಮೈದಾನ 2* ಬೋಳಕಾರಂಡ (ಕೊಣಂಜಗೇರಿ) ಮತ್ತು ಬಾಳೆಕುಟ್ಟೀರ ನಡುವಿನ ಪಂದ್ಯದಲ್ಲಿ ಬೋಳಕಾರಂಡ 39 ರನ್ಗಳ ಜಯ ಸಾಧಿಸಿತು. ಬೋಳಕಾರಂಡ 6 ಓವರ್ಗಳಲ್ಲಿ 1 ವಿಕೆಟ್ ನಷ್ಟಕ್ಕೆ 97 ರನ್ ಗಳನ್ನು ಮತ್ತು ಬಾಳೆಕುಟ್ಟೀರ 6 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 58 ರನ್ ಗಳನ್ನು ಗಳಿಸಿತು ಚೀಯಂಡಿರ ಮತ್ತು ಅಳಮೇಂಗಡ ತಂಡಗಳ ನಡುವಿನ ಪಂದ್ಯದಲ್ಲಿ ಅಳಮೇಂಗಡ 50 ರನ್ ಗಳಿಂದ ಗೆಲುವು ಸಾಧಿಸಿತು. ಅಳಮೇಂಗಡ 6 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 81 ರನ್ ಗಳನ್ನು ಮತ್ತು ಚೀಯಂಡಿರ 6 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 30 ರನ್ ಗಳನ್ನು ಸೇರಿಸಿತು. ಆದೇಂಗಡ ಮತ್ತು ಬೊಳ್ಳನಮಂಡ ನಡುವಿನ ಹಣಾಹಣಿಯಲ್ಲಿ ಆದೇಂಗಡ 7 ವಿಕೆಟ್…
ಲೇಖಕ: admin
ಮಡಿಕೇರಿ ಏ.8 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.8ರಂದು ನಡೆದ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ತಂಡಗಳು. *ಮೈದಾನ 1* ಕುಂಜಿರ ಮತ್ತು ಅಪ್ಪಾರಂಡ ತಂಡಗಳ ನಡುವಿನ ಪಂದ್ಯದಲ್ಲಿ ಕುಂಜಿರ 9 ವಿಕೆಟ್ ಗಳ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಪ್ಪಾರಂಡ 6 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 62 ರನ್ ಗಳನ್ನು ಗಳಿಸಿತು. ಇದನ್ನು ಬೆನ್ನಟ್ಟಿದ ಕುಂಜಿರ ತಂಡ 3.4 ಓವರ್ಗಳಲ್ಲಿ 1 ವಿಕೆಟ್ ನಷ್ಟಕ್ಕೆ 66 ಗಳನ್ನು ಸೇರಿಸಿ ಗೆಲುವಿನ ನಗು ಬೀರಿತು. ಕುಟ್ಟಂಡ (ಕಾರ್ಮಾಡು) ಮತ್ತು ಬಾಚಿನಾಡಂಡ ನಡುವಿನ ಪಂದ್ಯದಲ್ಲಿ ಬಾಚಿನಾಡಂಡ 9 ವಿಕೆಟ್ ಗಳ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕುಟ್ಟಂಡ 6 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 99 ರನ್ ಗಳನ್ನು ಗಳಿಸಿತು. ಬಾಚಿನಾಡಂಡ ತಂಡ 5.4 ಓವರ್ಗಳಲ್ಲಿ 1…
ಮಡಿಕೇರಿ, NEWS DESK ಏ.8 : ಕೇಂದ್ರ ಪುರಸ್ಕೃತ ಜಲಜೀವನ್ ಮಿಷನ್ 2.0 ಯೋಜನೆಯನ್ನು 2028 ನೇ ಸಾಲಿನ ವರೆಗೂ ವಿಸ್ತರಿಸುವ ಹಿನ್ನೆಲೆ ಯೋಜನೆಯ ಪ್ರಗತಿ ಮತ್ತು ಪರಿಣಾಮಕಾರಿ ಅನುಷ್ಠಾನ ಕುರಿತು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಲಜೀವನ್ ಮಿಷನ್ ಯೋಜನೆಯ ಜೊತೆಗೆ ಜಲ ಮಹೋತ್ಸವ ಸೇರಿದಂತೆ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲು ಸರ್ಕಾರದಿಂದ ಅನುಮತಿ ದೊರೆತಿದ್ದು, ಆ ನಿಟ್ಟಿನಲ್ಲಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸಂಸದರು ಸೂಚಿಸಿದರು. ಕೇಂದ್ರ ಪುರಸ್ಕೃತ ಜಲ ಜೀವನ್ ಮಿಷನ್ 2.0 ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಯಾವುದೇ ಕಾರಣಕ್ಕೂ ಲೋಪ ಉಂಟಾಗದAತೆ ಎಚ್ಚರ ವಹಿಸುವಂತೆ ಸಂಸದರು ನಿರ್ದೇಶನ ನೀಡಿದರು. ಕೇಂದ್ರ ಸರ್ಕಾರ, ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು ಎಂಬ ಉದ್ದೇಶದದಿಂದ ಹಲವು ಅಭಿವೃದ್ಧಿ ಕೆಲಸಗಳನ್ನು ಕೈಗೊಂಡಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚರದಿಂದ ಕಾರ್ಯ ನಿರ್ವಹಿಸಬೇಕು ಎಂದರು. ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು…
ಮಡಿಕೇರಿ NEWS DESK ಏ.8 : ಕೊಡಗು ಜಿಲ್ಲೆಯ ನಾಪೋಕ್ಲು ವ್ಯಾಪ್ತಿಯ ತಂಡಿಯoಡಮೋಳ್ ಬೆಟ್ಟದಲ್ಲಿ ಚಾರಣಕ್ಕೆಂದು ತೆರಳಿ ಮೂರು ದಿನಗಳ ನಂತರ ಪತ್ತೆಯಾದ ಕೇರಳದ ಮಹಿಳೆ ಜಿ.ಎಸ್.ಶರಣ್ಯ (36) ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಬಿಜೆಪಿಯ ಸೋಮವಾರಪೇಟೆ ಮಂಡಲದ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ದಟ್ಟ ಅರಣ್ಯದಿಂದ ಕೂಡಿರುವ ಬೆಟ್ಟದಲ್ಲಿ ಚಾರಣಕ್ಕೆಂದು ಏಕಾಂಗಿಯಾಗಿ ಬಂದ ಜಿ.ಎಸ್.ಶರಣ್ಯ ಅವರ ನಡೆಯ ಬಗ್ಗೆ ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ಹಲವು ಸಂಶಯಗಳು ವ್ಯಕ್ತವಾಗಿದೆ. ಚಾರಣಕ್ಕೆಂದು ತೆರಳಿ ದಾರಿ ತಪ್ಪಿದ ನೆಪವೊಡ್ಡಿ ನಾಪತ್ತೆಯಾಗಿದ್ದ ಆಕೆ ಯಾವುದೇ ಆತಂಕವಿಲ್ಲದೆ ಮೂರು ದಿನಗಳ ನಂತರ ಪತ್ತೆಯಾಗಿದ್ದು, ಪ್ರಕರಣದ ಹಿಂದೆ ದುರುದ್ದೇಶವಿರುವ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ ಎಂದು ಆರೋಪಿಸಿದ್ದಾರೆ. ಮೂರು ದಿನಗಳ ಕಾಲ ಕೇವಲ ನೀರಿನಿಂದ ಜೀವಿಸಿದ್ದೆ ಎಂದು ಹೇಳಿಕೆ ನೀಡಿರುವ ಶರಣ್ಯ, ಯಾವುದೇ ಆಯಾಸವಿಲ್ಲದೆ ಮರಳಿರುವುದು ವೈದ್ಯಕೀಯ ಕ್ಷೇತ್ರದಲ್ಲೂ ಸಂಶಯವನ್ನು ಹುಟ್ಟು ಹಾಕಿದೆ. ಎಲ್ಲಾ ಸಂಶಯಗಳಿಗೂ ಉನ್ನತ ಮಟ್ಟದ ತನಿಖೆ ಉತ್ತರ…
ಬೆಂಗಳೂರು, NEWS DESK ಏ.08: ರಾಜ್ಯದ ವಿವಿಧ ಆಟೋ ಗ್ಯಾಸ್ ಬಂಕ್ಗಳಲ್ಲಿ ಅನಿಲದ ದಾಸ್ತಾನು ಕೊರತೆಯಿದೆ ಎಂಬ ತಪ್ಪು ಮಾಹಿತಿಯ ಆಧಾರದ ಮೇಲೆ, ಕಳೆದ ಕೆಲವು ದಿನಗಳಿಂದ ಆಟೋ ಮಾಲೀಕರು ಮತ್ತು ಚಾಲಕರು ಬಂಕ್ಗಳ ಮುಂದೆ ಸುದೀರ್ಘ ಸರತಿ ಸಾಲಿನಲ್ಲಿ ನಿಲ್ಲುತ್ತಿರುವ ಅಂಶ ಸರ್ಕಾರದ ಗಮನಕ್ಕೆ ಬಂದಿದೆ. ಈ ಕುರಿತು ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳು ಕೇವಲ ವದಂತಿಗಳಾಗಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಸ್ಪಷ್ಟಪಡಿಸಿದೆ. ಕೆಲವು ಖಾಸಗಿ ಆಟೋ ಗ್ಯಾಸ್ ಸರಬರಾಜು ಸಂಸ್ಥೆಗಳಲ್ಲಿ ಮಾತ್ರ ಅಲ್ಪಮಟ್ಟಿನ ಕೊರತೆ ಕಂಡುಬಂದಿದ್ದು, ಇದನ್ನು ಸರಿಪಡಿಸಲು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಾದ IOC (ಇಂಡಿಯನ್ ಆಯಿಲ್), BPC (ಭಾರತ್ ಪೆಟ್ರೋಲಿಯಂ) ಮತ್ತು HPC (ಹಿಂದೂಸ್ತಾನ್ ಪೆಟ್ರೋಲಿಯಂ) ಮೂಲಕ ಹೆಚ್ಚಿನ ಪ್ರಮಾಣದ ಅನಿಲವನ್ನು ಪೂರೈಕೆ ಮಾಡಲಾಗುತ್ತಿದೆ. ಹಿಂದೆ ಈ ಮೂರು ಸಂಸ್ಥೆಗಳು ಸರಾಸರಿ 56.67 ಮೆಟ್ರಿಕ್ ಟನ್ ಆಟೋ ಗ್ಯಾಸ್ ಅನ್ನು ಸರಬರಾಜು ಮಾಡುತ್ತಿದ್ದವು. ಆದರೆ…
ವಿರಾಜಪೇಟೆ ಕಾವೇರಿ ಕಾಲೇಜಿನ ಐಕ್ಯೂಎಸಿ ಹಾಗೂ ಇತಿಹಾಸ ವಿಭಾಗದ ವತಿಯಿಂದ ಮಂಗಳವಾರ ಕಾಲೇಜಿನ ಕೌಸ್ತುಬ ಸಭಾಭವನದಲ್ಲಿ ಆಯೋಜಿಸಲಾಗಿದ ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ಧತೆಯಲ್ಲಿ ಸಮಯ ನಿರ್ವಹಣೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಇತಿಹಾಸ ವಿಷಯದ ಮಹತ್ವ ಎಂಬ ವಿಷಯದ ಕುರಿತು ನಡೆದ ಸಂವಾದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ನಮ್ಮ ಬದುಕಿನ ನಿರ್ಮಾಣ ನಮ್ಮ ಕೈಯಲ್ಲಿದ್ದು ನಮ್ಮನ್ನು ನಾವು ಇತರರಿಗೆ ಹೋಲಿಸಿಕೊಳ್ಳುವುದು ನಮಗೆ ನಾವೇ ಮಾಡಿಕೊಳ್ಳುವಂತಹ ಅವಮಾನ. ನಮ್ಮಲ್ಲಿ ಆತ್ಮವಿಶ್ವಾಸವಿರಬೇಕು ಇದು ಸವಾಲನ್ನು ಹೇಗೆ ಎದುರಿಸಬೇಕೆಂದು ಕಲಿಸುತ್ತದೆ. ನಮಗೆ ಸಿಕ್ಕ ಪ್ರತಿಯೊಂದು ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಸೂಕ್ತ ಮಾರ್ಗದಲ್ಲಿ ಬಳಸಿಕೊಂಡು ಸಾಗಿದಾಗ ಮಾತ್ರ ಯಶಸ್ಸನ್ನು ಕಾಣಲು ಸಾಧ್ಯ. ವಿದ್ಯಾರ್ಥಿ ಜೀವನದಿಂದ ಸಮಯ ಪ್ರಜ್ಞೆ ಹೆಚ್ಚಿನ ಮಹತ್ವವನ್ನು ನೀಡಬೇಕು. ನಾವು ಸಮಯವನ್ನು ಗೌರವಿಸಿದರೆ ಸಮಯ ನಮಗೆ ಗೌರವವನ್ನು ತಂದು ಕೊಡುತ್ತದೆ .ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗುವವರಲ್ಲಿ ಮೊದಲು ಮಾನಸಿಕವಾದಂತಹ ಸಿದ್ಧತೆ ಬೇಕು . ನಿರಂತರವಾಗಿ ಓದುವಂತಹ ಪ್ರಕ್ರಿಯೆ ಹಾಗೂ ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಸೂಕ್ತ ಮಾರ್ಗದರ್ಶನದೊಂದಿಗೆ…
ಮಡಿಕೇರಿ, NEWS DESK ಏ.8 : ಕೊಡಗಿನ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿದ ಕೇರಳದ ಮಹಿಳೆ ಜಿ.ಎಸ್.ಶರಣ್ಯ (36) ನಾಪತ್ತೆ ಪ್ರಕರಣ ಹಲವು ಸಂಶಯಗಳನ್ನು ಹುಟ್ಟು ಹಾಕಿದೆ ಎಂದು ಆರೋಪಿಸಿ ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲದ ಪ್ರಮುಖರು ನಾಪೋಕ್ಲು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಬಿಜೆಪಿ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಪೊಕ್ಕುಳಂಡ್ರ ಧನೋಜ್(ದಿವ್ಯ) ಅವರು ಠಾಣಾಧಿಕಾರಿ ರಾಘವೇಂದ್ರ ಅವರಿಗೆ ದೂರು ನೀಡಿದರು. ನಂತರ ಮಾತನಾಡಿದ ಅವರು ನಾಪತ್ತೆಯಾಗಿ 3 ದಿನಗಳ ಬಳಿಕ ಪತ್ತೆಯಾದ ಪ್ರಕರಣದ ಬಗ್ಗೆ ನಮಗೆ ಸಂಶಯವಿದೆ. ಇದರಲ್ಲಿ ಕಾಣದ ಕೈಗಳ ಕೈವಾಡವಿದೆ ಎಂದು ಆರೋಪಿಸಿದರು. ಪೊಲೀಸ್ ಇಲಾಖೆ ಸೂಕ್ತ ತನಿಖೆ ನಡೆಸಿ ಜನರಿಗೆ ಸತ್ಯಾಸತ್ಯತೆಯನ್ನು ತಿಳಿಸಬೇಕೆಂದು ಒತ್ತಾಯಿಸಿದರು. ನಾಪೋಕ್ಲು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಬಿಜೆಪಿ ಮಹಾಶಕ್ತಿ ಕೇಂದ್ರದ ಗ್ರಾಮಾಂತರ ಮಂಡಲದ ಅಧ್ಯಕ್ಷ ಬಿದ್ದಂಡ ರಾಜೇಶ್ ಅಚ್ಚಯ್ಯ, ಉಪಾಧ್ಯಕ್ಷ…
ಮಡಿಕೇರಿ ಏ.7 NEWS DESK : ರಸಗೊಬ್ಬರ ಖರೀದಿಗೆ ಇನ್ಮುಂದೆ ರೈತರು ಕಡ್ಡಾಯವಾಗಿ ಎಫ್ಐಡಿ ಹೊಂದಿರಬೇಕು. ಅಷ್ಟೇ ಅಲ್ಲ ತಮ್ಮ ಭೂಮಿಯನ್ನು ಸಹ ಎಫ್ಐಡಿಗೆ ಜೋಡಿಸಿರಬೇಕು. ಇದರ ಆಧಾರದಲ್ಲಿಯೇ ರಸಗೊಬ್ಬರವನ್ನು ಕೆ.ಕಿಸಾನ್ ತಂತ್ರಜ್ಞಾನದ ಮೂಲಕ ವಿತರಣೆ ಮಾಡಲಾಗುತ್ತದೆ. ಹೌದು ರಸಗೊಬ್ಬರ ತಯಾರಿಕೆಗೆ ವಿದೇಶದಿಂದ ಕಚ್ಚಾಸಾಮಾಗ್ರಿ ಹೆಚ್ಚು ಆಮದು ಮಾಡಿಕೊಳ್ಳಲಾಗುತ್ತಿದೆ. ಯುದ್ದದಿಂದ ರಸಗೊಬ್ಬರ ತಯಾರಿಕೆ ಕಚ್ಚಾ ಸಾಮಾಗ್ರಿಯ ಆಮದಿನಲ್ಲಿ ಭಾರಿ ಸಮಸ್ಯೆಯಾಗಿದೆ, ಹೀಗಾಗಿ ಈ ಬಾರಿ ರಸಗೊಬ್ಬರ ಉತ್ಪಾದನೆಯಲ್ಲಿ ಕುಸಿತವಾಗುವ ಸಾಧ್ಯತೆ ಇದೆ. ಇದರಿಂದ ರಸಗೊಬ್ಬರ ವಿತರಣೆಯ ಮೇಲೆ ವಿಶೇಷ ನಿಗಾ ಇರಿಸಲು ನಿರ್ಧರಿಸಲಾಗಿದೆ. ಈ ಕುರಿತು ರಾಜ್ಯ ಸರ್ಕಾರದ ಕೃಷಿ ಇಲಾಖೆ ಕಟ್ಟನಿಟ್ಟಿನ ಸೂಚನೆ ನೀಡಿದ್ದು, ರೈತರು ರಸಗೊಬ್ಬರ ಖರೀದಿ ಮಾಡಬೇಕು ಎಂದಾದರೆ ಮೊದಲು ಎಫ್ಐಡಿ ಹೊಂದುದು ಕಡ್ಡಾಯ. ಅದಾದ ನಂತರ ಎಫ್ಐಡಿಗೆ ರೈತರು ತಮ್ಮ ಭೂಮಿಯನ್ನೆಲ್ಲ ಕಡ್ಡಾಯವಾಗಿ ಜೋಡಿಸಬೇಕು, ಇದರ ಆಧಾರದ ಮೇಲೆ ಹಾಕಿದ ಬೆಳೆಗೆ ರಸಗೊಬ್ಬರವನ್ನು ರೈತರಿಗೆ ಕೆ-ಕಿಸಾನ್ ತಂತ್ರಜ್ಞಾನದ ಮೂಲಕವೇ ವಿತರಣೆ ಮಾಡಲಾಗುವುದು. ಕಾಳಸಂತೆಗೆ ಬ್ರೇಕ್: ರೈತರ…
ಮಡಿಕೇರಿ ಏ.7 NEWS DESK : ವಿರಾಜಪೇಟೆ ತಾಲೂಕಿನ ಕಾನೂರು ಗ್ರಾಮದ ಬ್ರಹ್ಮಗಿರಿಪುರದಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಮುತ್ತಪ್ಪ ದೇವರ ಉತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ಭಾನುವಾರ ಸಂಜೆ 6 ಗಂಟೆಗೆ ಮುತ್ತಪ್ಪನ ವೆಳ್ಳಾಟಂನೊಂದಿಗೆ ಆರಂಭಗೊಂಡಿತು. ರಾತ್ರಿ ಭಗವತಿ ದೇವರ ತೆರೆಯು ನೆರೆದಿದ್ದ ಭಕ್ತಾಧಿಗಳನ್ನು ಹಿಡಿದುಕೊಳ್ಳುವ ರೀತಿಯಲ್ಲಿ ಅಟ್ಟಾಡಿಸುತ್ತಿದ್ದದ್ದು ಎಲ್ಲರ ಗಮನ ಸೆಳೆಯಿತು. ಮಂಗಳವಾರ ಗುಳಿಗ ದೇವರ ತೆರೆ, ಕುಟ್ಟಿಚಾತನ್, ಮುತ್ತಪ್ಪ ಮತ್ತು ತಿರುವಪ್ಪ ದೇವರ ತೆರೆ ನಡೆಯಿತು. ಮುತ್ತಪ್ಪ, ತಿರುವಪ್ಪ, ಸಾಸ್ತಪ್ಪನ್, ಕುಟ್ಟಿಚಾತನ್, ವಸೂರಿಮಲೆ, ಭಗವತಿ, ಗುಳಿಗನ್, ಕಂಡಕರ್ಣ ಹೀಗೆ ವಿವಿಧ ರೀತಿಯ ತೆರೆಗಳನ್ನು ಕಟ್ಟಲಾಗಿತ್ತು. ಉತ್ಸವದಲ್ಲಿ ಸುತ್ತಮುತ್ತಲಿನ ಗ್ರಾಮದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಶ್ರೀ ಮುತ್ತಪ್ಪ ದೇವಾಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಈಶ್ವರ, ಕಾರ್ಯದರ್ಶಿ ಕಾರ್ತಿಕ್, ಸದಸ್ಯರಾದ ವಿನು, ರವಿ, ರಾಜೇಶ್, ವಿಜಯ್, ಸುನಿ, ಅನಿ, ಸಂತೋಷ್, ಮಂಜುನಾಥ್, ಮಣಿ, ರಘು ಸೇರಿದಂತೆ ಇತರರು ಇದ್ದರು.
ಮಡಿಕೇರಿ ಏ.7 NEWS DESK : ವಿರಾಜಪೇಟೆ ತಾಲ್ಲೂಕಿನ ಕಣ್ಣಂಗಾಲ ಒಕ್ಕಲಿಗರ ಸಂಘದಿಂದ ಒಕ್ಕಲಿಗ ಸಮುದಾಯ ಬಾಂಧವರಿಗಾಗಿ ವಿವಿಧ ಕ್ರೀಡಾಕೂಟಗಳು ಏ.19ರ ನಡೆಯಲಿದೆ ಎಂದು ಸಂಘದ ಅಧ್ಯಕ್ಷರಾದ ಕೆ.ಎಸ್.ಗೋಪಾಲಕೃಷ್ಣ (ಗೋಪಿ) ಹಾಗೂ ಆಡಳಿತ ಮಂಡಳಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಯುಗಾದಿ ಪ್ರಯುಕ್ತ ಸಂಘದ ವತಿಯಿಂದ ಅಮ್ಮತ್ತಿ ಒಂಟಿಯಂಗಡಿ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಬೆಳಗ್ಗೆ 10ಗಂಟೆಗೆ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಕೆ.ಎಸ್ ಗೋಪಾಲಕೃಷ್ಣ (ಗೋಪಿ) ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟಕರಾಗಿ ಕಣ್ಣಂಗಾಲ ಗ್ರಾಮದವರಾದ, ಹೊಳೆನರಸೀಪುರ ಚೆಸ್ಕಾಂ ಅಭಿಯಂತರಾದ ಕೆ.ಕೆ ಮೋಹನ್ ಕುಮಾರ್ ಹಾಗೂ ವಿರಾಜಪೇಟೆ ತಾಲ್ಲೂಕು ಪಂಚಾಯತ್ ವ್ಯವಸ್ಥಾಪಕರಾದ ಕೆ.ಆರ್ ಸ್ವರೂಪ ಅವರು ಆಗಮಿಸಲಿದ್ದಾರೆ. ನಂತರ ಕುಲಬಾಂಧವರಿಗಾಗಿ ವಿವಿಧ ಕ್ರೀಡಾಕೂಟಗಳು ನಡೆಯಲಿದ್ದು,ಪುರಷರಿಗೆ ವಾಲಿಬಾಲ್,ಬಾಂಬ್ ಇನ್ ದ ಸಿಟಿ,ಮಹಿಳೆಯರಿಗೆ ಥ್ರೋಬಾಲ್, ಬಾಂಬ್ ಇನ್ ದ ಸಿಟಿ, ಬಾಲಕ ಮತ್ತು ಬಾಲಕಿಯರಿಗೆ 4 ರಿಂದ 6ವರ್ಷದವರಿಗೆ 100 ಮೀಟರ್ ಓಟ, 7 ರಿಂದ 12ವರ್ಷದವರಿಗೆ 100ಮೀ ಓಟ ಮತ್ತು 1…






