ಮಡಿಕೇರಿ ಜ.16 NEWS DESK : ಸೌತ್ ಇಂಡಿಯಾ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಸೌತ್ ಏಷಿಯಾ ಮಾಸ್ಟರ್ಸ್ ಅಥ್ಲೆಟಿಕ್ಸ್ ಓಪನ್ ಚಾಂಪಿಯನ್ ಶಿಪ್ ನಲ್ಲಿ 5 ಕಿ.ಮೀ ದೂರದ ವಾಕ್ ರೇಸ್ ನಲ್ಲಿ 60 ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ಮಡಿಕೇರಿಯ ಎಡಿಕೇರಿ ಎನ್.ವಿಶಾಲಾಕ್ಷಿ ಅವರು ಪ್ರಥಮ ಬಹುಮಾನ ಗೆದ್ದಿದ್ದಾರೆ. ಇವರು ದಿ.ಎಡಿಕೇರಿ ನರೇಶ್ ಅವರ ಪತ್ನಿಯಾಗಿದ್ದು, ಬಾಲ್ಯದಿಂದಲೇ ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ವಿವಿಧ ಕ್ರೀಡಾಕೂಟಗಳಲ್ಲಿ ಸ್ಪರ್ಧಿಸಿ ಹಲವು ಪದಕಗಳನ್ನು ಗೆದ್ದು ಕೊಡಗು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಈ ಹಿಂದೆ ಎಡಿಕೇರಿ ವಿಶಾಲಾಕ್ಷಿ ಅವರು ಗೃಹ ರಕ್ಷಕ ದಳದಲ್ಲಿ ಕೂಡ ಕರ್ತವ್ಯ ನಿರ್ವಹಿಸಿದ್ದಾರೆ.
ಲೇಖಕ: admin
ಮಡಿಕೇರಿ ಜ.20 NEWS DESK : ಕೊಡಗು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 2025-26ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರವು ಸ್ಥಾಪಿಸಿರುವ ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 6 ರಿಂದ 10ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನು ನೀಡುವುದರ ಜೊತೆಗೆ ಉತ್ತಮವಾದ ವಿದ್ಯಾಭ್ಯಾಸ ನೀಡಲಾಗುತ್ತಿದೆ. ಈ ಶಾಲೆಗಳಲ್ಲಿ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಅಂದರೆ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರವೇಶ ಲಭ್ಯವಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ರೂ.2.50 ಲಕ್ಷಗಳು ಮತ್ತು…
ನಾಪೋಕ್ಲು ಜ.16 NEWS DESK : ಪ್ರತಿಯೊಬ್ಬ ವ್ಯಕ್ತಿಯೂ ಭಾರತೀಯ ಸೇನೆಯ ಬಗ್ಗೆ ಅಭಿಮಾನ ಹೊಂದಿರಬೇಕು ಎಂದು ಮೈಸೂರಿನ ಕೊಡಗು ಗೌಡ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಚಂಡಿರ ಬಸಪ್ಪ ಹೇಳಿದರು. ಮೈಸೂರಿನ ಕೊಡಗು ಗೌಡ ಮಾಜಿ ಸೈನಿಕರ ಸಂಘದ ವತಿಯಿಂದ ಸಂಘದ ಸಭಾಂಗಣದಲ್ಲಿ ನಡೆದ ಹೊಸ ವರ್ಷಾಚರಣೆ ಹಾಗೂ ಸಂತೋಷ ಕೂಟ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರದ ಅಗ್ನಿವೀರ ಯೋಜನೆಯನ್ನು ಸದುಪಯೋಗ ಪಡಿಸಿಕೊಂಡು ಪ್ರತಿಯೊಬ್ಬರೂ ಸೈನಿಕರಾಗಿ ದೇಶ ಸೇವೆಯಲ್ಲಿ ತೊಡಗುವ ಪ್ರಯತ್ನ ಮಾಡಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ದೇಶಭಕ್ತಿ ಮೂಡಿಸುವ, ಹಾಗೂ ಸೈನಿಕರ ತ್ಯಾಗ ಬಲಿದಾನಗಳಿಗೆ ಸಂಬಂಧಿಸಿದ ಹಾಡು ಮತ್ತು ನೃತ್ಯಗಳನ್ನು ಪ್ರಸ್ತುತ ಪಡಿಸುವ ಮೂಲಕ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಅತಿ ಹಿರಿಯರನ್ನು ಹಾಗೂ ನಿವೃತ್ತಿ ಹೊಂದಿದ ಯೋಧರನ್ನು ಸನ್ಮಾನಿಸಲಾಯಿತು. ಅಲ್ಲದೇ ಹತ್ತನೇ ತರಗತಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಯೋಧರ ಮಕ್ಕಳಿಗೆ ಪುರಸ್ಕಾರ ನೀಡಲಾಯಿತು. ಸಂಘದ ಸ್ಥಾಪಕ…
ನಾಪೋಕ್ಲು ಜ.16 NEWS DESK : ಚಂಡೀರ ದೀಪ್ತಿ ಜನಾರ್ದನ ಪಿ.ಹೆಚ್.ಡಿ ಪದವಿಗೆ ಭಾಜನರಾಗಿದ್ದಾರೆ. ರಶ್ಮಿ ಅವರ ಸಂಶೋಧನಾ ಪ್ರಬಂಧ “ಅನುವಾದ ಸಂಸ್ಕೃತಿಯಲ್ಲಿನ ಸವಾಲುಗಳು” (ಚಾಲೆಂಜರ್ಸ್ ಇನ್ ಟ್ರಾನ್ಸ್ಲೇಟಿಂಗ್ ಕಲ್ಚರ್) ಗೆ ಮೈಸೂರಿನ ಅಮೃತ ವಿಶ್ವವಿದ್ಯಾಪೀಠವೂ ಪಿ.ಹೆಚ್ಡಿ ಪ್ರದಾನ ಮಾಡಿದೆ. ದೀಪ್ತಿ ಪ್ರಸ್ತುತ ಬೆಂಗಳೂರಿನ ಅಮೃತ ಸ್ಕೂಲ್ ಆಫ್ ಇಂಜಿನಿಯರಿಂಗ್ ಕಾಲೇಜಿನ ಇಂಗ್ಲಿಷ್ ವಿಭಾಗದಲ್ಲಿ ಸಹಾಯಕ ಪೆÇ್ರಫೆಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಪರ್ಲಕೋಟಿ ಹರಿಣಿ ಮತ್ತು ಜನಾರ್ದನ ದಂಪತಿಗಳ ಪುತ್ರಿ. ಕಕ್ಕಬೆ ಗ್ರಾಮ ಪಂಚಾಯಿತಿಯ ಮರಂದೋಡ ಗ್ರಾಮದ ಚಂಡೀರ ರವಿ (ಇಂಜಿನಿಯರ್) ಅವರ ಪತ್ನಿ. ವರದಿ : ದುಗ್ಗಳ ಸದಾನಂದ
ಮಡಿಕೇರಿ ಜ.16 NEWS DESK : ಮಡಿಕೇರಿ-ಭಾಗಮಂಡಲ ಮುಖ್ಯ ರಸ್ತೆಯ ದುರಸ್ತಿ ಕಾಮಗಾರಿಯು ಆರಂಭಗೊಂಡಿದೆ. ಸ್ಥಳೀಯ ನಿವಾಸಿಗಳಲ್ಲದೆ ದಿನಕ್ಕೆ ಸಾವಿರಾರು ಪ್ರವಾಸಿಗರು ಓಡಾಡುವ ಈ ರಸ್ತೆಯು ತೀವ್ರ ಮಳೆಯಿಂದ ಹಾನಿಗೀಡಾಗಿದ್ದು, ಶ್ರೀ ಕಾವೇರಿ ಜಾತ್ರೆ ಸಂದರ್ಭ ಇದರ ದುರಸ್ತಿ ಕಾರ್ಯ ಕೈಗೊಂಡಿದ್ದರೂ, ಆ ಸಂದರ್ಭದಲ್ಲಿ ಸುರಿದ ಮಳೆಯ ಕಾರಣ ಅದು ಪರಿಪೂರ್ಣವಾಗಿರಲಿಲ್ಲ. ಇದನ್ನು ಮನಗಂಡ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಮಳೆ ಕಡಿಮೆ ಆಗಿರುವುದರಿಂದ ದುರಸ್ತಿ ಕಾರ್ಯವನ್ನು ಅಚ್ಚುಕಟ್ಟಾಗಿ ಮಾಡಬೇಕೆಂದು ಅಧಿಕಾರಿಗಳಿಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ ರಸ್ತೆ ದುರಸ್ತಿ ಕಾಮಗಾರಿ ಪ್ರಗತಿಯಲ್ಲಿದೆ. ಕಾಮಗಾರಿಯ ಗುಣಮಟ್ಟ ಕಾಯ್ದುಕೊಂಡು ಶೀಘ್ರದಲ್ಲಿ ಮುಗಿಸಿ ಕೊಡುವುದಾಗಿ ಅಧಿಕಾರಿಗಳು ಸ್ಥಳೀಯರಿಗೆ ತಿಳಿಸಿದ್ದಾರೆ.
ಮಡಿಕೇರಿ ಜ.16 NEWS DESK : ಭಾಗಮಂಡಲ ನಾಡು ಐಯಂಗೇರಿ ಗ್ರಾಮದ ಶ್ರೀ ಚಿನ್ನತಪ್ಪ ದೇವಾಲಯದ ವಾರ್ಷಿಕ ಉತ್ಸವವು ಫೆ.21 ರಿಂದ 23ರ ವರೆಗೆ ನಡೆಯಲಿದೆ. ದೇವಾಲಯದ ತಕ್ಕಮುಖ್ಯಸ್ಥ ಮತ್ತು ಆಡಳಿತಮಂಡಳಿಯ ಜಂಟಿ ಸಭೆಯಲ್ಲಿ ಉತ್ಸವದ ಕುರಿತು ಚರ್ಚಿಸಿ ತೀರ್ಮಾನಿಸಲಾಯಿತು ಎಂದು ಅಧ್ಯಕ್ಷರು ಮತ್ತು ಕಾರ್ಯದರ್ಶಿ ತಿಳಿಸಿದ್ದಾರೆ.
ಸುಂಟಿಕೊಪ್ಪ ಜ.16 NEWS DESK : ಗರಗಂದೂರಿನ ಮಲ್ಲಿಕಾರ್ಜುನ ನಗರದ ಶ್ರೀ ಮಲಿಕಾರ್ಜುನ ಮತ್ತು ಶ್ರೀಚಾಮುಂಡೇಶ್ವರಿ ದೇವಾಲಯದಲ್ಲಿ ಮಕರಸಂಕ್ರಾಂತಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ನಡೆಯಿತು. ಮುಂಜಾನೆಯಿಂದಲೇ ವಿವಿಧ ಪೂಜಾ ಕೈಂಕರ್ಯಗಳು ಜರುಗಿತು. ಸಂಜೆ ಶ್ರೀ ಮಲಿಕಾರ್ಜುನ ಮತ್ತು ಶ್ರೀಚಾಮುಂಡೇಶ್ವರಿ ಪರಿವಾರ ದೇವರುಗಳಿಗೆ ವಿಶೇಷ ಪೂಜೆ ನೆರವೇರಿತು. ವಿವಿಧ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಮಕರ ಸಂಕ್ರಾತಿಯ ಅಂಗವಾಗಿ ದೇವಾಲಯವನ್ನು ಬಣ್ಣ ಬಣ್ಣದ ಹೂಗಳಿಂದ ಸಿಂಗಾರಿಸಲಾಗಿತ್ತು.
ಸೋಮವಾರಪೇಟೆ NEWS DESK ಜ.15 : ಸೋಮವಾರಪೇಟೆಯ ಅಕ್ಷಯ ಮಹಿಳಾ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಒಟ್ಟು 13 ಮಂದಿ ಜಯಗಳಿಸಿದರು. ಸಾಮಾನ್ಯ ಕ್ಷೇತ್ರದಿಂದ ಲೋಕೇಶ್ವರಿ ಗೋಪಾಲ್, ಜಲಜಾ ಶೇಖರ್, ಕವಿತಾ ವಿರೂಪಾಕ್ಷ, ಬಿ.ಕೆ. ವಿದ್ಯಾ, ಉಮಾ, ಕೆ.ಎಸ್. ಚಂದ್ರಾವತಿ, ವರಲಕ್ಷ್ಮಿ ಸಿದ್ದೇಶ್ವರ್, ಕೆ.ಎ. ಮಂಜುಳಾ, ಜೀತಾಶ್ರೀ ಅವರುಗಳು ಗೆಲುವು ಸಾಧಿಸಿದರು. ಹಿಂದುಳಿದ ವರ್ಗ ಎ. ವಿಭಾಗದಿಂದ ಬೇಬಿ ಚಂದ್ರಹಾಸ್, ಹಿಂದುಳಿದ ವರ್ಗ ಬಿ. ವಿಭಾಗದಿಂದ ಎಸ್.ಬಿ. ಗೀತಾ, ಪರಿಶಿಷ್ಟ ಜಾತಿ ವಿಭಾಗದಿಂದ ಎಸ್.ಬಿ. ಮೀನಾಕ್ಷಿ, ಪರಿಶಿಷ್ಟ ಪಂಗಡ ವಿಭಾಗದಿಂದ ಎಚ್.ಎಂ. ರಂಜಿತ ಅವರುಗಳು ಆಯ್ಕೆಯಾದರು.
ಸೋಮವಾರಪೇಟೆ NEWS DESK ಜ.15 : ಸಂಕ್ರಾಂತಿ ಹಬ್ಬದಂದು ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವರ ಜಾತ್ರೋತ್ಸವದ ಅಂಗವಾಗಿ ಕೂತಿ ಗ್ರಾಮದ ಶ್ರೀ ಸಬ್ಬಮ್ಮ ದೇವರ ಚಾವಡಿ ಕಟ್ಟೆಯಲ್ಲಿ ಬುಧವಾರ ವಿಶೇಷ ಪೂಜೆ ನಡೆಯಿತು. ಅನಾದಿಕಾಲದಿಂದಲು ನಡೆದುಕೊಂಡು ಬಂದಂತೆ ದೇವರ ಕಟ್ಟೆಯಲ್ಲಿ ಗ್ರಾಮದ ಒಕ್ಕಲಿಗ ಮನೆತನದ ಹೇಣಿಗೆ ತಂದಿಟ್ಟು ಸಾಂಪ್ರದಾಯಿಕ ಪೂಜೆ ಸಲ್ಲಿಸಲಾಯಿತು. ಹೇಣಿಗೆ ಹೊತ್ತ ಮಹಿಳೆಯರು, ಗ್ರಾಮಸ್ತರು ದೇವರ ಕಟ್ಟೆಯ ಸುತ್ತ ಪ್ರದಕ್ಷಿಣೆ ಹಾಕಿ ನಂತರ ಸಮೀಪದ ಶಾಂತಳ್ಳಿಯ ಕುಮಾರಲಿಂಗೇಶ್ವರ ದೇವಸ್ಥಾನಕ್ಕೆ ಕಾಲ್ನಡಿಗೆಯಲ್ಲಿ ತೆರಳಿದರು. ಈ ಸಂದರ್ಭ ಗ್ರಾಮ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಂ.ಜಯರಾಮ್, ಕಾರ್ಯದರ್ಶಿ ಯಾದವ್ ಕುಮಾರ್, ಉಪಾಧ್ಯಕ್ಷ ಕೆ. ಡಿ. ಗಿರೀಶ್, ಖಜಾಂಚಿ ಲಕ್ಷ್ಮಯ್ಯ, ಭಾನುಪ್ರಸಾದ್, ಭರತ್, ಜಿತೇಂದ್ರ, ಅರ್ಚಕ ಅನಂತರಾಮ್ ಹಾಗು ಗ್ರಾಮಸ್ಥರು ಇದ್ದರು.
ಸೋಮವಾರಪೇಟೆ NEWS DESK ಜ.15 : ವೈಕುಂಠ ಏಕಾದಶಿಯ ಪ್ರಯುಕ್ತ ಪಟ್ಟಣದ ಶ್ರೀರಾಮ ಮಂದಿರದಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸೂರ್ಯಪಾದಜೀ ಸತ್ಸಂಗ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸ್ವಾಮೀಜಿಯವರು ದೇವರ ಸಂಕೀರ್ತನೆಯೊಂದಿಗೆ, ವೈಕುಂಠ ಏಕಾದಶಿಯ ಮಹತ್ವ, ನಾರಾಯಣ ನಾಮ ಸ್ಮರಣೆಯಿಂದ ಆಗುವ ಪ್ರಯೋಜನ, ಆಧ್ಯಾತ್ಮಿಕ ಮಾರ್ಗದಲ್ಲಿರುವ ಸುಖ ಶಾಂತಿಯ ಬಗ್ಗೆ ಮಾಹಿತಿ ನೀಡಿದರು. ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ನ ಗಾಯಕರಾದ ರಂಜನಿ ರಘು ಮತ್ತು ಅಪೆಕ್ಸ್ ಸದಸ್ಯರಾದ ರಮಾನಂದ, ಕೊಡಗು ಜಿಲ್ಲೆ ಆರ್ಟ್ ಆಫ್ ಲಿವಿಂಗ್ ಶಿಕ್ಷಕ ಸಂಯೋಜ ಕಾರ್ಯಪ್ಪ, ಮಡಿಕೇರಿಯ ಕೆ.ಡಬ್ಲೂ. ಬೋಪಯ್ಯ, ಕೃಷ್ಣ ಬೋಪಯ್ಯ, ಆರ್ಟ್ ಆಫ್ ಲಿವಿಂಗ್ ಶಿಕ್ಷಕಿ ರಾಗಿಣಿ ಇದ್ದರು.






