ಲೇಖಕ: admin

ಮಡಿಕೇರಿ ಜ.15 NEWS DESK : ಮಡಿಕೇರಿಯ ಶ್ರೀ ರಾಜೇಶ್ವರಿ ವಿದ್ಯಾಲಯ ವತಿಯಿಂದ ನಡೆದ ಎಸ್.ಆರ್.ವಿ ಫುಟ್ಬಾಲ್ ಕಪ್  ಹೊನಲು ಬೆಳಕಿನ ಫುಟ್ಬಾಲ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಟೀಮ್ ಭಗವತಿ ಚಾಂಪಿಯನ್ ಆಗಿ ಹೊರಹೊಮ್ಮಿದರೆ , ಕೂರ್ಗ್ ಚಾರ್ಮಾರ್ಸ್ ರನ್ನರ್ಸ್ ಸ್ಥಾನಕ್ಕೆ ತೃಪ್ತಿಪಟ್ಟು ಕೊಂಡಿತು. ತೃತೀಯ ಹಾಗೂ ನಾಲ್ಕನೇ ಸ್ಥಾನವನ್ನು ಫಿನಿಕ್ಸ್ ಎಫ್ ಸಿ ಮತ್ತು ಆರ್ ಆರ್ ಎಫ್ ಸಿ ತಂಡ ಪಡೆದು ಕೊಂಡಿತು.  ನಗರದ ಗಾಂಧಿ ಮೈದಾನದಲ್ಲಿ ನಡೆದ ಎಸ್.ಆರ್.ವಿ ಚಾಂಪಿಯನ್ ಲೀಗ್ ಹೊನಲು ಬೆಳಕಿನ ಪಂದ್ಯಾವಳಿಯಲ್ಲಿ ಒಟ್ಟು ಹನ್ನೆರಡು ತಂಡಗಳು ಚಾಂಪಿಯನ್ ಟ್ರೋಫಿಗಾಗಿ ಸೆಣಸಾಡಿದವು. ಇದಕ್ಕೂ ಮೊದಲು ನಡೆದ ಮೊದಲ ಕ್ವಾಲಿಫಯರ್ ಪಂದ್ಯದಲ್ಲಿ ಕೂರ್ಗ್ ಚಾರ್ಮಾರ್ಸ್ ತಂಡವು ಟೀಮ್ ಭಗವತಿ ವಿರುದ್ಧ ಪೆನಲ್ಟಿಯಲ್ಲಿ 3-1 ರ ಜಯ ಸಾದಿಸಿ ನೇರವಾಗಿ ಫೈನಲ್ ಗೆ ಅರ್ಹತೆ ಪಡೆದುಕೊಂಡಿತು. ಎಲಿಮಿನೇಟರ್ ಪಂದ್ಯವು ಫಿನಿಕ್ಸ್ ಎಫ್ ಸಿ ಹಾಗೂ ಆರ್ ಆರ್ ಎಫ್ ಸಿ ತಂಡದ ನಡುವೆ ನಡೆದ ಪಂದ್ಯದಲ್ಲಿ ಫಿನಿಕ್ಸ್…

Read More

ವಿರಾಜಪೇಟೆ ಜ.15 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್, ವಿರಾಜಪೇಟೆ ಸ್ವಸಹಾಯ ಸಂಘಗಳ ಒಕ್ಕೂಟಗಳ ಆಶ್ರಯದಲ್ಲಿ ಪರಿಸರ ಸಂರಕ್ಷಣೆ ಮಾಹಿತಿ ಕಾರ್ಯಕ್ರಮ ನಡೆಯಿತು. ಮೂರ್ನಾಡು ವಲಯದ ಪಾರಣೆ ಕಾರ್ಯಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಡಾ.ನಂದಿನಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಪರಿಸರ ನಾಶದಿಂದ ಪ್ರಾಣಿಗಳು ನಾಶವಾಗುತ್ತಿದೆ. ಮಣ್ಣಿನ ಸವಕಳಿ ಸಮಸ್ಯೆಯಾಗಿ ಮಳೆಯ ಸಂದರ್ಭದಲ್ಲಿ ಗುಡ್ಡ ಕುಸಿತ ಮುಂತಾದ ಪ್ರವಾಹಗಳಿಗೆ ಇದು ಎಡೆ ಮಾಡಿಕೊಡುತ್ತದೆ. ಆದ್ದರಿಂದ ಪ್ರತಿಯೊಬ್ಬರು ಕಾಡು ಬೆಳೆಸಿ, ನಾಡು ಉಳಿಸುವಂತಾಗಬೇಕು ಎಂದು ಕರೆ ನೀಡಿದರು. ಪಾರಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ವೇದ ಪ್ರಸಾದ್ ಪರಿಸರವನ್ನು ಹೇಗೆ ಉಳಿಸಬೇಕು, ಗಿಡಗಳನ್ನು ಬೆಳೆಸುವುದರಿಂದ ನಮ್ಮ ಪರಿಸರವನ್ನು ಹೇಗೆ ಸಮೃದ್ಧಿಗೊಳಿಸಬಹುದು ಎಂಬ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಶಿಕ್ಷಕರಾದ ಕಿಶೋರ್, ಪದಾಧಿಕಾರಿಗಳಾದ ವನಿತಾ, ಅನಿತಾ, ಕೃಷಿ ಮೇಲ್ವಿಚಾರಕರಾದ ವಸಂತ್, ಸೇವಾ ಪ್ರತಿನಿಧಿಗಳಾದ ಸಾವಿತ್ರಿ ಮತ್ತು ದಿವ್ಯ, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

Read More

ಮಡಿಕೇರಿ ಜ.15 NEWS DESK : ನಗರದ ಸಂತ ಮೈಕಲರ ದೇವಾಲಯದ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ವಾರ್ಷಿಕೋತ್ಸವದ ಅಂಗವಾಗಿ ಕಳೆದ 3 ದಿನಗಳಿಂದ ನವೇನ ಪ್ರಾರ್ಥನೆಗಳ ಮೂಲಕ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಮಂಗಳವಾರ ಸಂಜೆ ದಿವ್ಯ ಬಲಿಪೂಜೆ ನಡೆಯಿತು. ಪ್ರಧಾನಯಾಜಕರಾದ ಫಾ.ಮೈಕಲ್ ಮರಿ ಹಬ್ಬದ ಬಲಿಪೂಜೆ ನೆರವೇರಿಸಿದರು. ಕುಶಾಲನಗರ, ಅಬ್ಬೂರುಕಟ್ಟೆ, ಸೋಮವಾರಪೇಟೆ, ಮಾದಾಪುರ, ಹಟ್ಟಿಹೊಳೆ, ತಾಳತ್‌ಮನೆ ಸೇರಿದಂತೆ ವಿವಿಧ ದೇವಾಲಯಗಳ ಧರ್ಮಗುರುಗಳು ಪಾಲ್ಗೊಂಡಿದ್ದರು. ನೂರಾರು ಭಕ್ತರು ಪಾಲ್ಗೊಂಡು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ರಾತ್ರಿ ವಿದ್ಯುತ್ ಅಲಂಕೃತ ಮಂಟಪದಲ್ಲಿ ಸಂತ ಮೈಕಲರ ಪ್ರತಿಮೆಯ ಮೆರವಣಿಗೆ ನಡೆಯಿತು. ಭಕ್ತರು ಉರಿಯುತ್ತಿದ್ದ ಮೇಣದ ಬತ್ತಿ ಹಿಡಿದು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಇದೇ ಸಂದರ್ಭ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ದೇವಾಲಯದಿಂದ ಹೊರಟ ಮೆರವಣಿಗೆ ಮಂಗೇರೀರ ಮುತ್ತಣ್ಣ ವೃತ್ತ, ಸ್ಕ್ವಾಡರ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತದ ಮೂಲಕ ಚೌಕಿವರೆಗೆ ಸಾಗಿ ಮತ್ತೆ ಅದೇ ರಸ್ತೆ ಮೂಲಕ ದೇವಾಲಯಕ್ಕೆ ಹಿಂತಿರುಗಿತು. ಬಳಿಕ ದೇವಾಲಯದಲ್ಲಿ ಆರಾಧನೆ ನಡೆಯಿತು. ನಂತರ ಭಕ್ತಾಧಿಗಳಿಗೆ ಅನ್ನದಾನ ನಡೆಯಿತು.…

Read More

ಮಡಿಕೇರಿ ಜ.15 NEWS DESK : ಮಡಿಕೇರಿ 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ, ಎಫ್3 ಗದ್ದಿಗೆ ಫೀಡರ್‍ನಲ್ಲಿ ವಿದ್ಯುತ್ ವಾಹಕ ಬದಲಾವಣೆ ಕಾಮಗಾರಿಯನ್ನು ಜ.16 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ನಿರ್ವಹಿಸಲಾಗುವುದು. ಆದ್ದರಿಂದ ರಾಣಿಪೇಟೆ, ಕಾನ್ವೆಂಟ್ ಜಂಕ್ಷನ್, ಐಟಿಐ ಕಾಲೇಜು ಹಿಂಬಾಗ, ಕಾವೇರಿ ಲೇಔಟ್, ಟಿ.ಜಾನ್ ಲೇಔಟ್ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.

Read More

ನವದೆಹಲಿ NEWS DESK ಜ.15 : ಮೈಸೂರಿನ ಬನ್ನಿಮಂಟಪ ಸಮೀಪದ ಎಲ್ಐಸಿ ಸರ್ಕಲ್  ಬಳಿ  “ಅರ್ಜುನ” ಸ್ಮಾರಕ ನಿರ್ಮಾಣಕ್ಕೆ ಮನವಿ* *ಮೈಸೂರು ಹಳೆಯ ಜಿಲ್ಲಾಧಿಕಾರಿ ಕಚೇರಿಯನ್ನು ಯೋಗ ಮ್ಯೂಸಿಯಂ ಮಾಡಲು ಒತ್ತಾಯ* *ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್‌ ಅವರಿಗೆ ಸಂಸದ ಯದುವೀರ್ ಪತ್ರ* ಮೈಸೂರಿನ ಪಾರಂಪರಿಕತೆಗೆ, ಐತಿಹಾಸಿಕತೆಗೆ, ಪ್ರವಾಸೋದ್ಯಮಕ್ಕೆ ಒತ್ತು ನೀಡಲು ಆಗ್ರಹ* ಪಾರಂಪರಿಕ ಹಾಗೂ ಐತಿಹಾಸಿಕ ಹಾಗೂ ಸಾಂಸ್ಕೃತಿಕ ರಾಜಧಾನಿ ಎಂದೇ ವಿಶ್ವಮಟ್ಟದಲ್ಲಿ ಖ್ಯಾತಿ ಹೊಂದಿರುವ ಮೈಸೂರಿನಲ್ಲಿ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಯೋಜನೆಗಳಿಗೆ ನೆರವು ಒದಗಿಸಬೇಕೆಂದು ಕೇಂದ್ರ ಪ್ರವಾಸೋದ್ಯಮ ಖಾತೆ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ *ಮೈಸೂರು-ಕೊಡಗು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್* ಮನವಿ ಮಾಡಿದ್ದಾರೆ. ಈ ಸಂಬಂಧ ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ಯದುವೀರ್ ಅವರು ಮನವಿ ಸಲ್ಲಿಸಿ, ಮೈಸೂರಿನ ಪಾರಂಪರಿಕತೆಗೆ ತಕ್ಕಂತೆ ಎಲ್ಐಸಿ ಸರ್ಕಲ್ ಬಳಿ “ಅರ್ಜುನ ಸ್ಮಾರಕ” ಮತ್ತು ಮೈಸೂರಿನ ಹಳೆಯ ಜಿಲ್ಲಾಧಿಕಾರಿ ಕಚೇರಿಯನ್ನು ಯೋಗ ಮ್ಯೂಸಿಯಂ ಆಗಿ ಪರಿವರ್ತಿಸಲು ಕ್ರಮ ಕೈಗೊಳ್ಳಬೇಕೆಂದು…

Read More

ಮಡಿಕೇರಿ ಜ.15 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಹಿರಿಯ ನಾಗರಿಕರಿಗೆ ನೇತ್ರ ತಪಾಸಣಾ ಉಚಿತ ಶಿಬಿರ ನಡೆಯಲಿದೆ.  ಜ.20 ರಂದು ಸೋಮವಾರಪೇಟೆ ತಾಲ್ಲೂಕಿನವರಿಗೆ ಸೋಮವಾರಪೇಟೆ ತಾಲ್ಲೂಕು ಆರೋಗ್ಯ ಕೇಂದ್ರದಲ್ಲಿ, ಜ.21 ರಂದು ಕುಶಾಲನಗರ ತಾಲ್ಲೂಕಿನವರಿಗೆ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ, ಜನವರಿ, 22 ರಂದು ಪೊನ್ನಂಪೇಟೆ ತಾಲ್ಲೂಕಿನವರಿಗೆ ಪೊನ್ನಂಪೇಟೆ ಉಪ ಆರೋಗ್ಯ ಕೇಂದ್ರದಲ್ಲಿ, ಜನವರಿ, 23 ರಂದು ವಿರಾಜಪೇಟೆ ತಾಲ್ಲೂಕಿನವರಿಗೆ ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಯಲ್ಲಿ ಹಾಗೂ ಜನವರಿ, 24 ರಂದು ಮಡಿಕೇರಿ ತಾಲ್ಲೂಕಿನವರಿಗೆ ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ನೇತ್ರ ತಪಾಸಣಾ ಶಿಬಿರ ನಡೆಯಲಿದೆ. ಶಿಬಿರದ ಪ್ರಯೋಜನವನ್ನು ಜಿಲ್ಲೆಯ ಹಿರಿಯ ನಾಗರಿಕರು ಪಡೆದುಕೊಳ್ಳುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ. ಹಿರಿಯ ನಾಗರಿಕರು ತಪಾಸಣಾ ಶಿಬಿರಕ್ಕೆ ಹಾಜರಾಗಲು ಬೇಕಾದ…

Read More

ಮಡಿಕೇರಿ ಜ.15 NEWS DESK : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಎಸ್‍ಬಿಐ ಮತ್ತು ಇತರ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲು ನಿರ್ಧರಿಸಿದೆ. ಆಸಕ್ತರು ಜ.18 ರೊಳಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು 0821-2515944/ 9964760090 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಪ್ರಾದೇಶಿಕ ಕೇಂದ್ರ ಮಡಿಕೇರಿ ಪ್ರಾದೇಶಿಕ ನಿರ್ದೇಶಕಿಯಾದ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ.

Read More

ಮಡಿಕೇರಿ ಜ.15 NEWS DESK : ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡ ಹಿನ್ನಲೆಯಲ್ಲಿ ರಾಜ್ಯ ಸರಕಾರ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಸುವರ್ಣ ಸಂಭ್ರಮ-50 ಆಚರಣೆ ಪ್ರಯುಕ್ತ ಕೊಡಗು ಜಿಲ್ಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ಮೂರ್ನಾಡು ಸರ್ಕಾರಿ ಪ್ರೌಢಶಾಲೆಯ ತಶ್ಮಿಕಾ ಕೆ.ಎಂ (ಪ್ರಥಮ), ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢಶಾಲೆಯ ಅಮೃತ ಟಿ.ಜೆ (ದ್ವಿತೀಯ) ಮತ್ತು ಕುಶಾಲನಗರ ಸರ್ಕಾರಿ ಪ್ರೌಢಶಾಲೆಯ ಪ್ರಗತಿ ಬಡಿಗೇರ್ (ತೃತೀಯ ಸ್ಥಾನ) ಪಡೆದಿದ್ದಾರೆ. ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಡೆಸಿದ ಭಾಷಣ ಸ್ಪರ್ಧೆಯಲ್ಲಿ ಗೋಣಿಕೊಪ್ಪ ಲಯನ್ಸ್ ಪಿ.ಯು ಕಾಲೇಜಿನ ಆದ್ವಿಕ (ಪ್ರ), ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ಪ್ರಜ್ವಲ್ ಬಿ.ಹೆಚ್ (ದ್ವಿ), ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ಸ್ಪಂದನ ಆರ್.ಎಸ್ (ತೃ) ಸ್ಥಾನ…

Read More

ಮಡಿಕೇರಿ ಜ.15 NEWS DESK : ಮೈಸೂರು ಜಿಲ್ಲಾ ಕಿವುಡರ ಸಂಘದ 10ನೇ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು. ಮೈಸೂರಿನ ರಾಹುಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಕಿವುಡರ ಕ್ಷೇಮಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಉಮಾ ಶಂಕರ, ಮೈಸೂರು ಜಿಲ್ಲಾ ಕಿವುಡರ ಸಂಘದ ಅಧ್ಯಕ್ಷ ಮೂರ್ತಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕಿವುಡರ ಸಂಘದ ಅಧ್ಯಕ್ಷೆ ಗೌರು ಎಂ.ಸೋಮಣ್ಣ, ಉಪಾಧ್ಯಕ್ಷ ಶಂಕರ ನಾರಾಯಣ, ಕಾರ್ಯದರ್ಶಿ ರಂಜಿತ್, ಸಹಕಾರ್ಯದರ್ಶಿ ನಾಗೇಶ್, ಖಜಾಂಚಿ ಸುರೇಶ್ ಸೇರಿದಂತೆ ವಿವಿಧ ಜಿಲ್ಲೆಯ 25 ಕಿವುಡರ ಸಂಸ್ಥೆಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಸಭಾ ಕಾರ್ಯಕ್ರಮದ ನಂತರ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಪಾಲ್ಗೊಂಡಿದ್ದ ವಿವಿಧ ಸಂಸ್ಥೆಗೆ ನೆನಪಿನ ಕಾಣಿಕೆ ನೀಡಲಾಯಿತು.

Read More

ಮಡಿಕೇರಿ ಜ.15 NEWS  DESK : ಮಡಿಕೇರಿ ನಗರದ ಶಕ್ತಿ ಪೀಠಗಳಲ್ಲಿ ಒಂದಾದ ಮಂಗಳಾದೇವಿ ನಗರದ ಶ್ರೀ ರಾಜರಾಜೇಶ್ವರಿ ಕ್ಷೇತ್ರದ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಜ.14ರ ಸಂಜೆಯಿಂದಲೇ ಪ್ರಾರ್ಥನೆ, ಪುಣ್ಯ, ಸಪ್ತಶುಧ್ಧಿ, ಪ್ರಸಾದ ಶುಧ್ಧಿ, ರಾಕ್ಷೋಘ್ನ ಹೋಮ, ವಾಸ್ತು ಪೂಜೆ, ವಾಸ್ತು ಹೋಮ, ದಿಶಾ ಬಲಿ ಸೇರಿದಂತೆ ವಿವಿಧ ಧಾರ್ಮಿಕ ಪೂಜಾವಿಧಿವಿಧಾನಗಳು ನೆರವೇರಿತು. ನಂತರ ಪ್ರಸಾದ ಹಾಗೂ ಅನ್ನಸಂತರ್ಪಣೆ ನಡೆಯಿತು. ಇಂದು ಮುಂಜಾನೆ ಪುಣ್ಯಾಹ, ಗಣಪತಿ ಹೋಮ, ಚಂಡಿಕಾ ಹೋಮ, ನವಕಲಶ ಪೂಜೆ, ಪ್ರಧಾನ ಹೋಮ, ನಾಗದೇವರಿಗೆ ತಂಬಿಲ, ಆಶ್ಲೇಷ ಬಳಿ, ಕಲಶಾಭಿಶೇಕ ಜರುಗಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಿತು. ನಗರದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಸಂಜೆ 5.30ಕ್ಕೆ ಸಾಯಂಪೂಜೆ, 6.30ಕ್ಕೆ ರಂಜಪೂಜೆ, 7 ಗಂಟೆಗೆ ದೇವಾಲಯದ ಆವರಣದಲ್ಲಿ ಬಲಿ ಉತ್ಸವ, ರಾಜಾಂಗಣ ಪ್ರಸಾದ, ಪೀಠ ಪೂಜೆ, ಶುದ್ಧಿ ಕಲಶಾಭಿಶೇಕ, ಮಂತ್ರಾಕ್ಷತೆ ನಂತರ ಅನ್ನಸಂತರ್ಪಣೆ ನೆರವೇರಲಿದ್ದು,…

Read More