ಬೆಂಗಳೂರು ಜ.15 NEWS DESK : ನಗರದ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ ಘಟನೆಗೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಜಾನುವಾರುಗಳ ಮಾಲೀಕರಿಗೆ ಮೂರು ಹಸುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದರೊಂದಿಗೆ ಕುಟುಂಬಕ್ಕೆ ಮೂರು ಲಕ್ಷ ರೂ.ಗಳ ಪರಿಹಾರವನ್ನು ನೀಡಿದ್ದಾರೆ. ಈ ವೇಳೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಾಸೀರ್ ಅಹ್ಮದ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಮುಖಂಡರಾದ ಅತುಷ್, ಗೌಸಿ, ವಿನಾಯಕ್, ಪ್ರಸಾದ್ ಇದ್ದರು. ಗಾಯಗೊಂಡ ಹಸುಗಳನ್ನು ಚಿಕಿತ್ಸೆಗಾಗಿ ಚಾಮರಾಜಪೇಟೆಯ ಪಶು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಲೇಖಕ: admin
ಮಡಿಕೇರಿ ಜ.15 NEWS DESK : ವಿರಾಜಪೇಟೆ ತಾಲ್ಲೂಕು ಅರ್ಜಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತೆರ್ಮೆಕಾಡು ಕಾಲೋನಿಯ ರಸ್ತೆ ಅಭಿವೃದ್ಧಿ ಕಾಮಗಾರಿಯು SCPTSP ಅನುದಾನದಲ್ಲಿ ಕಾರ್ಯಗತಗೊಂಡಿದೆ. ಈ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ರೂ.5.5 ಲಕ್ಷ ಅನುದಾನವನ್ನು ಒದಗಿಸಿದ್ದು, ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.
ಬೆಂಗಳೂರು, ಜ.15 NEWS DESK : ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ವಿಶಿಷ್ಟವಾಗಿ ಹೊರತಂದಿರುವ 2025ರ ಕ್ಯಾಲೆಂಡರ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಕ್ರಾಂತಿ ಹಬ್ಬದ ದಿನದಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು. ಮುಖ್ಯಮಂತ್ರಿ ಗೃಹ ಕಚೇರಿ ಕಾವೇರಿಯಲ್ಲಿ ಕ್ಯಾಲೆಂಡರ್ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಘಕ್ಕೆ 75 ವರ್ಷ ಪೂರೈಸಿದ್ದೀರಿ ಎಂಬುದೇ ಹೆಗ್ಗಳಿಕೆ. ಪತ್ರಕರ್ತರ ಸಹಕಾರ ಸಂಘಕ್ಕೆ ಒಳ್ಳೆಯದಾಗಲಿ, ಎಲ್ಲ ನಿರ್ದೇಶಕರಿಗೆ ಸಕ್ರಾಂತಿ ಶುಭಾಶಯಗಳು ಎಂದು ಹಾರೈಸಿದರು. ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ 75ನೇ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ನಾನು ತುಂಬಾ ಸಂತೋಷದಿಂದ ಬರುತ್ತೇನೆ. ಆದರೆ ನನಗೆ ತುಸು ಸಮಯ ಕೊಡಿ ಎಂದು ಹೇಳಿದರು. ಬಜೆಟ್ ಹಿನ್ನಲೆಯಲ್ಲಿ ಸ್ವಲ್ಪ ಬ್ಯೂಸಿಯಾಗಿದ್ದೇನೆ ಎಂದರು. ಇದೇ ವೇಳೆ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್, ಶಾಸಕ ರಘುಮೂರ್ತಿ ಅವರೂ ಪತ್ರಕರ್ತರ ಸಹಕಾರ ಸಂಘಕ್ಕೆ ಶುಭ ಹಾರೈಸಿದರು. ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷ ಎಂ.ರಮೇಶ್ ಪಾಳ್ಯ, ಉಪಾಧ್ಯಕ್ಷ…
ಮಡಿಕೇರಿ ಜ.15 NEWS DESK : ಲೇಖಕ ವಿನೋದ್ ಯೋಧನ ಬಗ್ಗೆ ಬರೆದ ಪುಣ್ಯಭೂಮಿ ಕಾದಂಬರಿ ಪುಸ್ತಕ ಬಿಡುಗಡೆಗೊಂಡಿತು. ಪೊನ್ನಂಪೇಟೆ ಕೊಡವ ಸಮಾಜದ ಸಭಾಂಗಣದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ ಪುಸ್ತಕ ಅನಾವರಣ ಮಾಡಿದರು. ಕಾಳಿಮಾಡ ಮೋಟಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ.ಅನಂತಶಯನ, ಕನ್ನಡ ಸಾಹಿತ್ಯ ಪರಿಷತ್ನ ಜಿಲ್ಲಾಧ್ಯಕ್ಷ ಕೇಶವ ಕಾಮತ್ ಸೇರಿದಂತೆ ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು.
ಮಡಿಕೇರಿ ಜ.15 NEWS DESK : ಕೊಡವರ ಹಕ್ಕುಗಳಿಗಾಗಿ ನಿರಂತರ ಹೋರಾಟ ನಡೆಸುತ್ತಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ನಂದಿನೆರವಂಡ ಯು.ನಾಚಪ್ಪ ಅವರ ವಿರುದ್ಧ ಹೂಡಲಾಗಿರುವ ಮೊಕದ್ದಮೆ ಹಿಂಪಡೆಯಬೇಕು ಎಂದು ನಾಪೋಕ್ಲು ಕೊಡವ ಸಮಾಜ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಕೊಡವ ಸಮಾಜದ ಅಧ್ಯಕ್ಷ ಎಂ.ಸಿ.ನಾಣಯ್ಯ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರುಗಳು ಎನ್.ಯು.ನಾಚಪ್ಪ ಅವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದ್ದು, ಇದು ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಕೊಡಗಿನ ಅಸ್ತಿತ್ವಕ್ಕಾಗಿ ಮತ್ತು ಮೂಲ ನಿವಾಸಿ ಕೊಡವರ ಹಕ್ಕುಗಳಿಗಾಗಿ ಒತ್ತಾಯಿಸುತ್ತಾ ಬಂದಿರುವ ಎನ್.ಯು.ನಾಚಪ್ಪ ಅವರು ನಿರಂತರ ಶಾಂತಿಯುತ ಹೋರಾಟ ನಡೆಸುತ್ತಾ ಬಂದಿದ್ದಾರೆ. ಕೊಡವರ ಹಕ್ಕುಗಳ ಹಕ್ಕುಗಳ ರಕ್ಷಣೆಗಾಗಿ ಇರುವ ಸಂವಿಧಾನಾತ್ಮಕ ವಿಚಾರಧಾರೆಗಳನ್ನು ಪ್ರತಿಪಾದಿಸುತ್ತಾ ಬಂದಿದ್ದಾರೆ. ಆದರೆ ಇದೀಗ ಕೆಲವರು ವಿನಾಕಾರಣ ಇವರ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ್ದು, ಇದನ್ನು ನಾಪೋಕ್ಲು ಕೊಡವ ಸಮಾಜ ತೀವ್ರವಾಗಿ ಖಂಡಿಸುತ್ತದೆ ಮತ್ತು ಪ್ರಕರಣವನ್ನು ತಕ್ಷಣ ರದ್ದುಗೊಳಿಸಬೇಕೆಂದು ಒತ್ತಾಯಿಸುವುದಾಗಿ ತಿಳಿಸಿದ್ದಾರೆ. ಕೊಡಗಿನ ಮೂಲನಿವಾಸಿಗಳಾದ ಕೊಡವರಿಗೆ…
ಬೆಂಗಳೂರು ಜ.15 NEWS DESK : ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ (76) ನಿಧನ ಹೊಂದಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಿ ಅವರ ಅವರನ್ನು ಯಶಂಪುರದ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು (ಜ.15) ಬೆಳಿಗ್ಗೆ ನಿಧನರಾಗಿದ್ದಾರೆ. ನಾಟಕಗಳಲ್ಲಿ ನಟಿಸುತ್ತಿದ್ದ ವಿಜಿ ಅವರ ‘ಸಂಸಾರದಲ್ಲಿ ಸರಿಗಮ’ ನಾಟಕ ಬಹಳ ಹೆಸರು ಕೊಟ್ಟಿತ್ತು. ಇದೇ ಕಾರಣಕ್ಕೆ ಅವರಿಗೆ ಸರಿಗಮ ವಿಜಿ ಹೆಸರು ಬಂದಿತ್ತು. ನಾಟಕದಿಂದ ಸಿನಿಮಾಕ್ಕೆ ಪದಾರ್ಪಣೆ ಮಾಡಿದ ವಿಜಿ ಅವರು ಹಲವಾರು ಸಿನಿಮಾಗಳಲ್ಲಿ ಪೋಷಕ ಪಾತ್ರ, ಹಾಸ್ಯ ಪಾತ್ರ ಕೆಲವೆಡೆ ವಿಲನ್ ಪಾತ್ರಗಳಲ್ಲಿಯೂ ನಟಿಸಿದ್ದಾರೆ. ಮೃತರು ಪತ್ನಿ ಇಬ್ಬರು ಮಕ್ಕಳ ಸಹಿತ ಅಪಾರ ಅಭಿಮಾನಿ, ಬಂಧುಗಳನ್ನು ಅಗಲಿದ್ದಾರೆ. ಚಾಮರಾಜಪೇಟೆಯ ಟಿ ಆರ್ ಮಿಲ್ ಬಳಿ ಬರುವ ಚಿತಾಗಾರದಲ್ಲಿ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಮಡಿಕೇರಿ ಜ.15 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನೀಡಲಾಗುವ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿಗೆ ಕೂಡಕಂಡಿ ಓಂಶ್ರೀ ದಯಾನಂದ ಭಜನರಾಗಿದ್ದಾರೆ. ಜಿಲ್ಲೆಯ ಹಿರಿಯ ಮೂರು ಸಾಹಿತಿಗಳನ್ನು ತೀರ್ಪುಗಾರರನ್ನಾಗಿಸಿ ಅವರು ಎಲ್ಲ ಪುಸ್ತಕಗಳನ್ನು ಪರಮಾರ್ಶಿಸಿ ಕೂಡಕಂಡಿ ಓಂಶ್ರೀ ದಯಾನಂದ ಬರೆದ “ಪುಟಾಣಿ ರೈಲು – ಅಂದದ ಕಥೆಗಳ ಲೋಕದಲ್ಲೊಂದು ಸುಂದರ ಪಯಣ” ಕಥಾ ಸಂಕಲನಕ್ಕೆ ಈ ಪ್ರಶಸ್ತಿ ಲಭ್ಯವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿಪ್ರಶಸ್ತಿಗಳಲ್ಲಿ ಅತ್ಯಂತ ಪ್ರತಿಷ್ಟಿತವಾದ ದತ್ತಿ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ. ಈ ದತ್ತಿಯನ್ನು ಗೌರಮ್ಮ ಅವರ ಪುತ್ರ ಬಿ.ಜಿ.ವಸಂತ ಕೊಡಗಿನ ಮಹಿಳಾ ಲೇಖಕಿಯರು ಪ್ರಕಟ ಪಡಿಸಿದ ಉತ್ತಮ ಕೃತಿಗೆ ಪ್ರಶಸ್ತಿ ನೀಡಿ ಗೌರವಿಸುವ ಸಲುವಾಗಿ ಸ್ಥಾಪಿಸಲಾಗಿದೆ. ಇಲ್ಲಿಯವರೆಗೆ 20 ಲೇಖಕಿಯರಿಗೆ ಈ ಪ್ರಶಸ್ತಿ ನೀಡಲಾಗಿದೆ. 2024-25ನೇ ಸಾಲಿನ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದ್ದು 15…
ನಾಪೋಕ್ಲು ಜ.15 NEWS DESK : ಮಡಿಕೇರಿ ಶೌರ್ಯ ವಿಪತ್ತು ನಿರ್ವಹಣ ಘಟಕದ ವತಿಯಿಂದ ನಗರದ ಕನಕದಾಸ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ಶಾಲಾ ಆವರಣದಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ಕಡಿದ ಘಟಕದ ಪ್ರಮುಖರು ಹಾಗೂ ಪದಾಧಿಕಾರಿಗಳು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಛಗೊಳಿಸಿದರು. ಈ ಸಂದರ್ಭ ಶೌರ್ಯ ವಿಪತ್ತು ನಿರ್ವಹಣ ಘಟಕದ ಮೇಲ್ವಿಚಾರಕ ವಿನೋದ, ಜ್ಞಾನವಿಕಾಸದ ಮಾಲಿನಿ, ಸಂಯೋಜಕರಾದ ರೋಹಿಣಿ, ಲೀಲಾಶೇಷಮ್ಮ, ಮುನಿರ್ ಮಾಚರ್, ರವಿಕುಮಾರ್, ಹರಿಣಾಕ್ಷಿ, ಪ್ರೇಮಾ, ಯಶೋಧ, ಲತಾ ಹಾಜರಿದ್ದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಜ.15 NEWS DESK : ಬಲ್ಲಮಾವಟಿ ಗ್ರಾಮ ಪಂಚಾಯಿತಿಯ ಭಾರತ ನಿರ್ಮಾಣ ಸೇವಾ ಕೇಂದ್ರ, ಸಂಜೀವಿನಿ ಶೆಡ್ ಹಾಗೂ ಡಿಜಿಟಲ್ ಗ್ರಂಥಾಲಯ ಅರಿವು ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಜ.16 ರಂದು ನಡೆಯಲಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಂ.ಪಿ.ಶಾಂತಿ ಪೂವಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕಟ್ಟಡಗಳ ಉದ್ಘಾಟನೆಯನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಮತ್ತು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪಾಲ್ಗೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕೊಡಗು ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟರಾಜಾ, ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಎಸ್.ಪಿ ರಾಮರಾಜನ್ ಕೆ., ಕೊಡಗು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಧನರಾಜ್ ಜಿ, ಮಡಿಕೇರಿ…
ನಾಪೋಕ್ಲು ಜ.15 NEWS DESK : ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ಸನ್ನಿಧಿಯಲ್ಲಿ ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ಶ್ರದ್ಧಾಭಕ್ತಿಯಿಂದ ಜರುಗಿತು. ಮಕರ ಸಂಕ್ರಾಂತಿ ಅಂಗವಾಗಿ ಶ್ರೀ ಶಾಸ್ತಾವು ದೇವರಿಗೆ ಅಭಿಷೇಕ, ಹೂವಿನ ಅಲಂಕಾರ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆಯಿತು. ಮಧ್ಯಾಹ್ನ ಶ್ರೀ ಶಾಸ್ತಾವು ದೇವರಿಗೆ ವಿಶೇಷ ಮಹಾಪೂಜೆ, ಮಹಾ ಮಂಗಳಾರತಿ ಜರುಗಿತು. ನಂತರ ಭಕ್ತಾಧಿಗಳಿಗೆ ತಿರ್ಥ ಪ್ರಸಾದ ವಿತರಿಸಲಾಯಿತು. ಈ ಸಂದರ್ಭ ದೇವಾಲಯದ ತಕ್ಕ ಮುಖ್ಯಸ್ಥರು, ಆಡಳಿತ ಮಂಡಳಿಯ ಪ್ರಮುಖರು ಸೇರಿದಂತೆ ಭಕ್ತಾದಿಗಳು ಹಾಜರಿದ್ದರು. ದೇವಾಲಯದ ಮುಖ್ಯ ಅರ್ಚಕ ದಿವಾಕರ ಭಟ್ ಪೂಜಾ ಕೈಂಕರ್ಯಗಳನ್ನು ನೆರವೇರಿದರು. ವರದಿ : ದುಗ್ಗಳ ಸದಾನಂದ






