ಸೋಮವಾರಪೇಟೆ ಜ.28 NEWS DESK : ಗೌಡಳ್ಳಿ ಗ್ರಾ.ಪಂ ವ್ಯಾಪ್ತಿಯ ಚನ್ನಾಪುರ ಗ್ರಾಮದಲ್ಲಿ ಹುಲಿ ಹೆಜ್ಜೆ ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ, ಕೃಷಿಕರಲ್ಲಿ ಆತಂಕ ಮೂಡಿದೆ. ಚನ್ನಾಪುರ ಗ್ರಾಮದ ಕೆರೆಯ ತಟದ ರಸ್ತೆಯಲ್ಲಿ ಹುಲಿ ಸಂಚರಿಸಿದ ಬಗ್ಗೆ ಅರಣ್ಯ ಇಲಾಖೆಗೆ ಪ್ರತ್ಯಕ್ಷದರ್ಶಿಗಳು ದೂರು ನೀಡಿದ್ದರು. ಬೆಳಿಗ್ಗೆ ಶನಿವಾರಸಂತೆ ಅರಣ್ಯ ಇಲಾಖೆಯ ಡಿಆರ್ಎಫ್ ಸೂರ್ಯ ಮತ್ತು ಸಿಬ್ಬಂದಿಗಳು ಗ್ರಾಮಸ್ಥರ ಸಹಕಾರದಿಂದ ಹುಲಿಯ ಹೆಜ್ಜೆ ಗುರುತನ್ನು ಪತ್ತೆ ಹಚ್ಚಿದ್ದಾರೆ. ನಂತರ ಗ್ರಾಮದ ರಸ್ತೆಯ ಬದಿಯಲ್ಲಿ ಸಿ.ಸಿ.ಕ್ಯಾಮೆರಾಗಳನ್ನು ಅಳವಡಿಸಿ, ಹುಲಿಯ ಚಲನವಲನ ಪತ್ತೆಗೆ ಕ್ರಮಕೈಗೊಂಡಿದ್ದಾರೆ. ಗೌಡಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಧ್ವನಿವರ್ಧಕದ ಮೂಲಕ ನಿವಾಸಿಗಳು ದನಕರುಗಳೊಂದಿಗೆ ಹೊರಹೋಗದಂತೆ ಎಚ್ಚರಿಕೆ ಸಂದೇಶ ನೀಡಲಾಗಿದೆ.
ಲೇಖಕ: admin
ಮಡಿಕೇರಿ ಜ.28 NEWS DESK : ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಡಿಕೇರಿ ಮಕ್ಕಳ ವಿಶೇಷ ಪೊಲೀಸ್ ಘಟಕ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಪೊನ್ನಂಪೇಟೆ ತಾಲೂಕಿನ ಬೊಮ್ಮಾಡು ಹಾಡಿ ನಿವಾಸಿಗಳಿಗೆ ಬಾಲ್ಯ ವಿವಾಹ, ಪೋಕ್ಸೋ ಹಾಗೂ ಮಕ್ಕಳ ಹಕ್ಕುಗಳಿಗೆ ಸಂಬಂಧಿಸಿದ ಕಾಯ್ದೆಗಳ ಕುರಿತು ಅರಿವು ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕದ ಸುಮತಿ, ಸತ್ಯ ಹಾಗೂ ನಾಲ್ಕೇರಿ ಗ್ರಾ.ಪಂ ಅಧ್ಯಕ್ಷ ಸೋಮಯ್ಯ, ಹಾಡಿ ಮುಖಂಡರಾದ ತಿಮ್ಮ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು, ವಾಲ್ಮೀಕಿ ಆಶ್ರಮ ಶಾಲೆಯ ಮುಖ್ಯೋಪಾಧ್ಯಾಯರು, ಶಾಲೆಯ ಮಕ್ಕಳು ಮತ್ತು ಹಾಡಿಯ ನಿವಾಸಿಗಳು ಹಾಜರಿದ್ದರು.
ಮಡಿಕೇರಿ ಜ.28 NEWS DESK : ಫಲಪುಷ್ಪ ಪ್ರದರ್ಶನ ಪ್ರಯುಕ್ತ ನಗರದ ಗಾಂಧಿ ಮೈದಾನದಲ್ಲಿ ಏರ್ಪಡಿಸಲಾಗಿದ್ದ ತೋಟಗಾರಿಕೆ ವಿವಿಧ ಬೆಳೆ ವಸ್ತು ಪ್ರದರ್ಶನದಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಯೋಗೇಶ್ ಬಹುಮಾನ ವಿತರಿಸಿ, ಗೌರವಿಸಿದರು.
ಮಡಿಕೇರಿ NEWS DESK ಜ.27 : ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ಅರ್ಚಕರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಕಾಂಗ್ರೆಸ್ ಕಾರ್ಯಕರ್ತನನ್ನು ಅಮಾನತುಗೊಳಿಸಿದೆ.
ಮಡಿಕೇರಿ NEWS DESK ಜ.27 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಅವರ ಮೇಲೆ ಸೋಮವಾರ ಸಂಜೆ ಹಲ್ಲೆ ನಡೆದಿದೆ. ಮೂರ್ನಾಡಿನಲ್ಲಿರುವ ಅರ್ಚಕರ ಮನೆಗೆ ಸಂಜೆಯ ವೇಳೆ ಬಂದ ಇಬ್ಬರು ವ್ಯಕ್ತಿಗಳು ವಿಘ್ನೇಶ್ ಭಟ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಅರ್ಚಕರನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅರ್ಚಕ ವಿಘ್ನೇಶ್ ಭಟ್ ಇಬ್ಬರು ವ್ಯಕ್ತಿಗಳು ನನ್ನ ಮನೆಯ ಬಳಿ ಬಂದು ಹಲ್ಲೆ ಮಾಡಿದ್ದಾರೆ. ತಡೆಯಲು ಬಂದ ನನ್ನ ತಾಯಿಗೂ ನೋವಾಗಿದೆ ಎಂದು ಆರೋಪಿಸಿದರು. ಕಟ್ಟೆಮಾಡು ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನ ಸಮಿತಿಯ ಪದಾಧಿಕಾರಿಗಳು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿರುವ ವಿಘ್ನೇಶ್ ಭಟ್ ರನ್ನು ಭೇಟಿ ಮಾಡಿ, ಸಾಂತ್ವನ ಹೇಳಿದರು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ NEWS DESK ಜ.27 : ದೇವಟ್ ಪರಂಬುವಿನಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಅಂತರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ದಿನವನ್ನು ಆಚರಿಸಲಾಯಿತು. ಕೊಡವರ ಹತ್ಯಾಕಾಂಡದ ಸ್ಮಾರಕ ಸ್ಥಳದಲ್ಲಿ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಹಿರಿಯರಿಗೆ ಪುಷ್ಪ ನಮನ ಸಲ್ಲಿಸಿದ ಸ್ವಯಂ ಸೇವಕರು, ಕೊಡವರ ಹಕ್ಕುಗಳ ಸಂರಕ್ಷಣೆಗಾಗಿ ನಡೆಸುತ್ತಿರುವ ಹೋರಾಟದ ಗುರಿ ಸಾಧನೆಗೆ ಶಕ್ತಿ ನೀಡುವಂತೆ ಕೋರಿದರು. ಆದಿಮಸಂಜಾತ ಕೊಡವರಿಗೆ ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ನೀಡಬೇಕು, ಸಾಂವಿಧಾನಿಕ ಶೆಡ್ಯೂಲ್ ಪಟ್ಟಿಯಲ್ಲಿ ಸ್ಥಾನಮಾನ ಕಲ್ಪಿಸಬೇಕು, ಪ್ರತ್ಯೇಕ ಜನಾಂಗವಾಗಿ ಕೊಡವರ ಹಕ್ಕುಗಳನ್ನು ರಕ್ಷಿಸಬೇಕು, ಅಂತರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಆದಿಮಸಂಜಾತ ಕೊಡವ ಬುಡಕಟ್ಟಿಗೆ ವಿಶ್ವರಾಷ್ಟ್ರ ಸಂಸ್ಥೆಯ ಮಾನ್ಯತೆ ದೊರಕಬೇಕು. ಕೊಡವ ಲ್ಯಾಂಡ್ನ ಆದಿವಾಸಿ ಮೂಲನಿವಾಸಿ ಕೊಡವ ಜನಾಂಗವನ್ನು ಸಂವಿಧಾನದ ಶೆಡ್ಯೂಲ್ ಪಟ್ಟಿಯಲ್ಲಿ ಸೇರಿಸಬೇಕು. ಕರ್ನಾಟಕದ ಗೌರವಾನ್ವಿತ ಶ್ರೇಷ್ಠ ನ್ಯಾಯಾಲಯದ ಆದೇಶದಂತೆ, ಕೊಡವ ಜನಾಂಗದ ನ್ಯಾಯಯುತ, ಸೂಕ್ಷ್ಮ, ಸಮಗ್ರ ಜನಾಂಗೀಯ ಅಧ್ಯಯನವನ್ನು ಆರಂಭಿಸಬೇಕು, ಕೊಡವ ಸಾಂಪ್ರದಾಯಿಕ ಜನಾಂಗೀಯ “ಸಂಸ್ಕಾರ ಗನ್” ಹಕ್ಕುಗಳನ್ನು ಸಿಖ್ಖರ…
ಮಡಿಕೇರಿ ಜ.27 NEWS DESK : ವಿಶ್ವ ಹಿಂದೂ ಪರಿಷತ್ತಿನ ಕೇಂದ್ರೀಯ ಉಪಾಧ್ಯಕ್ಷರು ಹಾಗೂ ಕರ್ನಾಟಕ ದಕ್ಷಿಣ ಪ್ರಾಂತ ಅಧ್ಯಕ್ಷರಾದ ಡಾ.ವಿಜಯಲಕ್ಷ್ಮಿ ದೇಶಮಾನೆ ಅವರಿಗೆ ಗೌರವ ಪದ್ಮಶ್ರೀ ಪುರಸ್ಕಾರ ದೊರೆತ್ತಿರುವುದು ಹೆಮ್ಮೆಯ ವಿಚಾರವೆಂದು ಕೊಡಗು ಜಿಲ್ಲಾ ವಿಶ್ವ ಹಿಂದೂ ಪರಿಷದ್, ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಸಂಘಟನೆಗಳು ಹರ್ಷ ವ್ಯಕ್ತಪಡಿಸಿವೆ. ಪತ್ರಿಕಾ ಪ್ರಕಟಣೆ ಮೂಲಕ ಡಾ.ವಿಜಯಲಕ್ಷ್ಮಿ ದೇಶಮಾನೆ ಅವರಿಗೆ ಅಭಿನಂದನೆ ಸಲ್ಲಿಸಿರುವ ಸಂಘಟನೆಗಳು ದೇಶದ ಪ್ರತಿಷ್ಠಿತ ಪದ್ಮಶ್ರೀ ಪುರಸ್ಕಾರ ಸಾಧನೆಗೆ ಸಂದ ಗೌರವ ಎಂದು ಬಣ್ಣಿಸಿವೆ. ಕಲಬುರಗಿ ಮೂಲದ ಖ್ಯಾತ ಕ್ಯಾನ್ಸರ್ ತಜ್ಞೆ ಡಾ.ವಿಜಯಲಕ್ಷ್ಮಿ ದೇಶಮಾನೆ ಅವರು ಮೂಲತಃ ಕಲಬುರಗಿಯವರಾಗಿದ್ದು, ಬೆಂಗಳೂರಿನ ಕಿದ್ವಾಯಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಬಡತನದಲ್ಲಿ ಬೆಳೆದ ಅವರು ವೈದ್ಯ ಲೋಕದ ಮಹಾನ್ ಸಾಧಕರ ಅಗ್ರಗಣ್ಯರ ಸಾಲಿನಲ್ಲಿದ್ದಾರೆ. 1980ರಲ್ಲಿ ಹುಬ್ಬಳ್ಳಿಯ ಕಿಮ್ಸ್ನಲ್ಲಿ ವೈದ್ಯಕೀಯ ಪದವಿ ಪಡೆದ ಅವರು, 1985ರಲ್ಲಿ ಬಳ್ಳಾರಿಯ ವೈದ್ಯಕೀಯ ಕಾಲೇಜಿನಲ್ಲಿ ಶಸಚಿಕಿತ್ಸೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 1985ರಲ್ಲಿ ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆಗೆ ಸೇರ್ಪಡೆಯಾದರು. ಮೂರು ದಶಕಗಳಿಗೂ…
ಮಡಿಕೇರಿ ಜ.27 NEWS DESK : ಅಂಗವಿಕಲತೆಯಿಂದ ಸಮಾಜದ ಮುಖ್ಯ ವಾಹಿನಿಯಿಂದ ದೂರ ಸರಿದವರಿಗೆ ‘ಕೃತಕ ಅಂಗಾಂಗ’ಗಳನ್ನು ಉಚಿತವಾಗಿ ನೀಡಿ, ನೊಂದವರಲ್ಲಿ ಜೀವನೋತ್ಸಾಹವನ್ನು ತುಂಬುವ ಮಹತ್ವದ ಶಿಬಿರ ನಗರದಲ್ಲಿ ನಡೆಯಿತು. ಕೊಡಗು ಜಿಲ್ಲೆಯ ನ್ಯಾಷನಲ್ ಮೆಡಿಕೋಸ್ ಸಂಸ್ಥೆ, ಸಂಸ್ಕೃತಿ ಸಿರಿ ಬಳಗ ಮತ್ತು ಟ್ರಸ್ಟ್, ಸ್ವಸ್ಥ ಕೂರ್ಗ್ ಫೌಂಡೇಶನ್ ಸಹಯೋಗದಲ್ಲಿ ನಗರದ ಮೈತ್ರಿ ಸಭಾಂಗಣದಲ್ಲಿ ಆಯೋಜಿತ ‘ಕೃತಕ ಅಂಗಾಂಗಗಳ ಉಚಿತ ಜೋಡಣೆ, ವಿತರಣೆ ಮತ್ತು ಆರೋಗ್ಯ ತಪಾಸಣೆ’ ಶಿಬಿರದಲ್ಲಿ 58 ಮಂದಿ ಕೃತಕ ಅಂಗಾಂಗಗಳಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದು, ಇವರಿಗೆ ನೆರವನ್ನು ಒದಗಿಸುವ ಕಾರ್ಯ ನಡೆಯಿತು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜು ಅವರು ಬೃಹತ್ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಅಂಗವೈಕಲ್ಯತೆಯಿಂದ ಬಳಲುತ್ತಿರುವವರಿಗೆ, ಕೃತಕ ಅಂಗಾಂಗಳನ್ನು ಒದಗಿಸಿ ಅವರಲ್ಲಿ ಆತ್ಮವಿಶ್ವಾಸ ತುಂಬುವ ಈ ಶಿಬಿರ ಶ್ಲಾಘನೀಯ. ರಾಜ್ಯ ಸರ್ಕಾರವು ಆರೋಗ್ಯ ಇಲಾಖೆಯ ಮೂಲಕ ಬಡ ಮಂದಿಗೆ ಅಗತ್ಯವಾದ ಆರೋಗ್ಯ ಸೌಲಭ್ಯಗಳನ್ನು ಕಲ್ಪಿಸಲು ಹೆಚ್ಚಿನ ಒತ್ತನ್ನು ನೀಡಿರುವುದಾಗಿ ತಿಳಿಸಿದರು. ಮಡಿಕೇರಿ…
ಮಡಿಕೇರಿ ಜ.27 NEWS DESK : ಸಾರ್ವಜನಿಕ ಶಾಂತಿ ಸುವ್ಯವಸ್ಥೆಗಳ ಕಾರ್ಯದಲ್ಲಿ ಸದಾ ನಿರತರಾಗಿರುವ ಪೊಲೀಸ್ ಸಿಬ್ಬಂದಿಗಳಲ್ಲಿ ಸುಪ್ತವಾಗಿ ಅಡಗಿರುವ ಕಲಾ ಪ್ರತಿಭೆಯನ್ನು ಹೊರ ತರುವ ನಿಟ್ಟಿನಲ್ಲಿ ರಾಜ್ಯದಲ್ಲೆ ಪ್ರಥಮ ಪ್ರಯೋಗವೆಂಬಂತೆ ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯಿಂದ ವಿನೂತನವಾಗಿ ಆರಂಭಿಸಿರುವ ‘ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ’ಯನ್ನು ವರ್ಣರಂಜಿತ ಸಮಾರಂಭದಲ್ಲಿ ಉದ್ಘಾಟಿಸಲಾಯಿತು. ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಭಾನುವಾರ ರಾತ್ರಿ ಆಯೋಜಿತ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಪೊಲೀಸ್ ಸಾಂಸ್ಕೃತಿಕ ವೇದಿಕೆಯ ಮಹಾ ಪೋಷಕರಾದ ಕೆ.ರಾಮರಾಜನ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಪೊಲೀಸ್ ಇಲಾಖೆಯಲ್ಲಿ ಇರುವ ಪ್ರತಿಯೊಬ್ಬರು ಸದಾ ಒತ್ತಡದ ನಡುವೆ ಕಾರ್ಯನಿರ್ವಹಣೆ ಮಾಡುವುದು ಅನಿವಾರ್ಯ. ಪ್ರತಿಯೊಬ್ಬರ ಒತ್ತಡಗಳನ್ನು ಕಳೆದು, ಅವರಲ್ಲಿ ಸುಪ್ತವಾಗಿರುವ ಕಲಾ ಪ್ರತಿಭೆಯನ್ನು ಹೊರ ತರುವ ನಿಟ್ಟಿನಲ್ಲಿ ಪೊಲೀಸ್ ಸಾಂಸ್ಕೃತಿಕ ವೇದಿಕೆಯನ್ನು ಆರಂಭಿಸಲಾಗಿದ್ದು, ನಿರಂತರವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವಂತಾಗಬೇಕು ಎಂದರು. ಪ್ರತಿಯೊಬ್ಬರಲ್ಲೂ ವಿಶಿಷ್ಟವಾದ ಕಲಾ ಪ್ರತಿಭೆ ಅಡಗಿರುತ್ತದೆ ಮತ್ತು ಎಲ್ಲರಿಗೂ ಅವರದೇ ಆದ ವೈಯಕ್ತಿಕ ಬದುಕು ಎಂಬುದಿರುತ್ತದೆ. ಇದನ್ನು…
ಮಡಿಕೇರಿ ನ.27 NEWS DESK : ಗರಗಂದೂರು ಗ್ರಾಮದ ಕೆ.ಎಸ್.ದರ್ಶನ್ ಅವರಿಗೆ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಲಭಿಸಿದೆ. ಸಾಮಾಜಿಕ ಕಾಳಜಿ ಹಾಗೂ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಬೆಳಗಾವಿ ಜಿಲ್ಲಾ ಘಟಕ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿ ಜಿಲ್ಲೆಯ ಮೂಡಲಗಿ ಇಟ್ಟಪ್ಪ ದೇವರ ರಂಗವೇದಿಕೆಯಲ್ಲಿ ನಡೆದ ರಾಜ್ಯಮಟ್ಟದ ಜಾನಪದ ಯುವ ಕಲಾ ಸಮ್ಮೇಳನ ಹಾಗೂ 2024-25 ಸಾಲಿನ ಪ್ರತಿಷ್ಠಿತ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಕೆ.ಎಸ್.ದರ್ಶನ್ ಅವರಿಗೆ ಒಕ್ಕೂಟದ ಪ್ರಮುಖರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.






