ಮಡಿಕೇರಿ NEWS DESK ಜ.14 : ಕಾಡಾನೆ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಯಡವನಾಡು ಗ್ರಾಮದ ಕೂಪಾಡಿ ಹಾಡಿ ವ್ಯಾಪ್ತಿಯಲ್ಲಿ ನಡೆದಿದೆ. ಹಾಡಿಯ ನಿವಾಸಿ ಜೇನುಕುರುಬರ ತಮ್ಮು (64) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಅವಿವಾಹಿತರಾಗಿರುವ ಇವರು ಕುರಿ ಮೇಯಿಸಿಕೊಂಡು ಜೀವನ ಸಾಗಿಸುತ್ತಿದ್ದರು. ಭಾನುವಾರ ಎಂದಿನಂತೆ ಕುರಿ ಮೇಯಿಸಲೆಂದು ಹೋದವರು ಮರಳಿ ಹಾಡಿಗೆ ಬಂದಿರಲಿಲ್ಲ. ಸುತ್ತಮುತ್ತಲೆಲ್ಲ ಹುಡುಕಾಟ ನಡೆಸಿದರೂ ತಮ್ಮು ಅವರ ಸುಳಿವು ದೊರೆತ್ತಿರಲಿಲ್ಲ. ಇಂದು ಕೂಪಾಡಿ ಹಾಡಿಯಿಂದ ಸ್ವಲ್ಪ ದೂರದ ಪ್ರದೇಶದಲ್ಲಿ ಮೃತದೇಹ ಪತ್ತೆಯಾಗಿದ್ದು, ಇದು ಕಾಡಾನೆ ದಾಳಿಯಿಂದ ಆದ ಸಾವು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಸಂಜೆ ಸ್ಥಳ ಪರಿಶೀಲನೆ ನಡೆಸಿ ಮೃತರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ನಂತರ ಘಟನೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಲೇಖಕ: admin
ಸುಂಟಿಕೊಪ್ಪ ಜ.14 NEWS DESK : ಪೊಂಗಲ್ ಸಮಿತಿ ವತಿಯಿಂದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ಪೊಂಗಲ್ (ಮಕರಸಂಕ್ರಾಂತಿ) ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ಮುಂಜಾನೆ ಮಧುರಮ್ಮ ಬಡಾವಣೆಯಲ್ಲಿರುವ ವೃಕ್ಷೋದ್ಭವ ಗಣಪತಿ ದೇವಾಲಯದಲ್ಲಿ ಮಹಿಳೆಯರು ಪೂರ್ಣಕುಂಭ ಕಳಸಕ್ಕೆ ವಿಶೇಷ ಪೂಜೆಯನ್ನು ನೇರವೇರಿಸಿದರು. ದೆವಾಲಯದ ಟ್ರಸ್ಟಿ, ಸಮಿತಿ ಕಾರ್ಯದರ್ಶಿ ಎ.ಲೋಕೇಶ್ ಕುಮಾರ್ ಪೂರ್ಣಕುಂಭ ಕಳಸವನ್ನು ಹೊತ್ತು ಕೊಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ನಂತರ ನಾದಸ್ವರದೊಂದಿಗೆ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಿ ರಾಮ ಮಂದಿರ, ಅಯ್ಯಪ್ಪ ದೇವಾಲಯಗಳಿಗೆ ತೆರಳಿ ಪೂಜೆಯನ್ನು ಸಲ್ಲಿಸಿ ನಂತರ ಶ್ರೀ ಚಾಮುಂಡೇಶ್ವರಿ, ಮುತ್ತಪ್ಪ ದೇವಾಲಯದಲ್ಲಿ ಕಳಸಗಳನಿಟ್ಟು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಭಕ್ತರು ಪೊಂಗಲ್ಮಾಡಿ ಹಬ್ಬವನ್ನು ಸಂಭ್ರಮಿಸಿದರು. ಮಧ್ಯಾಹ್ನ ನೆರೆದಿದ್ದ ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿತು. ಪೊಂಗಲ್ ಆಚರಣೆಯಲ್ಲಿ ಸದಸ್ಯರಾದ ಎಸ್.ಸುರೇಶ್, ಎಸ್.ಸುಂದರೇಶ, ಎಂ.ರಾಜಾ, ಎಂ.ಗಣೇಶ, ರಾಜ, ಜಗದೀಶ, ವೆಂಕಟೇಶ, ಗಣೇಶ, ಸುಭ್ರಮಣಿ, ಮುರುಗೇಶ, ಗುಣಶೇಖರ, ಏಳುಮಲೈ ಹಾಗೂ ಶರವಣ ಇತರರು ಹಾಜರಿದ್ದರು.
ಮಡಿಕೇರಿ ಜ.14 NEWS DESK : ಕೊಡವರ ಹಕ್ಕುಗಳ ಪರ ಹೋರಾಟಗಳನ್ನು ನಡೆಸಿಕೊಂಡು ಬರುತ್ತಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಎಲ್ಲೂ ಶಾಂತಿಭಂಗವಾಗುವ ವರ್ತನೆಯನ್ನು ತೋರಿಲ್ಲ. ಆದ್ದರಿಂದ ವಿನಾಕಾರಣ ಹೂಡಲಾಗಿರುವ ಪ್ರಕರಣವನ್ನು ತಕ್ಷಣ ರದ್ದು ಮಾಡಬೇಕೆಂದು ಬೇಂಗ್ ನಾಡ್ ಕೊಡವ ಸಮಾಜ ಮತ್ತು ಬೇಂಗ್ನಾಡ್ ಸ್ಪೋರ್ಟ್ಸ್ ಐಂಡ್ ರಿಕ್ರಿಯೇಷನ್ ಕ್ಲಬ್ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಂಗ್ನಾಡ್ ಕೊಡವ ಸಮಾಜದ ಅಧ್ಯಕ್ಷ ಬಾಚರಣಿಯಂಡ ಬಿ.ಗಣಪತಿ ಪ್ರಕರಣ ದಾಖಲಿಸಿರುವುದು ಖಂಡನೀಯ, ಒಂದು ವೇಳೆ ನಾಚಪ್ಪ ಅವರನ್ನು ಬಂಧಿಸಿದರೆ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಅತ್ಯಂತ ಸೂಕ್ಷ್ಮ ಕೊಡವ ಜನಾಂಗ, ಕೊಡವರ ಭೂಮಿ, ಸಂಸ್ಕೃತಿ, ಆಚಾರ, ವಿಚಾರ, ಪರಂಪರೆ, ಮಂದ್, ಮಾನಿ, ದೇವನೆಲೆಯ ರಕ್ಷಣೆಗಾಗಿ ಸಂವಿಧಾನದ ಆಶಯಗಳಿಗೆ ಬದ್ಧವಾಗಿ ಕಾನೂನಿನ ಚೌಕಟ್ಟಿನಡಿ ಎನ್.ಯು.ನಾಚಪ್ಪ ಅವರು ಶಾಂತಿಯುತವಾಗಿ ಹೋರಾಟವನ್ನು ನಡೆಸುತ್ತಾ ಬಂದಿದ್ದಾರೆ. ಕೊಡವರ ಹಕ್ಕುಗಳ ಪರ ಹೋರಾಟ ನಡೆಸುತ್ತಿದ್ದಾರೆಯೇ ಹೊರತು ಬೇರೆ ಯಾವುದೇ ಜನಾಂಗವನ್ನು ವಿರೋಧಿಸಿಲ್ಲ, ನಿಂದಿಸಿಲ್ಲ ಮತ್ತು ಇತರರ ಆಚಾರ…
ಮಡಿಕೇರಿ ಜ.14 NEWS DESK : ಅತ್ಯಂತ ಸಂಪದ್ಭರಿತವಾದ ‘ಅರೆಭಾಷೆ’ ಮತ್ತು ಸಂಸ್ಕೃತಿಯ ಸಂರಕ್ಷಣೆಯೊಂದಿಗೆ, ಅದನ್ನು ಮತ್ತಷ್ಟು ಸುಪುಷ್ಟವಾಗಿ ಬೆಳೆಸುವ ನಿಟ್ಟಿನ ಕಾರ್ಯಗಳಿಗೆ ಸಮುದಾಯ ಬಾಂಧವರು ಹೆಚ್ಚಿನ ಸಹಕಾರ ನೀಡಬೇಕೆಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಕರೆ ನೀಡಿದರು. ಮಡಿಕೇರಿಯ ಕೊಡಗು ಗೌಡ ವಿದ್ಯಾ ಸಂಘ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸಹಯೋಗದಲ್ಲಿ ನಗರದ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ಆಯೋಜಿತ ‘ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ಅರೆ ಭಾಷೆ’ ಸಂಸ್ಕೃತಿಯ ಬೆಳವಣಿಗೆಯ ನೆಲೆಯಲ್ಲಿ ಅರೆಭಾಷೆ ಅಕಾಡೆಮಿ ಕಾರ್ಯನಿರ್ವಹಿಸುವಂತದ್ದು. ಹೀಗಿದ್ದೂ ಅರೆಭಾಷೆಯನ್ನಾಡುವ ಹೆಚ್ಚ್ಚಿನವರು ಗೌಡ ಸಮೂಹಕ್ಕೆ ಸೇರಿದವರಾಗಿದ್ದಾರೆ. ಈ ನೆಲೆಯಲ್ಲಿ ಅಕಾಡೆಮಿಯು ಕೊಡಗು ಗೌಡ ಸಂಘದ ಅರೆಭಾಷಾ ಚಟುವಟಿಕೆಗಳಿಗೆ ತನ್ನ ಸಹಕಾರವನ್ನು ನೀಡುತ್ತಿದೆಯೆಂದು ತಿಳಿಸಿದರು. ಅರೆಭಾಷಾ ಅಭಿವೃದ್ಧಿಗೆ ಅಕಾಡೆಮಿ ರಚನೆಯಾಗುವುದಕ್ಕೆ ಎಷ್ಟೋ ವರ್ಷಗಳ ಹಿಂದೆಯೇ ಕೊಡಗು ಗೌಡ ವಿದ್ಯಾ ಸಂಘ ಸ್ಥಾಪನೆಯಾಗಿರುವುದಲ್ಲದೆ, ಮಕ್ಕಳ ಶಿಕ್ಷಣ…
ಕುಶಾಲನಗರ ಜ.14 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ 9ನೇ ವರ್ಷದ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮಕ್ಕೆ ಕುಶಾಲನಗರದಲ್ಲಿ ಚಾಲನೆ ನೀಡಲಾಯಿತು. ಕುಶಾಲನಗರ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯ ಬಳಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ, ಕುಶಾಲನಗರ ಪುರಸಭೆ, ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯ ಟ್ರಸ್ಟ್, ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಕಾವೇರಿ ಆರತಿ ಕ್ಷೇತ್ರದಲ್ಲಿ ನಡೆದ ಸರಳ ಕಾರ್ಯಕ್ರಮವನ್ನು ಕುಶಾಲನಗರ ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರು ಉದ್ಘಾಟಿಸಿ ಶುಭ ಕೋರಿದರು. 9ನೇ ವರ್ಷದ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮಕ್ಕೆ ಕುಶಾಲನಗರ ಡಿ ವೈ.ಎಸ್.ಪಿ.ಆರ್.ವಿ ಗಂಗಾಧರಪ್ಪ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಗಂಗಾಧರಪ್ಪ, ಸ್ವಚ್ಛತೆ ಪ್ರತಿಯೊಬ್ಬರ ಮನಸ್ಸು ಹಾಗೂ ಮನೆಮನೆಗಳಿಂದ ಆರಂಭವಾಗಬೇಕು ಪ್ರತಿಯೊಬ್ಬರಿಗೂ ಸ್ವಚ್ಛತೆಯ ಅರಿವು ಇರಬೇಕು. ಆ ಮೂಲಕ ಸ್ವಚ್ಛ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.…
ಮಡಿಕೇರಿ ಜ.14 NEWS DESK : ಗ್ರಾಮಾಂತರ ಪ್ರದೇಶಗಳಲ್ಲಿ ನಡೆಯುವ ಗ್ರಾಮೀಣ ಕ್ರೀಡೆಗಳಿಗೆ ಸಂಬಂಧಿಸಿದ ಇಲಾಖೆ ವತಿಯಿಂದ ಅನುದಾನ ಮತ್ತು ನಶಿಸಿ ಹೋಗುತ್ತಿರುವ ಗ್ರಾಮೀಣ ಕ್ರೀಡೆಗಳನ್ನು ಉಳಿಸಿ, ಬೆಳೆಸುವ ಕಾರ್ಯಕ್ಕೆ ಎಲ್ಲಾ ರೀತಿಯ ಸಹಕಾರವನ್ನು ನೀಡುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭರವಸೆ ನೀಡಿದರು. ಹೆಬ್ಬಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳೆಗೋಟೆಯ ಶ್ರೀ ಬಸವೇಶ್ವರ ಯುವಕರ ಬಳಗದ ವತಿಯಿಂದ ಹಳೆಗೋಟೆ ಗ್ರಾಮದಲ್ಲಿ ನಡೆದ ಪ್ರಥಮ ವರ್ಷದ ರಾಜ್ಯ ಮಟ್ಟದ ಕರುಗಳ ಚಕ್ಕಡಿಯ ಚಕ್ರದ ಪಾಯಿಂಟ್ ಗಾಡಿ ಓಟದ ಸ್ಪರ್ಧೆಯನ್ನು ಉದ್ಘಾಟಿಸಿ ಮಾತಾನಾಡಿದರು. ಕುಶಾಲನಗರ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತಾನಾಡಿ, ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಹೆಬ್ಬಾಲೆ, ತೊರೆನೂರು ಶಿರಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹೆಚ್ಚು ಹೈನುಗಾರಿಕೆಗೆ ಒತ್ತು ನೀಡುವುದರ ಜೊತೆಯಲ್ಲಿ ಇಂತಹ ಗ್ರಾಮೀಣ ಪ್ರದೇಶದ ಪ್ರಮುಖ ಕ್ರೀಡೆಯಾದ ಗಾಡಿ ಓಟದ ಸ್ಪರ್ಧೆ ಗ್ರಾಮೀಣ ಯುವಕರಿಗೆ ಕ್ರೀಡಾ ಪ್ರೋತ್ಸಾಹ ನೀಡಲು ಸಹಕಾರಿಯಾಗುತ್ತವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸ್ಪರ್ಧೆಯಲ್ಲಿ ರಾಜ್ಯದ ವಿವಿಧ…
ಮಡಿಕೇರಿ ಜ.14 NEWS DESK : ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಸಮಿತಿ ವತಿಯಿಂದ ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 35ನೇ ವರ್ಷದ ಮಕರ ಸಂಕ್ರಾಂತಿ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಜ.13ರ ಮುಂಜಾನೆಯಿಂದಲೇ ಗಣಪತಿ ಹೋಮ, ಪಂಚಾಮೃತ ಅಭಿಷೇಕ, ತುಪ್ಪಾಭಿಶೇಕ ಇತ್ಯಾದಿ ಸೇವೆ ನಡೆಯಿತು. ಇಂದು ಬೆಳಿಗ್ಗೆ ನಿರ್ಮಾಲ್ಯ ವಿಸರ್ಜನೆ, ಉಷಾಪೂಜೆ, ಮುತ್ತಪ್ಪ ಮತ್ತು ಸುಬ್ರಹ್ಮಣ್ಯ ದೇವರ ಪೂಜೆ, ಪಂಚಾಮೃತಾಭಿಷೇಕ, ತುಪ್ಪಾಭಿಷೇಕ, ಕ್ಷೀರಾಭಿಷೇಕ, ಭಸ್ಮಾಭಿಷೇಕ, ಎಳನೀರಭಿಷೇಕ, ಪುಷ್ಪಾರ್ಚನೆ ಜರುಗಿತು. ನಂತರ ಶ್ರೀ ಕುಟ್ಟಿಚಾತನ್ ವೆಳ್ಳಾಟಂ, ಮುತ್ತಪ್ಪ ವೆಳ್ಳಾಟಂ, ಶ್ರೀ ಪೋದಿ ದೇವರ ವೆಳ್ಳಾಟಂ ಹಾಗೂ ಶ್ರೀ ಅಯ್ಯಪ್ಪ ದೇವರ ಅಲಂಕಾರ ಪೂಜೆ, ಉತ್ಸವ ಮೂರ್ತಿಯ ಕ್ಷೇತ್ರ ಪ್ರದಕ್ಷಿಣೆ ನಡೆಯಿತು. ಮಧ್ಯಾಹ್ನ ಮಹಾಮಂಗಳಾರತಿ ಬಳಿಕ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ನಗರದ ವಿವಿಧ ಬಡಾವಣೆಗಳಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಸಂಜೆ 6ರಿಂದ ಭಜನೆ, 7ರಿಂದ ಅಲಂಕಾರ ಪೂಜೆ ಮತ್ತು…
ಮಡಿಕೇರಿ ಜ.14 NEWS DESK : ಇತಿಹಾಸ ಪ್ರಸಿದ್ಧ ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ದೇವರ 66ನೇ ವಾರ್ಷಿಕ ಜಾತ್ರೋತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆತ್ತಿದ್ದು, ಜ.16 ರಂದು ಮಹಾರಥೋತ್ಸವ ಜರುಗಲಿದೆ. ಬೆಳ್ಳಿ ಬಂಗಾರ ದಿನ ಆಚರಣೆಯೊಂದಿಗೆ ಜಾತ್ರೆಗೆ ಚಾಲನೆ ನೀಡಲಾಗಿದೆ. ದೇವಾಲಯ ಸಮಿತಿ ಪದಾಧಿಕಾರಿಗಳು ಹಾಗೂ ಗ್ರಾಮದ ಹಿರಿಯರು ಪ್ರಾರ್ಥನಾ ಪೂಜೆ ಮಾಡುವ ಮೂಲಕ ದೇವರ ಕೈಂಕರ್ಯಗಳಿಗೆ ಚಾಲನೆ ನೀಡಿದರು. ಮಕರ ಸಂಕ್ರಮಣ ಕರುವಿನ ಹಬ್ಬದ ಅಂಗವಾಗಿ ದೇಗುಲದ ಗರುಡ ಕಂಬದ ಅಗ್ರಪೀಠದಲ್ಲಿ ತುಪ್ಪದ ನಂದಾದೀಪವನ್ನು ಬೆಳಗಿಸಲಾಗುತ್ತದೆ. ಇದರೊಂದಿಗೆ ಅಂಕುರಾರ್ಪಣ ಪೂಜೆ, ಮಹಾಮಂಗಳಾರತಿ, ಪ್ರಾರ್ಥನೆ, ಪ್ರಸಾದ ಸ್ವೀಕಾರ ನೆರವೇರಲಿದೆ. ಜ.15 ರಂದು ಅರಸು ಬಲ ಸೇವೆ, ಸಂಜೆ 7.30 ರಿಂದ ಗಣಹೋಮ, ರಂಗಪೂಜೆ, ಬೀದಿ ಉತ್ಸವ, ಮಹಾಮಂಗಳಾರತಿ ಕಾರ್ಯಕ್ರಮಗಳು ಜರುಗಲಿದೆ. ಶ್ರೀ ಕುಮಾರಲಿಂಗೇಶ್ವರ ಯುವಕ ಸಂಘದ ವತಿಯಿಂದ ಜ.15 ಹಾಗೂ 16 ರಂದು ಪುರುಷರ ಹಾಗೂ ಮಹಿಳೆಯರ ಅಂತರ್ ಜಿಲ್ಲಾ ಮಟ್ಟದ ಥ್ರೋಬಾಲ್, ಕಬ್ಬಡ್ಡಿ, ಹಗ್ಗಜಗ್ಗಾಟ ಮತ್ತು ವಾಲಿಬಾಲ್ ಪಂದ್ಯಾವಳಿ ನಡೆಯಲಿದೆ.…
ನಾಪೋಕ್ಲು ಜ.14 NEWS DESK : ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ಆಟೋಗಳಿಗೆ ನೂತನ ಎನ್.ಪಿ.ಕೆ ನಂಬರ್ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ನಾಪೋಕ್ಲು ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಹೇಳಿದರು. ಪೊಲೀಸ್ ಮೈದಾನದಲ್ಲಿ ನಡೆದ ಎನ್.ಪಿ.ಕೆ ವಿತರಣಾ ಕಾರ್ಯಕ್ರಮದಲ್ಲಿ ಆಟೋಗೆ ನೂತನ ಎಂ ಪಿ ಕೆ ಸ್ಟಿಕ್ಕರ್ ಅನ್ನು ಅಳವಡಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು ಅವರು, ಆಟೋ ಗಳಿಗೆ ಈ ಹಿಂದೆ ಎನ್.ಪಿ.ಕೆ ನಂಬರ್ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗಿದ್ದು, ಅದು ದುರುಪಯೋಗ ವಾಗುತ್ತಿರುವುದನ್ನು ಮನಗಂಡು ನೂತನವಾಗಿ ಎನ್.ಪಿ.ಕೆ ನಂಬರ್ ಅಳವಡಿಸಲಾಗುತ್ತಿದೆ ಎಂದರು. ಇದರಲ್ಲಿ ಕೊಡಗು ಜಿಲ್ಲಾ ಪೊಲೀಸ್ ಎಂದು ನಮೂದಿಸಲಾಗಿದ್ದು, ಸಮಸ್ಯೆಗಳಾದಲ್ಲಿ ಪತ್ತೆಗೆ ನೆರವಾಗಲಿದೆ ಎಂದು ಹೇಳಿದರು. ನಾಪೋಕ್ಲು ಪಟ್ಟಣದಲ್ಲಿ ರಸ್ತೆ ಕಿರಿದಾಗಿದ್ದು, ಆಟೋ ನಿಲ್ದಾಣಕ್ಕೆ ಪಂಚಾಯಿತಿ ಹಾಗೂ ಪೊಲೀಸ್ ಇಲಾಖೆ ವತಿಯಿಂದ ಶೀಘ್ರದಲ್ಲಿ ಸ್ಥಳಾವಕಾಶ ಕಲ್ಪಿಸಲಾಗುವುದು. ಪ್ರತಿದಿನ ಆಗುತ್ತಿರುವ ವಾಹನದಟ್ಟಣೆ ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುಗುತ್ತಿದೆ ಎಂದರು. ಅಂಗಡಿ ಮಾಲೀಕರು ತಮ್ಮ ಅಂಗಡಿಗಳ ಎದುರು ವಾಹನಗಳನ್ನು ನಿಲುಗಡೆ ಮಾಡುತ್ತಿದ್ದು ಸಮಸ್ಯೆ…
ನಾಪೋಕ್ಲು ಜ.14 NEWS DESK : ಆಕಸ್ಮಿಕವಾಗಿ ಬೆಂಕಿ ತಗುಲಿ ಭತ್ತ ಹಾಗೂ ಹುಲ್ಲು ಉರಿದು ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ನಾಪೋಕ್ಲು ಸಮೀಪದ ಕೈಕಾಡು ಗ್ರಾಮದಲ್ಲಿ ನಡೆದಿದೆ. ಯಂತ್ರದ ಸಹಾಯದಿಂದ ಗ್ರಾಮದ ಮಾಜಿ ಸೈನಿಕ ಕುಲ್ಲಚೆಟ್ಟಿ ನಾಣಯ್ಯ (ತಮ್ಮಣಿ) ಎಂಬವರ ಮನೆಯಂಗಳದಲ್ಲಿ ಕಾರ್ಮಿಕರು ಭತ್ತ ಒಕ್ಕಲು ಮಾಡುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಬೆಂಕಿ ತಗಲಿದ್ದು ಅಪಾರ ಪ್ರಮಾಣದ ಭತ್ತ ಮತ್ತು ಹುಲ್ಲು ನಷ್ಟ ಸಂಭವಿಸಿದೆ. ಜೊತೆಗೆ ಶೆಡ್ನಲ್ಲಿದ್ದ ಕಾರು ಸಹ ಬೆಂಕಿಯಿಂದ ಹಾನಿಗೊಳಗಾಗಿದೆ. ತಕ್ಷಣ ಮಾಹಿತಿ ತಿಳಿದ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ನಂದಿಸಿ ಇನ್ನೂ ಹೆಚ್ಚಿನ ಸಂಭವಿಸಬಹುದಾದ ಅಪಾಯವನ್ನು ತಪ್ಪಿಸಿದರು. ವರದಿ : ದುಗ್ಗಳ ಸದಾನಂದ.






