ಲೇಖಕ: admin

ಮಡಿಕೇರಿ NEWS DESK ಮೇ 12 : ಜೂನ್ ಮೊದಲ ಅಥವಾ ಎರಡನೇ ವಾರದಲ್ಲಿ ಕೊಡಗು ಜಿಲ್ಲೆಗೆ ಮುಂಗಾರು ಪ್ರವೇಶವಾಗುವ ಸಾಧ್ಯತೆ ಇದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ‘ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ’ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಬಾರಿ ಜನವರಿಯಿಂದ ಇಲ್ಲಿಯವರೆಗೆ ಶೇ.50 ಕ್ಕಿಂತಲೂ ಕಡಿಮೆ ಮಳೆ ಆಗಿದೆ. ಆದರೂ ಮಳೆಗಾಲದ ಅವಧಿಯಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗಿದೆ. ಪ್ರವಾಹ ಪೀಡಿತ ಹಾಗೂ ಭೂಕುಸಿತ ಪ್ರದೇಶಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಅಂತಹ ಪ್ರದೇಶಗಳಲ್ಲಿ ಹೆಚ್ಚಿನ ಎಚ್ಚರವಹಿಸಬೇಕು. ಈಗಾಗಲೇ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ನೋಡಲ್ ಅಧಿಕಾರಿಗಳು, ತಹಶೀಲ್ದಾರರು, ತಾ.ಪಂ.ಇಒಗಳು, ಸ್ಥಳೀಯ ಪೊಲೀಸ್ ಠಾಣೆ ಇನ್ಸ್ಪೆಕ್ಟರ್, ಸ್ಥಳೀಯ ಎಂಜಿನಿಯರ್‌ಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು. ತಾಲ್ಲೂಕು ಮಟ್ಟದಲ್ಲಿ ಶಾಸಕರ ನೇತೃತ್ವದಲ್ಲಿ ಕಾರ್ಯಪಡೆ…

Read More

ಮಡಿಕೇರಿ NEWS DESK ಮೇ 12 : ಭಾಗಮಂಡಲ ವಲಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೋಳಿಬೈಲು ವೆಂಕಟೇಶ್ ರಾಜೀನಾಮೆ ನೀಡಿದ್ದಾರೆ. ವೈಯುಕ್ತಿಕ ಕಾರಣ ನೀಡಿರುವ ಅವರು ರಾಜೀನಾಮೆ ಪತ್ರವನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರಿಗೆ ಸಲ್ಲಿಸಿದ್ದಾರೆ.

Read More

ಸುಂಟಿಕೊಪ್ಪ ಮೇ 11 NEWS DESK : ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ಪಾಲಕ ಸಂತ ಅಂತೋಣಿಯವರ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ದೇವಾಲಯದ ಆವರಣದಲ್ಲಿ ಧ್ವಜಾರೋಹಣ ಹಾಗೂ ಅಡಂಬರ ದಿವ್ಯ ಬಲಿಪೂಜೆ ನೆರವೇರಿಸುವ ಮೂಲಕ ಮೈಸೂರು ಧರ್ಮಕ್ಷೇತ್ರದ ವಿದ್ಯಾಸಂಸ್ಥೆಗಳ ಕಾರ್ಯದರ್ಶಿಯಾದ ರೇ.ಫಾ. ಎಡ್ವರ್ಡ್ ವಿಲಿಯಂ ಸಲ್ಡಾನಾ ಹಾಗೂ ಮಡಿಕೇರಿ ವಲಯ ದರ್ಮಗುರುಗಳು ಮತ್ತು ಸಂತ ಮೈಕಲರ ದೇವಾಲಯದ ಧರ್ಮಗುರುಗಳಾದ ಜಾರ್ಜ್ ದೀಪಕ್, ಬೆಂಗಳೂರಿನ ಧರ್ಮಗುರುಗಳು ಹಾಗೂ ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾದ ರೇ.ಫಾ.ವಿಜಯಕುಮಾರ್ ಚಾಲನೆ ನೀಡಿದರು. ಬಲಿಪೂಜೆ ಹಾಗೂ ಆರಾಧನೆಯನ್ನು ಕೆ.ಆರ್.ಪೇಟೆಯ ಬಾಲ ಯೇಸುವಿನ ದೇವಾಲಯದ ಧರ್ಮಗುರುಗಾಳದ ಟಿ.ಪೌಲೂಸ್ ಅವರುಗಳು ನೆರವೇರಿಸಿದರು. ಮಕ್ಕಳಿಗೆ ನೂತನ ಪರಮ ಪ್ರಸಾದ ಸಂಸ್ಕಾರ ಮತ್ತು ಅಡಂಬರ ದಿವ್ಯ ಬಲಿಪೂಜೆಯನ್ನು ಏಕಾರ್ಡ್ ಎಸ್ಟೇಟ್ ಸಹಾಯಕ ಧರ್ಮಗುರುಗಾಳದ ಚಾಲ್ರ್ಸ್ ಪೆರಿಯನಾಗಮ್ ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾದ ರೇ.ಫಾ.ವಿಜಯಕುಮಾರ್ ಆಡಂಬರ ದಿವ್ಯ ಬಲಿಪೂಜೆ ಪ್ರಭೋದನೆ ಮತ್ತು ಮಕ್ಕಳಿಗೆ ಪ್ರಥಮ ಪರಮ ಪ್ರಸಾದ ಸಂಸ್ಕಾರ ವಿತರಿಸಿದರು. ಸಂತ ಅಂತೋಣಿ ದೇವಾಲಯದ ಧರ್ಮಗುರುಗಳು…

Read More

ಮಡಿಕೇರಿ ಮೇ 11 NEWS DESK :  ಮಡಿಕೇರಿ ನಗರ ಠಾಣೆ ವೃತ್ತ ನಿರೀಕ್ಷರಾಗಿದ್ದ ಟಿ.ಕೆ.ರಾಜು ಅವರಿಗೆ ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು. ಕೊಡಗು ಬ್ಲಡ್ ಡೋನರ್ಸ್ ಪದಾಧಿಕಾರಿಗಳು ಟಿ.ಕೆ.ರಾಜು ಅವರನ್ನು ಭೇಟಿಯಾಗಿ ತುರ್ತು ಸಂದರ್ಭದಲ್ಲಿ ರಕ್ತದ ಬೇಡಿಕೆ ಇದ್ದಾಗ ತಮ್ಮ ಇಲಾಖಾ ಸಿಬ್ಬಂದಿಗಳನ್ನು ರಕ್ತದಾನ ಮಾಡಲು ಕಳುಹಿಸುತ್ತಿದ್ದನ್ನು ಸ್ಮರಿಸಿ, ಸನ್ಮಾನಿಸಿ ಬೀಳ್ಕೊಡುಗೆ ನೀಡಿದರು.

Read More

ಮಡಿಕೇರಿ ಮೇ 11 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಮ್ಮೇಳನಾಧ್ಯಕ್ಷರಾದ ಅಬ್ದುಲ್ ರಶೀದ್ ಅವರಿಗೆ ಆಹ್ವಾನ ನೀಡಲಾಯಿತು. 17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿಗಳು ಕಥೆಗಾರ ಅಬ್ದುಲ್ ರಶೀದ್ ಅವರ ಹುಣಸೂರಿನ ಬನ್ನಿಕುಪ್ಪೆ ಗ್ರಾಮದ ತೋಟದ ನಿವಾಸಕ್ಕೆ ಭೇಟಿ ನೀಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ ಕೇಶವ ಕಾಮತ್, ಹದಿನೇಳನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಉಪಾಧ್ಯಕ್ಷರು, ಕೊಡಗು ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರಾದ ಲೋಕೇಶ್ ಕುಮಾರ್, ಸುಂಟಿಕೊಪ್ಪ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ಪಿ.ಎಫ್. ಸಬಾಸ್ಟಿನ್, ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ದೇಶಕರು, ಸಮ್ಮೇಳನದ ಆಹಾರ ಸಮಿತಿಯ ಅಧ್ಯಕ್ಷರಾದ ಹರೀಶ್ ಗುಡ್ಡೆಮನೆ  ಅವರು ಸಾಂಪ್ರದಾಯಿಕವಾಗಿ ಸಮ್ಮೇಳನದ ಅಧ್ಯಕ್ಷರನ್ನು ಗೌರವಿಸಿ ಸಮ್ಮೇಳನಕ್ಕೆ ಆಹ್ವಾನ ನೀಡಿದರು. ಈ ಸಂದರ್ಭ ಅಬ್ದುಲ್ ರಶೀದ್ ಅವರ ಪತ್ನಿ…

Read More

ಮಡಿಕೇರಿ ಮೇ 11 NEWS DESK : ವಿದ್ಯುತ್ ವಿತರಣಾ 66/11 ಕೆ.ವಿ ಉಪಕೇಂದ್ರ ಪೊನ್ನಂಪೇಟೆಯಿಂದ ಹೊರಹೊಮ್ಮುವ ಎಫ್10 ಹೈಸೊಡ್ಲೂರು ಫೀಡರ್‍ನಲ್ಲಿ ಮೇ, 12 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹುದಿಕೇರಿ, ಕೊಣಂಗೇರಿ, ಬೆಳ್ಳೂರು, ಹೈಸೊಡ್ಲೂರು, ಪೂಕಳತೋಡು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಮಡಿಕೇರಿ ಮೇ 11 NEWS DESK : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು  ಮೇ, 13 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪೊನ್ನಂಪೇಟೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ಸ್ವೀಕರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಿದ್ದಾರೆ.  ಸರ್ಕಾರಿ  ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

Read More

ಮಡಿಕೇರಿ ಮೇ 11 NEWS DESK : ಪ್ಯಾಕೇಜ್ ನಂಬರ್ 808-ಇಂಪ್ರೂಮೆಂಟ್ಸ್ ಟು ಬೆಂಗಳೂರು-ಜಾಲ್ಸೂರು ರಸ್ತೆ ಎಸ್‍ಎಚ್-85 ರಿಂದ ಸಿಎಚ್ 239.76 ಕಿ.ಮೀ. ರಿಗೆ 254.71 ಕಿ.ಮೀ.(ಇನ್ ಸೆಲೆಕ್ಟೆಡ್ ರೀಚಸ್) ಇನ್ ಸೋಮವಾರಪೇಟೆ (ಸರಪಳಿ 239.76 ರಿಂದ 241.00 ಕಿ.ಮೀ.) ಸಿಸಿ ರಸ್ತೆ ಕಾಮಗಾರಿಯನ್ನು ಕೈಗೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮೇ, 13 ರಿಂದ ಜೂನ್, 12 ರವರೆಗೆ ಸೋಮವಾರಪೇಟೆ ತಾಲ್ಲೂಕು-ಬೆಂಗಳೂರು ಜಾಲ್ಸೂರು ರಾಜ್ಯ ಹೆದ್ದಾರಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಭಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ. ಸಾರ್ವಜನಿಕರು ಸೋಮವಾರಪೇಟೆ-ಹಾನಗಲ್ಲು-ತಲ್ತಾರಶೆಟ್ಟಳ್ಳಿ-ತಾಕೇರಿ ಮಾರ್ಗ, ಮಾವಿನಕಟ್ಟೆ-ತಲ್ತಾರಶೆಟ್ಟಳಿ ಮಾರ್ಗವಾಗಿ ಬಳಸುವುದು. ಈ ಬಗ್ಗೆ ಅವಶ್ಯವಿರುವ ಸಂಜ್ಞೆ/ ಸೂಚನಾ ಫಲಕವನ್ನು ಅಳವಡಿಸಲು ಕಾರ್ಯಪಾಲಕ ಎಂಜಿನಿಯರ್, ಲೋಕೋಪಯೋಗಿ ಇಲಾಖೆ, ಕೊಡಗು ವಿಭಾಗ, ಮಡಿಕೇರಿ ಇವರಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಮೇ 11 NEWS DESK : ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸುಮಾರು 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪುರಸ್ಕಾರ’ ನೀಡಿ ಗೌರವಿಸಲಾಗುತ್ತಿದೆ. ಅದರಂತೆ 2026ನೇ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕಗಳಿಸಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಶೇ.90 ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಮಾತ್ರ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವುದು. ವಿದ್ಯಾರ್ಥಿಗಳು 2026 ರ ಎಸ್‍ಎಸ್‍ಎಲ್‍ಸಿ/ಪಿಯುಸಿ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ-ತಾಯಿ ಕರ್ನಾಟಕ ರಾಜ್ಯ ಸರ್ಕಾರದ ಖಾಯಂ ನೌಕರರಾಗಿರಬೇಕು. https://powermedia.info ಲಿಂಕ್ ಮುಖಾಂತರ ಅರ್ಜಿ ಸಲ್ಲಿಸುವುದು. ಸಂಘವು ನಿಗದಿಪಡಿಸಿರುವ ನಮೂನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲೆ/ತಾಲ್ಲೂಕು/ಯೋಜನಾ ಶಾಖೆ ಅಧ್ಯಕ್ಷರು ಮತ್ತು ಬೆಂಗಳೂರು…

Read More

ಮಡಿಕೇರಿ ಮೇ 11 NEWS DESK : ಪತ್ರಕರ್ತರ ಸ್ನೇಹಿತರ ಬಳಗ ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಮಡಿಕೇರಿ ನಗರದ ಪತ್ರಕರ್ತರಿಗೆ ಆಯೋಜಿಸಿದ್ದ ಸೌಹಾರ್ದ ಕ್ರಿಕೆಟ್ ಪಂದ್ಯಾಟದಲ್ಲಿ ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ ಸ್ಥಾನ ಪಡೆಯಿತು. ಬೆಸ್ಟ್ ಆಫ್ ತ್ರಿ ಪಂದ್ಯಾಟದ ಮೊದಲ ಪಂದ್ಯದಲ್ಲಿ ರಾಕೇಶ್ ಮಾಲೀಕತ್ವದ ಆದರ್ಶ್ ಅದ್ಕಲೇಗಾರ್ ನಾಯಕತ್ವದ ಮೀಡಿಯಾ ಮಾಸ್ಟರ್ಸ್ ತಂಡ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿತು. ನಿಗದಿತ 8 ಓವರ್‌ನಲ್ಲಿ 4 ವಿಕೆಟ್ ನಷ್ಟಕ್ಕೆ 72 ರನ್ ಕಲೆ ಹಾಕಿತು. ತಂಡದ ಪರ ಪ್ರೇಮ್ 20 ರನ್ ಕಲೆ ಹಾಕಿದರು. ಗುರಿ ಬೆನ್ನಟ್ಟಿದ ನವೀನ್ ಡಿಸೋಜ ಮಾಲೀಕತ್ವದ ಮಂಜುಸುವರ್ಣ ನಾಯಕತ್ವದ ಪವರ್ ಹಿಟ್ಟರ್ಸ್ ತಂಡ 5.2 ಓವರ್‍ ಗಳಲ್ಲಿ ವಿಕೆಟ್ ನಷ್ಟವಿಲ್ಲದೇ ಗೆಲುವಿನ ದಡ ಸೇರಿತು. ತಂಡದ ಪರ ಮಂಜು ಸುವರ್ಣ 58 ರನ್ ಕಲೆ ಹಾಕಿದರು. 2ನೇ ಪಂದ್ಯದಲ್ಲಿ ಟಾಸ್ ಗೆದ್ದ ಮೀಡಿಯಾ ಮಾಸ್ಟರ್ಸ್ ತಂಡ ನಿಗದಿತ ಓವರ್‍ಗಳಲ್ಲಿ 2…

Read More