ಮಡಿಕೇರಿ ಜ.11 NEWS DESK : ಕೆದಮುಳ್ಳೂರು ವಿವಿಧೋದ್ದೇಶ ಸಹಕಾರ ದವಸ ಭಂಡಾರದ ನೂತನ ಅಧ್ಯಕ್ಷರಾಗಿ ಮಾಳೇಟಿರ ಪ್ರಶಾಂತ್ ಉತ್ತಪ್ಪ ಹಾಗೂ ಉಪಾಧ್ಯಕ್ಷರಾಗಿ ಮಾಳೇಟಿರ ಜೀವನ್ ಮುದ್ದಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮುಂದಿನ ಐದು ವರ್ಷಗಳ ಅವಧಿಗೆ ನಡೆದ ಚುನಾವಣೆಯಲ್ಲಿ ಮಾಳೇಟಿರ ಪ್ರಶಾಂತ್ ಉತ್ತಪ್ಪ, ಮಾಳೇಟಿರ ಜೀವನ್ ಮುದ್ದಯ್ಯ, ಮಾಳೇಟಿರ ಬೃಂದ ತಿಮ್ಮಯ್ಯ, ಪುದಿಯನೆರವನ ಡಾಲು ಪೂಣಚ್ಚ, ಬಿ.ಕೆ.ಸಹದೇವ, ತಂಬಂಡ ಇಮ್ಮಿ ಪೊನ್ನಪ್ಪ, ಪ್ರವೀಣ್ ಕ್ರಾಸ್ತ, ಮಾಳೇಟಿರ ಡಾಟಿ ಗಣಪತಿ, ತುಳಸಿ ಹಾಗೂ ಬಿ.ಜೆ.ಅನಿತಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಕೆದಮುಳ್ಳೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಣಿ ಕಾರ್ಯನಿರ್ವಹಿಸಿದರು.
ಲೇಖಕ: admin
ಮಡಿಕೇರಿ ಜ.11 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸಂಸ್ಕೃತ ಸಿರಿಬಳಗ ಟ್ರಸ್ಟ್ ಹಾಗೂ ಬೆಟ್ಟದಳ್ಳಿ ಯಶೋದೆ ರಂಗ ಟ್ರಸ್ಟ್, ಸಂಯುಕ್ತ ಆಶ್ರಯದಲ್ಲಿ ಜ.13 ರಂದು ನಿರ್ದಿಗಂತ ಪ್ರಸ್ತುತಪಡಿಸುವ “ತಿಂಡಿಗೆ ಬಂದ ತುಂಡೇರಾಯ” ಉಚಿತ ನಾಟಕ ಪ್ರದರ್ಶನ ನಡೆಯಲಿದೆ.ಮಡಿಕೇರಿಯ ಪೊಲೀಸ್ ಮೈತ್ರಿ ಭವನದಲ್ಲಿ ಸಂಜೆ 6.30ಕ್ಕೆ ನಡೆಯಲಿದ್ದು, ಕೊಡಗು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಜರಾಮನ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ವಹಿಸಲಿದ್ದಾರೆ. ನಾಟಕಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶ ದೊರೆಯಲಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ, ಎಸ್.ಐ ಮುನಿರ್ ಅಹಮದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೂಲ ಬರ್ಟೋಲ್ಟ್ ಬ್ರೆಕ್ಟ್ ಅವರ ಆಂಗ್ಲ ನಾಟಕ “The Resistable Rise of Arture Ui”ನ ಅನುವಾದಿತ ನಾಟಕ ಇದಾಗಿದ್ದು, ದೇಶ ಕಂಡ ಅತ್ಯುತ್ತಮ ನಟ ಪ್ರಕಾಶ್ ರಾಜ್ ರೈ ಅವರ ನಿರ್ದಿಗಂತ ತಂಡದಿಂದ…
ಮಡಿಕೇರಿ ಜ.11 NEWS DESK : ಕೊಡಗು ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಸ್ತೆ ಹಾಗೂ ಕಟ್ಟಡ ಕಾಮಗಾರಿ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ವಿರಾಜಪೇಟೆ ತಾಲ್ಲೂಕು ಕಚೇರಿಯಲ್ಲಿ ನಡೆದ ಸಭೆಯಲ್ಲಿ ವಿವಿಧ ಕಾಮಗಾರಿ ಬಗ್ಗೆ ಮಾಹಿತಿ ಪಡೆದರು. ಸಭೆಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮಾತನಾಡಿ ರಸ್ತೆ ಸೇರಿದಂತೆ ನಗರದಲ್ಲಿ ಇನ್ನೂ ಪೂರ್ಣಗೊಳ್ಳಬೇಕಿರುವ ಕೊಡವ ಹೆರಿಟೇಜ್ ಸೆಂಟರ್, ಕನ್ನಡ ಸುವರ್ಣ ಸಮುಚ್ಚಯ ಭವನ ನಿರ್ಮಾಣ ಕಾಮಗಾರಿ ಹಾಗೂ ಮಂಗಳೂರು ರಸ್ತೆಯ ತಡೆಗೋಡೆ ಬಗ್ಗೆ ಬೆಳಕು ಚೆಲ್ಲಿದರು. ಮಡಿಕೇರಿ ನಗರದ ಹೊರವಲಯದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಪಾಸ್ ನಿರ್ಮಾಣ ಮಾಡಬೇಕಿತ್ತು ಆದರೆ ಇದನ್ನು ಕೈಗೊಳ್ಳಲಿಲ್ಲ, ಜೊತೆಗೆ ತಡೆಗೋಡೆ ಕಾಮಗಾರಿಯನ್ನು ಡಿಸೆಂಬರ್ 31ರೊಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಅವರು ನಿರ್ದೇಶನ ನೀಡಿದ್ದರೂ ಕೆಲಸ ಆಗಿಲ್ಲ ಎಂದು ಶಾಸಕರು ಸಚಿವರ ಗಮನಕ್ಕೆ ತಂದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ರಸ್ತೆ ಹಾಗೂ…
ಮಡಿಕೇರಿ ಜ.11 NEWS DESK : ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಜ.13 ರಂದು ಸಂಜೆ 4 ಗಂಟೆಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾಧಿಗಳು ದೇವಾಲಯದಲ್ಲಿ ನಡೆಯುವ ಸಾಮೂಹಿಕ ಸತ್ಯನಾರಾಯಣ ಪೂಜೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ಕೋರಿದ್ದಾರೆ.
ಮಡಿಕೇರಿ ಜ.11 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮವು ಜನವರಿ, 14 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಡಾ.ಧನಂಜಯ ಸರ್ಜಿ, ಎಸ್.ಎಲ್.ಭೋಜೇಗೌಡ, ಜಿಲ್ಲಾ ಬೋವಿ ಸಮಾಜದ ಅಧ್ಯಕ್ಷರಾದ ಡಿ.ಸುಜಿತ್, ಸರಸ್ವತಿ ಡಿಎಡ್ ಕಾಲೇಜಿನ ಪ್ರಾಂಶುಪಾಲರಾದ ಕುಮಾರ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಇತರರು ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಜ.11 NEWS DESK : ಬಾಲಂಬಿ ಹನುಮಾನ್ ಯುವಕ ಮಂಡಲ ರಚನೆಯಾಗಿದ್ದು, 2024-25ರ ಅವಧಿಗೆ ನೂತನ ಅಧ್ಯಕರಾಗಿ ಸತೀಶ್ ಎ.ಸಿ. ಆನ್ಯಾಳ ಆಯ್ಕೆಯಾದರು. ಆನ್ಯಾಳದ ಧ್ವಾಕ್ರ ಭವನದಲಿ ನಡೆದ ಕಾರ್ಯಕ್ರಮವನ್ನು ಅಜಿಲ ಯಾನೆ ನಲಿಕೆ ಸಮಿತಿಯ ಮಾಜಿ ಅಧ್ಯಕ್ಷರಾದ ಕೆ.ಕೆ.ಬಾಲಕೃಷ್ಣ ಉದ್ಘಾಟಿಸಿದರು. ದಬ್ಬಡ್ಕ್ ಕಾಂತುಬೈಲ್ ಶ್ರೀರಾಮ ಯುವಕ ಮಂಡಲದ ಸ್ಥಾಪಕ ಬಿ.ಎಸ್. ಪ್ರಜ್ವಲ್ ಯುವಕ ಮಂಡಲದ ಆಗು ಹೋಗುಗಳ ಬಗ್ಗೆ ಮಾಹಿತಿ ನೀಡಿದರು. ಅಜಿಲ ಯಾನೆ ನಲಿಕೆ ಸಮಿತಿಯ ಅಧ್ಯಕ್ಷ ಕೆ.ಕೆ.ದೇವಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಬಿ.ಚಂದಪ್ಪ, ಸದಸ್ಯರಾದ ಕುಮಾರ್ ಕಲ್ಲುಗುಂಡಿ, ಕೆ.ಕೆ.ಶಿವಪ್ಪ, ಬಿ.ಕೃಷ್ಣಪ್ಪ ಹಾಜರಿದ್ದರು. ಸಿ.ಅರುಣ್ ನಿರೂಪಿಸಿದರು. ನೂತನ ಪದಾಧಿಕಾರಿಗಳು :: ಪ್ರಧಾನ ಕಾರ್ಯದರ್ಶಿಯಾಗಿ ಕೌಶಿಕ್ ಆನ್ಯಾಳ, ಕೋಶಧಿಕಾರಿಯಾಗಿ ಅಶ್ವಿನ್ ಕೊಯನಾಡು, ಹಿರಿಯ ಸಲಹೆಗರರಾಗಿ ಕೆ.ಕೆ.ದೇವಪ್ಪ ಮತ್ತು ಕೆ.ಬಿ.ಚಂದಪ್ಪ ಅವರನ್ನು ಆಯ್ಕೆ ಮಾಡಲಾಯಿತು.
ಮಡಿಕೇರಿ ಜ.11 NEWS DESK : 2025-26ನೇ ಸಾಲಿಗೆ ಏಕಲವ್ಯ ಮಾದರಿ ವಸತಿ ಶಾಲೆ, ಬಾಳುಗೋಡು, ವಿರಾಜಪೇಟೆ ತಾಲ್ಲೂಕು ಇಲ್ಲಿ 6ನೇ ತರಗತಿಗೆ ಪ್ರವೇಶಾತಿ ಪ್ರಾರಂಭವಾಗಿದ್ದು, ಈ ಸಂಬಂಧ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ವರ್ಗಗಳ 5ನೇ ತರಗತಿಯಲ್ಲಿ ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಪ್ರವೇಶಾತಿಯು ರಾಷ್ಟ್ರೀಯ ಬುಡಕಟ್ಟು ವಿದ್ಯಾರ್ಥಿಗಳ ಶೈಕ್ಷಣಿಕ ಸಂಘ, ನವದೆಹಲಿ ಅವರು ರೂಪಿಸಿರುವ ನಿಯಮಗಳಿಗೆ ಬದ್ಧವಾಗಿದ್ದು, ಪ್ರವೇಶಾತಿ ಪರೀಕ್ಷೆಯ ಮೂಲಕ ಸಂಪೂರ್ಣ ಪಾರದರ್ಶಕವಾಗಿ ಪ್ರವೇಶಾತಿಯನ್ನು ಕಲ್ಪಿಸಲಾಗಿದ್ದು, ಅರ್ಜಿಯನ್ನು ಜನವರಿ, 31 ರೊಳಗೆ ಸಲ್ಲಿಸಬಹುದು. ಅರ್ಜಿಯನ್ನು ಪಡೆಯಲು ಮೇವಾ ಲಾಲ್ ಖಟಿಕ್, ಪ್ರಾಂಶುಪಾಲರು, ಏಕಲವ್ಯ ಮಾದರಿ ವಸತಿ ಶಾಲೆ, ಬಾಳುಗೋಡು, ವಿರಾಜಪೇಟೆ ತಾಲ್ಲೂಕು, ಕೊಡಗು ಜಿಲ್ಲೆ. ಮೊಬೈಲ್ ಸಂಖ್ಯೆ: 9828472732. ಸುಭಾಷ್ ಎಂ, ಕನ್ನಡ ಶಿಕ್ಷಕರು, ಏಕಲವ್ಯ ಮಾದರಿ ವಸತಿ ಶಾಲೆ, ಬಾಳುಗೋಡು, ವಿರಾಜಪೇಟೆ ತಾಲ್ಲೂಕು, ಕೊಡಗು ಜಿಲ್ಲೆ. ಮೊಬೈಲ್ ಸಂಖ್ಯೆ: 9164709751 ಹಾಗೂ ಮನೋಜ್ ಕುಮಾರ್ ಸಿ.ಎಂ, ಜೀವಶಾಸ್ತ್ರ ಉಪನ್ಯಾಸಕರು, ಏಕಲವ್ಯ…
ಮಡಿಕೇರಿ ಜ.11 NEWS DESK : ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯಲ್ಲಿ 2023-24ನೇ ಸಾಲಿನಲ್ಲಿ ಸ್ನಾತಕ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಪದವಿಯಲ್ಲಿ ತೇರ್ಗಡೆಯಾಗಿ ಉದ್ಯೋಗ ಸಿಗದ ಅರ್ಹ ಅಭ್ಯರ್ಥಿಗಳು, ಪದವೀಧರರಿಗೆ ಪ್ರತಿ ತಿಂಗಳಿಗೆ ರೂ.3 ಸಾವಿರ ಹಾಗೂ ಡಿಪ್ಲೋಮಾ ಪದವೀಧರರಿಗೆ ರೂ.1500 ನಿರುದ್ಯೋಗಿ ಭತ್ಯೆಯನ್ನು ನೀಡಲಾಗುತ್ತದೆ. ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿನಗಳು ಪೂರೈಸಿ ಹೆಸರನ್ನು ನೋಂದಯಿಸಿಕೊಂಡ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ. ವಿಶೇಷ ನೋಂದಣಿ ಅಭಿಯಾನವು ಜನವರಿ 20 ರವರೆಗೆ ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯಿತಿ ಕಚೇರಿಯ ಆವರಣದಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ಇವರ ದೂರವಾಣಿ ಸಂಖ್ಯೆ 8296020826 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮಡಿಕೇರಿ NEWS DESK ಜ.10 : ರಾಷ್ಟ್ರೀಯ ಹೆದ್ದಾರಿ ವಿಭಾಗ ವ್ಯಾಪ್ತಿಯ ಕೇಂದ್ರ ರಸ್ತೆ ನಿಧಿ ಮೂಲ ಸೌಕರ್ಯ ಯೋಜನೆಯಡಿ ವಿರಾಜಪೇಟೆ ಭಾಗದ ಕೊಣನೂರು- ಮಾಕುಟ್ಟ ರಾಜ್ಯ ಹೆದ್ದಾರಿ 91 ರಡಿ 6 ಕೋಟಿ ರೂ ವೆಚ್ಚದ ರಸ್ತೆ ಅಗಲೀಕರಣ ಕಾಮಗಾರಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಲೋಕೋಪಯೋಗಿ ಸಚಿವರು ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ರಸ್ತೆ ಅಭಿವೃದ್ಧಿಗೆ ಸುಮಾರು 60 ಕೋಟಿ ರೂ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು. ಕೊಡಗು ಜಿಲ್ಲೆಯಲ್ಲಿ ರಸ್ತೆ ಅಭಿವೃದ್ಧಿಗೆ ಆದ್ಯತೆ ಮೇಲೆ ಕ್ರಮವಹಿಸಲಾಗಿದೆ. ಹಂತ ಹಂತವಾಗಿ ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು. ಲೋಕೋಪಯೋಗಿ ಇಲಾಖೆ ವತಿಯಿಂದ ರಾಷ್ಟ್ರೀಯ ಹೆದ್ದಾರಿ ವಿಭಾಗದಲ್ಲಿ ದಕ್ಷಿಣ ವಲಯ ವ್ಯಾಪ್ತಿಯಲ್ಲಿ 163 ಕಾಮಗಾರಿ ಕೈಗೊಳ್ಳಲಾಗುತ್ತಿದ್ದು ಸುಮಾರು 705 ಕೋಟಿ ಹಾಗೂ ಉತ್ತರ ವಲಯದಲ್ಲಿ 132 ಕಾಮಗಾರಿ ಕೈಗೊಳ್ಳಲಾಗಿದ್ದು, ಸುಮಾರು 680 ಕೋಟಿ ರೂ…






