ಲೇಖಕ: admin

ಮಡಿಕೇರಿ ಜ.10 NEWS DESK : ನಗರದ ಕೋಟೆ ಮಹಿಳಾ ಸಮಾಜದಲ್ಲಿ ಹೊಸ ವರ್ಷಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ  ಈಶ್ವರೀಯ ವಿಶ್ವವಿದ್ಯಾನಿಲಯದ ಸಮರ್ಪಿತ ಸಹೋದರಿ ಬಿ.ಕೆ. ಧನಲಕ್ಷ್ಮಿ ಅಕ್ಕನವರು ಮಹಿಳೆಯರಿಗೆ ಮನ:ಶಾಂತಿ ಮತ್ತು ಮನೆಯ ಶಾಂತಿಗಾಗಿ ಧ್ಯಾನದ ಮೂಲಕ ಜಾಗೃತಿ ಮೂಡಿಸಿ ವಿಶೇಷ ಉಪನ್ಯಾಸ ನೀಡಿದರು. ಮಹಿಳೆಯರಿಗೆ ಮನಸ್ಸಿನ ಶಾಂತಿಗಾಗಿ ಧ್ಯಾನ ಬಹಳ ಪೂರಕವಾಗಿರಬೇಕು. ಧ್ಯಾನದಲ್ಲಿ ಯಾವ ಮಾತುಗಳ ಬಗ್ಗೆ ಅರಿವಿರಬೇಕು ಮತ್ತು ಶಾಂತಿಯಿಂದಿದ್ದಾಗ ಸಂಸಾರದಲ್ಲಿ ಎಷ್ಟು ಸುಖ ನೆಮ್ಮದಿಯಿರುತ್ತದೆ. ಶಾಂತಿಯಿದ್ದಾಗ ಮನುಷ್ಯನ ಮನಸ್ಸು ಎಷ್ಟು ಪ್ರಫುಲ್ಲಿತವಾಗಿರುತ್ತದೆ. ಶಾಂತಿಯಿಂದ ತಮ್ಮ ಕಾರ್ಯವ್ಯವಹಾರ ಮಾಡುತ್ತಿದ್ದಾಗ ನಮ್ಮ ಸುತ್ತಲೂ ಎಷ್ಟು ಸಕಾರಾತ್ಮಕ ತರಂಗಗಳ ಅನುಭವ ಮಾಡುತ್ತೇವೆ ಎಂಬುದನ್ನು ಕ್ರಿಯಾ ಚಟುವಟಿಕೆಗಳ ಮೂಲಕ  ಮಹಿಳೆಯರಿಗೆ ಅನುಭವ ಮಾಡಿಸಿದರು. ತಮ್ಮ ಶರೀರ ಮತ್ತು ಮನಸ್ಸಿನ ಸ್ವಾಸ್ಥ್ಯಕ್ಕಾಗಿ ಗಮನ ನೀಡಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಮಹಿಳಾ ಸಮಾಜದ ಅಧ್ಯಕ್ಷರಾದ  ಅರವಿಂದ, ಉಪಾಧ್ಯಕ್ಷರಾದ  ಕಸ್ತೂರಿ ಗೋವಿಂದಮ್ಮಯ್ಯ ಎಲ್ಲರನ್ನು ಸ್ವಾಗತಿಸಿ, ಹೊಸ ವರ್ಷದ ಶುಭಾಶಯ ಕೋರಿದರು.  ಕಮಲಾ ಮುರುಗೇಶ್ ಹಾಗೂ ಕಾವೇರಮ್ಮ…

Read More

ಮಡಿಕೇರಿ ಜ.10 NEWS DESK : ನಗರದ ಎಸ್.ಆರ್.ವಿ ವತಿಯಿಂದ ದ್ವಿತೀಯ ಬಾರಿಗೆ ಹೊನಲು ಬೆಳಕಿನ ಫುಟ್ಬಾಲ್ ಪ್ರೀಮಿಯರ್ ಲೀಗ್ ಪಂದ್ಯಾವಳಿಯು ಜ.11 ಮತ್ತು 12 ರಂದು  ಮಡಿಕೇರಿಯ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಮಡಿಕೇರಿ ನಗರದ ಕ್ರೀಡಾಪಟುಗಳಿಗೆ ಮಾತ್ರ ಸೀಮಿತವಾಗಿದ್ದು, ಒಟ್ಟು ಹನ್ನೆರಡು ಮಾಲೀಕತ್ವದ ಹನ್ನೆರಡು ತಂಡಗಳು ಪಾಲ್ಗೊಳ್ಳಲಿದೆ. ಟೀಮ್ ಕೆ. ಸಿ.ಎಂ, ಟೀಮ್ ಭಗವತಿ, ಕೂರ್ಗ್ ಚಾಮರ್ಸ್, ಟೀಮ್ ಒನ್ ಟಚ್, ಟೀಮ್ ಬ್ರದರ್ಸ್, ವೆಸ್ಟನ್ ಎಫ್ ಸಿ, ವೈಲ್ಡ್ ಮಾಸ್ಟರ್ಸ್, ಟೀಮ್ ಆರ್ ಆರ್ ಬ್ರದರ್ಸ್ , ಟರ್ಬೊ ಎಫ್ ಸಿ, ಸ್ಕೈ ಲೈನ್ ಹಾಗೂ ಫೋನಿಕ್ಸ್ ತಂಡಗಳ ನಡುವೆ ಪಂದ್ಯಗಳು ನಡೆಯಲಿವೆ. ಪಂದ್ಯ ಕೂಟದ ವಿನ್ನರ್ಸ್ ತಂಡಕ್ಕೆ 35,000 ನಗದು ಹಾಗೂ ಆಕರ್ಷಕ ಟ್ರೊಫಿ, ರನ್ನರ್ಸ್ ತಂಡಕ್ಕೆ 25,000 ನಗದು ಹಾಗೂ ಆಕರ್ಷಕ ಟ್ರೊಫಿ, ತೃತೀಯ ತಂಡಕ್ಕೆ 10,000 ನಗದು ಹಾಗೂ ಆಕರ್ಷಕ ಟ್ರೊಫಿ ಅಲ್ಲದೇ ವೈಯಕ್ತಿಕ ಟ್ರೊಫಿಗಳು ಕೂಡ ಕ್ರೀಡಾಪಟುಗಳಿಗೆ ಸಿಗಲಿದೆ.  ಕ್ರೀಡಾ ಕೂಟವನ್ನು ಮಡಿಕೇರಿ…

Read More

ಕುಶಾಲನಗರ ಜ.10 NEWS DESK : ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ತಾಲ್ಲೂಕಿನ‌ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಾಲ್ಕು ದಿನಗಳ ಕಾಲ ಏರ್ಪಡಿಸಿರುವ ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮಕ್ಕೆ ಕುಶಾಲನಗರದಲ್ಲಿ  ಚಾಲನೆ ನೀಡಲಾಯಿತು. 8 ಮತ್ತು 9 ನೇ ತರಗತಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿರುವ 4 ದಿನಗಳ ಶೈಕ್ಷಣಿಕ ಪ್ರವಾಸ ಕಾರ್ಯಕ್ರಮಕ್ಕೆ ಕುಶಾಲನಗರದ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾವರಣದಲ್ಲಿ ಕುಶಾಲನಗರ ಪುರಸಭೆಯ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರು ಚಾಲನೆ ನೀಡಿದರು. ಪ್ರವಾಸಿ ಮಕ್ಕಳಿಗೆ ಕಿಟ್ ವಿತರಿಸಿ ಮಾತನಾಡಿದ ಪುರಸಭೆಯ ಅಧ್ಯಕ್ಷೆ ಜಯಲಕ್ಷ್ಮಿ, ವಿದ್ಯಾರ್ಥಿ ಜೀವನದಲ್ಲಿ ಕೈಗೊಳ್ಳಬಹುದಾದ ಶೈಕ್ಷಣಿಕ ಪ್ರವಾಸಗಳು ಶಾಶ್ವತ ಕಲಿಕೆಯೊಂದಿಗೆ ಜೀವನದ ಅನುಭವ ನೀಡುತ್ತವೆ. ವಿದ್ಯಾರ್ಥಿಗಳು ಉತ್ತಮ ಪ್ರವಾಸಿ ಕೇಂದ್ರಗಳೊಂದಿಗೆ ಐತಿಹಾಸಿಕ ಸ್ಥಳಗಳನ್ನು ವೀಕ್ಷಿಸುವ ಮೂಲಕ ಉತ್ತಮ ಅನುಭವ ಪಡೆದುಕೊಂಡು ತಮ್ಮ ಜ್ಞಾನ ವೃದ್ಧಿಸಿಕೊಳ್ಳಬೇಕು ಎಂದರು. ಪ್ರವಾಸದ ರೂಪುರೇಷೆ ಕುರಿತು ಮಾಹಿತಿ ನೀಡಿದ ತಾಲೂಕು ನೋಡೆಲ್ ಅಧಿಕಾರಿ…

Read More

ಮಡಿಕೇರಿ ಜ.10 NEWS DESK : ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಏರ್ ಮಾಷ೯ಲ್ ನಾಗೇಶ್ ಕಪೂರ್ ಭೇಟಿ ನೀಡಿ ವ್ಯವಸ್ಥೆಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಮಡಿಕೇರಿಯಲ್ಲಿರುವ ಜನರಲ್ ತಿಮ್ಮಯ್ಯ ಜನ್ಮನಿವಾಸ ಸನ್ನಿಸೈಡ್ ಗೆ ಭೇಟಿ ನೀಡಿದ್ದ ವಾಯುಪಡೆಯ ತರಬೇತಿ ವಿಭಾಗದ ಬೆಂಗಳೂರಿನ ಮುಖ್ಯಸ್ಥರಾದ ಏರ್ ಮಾಷ೯ಲ್ ನಾಗೇಶ್ ಕಪೂರ್ ಸ್ಮಾರಕ ಭವನದ ಬಗ್ಗೆ ಮತ್ತು ವೀರಸೇನಾಧಿಕಾರಿ ಜನರಲ್ ತಿಮ್ಮಯ್ಯ ಅವರ ಸೇನಾ ಜೀವನ ಸಂಬಂಧಿತ ಸಮಗ್ರ ಮಾಹಿತಿ ಪಡೆದರು. ಈ ಸಂದಭ೯ ಪ್ರತಿಕ್ರಿಯಿಸಿದ ಏರ್ ಮಾಷ೯ಲ್ ನಾಗೇಶ್ ಕಪೂರ್, ಭಾರತದ ವೀರಸೇನಾನಿಯ ಬಗ್ಗೆ ಸಂಪೂಣ೯ ಮಾಹಿತಿಯುಳ್ಳ ಸ್ಮಾರಕ ಭವನಕ್ಕೆ ಭೇಟಿ ನೀಡಿದ್ದು, ಅಪೂವ೯ ಕ್ಷಣಗಳಾಗಿದೆ, ಈ ವೀರಸೇನಾನಿಯ ಜೀವನ ಯುವಪೀಳಿಗೆಗೆ ಆದಶ೯ಪ್ರಾಯವಾಗಬೇಕೆಂದು ಅಭಿಪ್ರಾಯಪಟ್ಟರು. ಈ ಸಂದಭ೯ ಸ್ಮಾರಕ ಭವನದ ವ್ಯವಸ್ಥಾಪಕರಾದ ಸುಬೇದಾರ್ ಮೇಜರ್ ಗೌಡಂಡ ತಿಮ್ಮಯ್ಯ ಅವರು ಭವನದ ಮಾಹಿತಿ ನೀಡಿದರು. ಕನ್ಡಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿದೇ೯ಶಕ ಕುಮಾರ್, ಸೈನಿಕ ಕಲ್ಯಾಣಾಧಿಕಾರಿ ಬಿ.ಆರ್. ಶೆಟ್ಟಿ , ಜನರಲ್…

Read More

ಮಡಿಕೇರಿ NEWS DESK ಜ.10 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದಲ್ಲಿ ಉಂಟಾಗಿರುವ ಭಿನ್ನಾಭಿಪ್ರಾಯಗಳನ್ನು ಶಮನ ಮಾಡಲು ಎಲ್ಲರೂ ಒಗ್ಗಟ್ಟಾಗಿ ಪ್ರಯತ್ನಿಸಬೇಕೆ ಹೊರತು ಮತ್ತೆ ಅಶಾಂತಿಗೆ ಪ್ರಚೋದನೆ ನೀಡಬಾರದು ಎಂದು ಕೊಡಗು ಜಿಲ್ಲಾ ಒಕ್ಕಲಿಗರ ಸಂಘ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಂ.ಚಂಗಪ್ಪ ಅವರು ಕೆಲವರು ಒಂದು ಗ್ರಾಮದ ದೇವಾಲಯದಲ್ಲಿ ಎದುರಾದ ಭಿನ್ನಾಭಿಪ್ರಾಯವನ್ನೇ ಬಂಡವಾಳ ಮಾಡಿಕೊಂಡು ಜಾತಿ ನಿಂದನೆ ಮತ್ತು ಪ್ರಚೋದನೆಯಲ್ಲಿ ತೊಡಗಿರುವುದನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದ್ದಾರೆ. ವಿನಾಕಾರಣ ಇಲ್ಲಸಲ್ಲದ ಗೊಂದಲಗಳನ್ನು ಸೃಷ್ಟಿಸಿ ಸಮಾಜದಲ್ಲಿ ಯಾರೂ ಅಶಾಂತಿ ಮೂಡಿಸಬಾರದು. ದೇವರು ಅಥವಾ ದೇವಾಲಯದ ಹೆಸರಿನಲ್ಲಿ ಹೇಳಿಕೆ ಪ್ರತಿ ಹೇಳಿಕೆಗಳನ್ನು ನೀಡಿ ಸಮಸ್ಯೆಯನ್ನು ಮತ್ತಷ್ಟು ಜಟಿಲಗೊಳಿಸುತ್ತಿರುವ ಬೆಳವಣಿಗೆ ಪ್ರಜ್ಞಾವಂತರ ಜಿಲ್ಲೆ ಕೊಡಗು ತಲೆತಗ್ಗಿಸುವಂತ್ತಾಗಿದೆ. ಜಿಲ್ಲಾಧಿಕಾರಿಗಳು ಈಗಾಗಲೇ ಶ್ರೀ ಮಹಾಮೃತ್ಯುಂಜಯ ದೇವಾಲಯ ಸಮಿತಿಗೆ ಗೊಂದಲ ನಿವಾರಣೆಗೆ ಫೆ.10 ರವರೆಗೆ ಕಾಲಾವಕಾಶವನ್ನು ನೀಡಿದ್ದು, ಜಿಲ್ಲಾಡಳಿತದ ಆದೇಶವೇ ಅಂತಿಮ ಪರಿಹಾರ ಎನ್ನಿಸಿಕೊಳ್ಳುತ್ತದೆ. ಇದನ್ನು ತಾಳ್ಮೆಯಿಂದ ನಿರೀಕ್ಷಿಸುವ ಬದಲು ಜಾತಿಯ ಹೆಸರಿನಲ್ಲಿ…

Read More

ಬೆಂಗಳೂರು ಜ.10 NEWS DESK : ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಇಂದು ಬಿಜೆಪಿ ಮಾಜಿ ಸಚಿವರು, ಮಾಜಿ ಶಾಸಕರು, ಮತ್ತು ಮಾಜಿ ವಿಧಾನ ಪರಿಷತ್ ಸದಸ್ಯರ ವಿಶೇಷ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿ  ಬಿ.ಎಸ್.ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಮಾಜಿ ಸಚಿವರು, ಮಾಜಿ ಶಾಸಕರು, ಪರಿಷತ್‌ ಸದಸ್ಯರು, ರಾಜ್ಯ ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

Read More

ಮಡಿಕೇರಿ ಜ.10 NEWS DESK : ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಜ.12 ರಿಂದ 18ರ ವರೆಗೆ ಜಿಲ್ಲೆಯ ಯುವಕ ಸಂಘ, ಯುವತಿ ಮಂಡಳಿ, ಮಹಿಳಾ ಸಮಾಜ ಹಾಗೂ ಶಾಲಾ ಕಾಲೇಜುಗಳ ಆಶ್ರಯದಲ್ಲಿ ಮಡಿಕೇರಿಯಲ್ಲಿ ರಾಷ್ಟ್ರೀಯ ಯುವ ದಿನ ಹಾಗೂ ಯುವ ಸಪ್ತಾಹ ನಡೆಯಲಿದ್ದು, ಜ.13 ರಂದು ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲಾಡಳಿತ, ಜಿ.ಪಂ ಕೊಡಗು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಮಡಿಕೇರಿ, ಜಿಲ್ಲಾ ಯುವ ಒಕ್ಕೂಟ ಕೊಡಗು, ಮಡಿಕೇರಿ, ವಿರಾಜಪೇಟೆ ಹಾಗೂ ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ, ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಜಿಲ್ಲೆಯ ಯುವಕ ಸಂಘ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು. ಜ.13 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿರುವ ಜಿಲ್ಲಾ…

Read More

ವಿರಾಜಪೇಟೆ ಜ.16 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವಿರಾಜಪೇಟೆ ಬಿ.ಸಿ ಟ್ರಸ್, ಸ್ವಸಹಾಯ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಭತ್ತದ ಬೆಳೆಯ ಕ್ಷೇತ್ರೋತ್ಸವ ಕಾರ್ಯಕ್ರಮವು ಅಮ್ಮತ್ತಿ ವಲಯದ ಹಾಲ್ಗುಂದ ಕಾರ್ಯಕ್ಷೇತ್ರದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಪ್ರಗತಿಪರ ಕೃಷಿಕ ನಾಣಯ್ಯ ಮಾತನಾಡಿ, ಯಂತ್ರಶ್ರೀ ಭತ್ತದ ಬೇಸಾಯದಿಂದ ಕಡಿಮೆ ಖರ್ಚು ಅಧಿಕ ಇಳುವರಿ ಪಡೆಯಬಹುದು. ಮುಂದಿನ ದಿನಗಳಲ್ಲಿ ಯಂತ್ರಶ್ರೀ ಭತ್ತದ ಬೇಸಾಯ ಮಾಡಿ ಎಂದು ಮಾಹಿತಿ ನೀಡಿದರು. ಕೃಷಿ ಮೇಲ್ವಿಚಾರಕ ವಸಂತ್ ಭತ್ತದ ಸಸಿ ಮಡಿ ಟ್ರೇಗಳ ಬಳಕೆ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಹಾಲ್ಗುಂದ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸ್ಮಿತಾ, ಒಕ್ಕೂಟದ ಅಧ್ಯಕ್ಷರಾದ ನೇತ್ರಾವತಿ, ಕಾರ್ಯದರ್ಶಿ ರತ್ನ, ಗದ್ದೆಯ ಮಾಲೀಕರಾದ ತಾಯಮ್ಮ, ಊರಿನ ಗ್ರಾಮಸ್ಥರು, ಸಂಘದ ಸದಸ್ಯರು, ಹಾಲ್ಗುಂದ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಮೀನಾಕ್ಷಿ, ಚೆಂಬೆಬೆಳ್ಳೂರು ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ದೇವಕ್ಕಿ ಹಾಜರಿದ್ದರು.

Read More

ಮಡಿಕೇರಿ ಜ.10 NEWS DESK : ಕೊಡಗು ಜಿಲ್ಲೆಗೆ ಆಗಮಿಸುತ್ತಿರುವ ಲೋಕೋಪಯೋಗಿ ಸಚಿವರಾದ  ಸತೀಶ್ ಜಾರಕಿಹೊಳಿ ಅವರನ್ನು ಆನೆ ಚೌಕೂರ್ ಗೇಟ್ ಬಳಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ  ಧರ್ಮಜ ಉತ್ತಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಸ್ವಾಗತಿಸಿದರು.  ಸಚಿವರೊಂದಿಗೆ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಹಾಗೂ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ಎಸ್.ಆರ್. ಮೆಹರೋಜ್ ಖಾನ್ ಮತ್ತಿತರ ಪ್ರಮುಖರು ಆಗಮಿಸಿದರು. ಈ ಸಂದರ್ಭ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಹಿರಿಯ-ಕಿರಿಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.

Read More

ಮಡಿಕೇರಿ ಜ.10 NEWS DESK : ಶ್ರೀ ಕಾವೇರಮ್ಮೆ ಕೊಡವ ಮತ್ತು ಅಮ್ಮಕೊಡವ ಹಿತರಕ್ಷಣಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಲೋಕ ಕಲ್ಯಾಣಕ್ಕಾಗಿ ಜ.15 ರಂದು ಕಾವೇರಿ ಕ್ಷೇತ್ರವಾದ ಭಾಗಮಂಡಲದ ಟ್ರಸ್ಟ್‍ನ ಜಾಗದಲ್ಲಿ 12ನೇ ವರ್ಷದ ‘ಚಂಡಿಕಾ ಹೋಮ’ವನ್ನು ಒಳಗೊಂಡಂತೆ ವಿವಿಧ ಪೂಜಾ ಕಾರ್ಯಗಳು ನಡೆಯಲಿದೆ ಎಂದು ಟ್ರಸ್ಟ್‍ನ ಅಧ್ಯಕ್ಷ ಮುದ್ದಂಡ ಬಿ.ದೇವಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅಂದು ಬೆಳಗ್ಗೆ 7 ಗಂಟೆಯಿಂದ ಶ್ರೀ ಗಣಪತಿ ಹೋಮ, ಶ್ರೀ ಸತ್ಯನಾರಾಯಣ ಸ್ವಾಮಿ ಪೂಜೆ, ಶತರುದ್ರ ಪಠಣ ಹಾಗೂ ಚಂಡಿಕಾ ಹೋಮ ನಡೆಯಲಿದೆ. ಜಿಲ್ಲೆಯ ಕೊಡವ ಮತ್ತು ಅಮ್ಮಕೊಡವ ಜನಾಂಗ ಬಾಂಧವರು ಒಂದಾಗಿ ಸೇರಿ ಟ್ರಸ್ಟ್‍ನ ಸಹಯೋಗದಲ್ಲಿ ಚಂಡಿಕಾ ಹೋಮವನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು. ಈ ಹಿಂದೆ ಅಷ್ಟಮಂಗಲ ಪ್ರಶ್ನೆಯ ಸಂದರ್ಭ ಕಂಡು ಬಂದ ದೋಷಗಳ ನಿವಾರಣೆಗಾಗಿ ನಿರಂತರವಾಗಿ ಚಂಡಿಕಾ ಯಾಗವನ್ನು ನಡೆಸಿಕೊಂಡು ಬರಲಾಗುತ್ತಿದೆ. ಧಾರ್ಮಿಕ ಕಾರ್ಯ ಮುಂದೆಯೂ ನಡೆಸಿಕೊಂಡು ಹೊಗಬೇಕೆಂದು ಇದ್ದಲ್ಲಿ ಅದಕ್ಕೂ ಟ್ರಸ್ಟ್ ಸಿದ್ಧವಿರುವುದಾಗಿ…

Read More