ಮಡಿಕೇರಿ ಜ.10 NEWS DESK : ಕೊಡಗು ಜಿಲ್ಲೆಗೆ ಆಗಮಿಸುತ್ತಿರುವ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರನ್ನು ಆನೆ ಚೌಕೂರ್ ಗೇಟ್ ಬಳಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಸ್ವಾಗತಿಸಿದರು. ಸಚಿವರೊಂದಿಗೆ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಹಾಗೂ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ಎಸ್.ಆರ್. ಮೆಹರೋಜ್ ಖಾನ್ ಮತ್ತಿತರ ಪ್ರಮುಖರು ಆಗಮಿಸಿದರು. ಈ ಸಂದರ್ಭ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಹಿರಿಯ-ಕಿರಿಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.
ಲೇಖಕ: admin
ಮಡಿಕೇರಿ ಜ.10 NEWS DESK : ಶ್ರೀ ಕಾವೇರಮ್ಮೆ ಕೊಡವ ಮತ್ತು ಅಮ್ಮಕೊಡವ ಹಿತರಕ್ಷಣಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಲೋಕ ಕಲ್ಯಾಣಕ್ಕಾಗಿ ಜ.15 ರಂದು ಕಾವೇರಿ ಕ್ಷೇತ್ರವಾದ ಭಾಗಮಂಡಲದ ಟ್ರಸ್ಟ್ನ ಜಾಗದಲ್ಲಿ 12ನೇ ವರ್ಷದ ‘ಚಂಡಿಕಾ ಹೋಮ’ವನ್ನು ಒಳಗೊಂಡಂತೆ ವಿವಿಧ ಪೂಜಾ ಕಾರ್ಯಗಳು ನಡೆಯಲಿದೆ ಎಂದು ಟ್ರಸ್ಟ್ನ ಅಧ್ಯಕ್ಷ ಮುದ್ದಂಡ ಬಿ.ದೇವಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅಂದು ಬೆಳಗ್ಗೆ 7 ಗಂಟೆಯಿಂದ ಶ್ರೀ ಗಣಪತಿ ಹೋಮ, ಶ್ರೀ ಸತ್ಯನಾರಾಯಣ ಸ್ವಾಮಿ ಪೂಜೆ, ಶತರುದ್ರ ಪಠಣ ಹಾಗೂ ಚಂಡಿಕಾ ಹೋಮ ನಡೆಯಲಿದೆ. ಜಿಲ್ಲೆಯ ಕೊಡವ ಮತ್ತು ಅಮ್ಮಕೊಡವ ಜನಾಂಗ ಬಾಂಧವರು ಒಂದಾಗಿ ಸೇರಿ ಟ್ರಸ್ಟ್ನ ಸಹಯೋಗದಲ್ಲಿ ಚಂಡಿಕಾ ಹೋಮವನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು. ಈ ಹಿಂದೆ ಅಷ್ಟಮಂಗಲ ಪ್ರಶ್ನೆಯ ಸಂದರ್ಭ ಕಂಡು ಬಂದ ದೋಷಗಳ ನಿವಾರಣೆಗಾಗಿ ನಿರಂತರವಾಗಿ ಚಂಡಿಕಾ ಯಾಗವನ್ನು ನಡೆಸಿಕೊಂಡು ಬರಲಾಗುತ್ತಿದೆ. ಧಾರ್ಮಿಕ ಕಾರ್ಯ ಮುಂದೆಯೂ ನಡೆಸಿಕೊಂಡು ಹೊಗಬೇಕೆಂದು ಇದ್ದಲ್ಲಿ ಅದಕ್ಕೂ ಟ್ರಸ್ಟ್ ಸಿದ್ಧವಿರುವುದಾಗಿ…
ಮಡಿಕೇರಿ ಜ.10 NEWS DESK : ಕಟ್ಟೆಮಾಡು ಗ್ರಾಮದ ಶ್ರೀಮಹಾಮೃತ್ಯುಂಜಯ ದೇವಾಲಯದ ವಸ್ತ್ರ ಸಂಹಿತೆ ಕುರಿತು ಉಂಟಾಗಿರುವ ಗೊಂದಲ ನಿವಾರಣೆಗೆ ಫೆ.10 ರವರೆಗೆ ಜಿಲ್ಲಾಧಿಕಾರಿಗಳು ಕಾಲಾವಕಾಶ ನೀಡಿದ್ದು, ಅಷ್ಟರೊಳಗೆ ಕಟ್ಟೆಮಾಡು ಗ್ರಾಮಸ್ಥರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ಶ್ರೀಮಹಾಮೃತ್ಯುಂಜಯ ದೇವಾಲಯ ಸಮಿತಿಯ ಅಧ್ಯಕ್ಷ ಶಶಿ ಜನಾರ್ಧನ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಧ್ಯದಲ್ಲೇ ಗ್ರಾಮಸ್ಥರ ಸಭೆಯ ದಿನಾಂಕವನ್ನು ತಿಳಿಸಲಾಗುವುದು, ಈ ಸಭೆಯ ಮೂಲಕ ಭಿನ್ನಾಭಿಪ್ರಾಯಗಳು ಸುಖಾಂತ್ಯಗೊಳ್ಳಲಿದೆ ಎನ್ನುವ ವಿಶ್ವಾಸವಿದೆ. ಸಭೆಯಲ್ಲಿ ಸಂಗ್ರಹಿಸಲಾಗುವ ಅಭಿಪ್ರಾಯದ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಫೆ.10 ರಂದು ನೀಡಲಾಗುವುದು ಎಂದರು. ಈ ಹಿಂದೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರನ್ನು ಸಮಿತಿ ಭೇಟಿ ಮಾಡಿದ ಸಂದರ್ಭ ಜಿಲ್ಲಾಡಳಿತದ ಬಳಿ ಕಾಲಾವಕಾಶ ಕೋರುವಂತೆ ಅವರು ಸಲಹೆ ನೀಡಿದ್ದರು. ಅದರಂತೆ ನಾವು ಕಾಲಾವಕಾಶ ಕೋರಿಕೊಂಡೆವು ಎಂದು ತಿಳಿಸಿದರು. ನೋಂದಣಿಯಾಗಿರುವ ದೇವಾಲಯ ಸಮಿತಿಯ ಬೈಲಾದಲ್ಲಿ ಯಾವುದೇ ಸಾಂಪ್ರದಾಯಿಕ ಉಡುಗೆ ತೊಡುಗೆ ತೊಡಲು ಮತ್ತು ಕಟ್ಟುಪಾಡು ಆಚರಿಸಲು…
ಮಡಿಕೇರಿ ಜ.10 NEWS DESK : ಕೊಡಗಿನಲ್ಲಿರುವ ಗೌಡರು ತಲೆತಲಾಂತರಗಳಿಂದ ಇಲ್ಲೇ ಹುಟ್ಟಿ ಬೆಳೆದವರಾಗಿದ್ದು, ಎಲ್ಲಾ ಜಾತಿ ಜನಾಂಗಗಳೊಂದಿಗೆ ಅನ್ಯೋನ್ಯತೆಯಿಂದ ಬದುಕು ಸಾಗಿಸುತ್ತಿದ್ದಾರೆ. ಆದರೆ ಸಂಘಟನೆಯೊಂದು ಕೊಡಗಿನ ಗೌಡರನ್ನು ಆಂಧ್ರದಿಂದ ಬಂದವರು ಎಂದು ನಿಂದನೆ ಮಾಡುವ ಮೂಲಕ ಸಮಾಜದಲ್ಲಿ ವಿಷಬೀಜ ಬಿತ್ತುವ ಕಾರ್ಯವನ್ನು ಮಾಡುತ್ತಿದೆ ಎಂದು ಚೇರಂಬಾಣೆ ಗೌಡ ಸಮಾಜದ ಅಧ್ಯಕ್ಷ ಕೊಡಪಾಲು ಗಣಪತಿ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಾತಿ ಜಾತಿಗಳ ಮಧ್ಯೆ ವಿಷಬೀಜ ಬಿತ್ತುವ ಕಾರ್ಯ ಮುಂದುವರೆದರೆ ಮುಂದಿನ ದಿನಗಳಲ್ಲಿ ಕೊಡಗು ಕೊಡಗಾಗಿ ಉಳಿಯುವುದಿಲ್ಲ. ತಲೆತಲಾಂತರಗಳಿಂದ ಕೊಡಗಿನಲ್ಲೇ ಹುಟ್ಟಿ ಬೆಳೆದ ಗೌಡರು ಎಲ್ಲರೊಂದಿಗೆ ಸಾಮರಸ್ಯದಿಂದ ಜೀವನ ನಡೆಸುತ್ತಿದ್ದಾರೆ. ಕೊಡವರು ಹಾಗೂ ಗೌಡರು ಒಗ್ಗಟ್ಟಿನಿಂದ ಇದ್ದಾರೆ, ಆದರೆ ಸಂಘನೆಯೊಂದು ಒಡಕು ಮೂಡಿಸುವ ಕಾರ್ಯವನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇತ್ತೀಚೆಗೆ ಚೇರಂಬಾಣೆಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭ ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರುಗಳನ್ನು ಒಂದು ಸಮುದಾಯಕ್ಕೆ ಸೀಮಿತ ಮಾಡಿ ಘೋಷಣೆ ಕೂಗಿದ್ದಾರೆ. ಇಡೀ…
ಮಡಿಕೇರಿ ಜ.10 NEWS DESK : ಕುಂದಚೇರಿ ಗ್ರಾಮ ಪಂಚಾಯಿತಿಗೆ ಒಳಪಡುವ ಕೋಪಟ್ಟಿ ದೇವಸ್ಥಾನ, ಕೋಪಟ್ಟಿ ಶಾಲೆ, ಚೆರಂಡೇಟಿ, ಚಿಟ್ಟಿಮಾನಿ ಪದಕಲ್ಲು, ಕೋಡಿ ಮೊಟ್ಟೆ, ತಾಪ್ರಿಕಾಡು, ಪೂವಲೆ ಮಾನಿ, ಸಿಂಗತ್ತೂರು ಸೇರಿದಂತೆ ಒಟ್ಟು 9 ಅಂಗನವಾಡಿ ಕೇಂದ್ರಗಳಿಗೆ ಕೊಡುಗೆ ನೀಡಲಾಯಿತು. ಮೇಲ್ವಿಚಾರಕಿಯವರ ಮಾರ್ಗದರ್ಶನದಂತೆ ಅಂಗನವಾಡಿ ಕಾರ್ಯಕರ್ತೆಯರಾದ ಸುಶಿ, ಯೋಗ್ಯತಾ, ಈಶ್ವರಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿ ಹಾಗೂ ಸದಸ್ಯರೊಂದಿಗೆ ಚೇರುಗಳ ಬೇಡಿಕೆಯನ್ನು ಸಲ್ಲಿಸಿದ್ದರು. ಅವರ ಕೋರಿಕೆಯಂತೆ ಚೆಟ್ಟಿಮಾನಿ ಅಂಗನವಾಡಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಚೇರ್ ಗಳನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭ ಮಾತನಾಡಿದ ಗ್ರಾ.ಪಂ ಅಧ್ಯಕ್ಷ ದಿನೇಶ್ ಅಂಗನವಾಡಿ ಕೇಂದ್ರವನ್ನು ಮಾದರಿ ಅಂಗನವಾಡಿ ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಸಂಪೂರ್ಣ ಸಹಕಾರವನ್ನು ನೀಡುವುದಾಗಿ ತಿಳಿಸಿದರು. ಸದಸ್ಯರಾದ ಹ್ಯಾರಿಸ್ ಮಾತನಾಡಿ ಕುಂದಾಚೇರಿ ಗ್ರಾ.ಪಂ ಗೆ ಒಳಪಟ್ಟ 9 ಅಂಗನವಾಡಿ ಕಾರ್ಯಕರ್ತೆಯರು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಗ್ರಾಮ ಪಂಚಾಯತಿಯಿಂದ ದೊರಕುವಂತ ಎಲ್ಲ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಗೆ ನೀಡಲಾಗುವುದು ಎಂದು ತಿಳಿಸಿದರು. ಪ್ರಭಾರ ಸಹಾಯಕ ಶಿಶು…
ನಾಪೋಕ್ಲು ಜ.10 NEWS DESK : ಸಂಪಾಜೆಯ ಆದರ್ಶ ಫ್ರೆಂಡ್ಸ್ ಚಡಾವು ವತಿಯಿಂದ ಬಾಲಚಂದ್ರ ಕಳಗಿಯವರ ಸ್ಮರಣಾರ್ಥ 3ನೇ ವರ್ಷದ ಗ್ರಾಮಿಣ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಸಂಪಾಜೆಯಲ್ಲಿ ಸಂಭ್ರಮದಿಂದ ನಡೆಯಿತು. ಆದರ್ಶ ಫ್ರೆಂಡ್ಸ್ ನ ಅಧ್ಯಕ್ಷ ಸುನಿಲ್ ಪನೆಯಾಳ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಮಾದೇವಿ ಬಾಲಚಂದ್ರ ಕಳಗಿ, ಶ್ರೀಧರ ಪಡ್ಪು ಭಾಗವಹಿಸಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ನಂತರ ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಿಸಿದರು. ಸಂಜೆ ನಡೆದ ಸಾಂಸ್ಕತಿಕ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಹಾಗೂ ಹೆಸರಾಂತ ಕಲಾವಿದ ಮಯೂರಿ ಎನ್.ಆರ್.ಪುರ ಚಿಕ್ಕಮಗಳೂರು ನಡೆಸಿಕೊಟ್ಟರು. ಭಾರತೀಯ ಭೂಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಸಂಪಾಜೆಯ ಸೈನುದ್ದಿನ್ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಸಾವಿತ್ರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಯಶೋಧರ ಸ್ವಾಗತಿಸಿದರು, ವಿಕ್ರಾಂತ್ ಹಾಗೂ ಪ್ರಸಾದ್ ಕಾಟುರು ಕಾರ್ಯಕ್ರಮ ನಿರೂಪಿಸಿದರು. ಭರತ್ ವಂದಿಸಿದರು. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಜ.10 NEWS DESK : ನಾಪೋಕ್ಲು ಶೌರ್ಯ ವಿಪತ್ತು ನಿರ್ವಹಣಾ ಘಟಕ ವತಿಯಿಂದ ಅಂಗನವಾಡಿ ಕೇಂದ್ರದಲ್ಲಿ ಸ್ವಚ್ಛತಾ ಶ್ರಮದಾನ ಮಾಡಲಾಯಿತು. ಭಗವತಿ ದೇವಸ್ಥಾನ ಬಳಿ ಇರುವ ಅಂಗನವಾಡಿ ಕೇಂದ್ರದ ಆವರಣದಲ್ಲಿ ಮಕ್ಕಳಿಗೆ ಆಟವಾಡಲು ಅಡಚಣೆ ಆಗುತ್ತಿರುವ ಮಣ್ಣಿನ ದಿನ್ನೆಯನ್ನು ಶ್ರಮದಾನದ ಮೂಲಕ ತೆಗೆದು ಸಮತಟ್ಟು ಮಾಡಿ ಆವರಣವನ್ನು ಸ್ವಚ್ಛಗೊಳಿಸಿದರು. ಈ ಸಂದರ್ಭ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಶೌರ್ಯ ಸಂಯೋಜಕಿ ದಿವ್ಯ ಮಂದಪ್ಪ ಹಾಗೂ ಸದಸ್ಯರು, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹಾಜರಿದ್ದರು. ವರದಿ : ದುಗ್ಗಳ ಸದಾನಂದ.
ವಿರಾಜಪೇಟೆ NEWS DESK ಜ.10 : ಕ್ಷುಲ್ಲಕ ಕಾರಣಕ್ಕೆ ಬಾವ ಮೈದುನರ ನಡುವೆ ನಡೆದ ಕಲಹ ಹತ್ಯೆಯಲ್ಲಿ ಕೊನೆಯಾದ ಘಟನೆ ವಿರಾಜಪೇಟೆ ತಾಲ್ಲೂಕಿನ ಕೆದಮುಳ್ಳೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕಾಫಿ ತೋಟವೊಂದರ ಲೈನ್ ಮನೆಯಲ್ಲಿ ವಾಸವಿದ್ದ ಮಂಜು(22) ಎಂಬಾತನೇ ಹತ್ಯೆಯಾದ ವ್ಯಕ್ತಿಯಾಗಿದ್ದು, ಆರೋಪಿ ಅಭಿ(24) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕಾಫಿ ಕಾಯುವ ಕೆಲಸಕ್ಕೆ ರಾತ್ರಿಯ ವೇಳೆ ತೆರಳಿದ್ದ ಅಭಿ ಮತ್ತು ಮಂಜು ಅವರ ನಡುವೆ ಕಲಹ ನಡೆದಿದೆ. ಮೈದುನ ಮಂಜುವನ್ನು ಕೊಲೆ ಮಾಡಿರುವುದಾಗಿ ಆರೋಪಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಜ.10 NEWS DESK : ಮೈಸೂರಿನ ಡಾ.ಗಂಗೂಬಾಯಿ ಹಾನಗಲ್ ಕಲೆ ಮತ್ತು ಸಾಹಿತ್ಯ ವಿಶ್ವವಿದ್ಯಾನಿಲಯದವರು ಹಾಗೂ ಮಂಗಳೂರಿನಲ್ಲಿ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅಕ್ಷರ ಸಾಧನೆ ಮಾಡಿದ್ದಾಳೆ. ಒಟ್ಟು 400 ಅಂಕಗಳಲ್ಲಿ 334 ಅಂಕಗಳನ್ನು ಪಡೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾಳೆ. ವಿರಾಜಪೇಟೆಯ ಕಾವೇರಿ ಶಾಲೆಯ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಕ್ಷರ ವಿರಾಜಪೇಟೆಯ ಗೌರಿ ಕೆರೆ ನಿವಾಸಿ ಎಂ.ಪಿ.ಸಂತೋಷ್ ಕುಮಾರ್ ಮತ್ತು ಕೆ.ವಿ.ಮೇಘನ ದಂಪತಿಯ ಪುತ್ರಿ. ಮಗಳ ಅತ್ಯುತ್ತಮ ಸಾಧನೆಗೆ ಪೋಷಕರು ಹಾಗೂ ಕುಟುಂಬಸ್ಥರು ಅಪಾರ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಾರೆ. ಅಕ್ಷರ ತಮ್ಮ 3ನೇ ವಯಸ್ಸಿನಿಂದ ವಿರಾಜಪೇಟೆಯ ಜಗನ್ಮೋಹನ ನಾಟ್ಯಾಲಯದಲ್ಲಿ ಭರತನಾಟ್ಯ ಗುರುಗಳಾದ ವಿದ್ವಾನ್ ರಾಜೇಶ್ ಆಚಾರ್ಯ ಅವರ ಬಳಿಯಲ್ಲಿ ಭರತನಾಟ್ಯ ಅಭ್ಯಾಸಮಾಡುತ್ತಿದ್ದಾಳೆ. ಮುಂದಿನ ಕಲಾ ಭವಿಷ್ಯಕ್ಕೆ ಶುಭಹಾರೈಸಿದ್ದಾರೆ.
ಮಡಿಕೇರಿ ಜ.10 NEWS DESK : ಕಾರ್ಮಿಕ ಇಲಾಖೆ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಕಿಟ್ ವಿತರಿಸಲಾಯಿತು. ಕೂಡಿಗೆ ರಾಮೇಶ್ವರ ಕೂಡುಮಂಗಳೂರು ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಮಂತರ್ ಗೌಡ ಕಿಟ್ ವಿತರಿಸಿ ಮಾತನಾಡಿ, ರಾಜ್ಯ ಸರ್ಕಾರವು ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೇ ಇಲಾಖೆಯ ಮುಖೇನ ವಿವಿಧ ಹಂತಗಳಲ್ಲಿ ಕಾರ್ಮಿಕರ ಉಚಿತ ಪರಿಕರಗಳ ಸೌಲಭ್ಯ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ ಕಾರ್ಮಿಕರು ಅದರ ಸದುಪಯೋಗವನ್ನು ಮಾಡಿಕೊಳ್ಳುವಂತೆ ಸಲಹೆ ನೀಡಿದರು. ಈ ಸಂದರ್ಭ ಸೋಮವಾರಪೇಟೆ ತಾಲ್ಲೂಕು ಕಾರ್ಯನಿರ್ವಾಹಣಾಧಿಕಾರಿ ಪರಮೇಶ್, ಕುಶಾಲನಗರ ಕುಡ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ರಾಜ್ಯ ಕಾಂಗ್ರೆಸ್ ಸಮಿತಿ ಸದಸ್ಯ ಮಂಜುನಾಥ ಗುಂಡೂರಾವ್, ಜಿಲ್ಲಾ ಕಾರ್ಮಿಕ ಅಧಿಕಾರಿ ಟಿ.ಕಾವೇರಿ, ಮಡಿಕೇರಿ ಹಿರಿಯ ಕಾರ್ಮಿಕ ನಿರೀಕ್ಷಕ ಎಂ.ಎಂ.ಯತ್ನಟ್ಟಿ, ಸೋಮವಾರಪೇಟೆ ಹಿರಿಯ ಕಾರ್ಮಿಕ ನಿರೀಕ್ಷಕ ಶಶಿಧರ್, ವಿರಾಜಪೇಟೆ ವೃತ ನಿರೀಕ್ಷಕ ನಿಖಿಲ್…






