ನಾಪೋಕ್ಲು ಜ.23 NEWS DESK : ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅತಿ ಮುಖ್ಯ ಎಂದು ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಡಾ.ಶೈಲಜಾ ರಾಜೇಂದ್ರ ಹೇಳಿದರು. ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ ಜಿಲ್ಲಾ ಮಹಿಳಾ ಘಟಕ, ಮಡಿಕೇರಿಯ ಇನ್ನರ್ ವೀಲ್ ಕ್ಲಬ್ ಮತ್ತು ಆಯುಷ್ ಇಲಾಖೆ ಸಹಯೋಗದಲ್ಲಿ ಸಮೀಪದ ಬಲ್ಲಮಾವಟಿ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮನುಷ್ಯನಿಗೆ ಆರೋಗ್ಯವೇ ಭಾಗ್ಯ. ಅದರಲ್ಲೂ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿಯನ್ನು ಹೊಂದಿರಬೇಕು. ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ ಮಹಿಳಾ ಘಟಕವು ಬೆಳ್ಳಿ ಹಬ್ಬದ ಸಂಭ್ರಮದಲ್ಲಿದ್ದು, ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಇದರ ಅಂಗವಾಗಿ ಗ್ರಾಮೀಣ ಮಹಿಳೆಯರ ಆರೋಗ್ಯ ತಪಾಸಣೆ ಹಾಗೂ ಕಣ್ಣಿನ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಿದೆ ಎಂದರು. ಬಲ್ಲಮಾವಟಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಚೋಕಿರ ಭಾಬಿ ಭೀಮಯ್ಯ, ಪಿಡಿಒ ಶರತ್ ಪೂಣಚ್ಚ,…
ಲೇಖಕ: admin
ಮಡಿಕೇರಿ ಜ.23 NEWS DESK : ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆಯಾದ ದಿನವೇ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ದೊರೆಯಿತು ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ನೀಡಿರುವ ಹೇಳಿಕೆಯನ್ನು ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿಸಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕ ತೀವ್ರವಾಗಿ ಖಂಡಿಸುತ್ತದೆ ಎಂದು ಸಮಿತಿಯ ಸಂಚಾಲಕಿ ಗಾಯತ್ರಿ ನರಸಿಂಹ ತಿಳಿಸಿದ್ದಾರೆ. ಮೋಹನ್ ಭಾಗವತ್ ಅವರ ಹೇಳಿಕೆಯನ್ನು ಕೇಂದ್ರ ಸರಕಾರ ದೇಶ ವಿರೋಧಿ ಎಂದು ಪರಿಗಣಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪತ್ರಿಕಾ ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ. ಭಾರತವು 1947ರ ಆಗಸ್ಟ್ 15 ರಂದು ಸ್ವಾತಂತ್ರ ಪಡೆದುದರ ಹಿಂದೆ ಬಹುದೊಡ್ಡ ಹೋರಾಟವೇ ಇತ್ತು, ದೇಶಾದ್ಯಂತ ಚಳುವಳಿ ನಡೆದಿದೆ. ಆದರೆ ಭಾಗವತ್ ಅವರು ತಮ್ಮ ಹೇಳಿಕೆಯ ಮೂಲಕ ಇದನ್ನು ನಿರಾಕರಿಸಿದಂತ್ತಾಗಿದೆ. ದೇಶವು ತನ್ನದೇ ಆದ ಸಂವಿಧಾನವನ್ನು ಹೊಂದಿದೆ. ಭಾರತದ ಗಣರಾಜ್ಯ ಈ ಸಂವಿಧಾನದ ಮೌಲ್ಯಗಳ ಮೇಲೆ ಸ್ಥಾಪಿತವಾಗಿದೆ. ಸ್ವಾತಂತ್ರ್ಯದ 75ನೇ ವರ್ಷಾಚರಣೆಯನ್ನು ಸರಕಾರ, ವಿರೋಧ ಪಕ್ಷಗಳು ಮತ್ತು ಇತರ…
ಸೋಮವಾರಪೇಟೆ ಜ.23 NEWS DESK : ಶಾಲೆಗೆ ಕಾಲ್ನಡಿಗೆಯಲ್ಲಿ ಬರಲು ಕಾಡಾನೆಗಳ ಭಯವಿದೆ ವಾಹನ ಸೌಲಭ್ಯ ಕೊಡಿ. ಡೆಸ್ಕ್ ಬೆಂಚು ಹಾಳಾಗಿವೆ ಕೊಡಿಸಿ, ಶಾಲಾ ಸಮಯಕ್ಕೆ ಸರ್ಕಾರಿ ಬಸ್ ಕಲ್ಪಿಸಿಕೊಡಿ ಎಂಬ ಹತ್ತಾರು ಸಮಸ್ಯೆಗಳನ್ನು ಮಕ್ಕಳ ಗ್ರಾಮಸಭೆಯಲ್ಲಿ ವಿದ್ಯಾರ್ಥಿಗಳು ಕೇಳಿದರು. ಐಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ವಿದ್ಯಾರ್ಥಿನಿ ಸಹನ ಅವರ ಅಧ್ಯಕ್ಷತೆಯಲ್ಲಿ ನಡೆದ ಐಗೂರು ಗ್ರಾಮ ಪಂಚಾಯಿತಿ ಮಕ್ಕಳ ಗ್ರಾಮಸಭೆಯಲ್ಲಿ ವಿದ್ಯಾರ್ಥಿಗಳು ತಮ್ಮ ಅಸಹಾಯಕತೆ ವ್ಯಕ್ತಪಡಿಸಿದರು. ಯುವಕನೋರ್ವ ಬೈಕ್ನಲ್ಲಿ ಬಂದು ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದಾನೆ ನನಗೆ ರಕ್ಷಣೆ ಬೇಕು ಎಂದು ಪಿಯುಸಿ ವಿದ್ಯಾರ್ಥಿನಿ ಸಭೆಯಲ್ಲಿ ಮನವಿ ಮಾಡಿದರು. ವಿದ್ಯಾರ್ಥಿನಿಗೆ ಧೈರ್ಯ ತುಂಬಿದ ಚಿಲ್ಡ್ರನ್ಸ್ ಮೂವ್ಮೆಂಟ್ ಫಾರ್ ಸಿವಿಕ್ ಅವೆರ್ನೆಸ್(ಸಿಎಂಸಿಎ) ಸಂಸ್ಥೆಯ ಅಸೋಸಿಯೇಟ್ ಡೈರೆಕ್ಟರ್ ಎಂ.ಪಿ. ಮರುಳಪ್ಪ, ನಿನಗೆ ಎಲ್ಲಾ ಭದ್ರತೆ ಒದಗಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು. ಪೊಲೀಸರಿಗೆ ಮಾಹಿತಿ ನೀಡುತ್ತೇನೆ. ಶಿಕ್ಷಕಿಯರು ವಿದ್ಯಾರ್ಥಿನಿಗೆ ಧೈರ್ಯ ಹೇಳಿ, ಪೂರ್ಣ ಮಾಹಿತಿ ಸಂಗ್ರಹಿಸಿ ಕೊಡಬೇಕು ಎಂದು ಪಿಡಿಒ ಪೂರ್ಣಕುಮಾರ್…
ಪುತ್ತೂರು ಜ.23 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿನಿ ಕೆ.ಎನ್.ಅನಘ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಹಿಳೆಯರ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾಳೆ. ಕಾಲೇಜಿನ ಪ್ರಥಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿಯಾಗಿರುವ ಅನಘ, ಎಸ್ಐಟಿ ತುಮಕೂರಿನಲ್ಲಿ ನಡೆದ ಆಯ್ಕೆ ಶಿಬಿರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ ವಿಶ್ವವಿದ್ಯಾನಿಲಯ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಜನವರಿ 24 ರಿಂದ 28ರ ವರೆಗೆ ಮೈಸೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ನಡೆಯುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇವರಿಗೆ ಸಂತ ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ತರಬೇತಿ ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ.ಕೆ ತಿಳಿಸಿದ್ದಾರೆ.
ಮಡಿಕೇರಿ ಜ.23 NEWS DESK : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಕೊಡಗು ಜಿಲ್ಲಾ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಸಂಘದ ಪ್ರಮುಖರು ಹಾಗೂ ಹೊರಗುತ್ತಿಗೆ ನೌಕರರು ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಹನುಮೇಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಪರಿಶಿಷ್ಟ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಕಳೆದ 15-20 ವಷಗಳಿಂದ ನೌಕರರು ಕಡಿಮೆ ಸಂಬಳಕ್ಕೆ ಯಾವುದೇ ಭದ್ರತೆ ಇಲ್ಲದೆ ದುಡಿಯುತ್ತಿದ್ದಾರೆ. ತಮ್ಮ ಕುಟುಂಬ, ಮಕ್ಕಳನ್ನು ಮರೆತು ಹಾಸ್ಟೆಲ್ ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ನೋಡಿಕೊಂಡು ನಿರಂತರವಾಗಿ ಕೆಲಸ ಮಾಡುತ್ತಾ ಬಂದಿದ್ದಾರೆ. ಆದರೆ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಮಸ್ಯೆಗಳಿಗೆ…
ಮಡಿಕೇರಿ ಜ.23 NEWS DESK : ಮಡಿಕೇರಿಯ ನಿಶ್ಟಿ ಪ್ರೊಡಕ್ಷನ್ ಬ್ಯಾನರ್ನಡಿಯಲ್ಲಿ ನಿರ್ಮಾಣಗೊಂಡಿರುವ ಬಿ.ಸಿ.ವಿನು ಮಹೇಶ್ ರೈ ನಿರ್ದೇಶನದ “ಮಾಸ್ಟರ್ ಮೈಂಡ್” ಕನ್ನಡ ಚಲನಚಿತ್ರ ಜ.24 ರಿಂದ ಏಳು ದಿನಗಳ ಕಾಲ ಸುಂಟಿಕೊಪ್ಪದ ಗಣೇಶ ಚಿತ್ರಮಂದಿರದಲ್ಲಿ ಪ್ರಾಯೋಗಿಕ ಪ್ರದರ್ಶನ ಕಾಣಲಿದೆ. ಈ ಕುರಿತು ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ನಿರ್ದೇಶಕ ಬಿ.ಸಿ.ವಿನು ಮಹೇಶ್ ರೈ ಚಿತ್ರದಲ್ಲಿ ಕೊಡಗಿನ ಅನೇಕ ಕಲಾವಿದರು ಅಭಿನಯಿಸಿದ್ದು, ಬಹುತೇಕ ಚಿತ್ರೀಕರಣ ಜಿಲ್ಲೆಯಲ್ಲೇ ನಡೆದಿದೆ ಎಂದರು. ಸಾಹಸ, ಸಾಂಸಾರಿಕ ಮತ್ತು ಹಾಸ್ಯಭರಿತವಾಗಿರುವ “ಮಾಸ್ಟರ್ ಮೈಂಡ್” ಚಿತ್ರವನ್ನು ಕುಟುಂಬ ಸಮೇತರಾಗಿ ವೀಕ್ಷಿಸಬಹುದಾಗಿದೆ. ಕೊಡಗಿನ ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಪತ್ರಕರ್ತರಿಗೆ ಉಚಿತ ಪ್ರವೇಶ ಕಲ್ಪಿಸಲಾಗುತ್ತಿದೆ. ಆಕಸ್ಮಿಕವಾಗಿ ಸಿಕ್ಕಿದ ಶ್ರೀಮಂತನ ಡೈರಿಯೊಂದನ್ನು ಓದಿದ ಮೂವರು ಕಳ್ಳರು ಆ ಶ್ರೀಮಂತನ ಮನೆ ಸೇರಿಕೊಳ್ಳುತ್ತಾರೆ. ಮೋಸ ಮಾಡಲೆಂದು ಬಂದ ಮೂವರು ಅಲ್ಲಿ ಸಿಕ್ಕ ತಾಯಿ ಪ್ರೀತಿಯಿಂದ ತಮ್ಮ ವಂಚನೆಯ ಗುಣವನ್ನು ಬಿಟ್ಟು ಪ್ರೀತಿಗಾಗಿ ಮನ ಮಿಡಿಯುತ್ತಾರೆ. ಅಲ್ಲದೆ ಅನಾರೋಗ್ಯ ಪೀಡಿತ ತಾಯಿಯ ಜೀವ ಉಳಿಸುವುದಕ್ಕಾಗಿ…
ನಾಪೋಕ್ಲು ಜ.23 NEWS DESK : ನಾಪೋಕ್ಲು ಶೌರ್ಯ ವಿಪತ್ತು ನಿರ್ವಹಣ ಘಟಕದ ವತಿಯಿಂದ ಶ್ರೀ ಮಕ್ಕಿ ಶಾಸ್ತಾವು ದೇವಾಲಯದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ದೇವಾಲಯಾದ ಆವರಣದಲ್ಲಿದ್ದ ಕಸ, ಕಡ್ಡಿ, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಶ್ರಮದಾನದ ಮೂಲಕ ಸ್ವಚ್ಛಗೊಳಿಸಲಾಯಿತು. ಸೇವಾ ಕಾರ್ಯದಲ್ಲಿ ಶೌರ್ಯ ವಿಪತ್ತು ನಿರ್ವಹಣ ಘಟಕದ ಮಾಸ್ಟರ್ ಬಾಳೆಯಡ ದಿವ್ಯ ಮಂದಪ್ಪ ಹಾಗೂ ಪ್ರಮುಖರಾದ ಶರವಣ, ರವಿ, ಚಂದ್ರಕಲಾ, ರಮ್ಯಾ, ಪೊನ್ನಮ್ಮ ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ NEWS DESK ಜ.23 : ಮುದ್ದಂಡ ಹಾಕಿ ಉತ್ಸವದಲ್ಲಿ ಭಾಗವಹಿಸಲು ವೆಬ್ಸೈಟ್ ಮೂಲಕ ಕುಟುಂಬದ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ವೆಬ್ಸೈಟ್ ಲಿಂಕ್ :- https://www.muddandahockeyfestival.in ಕೆಳಗಿನ ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ. ಅದ್ಯಾ ಪೂವಣ್ಣ, ಕಾರ್ಯದರ್ಶಿ, ಮುದ್ದಂಡ ಕುಟುಂಬ ಕ್ರೀಡೆ, ಸಾಂಸ್ಕೃತಿಕ ಮತ್ತು ಚಾರಿಟಬಲ್ ಟ್ರಸ್ಟ್.
ಮಡಿಕೇರಿ NEWS DESK ಜ.23 : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಕೊಡಗು ಜಿಲ್ಲಾ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ಕನಿಷ್ಟ ವೇತನ ರೂ.31 ಸಾವಿರ ಪಾವತಿ ಮಾಡಬೇಕು, ನೇರವಾಗಿ ಇಲಾಖೆಯಿಂದ ವೇತನ ನೀಡಬೇಕು, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು, ಸಿಬ್ಬಂದಿಗಳ ಸಂಖ್ಯೆ ಕಡಿತ ಆದೇಶ ರದ್ದು ಮಾಡಬೇಕು, ಜೀತ ಪದ್ದತಿಯಿಂದ ಮುಕ್ತಿಗೊಳಿಸಬೇಕು, ಬೀದರ್ ಮಾದರಿಯ ಸಹಕಾರ ಸಂಘವನ್ನು ಎಲ್ಲಾ ಜಿಲ್ಲೆಗಳಿಗೆ ವಿಸ್ತರಣೆ ಮಾಡಬೇಕು, ವಾರದ ರಜೆ, ಬಾಕಿ ಸಂಬಳ, ಹೆರಿಗೆ ರಜೆಯ ವೇತನವನ್ನು ನೀಡಬೇಕು, ಕೆಲಸದ ಸಮಯವನ್ನು ನಿಗದಿಪಡಿಸಬೇಕು, ಇಎಸ್ಐ ಮತ್ತು ಪಿಎಫ್ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಪ್ರತಿಭಟನಾಕಾರು ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಸಲ್ಲಿಸಿದರು. ಸಮಿತಿಯ ಅಧ್ಯಕ್ಷ ಜಿ.ಕೆ.ದಿನೇಶ್, ಉಪಾಧ್ಯಕ್ಷ ಹೆಚ್.ಎಸ್.ಯೋಗೇಶ್, ಜಿಲ್ಲಾ ಮುಖಂಡರುಗಳಾದ ಎಸ್.ಟಿ.ಸೌಭಗ್ಯ, ಪ್ರೇಮ, ನೇತ್ರ, ಪ್ರೇಮ, ತಾಲ್ಲೂಕು ಮುಖಂಡರುಗಳಾದ ವಸಂತಿ, ರೂಪ, ಮಹೇಶ್, ಭಾಗ್ಯಮ್ಮ, ಭಾನುಮತಿ,…
ಚೆಟ್ಟಳ್ಳಿ ಜ.23 NEWS DESK : ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಆಯ್ಕೆಯಾದ ಹೊದ್ದೂರು ಗ್ರಾ.ಪಂ ಅಧ್ಯಕ್ಷ ಹೆಚ್.ಎ.ಹಂಸ ಅವರನ್ನು ಚೆಟ್ಟಳ್ಳಿ ಸಾಂತ್ವನ ಸಮಿತಿ ಮತ್ತು ಜಮಾಅತ್ ವತಿಯಿಂದ ಸನ್ಮಾನಿಸಲಾಯಿತು. ಚೆಟ್ಟಳ್ಳಿ ಮದರಸ ಸಭಾಂಗಣದಲ್ಲಿ ಸಾಂತ್ವನ ಸಮಿತಿ ಮತ್ತು ಜಮಾಅತ್ ಪ್ರಮುಖರು ಸನ್ಮಾನಿಸಿ, ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತಾನಾಡಿದ ಹಂಸ, ಬಡವರ ಸೇವೆಗೆ ಸದಾ ಸಿದ್ದನಿರುತ್ತೇನೆಂದರು. ಕೊಡಗಿನ ಎಲ್ಲಾ ಗ್ರಾ.ಪಂಗಳು ಉತ್ತಮಕಾರ್ಯವನ್ನು ನಿರ್ವಹಿಸಯವ ಮೂಲಕ ಗ್ರಾಮದ ಅಭಿವೃದ್ಧಿಗೆ ಕೈಜೋಡಿಸುವಂತಾಗಬೇಕೆಂದರು. ಸಮಿತಿ ಅಧ್ಯಕ್ಷ ಹಂಸ ತ್ಯಾಗತೂರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಹಮೀದ್ ಕಬಡಕೇರಿ, ಉಪಾಧ್ಯಕ್ಷ ಮೂಸಾ, ಹನಿಫ್ ತ್ಯಾಗತ್ತೂರು, ಅಲಿ ಕಂಡಕರೆ, ಅನೀಫ್, ಶಕೀರ್ ಪೊನ್ನತಮೊಟ್ಡೆ ಮುಂತಾದವರು ಪಾಲ್ಗೊಂಡಿದರು. ಉಪಾಧ್ಯಕ್ಷ ಮೊಹಮ್ಮದ್ ರಫಿ ಸ್ವಾಗತಿಸಿದರು. ಜುಬೈರ್ ಚೆಟ್ಟಳ್ಳಿ ಹಂಸ ಅವರ ಕಿರುಪರಿಚಯ ಮಾಡಿದರು.






