ಬೆಂಗಳೂರು ಜ.9 NEWS DESK : ಮುಖ್ಯಮಂತ್ರಿಗಳು ಹಾಗೂ ಅರಣ್ಯ ಇಲಾಖೆ ಸಚಿವರೊಂದಿಗೆ ಚರ್ಚಿಸಿ ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಆದಿವಾಸಿ ಬುಡಕಟ್ಟು ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವುದಾಗಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಭರವಸೆ ನೀಡಿದರು. ಇಂದು ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಸಮ್ಮುಖದಲ್ಲಿ ಸಭೆ ನಡೆಸಿ ಕೊಡಗು ಆದಿವಾಸಿ ಮುಖಂಡರು ಸೇರಿದಂತೆ ರಾಜ್ಯದ ವಿವಿಧ ಆದಿವಾಸಿ ಬುಡಕಟ್ಟು ಪ್ರಮುಖರಿಂದ ಸಮಸ್ಯೆಗಳನ್ನು ಆಲಿಸಿದರು. ನಂತರ ಮಾತನಾಡಿದ ಸಚಿವರು ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಪರಿಹಾರ ಒದಗಿಸುವ ಭರವಸೆಯನ್ನು ನೀಡಿದರು. ಸಭೆಯಲ್ಲಿ ಕರ್ನಾಟಕ ರಾಜ್ಯ ಆದಿವಾಸಿ ಅಭಿವೃದ್ಧಿ ಸಂಸ್ಥೆ ಅಧ್ಯಕ್ಷ ವಿಠಲ್, ಕೊಡಗು ವಿಭಾಗ ಉಪಾಧ್ಯಕ್ಷರಾದ ಜಿ.ಬಿ.ಬೊಜ್ಜಮ್ಮ, ವಿರಾಜಪೇಟೆ ವಿಭಾಗದ ಪ್ರಧಾನ ಕಾರ್ಯದರ್ಶಿ ದಿಡ್ಡಳ್ಳಿ ಮುತ್ತಮ್ಮ, ಮೈಸೂರು ಕಾರ್ಯದರ್ಶಿ ಗಿರೀಶ್ ಬಿ.ಸಿ, ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರಾ ಮೈನಾ,…
ಲೇಖಕ: admin
ಮಡಿಕೇರಿ ಜ.9 NEWS DESK : ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕ- ಅಧ್ಯಪಕರ ಸಭೆ ನಡೆಯಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಎನ್.ಎಂ.ನಾಣಯ್ಯ, ವಿದ್ಯಾರ್ಥಿಗಳ ಶೈಕ್ಷಣಿಕ ವಿಕಸನದಲ್ಲಿ ಪೋಷಕರ ಪಾತ್ರ ಮಹತ್ತರವಾದದ್ದು. ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯದಲ್ಲಿ ಹೆಚ್ಚಿನ ಸಮಯವನ್ನು ಓದಿಗೆ ಮೀಸಲಿಡಬೇಕು, ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದರು. ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ಎಂ.ಪಿ.ದಮಯಂತಿ ಮಾತನಾಡಿ, ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು, ಪರೀಕ್ಷೆ , ಆಂತರಿಕ ಮೌಲ್ಯಮಾಪನ ಬಗ್ಗೆ ಪೋಷಕರಿಗೆ ತಿಳಿಸಿದರು. ನಂತರ 2025-2026 ನೇ ಸಾಲಿನ ಶೈಕ್ಷಣಿಕ ವರ್ಷದ ಪೋಷಕ ಮತ್ತು ಅಧ್ಯಾಪಕ ಸಭೆಯ ನೂತನ ಉಪಾಧ್ಯಕ್ಷರಾಗಿ ಕೃಪಾ ಚಂಗಪ್ಪ ಹಾಗೂ ಸದಸ್ಯರುಗಳಾಗಿ ಹೆಚ್ ಎನ್. ಶೋಭಾ ಮತ್ತು ಪ್ರವೀಣ್ ಅವರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಉಪನ್ಯಾಸಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಹಾಜರಿದ್ದರು. ಸಭೆಯ ಆರಂಭದಲ್ಲಿ ಹರ್ಷ ಮತ್ತು ತಂಡದವರು ಪ್ರಾರ್ಥಿಸಿದರು. ಉಪನ್ಯಾಸಕಿ ಗಾಯತ್ರಿ ನಿರೂಪಿಸಿದರು. ಶಿಕ್ಷಕ ಮತ್ತು ಪೋಷಕ ಸಂಘದ ಸಂಚಾಲಕರಾದ…
ಮಡಿಕೇರಿ ಜ.9 NEWS DESK : ಒಂದು ಕಾಫಿ ಎಷ್ಟು ಕಿಮೀ ಮೈಲೇಜ್ ಕೊಡುತ್ತದೆ. ನನಗಂತೂ ಹದಿನಾರು ಕಿಮೀ ಮೈಲೇಜ್ ಕೊಟ್ಟಿದೆ. ಅದು ನಡೆದಿದ್ದು ಹೀಗೆ. ಎಂದಿನಂತೆ ಹುಬ್ಬಳ್ಳಿ ಮಡಿಕೇರಿ ಮಾರ್ಗಸೂಚಿಯಲ್ಲಿ ದಿನಾಂಕ ಒಂಬತ್ತನೆಯ ಜನವರಿ ಎರಡು ಸಾಸಿರದ ಇಪ್ಪತ್ತೈದರಂದು ಮುಂಜಾನೆ ಮಂಜು ಕವಿದಿದ್ದ ವೇಳೆಗೆ ನಮ್ಮ ಸಂಸ್ಥೆಯ ನಾವು ದುಡಿಯುವ ಮೂಲ ಘಟಕಕ್ಕೆ ಬಂದಿಳಿದೆನಾ……. ಆಗಲೇ ದವಡೆಯ ದಂತಗಳು ದಗದಗಿಸುವಂತೆ ಕಟಕಟಿಸುತ್ತಿದ್ದವು. ಒಂದೆಡೆ ಮೂತ್ರಕೋಶ ಭರ್ತಿಯಾಗಿ ಇನ್ನೇನು ಚೆಲ್ಲುವ ಹಂತ ತಲುಪಿದೆ. ಆದರೆ ಮನಸ್ಸು ಮಾತ್ರ ಯಾವಾಗ ವಾಹನಕ್ಕೆ ಇಂಧನ ತುಂಬಿಸಿ ಘಟಕದ ಮುಂದಣ ಬಾಗಿಲ ಬಿಳಿ ಇರುವ ಕಾವಲುಪಡೆಯ ದಿನವಹಿಯಲ್ಲಿ ರುಜು ಒಪ್ಪಿಸಿ ತಪ್ಪಿಸಿಕೊಳ್ಳುವೇನೋ ಎಂದು ಚಿಂತನೆ ನಡೆಸಿತ್ತು. ಒಂದು ನಿಮಿಷ ತಡವಾದರೂ ನಮ್ಮ ಮೃತ್ಯುಂಜಯ ದೇವಾಲಯದ ಸರ್ವೀಸು ತಪ್ಪಿ ಹೋಗುವುದೆಂಬ ಆತಂಕ. ಏಕೆಂದರೆ ಬೆಳಗಿನ ನಮ್ಮ ಪಯಣಕ್ಕೆ ಅದೊಂದೇ ಬಸ್ಸು. ಅದು ಆರು ನಲವತ್ತೈದಕ್ಕೆ. ನಮ್ಮ ಊರಿನ ಕಡೆಗೆ ಇನ್ನೊಂದು ಬಸ್ಸು ಇದೆ. ಆದರೆ ಅದು ಏಳು…
ವಿರಜಪೇಟೆ ಜ.9 NEWS DESK : ವಿರಾಜಪೇಟೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಸ್ವಸಹಾಯ ಸಂಘಗಳ ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ ‘ಗ್ರಾಮಸ್ಥರಿಗೆ ಹೈನುಗಾರಿಕೆ ಮಾಹಿತಿ ಕಾರ್ಯಕ್ರಮ ನಡೆಯಿತು. ಮೂರ್ನಾಡು ವಲಯದ ಕಿಗ್ಗಾಲು ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಕಿಗ್ಗಾಲು ಅಶೋಕ್ ಭಟ್ ಮಾತನಾಡಿ, ಪ್ರಗತಿಪರ ಕೃಷಿಕರು ಹೈನುಗಾರಿಕೆ ಮಾಡುವುದರಿಂದ ಹೆಚ್ಚು ಲಾಭದಾಯಕವಾಗಿದೆ. ಇದರಿಂದ ರೈತರು ಜೀವನ ನಿರ್ವಹಣೆ ಮಾಡಬಹುದು. ಹೈನುಗಾರಿಕೆಯಲ್ಲಿ ಹಲವು ರೀತಿಯ ತಳಿಯ ಹಸುಗಳ ಬಗ್ಗೆ, ಜೈವಿಕ ಗೊಬ್ಬರಗಳ ಬಗ್ಗೆ, ಬೀಜಾಮೃತ ಮತ್ತು ಜೀವಾಮೃತ ನೈಸರ್ಗಿಕ ಕೃಷಿಯಲ್ಲಿ ಜಾನುವಾರಗಳ ಇವುಗಳ ಬಗ್ಗೆ ಉತ್ತಮ ಮಾಹಿತಿ, ಮಾರ್ಗದರ್ಶನ ನೀಡಿದರು. ಕಿಗ್ಗಾಲು ಗ್ರಾಮದ ರೈತ ಮಹಿಳೆಯರಾದ ಲೀಲಾವತಿ ಮತ್ತು ಆಶಾ ಅವರು ಹೈನುಗಾರಿಕೆಯ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕಿ ಪಿ.ಕೆ.ಗೌರಿ, ಕೃಷಿ ಮೇಲ್ವಿಚಾರಕರಾದ ವಸಂತ್, ಸೇವಾ ಪ್ರತಿನಿಧಿ ದಿವ್ಯ ಹಾಗೂ ಗ್ರಾಮಸ್ಥರು, ಸಂಘದ ಸದಸ್ಯರು ಈ ಭಾಗವಹಿಸಿದ್ದರು.
ಸೋಮವಾರಪೇಟೆ ಜ.9 NEWS DESK : ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಮಳಿಗೆಗಳ ಹರಾಜು ಪ್ರಕ್ರಿಯೆಗೆ ಸಂಬಂಧಿಸಿದಂತೆ ಗೊಂದಲಗಳು ಮುಂದುವರೆದಿದ್ದು, ಪ.ಪಂ.ನ ಕೆಲವೊಂದು ತಪ್ಪು ಹೆಜ್ಜೆಗಳಿಂದಾಗಿ ದಿನಕ್ಕೊಂದು ಸಮಸ್ಯೆಗಳು ಎದುರಾಗುತ್ತಲೇ ಇವೆ. ಪಟ್ಟಣ ಪಂಚಾಯಿತಿಯ ಮಳಿಗೆಗಳ ಹರಾಜು ಎಂಬುದು ಮಧ್ಯವರ್ತಿಗಳಿಗೆ ಹಬ್ಬದೂಟದಂತಾಗಿದೆ ಎಂಬುದು ಈಗಿರುವ ವರ್ತಕರ ಆರೋಪವಾಗಿದ್ದು, ಸೆಟಲ್ಮೆಂಟ್ಗೆಂದೇ ಇರುವ ಕೆಲವರಿಂದಾಗಿ ಬಡ ವರ್ತಕರು ಅತಂತ್ರರಾಗಿದ್ದಾರೆ. ಹಣವಂತರು ಇಂತಹ ಮಧ್ಯವರ್ತಿಗಳಿಗೆ ಲಕ್ಷಗಟ್ಟಲೆ ಹಣ ನೀಡಿ ಅಂಗಡಿಯನ್ನು ಉಳಿಸಿಕೊಂಡಿದ್ದಾರೆ. ಬಡ ವರ್ತಕರು ಬೀದಿಗೆ ಬೀಳುವ ಸನ್ನಿವೇಶ ಸೃಷ್ಟಿಯಾಗಿದೆ ಎಂಬುದು ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿಯೂ ಪ್ರತಿಧ್ವನಿಸಿತ್ತು. ಇವೆಲ್ಲದರ ನಡುವೆ ಟೆಂಡರ್ ಪ್ರಕ್ರಿಯೆ ಅನುಷ್ಠಾನಕ್ಕೆ ಹೈಕೋರ್ಟ್ ಮತ್ತೆ ತಡೆ ನೀಡಿದೆ. ಪಟ್ಟಣದ ವರ್ತಕರಿಬ್ಬರು ಪ.ಪಂ. ಮಳಿಗೆ ಹರಾಜಿನಲ್ಲಿ ಹಲವಷ್ಟು ಲೋಪದೊಷಗಳಿದ್ದು, ಟೆಂಡರ್ನಲ್ಲಿ ಅಕ್ರಮ ನಡೆದಿದೆ. ನಿಯಮಾವಳಿಯ ಪ್ರಕಾರ ಪ್ರಕ್ರಿಯೆ ನಡೆಸದೇ ಇರುವುದರಿಂದ ನಮಗೆ ಅನ್ಯಾಯವಾಗಿದೆ ಎಂದು ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಜಿಲ್ಲಾಧಿಕಾರಿಗಳು, ಪಟ್ಟಣ ಪಂಚಾಯಿತಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳನ್ನು ಪ್ರತಿವಾದಿಗಳನ್ನಾಗಿಸಿ ಸಲ್ಲಿಕೆಯಾಗಿದ್ದ…
ಮಡಿಕೇರಿ,ಜ.9 NEWS DESK : ನಾಪೋಕ್ಲುವಿನಲ್ಲಿ 2024ರಲ್ಲಿ ನಡೆದ ಕುಂಡ್ಯೋಳಂಡ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಆಯೋಜಕರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1 ಕೋಟಿ ರೂ.ಗಳ ಚೆಕ್ ಅನ್ನು ಯುವ ಸಬಲೀಕರಣ ಇಲಾಖೆ ವತಿಯಿಂದ ವಿತರಿಸಿದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರೊಂದಿಗೆ ಕುಂಡ್ಯೋಳಂಡ ಕುಟುಂಬಸ್ಥರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಹಾಕಿ ಪಂದ್ಯಾಟಕ್ಕೆ ಸಹಕಾರ ನೀಡಿದ್ದಕ್ಕೆ ಧನ್ಯವಾದ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕುಂಡ್ಯೋಳಂಡ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯು ಗಿನ್ನಿಸ್ ಬುಕ್ ಆಫ್ ರೆಕಾಡ್ರ್ಸ್ನಲ್ಲಿ ದಾಖಲಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಹಾಕಿ ಕೊಡವರ ಜನಪ್ರಿಯ ಕ್ರೀಡೆಯಾಗಿದ್ದು, ಕೊಡಗಿನಲ್ಲಿ ಪ್ರತಿ ವರ್ಷ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಆಯೋಜಿಸುತ್ತಿರುವುದು ಶ್ಲಾಘನೀಯ. ಹಾಕಿ ಹುಟ್ಟಿದ್ದು ಭಾರತ ದೇಶದಲ್ಲಿ. ಧ್ಯಾನಚಂದ್ ಅವರಂತಹ ಹಾಕಿ ಮಾಂತ್ರಿಕ ಹುಟ್ಟಿದ ದೇಶ ನಮ್ಮದು. ಕ್ರಿಕೆಟ್ ಅಷ್ಟೇ ಅಲ್ಲ, ಹಾಕಿ ಕೂಡ ಅತ್ಯಂತ ಜನಪ್ರಿಯ ಕ್ರೀಡೆಯಾಗಿದ್ದು ಮುಂದಿನ ದಿನಗಳಲ್ಲಿಯೂ ಈ ಪರಂಪರೆ…
ಮಡಿಕೇರಿ ಜ.9 NEWS DESK : ಮೈಸೂರಿನ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾಲಯ ನಡೆಸಿದ ರಾಜ್ಯ ಮಟ್ಟದ ಭರತ ನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಮಡಿಕೇರಿಯ ಕಲಾ ಕಾವ್ಯ ನಾಟ್ಯ ಶಾಲೆಯ ವಿದ್ಯಾರ್ಥಿನಿ ಮಂಡಿರ ಯುಕ್ತಾ ನೀಲಮ್ಮ ಶೇ.91 ಅಂಕಗಳಿಸಿ ಕೊಡಗು ಜಿಲ್ಲೆಗೆ ಅಗ್ರಸ್ಥಾನ ಪಡೆದಿದ್ದಾಳೆ. ಮಂಡಿರ ಯುಕ್ತ ನೀಲಮ್ಮ ಕಳೆದ ಎಂಟು ವರ್ಷಗಳಿಂದ ಕಲಾ ಕಾವ್ಯ ನಾಟ್ಯ ಶಾಲೆಯ ವಿದುಷಿ ಕಾವ್ಯ ಶ್ರೀ ಕಪಿಲ್ ಅವರಿಂದ ತರಬೇತಿ ಪಡೆಯುತ್ತಿದ್ದು, ಉತ್ತಮ ಸಾಧನೆ ಮಾಡಿದ್ದಾಳೆ. ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಯುಕ್ತಾ ನೀಲಮ್ಮ ಮಡಿಕೇರಿ ನಗರಸಭೆಯ ನಾಮನಿರ್ದೇಶಿತ ಸದಸ್ಯ ಮಂಡಿರ ಸದಾ ಮುದ್ದಪ್ಪ ಹಾಗೂ ಕೃಪಾ ಮುದ್ದಪ್ಪ ದಂಪತಿಯ ಪುತ್ರಿ. ಪರೀಕ್ಷೆಯಲ್ಲಿ ಪಾಲ್ಗೊಂಡ ಕಲಾಕಾವ್ಯ ನಾಟ್ಯಶಾಲೆಯ ವಿದ್ಯಾರ್ಥಿಗಳಾದ ಯುಕ್ತಾ 365 (ಶೇ.91), ಇಂಚರ 343 (ಶೇ.85), ಸಿಂಧು 337 (ಶೇ.84), ಅನೂಹ್ಯ 330 (ಶೇ.82), ಬೆಳಕು 302 (ಶೇ.75), ಯಶಿಕಾ 279 (ಶೇ.69) ಅಂಕದೊಂದಿಗೆ ಉತ್ತೀರ್ಣರಾಗಿದ್ದಾರೆ.
ಮಡಿಕೇರಿ ಜ.9 NEWS DESK : ಶಾಂತಿ, ಸಹಬಾಳ್ವೆಗೆ ಆದ್ಯತೆ ನೀಡುತ್ತಿರುವ ಗೌಡರನ್ನು ಗುರಿ ಮಾಡಿಕೊಂಡು ವಿನಾಕಾರಣ ಕೊಡವರು ಹಾಗೂ ಗೌಡರ ನಡುವೆ ಕಿಚ್ಚು ಹಚ್ಚುವ ಕೆಲಸವನ್ನು ಸಂಘಟನೆಯೊಂದು ಮಾಡುತ್ತಿದೆ ಎಂದು ಆರೋಪಿಸಿರುವ ಚೆಟ್ಟಳ್ಳಿಯ ಚೇರಳ ಗೌಡ ಸಂಘ, ಸಂಘಟನೆಯ ಅಧ್ಯಕ್ಷರು ಹಾಗೂ ಸಹಚರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೇರಳ ಗೌಡ ಸಂಘದ ಅಧ್ಯಕ್ಷ ಅಯ್ಯಂಡ್ರ ರಾಘವಯ್ಯ ಅವರು ಕೊಡಗು ಜಿಲ್ಲೆಯ ಕಟ್ಟೆಮಾಡು ಗ್ರಾಮದ ಮಹಾಮೃತ್ಯುಂಜಯ ದೇವಸ್ಥಾನದ ವಾರ್ಷಿಕ ಪೂಜಾ ಕಾರ್ಯಕ್ರಮದ ಸಂದರ್ಭ ವಸ್ತ್ರ ಸಂಹಿತೆ ಕುರಿತು ಉಂಟಾದ ಕಲಹದಿಂದ ಜಿಲ್ಲೆಯಲ್ಲಿ ಸೂಕ್ಷ್ಮ ಪರಿಸ್ಥಿತಿ ಇದೆ. ಇದೇ ಸಂದರ್ಭದಲ್ಲಿ ಸ್ವಯಂ ಘೋಷಿತ ಸಂಘಟನೆಯ ಅಧ್ಯಕ್ಷರು ಹಾಗೂ ಸಹಚರರು ಜಿಲ್ಲೆಯಲ್ಲಿ ಗೌಡರು ಮತ್ತು ಕೊಡವರ ನಡುವೆ ಕಿಚ್ಚು ಹಚ್ಚುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ವಿವಿಧತೆಯಲ್ಲಿ ಏಕತೆಯನ್ನು ಸಾರುವ ಭಾರತ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನದ ಮೂಲ ಆಶಯದಂತೆ ಭಾರತೀಯರು ಭಾರತದ ಯಾವ ಭಾಗದಲ್ಲಿ ನೆಲೆಸಿದರೂ ಭಾರತೀಯರೇ…
ಕುಶಾಲನಗರ ಜ.9 NEWS DESK : ಅಖಿಲ ಭಾರತ ಯುನೈಟೆಡ್ ಕಿಸಾನ್ ಮಹಾ ಸಭಾದ ಕೊಡಗು ಸಮಿತಿಯ ವತಿಯಿಂದ ಕುಶಾಲನಗರದ ತಹಶೀಲ್ದಾರ್ ಕಛೇರಿ ಬಳಿ ರೈತರು ಹಾಗೂ ಜನಸಾಮಾನ್ಯರ ಹಿತಾಸಕ್ತಿಗಾಗಿ ಸರ್ಕಾರಗಳನ್ನು ಒತ್ತಾಯಿಸಲು ” ಹಕ್ಕೊತ್ತಾಯ ದಿನ ” ಆಚರಿಸಲಾಯಿತು. ಕಿಸಾನ್ ಮಹಾ ಸಭಾದ ಕೇಂದ್ರ ಸಮಿತಿಯ ಪದಾಧಿಕಾರಿ ನಿರ್ವಾಣಪ್ಪ ಅವರ ನೇತೃತ್ವದಲ್ಲಿ ನಡೆದ ಹಕ್ಕೊತ್ತಾಯದಲ್ಲಿ ಘೋಷಣೆಗಳನ್ನು ಕೂಗಿದರು. ಈ ಸಂದರ್ಭ ಮಾತನಾಡಿದ ನಿರ್ವಾಣಪ್ಪ, ಕೇಂದ್ರದ ಬಿಜೆಪಿ ಸರ್ಕಾರ ರೈತರ ಹಿತಾಸಕ್ತಿಯನ್ನು ಕಡೆಗಣಿಸಿದೆ. ಕೃಷಿ ಕಾರ್ಮಿಕರು, ಅಸಂಘಟಿತ, ಐಸಿಡಿಎಸ್, ಮಧ್ಯಾಹ್ನದ ಊಟದ ಕಾರ್ಮಿಕರಿಗೆ ವೇತನವನ್ನು ಹೆಚ್ಚಿಸದೇ ವಂಚಿಸಲಾಗುತ್ತಿದೆ. ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆ ನೀಡುವಲ್ಲಿ ವಿಫಲವಾಗಿದೆ. ನಿರುದ್ಯೋಗಿ ಜನರಿಗೆ 200 ದಿನಗಳ ಕಾಲ ದಿನಕ್ಕೆ 600 ರೂಗಳ ಕೂಲಿಯಂತೆ ನೀಡಲು ಮನರೇಗಾ ಯೋಜನೆಗೆ ಅನುದಾನವನ್ನು ನೀಡುತ್ತಿಲ್ಲ ಎಂದು ನಿರ್ವಾಣಪ್ಪ ದೂರಿದರು. ಕೇಂದ್ರ ಸರ್ಕಾರ ಕನಿಷ್ಟ ಬೆಂಬಲ ಬೆಲೆಯ ಕಾನೂನು ಖಾತರಿ ಒದಗಿಸಬೇಕು. ಕೃಷಿ ಕಾರ್ಮಿಕರು, ಸಣ್ಣ, ಅತಿ ಸಣ್ಣ ಹಾಗೂ…
ಮಡಿಕೇರಿ ಜ.9 NEWS DESK : ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯ “ಮುದ್ದಂಡ ಕಪ್ ಹಾಕಿ ಉತ್ಸವ”ದ ಲೋಗೋ ಬಿಡುಗಡೆ ಸಮಾರಂಭ ಜ.11 ರಂದು ಮಡಿಕೇರಿಯ ಕಾವೇರಿ ಹಾಲ್ನಲ್ಲಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುದ್ದಂಡ ಕಪ್ ಹಾಕಿ ಹಬ್ಬದ ಅಧ್ಯಕ್ಷ ರಶಿನ್ ಸುಬ್ಬಯ್ಯ, ಮುದ್ದಂಡ ಒಕ್ಕದ ಪಟ್ಟೆದಾರ ಮುದ್ದಂಡ ಡಾಲಿ ತಿಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯುವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ, ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ಮಾಜಿ ವಿಧಾನಸಭಾ ಅಧ್ಯಕ್ಷ ಕೆ.ಜಿ.ಬೋಪಯ್ಯ, ಮಾಜಿ ಸಚಿವ ಮಂಡೇಪಂಡ ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಮಾಜಿ ಸದಸ್ಯರುಗಳಾದ ಶಾಂತೆಯಂಡ ವೀಣಾ ಅಚ್ಚಯ್ಯ, ಮಂಡೇಪಂಡ ಸುನಿಲ್ ಸುಬ್ರಮಣಿ ಹಾಗೂ ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡಂಡ…






