ಮಡಿಕೇರಿ ಜ.9 NEWS DESK : ಮದೆ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಅಗೋಳಿಕಜೆ ಧನಂಜಯ್ ಹಾಗೂ ಉಪಾಧ್ಯಕ್ಷರಾಗಿ ಯೋಗೀಶ ಬಿ.ಎಸ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿ ಸದಸ್ಯರುಗಳಾಗಿ ಚಂದ್ರಶೇಖರ ಮುದ್ಯನ, ರಾಜು ಕೆ.ಆರ್, ಸೀನಾ ಪಿ.ಬಿ, ರಾಮಯ್ಯ ನಡುಗಲ್ಲು, ಇಂದ್ರಕುಮಾರ್ ಬೈನರವನ, ಪುಂಡರೀಕ ಮುಕ್ಕಾಟಿ, ಸುರೇಶ್ ಕಾಯರ್ಮಾರ್, ಪಾರ್ವತಿ ಉಗ್ರಾಣಿ, ಪ್ರಜ್ಞ ಬಿರುಮಣನ ಹಾಗೂ ಅನು ಪವಿದ ಮುದ್ಯನ ಕಾರ್ಯ ನಿರ್ವಹಿಸಲಿದ್ದಾರೆ. ಮುಂದಿನ 5 ವರ್ಷಗಳ ಆಡಳಿತ ಮಂಡಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಎಲ್ಲಾ 12 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು.
ಲೇಖಕ: admin
ಮಡಿಕೇರಿ ಜ.9 NEWS DESK : ಕೊಡಗು ಜಿಲ್ಲಾ ಸರ್ವೋದಯ ಸಮಿತಿ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಾಯಿತು. ಶಾಸಕ ಡಾ.ಮಂತರ್ ಗೌಡ ನೇತೃತ್ವದಲ್ಲಿ ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದ ಸಮಿತಿಯ ಪ್ರಮುಖರು ಮಡಿಕೇರಿಯ ಗಾಂಧಿ ಸ್ಮಾರಕದ ಮುಂದುವರಿದ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಒದಗಿಸಿ ಸಹಕಾರ ನೀಡುವಂತೆ ಮನವಿ ಸಲ್ಲಿಸಿದರು. ಈ ಸಂದರ್ಭ ಸಮಿತಿ ಅಧ್ಯಕ್ಷ ಅಂಬೇಕಲ್ ಕುಶಾಲಪ್ಪ, ಪ್ರಮುಖರಾದ ಮುನೀರ್ ಅಹ್ಮದ್, ನವೀನ್ ಅಂಬೇಕಲ್, ಕೆ.ಟಿ. ಬೇಬಿ ಮ್ಯಾಥ್ಯೂ ಸೇರಿದಂತೆ ಪದಾಧಿಕಾರಿಗಳು ಮನವಿ ಸಲ್ಲಿಕೆ ಸಂದರ್ಭ ಹಾಜರಿದ್ದರು.
ಮಡಿಕೇರಿ ಜ.9 NEWS DESK : ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಜ.10 ಮತ್ತು 11 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಚಿವರು ಜ.10 ರಂದು ಮಧ್ಯಾಹ್ನ 3 ಗಂಟೆಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಸಂಜೆ 4.30 ಗಂಟೆಗೆ ವಿರಾಜಪೇಟೆ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಕೊಡಗು ಜಿಲ್ಲಾ ವ್ಯಾಪ್ತಿಯ ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದಂತೆ ಇಲಾಖಾ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಜ.11 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಬಳಿ ನಿರ್ಮಿಸಲಾಗಿರುವ ತಡೆಗೋಡೆಯ ಪರಿವೀಕ್ಷಣೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 12 ಗಂಟೆಗೆ ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯ ಐಗೂರು ಸೇತುವೆ ನಿರ್ಮಾಣ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 1.30 ಗಂಟೆಗೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ವತಿಯಿಂದ ನಿರ್ಮಾಣವಾಗುತ್ತಿರುವ ಸೋಮವಾರಪೇಟೆ ತಾಲ್ಲೂಕಿನ ತೋಳೂರು ಶೆಟ್ಟಿಹಳ್ಳಿ ರಸ್ತೆ ಕಾಮಗಾರಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.…
ಪೊನ್ನಂಪೇಟೆ ಜ.9 NEWS DESK : ಸಮಾಜದ ವಿವಿಧ ಧರ್ಮದವರ ಭಕ್ತಿಯ ರೂಪ ಮತ್ತು ಅದರ ಆಚಾರ-ವಿಚಾರ ಬೇರೆ ಬೇರೆಯಾಗಿರುತ್ತದೆ. ಮನುಷ್ಯರ ಸಾಮಾಜಿಕ ಬದುಕಿಗೆ ಭಕ್ತಿಯ ರೂಪಕ್ಕಿಂತ ಸಾಮರಸ್ಯ ಮುಖ್ಯವಾಗಿದೆ. ಆದ್ದರಿಂದ ಮನುಷ್ಯ ಸ್ನೇಹದ ತಳಹದಿಯಲ್ಲಿ ಸಾಮರಸ್ಯವೇ ಪ್ರತಿಯೊಬ್ಬರ ಮೂಲ ಮಂತ್ರವಾಗಿರಬೇಕು ಎಂದು ಅಂತರಾಷ್ಟ್ರೀಯ ಖ್ಯಾತಿಯ ಧಾರ್ಮಿಕ ಉಪನ್ಯಾಸಕರು ಮತ್ತು ಕೇರಳದ ವಿದ್ವಾಂಸ ಉಸ್ತಾದ್ ಸಿರಾಜುದ್ದೀನ್ ಖಾಸಿಮಿ ಪತ್ತಾನಾಪುರಂ ಕರೆ ನೀಡಿದರು. ಆಧುನಿಕ ಇಸ್ಲಾಮಿಕ್ ವಾಸ್ತುಶಿಲ್ಪ ಶೈಲಿಯಲ್ಲಿ ಪುನರ್ ನಿರ್ಮಾಣಗೊಂಡಿರುವ ಪೊನ್ನಂಪೇಟೆ ಶಾಫಿ ಜುಮಾ ಮಸೀದಿಯ ಲೋಕಾರ್ಪಣೆಯ ಅಂಗವಾಗಿ ಮಸೀದಿಯ ಆವರಣದಲ್ಲಿ ಮೂರು ದಿನಗಳ ಕಾಲ ನಡೆದ ವಿವಿಧ ಕಾರ್ಯಕ್ರಮಗಳ ಸಮಾರೋಪ ಸಮಾರಂಭದಲ್ಲಿ ಪ್ರಧಾನ ಭಾಷಣ ಮಾಡಿದ ಅವರು, ಸಾಮರಸ್ಯದಿಂದ ಮಾತ್ರ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ. ಮತಗಳ ಭಿನ್ನತೆಗಿಂತಲೂ ಬಂಧುತ್ವವೇ ಪ್ರಧಾನವಾಗಿದೆ. ನಂಬಿಕೆಯ ಆಧಾರದ ಮೇಲೆ ಜನರನ್ನು ವಿಭಜಿಸಲು ಪ್ರಯತ್ನಿಸುತ್ತಿರುವ ಇಂದಿನ ಕಾಲಘಟ್ಟದಲ್ಲಿ ಮನುಷ್ಯರು ಪರಸ್ಪರ ಬೆರೆಯುವ ಮತ್ತು ಸಾಮಾಜಿಕ ಒಗ್ಗಟ್ಟನ್ನು ಪ್ರದರ್ಶಿಸುವ ಮೂಲಕ ಭಾತೃತ್ವದ ಮಹತ್ವವನ್ನು ಎತ್ತಿ ಹಿಡಿಯುವಂತಾಗಬೇಕು…
ಮಡಿಕೇರಿ ಜ.9 NEWS DESK : ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ ಅವರ ಪ್ರಯತ್ನದಿಂದ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ವಿವಿಧ ಸಮುದಾಯಗಳ ಸಮುದಾಯ ಭವನಗಳ ನಿರ್ಮಾಣ ಕಾಮಗಾರಿಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಒಟ್ಟು ಎರಡು ಕೋಟಿ ರೂಗಳನ್ನು ಬಿಡುಗಡೆ ಮಾಡಿದೆ. ಶ್ರೀ ನಾರಾಯಣ ಗುರು ಸಮುದಾಯ ಭವನದ ಕಾಮಗಾರಿಗೆ ಒಂದು ಕೋಟಿ, ಹಾಕತ್ತೂರು ತೊಂಬತ್ತು ಮನೆ ಸಮುದಾಯ ಭವನ ಮುಂದುವರಿದ ಕಾಮಗಾರಿಗೆ ಐದು ಲಕ್ಷ, ನಾಪೋಕ್ಲು ಇಂದಿರಾ ನಗರದಲ್ಲಿ ಸಮುದಾಯ ಭವನ ಕಾಮಗಾರಿಗೆ ಹತ್ತು ಲಕ್ಷ, ಚೆನ್ನಯ್ಯನ ಕೋಟೆ ಸಮುದಾಯ ಭವನಕ್ಕೆ ಐದು ಲಕ್ಷ, ಕೆದಮಳ್ಳೂರು ದವಸ ಭಂಡಾರ ಪಕ್ಕ ಸಮುದಾಯ ಭವನ ಕಾಮಗಾರಿಗೆ 15 ಲಕ್ಷ, ಗೋಣಿಕೊಪ್ಪದಲ್ಲಿ ಸ್ವಾತಂತ್ರ್ಯ ಸಮುದಾಯ ಭವನ ಕಾಮಗಾರಿಗೆ ಮೂವತ್ತು ಲಕ್ಷ, ಪೊನ್ನಂಪೇಟೆ ತಾಲ್ಲೂಕಿನ ಗೋಣಿಕೊಪ್ಪ ಕೊಡವ ಸಮಾಜ ಸಮುದಾಯ ಭವನ ಕಾಮಗಾರಿಗೆ 25 ಲಕ್ಷ, ಪೊನ್ನಂಪೇಟೆ ತಾಲ್ಲೂಕಿನ ಮಾಯಮುಡಿ ಶ್ರೀ…
ವಿರಾಜಪೇಟೆ ಜ.9 NEWS DESK : ಸಿದ್ದಾಪುರದ ಶ್ರೀ ದುರ್ಗಾ ಭಗವತಿ ದೇವಾಲಯದಲ್ಲಿ ತಿರು ಮಹೋತ್ಸವ ಪೂಜಾ ಕಾರ್ಯಕ್ರಮದ ಅಂಗವಾಗಿ ನಡೆದ ವಿವಿಧ ಧಾರ್ಮಿಕ ಕಾರ್ಯಕ್ರಮದಲ್ಲಿ ವಿರಾಜಪೇಟೆಯ ನಾಟ್ಯಾಂಜಲಿ ನೃತ್ಯ ಶಾಲೆಯ ವಿದ್ಯಾರ್ಥಿಗಳು ಭಜನೆ ನೃತ್ಯ ಪ್ರದರ್ಶನ ನೀಡಿದರು. ನಂತರ ದೇವರ ಉತ್ಸವ ಮೂರ್ತಿಯ ಮೆರವಣಿಗೆಯಲ್ಲಿ ಭಜನೆ ನೃತ್ಯ ಪ್ರದರ್ಶನ ನೀಡಿ ಜನಮನ್ನಣೆ ಗಳಿಸಿ ಪ್ರಶಂಸೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ನೃತ್ಯ ಶಾಲೆಯ ಸಂಸ್ಥಾಪಕರಾದ ಹೇಮಾವತಿ ಕಾಂತರಾಜ್, ನೃತ್ಯ ಗುರುಗಳಾದ ಕಾವ್ಯಶ್ರೀ ಪಾಲ್ಗೊಂಡಿದ್ದರು.
ಬೆಂಗಳೂರು NEWS DESK ಜ.8 : ಹಿಂಸಾಮಾರ್ಗವನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳಲು ನಿರ್ಧರಿಸಿರುವ ನಕ್ಸಲ್ ಚಳುವಳಿಗಾರರನ್ನು ಸ್ವಾಗತಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇವರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಿ ಈಡೇರಿಸುವ ಪ್ರಯತ್ನವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡಲಿದೆ. ಇವರ ವಿರುದ್ದದ ಪ್ರಕರಣಗಳ ಶೀಘ್ರ ಇತ್ಯರ್ಥ್ಕಕ್ಕೆ ಅಗತ್ಯವಾದ ಕ್ರಮಗಳನ್ನೂ ನಮ್ಮ ಸರ್ಕಾರ ಕೈಗೊಳ್ಳಲಿದೆ. ಅನ್ಯಾಯ-ಶೋಷಣೆ ವಿರುದ್ದದ ಪ್ರಜಾಸತ್ತಾತ್ಮಕವಾಗಿ ನಡೆಸುವ ಹೋರಾಟವನ್ನು ನಾನು ಸದಾ ಗೌರವಿಸುತ್ತಾ ಬಂದವನು.ನಮ್ಮ ಸಂವಿಧಾನದಲ್ಲಿಯೂ ಇದಕ್ಕೆ ಅವಕಾಶ ಇದೆ.ಕಾಡಿನಲ್ಲಿದ್ದುಕೊಂಡು ಶಸ್ತ್ರಾಸ್ತ್ರಗಳ ಮೂಲಕ ಹೋರಾಟ ನಡೆಸುತ್ತಿದ್ದ ನಕ್ಸಲರು ಮನವೊಲಿಸಿ ಅವರನ್ನು ನಾಡಿಗೆ ಕರೆದು ತರುವ ಪ್ರಯತ್ನವನ್ನು ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿಯೇ ನಮ್ಮ ಸರ್ಕಾರ ಪ್ರಾರಂಭಿಸಿತ್ತು. ಕಳೆದ ಅವಧಿಯಲ್ಲಿ ಹನ್ನೆರಡು ಮಂದಿ ನಕ್ಸಲರು ಶರಣಾಗಿ ಬಂದು ಮುಖ್ಯವಾಹಿನಿ ಸೇರಿಕೊಂಡಿದ್ದರು. ಇದೀಗ ಆರು ಮಂದಿ ನಕ್ಸಲರು ಬಂದಿದ್ದಾರೆ. ಶರಣಾಗಿರುವ ನಕ್ಸಲರು. ಮುಂದಿನ ದಿನಗಳಲ್ಲಿ ಇವರೆಲ್ಲರೂ ಜವಾಬ್ದಾರಿಯುತ ನಾಗರಿಕರಾಗಿ ತಮ್ಮ ಬದುಕನ್ನು ಕಳೆಯಲಿದ್ದಾರೆ ಎಂಬ ನಂಬಿಕೆ ನನಗಿದೆ. ಈ ಆರು ಮಂದಿ ನಕ್ಸಲೀಯರ ಶರಣಾಗತಿಯ ನಂತರ…
ಮಡಿಕೇರಿ NEWS DESK ಜ.8 : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಕೊಡಗು ಜಿಲ್ಲಾ ಪ್ರತಿನಿಧಿಗಳ ಸಭೆಯಲ್ಲಿ 5 ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಕುಶಾಲನಗರ ಸಮೀಪ ಕೊಪ್ಪದಲ್ಲಿ ನಡೆದ ಎಸ್ಡಿಪಿಐ ಸಭೆಯಲ್ಲಿ ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಕಾರ್ಯದರ್ಶಿಗಳಾದ ಅಕ್ರಮ್ ಮೌಲಾನ, ಅಪ್ಸರ್ ಕೆ.ಆರ್ ನಗರ ಹಾಗೂ ಖಜಾಂಚಿ ಅಕ್ರಂ ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಪ್ರಸಕ್ತ ರಾಜಕೀಯ ವಿದ್ಯಾಮಾನಗಳ ಕುರಿತು ಚರ್ಚಿಸಲಾಯಿತು. ನಂತರ ಸರ್ವಾನುಮತದಿಂದ 5 ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಕೊಡಗಿನಲ್ಲಿ ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ಆನೆ ಮಾನವ ಸಂಘರ್ಷ ನಡೆಯುತ್ತಿದ್ದು, ಅನೇಕ ಕಾರ್ಮಿಕರು ಹಾಗೂ ಬೆಳೆಗಾರರು ಜೀವ ಕಳೆದುಕೊಂಡಿದ್ದಾರೆ. ಅರಣ್ಯ ಇಲಾಖೆ ಸಣ್ಣ ಪರಿಹಾರದ ಮೊತ್ತ ನೀಡಿ ಕೈ ತೊಳೆದುಕೊಳ್ಳುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಜೀವಗಳು ಬಲಿಯಾಗುವ ಸಾಧ್ಯತೆ ಇದೆ. ಅರಣ್ಯ ಇಲಾಖೆ ಹಾಗೂ ಸರಕಾರ ತಕ್ಷಣ ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಮಾತ್ರವಲ್ಲ ಜಿಲ್ಲೆಯ ಶಾಸಕರು ಈ ಬಗ್ಗೆ ವಿಧಾನಸಭೆಯಲ್ಲಿ ಪ್ರಸ್ತಾಪಿಸಿ ಸರಕಾರದ ಗಮನ…
ಮಡಿಕೇರಿ NEWS DESK ಜ.8 : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ನೂತನ ಜಿಲ್ಲಾಧ್ಯಕ್ಷರಾಗಿ ವಕೀಲ ಅಮೀನ್ ಮೊಹಿಸಿನ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಉಸ್ಮಾನ್ ಸುಂಟಿಕೊಪ್ಪ ಆಯ್ಕೆಯಾಗಿದ್ದಾರೆ. ಕುಶಾಲನಗರ ಸಮೀಪ ಕೊಪ್ಪದಲ್ಲಿ ನಡೆದ ಎಸ್ಡಿಪಿಐ ಕೊಡಗು ಜಿಲ್ಲಾ ಪ್ರತಿನಿಧಿಗಳ ಸಭೆಯಲ್ಲಿ ನೂತನ ಜಿಲ್ಲಾ ಸಮಿತಿಯನ್ನು ರಚಿಸಲಾಯಿತು. ಕಾರ್ಯದರ್ಶಿಯಾಗಿ ಬಶೀರ್ ಅಹ್ಮದ್, ಉಪಾಧ್ಯಕ್ಷರುಗಳಾಗಿ ಮನ್ಸೂರ್ ಆಲಿ ಮಡಿಕೇರಿ, ನಫೀಸಾ ಅಕ್ಬರ್, ಕೋಶಾಧಿಕಾರಿಯಾಗಿ ಅಕ್ಮಲ್ ಪಾಷಾ, ಸಮಿತಿ ಸದಸ್ಯರುಗಳಾಗಿ ಸ್ವಾಲಿಹ್ ಸೋಮವಾರಪೇಟೆ, ಬಶೀರ್ ಕೆ.ಸಿ, ಮೇರಿ ವೆಗಸ್ ಹಾಗೂ ಅಬ್ದುಲ್ ಅಡ್ಕಾರ್ ಆಯ್ಕೆಯಾದರು. ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಕಾರ್ಯದರ್ಶಿಗಳಾದ ಅಕ್ರಮ್ ಮೌಲಾನ, ಅಪ್ಸರ್ ಕೆ.ಆರ್ ನಗರ ಹಾಗೂ ಖಜಾಂಚಿ ಅಕ್ರಂ ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಪ್ರಸಕ್ತ ರಾಜಕೀಯ ವಿದ್ಯಾಮಾನಗಳ ಕುರಿತು ಚರ್ಚಿಸಲಾಯಿತು. ನಂತರ ಸರ್ವಾನುಮತದಿಂದ 5 ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು.
ಮಡಿಕೇರಿ ಜ.8 NEWS DESK : ಮಡಿಕೇರಿ 66/11ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ, ಜಿ.ಟಿ.ರಸ್ತೆ ಫೀಡರ್ನಲ್ಲಿ ವಿದ್ಯುತ್ ವಾಹಕ ಬದಲಾವಣೆ ಕಾಮಗಾರಿಯನ್ನು ಜ.9 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ನಿರ್ವಹಿಸಲಾಗುವುದು. ಆದ್ದರಿಂದ ಮಡಿಕೇರಿ, ಜಲಾಶ್ರಯ ಬಡಾವಣೆ, ಜಯನಗರ, ಅಶೋಕಪುರ, ಜಿ.ಟಿ ರಸ್ತೆ, ಮಂಗಳಾದೇವಿ ನಗರ, ಅರಣ್ಯ ಭವನ, ಚೈನ್ಗೇಟ್ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.






