ಮಡಿಕೇರಿ ಜ.7 NEWS DESK : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಭಾವಚಿತ್ರವಿರುವ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಅಕ್ಟೋಬರ್, ನವೆಂಬರ್ ಮತ್ತು ಡಿಸೆಂಬರ್ ಮಾಹೆಯಲ್ಲಿ ಕೈಗೊಳ್ಳಲಾಗಿದ್ದು, ಕೊಡಗು ಜಿಲ್ಲೆಯ 208-ಮಡಿಕೇರಿ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ಅಂತಿಮ ಮತದಾರರ ಪಟ್ಟಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ, ಉಪ ವಿಭಾಗಾಧಿಕಾರಿಗಳ ಕಚೇರಿ, ತಹಶೀಲ್ದಾರರ ಕಚೇರಿ ಮತ್ತು ಎಲ್ಲಾ ಮತಗಟ್ಟೆಗಳಲ್ಲಿ ಪ್ರಕಟಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಮತದಾರರು ಪರಿಶೀಲಿಸಿಕೊಂಡು, ಹೆಸರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ ಬಗ್ಗೆ ಖಚಿತ ಪಡಿಸಿಕೊಳ್ಳಲು ಕೋರಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ನಮೂನೆ-6 ರಲ್ಲಿ 1549 ಸ್ವೀಕೃತವಾಗಿದ್ದು, 1460 ಅರ್ಜಿಗಳು ಅಂಗೀಕಾರವಾಗಿದೆ. 89 ಅರ್ಜಿಗಳು ತಿರಸ್ಕøತವಾಗಿವೆ. ನಮೂನೆ-7ರಡಿ 1631 ಅರ್ಜಿಗಳು ಸ್ವೀಕೃತವಾಗಿದ್ದು, 1549 ಅರ್ಜಿಗಳು ಅಂಗೀಕೃತವಾಗಿದೆ. 82 ಅರ್ಜಿಗಳು ತಿರಸ್ಕøತಗೊಂಡಿವೆ. ಹಾಗೆಯೇ ನಮೂನೆ-8 ರಲ್ಲಿ 3123 ಅರ್ಜಿಗಳು ಸ್ವೀಕೃತವಾಗಿದ್ದು, 2,871 ಅರ್ಜಿಗಳು ಅಂಗೀಕೃತವಾಗಿದೆ. 252…
ಲೇಖಕ: admin
ಮೂರ್ನಾಡು ಜ.7 NEWS DESK : ಮೂರ್ನಾಡು ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜಿನ ನವೀಕೃತಗೊಂಡ ಕಟ್ಟಡದ ಮೇಲ್ಛಾವಣಿಯ ಉದ್ಘಾಟನಾ ಸಮಾರಂಭ ಮತ್ತು ಕಾಲೇಜಿನ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು. ಮೈಸೂರಿನ ನಾರಾಯಣ ಆಸ್ಪತ್ರೆಯ ರೀಜನಲ್ ಹೆಚ್.ಆರ್.ಮಾಳೇಟಿರ ನಿರ್ಮಲಾ ಮಾದಪ್ಪ ಕಾಲೇಜಿನ ನವೀಕೃತಗೊಂಡ ಕಟ್ಟಡದ ಮೇಲ್ಛಾವಣಿಯನ್ನು ಉದ್ಘಾಟಿಸಿ ಮಾತನಾಡಿ, ಶಿಕ್ಷಣದಿಂದ ಮಾತ್ರ ಸಾಧನೆ ಗೈಲು ಸಾಧ್ಯ ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಈ ವಿದ್ಯಾಸಂಸ್ಥೆಯ ಸದುಪಯೋಗಪಡೆದುಕೊಂಡು ಭವಿಷ್ಯದಲ್ಲಿ ಉತ್ತಮ ಬದುಕುರೂಪಿಸಿಕೊಳ್ಳಬೇಕು ಎಂದರು. ನಾನು ಈ ಸಂಸ್ಥೆಯ ಹಳೆಯ ವಿದ್ಯಾರ್ಥಿಯಾಗಿದ್ದು, ನಾರಾಯಣ ಆಸ್ಪತ್ರೆಯ ಮೂಲಕ ಕಾಲೇಜಿನ ಕಟ್ಟಡದ ಮೇಲ್ಛಾವಣಿಯನ್ನು ನವೀಕರಣಗೊಳಿಸಲು ಒಂದು ಸದಾವಕಾಶ ಸಿಕ್ಕಿದೆ ಎಂದರು. ವಿದ್ಯೆಕಲಿಸಿದ ಸಂಸ್ಥೆಯ ಬೆಳವಣಿಗೆಗೆ ಕೈಜೋಡಿಸಲು ತುಂಬಾಸಂತೋಷವಾಗುತ್ತದೆ. ಜಿಲ್ಲೆಯಲ್ಲಿ ಈ ವಿದ್ಯಾಸಂಸ್ಥೆಯು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ ಎಂದು ಹೇಳಿದರು. ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ. ಸಿ.ಜಗತ್ ತಿಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಎನ್.ಪಿ.ಮಾದಪ್ಪ, ಕಾರ್ಯದರ್ಶಿ ಪಿ.ಎಂ.ಅಪ್ಪಣ್ಣ, ಖಜಾಂಚಿ ವಿ.ಎ.ಯತೀಶ್, ನಿರ್ದೇಶಕರಾದ ಇ.ಯು. ಸೋಮಣ್ಣ, ಪುದಿಯೊಕ್ಕಡ. ಎ.ಹರೀಶ್, ಪಿ.ಎ.ಹರೀಶ್, ಎಂ.ಕೆ.ಚಂಗಪ್ಪ, ಕೆ.ಜಿ.ರಾಮಮೂರ್ತಿ,…
ಬೆಂಗಳೂರು NEWS DESK ಜ.7 : ಅರಣ್ಯ ಅಪರಾಧಗಳಿಗೆ ಇನ್ನು ಮುಂದೆ ಗರುಡಾಕ್ಷಿ ಅಸ್ತç ಪ್ರಯೋಗವಾಗಲಿದೆ. ಗರುಡಾಕ್ಷಿ ಆನ್ಲೈನ್ ಎಫ್ ಐಆರ್ ವ್ಯವಸ್ಥೆಗೆ ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಖಾತೆ ಸಚಿವ ಈಶ್ವರ ಬಿ.ಖಂಡ್ರೆ ಇಂದು ಚಾಲನೆ ನೀಡಿದರು. ವೈಲ್ಡ್ ಲೈಫ್ ಟ್ರಸ್ಟ್ ಆಫ್ ಇಂಡಿಯಾ ಸಹಯೋಗದೊಂದಿಗೆ ಗರುಡಾಕ್ಷಿ ಆನ್ಲೈನ್ ಎಫ್ ಐಆರ್ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅರಣ್ಯ ಅಪರಾಧ ತಡೆಯಲು, ತಪ್ಪಿತಸ್ಥರಿಗೆ ಶಿಕ್ಷೆ ಆಗುವುದನ್ನು ಖಾತ್ರಿ ಪಡಿಸಲು ಹಾಗೂ ಆ ಮೂಲಕ ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದು ಅರಣ್ಯ ಸಚಿವರು ತಿಳಿಸಿದರು. ಆಧುನಿಕ ವ್ಯವಸ್ಥೆಗೆ ಅನುಗುಣವಾಗಿ ಅರಣ್ಯ ಇಲಾಖೆ ಬದಲಾಗುತ್ತಿದ್ದು, ಅರಣ್ಯ ಒತ್ತುವರಿ, ಅಕ್ರಮ ಮರ ಕಡಿತಲೆ, ಕಳ್ಳಬೇಟೆ, ಅತಿಕ್ರಮ ಪ್ರವೇಶ ಇತ್ಯಾದಿ ಅರಣ್ಯ ಅಪರಾಧಗಳಿಗೆ ಇನ್ನು ಮುಂದೆ ಗರುಡಾಕ್ಷಿ ಅಸ್ತç ಪ್ರಯೋಗಿಸಲಾಗುವುದು. ಪೊಲೀಸ್ ಇಲಾಖೆಯಲ್ಲಿ ಇರುವ ರೀತಿಯಲ್ಲೇ ಅರಣ್ಯ ಇಲಾಖೆಯಲ್ಲೂ ಆನ್ ಲೈನ್ ಎಫ್.ಐ.ಆರ್. ವ್ಯವಸ್ಥೆ…
ವಿರಾಜಪೇಟೆ ಜ.7 NEWS DESK : ಕರ್ನಾಟಕ ಸರಕಾರದ ಗಂಗೂಭಾಯಿ ಹಾನಗಲ್ ಯೂನಿವರ್ಸಿಟಿ ವತಿಯಿಂದ ಅಕ್ಟೋಬರ್ ತಿಂಗಳಿನಲ್ಲಿ ನಡೆಸಿದ ಭರತನಾಟ್ಯ ಪರೀಕ್ಷೆಯಲ್ಲಿ ನಾಟ್ಯಂಜಲಿ ನೃತ್ಯ ಸಂಸ್ಥೆಗೆ ಶೇ.100 ರಷ್ಟು ಫಲಿತಾಂಶ ದೊರೆತಿದೆ. ಪರೀಕ್ಷೆಗೆ ಹಾಜರಾಗಿದ್ದ ಸಂಸ್ಥೆಯ ವಿದ್ಯಾರ್ಥಿಗಳಾದ ಮನ್ವಿತಾ, ಜಾನ್ವಿ ಶೆಟ್ಟಿ, ಅಶ್ಮಯ ಸಚಿನ್ ಹಾಗೂ ಪಿಯಾ ಪೊನ್ನಮ್ಮ ಉತ್ತಮ ಅಂಕದೊಂದಿಗೆ ತೇರ್ಗಡೆ ಹೊಂದಿದ್ದಾರೆ. ಹಲವಾರು ವರ್ಷಗಳಿಂದ ಶೇ.100 ರಷ್ಟು ಫಲಿತಾಂಶವನ್ನು ಈ ಸಂಸ್ಥೆ ಪಡೆದುಕೊಂಡು ಬಂದಿರುವುದು ಸಂಸ್ಥೆಯ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕರಾದ ಗುರು ಹೇಮಾವತಿ ಕಾಂತ್ರಾಜ್ ಹಾಗೂ ಗುರು ಕಾವ್ಯಶ್ರೀ ಕಾಂತ್ರಾಜ್ ತಿಳಿಸಿದ್ದಾರೆ.
ಮಡಿಕೇರಿ ಜ.7 NEWS DESK : ಸಿದ್ದಾಪುರದ ಶ್ರೀ ದುರ್ಗಾಭಗವತಿ ದೇವಾಲಯದ ತಿರು ಮಹೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಬ್ರಹ್ಮಶ್ರೀ ಈಡವಲತ್ ಪುಡಯೂರ್ಮನ ಕುಬೇರನ್ ನಂಬೂದಿರಿಪಾಡ್ ತಂತ್ರಿಗಳು ರಾಜರಾಜೇಶ್ವರ ದೇವಸ್ಥಾನದ ತಲೋರ ತಳಿಪರಂಬ್ ನೇತೃತ್ವದಲ್ಲಿ ನಾಲ್ಕು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿತು. ಜ.3ರ ಸಂಜೆಯಿಂದಲೇ ಪುಣ್ಯಾಹ ಪ್ರಾಸಶುದ್ಧಿ, ವಾಸ್ತುಬಲಿ, ದೀಪಾರಾಧನೆ, ತ್ರಿಕೊಡಿಯೆಟಂ, ಅತ್ತಾಯ ಪೂಜಾ, ಮಹಾಪೂಜೆ, ಮಹಾಗಣಪತಿ ಹೋಮ, ಉಷಾಪೂಜೆ, ಮಹಾಸುದರ್ಶನ ಹೋಮ, ಮಹಾಮೃತ್ಯುಂಜಯ ಹೋಮ, ನವಕಂ ಪಂಚಗವ್ಯಂ, ಕಲಶಾಭಿಷೇಕ, ಭಗವತಿಸೇವೆ, ದೀಪಾರಾಧನೆ, ಸಹಸ್ರದೀಪಾ, ಗುಳಿಗ, ನಾಗದೇವರಿಗೆ ಪೂಜೆ, ಕಲಶಭಿಷೇಕ ಮಹಾಪೂಜೆ ತ್ಡಂಬ್ನೃತ್ಯ, ಅತ್ತಾಯಪೂಜಾ ತ್ರಿಕೊಡಿಎರಕಂ ಪೂಜೆ ಹಾಗೂ ಬಲಿಬಿಂಬದ ಮೆರವಣಿಗೆ ನಡೆಯಿತು. ನೆರೆದಿದ್ದ ಭಕ್ತಾಧಿಗಳಿಗೆ ನಾಲ್ಕುದಿನವೂ ಅನ್ನಸಂತರ್ಪಣೆ ನೆರವೇರಿತು. ವಿವಿಧ ಗ್ರಾಮಗಳಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ದುರ್ಗಾಭಗವತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ನಾಪೋಕ್ಲು ಜ.7 NEWS DESK : ಸಂಘಟನೆಯಿಂದ ಶಕ್ತರಾಗಿರಿ ವಿದ್ಯೆಯಿಂದ ಪ್ರಬುದ್ಧರಾಗಿರಿ ಎಂಬ ಶ್ರೀ ನಾರಾಯಣ ಗುರುಗಳ ಧ್ಯೇಯೋದ್ದೇಶವನ್ನು ಸಾಕಾರಗೊಳಿಸುವಲ್ಲಿ ಎಸ್ಎನ್ಡಿಪಿ ಕಾರ್ಯನಿರ್ವಹಿಸುತ್ತಿದೆ ಎಂದು ಎಸ್ಎನ್ಡಿಪಿ ಜಿಲ್ಲಾಧ್ಯಕ್ಷ ವಿ.ಕೆ.ಲೋಕೇಶ್ ಹೇಳಿದರು. ನಾಪೋಕ್ಲುವಿನಲ್ಲಿ ಆಯೋಜಿಸಲಾಗಿದ್ದ ಎಸ್ಎನ್ಡಿಪಿ ಶಾಖೆಯ ಸಂಘಟನಾ ಪುನರ್ ರಚನಾ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಬ್ಬರು ಸಂಘಟನೆಯ ಸದಸ್ಯರಾಗಬೇಕು. ನಾರಾಯಣ ಗುರು ನಮ್ಮ ಜೀವನ ಹೀಗಿರಬೇಕು ಎಂದು ಚೌಕಟ್ಟನ್ನು ರೂಪಿಸಿದರು. ಆ ಚೌಕಟ್ಟಿನ ಒಳಗಡೆ ಸಂಘಟನೆ ಸದಸ್ಯರು ಕಾರ್ಯನಿರ್ವಹಿಸಬೇಕು ಎಂದರು. ವಿವಿಧ ಕ್ಷೇತ್ರಗಳಲ್ಲಿ ಸಮಾಜದ ಮಂದಿ ಸಾಧನೆ ಮಾಡಿದ್ದಾರೆ. ಆರ್ಥಿಕವಾಗಿ ಸದೃಢರಾಗಲು ಗುರುಗಳು ಹಾಕಿ ಕೊಟ್ಟ ಮೇಲ್ಪಂಕ್ತಿಯನ್ನು ಅನುಸರಿಸಬೇಕು ಎಂದರು. ಸೈನ್ಯ ಕೃಷಿ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸುವಂತಾಗಬೇಕು ಎಂದು ಹೇಳಿದರು. ಜಿಲ್ಲೆಯ ನಿವಾಸಿಗಳ ಜೊತೆಯಲ್ಲಿ ಉತ್ತಮ ಸಂಬಂಧವನ್ನು ರೂಢಿಸಿಕೊಂಡು ಎಸ್ಎನ್ಡಿಪಿ ಸದಸ್ಯರು ಜೀವನವನ್ನು ರೂಪಿಸಿಕೊಂಡು ಹೋಗುತ್ತಿದ್ದಾರೆ. ಎಂದ ಅವರು ನಮ್ಮ ಸಂಘಟನೆಯಿಂದ ಇನ್ನಷ್ಟು ಜನಪರ ಕೆಲಸಗಳು…
ಮಡಿಕೇರಿ ಜ.7 NEWS DESK : ಕನ್ನಡ ನಾಡಿನ ಹಿರಿಯ ಸಾಹಿತಿ ಶಿಶು ಸಾಹಿತ್ಯದ ಪಿತಾಮಹ “ಎಲ್ಲಿ ಭೂರಮೆ ದೇವ ಸನ್ನಿಧಿ ಬಯಸಿ ಭಿಮ್ಮನೆ ಬಂದಳೊ” ಕೊಡಗಿನ ನಾಡಗೀತೆಯ ರಚನಾಕಾರ ಮಡಿಕೇರಿ ಸೆಂಟ್ರಲ್ ಹೈ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ಏಕೈಕ ಭಾರತೀಯ ಕನ್ನಡ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ ಬ್ರಿಟಿಷರ ಕಾಲದಲ್ಲಿ ಕೊಡಗಿನ ಶಾಲಾ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ ಅಪ್ರತಿಮಾ ಸಂಘಟಕ, ದಿ. ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆ ಕಾರ್ಯಕ್ರಮಗಳನ್ನು ಆಯೋಜಿಸುವ ಸಲುವಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮ ನಡೆಸುವ ಸ್ಥಳ, ನಡೆಸುವ ರೀತಿಯ ಬಗ್ಗೆ ಸಲಹೆ ಸೂಚನೆ ನೀಡುವಂತೆ ಉಪಸ್ಥಿತರಿದ್ದವರಲ್ಲಿ ಕೋರಿದರು. ಸಭೆಯಲ್ಲಿ ಉಪಸ್ಥಿತರಿದ್ದ ಗೌರವ ಕಾರ್ಯದರ್ಶಿ ಮುನೀರ್ ಅಹಮದ್, ಸಾಹಿತಿಗಳಾದ ಡಾ. ಜಿ.ಸೋಮಣ್ಣ, ಮಡಿಕೇರಿ ತಾಲ್ಲೂಕು ನಿಕಟಪೂರ್ವ ಅಧ್ಯಕ್ಷ ಅಂಬೇಕಲ್ ನವೀನ್,…
ಮಡಿಕೇರಿ ಜ.7 NEWS DESK : ಕೊಡಗು ಜಿಲ್ಲೆಯಲ್ಲಿ ವೇದಪಾಠ ಶಾಲೆ ಆರಂಭಿಸುವ ಉದ್ದೇಶಕ್ಕೆ ಸೂಕ್ತ ಜಾಗವನ್ನು ಮಂಜೂರು ಮಾಡಬೇಕೆಂದು ಕೊಡಗು ಪುರೋಹಿತ ಕಾರ್ಮಿಕರ ಫೆಡರೇಷನ್ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಅವರ ಬಳಿ ಮನವಿ ಮಾಡಿದೆ. ವೇದಪಾಠ ಶಾಲೆ ಆರಂಭಿಸಲು ಜಾಗ ಮಂಜೂರು ಮಾಡುವುದಾಗಿ ಶಾಸಕರು ನಿಯೋಗಕ್ಕೆ ಭರವಸೆ ನೀಡಿರುವುದಾಗಿ ಪುರೋಹಿತ ಕಾರ್ಮಿಕರ ಫೆಡರೇಷನ್ ನ ಜಿಲ್ಲಾಧ್ಯಕ್ಷ ಪ್ರಸನ್ನ ಭಟ್ ತಿಳಿಸಿದರು. ಭಾರತದ ಎಲ್ಲಾ ಜ್ಞಾನ ಶಾಖೆಗಳಿಗೂ ಮಾತೆಯಾಗಿರುವ ವೇದಗಳ ಅಧ್ಯಯನಕ್ಕೆ ಸ್ಥಳಾವಕಾಶವನ್ನು ನೀಡುವುದು ಕೊಡಗು ಜಿಲ್ಲೆಗೆ ಹೆಮ್ಮೆಯ ವಿಚಾರವಾಗಿದೆ. ವೇದಪಾಠ ಶಾಲೆಯೊಂದಿಗೆ ವೈದಿಕ ಭವನವನ್ನು ಸ್ಥಾಪಿಸಿ ವೈದಿಕರ ಧಾರ್ಮಿಕ ವಿಧಿಗಳಿಗೂ ಅನುಕೂಲ ಕಲ್ಪಿಸುವ ಕಾರ್ಯವಾಗಬೇಕು. ಇದಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಫೆಡರೇಷನ್ ರಾಜ್ಯಾಧ್ಯಕ್ಷ ಡಾ.ಶ್ರೀನಿವಾಸನ್ ಹೇಳಿದ್ದಾರೆ. ಈ ಸಂದರ್ಭ ಫೆಡರೇಷನ್ ಉಪಾಧ್ಯಕ್ಷ ಸುದರ್ಶನ್, ಖಜಾಂಚಿ ಎಸಳೂರು ಉದಯಕುಮಾರ್, ಕಾರ್ಯದರ್ಶಿ ಪ್ರಸಾದ್ ಮತ್ತಿತರರು ಹಾಜರಿದ್ದರು. ಕೊಡಗು ಜಿಲ್ಲೆಯ ಅಸಂಘಟಿತ ಪುರೋಹಿತರನ್ನು ಸಂಘಟಿಸಲು ತಾಲ್ಲೂಕು ಸಮಿತಿಗಳನ್ನು ರಚಿಸಲಾಗುವುದು. ವಿವಿಧ ದೇವಾಲಯಗಳಲ್ಲಿ…
ಮಡಿಕೇರಿ ಜ.7 NEWS DESK : ಗ್ರಾಮೀಣ ಪ್ರದೇಶದಲ್ಲಿ ನೆಲೆನಿಂತಿರುವ ಮಾದಾಪುರದ ಶ್ರೀಮತಿ ಡಿ. ಚೆನ್ನಮ್ಮ ಎಜುಕೇಶನ್ ಸೊಸೈಟಿ ಈಗ ವಜ್ರ ಮಹೋತ್ಸವದ ಸಂಭ್ರಮದಲ್ಲಿದ್ದು, ಜ.11 ರಂದು ಸಂಸ್ಥೆಯ 60ನೇ ವಷಾ೯ರಣೆ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಕನ೯ಲ್ ಬಿ.ಜಿ.ವಿ. ಕುಮಾರ್ ತಿಳಿಸಿದ್ದಾರೆ. ದಾನಿಗಳಾದ ದಿವಂಗತ ಲೆಫ್ಟಿನೆಂಟ್ ಕನ೯ಲ್ ಡಿ.ಸಿ.ಬಸಪ್ಪ ಅವರ ಪ್ರಯತ್ನದಿಂದಾಗಿ ಅವರ ತಾಯಿ ಡಿ ಚೆನ್ನಮ್ಮ ಸ್ಮರಣಾಥ೯ 1960 ರ ಜುಲೈ 22 ರಂದು ಆರಂಭವಾದ ಪ್ರೌಡಶಾಲೆ 6 ದಶಕಗಳಲ್ಲಿ ಈ ವ್ಯಾಪ್ತಿಯ ಗ್ರಾಮೀಣ ವಿದ್ಯಾಥಿ೯ಗಳಿಗೆ ಜ್ಞಾನದೀವಿಗೆ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ದಿವಂಗತರಾದ | ಮಚ್ಚಂಡ ಗಣಪತಿ, ಪುಟ್ಟುಸ್ವಾಮಿ ಮುತ್ತಯ್ಯ ಗುಂಡುಕುಟ್ಟಿ ಮಂಜುನಾಥಯ್ಯ, ಎಂ ಎ ಪೊನ್ನಪ್ಪ, , ಕೆ.ಡಿ.ಸೋಮಯ್ಯ, ಸಿ.ಎ.ಪೂವಯ್ಯ, ಎಂ ಜಿ ಬೋಪಣ್ಣ ಸೇರಿದಂತೆ ಅನೇಕ ಮಹನೀಯರ ಪರಿಶ್ರಮದಿಂದಾಗಿ ಶಿಕ್ಷಣ ಸಂಸ್ಥೆಯು ಸಾಕಷ್ಟು ಅಭಿವೖದ್ದಿ ಹೊಂದಿದೆ ಎಂದು ಸ್ಮರಿಸಿಕೊಂಡರು. 1964ರಲ್ಲಿ ಗರಗಂದೂರಿನ ಈಗಿನ ಸುಂದರ ಕಟ್ಟಡಕ್ಕೆ ಶಾಲೆಯನ್ನು ಸ್ಥಳಾಂತರಿಸಲಾಯಿತು ಎಂದು ತಿಳಿಸಿದ…
ನಾಪೋಕ್ಲು ಜ.7 NEWS DESK : ಎಸ್ಎನ್ಡಿಪಿ ಶಾಖೆಯ ನೂತನ ಅಧ್ಯಕ್ಷರಾಗಿ ಟಿ.ಸಿ.ಲವ ಆಯ್ಕೆಯಾಗಿದ್ದಾರೆ. ನಾಪೋಕ್ಲುವಿನಲ್ಲಿ ಆಯೋಜಿಸಲಾಗಿದ್ದ ಎಸ್ಎನ್ಡಿಪಿ ಶಾಖೆಯ ಸಂಘಟನಾ ಪುನರ್ ರಚನಾ ಕಾರ್ಯಕ್ರಮದಲ್ಲಿ ಶಾಖೆಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಪಿ.ಎನ್.ಹರಿದಾಸ್, ಎಂ.ಕೆ.ತಂಗ, ಕಾರ್ಯದರ್ಶಿಯಾಗಿ ಪಿ.ಸಿ.ಕಿಶೋರ್ ಕುಮಾರ್, ಸಹ ಕಾರ್ಯದರ್ಶಿಯಾಗಿ ಎಂ.ಆರ್.ಅಜಿತ್, ಖಜಾಂಜಿಯಾಗಿ ಕೆ.ಬಿ.ಸುಧೀಶ್, ಯೂನಿಯನ್ ಪ್ರತಿನಿಧಿಯಾಗಿ ಟಿ.ಸಿ.ರಾಜೀವ್, ಸಂಘಟನಾ ಕಾರ್ಯದರ್ಶಿ ಚಿನ್ನ, ಸಂಘಟನಾ ಸಹ ಕಾರ್ಯದರ್ಶಿಯಾಗಿ ಎ.ಕೆ.ಮನೋಹರ, ನಿರ್ದೇಶಕರಾಗಿ ಟಿ.ಸಿ.ಮಣಿ, ಟಿ.ಸಿ.ಹರೀಶ್, ಪಿ.ಬಿ.ಹರೀಶ್ ಕುಮಾರ್ ನೇಮಕಗೊಂಡರು. ಸಂಘದ ಅಧ್ಯಕ್ಷ ಟಿ.ಸಿ.ರಾಜೀವ್ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಎಸ್ಎನ್ಡಿಪಿ ಜಿಲ್ಲಾಧ್ಯಕ್ಷ ವಿ.ಕೆ.ಲೋಕೇಶ್, ಕೊಡಗು ಜಿಲ್ಲಾ ಮಹಿಳಾ ಯೂನಿಯನ್ ಹಾಗೂ ಬ್ಯಾಂಕ್ ಅಧ್ಯಕ್ಷ ರಿಷ ಸುರೇಂದ್ರನ್, ಜಿಲ್ಲಾ ಗೌರವ ಕಾರ್ಯದರ್ಶಿ ಪ್ರೇಮಾನಂದ, ನಾಪೋಕ್ಲು ವಿ ಎಸ್ ಎಸ್ ಎನ್ ನಿರ್ದೇಶಕ, ಎಸ್.ಎನ್ಡಿ.ಪಿ ಶಾಖೆಯ ನಿರ್ದೇಶಕ ಟಿ.ಎ.ಮಿಟ್ಟು, ನಾಪೋಕ್ಲು ಶಾಖೆಯ ಉಪಾಧ್ಯಕ್ಷ ಟಿ.ಆರ್.ಮಣಿ, ಕಬಡಕೇರಿ ನಿರ್ದೇಶಕ ವಿನಿಲ್ ಪಪ್ಪು, ಗೌರವ ಕಾರ್ಯದರ್ಶಿ ಟಿ.ಕೆ.ರಘು ಹಾಗೂ ಶಾಖೆಯ ನಿರ್ದೇಶಕರು ಸದಸ್ಯರು ಪಾಲ್ಗೊಂಡಿದ್ದರು. ವರದಿ…






