ನಾಪೋಕ್ಲು ಜ.7 NEWS DESK : ಸಿ ಮತ್ತು ಡಿ ವರ್ಗದ ಜಮೀನನ್ನು ಮೀಸಲು ಅರಣ್ಯವೆಂದು ಘೋಷಿಸುವ ವಿಷಯದ ಕುರಿತಾಗಿ ಚರ್ಚಿಸಲು ಕುಂಜಿಲ ಕಕ್ಕಬೆ ಗ್ರಾಮ ಪಂಚಾಯಿತಿಯಲ್ಲಿ ವಿಶೇಷ ಗ್ರಾಮ ಸಭೆ ನಡೆಯಿತು. ಕುಂಜಿಲ ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಜಿಲ, ಯವಕಪಾಡಿ, ನಾಲಡಿ ಮತ್ತು ಮರಂದೋಡ ಗ್ರಾಮಗಳಲ್ಲಿ ಈಗಾಗಲೇ ವಾಸದ ಮನೆಯನ್ನು ನಿರ್ಮಿಸಿರುವ, ಕೃಷಿ ಮಾಡಿಕೊಂಡು ಅನುಭವ ಸ್ವಾಧೀನದಲ್ಲಿರುವ ಜಾಗವನ್ನು ಹೊರತುಪಡಿಸಿ, ಜಮ್ಮಾ ಮಲೆಗೆ ಹೋಗುವ ಬಂಡಿ ದಾರಿ, ಕುಡಿಯುವ ನೀರಿನ ಮೂಲ, ದೇವರ ಸ್ಥಾನಗಳಿಗೆ ಹೋಗುವ ದಾರಿಗೆ ಅಡ್ಡಿ ಪಡಿಸದಂತೆ ನಿರ್ಣಯ ಕೈಗೊಂಡು ಸಂಬಂಧಿಸಿದ ಇಲಾಖೆಯ ಅಧಿಕಾರಿವರಿಗೆ ಕಳುಹಿಸಿಕೊಡುವಂತೆ ತೀರ್ಮಾನಿಸಿದರು. ಪಂಚಾಯಿತಿ ಅಧ್ಯಕ್ಷೆ ಪಿ.ಎಲ್.ಶಿಲ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ವೈ.ಅಶೋಕ್ ಕುಮಾರ್, ಕಂದಾಯ ಪರಿವೀಕ್ಷಕ ರವಿ ಕುಮಾರ್, ಭಾಗಮಂಡಲ ವಲಯ ಅರಣ್ಯಾಧಿಕಾರಿ ಗ್ರಾಮಸ್ಥರ ಕೆಲ ಪ್ರಶ್ನೆಗಳಿಗೆ ಉತ್ತರಿಸಿದರು. ಸಭೆಯಲ್ಲಿ ಪಂಚಾಯಿತಿ ಉಪಾಧ್ಯಕ್ಷೆ ಬೀನಾ ಸುಚಿತ್ರ, ಸದಸ್ಯರಾದ ಚೋಯಮಾಡಂಡ ಹರಿ ಮೊಣ್ಣಪ್ಪ, ಲೀಲಾವತಿ, ನಂಬುಡಮಂಡ ಶೈಲ,…
ಲೇಖಕ: admin
ಮಡಿಕೇರಿ ಜ.7 NEWS DESK : ನವದೆಹಲಿಯಲ್ಲಿ ಜ.12 ರಂದು ನಡೆಯಲಿರುವ ರಾಷ್ಟ್ರಮಟ್ಟದ ಯುವ ಜನೋತ್ಸವದಲ್ಲಿ ಕೊಡಗಿನ ಶ್ವೇತನ್ ಜಿ.ರೈ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ಭಾರತ ಸರ್ಕಾರದ ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಡಿಕೇರಿ, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಯುವ ಒಕ್ಕೂಟ ಕೊಡಗು, ತಾಲ್ಲೂಕು ಯುವ ಒಕ್ಕೂಟ ಮಡಿಕೇರಿ, ಸೋಮವಾರಪೇಟೆ, ಹಾಗೂ ವಿರಾಜಪೇಟೆ, ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಯುವ ಜನೋತ್ಸವದ ವೈಯಕ್ತಿಕ ವಿಜ್ಞಾನ ಮೇಳ ವಿಭಾಗದಲ್ಲಿ ಭಾಗವಹಿಸಿದ ಶ್ವೇತನ್ ಜಿ.ರೈ ಪ್ರಥಮ ಸ್ಥಾನ ಗಳಿಸಿದ್ದರು. ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ವಿಜ್ಞಾನ ಮೇಳದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ನವದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಯುವ ಜನೋತ್ಸವದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ ಎಂದು ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ತಿಳಿಸಿದ್ದಾರೆ. ಕಳತ್ಮಾಡ್ ಲಯನ್ಸ್ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಯಾಗಿರುವ…
ನಾಪೋಕ್ಲು ಜ.8 NEWS DESK : ಪಟ್ಟಣದಲ್ಲಿ ವಾಹನ ದಟ್ಟಣೆ ನಿಯಂತ್ರಿಸುವ ಸಲುವಾಗಿ ಕಾರ್ಯಯೋಜನೆಗಳನ್ನು ಹಮ್ಮಿಕೊಳ್ಳಲು ಜ.8 ರಂದು ಪಟ್ಟಣದ ಅಂಗಡಿ ಮಾಲೀಕರ ತುರ್ತು ಸಭೆಯನ್ನು ಕರೆಯಲಾಗಿದೆ ಎಂದು ಠಾಣಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ. ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಬೆಳಗ್ಗೆ 10.30 ಗಂಟೆಗೆ ಅಂಗಡಿ ಮಾಲೀಕರ ಸಭೆ ನಡೆಯಲಿದ್ದು, ಎಲ್ಲ ಅಂಗಡಿ ಮಾಲೀಕರು ಸಮಯಕ್ಕೆ ಸರಿಯಾಗಿ ಆಗಮಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ. ವರದಿ : ದುಗ್ಗಳ ಸದಾನಂದ.
ವಿರಾಜಪೇಟೆ ಜ.7 NEWS DESK : ವಿರಾಜಪೇಟೆಯ ಮಟನ್ ಮಾರ್ಕೆಟ್ ಬಳಿ ಇರುವ ಆಟೋ ನಿಲ್ದಾಣಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಆಟೋ ಚಾಲಕರ ಮನವಿಗೆ ಸ್ಪಂದಿಸಿದರು. ವಿರಾಜಪೇಟೆಯ ಮಟನ್ ಮಾರ್ಕೆಟ್ ಬಳಿ ಹಲವಾರು ವರ್ಷದಿಂದ ಇದ್ದ ಆಟೋ ನಿಲ್ದಾಣವನ್ನು ಬದಲಾಯಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ ಹಿನ್ನೆಲೆ ಆಟೋ ಚಾಲಕರು ಶಾಸಕರೊಂದಿಗೆ ತಮ್ಮ ನೋವನ್ನು ಹೇಳಿಕೊಂಡರು. ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಆಟೋ ಚಾಲಕರ ಅಹವಾಲುಗಳನ್ನು ಆಲಿಸಿದ ಶಾಸಕರು, ಸ್ಥಳೀಯ ವ್ಯಾಪಾರಿಗಳಿಗೆ ಹಾಗೂ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಅಲ್ಲಿಯೇ ಆಟೋ ನಿಲ್ದಾಣವನ್ನು ಚಾಲಕರ ಇಚ್ಛೆಯಂತೆ ಮುಂದುವರೆಯಲು ಸೂಚನೆ ನೀಡಿದರು. ಅಲ್ಲದೇ ತಾವೇ ಸ್ವತಹ ಆಟೋವನ್ನು ಚಾಲನೆ ಮಾಡುವ ಮೂಲಕ ಆಟೋ ಚಾಲಕರೊಂದಿಗೆ ತಾನು ಸದಾ ಇದ್ದೇನೆ ಎಂದು ಸಂದೇಶ ಸಾರಿದರು. ಈ ಸಂದರ್ಭ ಆಟೋ ಚಾಲಕರು ಹಾಗೂ ಸಾರ್ವಜನಿಕರು ಶಾಸಕರಿಗೆ ಜಯ ಘೋಷ ಕೂಗಿ ಹರ್ಷ ವ್ಯಕ್ತಪಡಿಸಿದರು. ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ…
ಮಡಿಕೇರಿ NEWS DESK ಜ.7 : ಹುಲಿ ದಾಳಿಯಿಂದ ಹಸುವೊಂದು ಸಾವನ್ನಪ್ಪಿರುವ ಘಟನೆ ಪೊನ್ನಂಪೇಟೆಯ ಮಾಯಮುಡಿ ಗ್ರಾಮದಲ್ಲಿ ನಡೆದಿದೆ. ಕೊಂಗಂಡ ನಂಜಪ್ಪ ಎಂಬುವವರಿಗೆ ಸೇರಿದ ಹಸು ಇದಾಗಿದ್ದು, ಗ್ರಾಮದಲ್ಲಿ ಆತಂಕ ಮನೆ ಮಾಡಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಹಾಗೂ ಗ್ರಾ.ಪಂ ಪ್ರತಿನಿಧಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹುಲಿ ಮಾಯಮುಡಿ ವ್ಯಾಪ್ತಿಯಲ್ಲೇ ಇರುವುದರಿಂದ ಗ್ರಾಮಸ್ಥರು, ವಿದ್ಯಾರ್ಥಿಗಳು ಹಾಗೂ ಕಾರ್ಮಿಕರು ಎಚ್ಚರಿಕೆಯಿಂದ ಇರುವಂತೆ ಮಾಯಮುಡಿ ಗ್ರಾ.ಪಂ ಅಧ್ಯಕ್ಷ ಟಾಟು ಮೊಣ್ಣಪ್ಪ ಮನವಿ ಮಾಡಿದ್ದಾರೆ.
ಬೆಂಗಳೂರು NEWS DESK ಜ.7 : ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿರುವ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ವಿಮಾನ ನಿಲ್ದಾಣ ಮೊದಲ ಹಂತದ ವಿಸ್ತರಣೆಗಾಗಿ ಭೂಮಿ ಹಸ್ತಾಂತರ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಮಧ್ಯ ಪ್ರವೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿಗಳ ನಿವಾಸ “ಕಾವೇರಿ”ಯಲ್ಲಿ ಸಿದ್ದರಾಮಯ್ಯ ಅವರನ್ನು ಸೋಮವಾರ ಬೆಳಗ್ಗೆ ಭೇಟಿ ಮಾಡಿದ ಸಂಸದರು ಮನವಿ ಸಲ್ಲಿಸಿ, ಮೈಸೂರು ಕ್ಷೇತ್ರದಲ್ಲಿ ಆಗಬೇಕಾಗಿರುವ ಅಭಿವೃವೃದ್ಧಿ ಯೋಜನೆಗಳು ಹಾಗೂ ಇತರೆ ವಿಷಯಗಳ ಬಗ್ಗೆ ಸುದೀರ್ಘವಾಗಿ ಸಮಾಲೋಚನೆ ನಡೆಸಿದರು. ಮೈಸೂರು ಸಾಂಸ್ಕೃತಿಕ ರಾಜಧಾನಿಯಾಗಿದೆ ಹಾಗೂ ಇತ್ತೀಚೆಗೆ ವಾಣಿಜ್ಯ ಚಟುವಟಿಕೆಗಳು ಹೆಚ್ಚಾಗಿ ನಡೆಯುತ್ತಿರುವುದರಿಂದ ದೇಶ-ವಿದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ, ಉದ್ಯಮಿಗಳಿಗೆ, ಅನುಕೂಲವಾಗಲು ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ ಮಾಡಬೇಕಾದ ತುರ್ತು ಅಗತ್ಯವಿದೆ. ಈ ನಿಟ್ಟಿನಲ್ಲಿ 46 ಎಕರೆ ಭೂಮಿ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಳಿಸಲು ಮಧ್ಯಪ್ರವೇಶಿಸಬೇಕು ಎಂದು ಸಿದ್ದರಾಮಯ್ಯ ಅವರಿಗೆ ಯದುವೀರ್ ಮನವಿ ಮಾಡಿದರು. ಈಗಾಗಲೇ ಭೂ ಸ್ವಾಧೀನಕ್ಕೆ ವಿಶೇಷ…
ಮಡಿಕೇರಿ ಜ.7 NEWS DESK : ಅಖಿಲ ಭಾರತ ಟೆಕ್ವಾಂಡೊ ಅಸೋಸಿಯೇಷನ್ ವತಿಯಿಂದ ನಡೆದ 27ನೇ ಎಐಟಿಎ ರಾಷ್ಟ್ರೀಯ ಐಟಿಎಫ್ ಟೆಕ್ವಾಂಡೊ ಚಾಂಪಿಯನ್ ಶಿಪ್ ನಲ್ಲಿ ಬಲಂಬೇರಿ ಗ್ರಾಮದ ಬೊಳ್ತಂಡ ಸಿ.ಜಸ್ಮಿತಾ ಚಿನ್ನ ಹಾಗೂ ಕಂಚಿನ ಪದಕ ಗೆದ್ದುಕೊಂಡಿದ್ದಾಳೆ. ನವದೆಹಲಿಯ ರಾಜ್ಘಾಟ್ನ ಇಂದಿರಾ ಗಾಂಧಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಸ್ಟೇಡಿಯಂನಲ್ಲಿ ನಡೆದ 14ರ ಒಳಗಿನ ವಯೋಮಿತಿಯ ಬಾಲಕಿಯರ ವಿಭಾಗದ ಸ್ಪರಿಂಗ್ ವಿಭಾಗದಲ್ಲಿ ಪ್ರಥಮ ಹಾಗೂ ಸೆಲ್ಫ್ಡಿಫೆನ್ಸ್ ವಿಭಾಗದಲ್ಲಿ ಕಂಚಿನ ಪದಕ ಸಾಧನೆ ಮಾಡಿದ್ದಾಳೆ. ಬೊಳ್ತಂಡ ಸಿ.ಜಸ್ಮಿತಾ ಬೆಂಗಳೂರಿನಲ್ಲಿ ನೆಲೆಸಿದ್ದು, ಮೂಲತಃ ಮೂರ್ನಾಡು ಸಮೀಪದ ಬಲಂಬೇರಿ ಗ್ರಾಮದ ಬೊಳ್ತಂಡ ಚಂಗಪ್ಪ ಹಾಗೂ ನಮಿತಾ (ತಾಮನೆ-ಗಿಜಿಗಂಡ) ದಂಪತಿ ಪುತ್ರಿ. ಬೆಂಗಳೂರಿನ ಖಾಸಗಿ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಕಳೆದ ಒಂದುವರೆ ವರ್ಷದಿಂದ ತರಬೇತುದಾರರಾದ ಗಂಗಾಧರ್ ಹಾಗೂ ಅನಿಲ್ ಅವರಿಂದ ಕರಾಟೆ ತರಬೇತಿ ಪಡೆಯುತ್ತಿದ್ದಾಳೆ.
ಬೆಂಗಳೂರು NEWS DESK ಜ.7 : ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿ ಮಾಡಿದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಸಮಾಲೋಚನೆ ನಡೆಸಿದರು. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಸಂಸದರು ಭೇಟಿ ಮಾಡಿದರು. ಮೈಸೂರಿನಲ್ಲಿ ಬಾಕಿ ಉಳಿದಿರುವ ಅಭಿವೃದ್ಧಿ ಯೋಜನೆಗಳು ಹಾಗೂ ಮುಂಬರುವ ಯೋಜನೆಗಳ ಕುರಿತು ಮುಖ್ಯ ಕಾರ್ಯದರ್ಶಿಗಳಿಗೆ ಮನವರಿಕೆ ಮಾಡಿಕೊಟ್ಟರು. ಮೈಸೂರಿನ ಎಲ್ಲಾ ಯೋಜನೆಗಳಿಗೂ ಸೂಕ್ತ ನೆರವು, ಬೆಂಬಲ ಒದಗಿಸಲಾಗುವುದು ಎಂದು ಮುಖ್ಯಕಾರ್ಯದರ್ಶಿಗಳು ಇದೇ ಸಂದರ್ಭ ಭರವಸೆ ನೀಡಿದ್ದಾರೆ ಎಂದು ಸಂಸದರು ತಿಳಿಸಿದರು.
ಮಡಿಕೇರಿ ಜ.7 NEWS DESK : ಇತ್ತೀಚಿಗೆ ನಿಧನರಾದ ಸಿದ್ದಾಪುರ ಭಾಗದ ಡಿಸಿಸಿ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ದಿವಂಗತ ಮೂಸ ಅವರ ಮನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಂತ್ವಾನ ಹೇಳಿದರು. ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ಸಹಾಯದ ಅಗತ್ಯವಿದ್ದಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷವು ಸದಾ ನಿಮ್ಮೊಂದಿಗಿದೆ ಎಂಬ ಭರವಸೆ ನೀಡಿದರು. ಇದೇ ಸಂದರ್ಭ ಕುಟುಂಬಸ್ಥರಿಗೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಚೆಕ್ ಹಸ್ತಾಂತರಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜಿ ಪೂಣ್ಣಚ್ಚ, ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಹನೀಫ್, ಕೆಡಿಪಿ ವಿರಾಜಪೇಟೆ ಸದಸ್ಯ ಕೋಲುಮಂಡ ರಫೀಕ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಹಾಜರಿದ್ದರು.
ಮಡಿಕೇರಿ NEWS DESK ಜ.7 : ಶ್ರೀ ಮಹಾಮೃತ್ಯುಂಜಯ ದೇವಸ್ಥಾನ ಎಂದು ಮರು ನಾಮಕರಣಗೊಂಡಿರುವ ಕಟ್ಟೆಮಾಡು ಗ್ರಾಮದ ಪುರಾತನ ಮಹಾದೇವ ದೇವಸ್ಥಾನವನ್ನು ಸರಕಾರ ತನ್ನ ಅಧೀನಕ್ಕೆ ಒಳಪಡಿಸಿಕೊಳ್ಳಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೆಲವರು ದೇವಾಲಯದ ಮೇಲೆ ಹಿಡಿತ ಸಾಧಿಸಿದ್ದು, ಆದಿಮಸಂಜಾತ ಕೊಡವರನ್ನು ಕಡೆಗಣಿಸಿದ್ದಾರೆ. ಕುಪ್ಯಚೇಲೆ ಧರಿಸಿ ದೇವಾಲಯಕ್ಕೆ ಹೋದವರನ್ನು ತಡೆದು ಅವಮಾನಿಸಲಾಗಿದೆ. ಇದು ಸಂವಿಧಾನ ವಿರೋಧಿ ಧೋರಣೆಯಾಗಿದೆ ಎಂದು ಆರೋಪಿಸಿದ್ದಾರೆ. ಬೈಲಾ ತಿದ್ದುಪಡಿ ಮಾಡುವಂತೆ ಸೂಚನೆ ಇದ್ದರೂ ಡ್ರೆಸ್ ಕೋಡ್ ಹೇರಲಾಗುತ್ತಿದೆ. ಸಮಿತಿ ಸಂವಿಧಾನ ವಿರೋಧಿ ಧೋರಣೆಗಳನ್ನು ಅನುಸರಿಸುತ್ತಿರುವುದರಿಂದ ಸರಕಾರ ದೇವಾಲಯದ ಮೇಲೆ ಹಿಡಿತ ಸಾಧಿಸಬೇಕು ಮತ್ತು ಆರೋಪಗಳ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಮುಜರಾಯಿ ಸಚಿವರಿಗೂ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ. ಕೊಡವ ಸಾಂಸ್ಕೃತಿಕ ಪರಂಪರೆಯ ರಕ್ಷಣೆಗಾಗಿ ಮತ್ತು ಆದಿಮಸಂಜಾತ ಕೊಡವ ಜನಾಂಗದ ಹಕ್ಕುಗಳಿಗಾಗಿ ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ, ಸ್ವಯಂ ನಿರ್ಣಯದ ಬೇಡಿಕೆಯನ್ನು ಮುಂದಿಟ್ಟುಕೊoಡು…






