ಲೇಖಕ: admin

ದುಬೈ ಜ.20 NEWS DESK : ತುಂಬೆ ಗ್ರೂಪ್‌ನ ಸ್ಥಾಪಕ ಅಧ್ಯಕ್ಷ ಮತ್ತು ಬ್ಯಾರಿಸ್ ಕಲ್ಚರಲ್ ಫೋರಮ್ (ಬಿಸಿಎಫ್) ನ ಪೋಷಕ ಡಾ.ತುಂಬೆ ಮೊಯ್ದೀನ್ ಅವರಿಗೆ ಬ್ಯಾರಿಸ್ ಕಲ್ಚರಲ್ ಫೋರಮ್ – ಯುಎಇಯಿಂದ “ಗ್ಲೋಬಲ್ ವಿಷನರಿ ಎನ್‌ಆರ್‌ಐ ಪ್ರಶಸ್ತಿ” ಪ್ರದಾನ ಮಾಡಿ ಗೌರವಿಸಲಾಯಿತು.

Read More

ಬೆಂಗಳೂರು ಜ.20 NEWS DESK : ಮೊಟ್ಟಮೊದಲ ಖೊ – ಖೊ ವಿಶ್ವಕಪ್ ಪಂದ್ಯಾಕೂಟದಲ್ಲಿ ನೇಪಾಳವನ್ನು ಬಗ್ಗುಬಡಿದು ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಭಾರತದ ಮಹಿಳಾ ಮತ್ತು ಪುರುಷರ ಖೊ-ಖೊ ತಂಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಶುಭಕೋರಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಚೊಚ್ಚಲ ಖೊ-ಖೊ ವಿಶ್ವಕಪ್‌ನಲ್ಲಿ ಭಾರತೀಯ ತಂಡಗಳ ಈ ಅಮೋಘ ಸಾಧನೆ ಇತಿಹಾಸದ ಪುಟಗಳಲ್ಲಿ ಶಾಶ್ವತವಾಗಿ ಉಳಿಯಲಿದೆ. ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಕುರುಬೂರಿನ ಯುವತಿ ಚೈತ್ರ. ಬಿ ಅವರು ವಿಶ್ವವಿಜೇತ ಮಹಿಳಾ ಖೊ-ಖೊ ತಂಡದ ಭಾಗವಾಗಿರುವುದು ನಾಡಿಗೆ ಹೆಮ್ಮೆಯ ಸಂಗತಿ. ಭಾರತೀಯರ ಪಾಲಿಗೆ ಇದೊಂದು ಐತಿಹಾಸಿಕ ದಿನ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

Read More

ಕುಶಾಲನಗರ ಜ.20 NEWS DESK : ಮೈಸೂರು ವಿಶ್ವವಿದ್ಯಾನಿಲಯದಿಂದ 2023-24ನೇ ಸಾಲಿನ ಬಿ.ಎಡಿ(B.Ed) ಕೋರ್ಸ್‌ ಫಲಿತಾಂಶವನ್ನು ಪ್ರಕಟಿಸಿದ್ದು, ಸೆಂಟ್ ಜೋಸೆಫ್ ಕಾಲೇಜಿನಲ್ಲಿ ಬಿ.ಎಡಿ ಕೋರ್ಸ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಎಂ.ಸೋನಿಯಾ ಶೇ. 96.54 ಅಂಕಗಳಿಸುವ‌ ಮೂಲಕ ವಿಶ್ವವಿದ್ಯಾಲಯ ಮಟ್ಟದಲ್ಲಿ ಮೂರನೇ ರ‍್ಯಾಂಕ್ ಪಡೆದಿದ್ದಾರೆ. ಸೋನಿಯಾ ಹೆಬ್ಬಾಲೆ ಗ್ರಾಮದ ಕನಕ ಬ್ಲಾಕ್ ನಿವಾಸಿ ಪೊಲೀಸ್ ಅಧಿಕಾರಿಯಾಗಿದ್ದ ದಿವಂಗತ ಹೆಚ್.ಜೆ.ಮಹೇಶ್ ಮತ್ತು ಮಣಿ ದಂಪತಿ ಪುತ್ರಿ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಆಡಳಿತ ಮಂಡಳಿ ಅಭಿನಂದಿಸಿದೆ.

Read More

ಮಡಿಕೇರಿ ಜ.20 NEWS DESK : ಒಳ್ಳೆಯತನವನ್ನು ಬೆಳೆಸಿ ಕೆಟ್ಟತನವನ್ನು ಅಳಿಸುವವರೇ ಗುರುಗಳು. ಅದರಲ್ಲಿಯೂ ತಾಯಿ ಅತ್ಯಂತ ಶ್ರೇಷ್ಠ ಶಿಕ್ಷಕಿ ಎಂದು ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯ ಮೂರ್ತಿಗಳಾದ ಎಂ.ಜಿ. ಶುಕುರೆ ಕಮಲ್ ಹೇಳಿದರು. ಸ್ಥಳೀಯ ಸರಕಾರಿ ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜು ಹಳೆಯ ವಿದ್ಯಾರ್ಥಿಗಳ ಸಂಘಟನೆ ವತಿಯಿಂದ ಗುರು ಶಿಷ್ಯರ ಸಮ್ಮಿಲನ ಮತ್ತು ಸ್ನೇಹ ಸಂಗಮ ಜಿ.ಎಂ.ಪಿ ಶಾಲಾ ಮೈದಾನದಲ್ಲಿ ಆಯೋಜಿಸಲಾದ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಸುಂಟಿಕೊಪ್ಪ ಸರಕಾರಿ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಯೂ ಆಗಿರುವ ಅವರು ತಮ್ಮ ಪ್ರೌಢಶಾಲಾ ಪ್ರವೇಶಾತಿಯಿಂದ ಮೊದಲ್ಗೊಂಡು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕ ಮತ್ತು ಶಿಕ್ಷಕಿಯರು ತಿದ್ದಿ ತೀಡಿದ ಬಗ್ಗೆ ನಿದರ್ಶಗಳನ್ನು ವಿವರಿಸಿದರು. ಶಿಕ್ಷಣ ವ್ಯವಸ್ಥೆ ಬೆಳೆದು ಬಂದ ಕಾಲವನ್ನು ಪ್ರಾಚೀನ ಮಧ್ಯಮ ಮತ್ತು ಆಧುನಿಕ ಕಾಲಗಳೆಂದು ವಿಶ್ಲೇಷಿಸಿದ ಅವರು ಮಠಗಳು, ಮಸೀದಿಗಳು ಮತ್ತು ಚರ್ಚ್‍ಗಳು ಪ್ರಾಚೀನ ಕಾಲದಲ್ಲಿ ವಿದ್ಯಾದಾನದ ಕೇಂದ್ರಗಳಾಗಿದ್ದವು. ಮಧ್ಯಮ ಕಾಲದಲ್ಲಿ ಸರಕಾರಿ ಮತ್ತು ಖಾಸಗಿ ವಿದ್ಯಾಸಂಸ್ಥೆಗಳು ಶಿಕ್ಷಣ ವ್ಯವಸ್ಥೆಯನ್ನು…

Read More

ವಿರಾಜಪೇಟೆ ಜ.20 NEWS DESK : ಜಿಲ್ಲೆಯ ನಗರ ಮತ್ತು ಪಟ್ಟಣ ಪ್ರದೇಶಗಳಿ ಅಭಿವೃದ್ಧಿಯತ್ತ ಸಾಗುತ್ತಿದೆ. ವಿರಾಜಪೇಟೆ ನಗರದ ಅಭಿವೃದ್ಧಿಗೆ ಶಾಸಕರು ಪಣತೊಟ್ಟಿರುವ ಹಿನ್ನೆಲೆಯಲ್ಲಿ ಸುಮಾರು 10 ಕೋಟಿ ಅನುದಾನ ಬಿಡುಗಡೆಗೊಳಿಸಿದ್ದು, ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದು ವಿರಾಜಪೇಟೆ ನಗರ ಕಾಂಗ್ರೆಸ್ ಸಮಿತಿ ತಿಳಿಸಿದೆ. ಪತ್ರಿಕಾ ಗೋಷ್ಠಿಯಲ್ಲಿ ಪಕ್ಷದ ನಗರಾಧ್ಯಕ್ಷ ಮಾದಂಡ ಪಿ.ತಿಮ್ಮಯ್ಯ ಮಾತನಾಡಿ,ನಗರಾಭಿವೃದ್ಧಿಗೆ ಬಿಡುಗಡೆಗೊಳಿಸಿದ ಅನುದಾನಗಳ ಕುರಿತು ಮಾಹಿತಿ ನೀಡಿದರು. ಸುಂದರ ನಗರ ಸ್ವಚ್ಛ ನಗರದ ಪರಿಕಲ್ಪನೆಯೊಂದಿಗೆ ವಿರಾಜಪೇಟೆ ನಗರವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿರುವುದಾಗಿ ತಿಳಸಿದರು. ಶಾಸಕರಾದ ಎ.ಎಸ್. ಪೊನ್ನಣ್ಣ ಅವರು ಈ ಹಿಂದೆ ಚುನಾವಣೆ ಸಂದರ್ಭ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ಅಂಶಗಳಿಗೆ ಅನುಗುಣವಾಗಿ ಗೋಣಿಕೊಪ್ಪ ರಸ್ತೆಯ ಕಾವೇರಿ ಕಾಲೇಜಿನಿಂದ ದೊಡ್ಡಟ್ಟಿ ಚೌಕಿಯವರೆಗಿನ ರಸ್ತೆ ಎರಡು ಬದಿಯಲ್ಲಿ ಪಾದಚಾರಿ ಮಾರ್ಗ ನಿರ್ಮಾಣ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಒಟ್ಟು 5 ಕೋಟಿ 22 ಲಕ್ಷ ಅನುದಾನ, ಜೈನರ ಬೀದಿಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ನಾಗರಕಟ್ಟೆ ಉದ್ಯಾನವನ ನಿರ್ಮಾಣಕ್ಕೆ ಮತ್ತು ಉದ್ಯಾನವನ…

Read More

ಸೋಮವಾರಪೇಟೆ ಜ.20 NEWS DESK : ರೈತರು ಕೃಷಿ ಮಾಡುತ್ತಿರುವ ಸಿ ಆ್ಯಂಡ್ ಡಿ ಭೂಮಿಯನ್ನು ಮೀಸಲು ಅರಣ್ಯಕ್ಕೆ ಸೇರಿಸುವ ಹುನ್ನಾರಕ್ಕೆ ಸರ್ಕಾರ ಮುಂದಾದರೆ ಮುಂದಿನ ದಿನಗಳಲ್ಲಿ ರೈತಾಪಿ ವರ್ಗ ಎಲ್ಲಾ ಚುನಾವಣೆಗಳನ್ನು ಬಹಿಷ್ಕರಿಸಿ, ಅಸ್ತಿತ್ವಕ್ಕಾಗಿ ಉಗ್ರ ಪ್ರತಿಭಟನೆ ಹಾದಿಯನ್ನು ಹಿಡಿಯಬೇಕಾಗುತ್ತದೆ ಎಂದು ರೈತ ಹೋರಾಟ ಸಮಿತಿಯ ಅಧ್ಯಕ್ಷ ಕೆ.ಬಿ.ಸುರೇಶ್ ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುರ್ನಾಲ್ಕು ದಶಕಗಳಿಂದ ಸಿ ಆ್ಯಂಡ್ ಡಿ ಭೂಮಿಯಲ್ಲಿ ರೈತರು ಕೃಷಿ ಮಾಡಿಕೊಂಡು ಬರುತ್ತಿದ್ದಾರೆ. ಆದರಲ್ಲೂ ಶಾಂತಳ್ಳಿ ಹೋಬಳಿ ಎಲ್ಲಾ ಗ್ರಾಮಗಳಲ್ಲಿ ಸಿ ಆ್ಯಂಡ್ ಡಿ ಜಾಗವನ್ನೇ ರೈತರು ನಂಬಿಕೊಂಡಿದ್ದಾರೆ. ಈಗ ಸಿ ಆ್ಯಂಡ್ ಡಿ ಜಾಗ ಅರಣ್ಯ ಇಲಾಖೆಗೆ ಸೇರಿದ್ದು ಎಂದು ಸೆಕ್ಷನ್ 4 ಸರ್ವೇಗೆ ಸರ್ಕಾರ ಆದೇಶ ನೀಡಿದೆ. ರೈತರು ಭೂಮಿ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಸರ್ಕಾರ ಕೂಡಲೆ ತಮ್ಮ ಜವಾಬ್ದಾರಿಯನ್ನು ನಿಭಾಯಿಸಿ ಹಕ್ಕುಪತ್ರಗಳನ್ನು ರೈತರಿಗೆ ಒದಗಿಸಬೇಕು ಎಂದು ಹೇಳಿದರು. ಸಿ ಆ್ಯಂಡ್ ಡಿ ಭೂಮಿಗೆ ಹಕ್ಕುಪತ್ರಗಳನ್ನು ನೀಡುವಂತೆ ಆಗ್ರಹಿಸಿ ಈಗಾಗಲೇ ರೈತರ ಸಮಾವೇಶಗಳು…

Read More

ಮಡಿಕೇರಿ ಜ.20 NEWS DESK : 2024-25ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ 7,02,731 ಗ್ರಾಮೀಣ ಮನೆಗಳನ್ನು ಅನುಮೋದಿಸುವ ಮೂಲಕ ಕರ್ನಾಟಕ ರಾಜ್ಯಕ್ಕೆ ನೀಡಿದ ಮಹತ್ವದ ಕೊಡುಗೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗ್ರಾಮೀಣಾಭಿವೃದ್ದಿ ಸಚಿವ  ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್  ಕೃತಜ್ಞತೆಯನ್ನು ಸಲ್ಲಿಸಿದ್ದಾರೆ. ಇದರಲ್ಲಿ ಹೆಚ್ಚುವರಿಯಾಗಿ 4,76,556 ಮನೆಗಳು ಸೇರಿದ್ದು, ಇದು ಹಿಂದಿನ 2,26,175 ಮನೆಗಳನ್ನು ಪೊರೈಸುವುದರ ಜೊತೆಗೆ “ಎಲ್ಲರಿಗೂ ವಸತಿ ಸೌಲಭ್ಯ” ಎಂಬ ಗುರಿಯನ್ನು ಸಾಧಿಸಲು ಸಹಕಾರಿಯಾಗುತ್ತದೆ ಎಂದರು. ಈ ಉಪಕ್ರಮವು ಗ್ರಾಮೀಣ ಕುಟುಂಬಗಳಿಗೆ ಭರವಸೆಯ ದಾರಿದೀಪವಾಗಿದ್ದು, ಅವರಿಗೆ ಅಗತ್ಯ ಸೌಲಭ್ಯಗಳೊಂದಿಗೆ ಸುರಕ್ಷಿತ ಮತ್ತು ಸುಭದ್ರ ಪಕ್ಕಾ ಮನೆಗಳನ್ನು ಕಲ್ಪಿಸುವುದಲ್ಲದೆˌ ಘನತೆ, ಸ್ಥಿರತೆ ಮತ್ತು ಸಬಲೀಕರಣದ ಭಾವನೆಯನ್ನು ನೀಡುತ್ತದೆ. ಇದು ವಿಶೇಷವಾಗಿ ಮಹಿಳೆಯರು ಮತ್ತು ಸಮಾಜದ ಕಟ್ಟ ಕಡೆಯ ವರ್ಗಗಳನ್ನು ಉನ್ನತಿಗೇರಿಸುವ ಜನ ಕಲ್ಯಾಣ ಯೋಜನೆಯಾಗಿದೆ. ಈ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಸೂಕ್ತ ಬೆಂಬಲ ನೀಡುವಂತೆ  ಮುಖ್ಯಮಂತ್ರಿ…

Read More

ಮಡಿಕೇರಿ ಜ.20 NEWS DESK : ಪ್ರಸಕ್ತ (2024-25) ಸಾಲಿನಲ್ಲಿ ಸ್ತ್ರೀಶಕ್ತಿ ಯೋಜನೆಯಡಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸ್ತ್ರೀಶಕ್ತಿ ಗುಂಪುಗಳಿಗೆ ಹಾಗೂ ತಾಲ್ಲೂಕು ಒಕ್ಕೂಟಗಳಿಗೆ ಪ್ರತಿ ವರ್ಷದಂತೆ ಪ್ರಸಕ್ತ ವರ್ಷದಲ್ಲೂ ಸಹ ಸ್ತ್ರೀಶಕ್ತಿ ಯೋಜನೆಯಡಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ಸ್ತ್ರೀ ಶಕ್ತಿ ಗುಂಪುಗಳಿಗೆ/ ಒಕ್ಕೂಟಗಳಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. 2024-25ನೇ ಸಾಲಿನಲ್ಲಿ ಕೊಡಗು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸ್ತ್ರೀಶಕ್ತಿ ಗುಂಪು/ಒಕ್ಕೂಟಗಳ ಪ್ರಸ್ತಾವನೆಯನ್ನು ಜ.22 ರೊಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಮಡಿಕೇರಿ, ಸೋಮವಾರಪೇಟೆ ಮತ್ತು ಪೊನ್ನಂಪೇಟೆ ಈ ಕಚೇರಿಗೆ ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9108810782, 9343525589, 9483110552 ನ್ನು ಸಂಪರ್ಕಿಸಬಹುದು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Read More

ಮಡಿಕೇರಿ ಜ.20 NEWS DESK : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ(ನಿ) ಕೊಡಗು ಇವರ ವತಿಯಿಂದ 2024-25ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು (ರಿನಿವಲ್) ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು (ರಿನಿವಲ್) ವಿಧ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ-ಸಿಇಟಿ/ನೀಟ್ ಮುಖಾಂತರ) ಎಂಬಿ, ಎಂಎಸ್‍ಎಂಡಿ, ಎಂಎಸ್, ಬಿಡಿಎಸ್, ಎಂಡಿಎಸ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಇಂಜಿನಿಯರಿಂಗ್, ಟೆಕ್ನಾಲಜಿ(ಬಿ.ಇ/ಬಿಟೆಕ್), ಎಂ ಟೆಕ್,ಎಂಇಬಿ ಆರ್ಕ್, ಎಂಆರ್ಕ್, ಎಂ.ಬಿ.ಎ, ಎಂ.ಸಿ.ಎ, ಎಲ್.ಎಲ್.ಬಿ, ಬಿಎಸ್ಸಿ ಆರ್ಟಿಕಲ್ಚರ್, ಅಗ್ರಿಕಲ್ಚರ್, ಡೈರಿ ಟೆಕ್ನಾಲಜಿ, ಪಾರೆಸ್ಟ್ರೀ, ವೆಟರ್ನರಿ, ಎನಿಮಲ್ ಸೈನ್ಸ್, ಫುಡ್ ಟೆಕ್ನಾಲಜಿ, ಬಯೋ ಟೆಕ್ನಾಲಜಿ, ಮೀನುಗಾರಿಕೆ, ಸೆರಿಕಲ್ಚರ್, ಹೋಮ್/ಕಮ್ಯುನಿಟಿ ಸೈನ್ಸ್, ಫುಡ್ ನ್ಯೂಟ್ರೀಷನ್ ಅಂಡ್ ಡಯಾಟಿಕ್ಸ್ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಅರಿವು(ರಿನಿವಲ್) ಯೋಜನೆಯಡಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್‍ಲೈನ್ ಮೂಲಕ ಅರ್ಜಿ…

Read More

ಮಡಿಕೇರಿ ಜ.20 NEWS DESK : ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ 2021-22ನೇ ಸಾಲಿನಿಂದ (ಜುಲೈ/ಜನವರಿ ಆವೃತ್ತಿಯ) 2024-25 ನೇ ಸಾಲಿನವರೆಗೆ (ಜುಲೈ ಆವೃತ್ತಿ) ಪ್ರವೇಶಾತಿ ಪಡೆದಿರುವ ಸ್ನಾತಕ ಪದವಿಗಳಾದ ಬಿ.ಎ, ಬಿ.ಕಾಂ, ಎಲ್ಲಾ ಬಿ.ಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್.ಡಬ್ಲ್ಯು ಹಾಗೂ ಸ್ನಾತಕೋತ್ತರ ಪದವಿಗಳಾದ ಎಂ.ಎ, ಎಂ.ಕಾಂ, ಎಂ.ಬಿ.ಎ, ಎಂ.ಸಿ.ಎ, ಎಂ.ಎಸ್.ಡಬ್ಲ್ಯು ಮತ್ತು ಎಲ್ಲಾ ಎಂ.ಎಸ್ಸಿ ಪದವಿಗಳು ಮತ್ತು ಡಿಪ್ಲೊಮಾ, ಪಿಜಿ ಡಿಪ್ಲೊಮಾ, ಸರ್ಟಿಫಿಕೇಟ್ ಕೋರ್ಸ್‍ಗಳ ವಿದ್ಯಾರ್ಥಿಗಳ ಸಿ.ಬಿ.ಸಿ.ಎಸ್ ಸೆಮಿಸ್ಟರ್ ಪರೀಕ್ಷಾ ಶುಲ್ಕ ಪಾವತಿಸಲು ದಂಡ ಶುಲ್ಕವಿಲ್ಲದೇ ಫೆ. 7, ರೂ.200 ದಂಡ ಶುಲ್ಕದೊಂದಿಗೆ ಪರೀಕ್ಷಾ ಶುಲ್ಕ ಪಾವತಿಸಲು ಫೆಬ್ರವರಿ 17 ಕೊನೆಯ ದಿನವಾಗಿದೆ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ.

Read More