ಮಡಿಕೇರಿ ಜ.6 NEWS DESK : ಮ್ಯಾನ್ಸ್ ಕಾಂಪೌಂಡ್ ಕ್ಲಬ್(ಎಂಸಿಸಿ) ವತಿಯಿಂದ ಮಡಿಕೇರಿಯ ಜಿಲ್ಲಾ ಕ್ರೀಡಾಂಗಣದ ಫುಟ್ಬಾಲ್ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಮೂರನೇ ವರ್ಷದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಸತತ ಮೂರನೇ ಬಾರಿಗೆ ಜಯಗಳಿಸಿ ಹ್ಯಾಟ್ರಿಕ್ ಸಾಧನೆಯೊಂದಿಗೆ ಟೀಂ ಭಗವತಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಸಂಗಂ ಎಫ್ಸಿ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಕಳೆದ ಎರಡು ದಿನಗಳ ಕಾಲ ನಡೆದ ಪಂದ್ಯಾವಳಿಯಲ್ಲಿ ಅಂತಿಮ ಸುತ್ತಿಗೆ ಪ್ರವೇಶಿಸಿದ ಭಗವತಿ ಹಾಗೂ ಸಂಗಂ ತಂಡಗಳ ನಡುವೆ ರೊಚಕತೆಯಿಂದ ಪಂದ್ಯಾಟ ನಡೆಯಿತು. ಉಭಯ ತಂಡಗಳು ಪೈಪೋಟಿಯೊಂದಿಗೆ ಸೆಣೆಸಾಟ ನಡೆಸಿದರೂ ಬಲಿಷ್ಠವಾಗಿದ್ದ ಭಗವತಿ ತಂಡ ಸಂಗಂ ತಂಡವನ್ನು 5-1 ಗೋಲುಗಳಿಂದ ಮಣಿಸಿ ಟ್ರೋಫಿಯನ್ನು ತನ್ನ ಮುಡಿಗೇರಿಸಿಕೊಂಡಿತು. ಸಂಗಂ ತಂಡ ಎರಡನೇ ಸ್ಥಾನಕ್ಕೆ ತೃಪ್ತಿಕೊಟ್ಟುಕೊಳ್ಳಬೇಕಾಯಿತು. ಸಂಜೆ ನಡೆದ ಅಂತಿಮ ಪಂದ್ಯಾವಳಿಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಆಟಗಾರರನ್ನು ಪರಿಚಯಿಸಿಕೊಳ್ಳುವದರ ಮೂಲಕ ಉದ್ಘಾಟಿಸಿದರು. ನಂತರ ಎಂಸಿಸಿ ಅಧ್ಯಕ್ಷ ಎಂ.ಎ.ಕ್ರಿಸ್ಟೋಫರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ…
ಲೇಖಕ: admin
ಮಡಿಕೇರಿ ಜ.6 NEWS DESK : ಉತ್ತರ ಕಾಂಡ್ ರಾಜ್ಯ ದ ಹರಿದ್ವಾರ ಜಿಲ್ಲೆಯ ರೋಷನ್ ಬಾಗ್ ಕ್ರೀಡಾ0ಗಣದಲ್ಲಿ ಜ.8 ರಿಂದ 11ರ ವರೆಗೆ ನಡೆಯುವ 50ನೇ ಜೂನಿಯರ್ ರಾಷ್ಟ್ರೀಯ ಕಬಡ್ಡಿ ಚಾಂಪಿಯನ್ ಶಿಪ್ ಗೆ ಕೊಡಗಿನ ಎಸ್.ಟಿ.ಪ್ರಣಯ್ ಆಯ್ಕೆಯಾಗಿದ್ದು, ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾನೆ. ಇವನು ಕೊಡಗು ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಷನ್ ನಡೆಸಿ ಆಯ್ಕೆ ಪ್ರಕ್ರಿಯೆಯಲ್ಲಿ ಆಯ್ಕೆಯಾಗಿರುವುದಾಗಿ ಅಸೋಸಿಷನ್ ನ ದುಗ್ಗಳ ಕಪಿಲ್ ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.
ಗೋಣಿಕೊಪ್ಪ ಜ.6 NEWS DESK : ಸರ್ವದೈವತ ವಿದ್ಯಾ ಸಂಸ್ಥೆಯ ವತಿಯಿಂದ ಜ.16ರಂದು ಅರುವತ್ತೊಕ್ಲು ವಿದ್ಯಾಸಂಸ್ಥೆಯ ಆವರಣದಲ್ಲಿ ಜಿಲ್ಲಾಮಟ್ಟದ ಅಂತರ ಶಾಲಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಶಾಲಾ ಮುಖ್ಯ ಶಿಕ್ಷಕಿ ಮನೆಯಪಂಡ ಶೀಲಾ ಬೋಪಣ್ಣ ತಿಳಿಸಿದ್ದಾರೆ. ಶಾಲೆಯಲ್ಲಿ ನಡೆದ ಅಂತರ್ಶಾಲಾ ಸ್ಪರ್ಧೆಯ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ನೀಡಿದ ಅವರು ವಿದ್ಯಾರ್ಥಿಗಳಿಗೆ ಜಾನಪದ ಸಮೂಹ ಗೀತೆ ಸ್ಪರ್ಧೆ, ಕ್ಲೇ ಮಾಡಲಿಂಗ್, ಸಿನಿಮಾ ಹಾಡಿಗೆ ನೃತ್ಯ, ವಿಜ್ಞಾನ ವಸ್ತು ಪ್ರದರ್ಶನಗಳಲ್ಲಿ ಪರಿಸರ ವ್ಯವಸ್ಥೆ, ಹವಾಮಾನ ಬದಲಾವಣೆ, ರೊಬೊಟಿಕ್ಸ್, ಸಾಮಾಜಿಕ, ಪೌರಾಣಿಕ ವಿಚಾರದ ಛದ್ಮವೇಷ, ಚೆಸ್ ಸ್ಪರ್ಧೆ, ಜಾಗತಿಕ ದುರಂತಗಳಿಗೆ ಕೈಗಾರಿಕೀಕರಣವೇ ಕಾರಣ ಹೌದು ಅಥವಾ ಇಲ್ಲ ಎಂಬ ವಿಚಾರವಾಗಿ ಚರ್ಚಾಸ್ಪರ್ಧೆ ನಡೆಯಲಿದೆ ಎಂದರು. ಆಸಕ್ತ ಶಾಲೆಯ ವಿದ್ಯಾರ್ಥಿಗಳು ತಮ್ಮ ತಂಡದ ಹೆಸರನ್ನು ನೋಂದಾಯಿಸಿಕೊಳ್ಳಬೇಕಾಗಿದೆ. ಹೆಚ್ಚಿನ ಮಾಹಿತಿಗೆ 8277021505/ 9482138848/ 9481226954 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಪ್ರಾಂಶುಪಾಲ ಪಿ.ಆರ್.ಪ್ರದೀಪ್, ಶಿಕ್ಷಕರುಗಳಾದ ಲೀನಾ ರಾಘವೇಂದ್ರ, ಮೋನಿಕಾ, ಧರಣಿ, ಕಾವೇರಮ್ಮ ಉಪಸ್ಥಿತರಿದ್ದರು.
ಮಡಿಕೇರಿ ಜ.6 NEWS DESK : ಕರ್ನಾಟಕ ರಾಜ್ಯ ಸರ್ಕಾರದ ಕಂದಾಯ ಇಲಾಖೆ ವತಿಯಿಂದ ನೂತನವಾಗಿ ರಾಜ್ಯಾದ್ಯಂತ ಕೈಗೊಳ್ಳಲಾಗಿರುವ ತಾಲ್ಲೂಕು ಕಚೇರಿ, ಸರ್ವೇ ಮತ್ತು ನೋಂದಣಿ ಇಲಾಖೆಗಳ ಎಲ್ಲಾ ಭೂ ದಾಖಲೆಗಳ ಡಿಜಿಟಲೀಕರಣ ಕಾರ್ಯಕ್ರಮದ ಅಂಗವಾಗಿ ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕಿನ ಭೂ ದಾಖಲೆಗಳ ಇ ಖಜಾನೆ ಕಾರ್ಯಕ್ರಮವನ್ನು ಸೋಮವಾರಪೇಟೆ ತಾಲ್ಲೂಕು ಕಚೇರಿಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ಇದೇ ಸಂದರ್ಭ ಸೋಮವಾರಪೇಟೆ ತಾಲ್ಲೂಕು ಕಚೇರಿಯ ಆಹಾರ ಶಾಖೆ ಹಾಗೂ ಭೂ ದಾಖಲೆಗಳ ಇಲಾಖೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಸೂಕ್ತವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ಮಡಿಕೇರಿ ಜ.6 NEWS DESK : ಬುದ್ಧ, ಬಸವ, ಅಂಬೇಡ್ಕರ್ ಅವರ ಆಶಯ ಮತ್ತು ಚಿಂತನೆಗಳನ್ನು ಒಳಗೊಂಡ ಸಚಿವ ಸತೀಶ್ ಜಾರಕಿಹೊಳಿ ಅವರ ಸಾರಥ್ಯದಲ್ಲಿ ಪ್ರಾರಂಭವಾಗಿರುವ ಮಾನವ ಬಂಧುತ್ವ ವೇದಿಕೆಯು ದಶಮಾನೋತ್ಸವದ ಸಂಭ್ರಮದಲ್ಲಿದ್ದು, ಫೆ.2 ರಂದು ದಾವಣಗೆರೆಯಲ್ಲಿ ನಡೆಯಲಿರುವ ಬೃಹತ್ ಸಮಾವೇಶಕ್ಕೆ ಕೊಡಗಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವೇದಿಕೆಯ ಜಿಲ್ಲಾ ಸಂಚಾಲಕ ಜೆ.ಎಲ್.ಜನಾರ್ಧನ್ ಮನವಿ ಮಾಡಿದರು. ನಗರದ ಸುದರ್ಶನ ಅಥಿತಿ ಗೃಹದಲ್ಲಿ ಕಾರ್ಯಕ್ರಮದ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಿ, ಮಾತನಾಡಿದರು. ಸಭೆಯಲ್ಲಿ ರಾಜ್ಯ ಮಹಿಳಾ ಒಕ್ಕೂಟದ ಸಂಚಾಲಕಿ ಡಾ.ಲೀಲಾ ಸಂಪಿಗೆ, ಮಂಗಳೂರು ವಿಭಾಗೀಯ ಸಂಚಾಲಕ ಕೆ.ಎಸ್.ಸತೀಶ್ ಕುಮಾರ್, ರಾಜ್ಯ ಸಮಿತಿ ಸದಸ್ಯ ರಮನಾಥ್, ಜಿಲ್ಲಾ ಮಹಿಳಾ ಸಮಿತಿಯ ಸಂಚಾಲಕಿ ಡಾ.ಹೆಚ್.ಎಂ.ಕಾವೇರಿ, ಸದಸ್ಯರಾದ ನೆರವಂಡ ಉಮೇಶ್, ಸಾಮಾಜಿಕ ಹೋರಾಟಗಾರ ಟಿ.ಪಿ.ರಮೇಶ್ ಮಾತನಾಡಿ, ಎಲ್ಲಾ ಸದಸ್ಯರ ಅಭಿಪ್ರಾಯಗಳನ್ನು ಪಡೆದುಕೊಂಡು ಕೊಡಗು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಿಂದ ತಲಾ ಎರಡು ಬಸ್ಸುಗಳಂತೆ ಚಳುವಳಿಗಾರರು, ಸಂವಿಧಾನವನ್ನು ಗೌರವಿಸುವ ಮತ್ತು ಉಳಿಸುವ ಮಹತ್ವಕಾಂಕ್ಷೆ ಹೊಂದಿರುವ…
ಕುಶಾಲನಗರ ಜ.6 NEWS DESK : ಜೀವಪರವಾದ ಹೋರಾಟಗಳ ಸಾಹಿತ್ಯ ಕೃಷಿ ಮಾಡುವ ಮೂಲಕ ಜನಸಾಮಾನ್ಯರ ಗಟ್ಟಿಧ್ವನಿಯಾಗಿದ್ದ ಸಾಹಿತಿ ನಾ.ಡಿಸೋಜಾ ಅವರ ಅಗಲಿಕೆ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ಎಂದು ಕೊಡಗಿನ ಹಿರಿಯ ಸಾಹಿತಿ ಬಾಚರಣಿಯಂಡ ಪಿ.ಅಪ್ಪಣ್ಣ ಹೇಳಿದರು. ಸಾಹಿತ್ಯಾಸಕ್ತರ ವೇದಿಕೆ ವತಿಯಿಂದ ಕುಶಾಲನಗರದ ಅನುಗ್ರಹ ವಿದ್ಯಾಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಪಾಲ್ಗೊಂಡು, ನಾ.ಡಿಸೋಜಾ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, 60 ರ ದಶಕದಲ್ಲಿ ಪಾಟೀಲ್ ಪುಟ್ಟಪ್ಪ ಅವರ ಪ್ರಪಂಚ ಪತ್ರಿಕೆಯಲ್ಲಿ ನಿರಂತರವಾಗಿ ನಾ.ಡಿಸೋಜಾ ಅವರು ಬರೆಯುತ್ತಿದ್ದ ಲೇಖನಗಳಿಗಾಗಿ ಓದುಗರು ಕಾತರದಿಂದ ಕಾಯುತ್ತಿದ್ದರು. ಮಲೆನಾಡಿನ ಪ್ರಕೃತಿ ರಮಣೀಯ ಹಸಿರು ಹೊದಿಕೆಗೆ ಘಾಸಿಯಾಗದಂತೆ ಸದಾ ಕಾಲ ಕಾವಲುಗಾರನಂತಿದ್ದು ಪರಿಸರ ಸಂರಕ್ಷಕರಾಗಿದ್ದರು. ಕವಿ, ಸಾಹಿತಿ, ಕಥೆಗಾರ, ಕಾದಂಬರಿಕಾರ ಹೀಗೆ ಸಾಹಿತ್ಯದ ಹಲವು ಆಯಾಮಗಳನ್ನು ತನ್ನಲ್ಲಿ ಅವ್ಯಕ್ತಗೊಳಿಸಿದ್ದ ನಾ.ಡಿಸೋಜ ಶರಾವತಿ ಹಿನ್ನೀರಿನಿಂದಾಗಿ ಜನ ಅನುಭವಿಸುತ್ತಿದ್ದ ಸಂಕಷ್ಟಗಳನ್ನು ತಮ್ಮ ಲೇಖನಿಯ ಮೂಲಕವೇ ಪ್ರತಿರೋಧಿಸುತ್ತಾ ಆಳುವ ಸರ್ಕಾರಗಳಿಗೆ ಎಚ್ಚರಿಕೆಯ ಘಂಟೆಯಾಗಿದ್ದರು ಎಂದು ಬಾಚರಣಿ…
ಮಡಿಕೇರಿ ಜ.6 NEWS DESK : ಕುಶಾಲನಗರದ ಸಮೀಪದ ಬೈಲುಕುಪ್ಪೆ ಟಿಬೆಟಿಯನ್ ನಿರಾಶ್ರಿತರಕ್ಕೆ ಶಿಬಿರಕ್ಕೆ ಟೆಬೆಟಿಯನ್ ಧಾರ್ಮಿಕ ಗುರು ಮತ್ತು ನೊಬೆಲ್ ಪ್ರಶಸ್ತಿ ವಿಜೇತ 14ನೇ ದಲೈಲಾಮ ಭೇಟಿ ನೀಡಿದರು. ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಬೈಲುಕಪ್ಪೆಗೆ ಆಗಮಿಸಿದ ದಲೈದಾಮ ಅವರನ್ನು ಮೈಸೂರು ಜಿಲ್ಲಾಡಳಿತ, ಶಿಬಿರದ ಪ್ರತಿನಿಧಿಗಳು ಹಾಗೂ ಅವರ ಅನುಯಾಯಿಗಳು ಸಾಂಪ್ರದಾಯಿಕವಾಗಿ ಬರಮಾಡಿಕೊಂಡರು. ಟಿಬೆಟಿಯನ್ನರ ನಡೆದಾಡುವ ದೈವ ಎಂದೇ ಬಿಂಬಿತವಾಗಿರುವ ಸುಮಾರು 89ರ ವಯೋಮಾನದ ಟಿಬೆಟಿಯನ್ ಪರಮೊಚ್ಚ ಗುರುಗಳಾದ ದಲೈಲಾಮ ವಿಶ್ವಾಂತಿಗಾಗಿ ಬೈಲುಕುಪ್ಪೆಗೆ ಆಗಮಿಸಿದ್ದು, ಬೈಲುಕುಪ್ಪೆ ಶಿಬಿರದ ತಶಿಲೊಂಪೊ ಬೌದ್ಧ ಮಂದಿರದಲ್ಲಿ ಮುಂದಿನ ಒಂದು ತಿಂಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಶಿಬಿರದ ಪ್ರತಿನಿಧಿ ಜಿಗ್ಮೆ ಸುಲ್ಟರೀಂ ಮಾಹಿತಿ ನೀಡಿದರು. ಮೈಸೂರು ಜಿಲ್ಲಾ ಪೊಲೀಸ್ ವತಿಯಿಂದ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ.
ಮಡಿಕೇರಿ ಜ.6 NEWS DESK : ನಿವೃತ್ತ ಡೆಪ್ಯುಟಿ ರೇಂಜ್ ಫಾರೆಸ್ಟರ್, ಕೊಡವ ಜಾನಪದ ಪದ್ಧತಿ ಪರಂಪರೆಗಳ ಕುರಿತು ಮೂರು ಪುಸ್ತಕ ಬರೆದಿರುವ, ಕೊಡವ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಮಡಿಕೇರಿಯ ಪುಟಾಣಿ ನಗರ ನಿವಾಸಿ ಪಂಜೇರಿರ ಬೆಳ್ಯಪ್ಪ ಜ.5 ರಂದು ಸಂಜೆ ಮೈಸೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಇಂದು (ಜ.6) ಮಡಿಕೇರಿಯ ಕೊಡವ ಸಮಾಜದ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ. ಮೃತರು ಪತ್ನಿ ಕಾಮವ್ವ, ಪುತ್ರರಾದ ಟಿವಿ9ನ ಜಗದೀಶ್ ಬೆಳ್ಯಪ್ಪ, ರಾಜೇಶ್, ಪುತ್ರಿ ಜರಿತಾ ಅವರನ್ನು ಅಗಲಿದ್ದಾರೆ.
ಮಡಿಕೇರಿ ಜ.6 NEWS DESK : ಗುಹ್ಯ ಅಗಸ್ತ್ಯೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ನೂತನ ಕಟ್ಟಡದ ವಿನ್ಯಾಸದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ಶಾಸಕರು, ಸಹಕಾರಿ ಸಂಘವು ಮತ್ತಷ್ಟು ಯಶಸ್ಸನ್ನು ಕಾಣುವಂತಾಗಲಿ ಎಂದು ಶುಭ ಹಾರೈಸಿದರು. ಗುಹ್ಯ ಅಗಸ್ತ್ಯೇಶ್ವರ ಸಹಕಾರಿ ಸಂಘದ ಬೆಳವಣಿಗೆ ಹಾಗೂ ಏಳಿಗೆಗೆ ಶ್ರಮಿಸುತ್ತಿರುವ ಸಂಘದ ಅಧ್ಯಕ್ಷರು ಹಾಗೂ ನಿರ್ದೇಶಕರುಗಳನ್ನು ಶ್ಲಾಘಿಸಿ, ಸಂಘದ ಸದಸ್ಯರ ಏಳಿಗೆಗೆ ಮತ್ತಷ್ಟು ಕಾರ್ಯಕ್ರಮಗಳನ್ನು ರೂಪಿಸಿ, ಕಾಳಜಿ ವಹಿಸುವಂತೆ ಕರೆ ನೀಡಿದರು. ಈ ಸಂದರ್ಭ ಸಿದ್ದಾಪುರ ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರತೀಶ್, ಸಹಕಾರಿ ಸಂಘದ ಸಿಬ್ಬಂದಿ ವರ್ಗ, ಸಹಕಾರಿ ಸಂಘದ ಸದಸ್ಯರುಗಳು, ಗ್ರಾಮದ ಪ್ರಮುಖರು ಮತ್ತಿತರರು ಹಾಜರಿದ್ದರು.
ಬೆಂಗಳೂರು NEWS DESK ಜ.6 : ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ , ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಚೈನಾ ದೇಶದಲ್ಲಿ ಹೆಚ್ ಎಂ ಪಿ ವಿ ವೈರಸ್ ಕಾಣಿಸಿಕೊಂಡಿದ್ದು, ಕರ್ನಾಟಕದಲ್ಲಿ ಈ ವೈರಸ್ ಪತ್ತೆಯಾಗಿರುವ ಮಾಹಿತಿ ದೊರೆತಿದೆ. ಆದ್ದರಿಂದ ಈ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಆರೋಗ್ಯ ಸಚಿವರು ಈಗಾಗಲೇ ಸಭೆ ನಡೆಸುತ್ತಿದ್ದು, ವೈರಸ್ ತಡೆಗೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದರು. ಸೋಂಕು ತಡೆಯ ಕ್ರಮವಾಗಿ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ಪುನ: ಪ್ರಾರಂಭಿಸುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಆರೋಗ್ಯ ಸಚಿವರು ಸಭೆ ನಡೆಸುತ್ತಿದ್ದು, ರಾಜ್ಯದಲ್ಲಿ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ತೀರ್ಮಾನಿಸಲಾಗುವುದು ಎಂದರು. ::: ನಕ್ಸಲರು ಶರಣಾಗುವ ಸಾಧ್ಯತೆಯಿದೆ…






