ಲೇಖಕ: admin

ಮಡಿಕೇರಿ ಜ.20 NEWS DESK : ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯದ ಪ್ರಯುಕ್ತ ಜನವರಿ, 22 ರಂದು ಮಧ್ಯಾಹ್ನ 2 ಗಂಟೆಯ ನಂತರ ಶ್ರೀ ತಲಕಾವೇರಿ ದೇವಾಲಯಕ್ಕೆ ಪ್ರವೇಶ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕ ಭಕ್ತಾಧಿಗಳು ಸಹಕರಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ಕೋರಿದ್ದಾರೆ.  

Read More

ಮಡಿಕೇರಿ ಜ.20 NEWS DESK : ಕೊಡಗು ಜಿಲ್ಲೆಯ ಅರೆಭಾಷಿಕ ಗೌಡ ಜನಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿ, ಸುಳ್ಳು ಇತಿಹಾಸ ಸೃಷ್ಟಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ವಿವಿಧ ಅರೆಭಾಷಿಕ ಗೌಡ ಸಂಘಟನೆಗಳು ಮಡಿಕೇರಿಯಲ್ಲಿ ಬೃಹತ್ “ಗೌಡ ಸಮುದಾಯದ ಸ್ವಾಭಿಮಾನದ ನಡೆ” ಮೌನ ಪ್ರತಿಭಟನೆ ನಡೆಯಿತು. ಮಡಿಕೇರಿಯ ಕೊಡಗು ಗೌಡ ಯುವ ವೇದಿಕೆ, ಕೊಡಗು ಗೌಡ ಮಹಿಳಾ ಒಕ್ಕೂಟ, ಕುಶಾಲನಗರದ ಗೌಡ ಯುವಕ ಸಂಘ ಸೇರಿದಂತೆ ವಿವಿಧ ಗೌಡ ಸಂಘಟನೆಗಳ ನೇತೃತ್ವದಲ್ಲಿ ನಗರದ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಗಾಂಧಿ ಮೈದಾನದವರೆಗೆ ಸಾವಿರಾರು ಗೌಡರು ಯಾವುದೇ ಘೋಷಣೆಗಳನ್ನು ಕೂಗದೆ ಶಿಸ್ತುಬದ್ಧವಾಗಿ ಬೃಹತ್ ಮೆರವಣಿಗೆ ನಡೆಸಿದರು. ::: ಸೇನಾನಿಗಳಿಗೆ ಗೌರವ ::: ಇಂದು ಬೆಳಿಗ್ಗೆ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರು ಹಾಗೂ ಫೀಲ್ಟ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಪ್ರತಿಮೆಗೆ ಗೌರವ ನಮನ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು. ನಂತರ ಮೆರವಣಿಗೆ ಸಾಗಿ ಬರುವಾಗ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಪ್ರತಿಮೆ ಹಾಗೂ…

Read More

ಜ.20 ರಿಂದ 26ರ ವರೆಗೆ ವಾರ ಭವಿಷ್ಯ (ಡಾ.ಮಹಾಬಲೇಶ್ವರ ಭಟ್, ಮೂರ್ನಾಡು 8105634429) ಮೇಷ ರಾಶಿ :: ಈ ರಾಶಿಯವರಿಗೆ ಮಾನಸಿಕ ಅಶಾಂತಿ, ಹಿರಿಯರ ಆರೋಗ್ಯಕ್ಕೆ ಹಣವ್ಯಯ, ಹಣಕಾಸು ಅಡಚಣೆಮ, ಮಕ್ಕಳಿಂದ ಕಿರಿಕಿರಿ. ಶುಭ ಸಂಖ್ಯೆ :: 1, 2, 3, 9 :: ಶುಭ ಬಣ್ಣ :: ಕೆಂಪು, ಹಳದಿ, ಕೇಸರಿ ವೃಷಭ ರಾಶಿ :: ಕೆಲಸದ ಒತ್ತಡ, ಸುತ್ತಾಟ, ದೂರ ಪ್ರಯಾಣ, ಹಳೇ ಸ್ನೇಹಿತರ ಭೇಟಿ, ಧನಾಗಮನ, ಸ್ವಲ್ಪ ಅನಾರೋಗ್ಯ, ಬಂಧು ಮಿತ್ರರ ಸ್ನೇಹ ಸಂಪಾದನೆ. :: ಶುಭ ಸಂಖ್ಯೆ :: 5, 6, 8 :: ಶುಭ ಬಣ್ಣ :: ಬಿಳಿ, ಹಸಿರು, ಕಪ್ಪು ಮಿಥುನ ರಾಶಿ :: ಅತೀಶಯ ಹಣವ್ಯಯ, ಸ್ನೇಹಿತರಿಂದ ಸಹಾಯ, ಆರೋಗ್ಯದಲ್ಲಿ ವ್ಯತ್ಯಾಸ, ದೂರ ಪ್ರಯಾಣ, ಬಂಧುಗಳಿಂದ ಮನಸ್ಥಾಪ, ಮಕ್ಕಳಿಂದ ಕೀರ್ತಿ. ಶುಭಸಂಖ್ಯೆ : 3, 5, 6, 8 :: ಶುಭ ಬಣ್ಣ :: ಕೆಂಪು, ಶ್ಯಾಮ. ಕರ್ಕಾಟಕ ರಾಶಿ ::…

Read More

ಮಡಿಕೇರಿ ಜ.20 NEWS DESK : ನಾಪೋಕ್ಲು ಹೋಬಳಿಯ ನರಿಯದಂಡ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜ.29 ರಂದು ಬೆಳಗ್ಗೆ 11 ಗಂಟೆಗೆ ಪಿಂಚಣಿ ದಿನ ಕಾರ್ಯಕ್ರಮ ನಡೆಯಲಿದೆ. ಪಿಂಚಣಿ ದಿನದಂದು ಸಾಮಾಜಿಕ ಭದ್ರತಾ ಯೋಜನೆಯಡಿ ವಿವಿಧ ಮಾಸಾಶನಗಳ ಫಲಾನುಭವಿಗಳು ಕುಂದುಕೊರತೆ ನೋಂದಾಯಿಸುವಂತೆ ತಹಶೀಲ್ದಾರ್ ಪ್ರವೀಣ್ ಕುಮಾರ್ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಜ.20 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮವು ಜನವರಿ, 21 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್‍ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಗಾಳಿಬೀಡು ಜವಾಹರ್ ನವೋದಯ ವಿದ್ಯಾ ಸಂಸ್ಥೆಯ ಉಪನ್ಯಾಸಕರಾದ ಮಾರುತಿ ದಾಸಣ್ಣವರ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಇತರರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಜ.20 NEWS DESK : ಪೊನ್ನಂಪೇಟೆ ತಾಲ್ಲೂಕು ದೇವರಪುರ ಗ್ರಾ.ಪಂ ಅಂಬುಕೊಟ್ಟೆ ವ್ಯಾಪ್ತಿಯಯಲ್ಲಿ ಇತ್ತೀಚೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹಾನಿಗೀಡಾದ ಅಮುದ ಮನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿದರು. ನಂತರ ಮನೆಯವರೊಂದಿಗೆ ಘಟನೆಯ ವಿವರ ಪಡೆದು ಸಂಬಂಧಪಟ್ಟ ಅಧಿಕಾರಿಗಳಿಗೆ ಅವಘಡಕ್ಕೆ ಕಾರಣವನ್ನು ಪತ್ತೆ ಮಾಡಿ ಸೂಕ್ತ ಪರಿಹಾರ ಒದಗಿಸುವಂತೆ ಸೂಚನೆ ನೀಡಿದರು. ಇದೇ ಸಂಧರ್ಭದಲ್ಲಿ ಮಾನ್ಯ ಶಾಸಕರು ತಮ್ಮ ವೈಯುಕ್ತಿಕ ಸಹಾಯ ಹಸ್ತ ನೀಡಿದರು.ಸಂದರ್ಭ ಶಾಸಕರು ಕುಟುಂಬಸ್ಥರಿಗೆ ವೈಯಕ್ತಿಕ ನೆರವು ನೀಡಿದರು. ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಮಿದೇರೀರ ನವೀನ್, ಗೋಣಿಕೊಪ್ಪ ಪಂಚಾಯಿತಿ ಅಧ್ಯಕ್ಷ  ಪ್ರಮೋದ್ ಗಣಪತಿ, ಪಂಚಾಯಿತಿ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Read More

ಮಡಿಕೇರಿ NEWS DESK ಜ.19 : ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡಿಯರ್ ಅವರು ಇಂದು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಿದರು. ಸುತ್ತಮುತ್ತಲ ಗ್ರಾಮದ ನಿವಾಸಿಗಳು ಸಂಸದರ ಬಳಿ ತಮ್ಮ ಕುಂದು ಕೊರತೆಗಳನ್ನು ವಿವರಿಸಿದರು. ಇದನ್ನು ಆಲಿಸಿದ ಯದುವೀರ್ ಒಡಿಯರ್ ಅವರು ಸೂಕ್ತ ಭರವಸೆ ನೀಡಿದರು.

Read More

ಕುಶಾಲನಗರ NEWS DESK ಜ.19 : ಇತ್ತೀಚಿನ ದಿನಗಳಲ್ಲಿ  ಯುವ ಸಮೂಹ  ಹೆಚ್ಚಾಗಿ ದುಶ್ಚಟಗಳಿಗೆ  ಬಲಿಯಾಗುತ್ತಿದ್ದು, ಮಕ್ಕಳ ಉತ್ತಮ ಭವಿಷ್ಯ ರೂಪಿಸಲು ಪೋಷಕರು ನಿಗಾ ವಹಿಸುವುದರೊಂದಿಗೆ  ಸಂಘ ಸಂಸ್ಥೆಗಳು ಜಾಗೃತಿ ಅಭಿಯಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಯುವಕರನ್ನು ಕೆಡುಕಿನಿಂದ ದೂರ ಮಾಡಿ ಆರೋಗ್ಯವಂತ ಸಮಾಜ ನಿರ್ಮಿಸಲು ಸಹಕರಿಸಬೇಕು ಎಂದು ಕುಶಾಲನಗರ ಡಿ ವೈ ಎಸ್ ಪಿ ಗಂಗಾಧರಪ್ಪ  ಸಲಹೆ ನೀಡಿದರು. ಜಿಲ್ಲಾ ವಿಸ್ಡಮ್ ಸ್ಟೂಡೆಂಟ್ ಸಂಸ್ಥೆ ಹಾಗೂ ಅಲ್ ಫುರ್ಕಾನ್ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ “ಟೀನ್‌ಸ್ಪೇಸ್” ಪ್ರೀತಿಯ ಪೋಷಕರ ವಾತ್ಸಲ್ಯದ ಮಕ್ಕಳಾಗೋಣ, ಮಾದಕ ವ್ಯಸನದಿಂದ ದೂರವಾಗೋಣ ಎಂಬ ಸಂದೇಶ ವಾಕ್ಯದೊಂದಿಗೆ ಮಾದಕ ಮುಕ್ತ ಅಭಿಯಾನ ಜಾಗೃತಿ ಸಮಾವೇಶವು ಕುಶಾಲನಗರ ಕನ್ನಿಕಾ ಇಂಟರ್ನ್ಯಾಷನಲ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಡ್ರಗ್ಸ್  ವಿರುದ್ಧ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವುದರ ಮೂಲಕ ದಾರಿ ತಪ್ಪುತ್ತಿರುವ ಯುವ ಸಮೂಹಕ್ಕೆ ಉತ್ತಮ ಮಾರ್ಗದರ್ಶನ ನೀಡಿ ಕೆಡುಕುಗಳಿಂದ ದೂರ ಮಾಡಿ  ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು  ಕಾರ್ಯಕ್ರಮ ಆಯೋಜನೆ ಮಾಡಿರುವ…

Read More

ಮಡಿಕೇರಿ NEWS DESK ಜ.19 : ಹುಲಿ ದಾಳಿಯಿಂದ ಎರಡು ಗಬ್ಬದ ಹಸುಗಳು ಬಲಿಯಾಗಿರುವ ಘಟನೆ ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ದೇವನೂರು- ಸುಳುಗೋಡು ಗ್ರಾಮದಲ್ಲಿ ನಡೆದಿದೆ. ಸುಳುಗೋಡು ಗ್ರಾಮದ ಕೃಷಿಕ ಮುದ್ದಿಯಡ ದಿನು ಎಂಬುವವರಿಗೆ ಸೇರಿದ ಎರಡು ಹಸುಗಳನ್ನು ಹುಲಿ ಕೊಂದು ಭಾಗಶ: ತಿಂದಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮಸ್ಥರಲ್ಲಿ ಆತಂಕ ಮೂಡಿದ್ದು, ತಕ್ಷಣ ಹುಲಿ ಸೆರೆಗೆ ಅರಣ್ಯ ಇಲಾಖೆ ಮುಂದಾಗಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ::: ಕಾರ್ಯಾಚರಣೆ ಮತ್ತು ಪರಿಹಾರ ::: ವನ್ಯಜೀವಿ ಸಂರಕ್ಷಣಾ ಮಂಡಳಿಯ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿದರು. ಹುಲಿಯನ್ನು ಸೆರೆ ಹಿಡಿಯಲು ಅಥವಾ ಅರಣ್ಯಕ್ಕೆ ಓಡಿಸಲು ಕ್ರಮ ಕೈಗೊಳ್ಳಲಾಗುವುದು. ಎರಡು ಗಬ್ಬದ ಹಸುಗಳು ಸಾವನ್ನಪ್ಪಿರುವುದರಿಂದ ಮಾಲೀಕರಿಗೆ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರೊಂದಿಗೆ ಚರ್ಚಿಸಿರುವುದಾಗಿ ತಿಳಿಸಿದರು.

Read More

ಮಡಿಕೇರಿ NEWS DESK ಜ.19 : ಮದಲಾಪುರ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್.ಆರ್.ಸುನಿಲ್ ರಾವ್ ಹಾಗೂ ಉಪಾಧ್ಯಕ್ಷರಾಗಿ ತಮ್ಮಯ್ಯ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾ ಅಧಿಕಾರಿಯಾಗಿ ಪಿ.ಬಿ.ಮೋಹನ್ ಕಾರ್ಯನಿರ್ವಹಿಸಿದರು. ಎಸ್. ಆರ್.ಸುನಿಲ್ ರಾವ್ ಮಾತನಾಡಿ ಮುಂಬರುವ ದಿನಗಳಲ್ಲಿ ಮದಲಾಪುರ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಉತ್ತಮ ರೀತಿಯಲ್ಲಿ ಬೆಳೆಸಿ ಗ್ರಾಮೀಣ ಜನತೆಗೆ ಅನುಕೂಲ ಒದಗಿಸುವುದರೊಂದಿಗೆ ಸಹಕಾರ ಸಂಘದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ ಎಂದರು. ನಿರ್ದೇಶಕರಾದ ವೆಂಕಟಯ್ಯ ನಾಯಕ, ಎಚ್ ಆರ್ ಕೃಷ್ಣ, ಸುರೇಶ್, ವಿ ಪಿ, ವಸಂತ, ಬಿ.ಎ. ಮಂಜುಳಾ, ಗಾಯತ್ರಿ, ಕೆ.ಕೆ. ಚಂದ್ರಿಕಾ, ದೇವಿರಮ್ಮ, ಗಿರಿಜಾ ವೈ.ಆರ್, ಮದಲಾಪುರ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಯೋಗೇಶ್, ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಎಸ್.ಶಿವಕುಮಾರ್, ಅರುಣ್ ರಾವ್, ಮಾದಪ್ಪ, ಬಾಪು ಹಾಗೂ ಸಂಘದ ಸದಸ್ಯರು ಹಾಜರಿದ್ದರು.

Read More