ಲೇಖಕ: admin

ಮಡಿಕೇರಿ ಜ.6 NEWS DESK : ಕೂರ್ಗ ಬೈ ರೇಸ್ ಮತ್ತು ಜಮ್ಮ ಹಿಡುವಳಿಯ ಆಧಾರದಲ್ಲಿ ಬಂದಿರುವ ಕೋವಿಯ ವಿಶೇಷ ಹಕ್ಕುದಾರಿಕೆಯನ್ನ ಕೊಡವರು ಶಾಶ್ವತವಾಗಿ ಉಳಿಸಿಕೊಳ್ಳುವತ್ತ ಸಂವಿದಾನ ಬದ್ಧತೆ ರೂಪಿಸಿಕೊಳ್ಳಬೇಕಾದದ್ದು ಇಂದಿನ ಜವಾಬ್ದಾರಿಯಾಗಿದೆ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಪ್ರತಿಪಾದಿಸಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಜೆಸಿಐ ಪೊನ್ನಂಪೇಟೆ ಸಂಸ್ಥೆ ಸಹಯೋಗದಲ್ಲಿ ಮಾಯಮುಡಿ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಅಕಾಡೆಮಿಯ ಪ್ರಥಮ ಬಾರಿಯ ತೋಕ್ ನಮ್ಮೆ ಉದ್ಘಾಟಿಸಿ ಮಾತನಾಡಿದ ಅವರು, ಕೋವಿಯ ಬಳಕೆ ಹಾಗೂ ಪಾವಿತ್ರ್ಯತೆಯ ಬಗ್ಗೆ ತಿಳಿದುಕೊಳ್ಳುವುದು ಮತ್ತು ಮುಂದಿನ ಪೀಳಿಗೆಗೆ ತಿಳಿ ಹೇಳುವುದು ನಮ್ಮ ಕರ್ತವ್ಯ ಎಂದರು. ಜಬ್ಬೂಮಿ ಚಾಎಇಟೇಬಲ್ ಟ್ರಸ್ಟ್ ಮುಖ್ಯಸ್ಥ ಚೊಟ್ಟೆಕಮಾಡ ರಾಜಿವ್ ಬೋಪಯ್ಯ ಮಾತನಾಡಿ, ಅನಾದಿಕಾಲದಿಂದ ಬಂದಿರುವ ಸಂಪ್ರದಾಯ ಹಾಗೂ ಜೀವನ ಕ್ರಮವನ್ನು ಬದ್ದತೆಯಿಂದ ಪರಿಪಾಲಿಸುತ್ತಿರುವ ಕೊಡವ ಭಾಷಿಕ ಜನಾಂಗಗಳು ಒಗ್ಗಟ್ಟಿನಿಂದ ಹಕ್ಕುದಾರಿಕೆಯನ್ನು ರಕ್ಷಣೆ ಮಾಡಿಕೊಳ್ಳಬೇಕು ಎಂದರು. ವಕೀಲ ಬಲ್ಯಮಡ ಬಿ.ಮಾದಪ್ಪ “ಕೊಡವಡ ತೋಕ್’ರ…

Read More

ಮಡಿಕೇರಿ NEWS DESK ಜ.6 : ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಮೂಲಕ ನೀಡುವ ರಾಜ್ಯ ಮಟ್ಟದ ಹೆಚ್.ಎನ್ ಪ್ರಶಸ್ತಿಗೆ ಭಾಜನರಾದ ‘ಶಕ್ತಿ’ ಪತ್ರಿಕೆಯ ಪ್ರಧಾನ ಸಂಪಾದಕರಾದ ಜಿ.ರಾಜೇಂದ್ರ ಹಾಗೂ ಮಹಿಳಾ ಸಾಧಕರಿಗೆ ನೀಡಲಾಗುವ ರಾಜ್ಯ ಮಟ್ಟದ ಚೈತನ್ಯಶ್ರೀ ಪ್ರಶಸ್ತಿಯನ್ನು ಪದ್ಮಶ್ರೀ ಪುರಸ್ಕೃತ ರಾಣಿ ಮಾಚಯ್ಯ ಅವರಿಗೆ ನೀಡಿ ಗೌರವಿಸಲಾಯಿತು. ಬೆಂಗಳೂರಿನ ಸಮೀಪದ ಬಾಗಲೂರು ವಿ ಜೆ ಇಂಟರ್ನ್ಯಾಷನಲ್ ಶಾಲಾ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆದ ಪರಿಷತ್ 4ನೇ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಶನಿವಾರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇಸ್ರೋ ಮಾಜಿ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಗೌರವ ಮಾರ್ಗದರ್ಶಕರಾದ ಡಾ ಎ ಎಸ್ ಕಿರಣ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಜಿಲ್ಲೆ ಯ ಇಬ್ಬರು ಸಾಧಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭ ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ ಎಚ್ಎನ್ ಪ್ರಶಸ್ತಿ ಪುರಸ್ಕೃತರಿಗೆ ಮತ್ತು 35 ಮಹಿಳಾ ಸಾಧಕರಿಗೆ…

Read More

ಮಡಿಕೇರಿ ಜ.6 NEWS DESK : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಡೆಸುತ್ತಿರುವ ರಾಜ್ಯ ವಲಯದ ಕ್ರೀಡಾ ಶಾಲೆ/ಕ್ರೀಡಾ ವಸತಿ ನಿಲಯಗಳಿಗೆ 2025-26ನೇ ಸಾಲಿಗೆ 8 ನೇ ತರಗತಿ ಹಾಗೂ ಪ್ರಥಮ ಪಿಯುಸಿಗೆ ಜ.16 ರಂದು ಮಡಿಕೇರಿ ತಾಲ್ಲೂಕಿನವರಿಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ, ಜ.17 ರಂದು ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕಿನವರಿಗೆ ಕೂಡಿಗೆ ಸರ್ಕಾರಿ ಕ್ರೀಡಾ ಶಾಲೆಯಲ್ಲಿ, ಜನವರಿ, 18 ರಂದು ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನವರಿಗೆ ಪೊನ್ನಂಪೇಟೆಯ ತಾಲ್ಲೂಕು ಮಿನಿ ಕ್ರೀಡಾಂಗಣದಲ್ಲಿ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಬಿ.ಜಿ.ಮಂಜುನಾಥ್, ಅಥ್ಲೇಟಿಕ್ ತರಬೇತುದಾರರು, ಕ್ರೀಡಾ ಶಾಲೆ ಕೂಡಿಗೆ ಸೋಮವಾರಪೇಟೆ ಮತ್ತು ಕುಶಾಲನಗರಕ್ಕೆ ದೂ.ಸಂ. 9342563014, ವೆಂಕಟೇಶ್ ಬಿ.ಎಸ್. ಹಾಕಿ ತರಬೇತುದಾರರು, ಕ್ರೀಡಾ ಶಾಲೆ, ಕೂಡಿಗೆ ಸೋಮವಾರಪೇಟೆ ಮತ್ತು ಕುಶಾಲನಗರಕ್ಕೆಕ ದೂ. 9844326007, ದಿನಾಮಣಿ, ಹಾಕಿ ತರಬೇತುದಾರರು, ಕ್ರೀಡಾ ಶಾಲೆ, ಕೂಡಿಗೆ ಸೋಮವಾರಪೇಟೆ ಮತ್ತು ಕುಶಾಲನಗರಕ್ಕೆ ದೂ. ಸಂ.9663241305, ಸೋಮವಾರಪೇಟೆ ಮತ್ತು ಕುಶಾಲನಗರಕ್ಕೆ ಸುರೇಶ್…

Read More

ಮಡಿಕೇರಿ ಜ.6 NEWS DESK : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಜ.8 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಗರಸಭೆ ಕಾವೇರಿ ಕಲಾಕ್ಷೇತ್ರದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಿ, ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

Read More

ವಿರಾಜಪೇಟೆ ಜ.6 NEWS DESK : ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಉಡುಪಿಯ ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಡಾ.ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ವಿರಾಜಪೇಟೆ ಸಂತ ಅನ್ನಮ್ಮ ಶಾಲೆಯಲ್ಲಿ ಎರಡನೇ ತರಗತಿ ವಿದ್ಯಾರ್ಥಿನಿ ಸಂಚಿತಾ ಆಚಾರ್ಯಗೆ ಲಭಿಸಿದೆ. ಕೋಟ ಶಿವರಾಮ ಕಾರಂತರ ಥೀಮ್ ಪಾರ್ಕನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಂಚಿತ ಆಚಾರ್ಯ ವಿರಾಜಪೇಟೆಯ ಚಂದ್ರ ಆಚಾರ್ಯ ಮತ್ತು ಪ್ರೇಮಾಂಜಲಿ ಆಚಾರ್ಯ ದಂಪತಿಯ ಪುತ್ರಿ.

Read More

ಮಡಿಕೇರಿ NEWS DESK ಜ.5 : ಸಾಂಪ್ರದಾಯಿಕ ವಸ್ತç ಧರಿಸುವ ವಿಚಾರದಲ್ಲಿ ವಿವಾದದ ಕೇಂದ್ರವಾಗಿ ಮಾರ್ಪಟ್ಟಿರುವ ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಾಲಯದ ಆಡಳಿತ ಮಂಡಳಿ ಇಂದು ನಡೆಸಿದ ಸಭೆ ಒಮ್ಮತ್ತದ ನಿರ್ಧಾರ ಕೈಗೊಳ್ಳುವಲ್ಲಿ ವಿಫಲವಾಯಿತು. ಶ್ರೀ ಮಹಾಮೃತ್ಯುಂಜಯ ದೇವಾಲಯಕ್ಕೆ ಸಾಂಪ್ರದಾಯಿಕ ಉಡುಪು ಧರಿಸಿ ಪ್ರವೇಶಿಸುವ ವಿಚಾರದಲ್ಲಿ ಭಿನ್ನಾಭಿಪ್ರಾಯ ಮೂಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಇತ್ತೀಚೆಗೆ ಶಾಂತಿಸಭೆ ನಡೆಸಿದ್ದರು. ಆಡಳಿತ ಮಂಡಳಿ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮರಗೋಡು ಸಹಕಾರ ಸಂಘದ ಸಭಾಂಗಣದಲ್ಲಿ ದೇವಾಲಯ ಆಡಳಿತ ಮಂಡಳಿಯ ಅಧ್ಯಕ್ಷ ಕಟ್ಟೆಮನೆ ಶಶಿ ಜನಾರ್ಧನ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ದೇವಾಲಯದ ವಾರ್ಷಿಕೋತ್ಸವದ ಕೊನೆಯ ದಿನ ಗ್ರಾಮಸ್ಥರು ಮಾತ್ರ ಸಾಂಪ್ರದಾಯಿಕ ಉಡುಪು ಧರಿಸಿ ಬರಲು ಅವಕಾಶ ನೀಡುವ ಕುರಿತು ಪ್ರಸ್ತಾಪಿಸಲಾಯಿತು ಎಂದು ತಿಳಿದು ಬಂದಿದೆ. ಆದರೆ ಇದಕ್ಕೆ ಕೆಲವರು ಒಪ್ಪಿಗೆ ಸೂಚಿಸದೆ ಇದ್ದುದರಿಂದ ಸಭೆ ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳದೆ ಪ್ರಸ್ತಾಪಿಸಲ್ಪಟ್ಟ ವಿಚಾರಗಳ ಬಗ್ಗೆ…

Read More

ಮಡಿಕೇರಿ NEWS DESK ಜ.5 : ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸ್ಕೇರಿ ಬಸ್ ನಿಲ್ದಾಣ ಮತ್ತು ಮಾರುಕಟ್ಟೆ ಭಾಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೊಸ್ಕೇರಿ ಗ್ರಾಮದಲ್ಲಿ ನೆಲೆಸಿರುವ ಅಸ್ಸಾಂ ರಾಜ್ಯ ಮೂಲದ ಸೋಫಿಕುಲ್ ಇಸ್ಲಾಂ (24) ವರ್ಷ, ಇಮ್ತಿಯಾಜ್ ಆಲಿ (20) ರೋಹಿಥಾನ್ (50) ಹಾಗೂ ಕೋಣನಕಟ್ಟೆ-ಸುಳುಗೋಡು ಗ್ರಾಮದ ನಿವಾಸಿ ಯೂಸೂಫ್ ಆಲಿ (32) ಬಂಧಿತ ಆರೋಪಿಗಳು. ಇವರ ಬಳಯಿಂದ 2 ಕೆ.ಜಿ 481 ಗ್ರಾಂ ಗಾಂಜಾವನ್ನು ವಶ ಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಗಾಂಜಾ ಮಾರಾಟದ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆ ಮಡಿಕೇರಿ ಉಪವಿಭಾಗದ ಡಿವೈಎಸ್‌ಪಿ ಮಹೇಶ್‌ಕುಮಾರ್, ಮಡಿಕೇರಿ ನಗರ ಸಿಪಿಐ ರಾಜು.ಪಿ.ಕೆ, ಸಿದ್ದಾಪುರ ಪಿಎಸ್‌ಐ ರಾಘವೇಂದ್ರ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದರು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಶ್ಲಾಘಿಸಿದ್ದಾರೆ. ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಗಾಂಜಾ ಮತ್ತಿತರ ಮಾದಕ ವಸ್ತುಗಳ ಸಾಗಾಟ ಅಥವಾ ಮಾರಾಟದ…

Read More

ಮಡಿಕೇರಿ NEWS DESK ಜ.4 : ದ್ವಿಚಕ್ರ ವಾಹನ ಸವಾರನ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಮಡಿಕೇರಿ ತಾಲ್ಲೂಕಿನ ಜೋಡುಪಾಲದಲ್ಲಿ ನಡೆದಿದೆ. ಸ್ಥಳೀಯ ಕಾರ್ಮಿಕ ಮುತ್ತಯ್ಯ ಎಂಬುವವರು ಎಂದಿನಂತೆ ಬೆಳಗಿನ ಜಾವ ದ್ವಿಚಕ್ರ ವಾಹನದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಸಂದರ್ಭ ಜೋಡುಪಾಲದ 10ನೇ ಮೈಲ್ ಬಳಿ ಕಾಡಾನೆ ದಾಳಿ ನಡೆಸಿದೆ. ಮುತ್ತಯ್ಯ ಅವರು ಆನೆ ದಾಳಿಯಿಂದ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಕಾಡಾನೆ ದ್ವಿಚಕ್ರ ವಾಹನವನ್ನು ತುಳಿದು ಜಖಂಗೊಳಿಸಿದೆ. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Read More

ಮಡಿಕೇರಿ NEWS DESK ಜ.4 : ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪಥ ಸಂಚಲನಕ್ಕೆ ಕೊಡಗಿನ ಮನ್ನೆರ ಪ್ರಶಸ್ತಿ ಆಯ್ಕೆಯಾಗಿದ್ದಾರೆ. ಮನ್ನೆರ ಪ್ರಶಸ್ತಿ ಅವರು ಕರ್ನಾಟಕ ಮತ್ತು ಗೋವಾ ಬೆಟಾಲಿಯನ್ ಏರ್ ವಿಂಗ್‌ನಿಂದ ಆಯ್ಕೆಯಾಗಿದ್ದಾರೆ. ಇವರು ಮೂಲತಃ ಪೊನ್ನಂಪೇಟೆ ತಾಲ್ಲೂಕು ಹರಿಹರ ಗ್ರಾಮದ ನಿವಾಸಿ ಮನ್ನೆರ ಮನು ಹಾಗೂ ಸೌಮ್ಯ ದಂಪತಿ ಪುತ್ರಿಯಾಗಿದ್ದು, ಪ್ರಸ್ತುತ ಮೂಡಬಿದ್ರೆಯ ಆಳ್ವಾಸ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಾರೆ.

Read More

ಮಡಿಕೇರಿ NEWS DESK ಜ.4 : ದೇವಾಲಯದ ಕಾಣಿಕೆ ಹುಂಡಿ ಕಳ್ಳತನ ಮಾಡಲು ಯತ್ನಿಸಿದ ಪ್ರಕರಣ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಶ್ರೀಮುತ್ತಪ್ಪ ಹಾಗೂ ಐಶ್ವರ್ಯ ಗಣಪತಿ ದೇವಸ್ಥಾನದಲ್ಲಿ ನಡೆದಿದೆ. ಶುಕ್ರವಾರ ಮಧ್ಯರಾತ್ರಿ ಸುಮಾರು 1.45 ಗಂಟೆ ವೇಳೆ ದೇವಾಲಯದ ಆವರಣಕ್ಕೆ ಬಂದ ಚೋರರು ಹುಂಡಿಯನ್ನು ಕದ್ದು ಹೊರಗೆ ಬಂದಿದ್ದಾರೆ. ಈ ಸಂದರ್ಭ ನಾಯಿಗಳು ಬೊಗಳಿದ್ದು, ಅಕ್ಕಪಕ್ಕದ ಮನೆಯವರು ಹೊರ ಬಂದಿದ್ದಾರೆ. ಆತಂಕಗೊಂಡ ಕಳ್ಳರು ಕಾಣಿಕೆ ಹುಂಡಿಯನ್ನು ಅಲ್ಲೇ ಬಿಟ್ಟು ಪಕ್ಕದ ಕಾಡಿನೊಳಗೆ ಪರಾರಿಯಾಗಿದ್ದಾರೆ. ಗ್ರಾಮಸ್ಥರು ಸೇರಿ ಹುಡುಕಾಡಿದರೂ ಪರಾರಿಯಾದವರು ಪತ್ತೆಯಾಗಲಿಲ್ಲ. ದೇವಾಲಯದ ಆಡಳಿತ ಮಂಡಳಿ ನೀಡಿದ ದೂರಿನ ಹಿನ್ನೆಲೆ ಸಿದ್ದಾಪುರ ಪೊಲೀಸರು ಶ್ವಾನದಳದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚೋರರ ಪತ್ತೆಗೆ ತನಿಖೆ ಮುಂದುವರೆದಿದೆ. ಮಾಲ್ದಾರೆ ಭಾಗದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪೊಲೀಸರು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Read More