ಮಡಿಕೇರಿ NEWS DESK ಫೆ.15 : ಮಡಿಕೇರಿ ನಗರದ ಡಾ.ಅಂಬೇಡ್ಕರ್ ಭವನದ ಎದುರು ಅಳವಡಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವಿದ್ದ ಬ್ಯಾನರ್ ಮತ್ತು ಅಂಬೇಡ್ಕರ್, ಬುದ್ಧ ಸಹಿತ ಹಿರಿಯ ಚೇತನರ ಭಾವಚಿತ್ರಗಳಿದ್ದ ಮತ್ತೊಂದು ಬ್ಯಾನರ್ ನ್ನು ಸುಟ್ಟ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರಜಾಪ್ರಭುತ್ವ ರಾಷ್ಟ್ರ ಭಾರತದಲ್ಲಿ ನ್ಯಾಯ ಕೋರಿ ಪ್ರತಿಭಟನೆ ನಡೆಸುವ ಹಕ್ಕನ್ನು ಎಲ್ಲರಿಗೂ ಸಂವಿಧಾನ ನೀಡಿದೆ. ಡಾ.ಅಂಬೇಡ್ಕರ್ ಭವನದ ವಿಚಾರವಾಗಿ ವಿವಿಧ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಇದರ ಭಾಗವಾಗಿ ಬ್ಯಾನರ್ ಅಳವಡಿಸಲಾಗಿತ್ತು. ಹೋರಾಟವನ್ನು ಹತ್ತಿಕ್ಕುವ ಸಲುವಾಗಿ ಕಿಡಿಗೇಡಿಗಳು ಬ್ಯಾನರ್ ನ್ನು ಸುಟ್ಟು ಹಾಕಿರುವುದು ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬ್ಯಾನರ್ ಗಳಿಗೆ ಬೆಂಕಿ ಹಚ್ಚುವ ಮೂಲಕ ಅದರಲ್ಲಿದ್ದ ಡಾ.ಬಿ.ಆರ್.ಅಂಬೇಡ್ಕರ್, ಬುದ್ಧ ಸೇರಿದಂತೆ ಮಹನೀಯರ ಭಾವಚಿತ್ರಗಳಿಗೆ ಅಗೌರವ ತೋರಲಾಗಿದೆ.…
ಲೇಖಕ: admin
ಮಡಿಕೇರಿ ಫೆ.15 NEWS DESK : ಮೈಕ್ರೋಫೈನಾನ್ಸ್ ಗಳಿಂದ ಸಾಲಪಡೆದವರಿಗೆ ಆಗುತ್ತಿರುವ ಕಿರುಕುಳವನ್ನು ತಪ್ಪಿಸಲು ಸರ್ಕಾರ ಸುಗ್ರೀವಾಜ್ಞೆಯನ್ನು ಜಾರಿಗೆ ತಂದು ಕೆಲವು ನಿಯಮಗಳನ್ನು ರೂಪಿಸಿರುವುದು ಸ್ವಾಗತಾರ್ಹ. ಆದರೆ ಈ ನಿಯಮಗಳ ಅನುಷ್ಠಾಕ್ಕೂ ಮೊದಲು ಬಡವರು ಪಡೆದುಕೊಂಡಿರುವ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಲಿ ಎಂದು ಯುವ ಜಾತ್ಯತೀತ ಜನತಾದಳದ ಕೊಡಗು ಜಿಲ್ಲಾಧ್ಯಕ್ಷ ಸಿ.ಎಲ್.ವಿಶ್ವ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸರ್ಕಾರ ಸುಗ್ರೀವಾಜ್ಞೆಯ ಮೂಲಕ ಮೈಕ್ರೋಫೈನಾನ್ಸ್ ಗಳ ಕಿರುಕುಳಕ್ಕೆ ಅಂಕುಶ ಹಾಕುವುದಾಗಿ ಹೇಳಿಕೊಂಡಿದೆ. ಆದರೆ ಸರ್ಕಾರದ ಘೋಷಣೆಯ ನಂತರವೂ ಮೈಕ್ರೋಫೈನಾನ್ಸ್ ನ ಸಿಬ್ಬಂದಿಗಳು ಸಾಲ ಪಡೆದವರ ಮನೆಗಳಿಗೆ ತೆರಳಿ ಸಾಲದ ಮೊತ್ತ ಪಾವತಿಸುವಂತೆ ಒತ್ತಡ ಹೇರುತ್ತಿರುವುದು ಕಂಡು ಬಂದಿದೆ. ಬಡವರ ಮೇಲೆ ಸರ್ಕಾರಕ್ಕೆ ನೈಜ ಕಾಳಜಿ ಇದ್ದರೆ ಮೊದಲು ಸಾಲಮನ್ನಾ ಮಾಡಲಿ, ನಂತರ ಕಾನೂನು ಕ್ರಮದ ಪ್ರಕ್ರಿಯೆಯನ್ನು ಆರಂಭಿಸಲಿ ಎಂದು ತಿಳಿಸಿದ್ದಾರೆ. ಕೊಡಗು ಜಿಲ್ಲೆಯ ಶನಿವಾರಸಂತೆಯಲ್ಲಿ ಸಾಲದಬಾಧೆ ತಾಳಲಾರದೆ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೂ ಕೆಲವು ಭಾಗಗಳಲ್ಲಿ ಸಾಲಗಾರರ ಕಿರುಕುಳದಿಂದ ಬೇಸತ್ತು ಊರು…
ನಾಪೋಕ್ಲು ಫೆ.15 NEWS DESK : ವಿದ್ಯಾರ್ಥಿಗಳೇ ಸಮಾಜದ ಉತ್ತಮ ಆಸ್ತಿ ಎಂದು ಹಾಕತ್ತೂರು ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ವನಜ ಹೇಳಿದರು. ಹಾಕತ್ತೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮಡಿಕೇರಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ಕೊಡಗು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬೆಟ್ಟಗೇರಿ ವಲಯ, ಜಿಲ್ಲಾ ಪಂಚಾಯತ್ ಕೊಡಗು, ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ಕಾರಿ ಪ್ರೌಢಶಾಲೆ ಹಾಕತ್ತೂರು, ರಾಷ್ಟ್ರೀಯ ಸೇವಾ ಯೋಜನೆಗಳ ಸಂಯುಕ್ತ ಆಶ್ರಯದಲ್ಲಿ ಸ್ವಸ್ಥ ಮತ್ತು ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಎಂಬ ವಿಷಯದ ಕುರಿತು ದುಶ್ಚಟ ದುರಭ್ಯಾಸದಿಂದ ಆಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಹಾಗೂ ಅರಿವು ಮೂಡಿಸುವ “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಅಧ್ಯಕ್ಷತ ವಹಿಸಿ ಮಾತನಾಡಿದ ಅವರು, ಕಾಲೇಜು ಜೀವನದಲ್ಲಿ ವಿದ್ಯಾರ್ಥಿಗಳ ಮನಸ್ಸು ತುಂಬಾ ಚಂಚಲ. ಈ ಹಂತದಲ್ಲಿ ವಿದ್ಯಾರ್ಥಿಗಳು ತಮ್ಮ…
ನಾಪೋಕ್ಲು ಫೆ.15 NEWS DESK : ಚೆರಿಯಪರಂಬು ಮಖಾಂ ಉರೂಸ್ಗೆ ಚೆರಿಯಪರಂಬು ಜಮಾಯತ್ ಅಧ್ಯಕ್ಷ ಪಿ.ಎ.ಹಂಸ ಹಾಜಿ ಧ್ವಜಾರೋಹಣ ನೆರವೇರಿಸಿಸುವ ಮೂಲಕ ಚಾಲನೆ ನೀಡಿದರು. ನಮಾಜ್ ಬಳಿಕ ದರ್ಗಾದಲ್ಲಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿ ಉರೂಸ್ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಜಮಾಯತ್ ಉಪಾಧ್ಯಕ್ಷ ಪಿ.ಎಂ.ಶಾದಲಿ, ಕಾರ್ಯದರ್ಶಿ ಅಸೈನರ್ ಹಾಜಿ, ಸಹ ಕಾರ್ಯದರ್ಶಿ ಎಂ.ಜೆ.ಬಶೀರ್, ಖತೀಬರಾದ ಫೈಝಲ್ ಸಖಾಪಿ, ಜಮಾಯತ್ ಹಾಲಿ ಹಾಗೂ ಮಾಜಿ ಸಮಿತಿ ಸದಸ್ಯರು ಹಾಗೂ ಜನಾಂಗಬಾಂಧವರು ಉಪಸ್ಥಿತರಿದ್ದರು. ಉರೂಸ್ ಪ್ರಯುಕ್ತ ಫೆ.18ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದೆ. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಫೆ.15 NEWS DESK : ಹಲ್ಲುಗಳ ರಕ್ಷಣೆಯ ಬಗ್ಗೆ ಕಾಳಜಿ ವಹಿಸಬೇಕಾದ್ದು ಅತ್ಯಗತ್ಯ ಎಂದು ಮಡಿಕೇರಿ ವಿಜ್ಞಾನ ಮಹಾ ವಿದ್ಯಾಲಯದ ನೋಡಲ್ ಅಧಿಕಾರಿ ಡಾ.ರೇವಣ್ಣ ಹೇಳಿದರು. ಮಡಿಕೇರಿ ವಿಜ್ಞಾನ ಮಹಾವಿದ್ಯಾಲಯ, ವಿರಾಜಪೇಟೆ ದಂತ ಮಹಾವಿದ್ಯಾಲಯ, ಲಯನ್ಸ್ ಕ್ಲಬ್ ನಾಪೋಕ್ಲು, ಗ್ರಾಮ ಅಭಿವೃದ್ಧಿ ಸಂಘ ವೆಸ್ಟ್ ಕೊಳಕೇರಿ ಸಂಯುಕ್ತ ಆಶ್ರಯದಲ್ಲಿ ಕೊಳಕೇರಿ ಗ್ರಾಮ ಅಭಿವೃದ್ಧಿ ಸಂಘದ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸೆ ಶಿಬಿರದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಎಲ್ಲರೂ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು, ಅದರಲ್ಲೂ ಹಲ್ಲುಗಳ ಬಗ್ಗೆ ಕಾಳಜಿ ವಹಿಸಬೇಕು. ಚಿಕ್ಕಂದಿನಲ್ಲೇ ಹುಳುಕು ಹಲ್ಲುಗಳ ರಕ್ಷಣೆ ಬಗ್ಗೆ ಕಾಳಜಿ ಹೊಂದಿರುವುದು ಅತ್ಯಗತ್ಯ. ಸಾಮಾನ್ಯವಾಗಿ ಹುಳುಕು ಹಲ್ಲುಗಳು ಮಾನವನ ಆರೋಗ್ಯದ ಮೇಲೆ ಪ್ರಭಾವ ಬೀರುತ್ತದೆ. ಆರಂಭಿಕ ಹಂತದಲ್ಲಿ ಹುಳುಕು ಹಲ್ಲುಗಳ ತೊಂದರೆ ಕಾಣಿಸಿಕೊಂಡಾಗ ಚಿಕಿತ್ಸೆ ನೀಡಿ ಪರಿಹರಿಸಿಕೊಳ್ಳಬಹುದು. ಹಾಗೆಯೇ ಮನುಷ್ಯನಿಗೆ ವಸಡಿನ ತೊಂದರೆಗಳು ಕಂಡುಬರುತ್ತವೆ. ಆರಂಭದ ಹಂತದಲ್ಲಿ ಚಿಕಿತ್ಸೆ ನೀಡಿ ಸರಿಪಡಿಸಿಕೊಳ್ಳಲು ಸಾಧ್ಯ ಎಂದರು. ಜಿಲ್ಲೆಯ ಗ್ರಾಮೀಣ…
ಕುಶಾಲನಗರ ಫೆ.15 NEWS DESK : ಪ್ರೇಮಿಗಳ ದಿನವನ್ನು ಕಾವೇರಿಯ ಸ್ವಚ್ಛತಾ ಕಾರ್ಯ ಮಾಡುವ ಮೂಲಕ ಕಾಲೇಜು ವಿದ್ಯಾರ್ಥಿಗಳು ವಿಶೇಷವಾಗಿ ಆಚರಣೆ ಮಾಡಿ ಯುವ ಪೀಳಿಗೆಗೆ ಹೊಸ ಸಂದೇಶ ನೀಡಿದರು. ಕುಶಾಲನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಪ್ಪ ಭಾರತ್ ಮಾತಾ ಪ್ರಥಮ ದರ್ಜೆ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಕುಶಾಲನಗರ ಕೊಪ್ಪ ಗಡಿ ಭಾಗದ ಕಾವೇರಿ ನದಿಯಲ್ಲಿ ಇಳಿದು ಐ ಲವ್ ಕಾವೇರಿ ಅನ್ನುವ ಘೋಷಣೆಯೊಂದಿಗೆ ನದಿಯಲ್ಲಿದ್ದ ತ್ಯಾಜ್ಯಗಳ ತೆರವು ಗೊಳಿಸುವ ಕಾಯಕದಲ್ಲಿ ತೊಡಗಿಸಿಕೊಂಡ ದೃಶ್ಯ ಕಂಡು ಬಂತು. ಕುಶಾಲನಗರ ಕೊಪ್ಪ ಕಾವೇರಿ ನದಿ ಸೇತುವೆ ಮೇಲ್ಭಾಗದಿಂದ ಜನರು ಎಸೆದ ಪೂಜಾ ಸಾಮಗ್ರಿಗಳು, ಬಳಕೆಗೆ ಯೋಗ್ಯವಲ್ಲದ ವಸ್ತುಗಳನ್ನು ನೂರಕ್ಕೂ ಅಧಿಕ ವಿದ್ಯಾರ್ಥಿ ವಿದ್ಯಾರ್ಥಿನಿಯರು ತೆರವುಗೊಳಿಸಿ ಕುಶಾಲನಗರ ಪುರಸಭೆ ಮತ್ತು ಕೊಪ್ಪ ಗ್ರಾಮ ಪಂಚಾಯಿತಿಗಳ ಕಸ ವಿಲೇವಾರಿ ವಾಹನಗಳಿಗೆ ತುಂಬಿಸಿ ನದಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕಳೆದ ವರ್ಷ ಫೆಬ್ರುವರಿ 14ರಂದು ಕೂಡ ಇದೇ ರೀತಿಯ ಅಭಿಯಾನದಲ್ಲಿ ಈ ಕಾಲೇಜಿನ ವಿದ್ಯಾರ್ಥಿಗಳು ತೊಡಗಿಸಿಕೊಂಡು ಕಾವೇರಿ ನದಿಯ…
ಮಡಿಕೇರಿ ಫೆ.15 NEWS DESK : ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ದಕ್ಷಿಣ ಕನ್ನಡದ ಬೆಳ್ತಂಗಡಿಯ ಸೇವಾಭಾರತಿ ಸಂಸ್ಥೆಯ ವತಿಯಿಂದ ಮಡಿಕೇರಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಶಿಬಿರ ಮತ್ತು ಗಾಲಿಕುರ್ಚಿ ಜಾಥಾ ನಡೆಯಿತು. ಮಡಿಕೇರಿಯ ವಿಕಾಸ್ ಜನ ಸೇವಾ ಟ್ರಸ್ಟ್ ಆಶ್ರಮ, ಸ್ವಾಮಿ ವಿವೇಕಾನಂದ ಯೂತ್ ಮೂಮ್ ಮೆಂಟ್ ಕೊಡಗು ಶಾಖೆ ಮತ್ತು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋದಕ ಆಸ್ಪತ್ರೆಯ ಸಹಯೋಗದಲ್ಲಿ ನಗರದ ಅಶ್ವಿನಿ ಆಸ್ಪತ್ರೆಯಲ್ಲಿ ಮೂರು ದಿನಗಳ ಕಾಲ ಶಿಬಿರ ನಡೆಸಲಾಗಿದ್ದು, ಜನ ಸಾಮಾನ್ಯರಿಗೆ ಬೆನ್ನುಹುರಿ ಅಪಘಾತದ ಬಗ್ಗೆ ಅರಿವು ಮೂಡಿಸಲು ಮತ್ತು ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರುವ ಉದ್ದೇಶದಿಂದಾಗಿ ಗಾಲಿಕುರ್ಚಿ ಜಾಥಾವನ್ನು ನಡೆಸಲಾಯಿತು. ಈ ಸಂದರ್ಭ ಸೇವಾ ಭಾರತಿ ಖಜಾಂಚಿ ಹಾಗೂ ಸೇವಾ ಧಾಮ ಸಂಸ್ಥೆಯ ಸ್ಥಾಪಕ ಕೆ.ವಿನಾಯಕ ರಾವ್, ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ ಸ್ಥಾಯಿ ಸಮಿತಿ ಸದಸ್ಯ ಅಜಯ್ ಸೂದ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
ಮಡಿಕೇರಿ ಫೆ.15 NEWS DESK : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಸಹಕಾರದಲ್ಲಿ ಕ್ಲಬ್ ಮಹೀಂದ್ರ ವತಿಯಿಂದ ರಕ್ತದಾನ ಶಿಬಿರವು ನಗರದ ಹೊರವಲಯದಲ್ಲಿರುವ ಕ್ಲಬ್ ಮಹೀಂದ್ರದಲ್ಲಿ ನಡೆಯಿತು. ಹೋಟೆಲ್ ಕ್ಲಬ್ ಮಹೀಂದ್ರದ ಸುಮಾರು 45 ಸಿಬ್ಬಂದಿಗಳು ರಕ್ತದಾನ ಮಾಡಿದರು. ಕ್ಲಬ್ ಮಹೀಂದ್ರದ ವ್ಯವಸ್ಥಾಪಕ ಫಾರೂಕ್, ಎಂಜಿನಿಯರ್ ದೀಪಕ್ ಕುಮಾರ್, ಮಾನವ ಸಂಪನ್ಮೂಲ ವಿಭಾಗದ ನವೀನ್ ನೊರೋನಾ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ರಕ್ತನಿಧಿ ವಿಭಾಗದ ಡಾ.ಕರುಂಬಯ್ಯ ಇತರರು ಇದ್ದರು.
ಮಡಿಕೇರಿ ಫೆ.15 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಹಾಗೂ ಜಿಲ್ಲಾ ಮಹಿಳಾ ಸಹಾಯವಾಣಿ ಇವರ ಸಹಯೋಗದೊಂದಿಗೆ 2024-25ನೇ ಸಾಲಿನ ಮಿಶನ್ ಶಕ್ತಿ ಯೋಜನೆಯಡಿ “ಬೇಟಿ ಬಚಾವೊ-ಬೇಟಿ ಪಡಾವೊ” ತಾಲ್ಲೂಕು ಮಟ್ಟದ ಕಾರ್ಯಕ್ರಮ ಏರ್ಪಡಿಸಲಾಗಿದ್ದು “ಶಾಲಾ ಮಕ್ಕಳಿಗೆ ಪ್ರೇರಣಾ ತುಣುಕು ಕಾರ್ಯಾಗಾರವು ಹೆಬ್ಬಾಲೆ ಸಂಯುಕ್ತ ಪ್ರೌಢಶಾಲೆಯಲ್ಲಿ ನಡೆಯಿತು. ಕುಶಾಲನಗರ ಗ್ರಾಮಂತರ ಠಾಣೆಯ ಎ.ಎಸ್.ಐ ಕುಮಾರಿ ಉದ್ಘಾಟಿಸಿ ಮಾತನಾಡಿ. ಪ್ರಸ್ತುತ ದಿನಗಳಲ್ಲಿ ಶಾಲಾ ಮಕ್ಕಳು ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಬೇಕು. ಸರ್ಕಾರ ಮಕ್ಕಳಿಗಾಗಿ ಉಚಿತ ಹಾಸ್ಟೆಲ್ ವ್ಯವಸ್ಥೆಗಳನ್ನು ಕಲ್ಪಿಸಿದ್ದು ಮಕ್ಕಳು ಶಿಕ್ಷಣವಂತರಾಗುವಲ್ಲಿ ಹೆಚ್ಚಿನದಾದ ಶ್ರಮ ವಹಿಸಬೇಕು. ವಿದ್ಯಾಭ್ಯಾಸದ ಸಮಯದಲ್ಲಿ ಏಕಾಗ್ರತೆಯಿಂದ ಇರಬೇಕಾಗುತ್ತದೆ. ಮಕ್ಕಳಿಗೆ ಸಾರ್ವಜನಿಕ ವಲಯದಲ್ಲಿ ಸಮಸ್ಯೆಗಳಾದ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಕ್ಕೆ ಕರೆ ಮಾಡಿ ಮಾಹಿತಿ ನೀಡಿದಾಗ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು. ಪೊಲೀಸ್ ಇಲಾಖೆಯ 112 ಗೆ…
ಮಡಿಕೇರಿ ಫೆ.15 NEWS DESK : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಕೊಡಗು ಜಿಲ್ಲೆಯ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದ (ಕೆಎಬಿಎಚ್ಐ) ವತಿಯಿಂದ ಅಂತಾರಾಷ್ಟ್ರೀಯ ಅಪಸ್ಮಾರ (ಮೂರ್ಛೆರೋಗ) ದಿನಾಚರಣೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಭೋದಕ ಆಸ್ಪತ್ರೆಯ ಉಪನ್ಯಾಸಕರ ಕೊಠಡಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೆಒಐಎಂಎಸ್ ಸಂಸ್ಥೆಯ ಸ್ಥಾನಿಯ ವೈದ್ಯಾಧಿಕಾರಿ ಆಡಿ ಸತೀಶ್ ಸರ್ ಅವರು ಅಂತಾರಾಷ್ಟ್ರೀಯ ಮೂರ್ಛೆರೋಗ ದಿನಾಚರಣೆ 2025 ಘೋಷವಾಕ್ಯವಾದ “ರೋಗಗ್ರಸ್ಥೆಯನ್ನು ಮೀರಿ ಅಪಸ್ಮಾರದ ಅರಿವಿನೊಂದಿಗೆ ಜೀವನವನ್ನು ಸಶಕ್ತಗೊಳಿಸುವ” ಎಂಬ ಅಪಸ್ಮಾರ ರೋಗದ ಚಿಹ್ನೆಗಳನ್ನು ಮುಂಚಿತವಾಗಿ ರೋಗಿಯಲ್ಲಿ ಗುರುತಿಸುವ ಹಾಗೂ ಅಪಸ್ಮಾರ ರೋಗ ಬಂದ ರೋಗಿಯನ್ನು ಹೇಗೆ ಚಿಕಿತ್ಸೆಯನ್ನು ಕೊಡಿಸಬೇಕೆಂದು ನೆರೆದಿದ್ದ ವೈದ್ಯಕೀಯ ವಿದ್ಯಾರ್ಥಿಗಳಿಗೆ ತಿಳಿಸಿದರು. ಕೆಒಐಎಂಎಸ್ ಸಂಸ್ಥೆಯ ಸಾಮಾನ್ಯ ವೈದ್ಯಕೀಯ ವಿಭಾಗದ ವೈದ್ಯಧಿಕಾರಿಯಾದ ಆಡಿ ಚೇತನ್ ಮಾತನಾಡಿ, ಅಪಸ್ಮಾರ ಕಾಯಿಲೆಯ ಬಗೆಗೆ ನೆರೆದಿದ್ದ ವಿದ್ಯಾರ್ಥಿಗಳಿಗೆ ಅಪಸ್ಮಾರ ಖಾಯಿಲೆಯ ಉಪನ್ಯಾಸವನ್ನು ನೀಡಿದರು. ಹಾಗೂ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದ ಕೊಡಗು ಜಿಲ್ಲೆಯ…






