ಮಡಿಕೇರಿ NEWS DESK ಜ.18 : ಅಖಿಲ ಕೊಡವ ಸಮಾಜದ ಅಧ್ಯಕ್ಷರಾದ ಪರದಂಡ ಸುಬ್ರಮಣಿ ಹಾಗೂ ಕಾರ್ಯದರ್ಶಿ ಕೀತಿಯಂಡ ವಿಜಯಕುಮಾರ್ ಅವರು ಶನಿವಾರ ಮಡಿಕೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ನೀಡಿದ ಹೇಳಿಕೆ ವೈಯುಕ್ತಿಕವಾಗಿದ್ದು, ಅದಕ್ಕೆ ನಮ್ಮ ಸಹಮತ ಇಲ್ಲ. ನಾವು ಹೋರಾಟಕ್ಕೆ ಬದ್ಧರಾಗಿದ್ದು, ಇವರಿಬ್ಬರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಲಿ ಎಂದು ಕನೆಕ್ಟಿಂಗ್ ಕೊಡವಾಸ್ ಸಂಘಟನೆಯ ಸಂಚಾಲಕ ಶಾಂತೆಯಂಡ ನಿರನ್ ನಾಚಪ್ಪ ಒತ್ತಾಯಿಸಿದ್ದಾರೆ. ಸೋಮವಾರ ಬೃಹತ್ ಜಾಥಾ ನಡೆಸಲು ವಿವಿಧ ಸಂಘಟನೆ, ಸಮಾಜ ಮತ್ತು ಜನಾಂಗ ಮುಖಂಡರೊಂದಿಗೆ ಮಾತುಕತೆ ನಡೆಯುತ್ತಿದ್ದು, ನಮ್ಮ ನಿಲುವಿಗೆ ಬದ್ಧರಾಗಿದ್ದೇವೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಮಡಿಕೇರಿಯಲ್ಲಿ ನಡೆಸಿರುವ ಪತ್ರಿಕಾಗೋಷ್ಠಿಗೆ ನಮ್ಮನ್ನು ಕರೆದ ವಿಚಾರವೇ ಬೇರೆ, ಅಲ್ಲಿ ಅಖಿಲ ಕೊಡವ ಸಮಾಜ ನಡೆದುಕೊಂಡದ್ದೇ ಬೇರೆಯಾಗಿದೆ. ಕಟ್ಟೆಮಾಡು ಪ್ರಕರಣದ ಹಲ್ಲೆ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳದೆ ಇರುವುದನ್ನು ವಿರೋಧಿಸಿ ಪ್ರತಿಭಟನೆ ಆಯೋಜಿಸುತ್ತಿರುವ ಕುರಿತು ಪತ್ರಿಕಾಗೋಷ್ಠಿ ನಡೆಸುತ್ತಿರುವುದಾಗಿ ಹೇಳಿದ್ದ ಅಖಿಲ ಕೊಡವ ಸಮಾಜದ ಪ್ರಮುಖರು ಸಂಬಂಧವೇ ಇಲ್ಲದ ವಿಚಾರವನ್ನು ಮಾತನಾಡಿದ್ದಾರೆ ಎಂದು…
ಲೇಖಕ: admin
ಮಡಿಕೇರಿ ಜ.18 NEWS DESK : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿರುವ ಕೊಡವ ವಿದ್ಯಾರ್ಥಿಗಳ ಕೊಡವ ಸ್ಟೂಡೆಂಟ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ ಚಂಗುಲಂಡ ರಕ್ಷಿತ್ ಪೂವಯ್ಯ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಸೋಮೆಯಂಡ ತನಿಷ್ ತಮ್ಮಯ್ಯ, ಉಪಾಧ್ಯಕ್ಷರಾಗಿ ನಾಳಿಯಂಡ ಜಶಿಕ, ಸಹ ಕಾರ್ಯದರ್ಶಿಯಾಗಿ ಚೆಯ್ಯಂಡ ಭಕ್ತಿ ಬೋಜಮ್ಮ, ಖಜಾಂಚಿ ಬೇಪಡಿಯಂಡ ರೋಹನ್ ನಾಣಯ್ಯ, ಸಹ ಖಜಾಂಚಿ ಸುಳ್ಳಿಮಾಡ ಎಸ್.ಗಾಯನ ಗಂಗಮ್ಮ, ಸಂಘಟನಾ ಕಾರ್ಯದರ್ಶಿಯಾಗಿ ಕುಟ್ಟಂಜೆಟ್ಟಿರ ಎಸ್.ಚಿನ್ನಪ್ಪ, ಕ್ರೀಡಾ ಕಾರ್ಯದರ್ಶಿಯಾಗಿ ಮಾರ್ಚಂಡ ನಿಹಾಲ್ ಸುಬ್ರಮಣಿ, ಸಹ ಕ್ರೀಡಾ ಕಾರ್ಯದರ್ಶಿಯಾಗಿ ಮುಕ್ಕಾಟೀರ ಟಿಂಚಲ್ ತಂಗಮ್ಮ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮುಕ್ಕಾಟಿರ ಎಂ.ಚಿನ್ಮಯಿ ಗಂಗಮ್ಮ ನೇಮಕಗೊಂಡಿದ್ದಾರೆ.
ಮಡಿಕೇರಿ ಜ.18 NEWS DESK : ಕವನ ವಾಚನ ಸ್ಪರ್ಧೆಯಲ್ಲಿ ಅಯ್ಯನೆರವಂಡ ಪ್ರಿತುನ್ ಪೂವಣ್ಣಗೆ ‘ಕರುನಾಡ ಕವಿರತ್ನ ‘ ಪ್ರಶಸ್ತಿ ಲಭಿಸಿದೆ.ಬೆಳಕು ಸಾಹಿತ್ಯ ಶೈಕ್ಷಣಿಕ ಸಾಂಸ್ಕೃತಿಕ ಟ್ರಸ್ಟ್(ರಿ) ಸಂಸ್ಥೆಯು ರಾಯಚೂರಿನಲ್ಲಿ ನಡೆಸಿದ ರಾಷ್ಟಮಟ್ಟದ ಕನ್ನಡ ಕಲರವ ಸಮ್ಮೇಳನದಲ್ಲಿ ರಾಜ್ಯಮಟ್ಟದ ಕವನ ವಾಚನ ಸ್ಪರ್ಧೆಗೆ ಕೊಡಗಿನಿಂದ ಕವಿಗೋಷ್ಠಿಯಲ್ಲಿ ಭಾಗವಹಿಸಿ ಕವನ ವಾಚಿಸಿದ ಪ್ರಿತುನ್ ಪೂವಣ್ಣಗೆ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು. ಪ್ರಿತುನ್ ಪೂವಣ್ಣ ಕಕ್ಕಬ್ಬೆ ನಾಲಡಿ ಗ್ರಾಮದ ಪೂವಯ್ಯ, ಪ್ರಭಾ ದಂಪತಿಯ ಪುತ್ರ.
ಮಡಿಕೇರಿ ಜ.18 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಫಲಪುಷ್ಪ ಪ್ರದರ್ಶನವು ಜ.24 ರಿಂದ 27 ರವರೆಗೆ ನಗರದ ರಾಜಾಸೀಟು ಉದ್ಯಾನವನ ಹಾಗೂ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಫಲಪುಷ್ಪ ಪ್ರದರ್ಶನದ ಉದ್ಘಾಟನಾ ಸಮಾರಂಭವು ಜ.24 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ತೋಟಗಾರಿಕೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಶಾಸಕರಾದ ಡಾ.ಮಂತರ್ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಕೊಡಗು ಜಿ.ಪಂ.ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ತೋಟಗಾರಿಕೆ ಇಲಾಖೆ ನಿರ್ದೇಶಕರಾದ ಡಿ.ಎಸ್.ರಮೇಶ್, ಕೊಡಗು…
ಮಡಿಕೇರಿ ಜ.18 NEWS DESK : ಯೂಕೋ ಬ್ಯಾಂಕ್ನಲ್ಲಿ ಖಾಲಿ ಇರುವ 250 ಕ್ಕೂ ಹೆಚ್ಚು ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 20 ರಿಂದ 30 ವರ್ಷದೊಳಗಿನ ಪದವೀಧರ ಅಭ್ಯರ್ಥಿಗಳು ದಿನಾಂಕ 16.1.2025 ರಿಂದ 5.2.2025 ರೊಳಗೆ ವೆಬ್ಸೈಟ್ ವಿಳಾಸ https://www.ucobank.com/en/ ಕ್ಕೆ ಭೇಟಿ ನೀಡಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ಕೃಷಿಕ್ ಸರ್ವೋದಯ ಫೌಂಡೇಶನ್ (ರಿ) ನಲ್ಲಿ ಬ್ಯಾಂಕ್ ನೇಮಕಾತಿ ಪರೀಕ್ಷೆ ಮತ್ತು ಇನ್ಶುರೆನ್ಸ್ ಕಂಪನಿಗಳ ನೇಮಕಾತಿ ಪರೀಕ್ಷೆಗಳಿಗೆ ನುರಿತ ವಿಷಯ ತಜ್ಞರಿಂದ ರಿಯಾಯಿತಿ ದರದಲ್ಲಿ ತರಬೇತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ 8660217739 ಸಂಖ್ಯೆಗೆ ಕರೆ ಅಥವಾ ವಾಟ್ಸಾಪ್ ಮಾಡಬಹುದಾಗಿದೆ ಎಂದು ಶಾಖೆಯ ಗೌರವ ಕಾರ್ಯದರ್ಶಿ ಎಚ್.ಪಿ.ಮೋಹನ್ ತಿಳಿಸಿದ್ದಾರೆ.
ಮಡಿಕೇರಿ ಜ.18 NEWS DESK : ಕಾರ್ಮಿಕ ಇಲಾಖೆ ವತಿಯಿಂದ ಅಸಂಘಟಿತ ಕಟ್ಟಡ ಕಾರ್ಮಿಕರಿಗೆ ಹಲವು ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಿದೆ. ಕೊಡಗು ಜಿಲ್ಲೆಯ ವ್ಯಾಪ್ತಿಯಲ್ಲಿ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾಯ್ದೆಯಡಿ ನೋಂದಣಿಯಾಗಿರುವ ಕಾರ್ಮಿಕರಿಗೆ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಜಿಲ್ಲೆಯಲ್ಲಿ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾಯ್ದೆಯಡಿ ಇದುವರೆಗೆ 12,367 ಮಂದಿ ಹೆಸರು ನೋಂದಾಯಿಸಿದ್ದಾರೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಕಾವೇರಿ ಅವರು ಮಾಹಿತಿ ನೀಡಿದ್ದಾರೆ. ಇವರಲ್ಲಿ 9,740 ಮಂದಿ ಪುರುಷರು ಹಾಗೂ 2,627 ಮಂದಿ ಮಹಿಳೆಯರು ಕಟ್ಟಡ ಹಾಗೂ ಇತರೆ ನಿರ್ಮಾಣ ಕಾಯ್ದೆಯಡಿ ನೋಂದಣಿಯಾಗಿದ್ದಾರೆ. ಮಡಿಕೇರಿ ತಾಲ್ಲೂಕಿನಲ್ಲಿ 3,035 ಮಂದಿ, ಸೋಮವಾರಪೇಟೆ ತಾಲ್ಲೂಕಿನಲ್ಲಿ 4,037 ಮಂದಿ, ವಿರಾಜಪೇಟೆ ತಾಲ್ಲೂಕಿನ 5295 ಮಂದಿ ಹೆಸರು ನೋಂದಾಯಿಸಿದ್ದಾರೆ. ಪ್ರಸಕ್ತ ವರ್ಷದಲ್ಲಿ ಡಿಸೆಂಬರ್ ಅಂತ್ಯದವರೆಗೆ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಧನಸಹಾಯ ವಿತರಿಸಲಾಗಿದೆ. ಹೆರಿಗೆ ಧನ ಭತ್ಯೆ, ವೈದ್ಯಕೀಯ ಸಹಾಯಧನ, ಮದುವೆಗೆ ಧನಸಹಾಯ, ಹೀಗೆ ವಿವಿಧ ಯೋಜನೆಗಳಡಿ ಸುಮಾರು…
ಮಡಿಕೇರಿ ಜ.18 NEWS DESK : ಭಾರತೀಯ ಕ್ರೀಡಾ ಪ್ರಾಧಿಕಾರದ(ಸಾಯಿ) ತರಬೇತಿ ಕೇಂದ್ರದ ವತಿಯಿಂದ ಮಡಿಕೇರಿಯ ಬಾಲಕಿಯರ ಕ್ರೀಡಾ ಹಾಸ್ಟೆಲ್ಗೆ ಪ್ರತಿಭಾವಂತ ಹಾಕಿ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯು ಫೆ.1 ರದು ಬೆಳಗ್ಗೆ 9 ಗಂಟೆಗೆ ನಗರದ ರೇಸ್ ಕೋರ್ಸ್ ರಸ್ತೆಯ ಸಾಯಿ ಹಾಕಿ ಟರ್ಫ್ ಮೈದಾನದಲ್ಲಿ ನಡೆಯಲಿದೆ. 12 ರಿಂದ 18 ವರ್ಷದ ಪ್ರಾಯದೊಳಗಿನ ಬಾಲಕಿಯರು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು. ಭಾಗವಹಿಸುವ ಕ್ರೀಡಾಪಟುಗಳು ತಮ್ಮ ವೈಯಕ್ತಿಕ ಕ್ರೀಡಾ ಸಾಮಾಗ್ರಿ ತರಬೇಕು. ವೈದ್ಯಕೀಯ ಅರ್ಹತಾ ಪತ್ರ ವೈದ್ಯಾಧಿಕಾರಿಯವರಿಂದ, ಕ್ರೀಡಾ ಸಾಧನೆಯ ಸರ್ಟಿಫಿಕೇಟ್. (ಜಿಲ್ಲಾ, ವಿಭಾಗ, ರಾಜ್ಯ, ಹಾಗೂ ಅದಕ್ಕಿಂತ ಮೇಲ್ಪಟ್ಟ 3 ವರ್ಷದ ಹಿಂದಿನ ಸ್ಫರ್ಧೆಯಲ್ಲಿ ಭಾಗವಹಿಸಿದ್ದು), ಜನ್ಮ ದಿನಾಂಕ ಪ್ರಮಾಣ ಪತ್ರ (ಜನನ ಮರಣ ನೋಂದಣಿ ಅಧಿಕಾರಿಗಳಿಂದ), ಇತ್ತೀಚಿನ 5 ಪಾಸ್ಪೋರ್ಟ್ ಅಳತೆಯ ಭಾವಚಿತ್ರ. ವಿಳಾಸ ದೃಡೀಕರಣಗೊಳಿಸಲು ಆಧಾರ್ ಕಾರ್ಡ್. ಮೇಲಿನ ಆಯ್ಕೆ ಪ್ರಕ್ರಿಯೆಯನ್ನು ಹಿಂದಿನ 3 ವರ್ಷದ ಹಾಕಿ ಕ್ರೀಡಾ ಸಾಧನೆಯ ಪ್ರಮಾಣ ಪತ್ರ ಹಾಗೂ ಕೆಲವೊಂದು ಸಾಯಿ ನಿಗದಿತ…
ಮಡಿಕೇರಿ ಜ.18 NEWS DESK : ಕೊಡಗು ಜಿಲ್ಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಜನವರಿ, 19 ಮತ್ತು ಜನವರಿ, 25 ರಂದು ನಡೆಸಲಾಗುತ್ತಿರುವ ವಿವಿಧ ಇಲಾಖೆಗಳ ಗ್ರೂಪ್ “ಬಿ” ವೃಂದದ ಹುದ್ದೆಗಳ ನೇಮಕಾತಿಯ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರಡಿ ದತ್ತವಾದ ಅಧಿಕಾರದಂತೆ ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜು, ಮಡಿಕೇರಿ (ಪ್ರೌಢ ಶಾಲೆ ವಿಭಾಗ), ಸಂತ ಮೈಕಲರ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಸಂಯುಕ್ತ ಪ್ರೌಢಶಾಲೆ, ಸಂತ ಜೋಸೆಫರ ಕಾನ್ವೆಂಟ್ ಹಾಗೂ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್ ಈ ಪರೀಕ್ಷಾ ಕೇಂದ್ರ ಸೇರಿದಂತೆ ಈ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ. ಈ ಅವಧಿಯಲ್ಲಿ ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ…
ಮಡಿಕೇರಿ ಜ.18 NEWS DESK : ರಾಷ್ಟ್ರೀಯ ಆಯುಷ್ ಅಭಿಯಾನದ ಯೋಜನೆಯಡಿ ಕೊಡಗು ಜಿಲ್ಲಾ ಆಯುಷ್ ಇಲಾಖೆಯಲ್ಲಿ ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಕಮ್ಯುನಿಟಿ ಹೆಲ್ತ್ ಆಫೀಸರ್(ಸಿಎಚ್ಒ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ತಮ್ಮ ಸಂಪೂರ್ಣ ವಿವರವುಳ್ಳ ಅರ್ಜಿಯನ್ನು ನಿಗಧಿಪಡಿಸಿದ ಕನಿಷ್ಠ ವಿದ್ಯಾರ್ಹತೆ, ವಯೋಮಿತಿ ಹಾಗೂ ಇತರೆ ಎಲ್ಲಾ ದಾಖಲಾತಿಗಳೊಂದಿಗೆ ಸಲ್ಲಿಸಲು ಜನವರಿ, 31 ಕೊನೆ ದಿನವಾಗಿದೆ. ನೇರ ಸಂದರ್ಶನಕ್ಕೆ ದಿನಾಂಕವನ್ನು ನಂತರ ತಿಳಿಸಲಾಗುವುದು. ಕಮ್ಯುನಿಟಿ ಹೆಲ್ತ್ ಆಫೀಸರ್(ಸಿಎಚ್ಒ) ಸ.ಆ.ಚಿ ಶ್ರೀಮಂಗಲ-01 ಹುದ್ದೆ, ಸ.ಹೋ.ಚಿ ಪಾರಾಣೆ-01 ಹುದ್ದೆ, ಕನಿಷ್ಠ ವಿದ್ಯಾರ್ಹತೆ ಬಿಎಎಂಎಸ್ ಮಾಸಿಕ ವೇತನ ರೂ.40,000 (ರೂ.25,000 ಒಂದು ತಿಂಗಳಿಗೆ ಮತ್ತು ರೂ.15 ಸಾವಿರ ಒಂದು ತಿಂಗಳಿಗೆ ಪರ್ಮಾಪಾರ್ಮೆನ್ಸ್ ಪೇಮೆಂಟ್) ಸಾ.ಅಭ್ಯರ್ಥಿ 01. ಈ ಹುದ್ದೆಯು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ Community Health Officer (CHO) ಹುದ್ದೆಗಳನ್ನು ಒಂದು ವರ್ಷದವರಗೆ ಅಥವಾ ಸದರಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಖಾಯಂ ವೈದ್ಯಾಧಿಕಾರಿಗಳ ಹುದ್ದೆಗಳು ಭರ್ತಿಯಾಗುವವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ಚಾಲ್ತಿಯಲ್ಲಿರುತ್ತದೆ.…
ಸುಂಟಿಕೊಪ್ಪ ಜ.18 NEWS DESK : ಸರಕಾರಿ ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜು ಹಳೆಯ ವಿದ್ಯಾರ್ಥಿಗಳ ಸಂಘಟನೆ ವತಿಯಿಂದ ಜ.19 ರಂದು ಗುರು ಶಿಷ್ಯರ ಸಮ್ಮಿಲನ ಮತ್ತು ಸ್ನೇಹ ಸಂಗಮ ಕಾರ್ಯಕ್ರಮ ನಡೆಯಲಿದೆ. ಸ್ಥಳೀಯ ಜಿ.ಎಂ.ಪಿ ಶಾಲಾ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ವೈ.ಶಿವರಾಮಯ್ಯ ಧ್ವಜಾರೋಹಣ ಮಾಡುವುದರ ಮೂಲಕ ಚಾಲನೆ ನೀಡಲಿದ್ದಾರೆ. ನಂತರ ವಿದ್ಯ ಕಲಿಸಿದ ಹಿರಿಯ ಗುರುಗಳನ್ನು ವಿವಿಧ ಸಾಂಸ್ಕೃತಿಕ ಕಲಾ ತಂಡಗಳ ಮೂಲಕ ಮೆರವಣಿಗೆಯಲ್ಲಿ ಸಭಾ ಕಾರ್ಯಕ್ರಮಕ್ಕೆ ಕರೆತರಲಾಗುವುದು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಹಳೆ ವಿದ್ಯಾರ್ಥಿ, ಹಾಲಿ ಕರ್ನಾಟಕ ಉಚ್ಚನ್ಯಾಯಾಲಯದ ನ್ಯಾಯಮೂರ್ತಿ ಎಂ.ಜಿ.ಸುಕುರೆ ಕುಮಾರ್ ವಹಿಸಲಿದ್ದಾರೆ. ಸಂಜೆ ಸಮಾರೋಪ ಸಭೆ ನಡೆಯಲಿದ್ದು, ಶಾಲೆಯ ಹಳೆಯ ವಿದ್ಯಾರ್ಥಿ ಬೆಂಗಳೂರು ಬಿಬಿಎಂಪಿಯ ಸಹಾಯಕ ಆಯುಕ್ತ ಪಿ.ಎಸ್.ಮಹೇಶ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಶಾಲೆಗೆ ಸ್ಥಳದಾನ ಮಾಡಿದ ಶಾಲಾ ಕೊಠಡಿಗಳನ್ನು ಕಟ್ಟಿಸಿಕೊಟ್ಟ ದಾನಿಗಳಾದ ಮಾಜಿ ಶಾಸಕರು ಕೆ.ಎಂ.ಇಬ್ರಾಹಿಂ, ಬೆಟ್ಟಗೇರಿ ಸಮೂಹ ತೋಟಗಳ ಮಾಲೀಕ…






