ಲೇಖಕ: admin

ಮಡಿಕೇರಿ ಜ.18 NEWS DESK : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರಿಗೆ ನಗರದ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ದಂಡ ಸಹಿತ 20 ವರ್ಷಗಳ ಕಠಿಣ ಸಜೆ ವಿಧಿಸಿ ತೀರ್ಪು ನೀಡಿದೆ. ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಹರದೂರು ಗ್ರಾಮದ ಎಸ್ಟೇಟ್‍ವೊಂದರ ಲೈನ್ ಮನೆಯಲ್ಲಿ ವಾಸವಿದ್ದ ರಮೇಶ ಎಂ.ಬಿ ಎಂಬಾತನೆ ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿ. ಲೈನ್ ಮನೆಯಲ್ಲಿ ವಾಸವಿದ್ದ ರಮೇಶ ಎಂ.ವಿ., 2021ರ ಆ.5 ರಂದು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಎನ್ನುವ ಆರೋಪದಡಿ ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆ, ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ನಂತರ ತನಿಖೆ ಕೈಗೊಂಡು 2021ರ ಆ.7ರಂದು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಪ್ರಕರಣದ ತನಿಖಾಧಿಕಾರಿ ಕುಶಾಲನಗರ ವೃತ್ತದ ಸಿಪಿಐ ಮಹೇಶ್ ಎಂ. ಹಾಗೂ ತನಿಖಾ ಸಹಾಯಕ ಲೋಕೇಶ್ ಹೆಚ್.ಎಸ್ ಅವರು ಪ್ರಕರಣದ ಬಗ್ಗೆ ಸಮಗ್ರ ತನಿಖೆ…

Read More

ನಾಪೋಕ್ಲು ಜ.18 NEWS DESK : ಈ ದೇಶಕ್ಕೆ ಉತ್ತಮ ಪ್ರಜೆಗಳನ್ನು ರೂಪಿಸುವ ಶಿಕ್ಷಕರ ಪಾತ್ರ ಮಹತ್ತರವಾದದ್ದು, ಗುರುಗಳಿಗೆ ನಾವುಗಳು ಸದಾ ಚಿರಋಣಿ ಆಗಿರಬೇಕು ಎಂದು ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳು ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಶಿಕ್ಷಕರು ಇಡುವ ಪ್ರತಿಯೊಂದು ಹೆಜ್ಜೆಯನ್ನು ವಿದ್ಯಾರ್ಥಿಗಳು ಗಮನಿಸಿ ಪಾಲಿಸುತ್ತಾರೆ. ಹಾಗಾಗಿ ದೇಶದ ಉತ್ತಮ ಭವಿಷ್ಯ ರೂಪಿಸುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು. ಕಾಲೇಜಿನ ಅಧ್ಯಕ್ಷರಾದ ಪೊಡನೊಳಂಡ.ಎಸ್.ಸುಬ್ಬಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚೇರಂಬಾಣೆ ಗ್ರಾ.ಪಂ ಅಧ್ಯಕ್ಷ ಪಟ್ಟಮಾಡ ಮಿಲನ್, ಕಾಲೇಜು ಪ್ರಾಂಶುಪಾಲ ದಾಯನ ಎಸ್.ರಾಮಕೃಷ್ಣ, ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಬಾಚರಣಿಯಂಡ ದಿನೇಶ್, ಚೇರಂಬಾಣೆ ಗೌಡ ಸಮಾಜದ ಅಧ್ಯಕ್ಷ ಕೊಡಪಾಲ್ ಗಪ್ಪು ಗಣಪತಿ, ಕಾಲೇಜಿನ ಮುಖ್ಯ ಶಿಕ್ಷಕ ಸಿ.ಆರ್.ಲೋಕೇಶ್, ಕಾಲೇಜಿನ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕ ವೃಂದ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ…

Read More

ಮೂರ್ನಾಡು ಜ.18 NEWS DESK : ಮನೆಯಲ್ಲಿ ಅವರವರ ಮಾತೃಭಾಷೆಯಲ್ಲಿಯೆ ಮಾತನಾಡುವ ಮೂಲಕ ಪ್ರತಿಯೊಬ್ಬರು ಮಾತೃಭಾಷೆಗೆ ಪ್ರಾಮುಖ್ಯತೆ ನೀಡಬೇಕು. ಆಗಮಾತ್ರ ಆ ಮಣ್ಣಿನ ಸಂಸ್ಕಾರ-ಸಂಸ್ಕೃತಿ ಪರಂಪರೆಗಳು ಮಕ್ಕಳಿಗೆ ತಿಳಿಯುತ್ತದೆ ಎಂದು ಮಾಜಿ ಸಚಿವ ಎಂ.ಸಿ.ನಾಣಯ್ಯ ಹೇಳಿದರು. ಮೂರ್ನಾಡು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆದ ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ “ಬೆಳ್ಳಿಹಬ್ಬ” ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆಂಗ್ಲಭಾಷೆ ಕಲಿಯಬೇಕು. ಅದನ್ನು ಶಾಲೆಗಳಲ್ಲಿ ಕಲಿಯಲು ಅವಕಾಶವಿದೆ. ಮನೆಯಲ್ಲಿ ಮಾತೃಭಾಷೆಗೆ ಪ್ರಾಧಾನ್ಯತೆ ನೀಡಬೇಕು. ಅಂದು ಇಲ್ಲಿ ಆಂಗ್ಲಮಾಧ್ಯಮ ಶಾಲೆ ಪ್ರಾರಂಭವಾಗಲು ಹಲವಾರು ಒತ್ತಡ, ಹೋರಾಟಗಳ ನಡವೆ ಪ್ರಾರಂಭ ಗೊಂಡಿರುವುದನ್ನು ನೆನಪಿಸಿಕೊಂಡ ಅವರು ಈಗ ಈ ವಿದ್ಯಾಸಂಸ್ಥೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾ 25ವರ್ಷಗಳನ್ನು ಪೂರೈಸಿದೆ ಎಂದು ಹರ್ಷವ್ಯಕ್ತಪಡಿಸಿದರು. ಮುಂದೆ ಇಲ್ಲಿ ಪದವಿಪೂರ್ವ ಶಿಕ್ಷಣವನ್ನು ಪ್ರಾರಂಭಿಸುವ ಆಲೋಚನೆ ಇದ್ದಲ್ಲಿ, ಅದಕ್ಕೆ ಬೇಕಾದ ಆಡಳಿತಾತ್ಮಕ ಸಹಕಾರ ಮಾಡುವುದಾಗಿ ಹೇಳಿದರು. ವಿವೇಕನಂದರ ಸಮಾರಂಭಗಳನ್ನು ಶಾಲೆಗಳಲ್ಲಿಯೆ ಆಚರಿಸುವಂತಾಗಬೇಕು. ಆಗಮಾತ್ರ ವಿವೇಕನಂದರ ಆದರ್ಶ, ಧೃಡ ನಿಲುವುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರ್ಥವಾಗುತ್ತದೆ. ಯಾವುದೆ ಶಾಲೆಯು ಕೇವಲ ಪಾಠಕ್ಕೆ…

Read More

ಮಡಿಕೇರಿ  NEWS DESK ಜ.18 : ಕಟ್ಟೆಮಾಡು ಶ್ರೀ ಮಹಾ ಮೃತ್ಯುಂಜಯ ದೇವಾಲಯದಲ್ಲಿ ಉಂಟಾಗಿರುವ ಭಿನ್ನಾಭಿಪ್ರಾಯಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತ ನಡೆಸುವ ಶಾಂತಿ ಸಂಧಾನ ಪ್ರಕ್ರಿಯೆಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಘೋಷಿಸಿರುವ ಅಖಿಲ ಕೊಡವ ಸಮಾಜ, ಎರಡೂ ಜನಾಂಗದವರು ಪರಸ್ಪರ ಪ್ರತಿಭಟನೆ ನಡೆಸದಂತೆ ಮನವಿ ಮಾಡಿದೆ. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಅವರು ಕಹಿ ಘಟನೆಯನ್ನು ಮರೆತು ಶಾಂತಿಯನ್ನು ಕಾಪಾಡಬೇಕಾಗಿದೆ, ದೇವಾಲಯದಲ್ಲಿ ನಡೆದ ಘಟನೆಯ ಬಗ್ಗೆ ಎರಡೂ ಕಡೆಯವರಲ್ಲಿ “ಹೀಗಾಗಬಾರದಾಗಿತ್ತು” ಎನ್ನುವ ಬೇಸರವಿದೆ. ಒಬ್ಬರು ಪ್ರತಿಭಟನೆ ನಡೆಸಿದರೆ, ಮತ್ತೊಬ್ಬರು ಪ್ರತಿಭಟನೆಗೆ ಮುಂದಾಗುತ್ತಾರೆ, ಇದರಿಂದ ಯಾರಿಗೂ ಲಾಭವಿಲ್ಲ. ಆದ್ದರಿಂದ ಆದಷ್ಟು ಬೇಗ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಸಂಧಾನಕ್ಕೆ ವೇದಿಕೆ ಸಿದ್ಧಗೊಳಿಸಬೇಕು ಎಂದು ಒತ್ತಾಯಿಸಿದರು. ಕೊಡವರಿಗೆ ಎಲ್ಲಾ ಜನಾಂಗದವರ ಮೇಲೆ ಗೌರವವಿದೆ, ಹಲವು ದೇವಸ್ಥಾನಗಳಲ್ಲಿ ಭಂಡಾರ ತಕ್ಕರಾಗಿ ಅರೆಭಾಷಿಕ ಜನಾಂಗ ಬಾಂಧವರು ಕೊಡವ ಜನಾಂಗದವರೊAದಿಗೆ ಸೇರಿ ಶಾಂತಿಯುತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೊಡಗಿನ ಜನಜೀವನದಲ್ಲಿ ಅವರು…

Read More

ಸೋಮವಾರಪೇಟೆ  ಜ.18 NEWS DESK : ಗ್ಯಾರೆಂಟಿ ಯೋಜನೆಗಳಿಂದ ಮಹಿಳೆಯರು ಸಬಲರಾಗುತ್ತಿದ್ದು, ರಾಜ್ಯ ಸರ್ಕಾರ ಮಹಿಳೆಯರ ಪರವಾಗಿದೆ ಎಂದು ರಾಜ್ಯ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಮೈಸೂರು ವಿಭಾಗದ ಉಪಾಧ್ಯಕ್ಷರಾದ ಡಾ.ಪುಷ್ಪ ಅಮರನಾಥ್ ತಿಳಿಸಿದರು. ಪಟ್ಟಣದ ಕೆ.ಎಸ್.ಆರ್.ಟಿ.ಸಿ. ಬಸ್ಸ್ ನಿಲ್ದಾಣದಲ್ಲಿ ಮಹಿಳೆಯರೊಂದಿಗೆ ಸಂವಾದನಡೆಸಿ ಮಾತನಾಡಿದರು. ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ರಾಷ್ಟ್ರದಲ್ಲಿ ಹೆಸರುವಾಸಿಯಾಗಿದೆ ಎಂದರು. ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವ ನಿಧಿ ಯೋಜನೆಗಳ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯಪಡೆದರು. ಈ ಸಂದರ್ಭ ಮಹಿಳೆಯೊಬ್ಬರು ಗೃಹಲಕ್ಷ್ಮಿ ಹಣದಿಂದ ಚಿನ್ನ ಖರೀದಿಸಲು ಮತ್ತೊಬ್ಬರು ವೈದ್ಯಕೀಯ ವೆಚ್ಚಕ್ಕಾಗಿ ಬಳಸುತ್ತಿರುವುದಾಗಿ ತಿಳಿಸಿದರು. ಈ ಸಂದರ್ಭ ಕೆಲವು ತಿಂಗಳ ಹಣ ಬರದೆ ಇರುವ ಬಗ್ಗೆ ಗಮನ ಸೆಳೆದಾಗ ಸದ್ಯದಲ್ಲೇ ಒಟ್ಟಿಗೆ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದರು. ಕೆಲವರಿಗೆ ಅನ್ನಭಾಗ್ಯ ಯೋಜನೆಗೆ ಪಡಿತರ ಚೀಟಿ ಸಮಸ್ಯೆಯಾಗಿರುವ ಬಗ್ಗೆ ಕೆಲವರು ಅಧ್ಯಕ್ಷರನ್ನು ಪ್ರಶ್ನಿಸಿದಾಗ ಸ್ಥಳದಲ್ಲಿದ್ದ ಆಹಾರ ಇಲಾಖೆ ಅಧಿಕಾರಿಗಳು ಗಮನ ಹರಿಸಿ…

Read More

ವಿರಾಜಪೇಟೆ ಜ.18 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ವಿರಾಜಪೇಟೆ, ಸ್ವಸಹಾಯ ಸಂಘಗಳ ಒಕ್ಕೂಟಗಳ ಆಶ್ರಯದಲ್ಲಿ ಕೃಷಿ ಸ್ವ ಉದ್ಯೋಗ ತರಬೇತಿ ಕಾರ್ಯಕ್ರಮ ಮೂರ್ನಾಡು ವಲಯದ ಹೊದ್ದೂರು ವಾಟೆಕಾಡು ಕಾರ್ಯಕ್ಷೇತ್ರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ. ಲಕ್ಷ್ಮಿ ಬಳಗಾನೂರಮಠ ಮಾತನಾಡಿ, ಕೃಷಿ ಸ್ವ- ಉದ್ಯೋಗ ಮಾಡುವುದರಿಂದ ಆತ್ಮಸ್ಥೈರ್ಯ ಬರುತ್ತದೆ. ಹಾಗೂ ಸಿರಿ ಧಾನ್ಯಗಳ ಬಗ್ಗೆ ಕೈಗಾರಿಕೆ ಮತ್ತು ಮಾರುಕಟ್ಟೆಯ ಕುರಿತು ಮಾಹಿತಿ ನೀಡಿದರು. ಸ್ವ-ಉದ್ಯೋಗ ಮಾಡುವವರಿಗೆ ಸರಕಾರದಿಂದ ಸಬ್ಸಿಡಿ ಸಿಗುತ್ತದೆ. ಅಣಬೆ ಕೃಷಿ, ಜೇನುಕೃಷಿ, ಹೈನುಗಾರಿಕೆ ಈ ರೀತಿಯ ಅನೇಕ ಸ್ವ-ಉದ್ಯೋಗದ ಬಗ್ಗೆ ಮಾಹಿತಿ ನೀಡಿದರು. ಕೃಷಿ ಮೇಲ್ವಿಚಾರಕರಾದ ವಸಂತ್ ಮಾತನಾಡಿ, ಕೃಷಿ ಸ್ವ-ಉದ್ಯೋಗವು ಕೃಷಿಕರಿಗೆ ಆದಾಯದ ಹೆಚ್ಚುವರಿ ಮೂಲವನ್ನು ಒದಗಿಸುತ್ತದೆ. ಪಶು ಪಾಲನೆ, ಹಸುಗಳು, ಕುರಿಗಳು, ಮೇಕೆಗಳು ಮತ್ತು ಕೋಳಿಗಳ ಸಾಕಾಣಿಕೆ ನಮ್ಮ ಆದಾಯಕ್ಕೆ ಒಂದು ಬಲ ವರ್ಧನೆ ಆಗುತ್ತದೆ. ಈ ರೀತಿಯಲ್ಲಿ ಸ್ವಉದ್ಯೋಗವು ಕೇವಲ…

Read More

ಪೊನ್ನಂಪೇಟೆ ಜ.18 NEWS DESK : ಕ್ರೀಡೆಯ ತವರು ಎಂದು ಕರೆಸಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ವಿವಿಧ ಕ್ರೀಡಾಕೂಟಗಳು ನಿರಂತರವಾಗಿ ನಡೆಯುತ್ತಿದೆ. ಈ ರೀತಿಯ ಕ್ರೀಡಾಕೂಟಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕೊಡಗು ಕ್ರೀಡಾ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲು ಸರಕಾರ ಮುಂದಾಗಬೇಕು ಎಂದು ಆಗ್ರಹಿಸಿರುವ ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ಅಧ್ಯಕ್ಷರಾದ ವಿರಾಜಪೇಟೆಯ ದುದ್ದಿಯಂಡ ಹೆಚ್. ಸೂಫಿ ಹಾಜಿ, ಇದರಿಂದ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯುವುದಲ್ಲದೆ ಜಿಲ್ಲೆಯಿಂದ ಹೆಚ್ಚಿನ ಪ್ರತಿಭಾನ್ವಿತ ಕ್ರೀಡಾಪಟುಗಳನ್ನು ಉತ್ಪಾದಿಸಬಹುದಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ವಿರಾಜಪೇಟೆ ಸಮೀಪದ ಬೇಟೋಳಿ ಗ್ರಾಮದಲ್ಲಿರುವ ಚಿಟ್ಟಡೆಯ ಜುಮ್ಮಾ ಮಸೀದಿ ಮೈದಾನದಲ್ಲಿ ಚಿಟ್ಟಡೆಯ ಕೂವಲೆರ ಕುಟುಂಬಸ್ಥರ ಆತಿಥ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಕೊಡವ ಮುಸ್ಲಿಂ ಮನೆತನಗಳ ನಡುವಿನ ಪ್ರಥಮ ವರ್ಷದ ಹೊನಲು ಬೆಳಕಿನ ಕೌಟುಂಬಿಕ ವಾಲಿಬಾಲ್ ಪಂದ್ಯಾವಳಿ “ಕೂವಲೆರ ಚಿಟ್ಟಡೆ ಕಪ್ -2025″ಅನ್ನು ವಿದ್ಯುಕ್ತವಾಗಿ ಉದ್ಘಾಟಿಸಿ ಮಾತನಾಡಿದ ಅವರು, ಕೊಡಗಿನಲ್ಲಿ ಮಳೆಗಾಲದ ಮೂರು ತಿಂಗಳನ್ನು ಹೊರತುಪಡಿಸಿದರೆ ಉಳಿದ ಎಲ್ಲಾ ಅವಧಿಯಲ್ಲೂ ಬೇರೆ ಬೇರೆ ರೀತಿಯ ಕ್ರೀಡಾಕೂಟಗಳು ನಿರಂತರವಾಗಿ ಜರುಗುತ್ತಿರುತ್ತವೆ.…

Read More

ಮಡಿಕೇರಿ ಜ.18 NEWS DESK : ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ಕೊಡಗು ಜಿಲ್ಲಾಧ್ಯಕ್ಷರಾಗಿ ಸಂಘಟಕ, ಪತ್ರಕರ್ತ, ಚಿತ್ರನಟ, ಸಾಹಿತಿ ಬೊಳ್ಳಜಿರ ಬಿ.ಅಯ್ಯಪ್ಪ ಆಯ್ಕೆಯಾಗಿದ್ದಾರೆ. ಕನ್ನಡ ಭವನದ ರಜತ ಸಂಭ್ರಮ ವರ್ಷವಾದ 2025ರಲ್ಲಿ ಕರ್ನಾಟಕ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಕನ್ನಡ ಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸದುದ್ದೇಶದಿಂದ ಎಲ್ಲ ಜಿಲ್ಲೆಗಳಲ್ಲಿ ಘಟಕ ಸ್ಥಾಪಿಸಲಾಗುತ್ತಿದೆ. ಕನ್ನಡ ಭವನದ ಕರ್ನಾಟಕ ರಾಜ್ಯ  ಸಂಚಾಲಕರಾದ ಡಾ. ಟಿ.ತ್ಯಾಗರಾಜ್ ಮೈಸೂರು ನಾಮನಿರ್ದೇಶನ ಮಾಡಿದರು. ಇನ್ನೊರ್ವ ಕರ್ನಾಟಕ ರಾಜ್ಯ ಸಂಚಾಲಕರಾದ ಬಿ.ಶಿವಕುಮಾರ್ ಕೋಲಾರ ಹಾಗೂ ನಿರ್ದೆಶಕರಾದ ಡಾ.ಕೊಳಚಪ್ಪೆ ಗೋವಿಂದ ಭಟ್ ಅನುಮೋದಿಸಿದರು. ಸರ್ವಾನುಮತಿಯೊಂದಿಗೆ ಆಯ್ಕೆಯಾದ  ಬೊಳ್ಳಜಿರ ಬಿ.ಅಯ್ಯಪ್ಪ ಕಾಸರಗೋಡು ಕನ್ನಡ ಭವನ ಮತ್ತು ಗ್ರಂಥಾಲಯ (ರಿ.)ಕನ್ನಡ ಭವನ ಪ್ರಕಾಶನ, 20000ಪುಸ್ತಕಗಳುಳ್ಳ ಸಾರ್ವಜನಿಕ ವಾಚನಾಲಯ, ಕರ್ನಾಟಕದಿಂದ ಕಾಸರಗೋಡು ಪ್ರದೇಶಕ್ಕೆ ಆಗಮಿಸುವ ಸಾಹಿತ್ಯ, ಸಾಂಸ್ಕೃತಿಕ ಯಾತ್ರಾರ್ಥಿಗಳಿಗೆ ”ಉಚಿತ ವಸತಿ ಸೌಕರ್ಯ ” ಪ್ರತಿ ಮನೆಗೊಂದು ಗ್ರಂಥಾಲಯ -ಪುಸ್ತಕವೇ ಸತ್ಯ -ಪುಸ್ತಕವೇ ನಿತ್ಯ ಎಂಬ ನೂತನ ಜನಾಂದೋಲನ ಕಾರ್ಯಕ್ರಮ ಹಾಗೂ ರಜತ ಸಂಭ್ರಮ…

Read More

ಮಡಿಕೇರಿ ಜ.18 NEWS DESK : ಶಿವಯೋಗಿ ಸಿದ್ದರಾಮೇಶ್ವರರು ಆಗಾಧ ಶಕ್ತಿಯಿಂದ ಲೋಕ ಕಲ್ಯಾಣಕ್ಕಾಗಿ ಶ್ರಮಿಸಿದ ಮಹಾನ್ ಸಾಧಕ ಎಂದು ಸಾಹಿತಿ ಹಾಗೂ ಸರಸ್ವತಿ ಡಿಎಡ್ ಕಾಲೇಜು ಪ್ರಾಂಶುಪಾಲ ಕುಮಾರ್ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಆಶ್ರಯದಲ್ಲಿ ಗಾಂಧಿ ಭವನದಲ್ಲಿ ನಡೆದ ಶಿವಯೋಗಿ ಸಿದ್ದರಾಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಮಾಜದ ಉದ್ದಾರಕ್ಕಾಗಿ ಶ್ರಮಿಸಿ, ಲೋಕ ಕಲ್ಯಾಣಕ್ಕಾಗಿ ತಪಸ್ಸನ್ನು ಮಾಡಿ ಶಿವಯೋಗಿ ಆದ ಸಿದ್ದರಾಮೇಶ್ವರರು ಸಮಾಜದ ಕುಲವನ್ನು ಉದ್ದಾರ ಮಾಡಿದವರಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು. ಶಿವಯೋಗಿ ಸಿದ್ದರಾಮ ಸರಳ ಜೀವನ ಮಾಡುತ್ತಾ ಸಕಲ ಜೀವಿಗಳ ಲೇಸುಗಳನ್ನು ಬಯಸುತ್ತಿದ್ದರು, ಶ್ರದ್ದೆ, ನಿಷ್ಠೆಯಿಂದ ನಡೆದುಕೊಂಡು ದೇಹದಲ್ಲಿಯೆ ದೇವರನ್ನು ಕಾಣಿ ಎಂದು ಕರೆ ನೀಡಿದರು. ಅಪರ ಜಿಲ್ಲಾಧಿಕಾರಿ ಐಶ್ವರ್ಯ ಅವರು ಇದೊಂದು ವಿಶೇಷ ಜಯಂತಿಯಾಗಿದ್ದು, ಮುಗ್ದ ಬಾಲಕ ಸಿದ್ದರಾಮ ಯೋಗಿ ಆದ ಕಥೆ ತುಂಬಾ ಆಶ್ಚರ್ಯಕರವಾಗಿದೆ. ಸಮಾಜದ ದಾರಿ ದೀಪವಾಗಿ ಬೆಳೆದು ಅಂದಿನ ಕಾಲಘಟ್ಟದಲ್ಲಿ ಕೆರೆಕಟ್ಟೆಗಳನ್ನು ನಿರ್ಮಿಸಿ…

Read More

ಮಡಿಕೇರಿ ಜ.18 NEWS DESK : ದೆಹಲಿಯಲ್ಲಿ ಜ.26 ರಂದು ನಡೆಯಲಿರುವ ರಾಷ್ಟ್ರೀಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸರಕಾರದ ವಿಶೇಷ ಅತಿಥಿಯಾಗಿ ಆಯ್ಕೆಯಾಗಿರುವ ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾ.ಪಂ ಅಧ್ಯಕ್ಷರಾದ ಹೆಚ್.ಎ.ಹಂಸ ಅವರನ್ನು ಕಬಡಕೇರಿ ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾದ ಸನ್ಮಾನ ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ವೇತಕಲಾ, ಮಾಜಿ ಅಧ್ಯಕ್ಷರಾದ ಹಂಸಾವತಿಸುರೇಶ್, ಬಾಲವಿಕಾಸ ಸಮಿತಿಯ ಸದಸ್ಯರಾದ ಜಲಜಾಕ್ಷಿ, ಫಾತಿಮಾ, ಜರೀನಾ, ವಿಶ್ವನಾಥ್, ಲಕ್ಷ್ಮಣ, ಪಚ್ಚುಪ್ರಸಾದ್, ಮಹಮ್ಮದ್, ರುಕ್ಮಿಣಿ, ಪಾರ್ವತಿ, ಅಂಗನವಾಡಿ ಕಾರ್ಯಕರ್ತೆ ತಂಜಿನಾಭಾನು, ಸಹಾಯಕಿ ಪ್ರೇಮ ಹಾಗೂ ಅಂಗನವಾಡಿಯ ಪುಟಾಣಿ ಮಕ್ಕಳು ಮತ್ತು ಗ್ರಾಮಸ್ಥರು ಇದ್ದರು.

Read More