ಮಡಿಕೇರಿ ಮಾ.4 NEWS DESK : ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನವಾದ ಮಾ.8 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಕೊಡವ ಮಹಿಳೆಯರ ಸಬಲೀಕರಣಕ್ಕಾಗಿ ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದೆಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶನಿವಾರ ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕೊಡವ ಮಹಿಳೆಯರ ಪರವಾಗಿ ಹಕ್ಕೊತ್ತಾಯಗಳನ್ನು ಮಂಡಿಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗದ ಮಹಿಳೆಯರಿಗೆ ಸಂವಿಧಾನದತ್ತವಾದ ಹಕ್ಕುಗಳನ್ನು ನೀಡಬೇಕು. ಸ್ವಾಯತ್ತ ಕೊಡವ ಲ್ಯಾಂಡ್ ಘೋಷಿಸಬೇಕು, ನೆಲ, ಜಲ, ಭಾಷೆ, ಸಂಸ್ಕೃತಿ, ಪರಪಂಪರೆ, ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯದೊಂದಿಗೆ ಸಾಂವಿಧಾನಿಕ ಭದ್ರತೆಯನ್ನು ಖಾತ್ರಿ ಪಡಿಸಬೇಕು. ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳನ್ನು ನೀಡಬೇಕು. ಕೊಡವರ ಜನ್ಮಸಿದ್ಧ ಹಕ್ಕಾಗಿರುವ ಕೋವಿ ಹೊಂದುವ ವಿನಾಯಿತಿಯನ್ನು ಶಾಶ್ವತಗೊಳಿಸಬೇಕು. ಕೊಡವರಿಗೆ ಎಸ್ಟಿ ಟ್ಯಾಗ್ ನೀಡಬೇಕು, ಕೊಡವ ಭಾಷೆಯನ್ನು ಸಂವಿಧಾನದ 8ನೇ ಶೆಡ್ಯೂಲ್ ಗೆ…
ಲೇಖಕ: admin
ವಿರಾಜಪೇಟೆ ಮಾ.4 NEWS DESK : ಕುಟ್ಟಂದಿಯ ಹೆಗ್ಗಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಸುರಕ್ಷಾ ಅಧಿಕಾರಿಯಾಗಿ 36 ವರ್ಷ 8 ತಿಂಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಕೆ.ಕೆ.ರಮಿತ ಅವರಿಗೆ ಕುಟ್ಟಂದಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ಕುಟ್ಟಂದಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವಿರಾಜಪೇಟೆ ತಾಲ್ಲೂಕು ವೈದ್ಯಾಧಿಕಾರಿ ಡಾ.ಯತಿರಾಜ್ ಸನ್ಮಾನಿಸಿ ಗೌರವಿಸಿದರು. ನಂತರ ಮಾತನಾಡಿದ ಅವರು, 1988 ರಲ್ಲಿ ಕರ್ತವ್ಯಕ್ಕೆ ಸೇರಿದ ಅವರು 36 ವರ್ಷ ಹಾಗೂ 8 ತಿಂಗಳ ಸುದೀರ್ಘ ಸೇವೆ ಸಲ್ಲಿಸಿ ಕರ್ತವ್ಯದ ಸಂದರ್ಭದಲ್ಲಿ ತಮ್ಮ ಉತ್ತಮ ಸೇವೆಗಾಗಿ ಹಾಗೂ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿಯಲ್ಲಿ ಉತ್ತಮ ಸಾಧನೆ ತೋರಿದ್ದಕ್ಕಾಗಿ ಕೇಂದ್ರ ಸರ್ಕಾರದಿಂದ ಚಿನ್ನದ ಪದಕ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಅಲ್ಲದೆ ಸ್ಥಳೀಯ ಗ್ರಾಮೀಣ ಜನರ ಮೆಚ್ಚುಗೆಗೂ ಪಾತ್ರರಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಕುಟ್ಟಂದಿ ಆರೋಗ್ಯ ಉಪ ಕೇಂದ್ರದ ವೈದ್ಯರಾದ ಡಾ.ಶರಣ್ ಸುಬ್ಬಯ್ಯ, ಶುಶ್ರೂಷಕಿಯರು, ಸಿಬ್ಬಂದಿಗಳು ಹಾಗೂ…
ನಾಪೋಕ್ಲು ಮಾ.4 NEWS DESK : ಮೂರ್ನಾಡು ಹೆಲ್ತ್ಫಸ್ಟ್ ಆಸ್ಪತ್ರೆ ವತಿಯಿಂದ ಸಾರ್ವಜನಿಕರಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಯಿತು. ಹೆಲ್ತ್ ಫಸ್ಟ್ ಆಸ್ಪತ್ರೆಯಲ್ಲಿ ನಡೆದ ಶಿಬಿರದಲ್ಲಿ ಅಧಿಕ ರಕ್ತದೊತ್ತಡ, ಶ್ವಾಸಕೋಶದ ಆರೈಕೆ, ಪೌಷ್ಟಿಕಾಂಶದ ಮೌಲ್ಯಮಾಪನ, ಡಯಾಬಿಟಿಸ್, ಮತ್ತು ಸ್ತನ ಕ್ಯಾನ್ಸರ್ ತಪಾಸಣೆ, ಮಹಿಳೆಯರ ಆರೋಗ್ಯ, ದೃಷ್ಟಿ ತಪಾಸಣೆ ಹಾಗೂ ಮಾರ್ಗದರ್ಶನವನ್ನು ಆಸ್ಪತ್ರೆಯ ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು ನೀಡಿದರು. ಈ ಸಂದರ್ಭ ಜನರಲ್ ಸರ್ಜನ್ ಡಾ. ಬಿ.ವಿ.ಧನಶ್ರೀ ಅವರು ಉಚಿತ ವೈದ್ಯಕೀಯ ಸಮಾಲೋಚನೆಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಮೂರ್ನಾಡು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಕಣ್ಣು ಅಪ್ಪಚ್ಚು, ಕಾರ್ಯದರ್ಶಿ ಪಿ.ಎಂ.ಅಪ್ಪಣ್ಣ, ಖಜಾಂಚಿ ಅರುಣ್ ಅಪ್ಪಚ್ಚು, ಕೊಡವ ಪೊಮ್ಮಕ್ಕಡ ಕೂಟದ ಅಧ್ಯಕ್ಷ ರೇಖಾ ತಮ್ಮಯ್ಯ, ಕಾರ್ಯದರ್ಶಿ ಗೀತಾ ಪವಿತ್ರ ಹಾಗೂ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.
ವಿರಾಜಪೇಟೆ ಮಾ.4 NEWS DESK : ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳು ಮುಚ್ಚುವ ಸ್ಥಿತಿಯನ್ನು ತಲುಪಿದೆ. ಇಂತಹ ಸಂದರ್ಭದಲ್ಲಿ ಸ್ಥಳೀಯ ದಾನಿಗಳು, ಸಂಘ ಸಂಸ್ಥೆಗಳು ಸಾಮಾಜಿಕ ಕಳಕಳಿಯಿಂದ ನೆರವು ನೀಡುವ ಮೂಲಕ ಸರ್ಕಾರಿ ಶಾಲೆಗಳಿಗೆ ಕಾಯಕಲ್ಪ ನೀಡುತ್ತಿದ್ದು, ಶಾಲೆಯ ಆವರಣ, ಗೋಡೆಯನ್ನು ಸ್ವಚ್ಛಗೊಳಿಸಿ ವರ್ಲಿ ಚಿತ್ರಗಳನ್ನು ಬಿಡಿಸುವ ಮೂಲಕ ಸರ್ಕಾರಿ ಶಾಲೆಗೆ ಹೊಸ ರೂಪ ನೀಡಿದೆ. ಬೆಂಗಳೂರು ಮೂಲದ ಜಾಗೃತಿ ಸಮಾಜ ಸೇವಾ ಟ್ರಸ್ಟ್ ಮತ್ತು ಸಿಸ್ಕೊ ಸಂಸ್ಥೆಯ ಸಹಯೋಗದ ವತಿಯಿಂದ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಆವರಣದ ಗೋಡೆಯಲ್ಲಿ ವರ್ಲಿ ಚಿತ್ರಕಲೆ, ಸಾಮಾಜಿಕ ಮೌಲ್ಯ, ಪರಿಸರ ಕಾಳಜಿಯ ರೇಖಾ ಚಿತ್ರಗಳು, ಶಾಲಾ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿಗಳನ್ನು ಸ್ಥಳದಲ್ಲಿಯೇ ತಯಾರಿಸುವ ವಿಧಾನ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಪೂರಕವಾದ ಸಾಮಾಗ್ರಿಗಳಗಳನ್ನು ನೀಡುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡುತ್ತಿದೆ. ಎರಡು ದಿನಗಳ ಕಾಲ ನಡೆದ ಸೇವಾ ಕಾರ್ಯಕ್ರಮದಲ್ಲಿ ಸಿಸ್ಕೋ ಮತ್ತು ಜಾಗೃತಿ ಸೇವಾ ಟ್ರಸ್ಟ್ ನ…
ಮಡಿಕೇರಿ ಮಾ.4 NEWS DESK : ಹಕ್ಕಿಜ್ವರ ಅಥವಾ ಕೋಳಿ ಜ್ವರ ಶೀತಜ್ವರ ಹೆಚ್5ಎನ್1 ವೈರಸ್ ನಿಂದ ಹರಡುವ ರೋಗ ಇದು ಟರ್ಕಿ ಕೋಳಿ, ಗಿನಿ ಕೋಳಿ, ಗೀಜಗ ಮುಂತಾದ ಹಕ್ಕಿಗಳಲ್ಲಿ ಕಾಣಿಸಿಕೊಳ್ಳುವ ಖಾಯಿಲೆ. ಇದೊಂದು ಸಾಂಕ್ರಾಮಿಕ ಖಾಯಿಲೆಯಾಗಿದ್ದು, ಸಾಮಾನ್ಯವಾಗಿ ಹಕ್ಕಿಗಳಿಂದ ಹಕ್ಕಿಗಳಿಗೆ ಹರಡುತ್ತದೆ. ಕೆಲವೊಂದು ರೋಗ ಪೀಡಿತ ಹಕ್ಕಿಗಳ ಸಂಪರ್ಕದಿಂದ ಮನುಷ್ಯರಲ್ಲೂ ಈ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಹಕ್ಕಿ ಜ್ವರದ ಲಕ್ಷಣಗಳು ಮನುಷ್ಯನಲ್ಲಿ ಕಾಣಿಸಿಕೊಂಡರೆ ತಡಮಾಡದೇ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯಿರಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ತಿಳಿಸಿದ್ದಾರೆ. ರೋಗ ಪೀಡಿತ ಕೋಳಿ ಅಥವಾ ಹಕ್ಕಿಗಳ ಮಾಂಸವನ್ನು ಸರಿಯಾಗಿ ಬೇಯಿಸದೇ ತಿನ್ನುವುದರಿಂದ, ಸೋಂಕಿರುವ ಹಸಿ ಮೊಟ್ಟೆಯನ್ನು ಸೇವಿಸುವುದರಿಂದ ಹಾಗೂ ಕೋಳಿಗಳ ಹಿಕ್ಕೆಗಳು, ಮನುಷ್ಯರು ಕುಡಿಯುವ ನೀರಿನೊಂದಿಗೆ ಬೆರೆತು ಕಲುಷಿತಗೊಂಡಾಗ ಈ ಖಾಯಿಲೆ ಹರಡುತ್ತದೆ ಮತ್ತು ಕೆಲವು ಸಂದರ್ಭಗಳಲ್ಲಿ ಗಾಳಿಯ ಮೂಲಕವೂ ಮನುಷ್ಯರಿಗೆ ಹರಡುತ್ತದೆ. ರೋಗ ಲಕ್ಷಣಗಳು: ಹಕ್ಕಿ ಜ್ವರದ ಲಕ್ಷಣಗಳು…
ಮಡಿಕೇರಿ ಮಾ.3 NEWS DESK : ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮುಖ್ಯಮಂತ್ರಿ 2024-25 ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ ವೇತನ ಪತ್ರ/ಬ್ಯಾಂಕ್ ಸ್ಟೇಟ್ಮೆಂಟ್ಗಳಲ್ಲಿ ಯಾವುದಾದರೂ ದಾಖಲೆಗಳನ್ನು ಸೇವಾನುಭವಕ್ಕಾಗಿ ಒದಗಿಸಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಜಿಲ್ಲಾ ವ್ಯಾಪ್ತಿಗೆ ಉಚಿತವಾಗಿ ಸಂಚರಿಸಬಹುದು. ತಹಸೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು. ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲ್ಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರಿಗೆ, ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ…
ಮಡಿಕೇರಿ ಮಾ.4 NEWS DESK : ಯುವ ಜನರು ಮದ್ಯ ಹಾಗೂ ಮಾದಕ ವಸ್ತುಗಳ ಚಟಕ್ಕೆ ತುತ್ತಾಗದೆ ಉತ್ತಮ ಜೀವನ ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ಸಲಹೆ ನೀಡಿದರು. ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಹಕಾರದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ನಡೆದ ‘ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ’ ಕುರಿತು ‘ಜನಜಾಗೃತಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯುವಜನರು ಮದ್ಯ ಹಾಗೂ ಮಾದಕ ವಸ್ತುಗಳ ದುಶ್ಚಟದಿಂದ ದೂರ ಇರಬೇಕು. ಯಾವುದೇ ಕಾರಣಕ್ಕೂ ಮಾದಕ ವಸ್ತುಗಳಿಗೆ ಬಲಿಯಾಗಬಾರದು ಎಂದು ತಿಳಿಸಿದರು. ಮದ್ಯ ಹಾಗೂ ಮಾದಕ ವಸ್ತುಗಳಿಗೆ ತುತ್ತಾದಲ್ಲಿ ಮಾನಸಿಕ ಸ್ಥಿಮಿತತೆ ಕಳೆದುಕೊಳ್ಳಬೇಕಾಗುತ್ತದೆ. ಇದರಿಂದ ಕುಟುಂಬದ ನಿರ್ವಹಣೆ ಕಷ್ಟವಾಗಲಿದೆ. ಜೊತೆಗೆ ಸಮಾಜದಲ್ಲಿ ಉತ್ತಮ ಬದುಕು…
ಮಡಿಕೇರಿ ಮಾ.3 NEWS DESK : ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನ 2024-25 ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಮಡಿಕೇರಿ ನಗರದ ಕ್ರಿಯೇಟಿವ್ ಸಂಸ್ಥೆಯ ಮಾಲೀಕ ಖಲೀಲ್ ಮಾತನಾಡಿ, ಶಿಕ್ಷಣ ಎಂಬುದು ಮಾನವನ ಜೀವನದಲ್ಲಿ ಯಾರೂ ಕದಿಯಲಾಗದ ಸಂಪತ್ತು. ಶಿಕ್ಷಣ ಮಾನವನ ಸರ್ವಾಂಗಿನ ಅಭಿವೃದ್ಧಿಗೆ ಪೂರಕವಾಗಿದ್ದು, ವಿದ್ಯಾರ್ಥಿಗಳು ಪರೀಕ್ಷಾ ಸಮಯದಲ್ಲಿ ಭಯ ಆತಂಕ ಪಡದೆ ಗುರುಗಳು ಮಾಡಿರುವ ಪಾಠ ಪ್ರವಚನಗಳನ್ನು ನೆನಪಿಟ್ಟುಕೊಂಡು ಉತ್ತಮವಾಗಿ ಪರೀಕ್ಷೆಯನ್ನು ಹಬ್ಬದಂತೆ ಸಂತೋಷದಿಂದ ಬರೆಯ ಬೇಕು ಎಂದರು. ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನುಗಳಿಸುವ ಮೂಲಕ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದ ಅವರು, ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರವನ್ನು ನೀಡಿ ಶುಭ ಕೋರಿದರು. ವಿದ್ಯಾ ಸಂಸ್ಥೆಯ ಅಧ್ಯಕ್ಷ ಉದೇರಿ ರಾಜೇಂದ್ರ ವಿದ್ಯಾರ್ಥಿಗಳು ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕ ವರ್ಗ ನೀಡಿರುವ ಶಿಕ್ಷಣವನ್ನು ಸದುಪಯೋಗಪಡಿಸಿಕೊಂಡು ಭವಿಷ್ಯವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಲು ರೂಪಿಸಿಕೊಳ್ಳಬೇಕು ಕರೆ ನೀಡಿದರು. ಕಾಲೇಜು ಪ್ರಾಂಶುಪಾಲ ಸಿದ್ದರಾಜು ಬೆಳ್ಳಯ್ಯ…
ಸೋಮವಾರಪೇಟೆ ಮಾ.3 NEWS DESK : ಆರೋಗ್ಯವಂತರು ಪ್ರತಿ 3 ತಿಂಗಳಿಗೊಮ್ಮೆ ಸ್ವಯಂಪ್ರೇರಿತ ರಕ್ತದಾನ ಮಾಡುವ ಮೂಲಕ ಮತ್ತೊಬ್ಬರ ಜೀವವನ್ನು ಉಳಿಸಬಹುದಾಗಿದೆ ಎಂದು ಮಡಿಕೇರಿ ರಕ್ತನಿಧಿ ಕೇಂದ್ರ ವೈದ್ಯೆ ಸ್ನೇಹಾ ಹೇಳಿದರು. ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಮತ್ತು ಗೌಡಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ದೊಡ್ಡಮಳ್ತೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ದಾನಿಗಳ ಆರೋಗ್ಯ ತಪಾಸಣೆ ಮಾಡಿ ನಂತರ ಮಾತನಾಡಿದರು. ಆಗಗ್ಗೆ ರಕ್ತದಾನ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆಯಾಗುತ್ತದೆ. ಹೃದಯ ಕಾಯಿಲೆಗಳು ಮತ್ತು ಪಾಶ್ರ್ವವಾಯು ಅಪಾಯ ಕಡಿಮೆಯಾಗುತ್ತದೆ. ರಕ್ತದಾನದಿಂದ ರಕ್ತದ ದಪ್ಪ ಕಡಿಮೆಯಾಗಿ ರಕ್ತಪರಿಚಲನೆ ಹೆಚ್ಚಾಗುತ್ತದೆ. ಹೊಸ ರಕ್ತ ಉತ್ಪತ್ತಿಯಾಗುತ್ತದೆ ಎಂದು ಹೇಳಿದರು. ರಕ್ತದಾನದ ಸಂದರ್ಭ ಆರೋಗ್ಯ ತಪಾಸಣೆ ಆಗುತ್ತದೆ. ರಕ್ತದಾನಿಗಳಲ್ಲಿ ಆರೋಗ್ಯಕ್ಕೆ ಸಂಬಂಧಪಟ್ಟಂತೆ ಸಮಸ್ಯೆಗಳಿದ್ದರೆ, ರಕ್ತನಿಧಿ ಕೇಂದ್ರದಿಂದ ರೋಗದ ಮಾಹಿತಿ ಸಿಗುತ್ತದೆ. ನಂತರ ಚಿಕಿತ್ಸೆ ಪಡೆದುಕೊಂಡು ಅಪಾಯದಿಂದ ಪಾರಾಗಬಹುದು ಎಂದು ಹೇಳಿದರು. ರಕ್ತದಾನದಿಂದ ಅನೇಕ ಪ್ರಯೋಜನಗಳಿದ್ದು, ಕಾರ್ಯಕ್ರಮದಲ್ಲಿ ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋಪಾಲಕೃಷ್ಣ, ಉಪಾಧ್ಯಕ್ಷೆ…
ಸೋಮವಾರಪೇಟೆ ಮಾ.3 NEWS DESK : ಕೃಷಿ ಕಾರ್ಮಿಕರು, ಪರಿಶಿಷ್ಟಜಾತಿ, ಪಂಗಡದ ನಿವೇಶನ ರಹಿತ ಬಡವರಿಗೆ ಸರ್ಕಾರ ಉಚಿತ ನಿವೇಶನ ನೀಡುವಂತೆ ಆಗ್ರಹಿಸಿ ಯುನೈಟೈಡ್ ಪ್ಲಾಂಟೇಷನ್ ವರ್ಕರ್ಸ್ ಯೂನಿಯನ್ನ ಜಿಲ್ಲಾ ಸಮಿತಿ ಹರದೂರು ಗ್ರಾಮದಲ್ಲಿ ಪ್ರತಿಭಟನೆ ನಡೆಸಿತು. ಯೂನಿಯನ್ನ ಜಿಲ್ಲಾಧ್ಯಕ್ಷ ಎಚ್.ಎಂ.ಸೋಮಪ್ಪ ಅವರ ನೇತೃತ್ವದಲ್ಲಿ ಹರದೂರು ಬಾಣೆಯಿಂದ ಪಂಚಾಯಿತಿ ವರೆಗೆ ಮೆರವಣಿಗೆ ನಡೆಸಿ, ಹರದೂರು ಗ್ರಾಮ ಪಂಚಾಯಿತಿ ಮುಂಭಾಗ ಜಮಾಯಿಸಿದ ಸಮಿತಿಯ ಪ್ರಮುಖರು ಹಾಗೂ ನಿವೇಶನ ರಹಿತರು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ, ಕೊಡಗು ಜಿಲ್ಲೆಯಲ್ಲಿ ಪೈಸಾರಿ ಸೇರಿದಂತೆ ಇನ್ನಿತರ ಸರ್ಕಾರಿ ಭೂಮಿ ಬೇಕಾದಷ್ಟಿದೆ. ಕಳೆದ ಎರಡೂವರೆ ದಶಕಗಳಿಂದ ಮನೆಯಿಲ್ಲದ ಕಾರ್ಮಿಕರಿಗೆ ನಿವೇಶನ ನೀಡುವಂತೆ ನಿರಂತರ ಹೋರಾಟ ಮಾಡಿಕೊಂಡು ಬರಲಾಗುತ್ತಿದೆ. ಪೈಸಾರಿ ಜಾಗವನ್ನು ಬಲಾಡ್ಯರು ಕಬಳಿಸಿದ್ದಾರೆ. ಕೂಲಿ ಕಾರ್ಮಿಕರು ಅವರ ಮಕ್ಕಳು ಇವತ್ತಿಗೂ ಮುರುಕಲು ಗುಡಿಸಲಿನಲ್ಲಿ ಬದುಕುತ್ತಿದ್ದಾರೆ. ಲೈನ್ ಮನೆಯಲ್ಲೂ ಪ್ರಾಣಿಗಳಂತೆ ವಾಸ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಕಳೆದ 25 ವರ್ಷಗಳಿಂದ ಕಾರ್ಮಿಕರಿಗೆ ನಿವೇಶನ…






