ಹುಣಸೂರು NEWS DESK ಜ.4 : ಕಾರು ಮತ್ತು ಓಮ್ನಿ ನಡುವೆ ಡಿಕ್ಕಿ ಸಂಭವಿಸಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು-ಹುಣಸೂರು ಹೆದ್ದಾರಿಯ ಸೋಮನಹಳ್ಳಿ ಬಳಿ ಹೆದ್ದಾರಿಯಲ್ಲಿ ನಡೆದಿದೆ. ಮೈಸೂರು ಕಡೆಯಿಂದ ಬರುತ್ತಿದ್ದ ತಮಿಳುನಾಡು ಭಾಗದ ಕಾರು ಮತ್ತು ಹುಣಸೂರು ಕಡೆಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಚಿತ್ರದುರ್ಗದ ಓಮ್ನಿ ನಡುವೆ ಡಿಕ್ಕಿ ನಡುವೆ ಡಿಕ್ಕಿ ಸಂಭವಿಸಿ ಕಾರು ಮಗುಚಿಕೊಂಡಿತು. ಓಮ್ನಿ ಸಂಪೂರ್ಣವಾಗಿ ಜಖಂಗೊಂಡಿದೆ. ಎರಡೂ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿಗೆ ಗಂಭೀರ ಗಾಯಗಳಾಗಿದ್ದು, ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಹೆದ್ದಾರಿಯಲ್ಲಿ ವಾಹನದಟ್ಟಣೆ ಏರ್ಪಟ್ಟು ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಲೇಖಕ: admin
ಮಡಿಕೇರಿ ಜ.4 NEWS DESK : ಜಿಲ್ಲಾ ಕ್ರೀಡಾಂಗಣದಲ್ಲಿರುವ ಕಿರಿಯ ಕ್ರೀಡಾ ವಸತಿ ನಿಲಯಕ್ಕೆ ಅಥ್ಲೆಟಿಕ್ಸ್ ಮತ್ತು ಹಾಕಿ ಕ್ರೀಡೆಯಲ್ಲಿ 2025-26 ನೇ ಸಾಲಿಗೆ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯು ಜನವರಿ, 16 ರಂದು ಮಡಿಕೇರಿ ತಾಲ್ಲೂಕಿನವರಿಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ, ಜ.17 ರಂದು ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕಿನವರಿಗೆ ಕೂಡಿಗೆ ಸರ್ಕಾರಿ ಕ್ರೀಡಾ ಶಾಲೆಯಲ್ಲಿ, ಜನವರಿ, 18 ರಂದು ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನವರಿಗೆ ಪೊನ್ನಂಪೇಟೆಯ ತಾಲ್ಲೂಕು ಮಿನಿ ಕ್ರೀಡಾಂಗಣದಲ್ಲಿ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆ ನಡೆಯಲಿದೆ. ಕ್ರೀಡಾ ಶಾಲೆಯ ಆಯ್ಕೆಗೆ 01-06-2025 ಕ್ಕೆ 11 ವರ್ಷದೊಳಗಿರಬೇಕು.(ಅಂದರೆ 01-06-2014 ರ ನಂತರ ಜನಿಸಿರಬೇಕು), 2025-26ನೇ ಸಾಲಿಗೆ 5ನೇ ತರಗತಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ. ಹಾಕಿ ಕ್ರೀಡೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು 140 ಸೆಂ.ಮೀ. ಎತ್ತರವಿರಬೇಕು. ಹೆಚ್ಚಿನ ಮಾಹಿತಿಗೆ ಬಿ.ಜಿ.ಮಂಜುನಾಥ್, ಅಥ್ಲೇಟಿಕ್ ತರಬೇತುದಾರರು, ಕ್ರೀಡಾ ಶಾಲೆ ಕೂಡಿಗೆ ಸೋಮವಾರಪೇಟೆ ಮತ್ತು ಕುಶಾಲನಗರಕ್ಕೆ ದೂ.ಸಂ. 9342563014, ವೆಂಕಟೇಶ್ ಬಿ.ಎಸ್. ಹಾಕಿ ತರಬೇತುದಾರರು, ಕ್ರೀಡಾ…
ಮಡಿಕೇರಿ ಜ.4 NEWS DESK : ದುಶ್ಚಟಗಳಿಂದ ದೂರವಿರಲು ಸಹಕಾರಿಯಾಗಿರುವ ಕ್ರೀಡಾ ಚಟುವಟಿಕೆಗಳಲ್ಲಿ ವಿದ್ಯಾಥಿ೯ಗಳು ಕ್ರಿಯಾಶೀಲರಾಗಿ ಪಾಲ್ಗೊಳ್ಳುವ ಮೂಲಕ ದೈಹಿಕ ಆರೋಗ್ಯದೊಂದಿಗೆ ಮಾನಸಿಕ ಆರೋಗ್ಯವನ್ನು ಸಂರಕ್ಷಿಸಲು ಸಾಧ್ಯ ಎಂದು ಉದ್ಯಮ ತಜ್ಞ ಕೊಕ್ಕಲೇರ ಕುಮಾರ್ ಸುಬ್ಬಯ್ಯ ಅಭಿಪ್ರಾಯಪಟ್ಟಿದ್ದಾರೆ. ನಗರದ ಕೊಡಗು ವಿದ್ಯಾಲಯದ ಕ್ರೀಡಾ ದಿನಾಚರಣೆಯನ್ನು ಕ್ರೀಡಾಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಅವರು, ಯಾವುದೇ ಶೈಕ್ಷಣಿಕ ಸಂಸ್ಥೆಗಳಲ್ಲಿಯೂ ಕ್ರೀಡೆ ರಹಿತವಾದ ಶಿಕ್ಷಣ ಪ್ರಯೋಜನಕಾರಿಯಾಗದು. ಕ್ರೀಡಾ ತರಬೇತಿಯೊಂದಿಗಿನ ವಿದ್ಯೆಯು ಶಿಕ್ಷಣವನ್ನು ಪರಿಪೂಣ೯ಗೊಳಿಸುತ್ತದೆ ಎಂದರಲ್ಲದೇ, ಹಿರಿಯರು ಹೇಗೆ ವತಿ೯ಸುತ್ತಾರೆ ಎಂಬುದನ್ನೇ ಕಿರಿಯರೂ ಅನುಕರಿಸುವುದರಿಂದಾಗಿ ಹಿರಿಯರ ನಡವಳಿಕೆ ಕಿರಿಯರ ಪಾಲಿಗೆ ಮಾಗ೯ದಶಿ೯ಯಾಗಿರಬೇಕು ಎಂದು ಸಲಹೆ ನೀಡಿದರು, ಕ್ರಿಕೆಟ್ , ಹಣ ಮತ್ತು ಖ್ಯಾತಿ ತಂದುಕೊಂಡುವ ಕ್ರೀಡೆಯಾಗಿದ್ದರೂ ಕ್ರಿಕೆಟ್ ನಲ್ಲಿ ಸೀಮಿತ ಅವಕಾಶಗಳಿದೆ, ಹೀಗಾಗಿ ಭಾರತದಲ್ಲಿ ಇರುವ ಇತರ ಕ್ರೀಡೆಗಳಲ್ಲಿಯೂ ಪಾಲ್ಗೊಳ್ಳಲು ಕ್ರೀಡಾವಿದ್ಯಾಥಿ೯ಗಳು ಆಸಕ್ತಿ ತೋರುವ ಮೂಲಕ ಉತ್ತಮ ಕ್ರೀಡಾತಾರೆಗಳಾಗಿ ಹೊರಹೊಮ್ಮಲು ಸಾಧ್ಯವಿದೆ ಎಂದೂ ಅವರು ಅಭಿಪ್ರಾಯಪಟ್ಟರು. ಪೋಷಕರು, ಶಿಕ್ಷಕರು, ಹಿರಿಯರಿಗೆ ಸದಾ ಗೌರವ ನೀಡಿ ಎಂದು ವಿದ್ಯಾಥಿ೯…
ಮಡಿಕೇರಿ ಜ.4 NEWS DESK : ನಿರಂತರ ಅಧ್ಯಯನ ಮತ್ತು ಕಾರ್ಯ ತತ್ಪರತೆ ತಮ್ಮನ್ನು ಸಾಧಕರ ಸಾಲಿನಲ್ಲಿ ನಿಲ್ಲಿಸುತ್ತದೆ ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಕೋರನ ಸರಸ್ವತಿ ಹೇಳಿದರು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ವಾರ್ಷಿಕೋತ್ಸವ ಮತ್ತು ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭವು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಒಂದು ಪ್ರತಿಷ್ಠಿತ ವಿದ್ಯಾಸಂಸ್ಥೆಯಾಗಿದ್ದು, ಪ್ರತೀ ವರ್ಷವೂ ಉತ್ತಮ ಫಲಿತಾಂಶ ದಾಖಲಾಗುತ್ತಿದೆ. ಈ ಸಂಸ್ಥೆಯಲ್ಲಿ ಅಧ್ಯಯನ ಮಾಡಿ ಉನ್ನತ ಹುದ್ದೆಗೇರಿರುವ ಅನೇಕ ಹಿರಿಯ ವಿದ್ಯಾರ್ಥಿಗಳು ಇತಿಹಾಸವನ್ನೆ ನಿರ್ಮಾಣ ಮಾಡಿದ್ದಾರೆ ಎಂದು ಬಣ್ಣಿಸಿದರು. ವಿದ್ಯಾರ್ಥಿಗಳು ತಮ್ಮ ಹೆಜ್ಜೆ ಗುರುತುಗಳನ್ನು ವಿದ್ಯಾಸಂಸ್ಥೆಯಲ್ಲಿ ಬಿಟ್ಟು ಹೋದರೆ ಅದು ಮುಂಬರುವ ವಿದ್ಯಾರ್ಥಿಗಳಿಗೆ ದಾರಿದೀಪವಾಗಲಿದೆ ಎಂದರು. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಆರ್.ವಿಜಯ್, ‘ವಿದ್ಯಾರ್ಥಿಗಳು ಸ್ನೇಹಿತರ ಮಾತು ಕೇಳದೆ,…
ಮಡಿಕೇರಿ ಜ.4 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಶಾಲಾ ಶಿಕ್ಷಣ, ಪದವಿ ಪೂರ್ವ ಶಿಕ್ಷಣ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆ ಇವರ ಸಹಯೋಗದಲ್ಲಿ ಕುವೆಂಪು ರಚಿಸಿರುವ ‘ನಾಡಗೀತೆಗೆ ನೂರು ವರ್ಷ’ ಸಹಸ್ರ ಕಂಠ ಗಾಯನ ಕಾರ್ಯಕ್ರಮವು ನಡೆಯಿತು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನೋತ್ಸವ ಹಾಗೂ ಕುವೆಂಪು ರಚಿತ ನಾಡಗೀತೆ ಆಶಯಕ್ಕೆ ನೂರು ವರ್ಷ ಪ್ರಯುಕ್ತ ನಾಡಗೀತೆ ಸಹಸ್ರ ಕಂಠ ಗಾಯನ ಕಾರ್ಯಕ್ರಮ ಜರುಗಿತು. ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ನಾಡು ಕಂಡ ಶ್ರೇಷ್ಠ ಕವಿ ಕುವೆಂಪು ಅವರು ನಾಡಗೀತೆ ರಚಿಸಿ ನೂರು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆ ಸಹಸ್ರ ಕಂಠ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಶಾಲಾ ಕಾಲೇಜು ಹಂತದಲ್ಲಿ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಕುವೆಂಪು ಅವರು ನಾಡಿಗೆ…
ಮಡಿಕೇರಿ ಜ.4 NEWS DESK : ಕೊಡಗಿನ ಮೂಲ ನಿವಾಸಿ ಜನಾಂಗವಾಗಿರುವ ಕೊಡವರು, ಇಂದು ತಮ್ಮ ಅಸ್ತಿತ್ವಕ್ಕಾಗಿ ತಮ್ಮ ತಾಯಿನೆಲದಲ್ಲಿಯೇ ಹೋರಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ತಮ್ಮತನವನ್ನು ಕಾಯ್ದುಕೊಳ್ಳಲು, ಕೊಡವಾಮೆಯ ಬೇರನ್ನು ಗಟ್ಟಿಗೊಳಿಸುವಲ್ಲಿ ಏಳ್ನಾಡ್ ಕೊಡವರ ಜವಾಬ್ದಾರಿ ಅಧಿಕವಾಗಿದ್ದು, ಈ ನಿಟ್ಟಿನಲ್ಲಿ ಇಲ್ಲಿನ ನಾಲ್ಕು ಕೊಡವ ಸಮಾಜಗಳು ಒಮ್ಮತದ ಯೋಜನೆ ತಯಾರಿಸಬೇಕಿದೆ ಎಂದು ಕೊಡವಾಮೆರ ಕೊಂಡಾಟ ಸಂಘಟನೆಯ ಅಧ್ಯಕ್ಷ, ನಡುಬಾಡೆ ಸಂಪಾದಕ ಚಾಮೆರ ದಿನೇಶ್ ಬೆಳ್ಯಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ಮಕ್ಕಂದೂರು ಕೊಡವ ಸಮಾಜದ ಆಶ್ರಯದಲ್ಲಿ ನಡೆದ ಉಮ್ಮೇಟಿ ಕೋಲ್ ಮಂದ್ ಮತ್ತು ಪುತ್ತರಿ ಊರೋರ್ಮೆ ಕಾರ್ಯಕ್ರಮವನ್ನು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಏಳ್ನಾಡ್ ಎಂದರೆ ಕೊಡವಾಮೆಯ ಗೂಡು ಎನ್ನುವ ನಂಬಿಕೆ ಇದೆ. ಆದರೆ ಅದು ಇಂದಿನ ಕಾಲದಲ್ಲಿ ಎಷ್ಟರ ಮಟ್ಟಿಗೆ ಆ ಗೂಡನ್ನ ಉಳಿಸಿಕೊಂಡಿದ್ದೇವೆ ಎನ್ನುವುದನ್ನ ನಾವು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕಾದ ಸಮಯ ಬಂದಿದೆ ಎಂದರು. ಕೊಡಗಿನ ಮೂರು ಪ್ರಮುಖ ಭಾಗಗಳಾದ ಕ್ಗ್ಗಟ್ಟ್, ಮೇಂದಲೆ ಮತ್ತು ಏಳ್ನಾಡ್ ಭಾಗಗಳನ್ನು…
ಕುಶಾಲನಗರ ಜ.4 NEWS DESK : ರಾಜ್ಯದಲ್ಲಿಯೇ ಪ್ರಥಮ ಹಾಲಿನ ಡೈರಿ ಎಂಬ ಹೆಸರು ಗಳಿಸಿರುವ ಕೂಡಿಗೆ ಹಾಲಿನ ಡೈರಿಯು ಸದ್ಯದಲ್ಲೇ ಮೇಲ್ದರ್ಜೆಗೆ ಏರಲಿದ್ದು, ಮುಂದಿನ ದಿನಗಳಲ್ಲಿ ನಮ್ಮ ಡೈರಿಯಲ್ಲಿ ಮೊಸರು ಹಾಗೂ ಮಜ್ಜಿಗೆ ಉತ್ಪನ್ನ ತಯಾರಿಕೆ ಘಟಕ ಸ್ಥಾಪಿಸುವ ಯೋಜನೆ ರೂಪಿಸಲಾಗಿದೆ ಎಂದು ಹಾಸನ ಹಾಲು ಒಕ್ಕೂಟ ಕೊಡಗು ಘಟಕದ ನಿರ್ದೇಶಕರಾದ ಕೆ.ಕೆ. ಹೇಮಂತ್ ಕುಮಾರ್ ತಿಳಿಸಿದ್ದಾರೆ. ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದಿಂದ ಕೂಡಿಗೆ ಹಾಲಿನ ಡೈರಿಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 1955ರಲ್ಲಿ ರಾಜ್ಯದಲ್ಲಿಯೇ ಪ್ರಥಮ ಹಾಲಿನ ಡೈರಿಯಾಗಿ ಕೂಡಿಗೆ ಡೈರಿ ಸ್ಥಾಪನೆಗೊಂಡಿದೆ. ಇದನ್ನು ಮದರ್ ಡೈರಿ ಎಂದು ಕೂಡ ಕರೆಯಲಾಗುತ್ತದೆ. ಇದೀಗ ಕಚೇರಿಯ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು, ರು.34 ಲಕ್ಷ ವೆಚ್ಚದಲ್ಲಿ ತಾತ್ಕಾಲಿಕ ಕಚೇರಿ ನಿರ್ವಹಣೆಗೆ ಕಟ್ಟಡ ನಿರ್ಮಿಸಲಾಗುವುದು. ಅಲ್ಲದೆ ಮುಂದಿನ ದಿನಗಳಲ್ಲಿ ರು.20 ಕೋಟಿ ವೆಚ್ಚದಲ್ಲಿ ಕೂಡಿಗೆ ಡೈರಿಯನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸಲಾವುದು ಎಂದು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಸುಮಾರು 39 ಹಾಲು…
ಮಡಿಕೇರಿ ಜ.4 NEWS DESK : ಕಟ್ಟೆಮಾಡು ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದ ಬೈಲಾದಲ್ಲಿ ಇರುವ ನಡಾವಳಿಗಳನ್ನೆ ಮುಂದುವರೆಸಿಕೊಂಡು ಹೋಗಬೇಕೆಂದು ಕಟ್ಟೆಮಾಡು ಗ್ರಾಮದ ಮರಾಠಿ ಜನಾಂಗ ಬಾಂಧವರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಂ.ಜಿ.ವನಿತಾ ಅವರು, ಶ್ರೀಮಹಾ ಮೃತ್ಯುಂಜಯ ದೇವಸ್ಥಾನದ ವಾರ್ಷಿಕ ಉತ್ಸವದ ಕೊನೆಯ ದಿನದಂದು ದೇವರು ಜಳಕಕ್ಕೆ ತೆರಳುವ ಹಂತದಲ್ಲಿ ಒಂದು ಜನಾಂಗದವರು, ತಮ್ಮ ಸಾಂಪ್ರದಾಯಿಕ ಉಡುಪು ತೊಟ್ಟುಕೊಂಡು ಬಂದಿದ್ದು, ಇದು ಬೈಲಾದಲ್ಲಿನ ನಿಯಮಗಳಿಗೆ ವಿರುದ್ಧವಾಗಿದೆ ಎಂದರು. ದೇವಸ್ಥಾನದ ಬೈಲಾವನ್ನು ಗ್ರಾಮದ ಎಲ್ಲಾ ಜನಾಂಗ ಬಾಂಧವರ ಸಮ್ಮುಖದಲ್ಲಿಯೆ ರಚಿಸಲಾಗಿದ್ದು, ದೇವಸ್ಥಾನಕ್ಕೆ ಬಿಳಿ ಪಂಚೆ ಮತ್ತು ಶರ್ಟ್ ಧರಿಸಿ ಬರುವಂತೆ ಹಾಗೂ ಮಹಿಳೆಯರು ಸೀರೆ ಮತ್ತು ಚೂಡಿದಾರ ಧರಿಸುವಂತೆ ತೀರ್ಮಾಸಲಾಗಿದೆ. ಹೀಗಿದ್ದೂ ದೇವಸ್ಥಾನದ ಉತ್ಸವದ ಸಂದರ್ಭ ‘ಕೊಡವ ಸಾಂಪ್ರದಾಯಿಕ ಉಡುಪು’ ಧರಿಸಿ ಬಂದವರಿಂದ ಉತ್ಸವಕ್ಕೆ ಅಡ್ಡಿಯುಂಟಾಗಿದೆ. ಇದು ದೇವಸ್ಥಾನವನ್ನು ತಮ್ಮ ಹತೋಟಿಗೆ ತೆಗೆದುಕೊಳ್ಳುವ ಪ್ರಯತ್ನವೆಂದು ಆರೋಪಿಸಿದರು. ಸರ್ವ ಗ್ರಾಮಸ್ಥರ ಭಾವನೆಗಳಿಗೆ ಸ್ಪಂದನೆ ನೀಡಿ ದೇವಸ್ಥಾನದ ಬೈಲಾ ನಿಯಮಾವಳಿಯನ್ನು ಮುಂದುವರೆಸಿಕೊಂಡು ಹೋಗಲು ಜಿಲ್ಲಾಡಳಿತ ಅವಕಾಶ…
ಜ.6 ರಿಂದ 12ರ ವರೆಗಿನ ವಾರ ಭವಿಷ್ಯ (ಡಾ.ಮಹಾಬಲೇಶ್ವರ ಭಟ್, ಮೂರ್ನಾಡು 8105634429) ಮೇಷ ರಾಶಿ :: ಈ ವಾರದಲ್ಲಿ ನಿಮಗೆ ಹೊಸ ಸುದ್ದಿ ಕೇಳಿ ಬರಲಿದೆ. ಸಂತೋಷವು ಆಗಲಿದೆ. ಆರ್ಥಿಕ ಪ್ರಗತಿಯನ್ನು ಹೊಂದುವಿರಿ, ಸ್ನೇಹಿತರಿಗೆ ಸಹಾಯ ಮಾಡುವಿರಿ. ದೂರ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ :: 1, 2, 3, 9 :: ಶುಭ ಬಣ್ಣ :: ಕೆಂಪು, ಹಳದಿ, ಕೇಸರಿ ವೃಷಭ ರಾಶಿ :: ದೂರ ಪ್ರವಾಸಕ್ಕೆ ಹೋಗಲಿದ್ದು, ಸ್ನೇಹಿತರಿಂದ ಉಡುಗೊರೆ ಪಡೆಯಲಿದ್ದೀರಿ. ವ್ಯಾಪಾರಸ್ಥರಿಗೆ ಹಣದ ಅಡಚಣೆ ಆಗಲಿದೆ. ಹೊಸ ಸಂಬಂಧ ಕೂಡಿ ಬರಲಿದೆ. ಚರ್ಮಕ್ಕೆ ಸಂಬಂಧಪಟ್ಟ ವ್ಯಾದಿ ಕಾಡಲಿದೆ. :: ಶುಭ ಸಂಖ್ಯೆ :: 5, 6, 8 :: ಶುಭ ಬಣ್ಣ :: ಬಿಳಿ, ಹಸಿರು, ಕಪ್ಪು ಮಿಥುನ ರಾಶಿ :: ಈ ರಾಶಿಯವರಿಗೆ ತುಂಬಾ ಸುತ್ತಾಟ, ಶುಭ ಕಾರ್ಯದಲ್ಲಿ ಭಾಗವಹಿಸುವಿಕೆ, ವಿಪರಿಮಿತ ಹಣದ ಖರ್ಚು, ಗಂಟಲು ನೋವು, ಶೀತ ಬರಲಿದೆ. ಮಿತ್ರರಿಂದ ಸಹಾಯ. ಶುಭಸಂಖ್ಯೆ…
ಮಡಿಕೇರಿ ಜ.4 NEWS DESK : ಯಾವುದೇ ಜಾತಿ, ಜನಾಂಗ ಅಥವಾ ಒಂದು ವರ್ಗಕ್ಕೆ ಸೀಮಿತವಾದ ಸಂಪ್ರದಾಯಗಳಿಗೆ ಆದ್ಯತೆ ನೀಡದೆ ದೇವರ ಸನ್ನಿಧಿಯಲ್ಲಿ ಎಲ್ಲರೂ ಒಂದೇ ಎನ್ನುವ ಭಾವನೆಯಿಂದ ಶ್ರೀಮಹಾಮೃತ್ಯುಂಜಯ ದೇವಾಲಯ ಸಮಿತಿ ರೂಪಿಸಿರುವ ಕಟ್ಟುಪಾಡುಗಳಿಗೆ ನಾವು ಬದ್ಧ ಎಂದು ಕಟ್ಟೆಮಾಡು ಗ್ರಾಮದ ಗೌಡ ಸಮುದಾಯ ಸ್ಪಷ್ಟಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಪ್ಪಯಂಡ್ರ ಮಣಿ ಮುತ್ತಪ್ಪ ಅವರು ಡಿ.27ರಂದು ದೇವಾಲಯದ ಜಾತ್ರಾ ಮಹೋತ್ಸವದ ಸಂದರ್ಭ ದೇವರು ಜಳಕಕ್ಕೆ ಹೊರಡುವಾಗ ದೇವಾಲಯ ಸಮಿತಿಯ ನಿಯಮವನ್ನು ಮೀರಿ ಕೆಲವರು ಉದ್ದೇಶಪೂರ್ವಕವಾಗಿ ಸಾಂಪ್ರದಾಯಿಕ ಉಡುಪಿನಲ್ಲಿ ಆಗಮಿಸಿದ್ದಾರೆ. ಇದು ದೇವಾಲಯದ ಅಧಿಕಾರ ಹಿಡಿಯುವ ಹುನ್ನಾರವಾಗಿದೆ ಎಂದು ಆರೋಪಿಸಿದರು. ಸಂಘರ್ಷ ನಡೆಯುವ ಸಂದರ್ಭ ಎರಡೂ ಕಡೆಯಿಂದ ಮಾತಿಗೆ ಮಾತು ಬೆಳೆದಿದೆ, ತಳ್ಳಾಟವಾಗಿದೆ. ಆದರೆ ಯಾರ ಮೇಲೂ ಹಲ್ಲೆಯಾಗಿಲ್ಲ, ಯಾರನ್ನೂ ದೇವಾಲಯದ ಒಳಗೆ ಬರಬೇಡಿ ಎಂದು ಹೇಳಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ವಿನಾಕಾರಣ ಸುಳ್ಳು ವದಂತಿ ಹಬ್ಬಿಸಲಾಗುತ್ತಿದೆ. ದೇವಾಲಯದ ಸಿಸಿ ಕ್ಯಾಮರಾದಲ್ಲಿ ಸತ್ಯಾಂಶ ಸೆರೆಯಾಗಿದ್ದು, ಯಾರು ಬೇಕಾದರೂ ಪರಿಶೀಲಿಸಬಹುದು ಎಂದು ಹೇಳಿದರು.…






