ಮಡಿಕೇರಿ ಫೆ.14 NEWS DESK : ಕೊಡಗು ಜಿಲ್ಲಾ ನಿವೃತ್ತ ಪೊಲೀಸರ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆ ಫೆ.18ರಂದು ನಗರದ ಮೈತ್ರಿ ಪೊಲೀಸ್ ಭವನದಲ್ಲಿ ನಡೆಯಲಿದ್ದು, ಸಭೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮತ್ತು ಎಂಬತ್ತು ವರ್ಷ ಮೀರಿದ ಹಿರಿಯರನ್ನು ಸನ್ಮಾನಿಸಲಾಗುವುದು ಎಂದು ಸಂಘದ ಅಧ್ಯಕ್ಷ ಎಂ.ಕೆ.ಉತ್ತಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಸಭೆಯನ್ನು ಅಂದು ಬೆಳಗ್ಗೆ 10.30 ಗಂಟೆಗೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಡಾ.ಮಂತರ್ ಗೌಡ ಅವರು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು. ಸಂಘದ ಗೌರವಾಧ್ಯಕ್ಷರಾದ ಎಂ.ಕೆ.ಅಪ್ಪಯ್ಯ ಅವರು ಮಾತನಾಡಿ, ಮಹಾಸಭೆಯಲ್ಲಿ ಸಂಘದಲ್ಲಿರುವ 80 ವರ್ಷ ಮೇಲ್ಪಟ್ಟ ಹಿರಿಯರನ್ನು ಸನ್ಮಾನಿಸಲಾಗುತ್ತದೆ. ಇದರೊಂದಿಗೆ ವೀರಪ್ಪನ್ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಕೊಡಗಿನ ಮಣವಟ್ಟೀರ ಪೊನ್ನಪ್ಪ ಅವರ ಜ್ಞಾಪಕಾರ್ಥ ಪೊಲೀಸ್ ಅಧಿಕಾರಿ ಶಂಕರಿ ಬಿದರಿ ಅವರು ಸಂಘಕ್ಕೆ ನೀಡಿರುವ 1 ಲಕ್ಷ ರೂ. ಮತ್ತು ಹಿರಿಯರಾದ ಪಿ.ಕೆ.ರಾವ್ ಅವರು ತಮ್ಮ ತಾಯಿಯ ಸ್ಮರಣಾರ್ಥ…
ಲೇಖಕ: admin
ಮಡಿಕೇರಿ ಫೆ.14 NEWS DESK : ಮೈಸೂರಿನ ಉದಯಗಿರಿಯಲ್ಲಿ ಉದ್ದೇಶ ಪೂರ್ವಕವಾಗಿ ಕೆಲವು ಕಿಡಿಗೇಡಿಗಳು ನಡೆಸಿದ ಗಲಭೆಯನ್ನು ಆರ್ಎಸ್ಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಮಾಡಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಅವರು ನೀಡಿರುವ ಹೇಳಿಕೆ ಖಂಡನೀಯವೆಂದು ಕೊಡಗು ಜಿಲ್ಲಾ ಬಿಜೆಪಿಯ ಪಧಾನ ಕಾರ್ಯದರ್ಶಿ ಮಹೇಶ್ ಜೈನಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸುಳ್ಳು ಆರೋಪಗಳನ್ನು ಮಾಡಿ ಸಮಾಜದ ಶಾಂತಿ ಕದಡುತ್ತಿರುವ ಎಂ.ಲಕ್ಷ್ಮಣ್ ಅವರನ್ನು ತಕ್ಷಣ ಬಂಧಿಸಿ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರುಗಳ ಕುರಿತು ಕಾರ್ಟೂನ್ ರೂಪದಲ್ಲಿ ವ್ಯಕ್ತಿಯೊಬ್ಬರು ಪೋಸ್ಟ್ ಮಾಡಿರುವುದನ್ನು ವಿರೋಧಿಸುವ ನೆಪದಲ್ಲಿ ಕರ್ತವ್ಯ ನಿರತ ಪೊಲೀಸರ ಮೇಲೆ ದಾಳಿ ಮಾಡಲಾಗಿದೆ. ಅಲ್ಲದೆ ಪೂರ್ವನಿಯೋಜಿತರಾಗಿ ಠಾಣೆ ಮತ್ತು ಸಾರ್ವಜನಿಕರ ಮೇಲೂ ದಾಳಿ ಮಾಡಿದ್ದಾರೆ. ಈ ಗಲಭೆಕೋರರನ್ನು ರಕ್ಷಿಸುವ ಸಲುವಾಗಿ ಲಕ್ಷ್ಮಣ್ ಅವರು…
ನಾಪೋಕ್ಲು ಫೆ.14 NEWS DESK : ಹಳೆ ತಾಲ್ಲೂಕಿನ ಶ್ರೀ ಪೊನ್ನುಮುತ್ತಪ್ಪ ದೇವಾಲಯದಲ್ಲಿ ಫೆ.15 ರಂದು ಮಾಸಿಕ ವೆಳ್ಳಾಟ ನಡೆಯಲಿದೆ. ಕಾರ್ಯಕ್ರಮವನ್ನು ಪ್ರವೀಣ್ ಹಾಗೂ ಸಂಸಾರ ನಡೆಸಿಕೊಡಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಫೆ.14 NEWS DESK : ಕೊಡಗಿನಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ನೆಲೆ ಕಳೆದುಕೊಂಡ ಜಾನುವಾರುಗಳ ರಕ್ಷಣೆಗಾಗಿ ಪ್ರಾರಂಭಿಸಿದ ಶ್ರೀಕೃಷ್ಣ ಗೋ ಶಾಲೆ ಆರು ವರ್ಷಗಳನ್ನು ಪೂರೈಸಿದ್ದು, ಇದೀಗ ಜಾಗ ಹಾಗೂ ಮೇವಿನ ಕೊರತೆಯನ್ನು ಎದುರಿಸುತ್ತಿದೆ. ದಾನಿಗಳು ಗೋವುಗಳಿಗೆ ಮೇವು ನೀಡುವ ಮೂಲಕ ಸಹಕರಿಸುವಂತೆ ಗೋಶಾಲೆ ಸ್ಥಾಪಕಾಧ್ಯಕ್ಷ ಹರೀಶ್ ಜಿ.ಆಚಾರ್ಯ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗಿನಲ್ಲಿ 2018ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ನೆಲೆ ಕಳೆದುಕೊಂಡ ಜಾನುವಾರುಗಳ ರಕ್ಷಣೆಗಾಗಿ ಜಾಗವನ್ನು ಗುತ್ತಿಗೆಗೆ ಪಡೆದು ಶ್ರೀಕೃಷ್ಣ ಗೋಶಾಲೆಯನ್ನು ಆರಂಭಿಸಲಾಯಿತು. ದಾನಿಗಳ ಸಹಕಾರದಿಂದ ಗೋಶಾಲೆ ಮುನ್ನಡೆಯುತ್ತಿತ್ತಾದರು 2 ವರ್ಷಗಳ ಕೋವಿಡ್ ಪರಿಸ್ಥಿತಿಯಿಂದ ಅಭಿವೃದ್ಧಿ ಕುಂಟಿತಗೊಂಡಿತು ಎಂದರು. ಗೋವುಗಳ ಮೇವು, ಹಿಂಡಿ, ಔಷಧಿ, ಕಾರ್ಮಿಕರ ಸಂಬಳ, ಗೋಶಾಲೆ ನಡೆಸುವ ಜಾಗದ ಬಾಡಿಗೆ ಇತ್ಯಾದಿಗಳನ್ನು ಪೂರೈಸಲು ದಾನಿಗಳು ನೀಡುವ ದೇಣಿಗೆಯ ಕೊರತೆಯಿಂದಾಗಿ ಸಾಲ ಮಾಡಿ ಗೋಶಾಲೆ ನಡೆಸುವಂತಾಗಿದೆ. ಪ್ರತಿ ತಿಂಗಳು ಒಂದು ಲಕ್ಷದ ಇಪ್ಪತ್ತು ಸಾವಿರ ರೂ.ಗಳು ಖರ್ಚಾಗುತ್ತಿದೆ. ಆದ್ದರಿಂದ ದಾನಿಗಳು ತಿಂಗಳಿಗೆ ಕನಿಷ್ಟ…
ಸುಂಟಿಕೊಪ್ಪ ಫೆ.14 NEWS DESK : ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್, ಸೀಟ್ ಬೆಲ್ಟ್ ಧರಿಸಬೇಕೆಂದು ಸಾರಿಗೆ ಪ್ರಾಧಿಕಾರದ ಅಧಿಕಾರಿ ಶಿವಕುಮಾರ್ ಹೇಳಿದರು. ಸುಂಟಿಕೊಪ್ಪ ವಾಹನ ಚಾಲಕರ ನಿಲ್ದಾನದಲ್ಲಿ 36ನೇ ರಾಷ್ಟ್ರೀಯ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮವನ್ನು ಸಾರಿಗೆ ಪ್ರಾಧಿಕಾರದ ಅಧಿಕಾರಿ ಉದ್ಘಾಟಿಸಿ ವಾಹನ ಚಾಲಕರನ್ನು ಹಾಗೂ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ವಾಹನ ಮಾಲಿಕರು ಹಾಗೂ ಚಾಲಕರು ಎಲ್ಲಾ ದಾಖಲಾತಿಯೊಂದಿಗೆ ಜಾಗೃತೆಯಿಂದ ವಾಹನ ಚಾಲನೆ ಮಾಡುವಂತೆ ಮಡಿಕೇರಿ ಸಾರಿಗೆ ಪ್ರಾಧಿಕಾರದ ಅಧಿಕಾರಿಗಳು ಸಾರ್ವಜನಿಕರಿಗೆ ಹಾಗೂ ಚಾಲಕರಿಗೆ ವಾಹನ ಚಾಲನಾ ಪರವನಾಗಿಯನ್ನು ಹೊಂದದೆ. ವಾಹನ ಚಾಲನೆ ಮಾಡುವುದು ಕಾನೂನು ರೀತಿಯಲ್ಲಿ ಅಪರಾಧವಾಗಿದೆ. ವಾಹನಕ್ಕೆ ಸಂಬಂಧಿಸಿದ ದಾಖಲಾತಿ ಪತ್ರಗಳನ್ನು ವಾಹನದಲ್ಲಿರಿಸಿಕೊಳ್ಳಬೇಕು. ಮೋಜಿಗಾಗಿ ವಾಹನ ಚಲಾಯಿಸಿ ಜೀವಕ್ಕೆ ಕುತ್ತು ತರದಂತೆ ಜಾಗೃತೆ ವಹಿಸಿ ಚಾಲನೆಯಲ್ಲಿ ಮೊಬೈಲ್ ಬಳಸದಿರಿ ಮುಂದೆ ಸಾಗುತ್ತಿರುವ ವಾಹನವನ್ನು ಹಿಂದಿಕ್ಕುವಾಗ ಜಾಗೃತೆ ವಹಿಸಬೇಕು. ಇಲ್ಲದಿದ್ದಲ್ಲಿ ಅಪಘಾತ ಸಂಭವಿಸಿ ಪ್ರಾಣ ಹಾನಿಯಾದರೆ ನಿಮ್ಮನ್ನು ನಂಬಿದ ಕುಟುಂಬದವರನ್ನು ನಡು ನೀರಿನಲ್ಲಿ ಕೈಬಿಟ್ಟು ಅವರ ಜೀವನವನ್ನು…
ಮಡಿಕೇರಿ ಫೆ.14 NEWS DESK : ಹುಣ್ಣಿಮೆ ಅಂಗವಾಗಿ ಜೀವನದಿ ಕಾವೇರಿಗೆ ಏಕಕಾಲದಲ್ಲಿ ಜಿಲ್ಲೆಯ ನದಿ ಪಾತ್ರದ 15 ಕಡೆ ಮಹಾ ಆರತಿ ಕಾರ್ಯಕ್ರಮ ನಡೆಯಿತು. ನಮಾಮಿ ಕಾವೇರಿ ಬಳಗದ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಹಯೋಗದೊಂದಿಗೆ ಭಾಗಮಂಡಲ ಸಂಗಮ ದಿಂದ ಜಿಲ್ಲೆಯ ಗಡಿ ಭಾಗ ಶಿರಂಗಾಲ ತನಕ ನದಿ ತಟಗಳಲ್ಲಿ ಆರತಿ ಬೆಳಗಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಭಾಗಮಂಡಲ, ನಾಪೋಕ್ಲು, ಗುಹ್ಯ, ಕರಡಿಗೋಡು, ಬಲಮುರಿ, ಕುಶಾಲನಗರ, ಮಾದಾಪಟ್ಟಣ, ಕೂಡು ಮಂಗಳೂರು, ತೊರೆನೂರು, ಮುಳ್ಳುಸೋಗೆ, ಕೊಪ್ಪ ಸೇರಿದಂತೆ ವಿವಿಧ ಕಡೆಗಳಲ್ಲಿ ನದಿಗೆ ಆರತಿ ಬೆಳಗುವ ಮೂಲಕ ನದಿ ತಟದ ಜನರಿಗೆ ನದಿ ಸಂರಕ್ಷಣೆ ಮತ್ತು ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲಾಯಿತು. ತೊರೆನೂರು ಗ್ರಾಮದಲ್ಲಿ ಇದೇ ಪ್ರಥಮ ಬಾರಿಗೆ ಕಾವೇರಿಗೆ ಆರತಿ ಬೆಳಗುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಎಲ್ಲ ಕಡೆಗಳಲ್ಲಿ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರು, ಪ್ರಮುಖರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು. ಕುಶಾಲನಗರದ ಕಾವೇರಿ ಆರತಿ ಕ್ಷೇತ್ರದಲ್ಲಿ ನಡೆದ 169ನೇ…
ಮಡಿಕೇರಿ ಫೆ.14 NEWS DESK : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಸಹಕಾರದಲ್ಲಿ ಕ್ಲಬ್ ಮಹೀಂದ್ರ ವತಿಯಿಂದ ರಕ್ತದಾನ ಶಿಬಿರವು ಫೆಬ್ರವರಿ, 14 ರಂದು ಬೆಳಗ್ಗೆ 10 ಗಂಟೆಗೆ ನಗರದ ಹೊರವಲಯದಲ್ಲಿರುವ ಕ್ಲಬ್ ಮಹೀಂದ್ರದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಮಡಿಕೇರಿ ಫೆ.13 NEWS DESK : 14 ದಿನಗಳ ಹಸುಗೂಸನ್ನು ಹೊಂದಿರುವ ಬಾಣಂತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಕೊಟ್ಟೋಳಿ ಗ್ರಾಮದಲ್ಲಿ ನಡೆದಿದೆ. ಕೊಟ್ಟೋಳಿ ಗ್ರಾಮದ ನಿವಾಸಿ ಎಂ.ಎಂ.ದಿನೇಶ್ ಎಂಬುವವರ ಪತ್ನಿ, ಕರಡ ಗ್ರಾಮದ ದಿ.ಕಟ್ಟಿ ಬಿದ್ದಪ್ಪ ಹಾಗೂ ಶೀಲಾ ದಂಪತಿಯ ಪುತ್ರಿ ಕಾವೇರಮ್ಮ (24) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ಕೊಟ್ಟೋಳಿ ನಿವಾಸಿ ದಿನೇಶ್ ಹಾಗೂ ಕಾವೇರಮ್ಮ ಅವರು ವಿವಾಹವಾಗಿ ನಾಲ್ಕು ವರ್ಷಗಳಷ್ಟೆ ಕಳೆದಿದೆ. ಮನೆಯಲ್ಲಿ ಪತಿ ಹಾಗೂ ಅತ್ತೆ ಇಲ್ಲದ ಸಂದರ್ಭ ಸಾಧಿಸಿ ಕಾವೇರಮ್ಮ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದು ಬಂದಿದೆ. ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ NEWS DESK ಫೆ.13 : ದಕ್ಷಿಣ ಕೊಡಗಿನಲ್ಲಿ ಕಾಡಾನೆಗಳ ಹಾವಳಿ ತಾರಕಕ್ಕೇರಿದೆ. ಕಾಡಾನೆಯೊಂದರ ದಾಳಿಗೆ ಸಿಲುಕಿ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಗುರುವಾರ ಚನ್ನಂಗೊಲ್ಲಿ ಗ್ರಾಮದಲ್ಲಿ ನಡೆದಿದೆ. ಚನ್ನಂಗೊಲ್ಲಿ ಗ್ರಾಮದ ಪೈಸಾರಿ ನಿವಾಸಿ ಜಾನಕಿ(52) ಎಂಬುವವರೇ ಸಾವನ್ನಪ್ಪಿರುವ ದುರ್ದೈವಿ. ಗ್ರಾಮದ ಬಳಿಯ ಕಾಫಿ ತೋಟವೊಂದರಲ್ಲಿ ಕಾರ್ಯನಿರ್ವಹಿಸಿ ಸಂಜೆ ಮನೆಗೆ ಮರಳುವ ಸಂದರ್ಭ ಕಾಡಾನೆ ದಿಢೀರ್ ದಾಳಿ ಮಾಡಿದೆ. ಗಂಭೀರ ಸ್ವರೂಪದಲ್ಲಿ ಗಾಯಗೊಂಡ ಜಾನಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಕಾಫಿ ತೋಟಗಳಲ್ಲಿ ನೆಲೆ ನಿಂತಿರುವ ಕಾಡಾನೆಗಳನ್ನು ತಕ್ಷಣ ಅರಣ್ಯಕ್ಕೆ ಓಡಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮಡಿಕೇರಿ ಫೆ.13 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಜಿಲ್ಲಾ ಮಹಿಳಾ ಸಹಾಯವಾಣಿ ಇವರ ಸಹಯೋಗದೊಂದಿಗೆ 2024-25 ನೇ ಸಾಲಿನ ಮಿಶನ್ ಶಕ್ತಿ ಯೋಜನೆಯಡಿ “ಬೇಟಿ ಬಚಾವೊ-ಬೇಟಿ ಪಡಾವೊ” ತಾಲ್ಲೂಕು ಮಟ್ಟದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, “ಸಮಗ್ರ ಮಕ್ಕಳ ಲೈಂಗಿಕ ಶಿಕ್ಷಣದ ಕುರಿತು” ಶನಿವಾರಸಂತೆ ಭಾರತಿ ವಿದ್ಯಾಸಂಸ್ಥೆಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಸೋಮವಾರಪೇಟೆ ಶಿಶು ಅಭಿವೃದ್ಧಿ ಯೋಜನಾ ಇಲಾಖೆಯ ಹಿರಿಯ ಮೇಲ್ವಿಚಾರಕಿ ಸಾವಿತ್ರವ್ವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ತಾಯಿಯ ಗರ್ಭದಿಂದ 18 ವರ್ಷದವರೆಗೆ ಮಕ್ಕಳು ಎಂದು ಹೇಳಲಾಗುತ್ತದೆ. ಮಕ್ಕಳು ಉತ್ತಮ ಆರೋಗ್ಯವನ್ನು ಪಡೆಯಬೇಕಾದರೆ ಉತ್ತಮ ಪೌಷ್ಠಿಕಯುಕ್ತ ಆಹಾರವನ್ನು ಸೇವಿಸಬೇಕು. ಸರ್ಕಾರ ಇಂದು ಮಕ್ಕಳ ಆರೋಗ್ಯ, ದೈಹಿಕ ಬೆಳವಣಿಗೆಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಮಕ್ಕಳು ಶಿಕ್ಷಣವನ್ನು ಪಡೆಯುವುದರ ಮೂಲಕ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಹಾಗೆಯೇ ಮಹಿಳಾ ಮತ್ತು…






