ಸೋಮವಾರಪೇಟೆ ಜ.18 NEWS DESK : ಶ್ರೀ ಬಸವೇಶ್ವರ ದೇವಾಲಯದ ವಿಮಾನಗೋಪುರ ಕಳಸ ಪ್ರತಿಷ್ಠಾಪನಾ ಪಂಚ ದಶಮಾನೋತ್ಸವ ಪೂಜಾ ಕಾರ್ಯಕ್ರಮ ಜ.23 ಮತ್ತು 24ರಂದು ನಡೆಯಲಿದೆ ಎಂದು ದೇವಾಲಯದ ಯಜಮಾನರಾದ ಬಿ.ಪಿ.ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸ್ಥಳೀಯ ವಿರಕ್ತ ಮಠದ ನಿಶ್ಚಲ ನಿರಂಜನ ದೇಶಿಕೇಂದ್ರ ಮಹಾಸ್ವಾಮಿಗಳು, ಬಸವಪಟ್ಟಣದ ತೊಂಟದಾರ್ಯ ಸಂಸ್ಥಾನ ಮಠದ ಬಸವಲಿಂಗ ಶಿವಯೋಗಿಗಳು, ಶನಿವಾರಸಂತೆ ಸಿಡಿಗಳಲೆ ಮಠದ ಇಮ್ಮಡಿ ಶಿವಲಿಂಗ ಮಹಾಸ್ವಾಮಿ ಹಾಗೂ ಮನೆಹಳ್ಳಿ ಮಠದ ಮಹಾಂತ ಶಿವಲಿಂಗ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ಜ.23 ರಂದು ಬೆಳಿಗ್ಗೆ 7.30 ಗಂಟೆಗೆ ಗಂಗಾ ಪೂಜೆ, ಮಹಾಗಣಪತಿ ಪೂಜೆ, ವಾಸ್ತು ಪೂಜೆ ನಡೆಯಲಿದೆ. ಸಂಜೆ 4 ಗಂಟೆಗೆ ಶ್ರೀ ಮಹಾಗಣಪತಿ ಹೋಮ, ವಾಸ್ತು ಹೋಮ, ಅಘೋರ ಹೋಮ, ಆದಿತ್ಯಾದಿ ನವಗ್ರಹ ಮಹಾ ಮೃತ್ಯುಂಜಯ ಹೋಮ, ಕಾಳ ಹೋಮ, ಅವಾಹಿತ ಕಲಶಾಧಿ ದೇವತೆಗಳ ಹೋಮ ಪೂಜೆ ನಂತರ ಪೂರ್ಣ ಫಲ ಸಮರ್ಪಣೆ ಜರುಗಲಿದೆ. ಜ.24 ರಂದು ಬೆಳಿಗ್ಗೆ 5 ಗಂಟೆಗೆ ಶುಭ ಬ್ರಾಹ್ಮಿ…
ಲೇಖಕ: admin
ಸಂಪಾಜೆ NEWS DESK ಜ.18 : ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸಂಪಾಜೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಸ್ಥಳೀಯ ನಿವಾಸಿ ಜಮೀರ್ (44) ಎಂಬುವವರೇ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಸ್ಥಳಕ್ಕೆ ಸಂಪಾಜೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಬ್ಬಿಣದ ಕೆಲಸ ನಿರ್ವಹಿಸುತ್ತಿದ್ದ ಜಮೀರ್ ಅವಿವಾಹಿತರಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಸೋಮವಾರಪೇಟೆ ಜ.18 : ಇತಿಹಾಸ ಪ್ರಸಿದ್ಧ ಶಾಂತಳ್ಳಿಯ ಶ್ರೀ ಕುಮಾರಲಿಂಗೇಶ್ವರ ದೇವಾಲಯದ 66ನೇ ವರ್ಷದ ಮಹಾರಥೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು. ದೇವಾಲಯ ಧರ್ಮದರ್ಶಿ ಮಂಡಳಿಯ ಅಧ್ಯಕ್ಷ ಕೆ.ಎಂ.ಲೋಕೇಶ್, ಶಾಂತಳ್ಳಿ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಎಂ.ಧರ್ಮಪ್ಪ ಶಾಸಕ ಡಾ.ಮಂತರ್ಗೌಡ, ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್, ಮಾಜಿ ಎಂಎಲ್ಸಿ ಎಸ್.ಜಿ.ಮೇದಪ್ಪ, ಸೋಮವಾರಪೇಟೆ ತಾಲ್ಲೂಕು ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷ ಅರುಣ್ ಕೊತ್ನಳ್ಳಿ, ರೈತ ಹೋರಾಟ ಸಮಿತಿ ಅಧ್ಯಕ್ಷ ಕೆ.ಬಿ.ಸುರೇಶ್, ಪ್ರಮುಖರಾದ ಬಿ.ಬಿ.ಸತೀಶ್, ಬಿ.ಇ.ಜಯೇಂದ್ರ, ಸಜನ್ ಮಂದಣ್ಣ, ಕೆ.ಪಿ. ಚಂಗಪ್ಪ, ಪ್ರಧಾನ ಅರ್ಚಕ ಕೃಷ್ಣಮೂರ್ತಿ ಭಟ್ ಸೇರಿದಂತೆ ಗ್ರಾಮದ ಪ್ರಮುಖರು ರಥವನ್ನು ಎಳೆಯುವ ಮೂಲಕ ಚಾಲನೆ ನೀಡಿದರು. ಶಾಂತಳ್ಳಿಯ ರಾಜಬೀದಿ ಮಾರ್ಗದಲ್ಲಿ ಅದ್ಧೂರಿಯ ರಥ ಸಾಗಿತು. ಭಕ್ತಾಧಿಗಳು ರಥಕ್ಕೆ ಈಡುಗಾಯಿ ಒಡೆದು ಪೂಜೆ ಸಲ್ಲಿಸಿದರು. ಕರುವಿನ ಹಬ್ಬದ ಅಂಗವಾಗಿ ದೇಗುಲದ ಗರುಡ ಕಂಬದ ಅಗ್ರಪೀಠದಲ್ಲಿ ತುಪ್ಪದ ನಂದಾದೀಪವನ್ನು ಹಚ್ಚಲಾಯಿತು. ಕಳೆದ ಒಂದು ವಾರದ ತನಕ ಧಾರ್ಮಿಕ ವಿಧಿ ವಿಧಾನದಂತೆ ದೇವರ ಪೂಜೆ ಉತ್ಸವಗಳು ನಡೆಯುತ್ತಿದ್ದು, ಹೊರ ಜಿಲ್ಲೆ,…
ಮಡಿಕೇರಿ ಜ.18 NEWS DESK : ಸ್ವಾಭಾವಿಕ ಪ್ರಕೃತಿ ವಿಕೋಪ ಅನಿರೀಕ್ಷಿತ ಅಕಸ್ಮಿಕ ಬೆಂಕಿ ಅವಘಡ ಹಾಗೂ ಅಪಘಾತಗಳು ಸಂಭವಿಸಿದಾಗ ಅದನ್ನು ನಿಭಾಯಿಸಲು ನಾವು ಸದಾ ಸನ್ನದ್ದರಾಗಬೇಕು. ಇದರ ಭಾಗವಾಗಿ ಹೆಚ್.ಆರ್.ಎಸ್ ರಕ್ಷಣಾ ತಂಡದಿಂದ ಇಂತಹ ಕಾರ್ಯಕ್ರಮಗಳು ಎಲ್ಲಡೆ ನಡೆಯಬೇಕು ಎಂದು ಸಾಮಾಜಿಕ ಕಾರ್ಯಕರ್ತರು ಹಾಗೂ ವಕೀಲರಾದ ಸಮೀರ್ ಹೇಳಿದರು. ಹೆಚ್.ಆರ್.ಎಸ್ ಗೋಣಿಕೊಪ್ಪ ಹಾಗೂ ಸಾಲಿಡಾರಿಟಿ ಯೂತ್ ವಿಂಗ್ ಸಹಯೋಗದಲ್ಲಿ ನಡೆದ ಹೆಚ್.ಆರ್.ಎಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಹ್ಯೂಮಾನಿಟಿ ರಿಲೀಪ್ ಸೊಸೈಟಿಯ ಗೋಣಿಕೊಪ್ಪಲು ಇದರ ಲೋಗೋ ಅನಾವರಣ ಗೊಳಿಸಿ ಮಾತನಾಡಿದರು. ಜ.ಇಬ್ರಾಹಿಂ ಮೌಲವಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಮೈಸೂರು ವಲಯ ಕಾರ್ಯದರ್ಶಿ ಪಿ.ಕೆ.ಅಬ್ದುಲ್ ರೆಹಮಾನ್, ಸಗೀರ್ ಮೌಲವಿ, ಸಾಮಾಜಿಕ ಕಾರ್ಯಕರ್ತ ಸಲಿಮ್ ಪಾಲ್ಗೊಂಡು ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಪ್ರಥಮ ಚಿಕಿತ್ಸಾ ವಿಧಾನದ ಬಗ್ಗೆ ಲಘು ತರಬೇತಿಯನ್ನು ಹೆಚ್.ಆರ್.ಎಸ್ ನ ತರಬೇತುದಾರ ಉಡುಪಿಯ ಸಲೀಮ್ ಹಾಗೂ ಮಲ್ಪೆಯ ಝುಬೇರ್ ಪ್ರಾತ್ಯಕ್ಷಿಕೆ ನೀಡಿದರು. ತಂಝೀಲ್ ಸ್ವಾಗತಿಸಿದರು, ತನ್ವೀರ್ ಅಹಮದ್ ನಿರೂಪಿಸಿದರು.
ಮಡಿಕೇರಿ ಜ.18 NEWS DESK : ಚೆಯ್ಯಂಡಾಣೆ-ಕರಡ-ಕಕ್ಕಬೆ ರಸ್ತೆ ದುರಸ್ತಿ ಕಾರ್ಯವು ಪ್ರಗತಿಯಲ್ಲಿದೆ. ದಿನಕ್ಕೆ ನೂರಾರು ವಾಹನಗಳು ಓಡಾಡುವ ಈ ರಸ್ತೆಯ ದುರಸ್ತಿ ಕಾಮಗಾರಿಯು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರ ಸೂಚನೆ ಮೇರೆಗೆ ನಡೆಯುತ್ತಿದೆ. ಕಾಮಗಾರಿಯ ಗುಣಮಟ್ಟವನ್ನು ಕಾಯ್ದುಕೊಳ್ಳುವ ಮೂಲಕ ಶೀಘ್ರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಕುಶಾಲನಗರ ಜ.18 NEWS DESK : ಕುಶಾಲನಗರದ 122ನೇ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ನಾಲ್ಕನೇ ಬಾರಿಗೆ ಟಿ.ಆರ್.ಶರವಣ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಕೆ.ವಿ.ನೇತ್ರಾವತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಯಾರೂ ಕೂಡಾ ನಾಮಪತ್ರ ಸಲ್ಲಿಸದ ಕಾರಣ, ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಅವಿರೋಧವಾಗಿ ಆಯ್ಕೆಯಾದವರು. ಅಧ್ಯಕ್ಷರಾಗಿ ಆಯ್ಕೆಯಾದ ನಂತರಮಾತನಾಡಿದ ಟಿ.ಆರ್.ಶರವಣ ಕುಮಾರ್, ಈ ಬಾರಿಯ ಚುನಾವಣೆಯಲ್ಲಿ ಬ್ಯಾಂಕಿನ ಬಗ್ಗೆ ಆರೋಪಗಳು, ಅಪಪ್ರಚಾರಗಳು ನಡೆದಿದ್ದವು. ಆದರೆ ಮತದಾರರು ಅವುಗಳಿಗೆ ಕಿವಿಕೊಡದೇ ನಮ್ಮ ತಂಡವನ್ನು ಆಯ್ಕೆಮಾಡಿದ್ದಾರೆ. ಇದೀಗ ಅಧ್ಯಕ್ಷರಾಗಿ ನಾಲ್ಕನೇ ಬಾರಿ ಆಯ್ಕೆಯಾಗಿದ್ದು, ಬ್ಯಾಂಕಿನ ಅಭಿವೃದ್ಧಿಗಾಗಿ ಶ್ರಮವಹಿಸಲಾಗುವುದು. ನನ್ನನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿದ ನಿರ್ದೇಶಕರಿಗೆ ಹಾಗೂ ಬ್ಯಾಂಕಿನ ಮತದಾರರಿಗೆ ಧನ್ಯವಾದಗಳು ಎಂದರು. ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿ ಸಂದೀಪ್ ಅವರು ನಡೆಸಿಕೊಟ್ಟರು. ಈ ಸಂದರ್ಭ ನೂತನವಾಗಿ ಆಯ್ಕೆಯಾದ ನಿರ್ದೇಶಕರು, ಊರಿನ ಪ್ರಮುಖರು ಹಾಗೂ ಬ್ಯಾಂಕಿನ ಸಿಬ್ಬಂದಿಗಳು ಇದ್ದರು.
ಸೋಮವಾರಪೇಟೆ NEWS DESK ಜ.17 : ಸೋಮವಾರಪೇಟೆ ತಾಲ್ಲೂಕಿನ ವಿವಿಧೆಡೆಗಳಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಕಳ್ಳಭಟ್ಟಿ ಸಾರಾಯಿ ಮತ್ತು ಪುಳಿಗಂಜಿ ವಶಪಡಿಸಿಕೊಂಡು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ. ದೊಡ್ಡತೋಳೂರು ಗ್ರಾಮದ ಮನೆಯಲ್ಲಿ 9 ಲೀಟರ್ ಪುಳಗಂಜಿ, 200 ಮಿ.ಲೀ ಕಳ್ಳಭಟ್ಟಿ ಸಾರಾಯಿ, ಮತ್ತೊಂದು ಮನೆಯಲ್ಲಿ 3.5 ಲೀ ಕಳ್ಳಭಟ್ಟಿ ಸಾರಾಯಿ, 20 ಲೀ ಬೆಲ್ಲದ ಪುಳಗಂಜಿ ಮತ್ತು ಡಿಸ್ಟಿಲರಿ ಪರಿಕರಗಳನ್ನು ಪತ್ತೆ ಮಾಡಿ ವಶಕ್ಕೆ ತೆಗೆದುಕೊಳ್ಳಲಾಯಿತು. ಮತ್ತೊಬ್ಬರ ಮನೆಯಿಂದ 30 ಲೀ ಪುಳಗಂಜಿ ಮತ್ತು ಕಳ್ಳಬಟ್ಟಿ ತಯಾರಿಸಲು ಬಳಸುತ್ತಿದ್ದ ಇತರೆ ಪರಿಕರಗಳನ್ನು ವಶಕ್ಕೆ ಪಡೆದು 3 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅಬಕಾರಿ ನಿರೀಕ್ಷಕ ಬಿ.ಎಸ್.ಲೋಕೇಶ್ ತಿಳಿಸಿದ್ದಾರೆ. ಕಾರ್ಯಚರಣೆಯಲ್ಲಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಉಪನಿರೀಕ್ಷಕರಾದ ಬಿ.ಎಸ್.ಬಾಲಕೃಷ್ಣ, ಕೆ.ವಿ.ಸುಮತಿ, ಮುಖ್ಯಪೇದೆ ವಿರೇಶ್, ಸುರೇಶ್, ಸಿಬ್ಬಂದಿಗಳಾದ ಈರಣ್ಣ, ಕರಿಯಪ್ಪ, ಮಹಾಂತೇಶ್, ವಾಹನ ಚಾಲಕಿ ದಿವ್ಯ ಭಾಗವಹಿಸಿದ್ದರು.
ಮಡಿಕೇರಿ NEWS DESK ಜ.17 : ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಮತ್ತು ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ದಕ್ಷತೆಯನ್ನು ಮೆರೆಯುತ್ತಿರುವ ಕೊಡಗು ಜಿಲ್ಲಾ ಪೊಲೀಸ್ ಹೊಸ ಪ್ರಯತ್ನವೊಂದಕ್ಕೆ ಮುಂದಾಗಿದೆ. ನಿತ್ಯ ಕರ್ತವ್ಯದ ಒತ್ತಡದಲ್ಲೇ ಇರುವ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಕೊಂಚ ಮನೋರಂಜನೆಯೂ ಬೇಕು ಎನ್ನುವ ಉದ್ದೇಶದಿಂದ “ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ”ಯನ್ನು (ಕೊಡಗು ಪೊಲೀಸ್ ಕಲ್ಚರಲ್ ಕ್ಲಬ್) ರಚಿಸಲಾಗಿದೆ. ಈ ಸಾಂಸ್ಕೃತಿಕ ವೇದಿಕೆಯ ಉದ್ಘಾಟನಾ ಸಮಾರಂಭ ಜನವರಿ 26ರಂದು ಮಡಿಕೇರಿಯ ಪೊಲೀಸ್ ಕವಾಯತು ಮೈದಾನದಲ್ಲಿ ಅದ್ದೂರಿಯಾಗಿ ನಡೆಯಲಿದೆ. ಉದ್ಘಾಟನಾ ಸಮಾರಂಭದ ಪ್ರಯುಕ್ತ ಸಂಜೆ 5.30 ಗಂಟೆಗೆ ಮಂಗಳೂರಿನ ಖ್ಯಾತ ಕಲಾವಿದರು ಹಾಗೂ ಜೀ಼ ಕನ್ನಡ ಸರಿಗಮಪ ಖ್ಯಾತಿಯ ಕಲಾವಿದರಿಂದ ಸಂಗೀತ ರಸಸಂಜೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸರ್ವರೂ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕೊಡಗು ಪೊಲೀಸ್ ಮನವಿ ಮಾಡಿದೆ.
ಮಡಿಕೇರಿ ಜ.17 NEWS DESK : ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲನ್ನು ಕತ್ತರಿಸಿ ಅಮಾನವೀಯ ಕೃತ್ಯವೆಸಗಿರುವುದನ್ನು ಖಂಡಿಸಿ, ದುಷ್ಕೃತ್ಯವೆಸಗಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಗೋ ಸಂರಕ್ಷಣಾ ಸಂವರ್ಧನಾ ಸಮಿತಿಯ ನೇತೃತ್ವದಲ್ಲಿ ವಿವಿಧ ಹಿಂದೂ ಪರ ಸಂಘಟನೆಗಳು ಮಡಿಕೇರಿಯಲ್ಲ್ಲಿ ಮಾನವ ಸರಪಳಿ ರಚಿಸಿ ಬೃಹತ್ ಪ್ರತಿಭಟನೆ ನಡೆಸಿದವು. ನಗರದ ಜನರಲ್ ಕೆ.ಎಸ್. ತಿಮ್ಮಯ್ಯ ವೃತ್ತದಲ್ಲಿ ಶುಕ್ರವಾರ ಬೆಳಗ್ಗೆ ಸಮಾವೇಶಗೊಂಡ ವಿವಿಧ ಹಿಂದೂ ಪರ ಸಂಘಟನೆಗಳ ಪ್ರಮುಖರು ಮತ್ತು ಕಾರ್ಯಕರ್ತರು, ಹಿಂದೂ ಸಮಾಜಕ್ಕೆ ಪೂಜನೀಯವಾಗಿರುವ ಹಸುಗಳ ಮೇಲೆ ಕುಕೃತ್ಯವೆಸಗಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲವೆಂದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಜ.ತಿಮ್ಮಯ್ಯ ವೃತ್ತದಲ್ಲಿ ಮಾನವ ಸರಪಳಿಯನ್ನು ರಚಿಸಿದ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು, ರಸ್ತೆ ತಡೆ ನಡೆಸಿ ಘಟನೆಯನ್ನು ತೀವ್ರವಾಗಿ ಖಂಡಿಸಿದರು. ಗೋವುಗಳ ಸಂರಕ್ಷಣೆಗೆ ಕಠಿಣ ಕಾನೂನು ಜಾರಿಗೊಳಿಸಬೇಕೆಂದು ಒತ್ತಾಯಿಸಿದರು. ಬಳಿಕ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಛೇರಿಗೆ ತೆರಳಿ ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದರು. ಹಿಂದು…
ಮಡಿಕೇರಿ ಜ.17 NEWS DESK : ಸರಕಾರಿ ಭೂಮಿಯನ್ನು ಅತಿಕ್ರಮಿಸಿಕೊಂಡವರಿಗೆ ಗುತ್ತಿಗೆ ಆಧಾರದಲ್ಲಿ ಭೂಮಿ ನೀಡುವ ‘ಭೂ ಗುತ್ತಿಗೆ ಕಾಯ್ದೆ’ಯನ್ನು ಹಿಂಪಡೆಯಬೇಕು ಮತ್ತು ಒತ್ತುವರಿ ತೆರವುಗೊಳಿಸಿ ನಿವೇಶನ ರಹಿತ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡಬೇಕೆಂದು ಆಗ್ರಹಿಸಿ ಭೂ ಗುತ್ತಿಗೆ ವಿರೋಧಿ ಹೋರಾಟ ಸಮಿತಿ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿತು. ವಿವಿಧ ಸಂಘಟನೆಗಳ ಪ್ರಮುಖರು, ನೂರಾರು ನಿವೇಶನ ರಹಿತರು ಶುಕ್ರವಾರ ನಗರದ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಸರಕಾರದ ನಡೆಯನ್ನು ಖಂಡಿಸಿದರು. ‘ನಮ್ಮ ಭೂಮಿ ನಮ್ಮ ಹಕ್ಕು’ ಘೋಷಣೆಯೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಪ್ರತಿಭಟನೆ ನಡೆಸಿದ ನಿವೇಶನ ರಹಿತರು ಮತ್ತು ವಿವಿಧ ಸಂಘಟನೆಗಳ ಪ್ರಮುಖರು ಸರ್ಕಾರ ಇನ್ನಾದರು ಎಚ್ಚೆತ್ತುಕೊಂಡು ಒತ್ತುವರಿಯಾಗಿರುವ ಸರಕಾರಿ ಭೂಮಿಯನ್ನು ನಿವೇಶನ ರಹಿತರಿಗೆ ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಭೂ ಗುತ್ತಿಗೆ ವಿರೋಧಿ ಹೋರಾಟ ಸಮಿತಿಯ ಅಧ್ಯಕ್ಷ ಡಿ.ಎಸ್.ನಿರ್ವಾಣಪ್ಪ ಮಾತನಾಡಿ, ಭೂಗುತ್ತಿಗೆ ಕಾಯ್ದೆಯನ್ನು ಈ ಹಿಂದಿನ ಬಿಜೆಪಿ ಸರಕಾರ ಜಾರಿಗೆ ತಂದಿತು. ಪ್ರಸ್ತುತ…






