ಲೇಖಕ: admin

ಮಡಿಕೇರಿ ಜ.4 NEWS DESK : ಪ್ರಸಕ್ತ (2024-25) ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್‍ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ,3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನೀಡುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ, 15 ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ. ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ: https://bcwd.karnataka.gov.in/ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಪ್ರವರ್ಗ-2ಎ, 3ಎ,3ಬಿ ರೂ.8 ಲಕ್ಷ. ಹೆಚ್ಚಿನ ಮಾಹಿತಿಗೆ ಹಾಗೂ ಷರತ್ತು ನಿಬಂಧನೆಗಾಗಿ ಸಹಾಯವಾಣಿ ಸಂಖ್ಯೆ 8050770004 ನ್ನು ಸಂಪರ್ಕಿಸಿ ಕಚೇರಿ ವೇಳೆಯಲ್ಲಿ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

Read More

ಮಡಿಕೇರಿ NEWS DESK ಜ.3 : ಕಟ್ಟೆಮಾಡುವಿನ ಎಲ್ಲಾ ಜನಾಂಗ ಬಾಂಧವರು ಒಟ್ಟಾಗಿ ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದ ಅಭಿವೃದ್ಧಿಗಾಗಿ ಶ್ರಮಿಸಿದ್ದು, ಮೃತ್ಯುಂಜಯನ ಸನ್ನಿಧಿಯಲ್ಲಿ ಭಕ್ತಿ ಇರಲಿ, ಶಕ್ತಿ ಪ್ರದರ್ಶನ ಬೇಡ ಎಂದು ಗ್ರಾಮದ ಬಿಲ್ಲವ ಸೇವಾ ಸಮಾಜ ಮನವಿ ಮಾಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಸದಸ್ಯ ರಘು ರಾಜಕುಮಾರ್ ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದ ಜಾತ್ರೋತ್ಸವದ ಸಂದರ್ಭ ನಡೆದ ಘಟನೆ ಅತೀವ ಬೇಸರವನ್ನುಂಟು ಮಾಡಿದೆ. ದೇವರು ಜಳಕಕ್ಕೆ ತೆರಳುವ ಪರಂಬು ಪೈಸಾರಿಯ ಉದ್ದಕ್ಕೂ ಅಲ್ಲಿನ ನಿವಾಸಿಗಳು ಹಾದಿಯನ್ನು ಸ್ವಚ್ಛಗೊಳಿಸಿ ಹೂವಿನ ರಂಗೋಲಿಯನ್ನಿಟ್ಟು, ಭಕ್ತಾದಿಗಳಿಗೆ ಆಹಾರ ವ್ಯವಸ್ಥೆಯನ್ನು ಮಾಡಿ ದೇವರ ಆಗಮನವನ್ನು ಎದುರು ನೋಡುತ್ತಿದ್ದರು. ಆದರೆ ಇದೇ ಅವಧಿಯಲ್ಲಿ ಭಿನ್ನಾಭಿಪ್ರಾಯ ಮೂಡಿತು ಎಂದರು. ಶ್ರೀ ಮಹಾ ಮೃತ್ಯಂಜಯ ದೇವಸ್ಥಾನ ಸಮಿತಿಯಲ್ಲಿ ಗ್ರಾಮದ ಎಲ್ಲಾ ಜನಾಂಗದ ಪ್ರತಿನಿಧಿಗಳು ಸೇರಿದಂತೆ ಒಟ್ಟು 43 ಸದಸ್ಯರುಗಳಿದ್ದಾರೆ. ಇವರೆಲ್ಲರ ಒಮ್ಮತದ ತೀರ್ಮಾನದಂತೆ ಅಧ್ಯಕ್ಷರನ್ನಾಗಿ ಗೌಡ ಸಮುದಾಯದ ಒಬ್ಬರನ್ನು ಆಯ್ಕೆ ಮಾಡಲಾಗಿದೆ. ದೇವಸ್ಥಾನದ ಪ್ರತಿಯೊಂದು ಕೆಲಸ ಕಾರ್ಯಗಳನ್ನು ಎಲ್ಲಾ…

Read More

ಮಡಿಕೇರಿ NEWS DESK ಜ.3 : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಸ್ಥಾಪಿಸುವಂತೆ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಸಮಿತಿ ನಗರಸಭಾ ಆಯುಕ್ತÀ ಹೆಚ್.ಆರ್.ರಮೇಶ್ ಅವರಿಗೆ ಮನವಿ ಸಲ್ಲಿಸಿದೆ. ಇಡೀ ರಾಜ್ಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಇಲ್ಲದ ಏಕೈಕ ಜಿಲ್ಲೆ ಕೊಡಗು. ಈ ಹಿಂದಿನಿoದಲು ಪ್ರತಿಮೆ ಸ್ಥಾಪನೆಗೆ ಮನವಿ ಮಾಡಿಕೊಂಡು ಬಂದಿದ್ದರು ಅದು ಫಲಪ್ರದವಾಗಿಲ್ಲವೆಂದು ಸಮಿತಿಯ ಪ್ರಮುಖರು ಬೇಸರ ವ್ಯಕ್ತಪಡಿಸಿದರು. ಸಮಿತಿ ಸದಸ್ಯ ಟಿ.ಈ.ಸುರೇಶ್ ಅವರು ಮಾತನಾಡಿ, ಮಡಿಕೇರಿಯ ಕಾವೇರಿ ಕಲಾಕ್ಷೇತ್ರದ ಪಕ್ಕದ ಉದ್ಯಾನವನ, ಜಿಲ್ಲಾಧಿಕಾರಿಗಳ ಕಛೇರಿ ಬಳಿಯ ಉದ್ಯಾನವನ, ಫೀ.ಮಾ.ಕಾರ್ಯಪ್ಪ ವೃತ್ತದ ಬಳಿಯ ಉದ್ಯಾನವನಗಳನ್ನು ಪ್ರತಿಮೆ ಸ್ಥಾಪನೆಗೆ ಪರಿಗಣಿಸಬಹುದಾಗಿದೆ. ಆದಷ್ಟು ಶೀಘ್ರ‍್ರ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಂಡು ಪ್ರಸಕ್ತ ಸಾಲಿನ ಏ.14 ಡಾ.ಅಂಬೇಡ್ಕರ್ ಜಯಂತಿ ಒಳಗಾಗಿ ಪ್ರತಿಮೆ ನಿರ್ಮಾಣ ಮಾಡುವಂತೆ ಕೋರಿಕೊಂಡರು. ಮನವಿ ಸ್ವೀಕರಿಸಿದ ಪೌರಾಯುಕ್ತ ಹೆಚ್.ಆರ್.ರಮೇಶ್ ಅವರು, ನಗರಸಭೆಯ ಕಾವೇರಿ ಕಲಾಕ್ಷೇತ್ರದ ಉದ್ಯಾನವನವನ್ನು ಒಳಗೊಂಡoತೆ ಮೂರು ಹಂತದ ನಗರಸಭೆೆಯ ಕಟ್ಟಡ ನಿರ್ಮಾಣಕ್ಕೆ…

Read More

ಮಡಿಕೇರಿ NEWS DESK ಜ.3 : ಬೈಕ್‌ನಲ್ಲಿ ತೆರಳುತ್ತಿದ್ದ ಸಹೋದರರಿಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಪ್ರಕರಣ ದಕ್ಷಿಣ ಕೊಡಗಿನ ಪೊನ್ನಂಪೇಟೆ ಬಳಿಯ ಹಳ್ಳಿಗಟ್ಟು ಗ್ರಾಮದಲ್ಲಿ ನಡೆದಿದೆ. ಮೊಹಮ್ಮದ್ ಫೈಜನ್ ಹಾಗೂ ಅಬುರ್ ಉವೈಸ್ ಸಹೋದರರು ಕಾಡಾನೆ ದಾಳಿಯಿಂದ ಗಾಯಗೊಂಡಿದ್ದು, ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಬೆಳಗ್ಗಿನ ಜಾವ ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ಕಾಡಾನೆ ದಾಳಿ ಮಾಡಿದೆ. ಈ ಸಂದರ್ಭ ಸಹೋದರರು ಬಿದ್ದು ಗಂಭೀರ ಸ್ವರೂಪದ ಗಾಯಗಳಾಗಿದೆ. ಇಬ್ಬರಿ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ::: ಬಗೆಹರಿಯದ ಸಮಸ್ಯೆ ::: ಕಳೆೆದ ಎರಡು ದಶಕಗಳಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ನಿರಂತರವಾಗಿ ಹೆಚ್ಚುತ್ತಿದೆ. ಅದರಲ್ಲೂ ನಾಗರಹೊಳೆ ಅರಣ್ಯದ ಅಂಚಿನ ದಕ್ಷಿಣ ಕೊಡಗಿನ ಗ್ರಾಮೀಣ ಭಾಗಗಳು ಕಾಡಾನೆ ಹಾವಳಿಯಿಂದ ನಲುಗಿವೆ. ಇಲ್ಲಿನ ಗ್ರಾಮೀಣರು ಕಾಡಾನೆ ಹಾವಳಿಯಿಂದ ಜೀವ ಮತ್ತು ಕೃಷಿ ಫಸಲನ್ನು ಕಳೆದುಕೊಳ್ಳುತ್ತಿದ್ದಾರೆ. ನೂರಾರು ಕಾಡಾನೆಗಳು ದಕ್ಷಿಣ ಕೊಡಗಿನ ಕಾಫಿ ತೋಟಗಳನ್ನೇ…

Read More

ಮಡಿಕೇರಿ ಜ.3 NEWS DESK : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸರ್ವೇಕ್ಷಣ ಘಟಕದ ವತಿಯಿಂದ ಗೃಹ ಆರೋಗ್ಯ ಯೋಜನೆ ಕಾರ್ಯಕ್ರಮದ ಬಗ್ಗೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಅವರು ‘ಗೃಹ ಆರೋಗ್ಯ ಕಾರ್ಯಕ್ರಮ’ದ ಬಗ್ಗೆ ಮಾಹಿತಿಯನ್ನು ನೀಡಿದರು. 30 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯೋಮಾನದವರಿಗೆ ಮನೆ ಮನೆಗೆ ತೆರಳಿ ಸಾಂಕ್ರಾಮಿಕ ವಲ್ಲದ ರೋಗಗಳ ತಪಾಸಣೆ ಮತ್ತು ಪರೀಕ್ಷೆ ಮಾಡಲಾಗುತ್ತದೆ. ಯೋಜನೆಯಡಿಯಲ್ಲಿ ಎಲ್ಲಾ ಸಾರ್ವಜನಿಕರ ಆರೋಗ್ಯ ಮಟ್ಟ ಸುಧಾರಿಸುವ ಮತ್ತು ಸಾಂಕ್ರಾಮಿಕ ವಲ್ಲದ ರೋಗಗಳನ್ನು ನಿಯಂತ್ರಿಸುವ ಗುರಿ ಹೊಂದಿದೆ. ಕೊಡಗಿನಲ್ಲಿ ಜನವರಿ 6 ರಿಂದ ಈ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುವುದು. ಜನತೆಯ ಮನೆ ಮನೆ ಬಾಗಿಲಿಗೆ ಆರೋಗ್ಯ ಸೇವೆ ಸಲ್ಲಿಸುವುದು ರಾಜ್ಯ ಸರ್ಕಾರದ ಯೋಜನೆಯಾಗಿದೆ. ಸಮುದಾಯ ಆರೋಗ್ಯ ಅಧಿಕಾರಿಗಳು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಆಶಾ…

Read More

ಮಡಿಕೇರಿ ಜ.3 NEWS DESK : ಅಪರಿಚಿತ ವಾಹನ ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪದ ಕೆದಕಲ್ ನಲ್ಲಿ ನಡೆದಿದೆ. ಕೆದಕಲ್ ಗ್ರಾಮದ ತೋಟದಲ್ಲಿ ರೈಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚೆಟ್ಟಳ್ಳಿ ಅಬ್ಯಾಲ ಗ್ರಾಮದ ನಿವಾಸಿ ಬಲ್ಲಾರಂಡ ಹರೀಶ್ ತಮ್ಮಯ್ಯ (55) ಮೃತ ದುರ್ದೈವಿ. ಕೆದಕಲ್ ನಲ್ಲಿ ಬಸ್ ನಿಂದ ಇಳಿದ ಹರೀಶ್ ತಮ್ಮಯ್ಯ ಅವರು ರಸ್ತೆ ದಾಟುತ್ತಿದ್ದ ಸಂದರ್ಭ ಅತೀ ವೇಗವಾಗಿ ಬಂದ ಅಪರಿಚಿತ ಕಾರು ಡಿಕ್ಕಿಯಾಗಿ ಪರಾರಿಯಾಗಿದೆ ಎಂದು ಹೇಳಲಾಗಿದೆ. ಜ.1 ರಂದು ರಾತ್ರಿ ಘಟನೆ ನಡೆದಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಹರೀಶ್ ತಮ್ಮಯ್ಯ ಅವರನ್ನು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಜ.2 ರಂದು ರಾತ್ರಿ ನಿಧನರಾದರು.

Read More

ಮಡಿಕೇರಿ ಜ.3 NEWS DESK : ನಿಯಂತ್ರಣ ತಪ್ಪಿದ ಲಾರಿಯಿಂದ ಹಾರಿದ ಚಾಲಕರೊಬ್ಬರು ಚಕ್ರದಡಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಶನಿವಾರಸಂತೆ ಸಮೀಪ ಗುಡುಗಳಲೆ ಗ್ರಾಮ ವ್ಯಾಪ್ತಿಯಲ್ಲಿ ನಡೆದಿದೆ. ಸುಂಕಣ್ಣ ಎಂಬುವವರೇ ಮೃತ ದುರ್ದೈವಿಯಾಗಿದ್ದು, ನಿರ್ವಾಹಕ ನರೇಶ್ ಅಪಾಯದಿಂದ ಪಾರಾಗಿದ್ದಾರೆ. ಆಂಧ್ರಪ್ರದೇಶದಿಂದ ಸೋಮವಾರಪೇಟೆಗೆ ತೆರಳುತಿದ್ದ ಸಿಮೆಂಟ್ ತುಂಬಿದ ಲಾರಿ ಗುಡುಗಳಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚುವ ಹಂತದಲ್ಲಿತ್ತು. ಅಪಾಯದ ಮುನ್ಸೂಚನೆ ಅರಿತ ಇಬ್ಬರು ಲಾರಿಯಿಂದ ಹಾರಿದ್ದಾರೆ. ಈ ಸಂದರ್ಭ ಲಾರಿಯ ಹಿಂಬದಿಯ ಚಕ್ರ ಸುಂಕಣ್ಣ ಅವರ ಮೇಲೆ ಹರಿದು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಶನಿವಾರಸಂತೆ ಪೊಲೀಸ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮಡಿಕೇರಿ ಜ.3 NEWS DESK : ನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಗಣ್ಯರು ಹಾಗೂ ವಿದ್ಯಾರ್ಥಿಗಳು ಸಾವಿತ್ರಿ ಬಾಯಿಫುಲೆ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಜಿಲ್ಲಾ ಉಪ ಯೋಜನಾ ಸಮನ್ವಯ ಅಧಿಕಾರಿ ಎಂ.ಕೃಷ್ಣಪ್ಪ ಮಾತನಾಡಿ, 1831 ರ ಜನವರಿ, 3 ರಂದು ಸಾವಿತ್ರಿ ಬಾಯಿಫುಲೆ ಅವರು ಜನಿಸಿದ್ದು, ಮಹಿಳೆಯರ ಹಕ್ಕುಗಳಿಗಾಗಿ ಹೋರಾಟ ನಡೆಸಿದ್ದಾರೆ ಎಂದು ಸ್ಮರಿಸಿದರು. ಸಾವಿತ್ರಿ ಬಾಯಿಫುಲೆ ಅವರು ರಾಷ್ಟ್ರದ ಸ್ತ್ರೀವಾದಿ ಚಳುವಳಿಯ ಹರಿಕಾರರಲ್ಲಿ ಒಬ್ಬರಾಗಿದ್ದಾರೆ. ಪತಿ ಜ್ಯೋತಿ ಬಾಫುಲೆ ಅವರ ಜೊತೆಗೂಡಿ ಮಹಾರಾಷ್ಟ್ರದ ಪುಣೆಯಲ್ಲಿ 1848ರಲ್ಲಿ ರಾಷ್ಟ್ರದ ಮೊದಲ ಬಾಲಕಿಯರ ಶಾಲೆ ತೆರೆದಿದ್ದು ವಿಶೇಷವೇ ಸರಿ ಎಂದು ಹೇಳಿದರು. ಜಾತಿಭೇದ, ಲಿಂಗಾಧಾರಿತ ಅಸಮಾನತೆ ಹೋಗಲಾಡಿಸಲು ಅವರು ತಮ್ಮ ಜೀವನ ಮುಡುಪಾಗಿಟ್ಟಿದ್ದರು. ಸಾವಿತ್ರಿಬಾಯಿ ಫುಲೆ ಅವರ ನಿಲುವುಗಳು ಮತ್ತು ಅವರ ಸುಧಾರಣಾ ಕಾರ್ಯಗಳು ಜನಮೆಚ್ಚುಗೆಗೆ ಪಾತ್ರವಾಗಿದ್ದವು ಎಂದು ಕೃಷ್ಣಪ್ಪ ವಿವರಿಸಿದರು. ಶಾಲೆಯ ಮುಖ್ಯೋಪಾಧ್ಯಾಯರಾದ ಸುಶೀಲ ಮಾತನಾಡಿ, ಬಾಲಕಿಯರಿಗಾಗಿ ಮೊದಲ…

Read More

ಸೋಮವಾರಪೇಟೆ ಜ.3 NEWS DESK : ಸೋಮವಾರಪೇಟೆ ತಾಲ್ಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಾಮೂಹಿಕ ನವಗ್ರಹ ಪೂಜಾ ಕಾರ್ಯಕ್ರಮ ನೆರವೇರಿತು. ಶಾಂತಳ್ಳಿ ವಲಯದ ಐಗೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಮುದಾಯ ಭವನದಲ್ಲಿ ಮುಂಜಾನೆಯಿಂದಲೇ ವಿವಿಧ ಪೂಜಾ ಕೈಂಕರ್ಯ ಹಾಗೂ ಸಭಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕ ಡಾ.ಮಂತರ್ ಗೌಡ ಪಾಲ್ಗೊಂಡು ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಐಗೂರು ಮುತ್ತಪ್ಪಸ್ವಾಮಿ ದೇವಸ್ಥಾನಕ್ಕೆ 2 ಲಕ್ಷ, ಹರಿಹರ ಯುವಕ ಮಂಡಲದ ಸಮುದಾಯ ಭವನಕ್ಕೆ 2 ಲಕ್ಷ ಹಾಗೂ ಗರಗಂದೂರು ಗ್ರಾ.ಪಂ ವ್ಯಾಪ್ತಿಯ ಹೊಸತೋಟ ಗ್ರಾಮಕ್ಕೆ ಸಿಲಿಕಾನ್‌ ಛೇಂಬರ್‌ ಮಂಜೂರಾತಿ ಪತ್ರ ವಿತರಣೆ ಮಾಡಿದರು. ಯಡೂರು ಸಮುದಾಯ ಭವನಕ್ಕೆ 1.50 ಲಕ್ಷ ಅನುದಾನದ ಮಂಜುರಾತಿ ಪತ್ರ ವಿತರಿಸಿದರು. ಗೋಪಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಿ.ಎ.ಸಿ.ಎಸ್‌ ಅಧ್ಯಕ್ಷ ಶಿವಕುಮಾರ್‌, ಗ್ರಾ.ಪಂ ಅಧ್ಯಕ್ಷ ಜಿ.ಕೆ.ವಿನೋದ್‌, ತಾ.ಪಂ ಮಾಜಿ ಸದಸ್ಯ ಸಬಿತಾ ಚನ್ನಕೇಶವ,…

Read More

ಬೆಂಗಳೂರು ಜ.3 NEWS DESK :  ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಂದ ವಿವಿಧ ಪತ್ರಿಕಾಲಯಗಳಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ. ಒಟ್ಟು ಐವರು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶವಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಎರಡು ತಿಂಗಳ ಅವಧಿಗೆ ವಿವಿಧ ಪತ್ರಿಕಾ ಕಚೇರಿಗಳಲ್ಲಿ ತರಬೇತಿ ಪಡೆಯಲು ಅವಕಾಶ ಕಲ್ಪಿಸಲಾಗುವುದು. ತರಬೇತಿ ಅವಧಿಯಲ್ಲಿ ಮಾಸಿಕ 20,000 ರೂ. ಶಿಷ್ಯವೇತನ ನೀಡಲಾಗುವುದು. ಅಭ್ಯರ್ಥಿಗಳು ರಾಜ್ಯದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿರಬೇಕು. ವಯಸ್ಸು 28 ವರ್ಷ ಮೀರಿರಬಾರದು. ಅರ್ಹತಾ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಆಸಕ್ತ ಅಭ್ಯರ್ಥಿಗಳು ಜನವರಿ 20 ರ ಒಳಗಾಗಿ ತಮ್ಮ ಸ್ವವಿವರ, ದೂರವಾಣಿ ಸಂಖ್ಯೆ, ಇ-ಮೇಲ್‌ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಮಾಹಿತಿಯನ್ನು ಸ್ಕ್ಯಾನ್‌ ಮಾಡಿ karnatakamediaacademy@gmail.com ಗೆ ಇ-ಮೇಲ್‌ ಮೂಲಕ ಕಳುಹಿಸಬಹುದಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

Read More