ಮಡಿಕೇರಿ ಜ.17 NEWS DESK : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯಲ್ಲಿ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ನ ಸಹಯೋಗದಲ್ಲಿ ನಡೆದ 20ನೇ ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಚಾಮೆರ ನಕ್ಷದೇಚಮ್ಮ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಿದ್ದಾಳೆ. ಭೈರವಕ್ಯ ಜಗದ್ಗುರು ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ 80ನೇ ಜನ್ಮೋತ್ಸವದ ನೆನಪಿನಲ್ಲಿ ಶ್ರೀಮಠದಲ್ಲಿ, ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ದಿವ್ಯ ಸಾನಿದ್ಯದಲ್ಲಿ, ಅಖಿಲ ಭಾರತೀಯ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ, ಗೋ.ಚನ್ನಬಸಪ್ಪ, ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು, ಮಕ್ಕಳ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಅಶೋಕ್, ಕನ್ನಡ ಸಾಹಿತ್ಯ ಪರಿಷತ್ ಶಿವಮೊಗ್ಗ ಜಿಲ್ಲಾಧ್ಯಕ್ಷ ಮಂಜುನಾಥ ಸೇರಿದಂತೆ ಗಣ್ಯರು ಉಪಸ್ಥಿತಿಯಲ್ಲಿ ನಡೆದ ಸಮ್ಮೇಳನದಲ್ಲಿ ಚಾಮೆರ ನಕ್ಷದೇಚಮ್ಮ ಕೊಡಗು ಜಿಲ್ಲೆಯ ಏಕೈಕ ಪ್ರತಿನಿಧಿಯಾಗಿ ಭಾಗವಹಿಸಿ ಕವನ ವಾಚಿಸಿದಳು. ಚಾಮೆರ ದಿನೇಶ್ ಬೆಳ್ಯಪ್ಪ, ಪ್ರಿಯಾದಿನೇಶ್ ದಂಪತಿಗಳ ಪುತ್ರಿಯಾದ ಚಾಮೆರ ನಕ್ಷದೇಚಮ್ಮ, ಅರಮೇರಿ ಕಳಂಚೇರಿಯ ಎಸ್.ಎಂ.ಎಸ್. ವಿದ್ಯಾಪೀಠದ ನಾಲ್ಕನೇ ತರಗತಿ ವಿದ್ಯಾರ್ಥಿನಿ.
ಲೇಖಕ: admin
ಮಡಿಕೇರಿ ಜ.17 NEWS DESK : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಪ್ರಸಕ್ತ ವರ್ಷದಲ್ಲಿ ನಿಗಧಿ ಮಾಡಿರುವ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡ ಉಪಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಸಕ್ತ ಆರ್ಥಿಕ ವರ್ಷ ಕೊನೆಗೊಳ್ಳುವ ಹಂತದಲ್ಲಿದ್ದು, ಪ್ರಸಕ್ತ ವರ್ಷಕ್ಕೆ ನಿಗಧಿಮಾಡಿರುವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ, ವರದಿ ನೀಡುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದರು. ಕೃಷಿ ಇಲಾಖೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಜಂಟಿ ನಿರ್ದೇಶಕರಾದ ಚಂದ್ರಶೇಖರ ಅವರು ಪ್ರಸಕ್ತ ವರ್ಷದಲ್ಲಿ ಕೃಷಿ ಯಾಂತ್ರೀಕರಣ ಹಾಗೂ ಸೂಕ್ಷ್ಮ ನೀರಾವರಿ ಯೋಜನೆ ಸೇರಿದಂತೆ ವಿವಿಧ ಯೋಜನೆಯಡಿ ಶೇ.67ರಷ್ಟು ಪ್ರಗತಿ ಸಾಧಿಸಲಾಗಿದ್ದು, ಮಾರ್ಚ್ ಅಂತ್ಯದೊಳಗೆ ಶೇಕಡವಾರು ಪ್ರಗತಿ ಸಾಧಿಸಲಾಗುವುದು ಎಂದು ತಿಳಿಸಿದರು. ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ ರೈತ ಮಹಿಳೆಯರಿಗೆ ಹೈನುಗಾರಿಕೆ…
ಮಡಿಕೇರಿ ಜ.17 NEWS DESK : ಸುಂಟಿಕೊಪ್ಪದ ಗದ್ದೇಹಳ್ಳ ಆ್ಯಮಿಟಿ ಯುನೈಟೆಡ್ ಎಫ್.ಸಿ ವತಿಯಿಂದ ಗಣರಾಜ್ಯೋತ್ಸವದ ಪ್ರಯುಕ್ತ ಜ.23 ರಿಂದ 26ರ ವರೆಗೆ ಅಖಿಲ ಭಾರತ 5+2 ಹೊನಲು ಬೆಳಕಿನ ಕಾಲ್ಚೆಂಡು ಪಂದ್ಯಾವಳಿ ನಡೆಯಲಿದೆ ಎಂದು ಆ್ಯಮಿಟಿ ಯುನೈಟೆಡ್ ಎಫ್.ಸಿಯ ಸದಸ್ಯ ಎಸ್.ಎ.ಸತ್ತಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗದ್ದೇಹಳ್ಳದ ಸೈಟ್ ಗ್ರೌಂಡ್ನಲ್ಲಿ ನಾಲ್ಕು ದಿನಗಳ ಕಾಲ ನಡೆಯಲಿರುವ ಏಳನೇ ವರ್ಷದ ಪಂದ್ಯಾವಳಿಗೆ ಜ.23 ರಂದು ಸಂಜೆ 3 ಗಂಟೆಗೆ ಚಾಲನೆ ದೊರೆಯಲಿದೆ ಎಂದು ತಿಳಿಸಿದರು. ಪಂದ್ಯಾವಳಿಯ ಪ್ರಥಮ ವಿಜೇತರಿಗೆ ರೂ.1,00,001, ದ್ವಿತೀಯ ರೂ.50,005 ನಗದು ಮತ್ತು ಬೀಟೆ ಮರದ ಆಕರ್ಷಕ ಟ್ರೋಫಿ ನೀಡಲಾಗುವುದು. ಅಲ್ಲದೇ ಅತ್ಯುತ್ತಮ ಶಿಸ್ತುಬರಿತ ತಂಡ, ಅತ್ಯುತ್ತಮ ಆಟಗಾರ, ಅತೀ ಹೆಚ್ಚು ಗೋಲುಗಳಿಸಿದ ಆಟಗಾರ, ಉತ್ತಮ ರಕ್ಷಕ ಆಟಗಾರ, ಅತ್ಯುತ್ತಮ ಗೋಲಿ, ಪ್ರತೀ ಪಂದ್ಯದಲ್ಲಿ ಮ್ಯಾನ್ ಆಫ್ ದ ಮ್ಯಾಚ್ ಬಹುಮಾನವನ್ನು ನೀಡಲಾಗುವುದೆಂದರು. ಪಂದ್ಯಾವಳಿಯ ಮೈದಾನ ಶುಲ್ಕ ರೂ.3000 ನಿಗಧಿಪಡಿಸಿದ್ದು, ಕನಿಷ್ಟ ರೂ.1,000 ನಗದು ಪಾವತಿಸಿ…
ಮಡಿಕೇರಿ ಜ.17 NEWS DESK : ಅಯ್ಯಂಗೇರಿ ಕಲಾಂ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಫೆ.25 ರಿಂದ 27ರ ವರೆಗೆ ಅಯ್ಯಂಗೇರಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ ಎಂದು ಕ್ಲಬ್ನ ಅಧ್ಯಕ್ಷ ಪಿ.ಎಂ.ಅಬ್ದುಲ್ ರಶೀದ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಯ್ಯಂಗೇರಿ ಕೊಲಂಬೋ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 9ನೇ ವರ್ಷದ ಪಂದ್ಯಾವಳಿಯು ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಮಾದರಿಯಲ್ಲಿ ನಡೆಯಲಿದೆ ಎಂದರು. ರಾಯಲ್ ಸ್ಟೈಕರ್ಸ್, ಯೂನೈಟೆಡ್ ಬಕ್ಕಾ, ಕ್ರೋಬ್ರಾ, ಬ್ಲಾಕ್ ಕ್ಯಾಪ್ಸ್, ಫೈಟಿಂಗ್ ಬ್ರದರ್ಸ್, ಸೂಪರ್ ಸಿಕ್ಸರ್ಸ್, ಎ.ಆರ್.ಎಂ.ಸ್ಟ್ರಾಂಗ್, ಟೆಂಡರ್ಸ್ ಸ್ಟೈಕರ್ಸ್, ಸೂಪರ್ ಸಿಕ್ಸ್ ತಂಡಗಳ ನಡುವೆ ಪಂದ್ಯಾವಳಿ ನಡೆಯಲಿದ್ದು, ಪ್ರಥಮ ವಿಜೇತರಿಗೆ 51,555 ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ವಿಜೇತರಿಗೆ 27,000 ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು. ಜ.19 ರಂದು ನಾಪೋಕ್ಲುವಿನ ಬೆಕಾಚಿ ಹೊಟೇಲ್ನಲ್ಲಿ ಆಟಗಾರರ ಬಿಡ್ಡಿಂಗ್ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದರು. ಸಣ್ಣಪುಲಿಕೋಟು, ಅಯ್ಯಂಗೇರಿ ಮತ್ತು ದೊಡ್ಡಪುಲಿಕೋಟು ಗ್ರಾಮಗಳ…
ಸೋಮವಾರಪೇಟೆ ಜ.17 NEWS DESK : ಪಟ್ಟಣದ ಶಾಲಾರಸ್ತೆ ನಿವಾಸಿ ಕಾಫಿ ಬೆಳೆಗಾರ, ಹಿರಿಯ ಸಹಕಾರಿ, ಸ್ವಯಂ ಸೇವಕ, ಭಾರತೀಯ ಜನತಾಪಕ್ಷದ ಹಿರಿಯ ಕಾರ್ಯಕರ್ತರಾದ ಡಿ.ವಿ.ಸದಾನಂದ್ (76)ಇಂದು (ಜ.17) ರಂದು ನಿಧನರಾಗಿದ್ದಾರೆ. ಅನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜೆ.ಎಸ್.ಎಸ್.ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ, ಪುತ್ರಿ ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಜ.18 ರಂದು ಮಧ್ಯಾಹ್ನ ಸೋಮವಾರಪೇಟೆಯಲ್ಲಿ ನಡೆಯಲಿದೆ. ಸರಳ, ಸಜ್ಜನಿಕೆಯ ಸದಾನಂದ್ ತಮ್ಮ ಸೌಮ್ಯತೆಯಿಂದಲೇ ಎಲ್ಲರನ್ನೂ ಆಕರ್ಷಿಸಿಸುತ್ತಿದ್ದವರು, 1973ರಿಂದ ಆರೆಸ್ಸೆಸ್ ನ ಸಕ್ರಿಯ ಕಾರ್ಯಕರ್ತರಾಗಿದ್ದ ಇವರು,1977 ರಲ್ಲಿ ಜನತಾ ಪಕ್ಷದ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಏ.ಕೆ.ಸುಬ್ಬಯ್ಯನವರ ಪರವಾಗಿ ಪ್ರಚಾರ ನಡೆಸಿದ್ದ ಇವರು ನಂತರ ಭಾರತೀಯ ಜನತಾ ಪಕ್ಷ ಸೇರಿ ಇಂದಿನವರೆಗೂ ನಿಷ್ಠಾವಂತ ಕಾರ್ಯಕರ್ತರಾಗಿ ದುಡಿದಿದ್ದಾರೆ. ಹಿರಿಯ ರಾಜಕಾರಣಿ ದಿವಂಗತ ಬಿ.ಬಿ.ಶಿವಪ್ಪನವರ ಒಡನಾಡಿಯಾಗಿದ್ದರು. ಹಿಂದೆ ಲಾಲ್ಕೃಷ್ಣ ಆಡ್ವಾಣಿ, ಸುಷ್ಮಾ ಸ್ವರಾಜ್ ಮುಂತಾದ…
ಮಡಿಕೇರಿ ಜ.17 NEWS DESK : ಆದಿವಾಸಿಗಳ ಹೆಸರಿನಲ್ಲಿ ಸರಕಾರಗಳು ಕೋಟಿ ಕೋಟಿ ಅನುದಾನ ಘೋಷಣೆ ಮಾಡುತ್ತಿವೆ, ಆದರೆ ಯಾವುದೇ ಸೌಲಭ್ಯಗಳು ನೈಜ ಆದಿವಾಸಿಗಳ ಪಾಲಾಗುತ್ತಿಲ್ಲ. ನಮ್ಮನ್ನು ಮೊದಲಿನಂತೆ ಗಾಳಿ ಬೆಳಕಿನೊಂದಿಗೆ ಸ್ವಚ್ಛಂದವಾಗಿ ಬದುಕಲು ಬಿಡಿ ಎಂದು ಅರಣ್ಯ ಹಕ್ಕು ಸಮಿತಿ ಹಾಗೂ ಕೊಡಗಿನ ಆದಿವಾಸಿ ಮುಖಂಡರು ಆಗ್ರಹಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೊಡಗು ಜಿಲ್ಲಾ ಆದಿವಾಸಿ ಮುಖಂಡ ಆರ್.ಕೆ.ಚಂದ್ರು ದೇಶಕ್ಕೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳೇ ಕಳೆದಿದ್ದರೂ ಆದಿವಾಸಿಗಳಿಗೆ ಇಂದಿಗೂ ಟಾರ್ಪಲ್ ಗಳನ್ನು ವಿತರಿಸಲಾಗುತ್ತಿದೆ. ನಮಗೆ ಟಾರ್ಪಲ್ ನ ಅವಶ್ಯಕತೆ ಇಲ್ಲ, ಈ ಸೌಲಭ್ಯವನ್ನು ರದ್ದುಗೊಳಿಸಿ ಎಂದು ಒತ್ತಾಯಿಸಿದರೂ ರದ್ದುಗೊಳಿಸುತ್ತಿಲ್ಲ. ಇರುವ ಗುಡಿಸಲುಗಳಿಗೆ ವಿದ್ಯುತ್ ಬೆಳಕಿನ ವ್ಯವಸ್ಥೆಯಿಲ್ಲ. ಪ್ರತಿವರ್ಷ ಸರಕಾರಗಳು ಆದಿವಾಸಿಗಳ ಹೆಸರಿನಲ್ಲಿ ಕೋಟಿ ಕೋಟಿ ಅನುದಾನದ ಮಾತನಾಡುತ್ತವೆ. ಆದರೆ ನಮಗೇನು ದೊರೆಯುತ್ತಿಲ್ಲ, ಸರಕಾರದ ಯಾವುದೇ ಅನುದಾನ ನಮಗೆ ಬೇಕಿಲ್ಲ. ನಾವಿರುವ ಅರಣ್ಯ ಮತ್ತು ಅರಣ್ಯದ ಅಂಚಿನಲ್ಲಿ ಪ್ರಕೃತಿಯ ಗಾಳಿ, ಬೆಳಕಿನೊಂದಿಗೆ ನೆಮ್ಮದಿಯಾಗಿ ಜೀವಿಸಲು ಅವಕಾಶ ನೀಡಲಿ.…
ಮಂಗಳೂರು ಜ.17 NEWS DESK : ಕೋಟೆಕರ್ ಉಲ್ಲಾಳದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುರ್ತು ಸಭೆ ನಡೆಸಿ ಶೀಘ್ರ ಆರೋಪಿಗಳ ಪತ್ತೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ದರೋಡೆ ಮಾಡಿ ಆರೋಪಿಗಳು ಇಷ್ಟು ಸಲೀಸಾಗಿ ತಪ್ಪಿಸಿಕೊಂಡು ಹೋಗಿದ್ದು ಹೇಗೆ..? ಎಷ್ಟೆಲ್ಲಾ ಟೋಲ್ ಗಳನ್ನು ದಾಟಿ ಹೋಗಿದ್ದಾರೆ, ತಕ್ಷಣ ಟೋಲ್ ಗಳನ್ನು ಏಕೆ ಬಿಗಿ ಮಾಡಲಿಲ್ಲ..? ಎಲ್ಲಾ ಟೋಲ್ ಗಳಲ್ಲೂ ಬಿಗಿ ತಪಾಸಣೆ ನಡೆಸಬೇಕು. ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಕಾಬಂಧಿ ಹಾಕಿ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಪ್ಪಿಸಬೇಕು ಎಂದು ಸೂಚಿಸಿದರು.
ಮಡಿಕೇರಿ ಜ.17 NEWS DESK : ಭಾರತೀಯ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆಯ ನೇರ ಕಾರ್ಯಕರ್ತರಾಗಲು(ಡೈರೆಕ್ಟ್ ಏಜೆಂಟ್) ಜ.22 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಡೈರೆಕ್ಸ್ ಏಜೆಂಟ್ ಆಗಲು ನೇರ ಸಂದರ್ಶನ ನಡೆಯಲಿದೆ. ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ ವಯೋಮಿತಿ ಇರುವುದಿಲ್ಲ. ಹತ್ತನೇ ತರಗತಿ ಮತ್ತು ಮೇಲ್ಪಟ್ಟು, ನಿರುದ್ಯೋಗಿಗಳು, ಸ್ವಯಂ ಉದ್ಯೋಗ ಅಕ್ಷರಸ್ಥ ಯುವಕರು, ಯಾವುದೇ ಜೀವ ವಿಮಾ ಸಲಹೆಗಾರರಾಗಿದ್ದವರು, ಸೈನಿಕ ಸೇವೆಯಲ್ಲಿ ಇದ್ದವರು, ಅಂಗನವಾಡಿ ಕಾರ್ಯಕರ್ತರು, ಮಹಿಳಾ ಮಂಡಳಿ ಕಾರ್ಯಕರ್ತರು, ನಿವೃತ್ತ ಶಿಕ್ಷಕರು ಅಥವಾ ಈ ಯಾವುದೇ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಅರ್ಜಿ, ಹತ್ತನೇ ತರಗತಿ ಉತ್ತೀರ್ಣ ಪ್ರಮಾಣ ಪತ್ರ, ಐದು ಸಾವಿರ ರೂ.ಗಳ ಎನ್ಎಸ್ಸಿ/ಕೆವಿಪಿ(ಸಂದರ್ಶನದ ನಂತರ), ಆಧಾರ್, ವೋಟರ್ ಐಡಿ, ಯಾವುದೇ ಭಾವಚಿತ್ರವುಳ್ಳ ವಿಳಾಸ ದಾಖಲಾತಿ ಹಾಗೂ ಪಾನ್ ಕಾರ್ಡ್ ಪ್ರತಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕೊಡಗು ಅಂಚೆ ವಿಭಾಗೀಯ ಕಚೇರಿ, ಕೊಡಗು ಅಂಚೆ ವಿಭಾಗ, ಮಡಿಕೇರಿ-571201 ದೂ.ಸಂ.08272-295496…
ಮಡಿಕೇರಿ ಜ.17 NEWS DESK : ಸರಕಾರದ ಆದೇಶದಂತೆ ಕೊಡಗು ಜಿಲ್ಲೆಯಲ್ಲಿ ಆದಾಯ ತೆರಿಗೆ ಸಲ್ಲಿಸಲಾದ/ಪಾವತಿದಾರರ ಒಟ್ಟು 903 ಆದ್ಯತಾ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿಯನ್ನಾಗಿ ಪರಿವರ್ತನೆ ಮಾಡಲಾಗಿರುತ್ತದೆ. ಆದರೆ ಸರಕಾರ ಮರು ಪರಿಶೀಲಿಸುವವರೆಗೆ ಯಥವಾತ್ತಾಗಿ ಮುಂದುವರೆಸಲು ಸೂಚಿಸಿದಂತೆ ಈ ಎಲ್ಲಾ 903 ಪಡಿತರ ಚೀಟಿಗಳನ್ನು ಯಥಾವತ್ತಾಗಿ ಬಿಪಿಎಲ್ ಪಡಿತರ ಚೀಟಿಯನ್ನಾಗಿ ಮುಂದುವರೆಸಲಾಗಿದೆ. ಈ ಸಂಬಂಧ ಪಡಿತರ ಚೀಟಿದಾರರು ಸಂಬಂಧಿಸಿದ ತಾಲ್ಲೂಕು ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಜೆ.ಬಿ.ಶ್ರೀಧರಮೂರ್ತಿ ತಿಳಿಸಿದ್ದಾರೆ.
ಮಡಿಕೇರಿ ಜ.17 NEWS DESK : ಪ್ರಸಕ್ತ (2024-25) ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣಗಳು ಲಭ್ಯವಿದೆ. ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿಯೊಂದಿಗೆ ಪಹಣಿ(ಆರ್ಟಿಸಿ), ಆಧಾರ್ ಕಾರ್ಡ್ನ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಒಂದು ಭಾವಚಿತ್ರ ರೂ.100ರ ಛಾಫಾ ಕಾಗದ ದಾಖಲಾತಿಗಳನ್ನು ಸಲ್ಲಿಸಿ ಇಲಾಖೆಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ ಸದುಪಯೋಗ ಪಡೆದುಕೊಳ್ಳಲು ಕೋರಿದೆ. ಕೃಷಿ ಉಪ ಕರಣಗಳಾದ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ಕಲ್ಟಿವೇಟರ್, ರೋಟವೇಟರ್, ಎಂ.ಬಿ.ಪ್ಲೂ, ಡಿಸ್ಕ್ ಪ್ಲೋ, ಕಳೆಕೊಚ್ಚುವ ಯಂತ್ರ, ಕಳೆ ತೆಗೆಯುವ ಯಂತ್ರ, ಡಿಸೇಲ್ ಪಂಪ್ ಸೆಟ್, ಪವರ್ ಸ್ಪ್ರೇಯರ್, ಮೇವು ಕತ್ತರಿಸುವ ಯಂತ್ರ, ಭತ್ತದ ಒಕ್ಕಣೆ ಯಂತ್ರ, ಭತ್ತ ಕಟಾವು ಯಂತ್ರ, ಮುಸುಕಿನ ಜೋಳ ಒಕ್ಕಣೆ ಯಂತ್ರ, ಕೃಷಿ ಉತ್ಪನ್ನಗಳ ಸಂಸ್ಕರಣೆ ಯಂತ್ರಗಳಾದ, ರಾಗಿ ಕ್ಲೀನಿಂಗ್ ಯಂತ್ರ, ಹಿಟ್ಟು ಮಾಡುವ ಯಂತ್ರ,…






